Tag: Increase

  • ಬೆಂಗಳೂರಿನಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳ ಸಾಧ್ಯತೆ

    ಬೆಂಗಳೂರಿನಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

    ಅಡುಗೆ ಎಣ್ಣೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    ಹೋಟೆಲ್ ಮಾಲೀಕರು ಎರಡೂವರೆ ತಿಂಗಳ ಹಿಂದೆ ದರ ಏರಿಕೆ ಮಾಡಿದ್ದರು. ಈಗ ಕಮರ್ಷಿಯಲ್ ಗ್ಯಾಸ್ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಈಗ ಮತ್ತೊಮ್ಮೆ ದರ ಏರಿಕೆಗೆ ಚಿಂತನೆ ನಡೆಸಿದ್ದಾರೆ.

    ಸೋಮವಾರ 100ಕ್ಕೂ ಹೆಚ್ಚು ಹೊಟೇಲ್ ಮಾಲೀಕರು ಸಭೆ ಸೇರಲಿದ್ದಾರೆ. ಈ ವೇಳೆ ಬೆಂಗಳೂರು ಮತ್ತು ರಾಜ್ಯಾದ್ಯಂತ ದರ ಏರಿಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಸೋಮವಾರವೇ ಹೊಸ ದರ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಪರೀಕ್ಷೆಯ ಒತ್ತಡ ನಿಭಾಯಿಸುವುದು ಹೇಗೆ- ವಿದ್ಯಾರ್ಥಿಗಳಿಗೆ ಮೋದಿ ಟಿಪ್ಸ್‌

    ಬೆಲೆ ಏರಿಕೆಗೆ ಕಾರಣಗಳೇನು?
    * ಕಮರ್ಷಿಯಲ್ ಗ್ಯಾಸ್ ಬೆಲೆ ನಿರಂತರ ಏರಿಕೆ.
    * ಇಂದು ಕಮರ್ಷಿಯಲ್ ಗ್ಯಾಸ್ ಬೆಲೆ 260 ರೂ ಏರಿಕೆಯಾಗಿದೆ
    * ಅಡುಗೆ ಎಣ್ಣೆ ಬೆಲೆ ಏರಿಕೆಯಾಗಿರುವುದು.
    * ಅಗತ್ಯ ವಸ್ತುಗಳ ಬೆಲೆ ಏರಿಕೆ.
    * ವಿದ್ಯುತ್ ದರ ಏರಿಕೆ.
    * ಮುಂದಿನ ದಿನಗಳಲ್ಲಿ ಸರ್ಕಾರ ಹಾಲಿನ ದರ ಏರಿ ಮಾಡುವ ಸಾಧ್ಯತೆ

  • ಕೆಆರ್‌ಎಸ್‌ ಒಳಹರಿವು ಹೆಚ್ಚಳ, ಕಬಿನಿ ಭರ್ತಿಗೆ 4 ಅಡಿ ಬಾಕಿ

    ಕೆಆರ್‌ಎಸ್‌ ಒಳಹರಿವು ಹೆಚ್ಚಳ, ಕಬಿನಿ ಭರ್ತಿಗೆ 4 ಅಡಿ ಬಾಕಿ

    ಬೆಂಗಳೂರು: ಪ್ರಾರಂಭದಲ್ಲಿ ಅಷ್ಟೇನು ಮಳೆಯಾಗಿಲ್ಲದ ಕಾರಣ ಈ ಬಾರಿ ಜಲಾಶಯಗಳು ಭರ್ತಿಯಾಗುವುದಿಲ್ಲ ಎಂಬ ಆತಂಕ ರೈತರಲ್ಲಿ ಮನೆ ಮಾಡಿತ್ತು. ಆದರೆ, ಇತ್ತೀಚೆಗೆ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೆಆರ್‌ಎಸ್‌ ಸೇರಿದಂತೆ ಎಲ್ಲ ಜಲಾಶಯಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

    ಕೊಡಗು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸುಗೊಂಡ ಹಿನ್ನೆಲೆ ಕೆಆರ್‌ಎಸ್‌ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನ ಒಳ ಹರಿವು 26,522 ಕ್ಯೂಸೆಕ್ ಏರಿಕೆಯಾಗಿದೆ. ಬೆಳಗ್ಗೆ 22,719 ಕ್ಯೂಸೆಕ್ ಇದ್ದ ಒಳ ಹರಿವು ಸಂಜೆ ಹೊತ್ತಿಗೆ 26,522 ಕ್ಯೂಸೆಕ್‍ಗೆ ತಲುಪಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದು 88.60 ಅಡಿ ನೀರು ಸಂಗ್ರವಾಗಿದೆ. ಒಳ ಹರಿವು 26,522 ಕ್ಯೂಸೆಕ್ ಇದ್ದು, ಪ್ರಸ್ತುತ 15.121 ಟಿಎಂಸಿ ನೀರು ಸಂಗ್ರಹವಾಗಿದೆ.

    ಕೇರಳದ ವಯನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿಯೂ ಹೆಚ್ಚಳವಾಗಿದ್ದು, ಭರ್ತಿಯಾಗಲು ಕೆಲವೇ ಅಡಿಗಳಷ್ಟು ಬಾಕಿ ಇದೆ. ಹೀಗಾಗಿ ಹೊರಹರಿವು ಕೂಡ ಹೆಚ್ಚಳವಾಗಿದೆ.

    ಕಬಿನಿ ಜಲಾಶಯದ ನೀರಿನ ಮಟ್ಟ 80 ಅಡಿ ತಲುಪಿದ್ದು, ಗರಿಷ್ಠ ಮಟ್ಟ 84 ಅಡಿ ಆಗಿದೆ. ಜಲಾಶಯದ ಸದ್ಯದ ಒಳಹರಿವು 23,000 ಕ್ಯೂಸೆಕ್ ಆಗಿದ್ದು, ಹೊರಹರಿವು 10,000 ಕ್ಯೂಸೆಕ್ ಇದೆ. ಜಲಾಶಯದ ಸಂಪೂರ್ಣ ಭರ್ತಿಗೆ 4 ಅಡಿಗಳು ಮಾತ್ರ ಬಾಕಿ ಇದ್ದು, ಒಳಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಜಲಾಶಯದಿಂದ ಹೊರಹರಿವು ಹೆಚ್ಚಳ ಮಾಡಲಾಗಿದೆ.

    ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಪಿಲಾ ನದಿಯ ಇಕ್ಕೆಲಗಳ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

    ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯ ಸಹ ಭರ್ತಿಯಾಗುತ್ತಿದ್ದು, ನೀರಿನ ಮಟ್ಟದಲ್ಲಿಯೂ ಸಹ ಹೆಚ್ಚಳವಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2,922 ಅಡಿ ಆಗಿದ್ದು, 2,899.77 ಅಡಿಯಷ್ಟು ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿಯಾಗಿದ್ದು, ಒಳಹರಿವು 28,317 ಕ್ಯೂಸೆಕ್ ಆಗಿದೆ.

  • ಚಳಿ ಎಫೆಕ್ಟ್‌ಗೆ  ದಿಢೀರ್ ಗಗನಕ್ಕೇರಿದೆ ಟೊಮೆಟೋ ಬೆಲೆ..!

    ಚಳಿ ಎಫೆಕ್ಟ್‌ಗೆ ದಿಢೀರ್ ಗಗನಕ್ಕೇರಿದೆ ಟೊಮೆಟೋ ಬೆಲೆ..!

    ಬೆಂಗಳೂರು: ಗ್ಯಾಸ್ ಇಳಿಕೆಯಾದ ಖುಷಿಯಲ್ಲಿದ್ದ ಗೃಹಿಣಿಯರಿಗೆ ಟೊಮೆಟೋ ಹುಳಿ ಶಾಕ್ ನೀಡಿದೆ. ಕೆಜಿಗೆ 10 ರೂಪಾಯಿ 20 ರೂಪಾಯಿ ಇದ್ದ ಟಮ್ಯಾಟೋ ದರ ಏಕಾಏಕಿ 70 ರೂಪಾಯಿಗೆ ಏರಿಕೆಯಾಗಿದೆ.

    ಹೌದು, ಈ ಬಾರಿ ಚಳಿಗಾಲ ರೈತ ಮೊಗದಲ್ಲಿ ಮಂದಹಾಸ ತಂದಿದೆ. ಚಳಿ ಹೊಡೆತಕ್ಕೆ ಟೊಮೆಟೋ ಗಿಡಗಳಲ್ಲಿ ಕಾಯಿಗಳು ಬಿಡುತ್ತಿಲ್ಲ. ಆದರಿಂದ ಟೊಮೆಟೊ ಇಳುವರಿ ಶೇ.60 ರಷ್ಟು ಇಳಿಕೆಯಾಗಿದೆ. ಅಯ್ಯೋ ಬೆಳೆ ಇಲ್ಲದೆ ಹೇಗಪ್ಪ ಜೀವನ ಮಾಡೋದು ಅಂತ ತಲೆ ಮೇಲೆ ಕೈ ಹೊತ್ತು ಕುಳಿತಿದ್ದ ರೈತರ ಮುಖದಲ್ಲಿ ಈಗ ಖುಷಿ ಮೂಡಿದೆ. ಇಳುವರಿ ಕಡಿಮೆಯಾದ ಬೆನ್ನಲ್ಲೇ ಟೊಮೆಟೋ ಬೆಲೆ ಏರಿಕೆಯಾಗಿದೆ. ಆದರಿಂದ 10-20 ರೂ. ಗೆ ಸಿಗುತ್ತಿದ್ದ ಟೊಮೆಟೋ ಏಕಾಏಕಿ 70 ರೂ.ಗೆ ಜಿಗಿದಿದೆ. ಇನ್ನು 1 ರಿಂದ 2 ತಿಂಗಳ ಕಾಲ ಟೊಮೆಟೋ ದುಬಾರಿಯಾಗಲಿದ್ದು, ಟೊಮೆಟೋ ಬೆಳೆಗಾರರಿಗೆ ಬಂಪರ್ ಲಾಟರಿ ಹೊಡಿದಂತೆ ಆಗಿದ್ದರೇ, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ.

    ಗ್ಯಾಸ್ ಬೆಲೆ ಇಳಿಕೆಯಾದ ಖುಷಿಯಲ್ಲಿದ್ದ ಗೃಹಿಣಿಯರಿಗೆ ಟೊಮೆಟೋ ಶಾಕ್ ನೀಡಿದೆ. ಎಲ್ಲೆಡೆ ದಾಖಲೆ ಪ್ರಮಾಣದ ಚಳಿ ಹಿನ್ನೆಲೆ ಟೊಮೆಟೋ ಕಾಯಿ ಕಟ್ಟದೇ ಇಳುವರಿ ಕಡಿಮೆಯಾಗಿರುವುದೇ ಬೆಲೆ ಏರಿಕೆಗೆ ಕಾರಣವಾಗಿದೆ. ಇನ್ನು ಮುಂದಿನ 1 ರಿಂದ 2 ತಿಂಗಳ ಕಾಲ ಟೊಮೆಟೋ ಹೀಗೇ ಗಗನ ಕುಸುಮವಾಗೇ ಇರುತ್ತೆ ಎನ್ನಲಾಗುತ್ತಿದೆ. ಸದ್ಯ ಗೃಹಿಣಿಯರು ಯಾಕ್ ಹಿಂಗಾಯ್ತು ಅಂತ ಬೇಸರದಲ್ಲಿದ್ದರೆ. ಟೊಮೆಟೋ ಬೆಳೆಗಾರರು ಬೆಲೆ ಏರಿಕೆಯಿಂದ ಸಂತಸದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕನ್ನಡ ರಾಜ್ಯೋತ್ಸವಕ್ಕೆ ಹಿರಿಯರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್

    ಕನ್ನಡ ರಾಜ್ಯೋತ್ಸವಕ್ಕೆ ಹಿರಿಯರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್

    ಸಾಂದರ್ಭಿಕ ಚಿತ್ರ

    ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾಸಾಶನವನ್ನು ಏರಿಕೆ ಮಾಡುವ ಮೂಲಕ ಹಿರಿಯರಿಗೆ ಬಂಫರ್ ಕೊಡುಗೆ ನೀಡಿದೆ.

    ಸಿಎಂ ಕುಮಾರಸ್ವಾಮಿಯವರು ತಮ್ಮ ಬಜೆಟ್‍ನಲ್ಲಿ ಮಂಡಿಸಿದ್ದ ಮಾಸಾಶನ ಏರಿಕೆ ವಿಚಾರವನ್ನು ಅಧಿಕೃತವಾಗಿ ಜಾರಿಗೊಳಿಸಿದ್ದು, ನೂತನ ಮಾಸಾಶನ ಆದೇಶವು ನವೆಂಬರ್ 1 ರಿಂದ ಜಾರಿಗೆ ಬರಲಿದೆ. ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವ್ಯದ್ಧಾಪ್ಯ ಯೋಜನೆಯ ಮಾಸಾಶನವನ್ನು ಹೆಚ್ಚಳ ಮಾಡಿದ್ದು, ಸುಮಾರು 600 ರೂಪಾಯಿಗಳಿಂದ 1,000 ರೂಪಾಯಿಗೆ ಮಾಸಾಶನ ಏರಿಕೆಯಾಗಿದೆ.

    ತೈಲ ದರಗಳ ಮೇಲಿನ ಸೆಸ್ ದರವನ್ನು ಇಳಿಕೆ ಮಾಡಿದ ಬಳಿಕ ಸಿಎಂ ಕುಮಾರಸ್ವಾಮಿ ಹಿರಿಯರಿಗೆ ಬಂಫರ್ ಕೊಡುಗೆ ನೀಡಿದ್ದಾರೆ. ಈ ಯೋಜನೆಯಿಂದ ಒಟ್ಟು 32 ಲಕ್ಷ ವೃದ್ಧರು ಹೆಚ್ಚಿನ ಮಾಸಾಶನನ್ನು ಪಡೆಯಲಿದ್ದು, ಒಟ್ಟು 660 ಕೋಟಿ ರೂಪಾಯಿ ಹೆಚ್ಚುವರಿ ಹಣವನ್ನು ಸರ್ಕಾರದಿಂದ  ಬಿಡುಗಡೆಗೊಳಿಸಿದ್ದಾರೆ. ಈ ಯೋಜನೆಯನ್ನು 5 ವರ್ಷಗಳಲ್ಲಿ ಹಂತ ಹಂತವಾಗಿ ಸಂಪೂರ್ಣ ಏರಿಕೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಗಸ್ಟ್ ರಿಪೋರ್ಟ್: ರಾಯಲ್ ಎನ್‍ಫೀಲ್ಡ್ ಬೈಕ್ ಮಾರಾಟದಲ್ಲಿ 2% ಬೆಳವಣಿಗೆ

    ಆಗಸ್ಟ್ ರಿಪೋರ್ಟ್: ರಾಯಲ್ ಎನ್‍ಫೀಲ್ಡ್ ಬೈಕ್ ಮಾರಾಟದಲ್ಲಿ 2% ಬೆಳವಣಿಗೆ

    ನವದೆಹಲಿ: ವಿಶ್ವದ ಹಳೆಯ ಮೋಟಾರ್‌ಸೈಕಲ್ ತಯಾರಿಕಾ ಸಂಸ್ಥೆಯಾದ ರಾಯಲ್ ಎನ್‍ಫೀಲ್ಡ್ ಅಗಸ್ಟ್ ತಿಂಗಳಿನಲ್ಲಿ ಒಟ್ಟು 69,377 ಬೈಕ್‍ಗಳನ್ನು ಮಾರಾಟ ಮಾಡುವ ಮೂಲಕ 2% ರಷ್ಟು ಮಾರಾಟವನ್ನು ಹೆಚ್ಚಿಸಿಕೊಂಡಿದೆ.

    ಶನಿವಾರ ತನ್ನ 2018 ರ ಆಗಸ್ಟ್ ತಿಂಗಳ ವರದಿಯನ್ನು ಬಿಡುಗಡೆ ಮಾಡಿದ ಸಂಸ್ಥೆಯು, ಜುಲೈನಲ್ಲಿ ಒಟ್ಟು 66,872 ಬೈಕ್ ಗಳನ್ನು ಮಾರಾಟ ಮಾಡಿದ್ದರೆ, ಅಗಸ್ಟ್ ನಲ್ಲಿ 69,377 ಬೈಕ್ ಗಳನ್ನು ಮಾರಾಟ ಮಾಡುವ ಮೂಲಕ 2% ಮಾರಾಟವನ್ನು ಹೆಚ್ಚಿಸಿಕೊಂಡಿದೆ. 2017 ರ ಈ ಅವಧಿಯಲ್ಲಿ 67,977 ಬೈಕ್ ಗಳು ಮಾರಾಟವಾಗಿದ್ದವು. ಇದನ್ನೂ ಓದಿ: ಭಾರತೀಯ ಸೇನೆಗೆ ಗೌರವ ಸಲ್ಲಿಸಲು ಕ್ಲಾಸಿಕ್ ಸಿಗ್ನಲ್ಸ್ 350 ಎಬಿಎಸ್ ಬೈಕ್ ಬಿಡುಗಡೆ: ಬೆಲೆ ಎಷ್ಟು?

    ರಾಯಲ್ ಎನ್‍ಫೀಲ್ಡ್ ರಫ್ತಿನಲ್ಲಿಯೂ ಸಹ 23% ರಷ್ಟು ಹೆಚ್ಚಳವಾಗಿದ್ದು, ಒಟ್ಟು 1,363 ಬೈಕ್ ಗಳು ರಫ್ತಾಗಿದ್ದರೆ, 2017 ರಲ್ಲಿ 1,105 ಬೈಕುಗಳನ್ನು ರಫ್ತು ಮಾಡಿತ್ತು.

    ರಾಯಲ್ ಎನ್‍ಫೀಲ್ಡ್ ಕಂಪೆನಿಯು ತನ್ನ ಕ್ಲಾಸಿಕ್ 350 ಹಾಗೂ 500, ಬುಲೆಟ್ 350 ಹಾಗೂ 500 ಹಾಗೂ ಥಂಡರ್‌ಬರ್ಡ್ 350 ಹಾಗೂ 500ಸಿಸಿ ಮಾದರಿಗಳಲ್ಲಿ ಸಾಕಷ್ಟು ಬದಲಾವಣೆಗಳು ಮಾಡಿ, ನೂತನ ಆವೃತ್ತಿಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿತ್ತು. ಈ ಮಾದರಿಗಳು ಗ್ರಾಹಕರನ್ನು ಆಕರ್ಷಿಸಿ, ಅತಿ ಹೆಚ್ಚು ಮಾರಾಟವಾಗುವಂತೆ ಮಾಡಿದ್ದವು.ಇದನ್ನೂ ಓದಿ: ದಾಖಲೆ ನಿರ್ಮಿಸಿದ ರಾಯಲ್ ಎನ್‍ಫೀಲ್ಡ್ ನ ಕ್ಲಾಸಿಕ್ 500 ಪೆಗಾಸಸ್ ಬೈಕ್: ಬೆಲೆ ಎಷ್ಟು? ವೈಶಿಷ್ಟ್ಯವೇನು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್

    ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್

    ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲಾಗಿದ್ದು, ಡಿಸೇಲ್ ದರ ಏರಿಕೆ ಹಿನ್ನೆಲೆಯಲ್ಲಿ ವೋಲ್ವೋ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ.

    ಜುಲೈ 1 ರಿಂದ ಹಂತ ಸಂಖ್ಯೆ 7 ರಿಂದ 25 ರವರೆಗೆ ಮಾತ್ರ ಹಂತವಾರು ಬಸ್ ಪ್ರಯಾಣ ದರ 3.45% ರಿಂದ 26% ರವರೆಗೆ ಹೆಚ್ಚಳವಾಗಲಿದ್ದು, ಸರಾಸರಿ 16.89 ರಷ್ಟು ಏರಿಕೆ ಕಾಣಲಿದೆ. ನಾಳೆಯಿಂದಲೇ ನಗರದ ಸುಮಾರು 700 ವೋಲ್ವೋ ಬಸ್ಸುಗಳಿಗೆ ದರ ಅನ್ವಯವಾಗಲಿದೆ.

    2018 ವರ್ಷದ ಮೊದಲ ದಿನವೇ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣ ದರ ಕಡಿಮೆ ಮಾಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿತ್ತು. ಈ ವೇಳೆ ವಜ್ರ ಪ್ರಯಾಣ ದರಗಳನ್ನು 5% ರಿಂದ 37% ರವರೆಗೆ ಸರಾಸರಿ 29 ರಷ್ಟು ಕಡಿಮೆಗೊಳಿಸಿ ಪರಿಷ್ಕರಿಸಲಾಗಿತ್ತು. ನಿರಂತರವಾಗಿ ಏರಿಕೆಯಾಗುತ್ತಿರುವ ಡೀಸೆಲ್ ದರ, ತುಟ್ಟಿಭತ್ಯೆ ಹೆಚ್ಚಳ, ಸಿಬ್ಬಂದಿ ಹಾಗೂ ಕಾರ್ಯಾಚರಣೆ ವೆಚ್ಚದಲ್ಲಿಯೂ ಏರಿಕೆಯಾಗಿದ್ದರಿಂದ ಈ ಕ್ರಮಕ್ಕೆ ಮುಂದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    ಈ ಹಿಂದೆ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಟಿಕೆಟ್ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಸಭೆಯಲ್ಲಿ ಬಸ್ ದರ ಏರಿಸುವ ಬದಲು ಸಾರಿಗೆ ಸಂಸ್ಥೆಗಳಲ್ಲಿ ಆಗುತ್ತಿರುವ ನಷ್ಟವನ್ನು ಕಡಿಮೆಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

  • 2012ರ ನಂತ್ರ ಏರಿಕೆ: ಅಂಪೈರ್, ಸ್ಕೋರರ್, ಕೂರೇಟರ್ ಸಂಬಳ ಎಷ್ಟಿತ್ತು? ಎಷ್ಟು ಏರಿಕೆಯಾಗಲಿದೆ?

    2012ರ ನಂತ್ರ ಏರಿಕೆ: ಅಂಪೈರ್, ಸ್ಕೋರರ್, ಕೂರೇಟರ್ ಸಂಬಳ ಎಷ್ಟಿತ್ತು? ಎಷ್ಟು ಏರಿಕೆಯಾಗಲಿದೆ?

    ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಂಪೈರ್, ಕ್ಯೂರೇಟರ್ ಹಾಗೂ ಕ್ರಿಕೆಟ್ ವಿಶ್ಲೇಷಕರ ಸಂಭಾವನೆಯನ್ನು ಹೆಚ್ಚಿಸಲು ಚಿಂತನೆ ನಡೆಸಿದೆ.

    ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಸದ್ಯ ಬಿಸಿಸಿಐ ಕಾರ್ಯದರ್ಶಿ ಆಗಿರುವ ಸಬಾ ಕರೀಂ ಅವರು ಏಪ್ರಿಲ್ 12 ರ ಸಭೆಯಲ್ಲಿ ನೀಡಿದ ಸಲಹೆ ಮೇರೆಗೆ ಈ ಕುರಿತು ಚಿಂತನೆ ನಡೆಸಿದೆ. ಅಲ್ಲದೇ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರ ಸಂಭಾವನೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ ಎನ್ನಲಾಗಿದೆ.

    100% ಹೆಚ್ಚಳ: ಸದ್ಯ 2012 ರಿಂದಲೂ ಬಿಸಿಸಿಐ ನಲ್ಲಿ ಕಾರ್ಯನಿರ್ವಹಿಸುತ್ತಿರುವ 105 ಅಂಪೈರ್ ಗಳು ಸಂಭಾವನೆ 100% ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. 2002 ರಲ್ಲಿ ಅಂಪೈರ್ ಗಳ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬಿಸಿಸಿಐ ಸಂಭಾವನೆ ಹೆಚ್ಚಳದ ಚಿಂತನೆ ನಡೆಸಿದೆ. ಸದ್ಯ ಪ್ರಥಮ ದರ್ಜೆ ಪಂದ್ಯಗಳಲ್ಲಿ ಕಾರ್ಯನಿರ್ವಹಿಸುವ ಟಾಪ್ 20 ಅಂಪೈರ್ ಗಳು ಮೂರುದಿನ ಅಥವಾ 50 ಓವರ್ ಗಳ ಪಂದ್ಯಕ್ಕೆ ಒಂದು ದಿನಕ್ಕೆ 20 ಸಾವಿರ ರೂ. ದಿನ ಪಡೆಯುತ್ತಿದ್ದಾರೆ. ಸದ್ಯ ಬಿಸಿಸಿಐ ನಿರ್ಧಾರದ ಬಳಿಕ ಅವರು 40 ಸಾವಿರ ರೂ. ಪಡೆಯಲಿದ್ದಾರೆ. ಉಳಿದ 85 ಅಂಪೈರ್ ಗಳು ದಿನ ಒಂದಕ್ಕೆ 30 ಸಾವಿರ ರೂ. ಪಡೆಯುತ್ತಾರೆ.

    ಟಿ20 ಮಾದರಿಯನ್ನು ಗಮನಿಸಿದರೆ ಟಾಪ್ 20 ಅಂಪೈರ್ ಗಳು 20 ಸಾವಿರ ರೂ. ಹಾಗೂ ಉಳಿದ 85 ಅಂಪೈರ್ ಗಳು 15 ಸಾವಿರ ರೂ. ಪಡೆಯಲಿದ್ದಾರೆ. ವಿದೇಶಿ ಅಂಪೈರ್ ಗಳ ದಿನ ಭತ್ಯೆ 750 ರೂ. ನಿಂದ 1,500 ರೂ.ಗೆ ಏರಿಕೆಯಾಗಿದೆ. ಇತರೇ ಅಂಪೈರ್ ಗಳ ದಿನ ಭತ್ಯೆ 500 ರೂ. ನಿಂದ 1 ಸಾವಿರ ರೂ.ಗೆ ಏರಿಕೆಯಾಗಿದೆ.

    ಪಿಚ್ ಕ್ಯೂರೇಟರ್ ಗಳ ಸಂಭಾವನೆಯೂ 2012ರ ಬಳಿಕ ಮೊದಲ ಬಾರಿಗೆ ಹೆಚ್ಚಳವಾಗುತ್ತಿದೆ. ಪ್ರಮುಖ ಐದು ವಲಯ ಮತ್ತು ಸಹಾಯಕ ಕ್ಯೂರೇಟರ್ ಗಳು ಈ ಹಿಂದೆ ವಾರ್ಷಿಕವಾಗಿ 6 ಲಕ್ಷ ರೂ. ಮತ್ತು 4.2 ಲಕ್ಷ ರೂ.ಗಳನ್ನು ಪಡೆಯುತ್ತಿದ್ದರು. ಈಗ ಈ ಮೊತ್ತ 12 ಲಕ್ಷ ರೂ. ಮತ್ತು 8.4 ಲಕ್ಷ ರೂ.ಗೆ ಏರಿಕೆಯಾಗಿದೆ.

    ಪಂದ್ಯದ ಸ್ಕೋರ್ ಮಾಹಿತಿಯನ್ನು ದಾಖಲಿಸುವ ಸಿಬ್ಬಂದಿಯೂ ಸಹ ಸಂಭಾವನೆಯ ಹೆಚ್ಚಳ ಪಡೆಯಲಿದ್ದಾರೆ. ಸದ್ಯ ಬಿಸಿಸಿಐಯಲ್ಲಿ ಕಾರ್ಯನಿರ್ವಹಿಸುತ್ತಿರುವ 150 ಮಂದಿ ಈ ಲಾಭ ಪಡೆಯಲಿದ್ದಾರೆ. ಸದ್ಯ ಪ್ರಥಮ ದರ್ಜೆ ಮೂರು ದಿನ ಅಥವಾ 50 ಓವರ್ ಪಂದ್ಯಕ್ಕೆ 10 ಸಾವಿರ ರೂ. ಸಂಭಾವನೆ ಹಾಗೂ ಸಿಮೀತ ಓವರ್ ಪಂದ್ಯಕ್ಕೆ 5 ಸಾವಿರ ರೂ. ಗಳು ಸಂಭಾವನೆ ಪಡೆಯಲಿದ್ದಾರೆ. ಅಲ್ಲದೇ ಪ್ರತಿ ದಿನದ ಭತ್ಯೆ ಹೆಚ್ಚಳವಾಗಿದ್ದು, ಔಟ್ ಸ್ಟೇಷನ್ ಸ್ಕೋರರ್ ಗಳಿಗೆ 1,500 ರೂ. ಹಾಗೂ ಉಳಿದವರಿಗೆ 1 ಸಾವಿರ ರೂ. ಸಿಗಲಿದೆ.

    ಸದ್ಯ ಬಿಸಿಸಿಐ ಚಿಂತನೆಗೆ ಸುಪ್ರೀಂ ನಿಂದ ನಿಯೋಜನೆ ಮಾಡಲಾಗಿರುವ ಬಿಸಿಸಿಐ ಆಡಳಿತಾತ್ಮಕ ಸಂಸ್ಥೆ(ಸಿಒಎ) ಸಹ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ. ಇದರೊಂದಿಗೆ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರ ಸಂಭಾವನೆ ಸಹ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಬಿಸಿಸಿಐ ಅಧ್ಯಕ್ಷರು ಸದ್ಯ ವಾರ್ಷಿಕ 80 ಲಕ್ಷ ರೂ. ಹಾಗೂ ಸಮಿತಿಯ ಸದಸ್ಯರು 60 ಲಕ್ಷ ರೂ. ಪಡೆಯುತ್ತಿದ್ದಾರೆ. ಬಿಸಿಸಿಐ ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದರೆ ಕ್ರಮವಾಗಿ 1 ಕೋಟಿ ರೂ. ಹಾಗೂ 75 ರಿಂದ 80 ಲಕ್ಷ ರೂ. ಗೆ ಸಂಭಾವನೆ ಹೆಚ್ಚಳವಾಗುವ ಸಾಧ್ಯತೆ ಇದೆ.

  • ಇನ್ನು ಮುಂದೆ ನಗರ ಮತ್ತು ಹೈವೇಯಲ್ಲಿ ಕಾರು, ಬೈಕ್‍ಗಳು ಮತ್ತಷ್ಟು ಜಾಸ್ತಿ ವೇಗದಲ್ಲಿ ಹೋಗಬಹುದು!

    ಇನ್ನು ಮುಂದೆ ನಗರ ಮತ್ತು ಹೈವೇಯಲ್ಲಿ ಕಾರು, ಬೈಕ್‍ಗಳು ಮತ್ತಷ್ಟು ಜಾಸ್ತಿ ವೇಗದಲ್ಲಿ ಹೋಗಬಹುದು!

    ನವದೆಹಲಿ: ನಗರ ರಸ್ತೆ ಮತ್ತು ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೊಸ ನಿಯಮದ ಪ್ರಕಾರ ನಗರದಲ್ಲಿ ಕಾರುಗಳು ಗಂಟೆಗೆ 70 ಕಿ.ಮೀ. ವೇಗ ಮತ್ತು ಬೈಕುಗಳಿಗೆ 60 ಕಿ.ಮೀ. ವೇಗದ ಮಿತಿಯನ್ನು ನಿಗದಿ ಪಡಿಸಿದೆ.

    ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಿ ನಿತಿನ್ ಗಡ್ಕರಿ ಬುಧವಾರದಂದು ನಗರದ ರಸ್ತೆಗಳು ಮಾತ್ರವಲ್ಲದೇ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇಗಳಲ್ಲೂ ವೇಗದ ಮಿತಿಯನ್ನು ಹೆಚ್ಚಿಸಲು ಒಪ್ಪಿಗೆ ನೀಡಿದ್ದಾರೆ. ಅಧಿಸೂಚನೆ ಹೊರಡಿಸಲು ಈ ಪ್ರಸ್ತಾವನೆಯನ್ನು ಕಾನೂನು ಸಚಿವಾಲಯಕ್ಕೆ ಈಗ ಕಳುಹಿಸಲಾಗಿದೆ.

    ಹೊಸ ವ್ಯವಸ್ಥೆಯ ಪ್ರಕಾರ ಒಂದು ವೇಳೆ ನಿಗದಿಯಾಗಿರುವ ಮಿತಿಯ 5% ರಷ್ಟು ಜಾಸ್ತಿ ವೇಗದಲ್ಲಿ ಸಂಚರಿಸಿದ್ದಲ್ಲಿ ಎಚ್ಚರಿಕೆ ನೀಡಲಾಗುತ್ತದೆ ಅಷ್ಟೇ ಅಲ್ಲದೇ ದಂಡ ವಿಧಿಸಲಾಗುವುದಿಲ್ಲ. ನಗರದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಸಂಚರಿಸುವುದು ಪ್ರಯೋಗಿಕವಾಗಿ ಸಾಧ್ಯವಾಗದೇ ಇದ್ದರೂ ಹಲವು ನಗರಗಳಲ್ಲಿ ರಿಂಗ್ ರಸ್ತೆಗಳು ಇರುವ ಕಾರಣ ವೇಗದ ಮಿತಿಯನ್ನು ಏರಿಸಲಾಗಿದೆ.

    ದೇಶಾದ್ಯಂತ ವೇಗ ಮಿತಿಯನ್ನ ಹೆಚ್ಚಿಸುವ ಅಧಿಕಾರ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಇದ್ದು, ರಾಜ್ಯ ಸರ್ಕಾರ ಮತ್ತು ಇನ್ನಿತರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ರಸ್ತೆಯ ಮೇಲೆ ವೇಗದ ಮಿತಿಯನ್ನು ಹೇರಲು ಅನುಮತಿ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗರಿಷ್ಟ ವೇಗದ ಮಿತಿಯನ್ನು ಮೀರುವಂತಿಲ್ಲ.

    ಬದಲಾಗಿರುವ ನಿಯಮಗಳ ಪ್ರಕಾರ ಎಕ್ಸ್ ಪ್ರೆಸ್ ವೇನಲ್ಲಿ ಇಲ್ಲಿಯವರೆಗೆ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಇನ್ನು ಮುಂದೆ ಪ್ರತಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಸಂಚರಿಸಬಹುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗೆ 80 ಕಿ.ಮೀ ವೇಗದಲ್ಲಿ ಹೋಗುತ್ತಿದ್ದ ಕಾರುಗಳು ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸಬಹುದಾಗಿದೆ.

  • ಎಂಜಿನಿಯರಿಂಗ್ ಓದುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್: ಜಾಬ್‍ಗೆ ಚಿಂತೆ ಮಾಡಬೇಡಿ

    ಎಂಜಿನಿಯರಿಂಗ್ ಓದುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್: ಜಾಬ್‍ಗೆ ಚಿಂತೆ ಮಾಡಬೇಡಿ

    ನವದೆಹಲಿ: ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2018ರಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

    ಯುವ ಜನತೆಗೆ ಉದ್ಯೋಗವಕಾಶ ರೂಪಿಸುವ ದೃಷ್ಟಿಯಲ್ಲಿ 2017ನೇ ವರ್ಷವು ನಿರಾಸೆ ಮೂಡಿಸಿದ್ದರೂ, 2018 ರಲ್ಲಿ ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಗಳು ಲಭ್ಯವಾಗಲಿದೆ. ಹಾಗೆಯೇ ಐಟಿ ಕ್ಷೇತ್ರಕ್ಕೆ ಕಾಲಿಡುವ ಹೊಸ ಉದ್ಯೋಗಿಗಳ ಸಂಖ್ಯೆಯು ಶೇ. 20 ರಷ್ಟು ಹೆಚ್ಚಳವಾಗಲಿದೆ ಎಂದು ಟೀಮ್‍ಲೀಸ್ ಸರ್ವಿಸ್ ಕಂಪನಿ ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

    ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಬಳಕೆಯಲ್ಲಿ ಉಂಟಾಗಿರುವ ಹೆಚ್ಚಳವೇ ಕಾರಣವಾಗಿದೆ. ಅಲ್ಲದೇ ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಪಡೆದು ಮುಂದುವರೆಯಬೇಕಾದರೆ ಹೊಸ ಕೌಶಲ್ಯಗಳನ್ನು ಕಲಿಯುವುದು ಕಡ್ಡಾಯ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: 6 ಸಾವಿರ ಟೆಕ್ಕಿಗಳನ್ನು ಕೆಲಸದಿಂದ ತೆಗೆಯಲಿದೆ ಕಾಗ್ನಿಜೆಂಟ್! 

    ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಾದರೆ, ಆಟೋಮೆಷನ್ ಬಳಕೆಯಿಂದಾಗಿ ಮೊಬೈಲ್ ತಯಾರಿಕಾ ಕ್ಷೇತ್ರ, ಸ್ಪಾರ್ಟ್ ಆಪ್, ಫಿನೆಟೆಕ್ ಸ್ಪಾರ್ಟ್ ಆಪ್ (ಫಿನ್‍ಟೆಕ್) ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಕಡಿತಗೊಳ್ಳುವ ಸಾಧ್ಯತೆಗಳಿವೆ. ಆರ್ಥಿಕ ಕ್ಷೇತ್ರ, ಡಿಜಿಟಲ್ ವ್ಯವಹಾರ, ಡಿಜಿಟಲ್ ಸೇವೆಗಳಲ್ಲಿ ಉಂಟಾಗಿರುವ ಹೊಸ ಆರ್ಥಿಕ ಹೂಡಿಕೆಗಳು ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಟೀಮ್‍ಲೀಸ್ ಸರ್ವಿಸ್ ಕಂಪೆನಿಯ ಜನರಲ್ ಮ್ಯಾನೇಜರ್ ಆಲ್ಕಾ ಧಿಂಗ್ರಾ ಹೇಳಿದ್ದಾರೆ. ಇದನ್ನೂ ಓದಿ:  ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?

    ಭಾರತದ ಐಟಿ ಕ್ಷೇತ್ರವೊಂದರಲ್ಲೇ ಸುಮಾರು 1.8 ರಿಂದ 2 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ. ಡಿಜಿಟಲ್ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರದಲ್ಲಿ ನವ ತಂತ್ರಜ್ಞಾನದ ಪ್ರಾವೀಣ್ಯತೆಯುಳ್ಳ ಶೇ.50 ಮಂದಿ ಹೆಚ್ಚುವರಿಯಾಗಿ ಅಗತ್ಯವಿದ್ದು, 2020ರ ವೇಳೆಗೆ ಅಂತಾರಾಷ್ಟ್ರೀಯ ಕೃತಕ ಬುದ್ಧಿಮತ್ತೆ ಕ್ಷೇತ್ರ ಒಂದರಲ್ಲೇ ವಿಶ್ವದಲ್ಲಿ 23 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಇದನ್ನೂ ಓದಿ: ಐಟಿ ಕಂಪೆನಿಗಳಲ್ಲಿ ಭಾರೀ ವೇತನ ಏರಿಕೆ ಬೇಡ: ನಾರಾಯಣ ಮೂರ್ತಿ

    ಇದನ್ನೂ ಓದಿ: ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?

    ಇದನ್ನೂ ಓದಿ: ಅಮೆರಿಕಕ್ಕೆ ಭಾರತೀಯ ಟೆಕ್ಕಿಗಳನ್ನು ಕಳುಹಿಸಬೇಕೇ:ಇನ್ಫಿ ನಾರಾಯಣ ಮೂರ್ತಿ ಹೇಳಿದ್ದು ಹೀಗೆ

    ಇದನ್ನೂ ಓದಿ: ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ ಸಲಹೆ

  • ಬೆಂಗಳೂರು ನಿವಾಸಿಗಳಿಗೆ ಬಿಬಿಎಂಪಿ ಯಿಂದ ಶಾಕಿಂಗ್ ನ್ಯೂಸ್

    ಬೆಂಗಳೂರು ನಿವಾಸಿಗಳಿಗೆ ಬಿಬಿಎಂಪಿ ಯಿಂದ ಶಾಕಿಂಗ್ ನ್ಯೂಸ್

    ಬೆಂಗಳೂರು: ಬಿಬಿಎಂಪಿ ಬೆಂಗಳೂರಿಗರಿಗೆ ಶಾಕ್ ಕೊಟ್ಟಿದ್ದು, ನಗರದಲ್ಲಿ ಇನ್ಮುಂದೆ ಕಸ ವಿಲೇವಾರಿಗಾಗಿ ಶೇ. 15ರಷ್ಟು ತೆರಿಗೆಯನ್ನು ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಿದೆ.

    ಹೌದು, ಮಹಾನಗರ ಜನರು ಮೇಲೆ ಬಿಬಿಎಂಪಿ ಕೌಸ್ಸಿಲ್ ಆಸ್ತಿಯ ವಿಸ್ತೀರ್ಣ ಆಧರಿಸಿ ತೆರಿಗೆ ಹೆಚ್ಚಳ ಮಾಡುತ್ತಿದೆ. ಕಳೆದ 7 ವರ್ಷಗಳಿಂದ ಘನ ತ್ಯಾಜ್ಯ ನಿರ್ವಹಣೆ ಮೇಲಿನ ತೆರಿಗೆ ಹೆಚ್ಚಳ ಮಾಡಿಲ್ಲ. ಲೆಕ್ಕ ಪರಿಶೋಧಕರ ಆಕ್ಷೇಪವನ್ನು ಗಣನೆಗೆ ತೆಗೆದುಕೊಂಡು ಆರ್ಥಿಕ ಸ್ಥಾಯಿ ಸಮಿತಿ ಸಲಹೆ ಮೇರೆಗೆ ತೆರಿಗೆ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಕೌನ್ಸಿಲ್ ಸಭೆ ನಿರ್ಣಯ ಕೈಗೊಳ್ಳಲಿದೆ ಅಂತಾ ಪಾಲಿಕೆಯ ಅರೋಗ್ಯ ಮತ್ತು ಘನತ್ಯಾಜ್ಯ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಹೇಳಿದ್ದಾರೆ.

    ಇದುವರೆಗೆ ಕಟ್ಟಡದ ವಿಸ್ತೀರ್ಣಕ್ಕೆ ಅನುಗುಣವಾಗಿ ಕಸದ ಮೇಲೆ ತೆರಗೆ ವಿಧಿಸಲಾಗುತ್ತಿತ್ತು. ಆದರೆ ಇನ್ನು ಆಸ್ತಿ ವಿಸ್ತೀರ್ಣ ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಈ ಕುರಿತು ಕೌನ್ಸಿಲ್ ನಲ್ಲಿ ಚರ್ಚೆ ನಡೆದು ಒಪ್ಪಿಗೆ ಪಡೆದರೆ ಸಾರ್ವಜನಿಕರು ಶೇ.15ರಷ್ಟು ಹೆಚ್ಚಿನ ಕಸದ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

    ತೆರಿಗೆ ಹೆಚ್ಚಳಕ್ಕೆ ವಿರೋಧ: ಬಿಬಿಎಂಪಿ ತೆರಿಗೆ ಹೆಚ್ಚಳ ಪ್ರಸ್ತಾವನೆಗೆ ಪಾಲಿಕೆಯ ವಿಪಕ್ಷ ನಾಯಕ ಪದ್ಮನಾಭರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತೆರಿಗೆ ಹೆಚ್ಚಳದಿಂದ ಶಾಲಾ ಕಾಲೇಜುಗಳು, ನರ್ಸಿಂಗ್ ಹೋಂಗಳು, ಕಲ್ಯಾಣ ಮಂಟಪಗಳು, ಕೈಗಾರಿಕೆಗಳು, ಟೆಕ್‍ಪಾರ್ಕ್‍ಗಳಿಗೆ ಹೆಚ್ಚಿನ ಹೊರೆ ಬೀಳಲಿದೆ. ಬಿಬಿಎಂಪಿ ಈ ನಿರ್ಧಾರ ವಾಪಸ್ ಪಡೆಯದೆ ಹೋದರೆ ಅಹೋರಾತ್ರಿ ಧರಣಿಯ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

    ಬಿಬಿಎಂಪಿ ಕಸ ವಿಲೇವಾರಿ ಮಾಡಲು ಅಧಿಕ ವೆಚ್ಚ ಮಾಡುತ್ತಿದ್ದು, ಪ್ರಸ್ತುತ ಸಾರ್ವಜನಿಕರ ಮೇಲೆ ಅಧಿಕ ತೆರಿಗೆ ವಿಧಿಸುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಲು ನಿರ್ಧರಿಸಿದೆ. ಕಸ ನಿರ್ವಹಣೆ ಸಮಸ್ಯೆ ನಗರದಲ್ಲಿ ಪ್ರಮುಖ ಸಮಸ್ಯೆ ಆಗಿರುವುದರಿಂದ ತೆರಿಗೆ ಹೆಚ್ಚಳ ಅನಿವಾರ್ಯ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

    ಅಲ್ಲದೇ ಇದುವರೆಗೆ ಬಿಬಿಎಂಪಿ ಬಾಡಿಗೆ ನೀಡಿದ ಕಟ್ಟಡಗಳಿಗೆ ಹಾಗೂ ಧಾರ್ಮಿಕ ಸಂಸ್ಥೆಗಳಿಗೆ ನೀಡಿದ್ದ ತೆರಿಗೆ ವಿನಾಯಿತಿಯನ್ನು ಹೊಸ ಪ್ರಸ್ತಾವನೆಯಲ್ಲಿ ರದ್ದು ಪಡಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ರಾಜಸ್ಥಾನ ಮಾದರಿಯಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಶಿಫಾರಸ್ಸಿನಲ್ಲಿ ತಿಳಿಸಲಾಗಿದೆ. ಬಿಬಿಎಂಪಿ ತೆರಿಗೆ ಹೆಚ್ಚಳ ನಿರ್ಧಾರದಿಂದ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಹೆಚ್ಚಳವಾಗಲಿದೆ. ಅಲ್ಲದೇ ನಗರದಲ್ಲಿ ವಾಸಿಸುತ್ತಿರುವ ಗಣ್ಯರಿಗೂ ತೆರಿಗೆ ಹೆಚ್ಚಳ ಬಿಸಿ ತಟ್ಟಲಿದೆ.