Tag: Ind vs SL

  • 138ಕ್ಕೆ ಆಲೌಟ್‌ – 27 ವರ್ಷಗಳಲ್ಲಿ ಭಾರತಕ್ಕೆ ಮೊದಲ ಸರಣಿ ಸೋಲು; 110 ರನ್‌ ಗೆಲುವಿನೊಂದಿಗೆ ಸರಣಿ ಗೆದ್ದ ಲಂಕಾ

    138ಕ್ಕೆ ಆಲೌಟ್‌ – 27 ವರ್ಷಗಳಲ್ಲಿ ಭಾರತಕ್ಕೆ ಮೊದಲ ಸರಣಿ ಸೋಲು; 110 ರನ್‌ ಗೆಲುವಿನೊಂದಿಗೆ ಸರಣಿ ಗೆದ್ದ ಲಂಕಾ

    ಕೊಲಂಬೊ: ಅವಿಷ್ಕಾ ಫರ್ನಾಂಡೋ, ಕುಸಲ್‌ ಮೆಂಡಿಸ್‌ ಅಮೋಘ ಬ್ಯಾಟಿಂಗ್‌ ಹಾಗೂ ದುನಿತ್ ವೆಲ್ಲಲಾಗೆ ಮ್ಯಾಜಿಕ್‌ ಬೌಲಿಂಗ್‌ ನೆರವಿನೊಂದಿಗೆ ಶ್ರೀಲಂಕಾ ತಂಡವು ಭಾರತದ ವಿರುದ್ಧ 110 ರನ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲೇ ಭಾರತದ ವಿರುದ್ಧ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅಲ್ಲದೇ ಕಳೆದ 27 ವರ್ಷಗಳಲ್ಲಿ ಲಂಕಾ ವಿರುದ್ಧ ಭಾರತಕ್ಕೆ ಮೊದಲ ಸರಣಿ ಸೋಲು ಇದಾಗಿದೆ.

    2023ರ ವರ್ಷಾರಂಭದಲ್ಲೇ ಭಾರತ, ಶ್ರೀಲಂಕಾ ವಿರುದ್ಧ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಟಿ20 ಸರಣಿ ಹಾಗೂ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಏಕದಿನ ಸರಣಿಯನ್ನು ತವರಿನಲ್ಲೇ ಗೆದ್ದುಕೊಂಡಿತ್ತು. ಆದ್ರೆ ಈ ಬಾರಿ ತನ್ನ ತವರಿನಲ್ಲಿ ಬಲಿಷ್ಠ ಭಾರತದ ವಿರುದ್ಧ ಸರಣಿ ಗೆದ್ದು ಸೇಡು ಲಂಕಾ ತೀರಿಸಿಕೊಂಡಿತು. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗವನ್ನು 110 ರನ್‌ಗಳಿಂದ ಮಣಿಸುವ ಮೂಲಕ ಶ್ರೀಲಂಕಾ 27 ವರ್ಷಗಳ ಬಳಿಕ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

    ಶ್ರೀಲಂಕಾ ನೀಡಿದ 249 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲು ಕಂಡಿತು. ಚೇಸಿಂಗ್‌ ಆರಂಭಿಸಿದ ಭಾರತ ಆರಂಭದಿಂದಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳಲು ಆರಂಭಿಸಿತು. ಭಾರತದ ಪರ ರೋಹಿತ್‌ ಶರ್ಮಾ 35 ರನ್‌ (20 ಎಸೆತ, 6 ಬೌಂಡರಿ, 1 ಸಿಕ್ಸರ್)‌, ವಾಷಿಂಗ್ಟನ್‌ ಸುಂದರ್‌ ಕೊನೆಯಲ್ಲಿ 30 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರದ ಕಾರಣ ಭಾರತ ತಂಡ ಹೀನಾಯ ಸೋಲಿಗೆ ತುತ್ತಾಯಿತು. ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌?

    ವಿರಾಟ್‌ ಕೊಹ್ಲಿ ಸಹ ಕೇವಲ 20 ರನ್‌ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಶುಭಮನ್‌ ಗಿಲ್‌, ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌, ಶಿವಂ ದುಬೆ, ರಿಯಾನ್‌ ಪರಾಗ್‌ ಸಹ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ 3ನೇ ಪಂದ್ಯವನ್ನು ಸೋತು, ಸರಣಿ ಬಿಟ್ಟುಕೊಡಬೇಕಾಯಿತು. ಇದನ್ನೂ ಓದಿ: ಪದಕ ಗೆದ್ದು ತಾಯ್ನಾಡಿಗೆ ಮರಳಿದ ಮನು ಭಾಕರ್‌ಗೆ ಹೂಮಳೆಯ ಸ್ವಾಗತ

    ಫರ್ನಾಂಡೋ ಭರ್ಜರಿ ಬ್ಯಾಟಿಂಗ್:
    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ, ಉತ್ತಮ ಆರಂಭ ಪಡೆಯಿತು. ಪಥುಮ್‌ ನಿಸ್ಸಾಂಕ, ಆವಿಷ್ಕ ಫರ್ನಾಂಡೋ ಹಾಗೂ ಕುಶಾಲ್‌ ಮೆಂಡಿಸ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಲಂಕಾ 3 ವಿಕೆಟ್‌ಗೆ 183 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಬೃಹತ್‌ ಮೊತ್ತ ಪೇರಿಸುವ ಸಾಧ್ಯತೆಯೂ ಇತ್ತು. ಆದರೆ, ನಂತರ ಬಂದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ವಿಕೆಟ್‌ ಒಪ್ಪಿಸಿದ ಕಾರಣ ಶ್ರೀಲಂಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸಲಷ್ಟೇ ಶಕ್ತವಾಯಿತು.

    ಲಂಕಾ ಪರ ಪಾತುಂ ನಿಸ್ಸಾಂಕ 45 ರನ್‌, ಅವಿಷ್ಕಾ ಫರ್ನಾಂಡೋ 96 ರನ್‌ (102, 9 ಬೌಂಡರಿ, 2 ಸಿಕ್ಸರ್), ಕುಸಲ್ ಮೆಂಡಿಸ್ 59 ರನ್‌, ಚರಿತ್ ಅಸಲಂಕಾ 10 ರನ್‌, ಜನಿತ್ ಲಿಯಾನಗೆ 8 ರನ್‌, ದುನಿತ್ ವೆಲ್ಲಲಾಗೆ 2 ರನ್‌, ಕಮಿಂಡು ಮೆಂಡಿಸ್ 23 ರನ್‌, ಮಹೀಶ್‌ ತೀಕ್ಷಣ 3 ರನ್‌ ಗಳಿಸಿ ಅಜೇಯರಾಗುಳಿದರು. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌ ಕಬಳಿಸಿದರೆ, ಅಕ್ಷರ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲ್ದೀಪ್‌ ಯಾದವ್‌ ಅವರು ತಲಾ ಒಂದು ವಿಕೆಟ್‌ ಪಡೆದರು. ಮೊದಲ ಪಂದ್ಯ ರೋಚಕ ಟೈ ಆದರೆ, 2ನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು.  ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ

  • ಸೂಪರ್‌ ಓವರ್‌ ಥ್ರಿಲ್ಲಿಂಗ್‌ – ಮೊದಲ ಎಸೆತದಲ್ಲೇ ಭಾರತಕ್ಕೆ ಗೆಲುವು – ಕ್ಲೀನ್‌ಸ್ವೀಪ್‌ನೊಂದಿಗೆ ಸರಣಿ ಜಯ

    ಸೂಪರ್‌ ಓವರ್‌ ಥ್ರಿಲ್ಲಿಂಗ್‌ – ಮೊದಲ ಎಸೆತದಲ್ಲೇ ಭಾರತಕ್ಕೆ ಗೆಲುವು – ಕ್ಲೀನ್‌ಸ್ವೀಪ್‌ನೊಂದಿಗೆ ಸರಣಿ ಜಯ

    ಕೊಲಂಬೊ: ಸೂಪರ್‌ ಓವರ್‌ನ ಮೊದಲ ಎಸೆತದಲ್ಲೇ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಬೌಂಡರಿಯೊಂದಿಗೆ ಲಂಕಾ ವಿರುದ್ಧ ಭಾರತ ರೋಚಕ ಗೆಲುವು ಸಾಧಿಸಿತು. ಅಲ್ಲದೇ ಲಂಕಾ ತವರಿನಲ್ಲೇ ಕ್ಲೀನ್‌ ಸ್ವೀಪ್‌ನೊಂದಿಗೆ ಸರಣಿ ಗೆದ್ದುಕೊಂಡಿತು.

    ಗೆಲುವಿಗೆ 138 ರನ್‌ ಗುರಿ ಪಡೆದಿದ್ದ ಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಕೆ 137 ರನ್‌ ಗಳಿಸಿ ಮ್ಯಾಚ್‌ ಟೈನಲ್ಲಿ ನಿಂತಿತು. ಇದರಿಂದ ಮ್ಯಾಚ್‌ ಸೂಪರ್‌ ಓವರ್‌ನತ್ತ ತಿರುಗಿತು. ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಂಕಾ ತಂಡ 2 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ಗೆ ಮರಳಿತು. ಆದ್ರೆ ಟೀಂ ಇಂಡಿಯಾ ಪರ ಕಣಕ್ಕಿಳಿದ ನಾಯಕ ಸೂರ್ಯಕುಮಾರ್‌, ಮಹೀಶ್‌ ತೀಕ್ಷಣ ಬೌಲಿಂಗ್‌ನಲ್ಲಿ ಮೊದಲ ಎಸೆತದಲ್ಲೇ ಬೌಂಡರಿ ಚಚ್ಚಿ ನೀರು ಕುಡಿದಂತೆ ಮ್ಯಾಚ್‌ ಗೆಲ್ಲಿಸಿದರು.

    ಕೊನೇ 2 ಓವರ್‌ ಥ್ರಿಲ್ಲಿಂಗ್‌:
    138 ರನ್‌ ಗುರಿ ಬೆನ್ನಟ್ಟಿದ್ದ ಲಂಕಾ ತಂಡಕ್ಕೆ ಕೊನೇ 2 ಓವರ್‌ಗಳಲ್ಲಿ ಗೆಲುವಿಗೆ 9 ರನ್‌ ಬೇಕಿತ್ತು. ಆದ್ರೆ 19ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ರಿಂಕು ಸಿಂಗ್‌ 2 ಪ್ರಮುಖ ವಿಕೆಟ್‌ ಕಿತ್ತು, ಕೇವಲ 3 ರನ್‌ ಬಿಟ್ಟುಕೊಟ್ಟರು. ಕೊನೇ ಓವರ್‌ನಲ್ಲಿ 6 ರನ್‌ ಬೇಕಿದ್ದಾಗ ನಾಯಕ ಸೂರ್ಯಕುಮಾರ್‌ ಯಾದವ್‌ ಅವರೇ ಖುದ್ದು ಬೌಲಿಂಗ್‌ಗೆ ಇಳಿದರು. ಮೊದಲ ಎಸೆತದಲ್ಲಿ ರನ್‌ ಬಿಟ್ಟುಕೊಡದ ಸೂರ್ಯ 2-3ನೇ ಎಸೆತಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಕಿತ್ತರು. 4ನೇ ಎಸೆತದಲ್ಲಿ 1 ರನ್‌ ಬಿಟ್ಟುಕೊಟ್ಟರು. 5ನೇ ಎಸೆತದಲ್ಲಿ ರನೌಟ್‌ಗೆ ಸುಲಭ ಸಾಧ್ಯತೆ ಇದ್ದರೂ ಕೊಂಚ ಗಲಿಬಿಲಿಯಿಂದ ಸೂರ್ಯ 2 ರನ್‌ ಕೈಚೆಲ್ಲಿದರು. ಕೊನೇ ಎಸೆತದಲ್ಲಿ ಲಂಕಾ ಬ್ಯಾಟರ್‌ಗಳು 2 ರನ್‌ ಕದಿಯುವಲ್ಲಿ ಯಶಸ್ವಿಯಾದ ಪರಿಣಾಮ ಮ್ಯಾಚ್‌ ಸೂಪರ್‌ ಓವರ್‌ನತ್ತ ತಿರುಗಿತು.

    ಸೂಪರ್ ಓವರ್ ನಿಯಮವೇನು?:
    * ಪ್ರತಿ ತಂಡವು 3 ಬ್ಯಾಟ್ಸ್ ಮೆನ್ ಹಾಗೂ ಓರ್ವ ಬೌಲರನ್ನು ಆಯ್ಕೆ ಮಾಡಬೇಕು.
    * ಇಬ್ಬರು ಆಟಗಾರರು ಔಟ್ ಆದರೆ ತಂಡ ಆಲೌಟ್ ಆದಂತೆ ಲೆಕ್ಕ.
    * ಸೂಪರ್ ಓವರ್ ನಲ್ಲಿ ಅತ್ಯಧಿಕ ರನ್ ಗಳಿಸಿದ ತಂಡ ವಿಜೇತ ಎಂದು ಘೋಷಣೆ
    * ಪ್ರತಿ ತಂಡಕ್ಕೆ 1 ಓವರ್ ಆಡುವ ಅವಕಾಶ

    ಚೇಸಿಂಗ್‌ ಮಾಡಿದ ಲಂಕಾ ಪರ ಆರಂಭಿಕರಾದ ಪಥುಮ್‌ ನಿಸ್ಸಾಂಕ 26ರನ್‌, ಕುಸಲ್‌ ಮೆಂಡಿಸ್‌ 43 ರನ್‌, ಕುಸಲ್‌ ಪೆರೆರಾ 46 ರನ್‌ ಬಾರಿಸಿದರು. ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಪರ ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯಿ, ರಿಂಕು ಸಿಂಗ್‌, ಸೂರ್ಯಕುಮಾರ್‌ ಯಾದವ್‌ ತಲಾ 2 ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಜೈಸ್ವಾಲ್‌ 10 ರನ್‌, ಶುಭಮನ್‌ ಗಿಲ್‌ 39 ರನ್‌, ಶಿವಂ ದುಬೆ 13 ರನ್‌, ಸೂರ್ಯ 8 ರನ್‌, ರಿಂಕು ಸಿಂಗ್‌ 1 ರನ್‌, ರಿಯಾನ್‌ ಪರಾಗ್‌ 26 ರನ್‌, ವಾಷಿಂಗ್ಟನ್‌ ಸುಂದರ್‌ 25 ರನ್‌ ಹಾಗೂ ರವಿ ಬಿಷ್ಣೋಯಿ 8 ರನ್‌ ಗಳಿಸಿದ್ರೆ ಸಿರಾಜ್‌, ಸಂಜು ಸ್ಯಾಮ್ಸನ್‌ ಶೂನ್ಯ ಸುತ್ತಿದರು.

  • ಟೀಂ ಇಂಡಿಯಾ ಆರ್ಭಟಕ್ಕೆ ಲಂಕಾ ಭಸ್ಮ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ, ಸರಣಿ ಕೈವಶ

    ಟೀಂ ಇಂಡಿಯಾ ಆರ್ಭಟಕ್ಕೆ ಲಂಕಾ ಭಸ್ಮ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ, ಸರಣಿ ಕೈವಶ

    ಕೊಲಂಬೊ: ಸಂಘಟಿತ ಬೌಲಿಂಗ್‌ ಪ್ರದರ್ಶನ, ಯಶಸ್ವಿ, ಸೂರ್ಯ, ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು ಶ್ರೀಲಂಕಾ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಟಿ20 ಸರಣಿಯನ್ನು 2-0 ರಲ್ಲಿ ಗೆದ್ದುಕೊಂಡಿದ್ದು, ಸರಣಿ ಕೈವಶ ಮಾಡಿಕೊಂಡಿದೆ.

    ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 161 ರನ್‌ ಬಾರಿಸಿತ್ತು. 162 ರನ್‌ಗಳ ಗುರಿ ಬೆನ್ನತ್ತಿದ ಭಾರತ ಮೊದಲ ಮೂರು ಎಸೆತಗಳಲ್ಲಿ 6 ರನ್‌ ಗಳಿಸುತ್ತಿದ್ದಂತೆ ಮಳೆಯ ಆರ್ಭಟ ಶುರುವಾಯಿತು. ಸುಮಾರು 1 ಗಂಟೆಗಳ ಕಾಲ ಮಳೆಯಾದ ಕಾರಣ ಡಕ್ವರ್ತ್‌ ಲೂಯಿಸ್‌ ನಿಯಮದ ಅನ್ವಯ ಟೀಂ ಇಂಡಿಯಾಕ್ಕೆ 8 ಓವರ್‌ಗಳಲ್ಲಿ 78 ರನ್‌ ಗುರಿ ನೀಡಲಾಯಿತು. ಸ್ಪರ್ಧಾತ್ಮಕ ಗುರಿ ಪಡೆದ ಭಾರತ ಕೇವಲ 6.3 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 81 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

    ಚೇಸಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್‌ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ್ರೆ ಸಂಜು ಸ್ಯಾಮ್ಸನ್‌ ಮೊದಲ ಎಸೆತದಲ್ಲೇ ಗೋಲ್ಡನ್‌ ಡಕ್‌ ಆಗುವ ಮೂಲಕ ಆಘಾತ ನೀಡಿದರು. ನಂತರ ಕ್ರೀಸ್‌ಗಿಳಿದ ಸೂರ್ಯಕುಮಾರ್‌ ಯಾದವ್‌, ಜೈಸ್ವಾಲ್‌ ಜೊತೆಗೂಡಿ ಲಂಕಾ ಬೌಲರ್‌ಗಳಲ್ಲ ಬೆಂಡೆತ್ತಿದರು. 216.66 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ 12 ಎಸೆತಗಳಲ್ಲಿ ಸ್ಫೋಟಕ 26 ರನ್‌ ಚಚ್ಚಿ ಔಟಾದರು. ಈ ಬೆನ್ನಲ್ಲೇ 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಸ್‌ ಬೀಸಿದ ಯಶಸ್ಬಿ ಜೈಸ್ವಾಲ್‌ 15 ಎಸೆತಗಳಲ್ಲಿ 30 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಅಷ್ಟೊತ್ತಿಗಾಗಲೇ ಭಾರತದ ಗೆಲುವಿನ ಹಾದಿ ಸುಗಮನವಾಗಿತ್ತು.

    ನಂತರ 4ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್‌ ಪಾಂಡ್ಯ 9 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿಯೊಂದಿಗೆ ಸ್ಫೋಟಕ 22 ರನ್‌ ಬಾರಿಸಿ ಗೆಲುವು ತಂದುಕೊಟ್ಟರು. ರಿಷಭ್‌ ಪಂತ್‌ 2 ರನ್‌ ಗಳಿಸಿ ಅಜೇಯರಾಗುಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ಪರ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಬ್ಬರಿಸಿದರು. ಪಥುಮ್‌ ನಿಸ್ಸಾಂಕ 32 ರನ್‌, ಕುಸಲ್‌ ಪೆರೆರಾ ಅಮೋಘ 53 ರನ್‌ (34 ಎಸೆತ, 2 ಸಿಕ್ಸರ್‌, 6 ಬೌಂಡರಿ) ಸಿಡಿಸಿ ಮಿಂಚಿದರು. ಇದರೊಂದಿಗೆ ಕುಸಲ್‌ ಮೆಂಡಿಸ್‌ 10 ರನ್‌, ಕಮಿಂಡು ಮೆಂಡಿಸ್‌ 26 ರನ್‌, ಚರಿತ್‌ ಹಸಲಂಕ 14 ರನ್‌, ರಮೇಶ್‌ ಮೆಂಡಿಸ್‌ 12 ರನ್‌ಗಳ ಕೊಡುಗೆ ನೀಡಿದರು.

    ಭಾರತದ ಪರ ರವಿ ಬಿಷ್ಣೋಯಿ 3 ವಿಕೆಟ್‌ ಕಿತ್ತರೆ, ಅರ್ಷ್‌ ದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ ತಲಾ 2 ವಿಕೆಟ್‌ ಪಡೆದು ಮಿಂಚಿದರು.

  • Women’s Asia Cup 2024: ಲಂಕಾ ಚಾಂಪಿಯನ್‌ – 20 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಿಂಹಳಿಯರು

    Women’s Asia Cup 2024: ಲಂಕಾ ಚಾಂಪಿಯನ್‌ – 20 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಿಂಹಳಿಯರು

    – ಭಾರತದ ವನಿತೆಯರಿಗೆ ವಿರೋಚಿತ ಸೋಲು

    ಡಂಬುಲ್ಲಾ: 2024ರ ಮಹಿಳಾ ಟಿ20 ಏಷ್ಯಾಕಪ್‌ (Women’s Asia Cup 2024) ಟೂರ್ನಿಯಲ್ಲಿ ಆಥಿತೇಯ ಶ್ರೀಲಂಕಾ ತಂಡ (SriLanka Womens Team) ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಏಷ್ಯಾಕಪ್‌ ಚಾಂಪಿಯನ್‌ (Asian champions) ಆಗಿ ಹೊರಹೊಮ್ಮಿದ್ದು, 20 ವರ್ಷಗಳ ಕನಸನ್ನು ನನಸು ಮಾಡಿಕೊಂಡಿದೆ. ಭಾರತ 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಭಾರತದ ಮಹಿಳಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 165 ರನ್‌ ಬಾರಿಸಿತ್ತು. ಈ ಗುರಿ ಬೆನ್ನಟ್ಟಿದ ಲಂಕಾ 18.4 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 167 ರನ್‌ ಬಾರಿಸಿ ಗೆಲುವು ಸಾಧಿಸಿತು. ಈ ಮೂಲಕ ಇದೇ ಮೊಟ್ಟ ಮೊದಲ ಬಾರಿಗೆ ಏಷ್ಯಾಕಪ್‌ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿತು. 2012, 2016, 2018, 2022ರಲ್ಲಿ ಫೈನಲ್‌ ತಲುಪಿದ್ದ ಭಾರತ ಮೂರು ಬಾರಿ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿತ್ತು. ಇನ್ನೂ ಟಿ20 ಏಷ್ಯಾಕಪ್‌ ಟೂರ್ನಿಯಲ್ಲಿ 2022ರಲ್ಲಿ ಮೊದಲ ಬಾರಿಗೆ ಫೈನಲ್‌ ತಲುಪಿದ್ದ ಶ್ರೀಲಂಕಾ ಭಾರತದ ವಿರುದ್ಧವೇ 8 ವಿಕೆಟ್‌ಗಳ ಅಂತರದಿಂದ ಸೋತು ಚಾಂಪಿಯನ್‌ ಪಟ್ಟ ಕಳೆದುಕೊಂಡಿತ್ತು. ಇದೀಗ ಭಾರತದ ವಿರುದ್ಧವೇ ಗೆದ್ದು ಸೇಡು ತೀರಿಸಿಕೊಂಡಿದೆ.

    ಟರ್ನಿಂಗ್‌ ಪಾಯಿಂಟ್‌ ಸಿಕ್ಕಿದ್ದೆಲ್ಲಿ?
    13 ಓವರ್‌ಗಳ ವರೆಗೆ ಲಂಕಾ 2 ವಿಕೆಟ್‌ ಕಳೆದುಕೊಂಡಿದ್ದರೂ 99 ರನ್‌ ಗಳಿಸಿತ್ತು. ಆದ್ರೆ 14ನೇ ಓವರ್‌ನಲ್ಲಿ ಪೂಜಾ ವಸ್ತ್ರಕಾರ್‌ 14 ರನ್‌, 18ನೇ ಓವರ್‌ನಲ್ಲಿ ರಾಧಾ ಯಾದವ್‌ 17 ರನ್‌ ಬಿಟ್ಟುಕೊಟ್ಟರು. ಇದೂ ಲಂಕಾಗೆ ಬಹುದೊಡ್ಡ ಲಾಭವಾಯಿತು. ಅಲ್ಲದೇ ಕಳಪೆ ಫೀಲ್ಡಿಂಗ್‌, ಕ್ಯಾಚ್‌ಗಳನ್ನು ಕೈಚೆಲ್ಲಿದ ಪರಿಣಾಮ ಭಾರತ ತಂಡ ಸೋಲು ಕಂಡಿತು.

    166 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಲಂಕಾ 7 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರೂ ನಂತರದಲ್ಲಿ ತಾಳ್ಮೆಯ ಆಟದೊಂದಿಗೆ ಗೆಲುವಿನ ಹಾದಿಯತ್ತ ಸಾಗಿತ್ತು. ನಾಯಕಿ ಚಾಮರಿ ಚಾಮರಿ ಅಥಾಪತ್ತು (Chamari Athapaththu) ಹಾಗೂ ಹರ್ಷಿತಾ ಸಮರವಿಕ್ರಮ (Harshitha Samarawickrama) ಅವರ ಆಕರ್ಷಕ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತದ ವಿರುದ್ಧ ಸುಲಭವಾಗಿ ಗೆಲುವು ಸಾಧಿಸಿತು.

    ಲಂಕಾ ಪರ ನಾಯಕಿ ಚಾಮರಿ ಅಥಾಪತ್ತು 43 ಎಸೆತಗಳಲ್ಲಿ 61 ರನ್‌ ಗಳಿಸಿದ್ರೆ, ಹರ್ಷಿತಾ 51 ಎಸೆತಗಳಲ್ಲಿ 69 ರನ್‌ ಬಾರಿಸಿದರು. ಇದರೊಂದಿಗೆ ಕವಿಶಾ ದಿಲ್ಹಾರಿ 16 ಎಸೆತಗಳಲ್ಲಿ ಸ್ಫೋಟಕ 30 ರನ್‌ ಬಾರಿಸುವ ಮೂಲಕ ಗೆಲುವು ತಂದುಕೊಟ್ಟರು.

    ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ್ದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ನಿಧಾನಗತಿಯ ಬ್ಯಾಟಿಂಗ್‌ ನಡೆಸಿದರು. ಅಲ್ಲದೇ ಸ್ಫೋಟಕ ಆಟಗಾರ್ತಿ ಶಫಾಲಿ ವರ್ಮಾ 19 ಎಸೆತಗಳಲ್ಲಿ 16 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌, ಉಮಾ ಚೆಟ್ರಿ ಅಲ್ಪ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಹೊರನಡೆದರು ಇದು ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ ನೀಡಿತ್ತು.

    ಮಂಧಾನ ಬ್ಯಾಟಿಂಗ್‌ ಕಮಾಲ್‌:
    ಒಂದೆಡೆ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಟೀಂ ಇಂಡಿಯಾ ಪರ ಸ್ಮೃತಿ ಮಂಧಾನ ಅಮೋಘ ಅರ್ಧಶತಕ ಬಾರಿಸುವ ಮೂಲಕ ಆಧಾರವಾದರು. 47 ಎಸೆತಗಳಲ್ಲಿ 10 ಬೌಂಡರಿ ಸಹಿತ 60 ರನ್‌ ಬಾರಿಸುವ ಮೂಲಕ ತಂಡದ ಮೊತ್ತ 160 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಕೊನೆಯಲ್ಲಿ ರಿಚಾ ಘೋಷ್‌ 14 ಎಸೆತಗಳಲ್ಲಿ ಸ್ಫೋಟಕ 30 ರನ್‌, ಜೆಮಿಮಾ ರೊಡ್ರಿಗ್ಸ್‌ 16 ಎಸೆತಗಳಲ್ಲಿ 29 ರನ್‌ ಗಳ ಕೊಡುಗೆ ನೀಡಿದರು. ಪೂಜಾ ವಸ್ತ್ರಕಾರ್‌ 5 ರನ್‌, ರಾಧಾ ಯಾದವ್‌ 1 ರನ್‌, ಉಮಾ ಚೆಟ್ರಿ 9 ರನ್‌ ಹಾಗೂ ಕೌರ್‌ 11 ರನ್‌ ಗಳಿಸಿದರು.

  • ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ (Sri Lanka) ವಿರುದ್ಧ 43 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ (Team India) 1-0 ಮುನ್ನಡೆ ಕಾಯ್ದುಕೊಂಡಿದೆ.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಅಬ್ಬರಿಸುತ್ತಿದ್ದ ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕುವುದು ಭಾರತ ತಂಡಕ್ಕೆ ಸವಾಲಾಗಿತು. ಲಂಕಾ 14 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 140 ರನ್‌ ಬಾರಿಸಿತ್ತು. 15ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ಅಕ್ಷರ್‌ ಪಟೇಲ್‌ 9 ರನ್‌ ಬಿಟ್ಟುಕೊಟ್ಟರೂ ಪ್ರಮುಖ 2 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು. ಇಲ್ಲಿಂದ ಲಂಕಾ ತಂಡದ ಪಥನ ಶುರುವಾಯಿತು.

    ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿಂದು ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಡೆಯಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ ಬಾರಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಆರಂಭದಲ್ಲಿ ಅಬ್ಬರಿಸಿದರೂ 170 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಶ್ರೀಲಂಕಾ ತಂಡ ಉತ್ತಮ ಜೊತೆಯಾಟ ನೀಡುವಲ್ಲಿ ಯಶಸ್ವಿಯಾಗಿತ್ತು. ಮೊದಲ ವಿಕೆಟ್‌ಗೆ ಕುಸಲ್‌ ಮೆಂಡಿಸ್‌ ಹಾಗೂ ಪಥುಮ್‌ ನಿಸ್ಸಾಂಕ ಜೋಡಿ 52 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಕುಸಾಲ್ ಮೆಂಡಿಸ್ 27 ಎಸೆತಗಳಲ್ಲಿ 45 ರನ್‌ ಸಿಡಿಸಿದ್ದರು. ಈ ವೇಳೆ ಅರ್ಷ್‌ದೀಪ್‌ ಸಿಂಗ್‌ ಮೆಂಡಿಸ್‌ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ ದಾರಿ ತೋರಿದರು.

    ಇನ್ನೂ 2ನೇ ವಿಕೆಟ್‌ಗೆ ಜೊತೆಯಾಗಿದ್ದ ಕುಸಲ್‌ ಪೆರೇರಾ ಹಾಗೂ ನಿಸ್ಸಾಂಕ ಜೋಡಿ ಸಹ 33 ಎಸೆತಗಳಲ್ಲಿ 56 ರನ್‌ ಬಾರಿಸಿತ್ತು. ಒಂದಂಥದಲ್ಲಿ ಭಾರತ ಸೋತೇಬಿಡುತ್ತೆ ಎಂದು ಭಾವಿಸಲಾಗಿತ್ತು. ಆದ್ರೆ ಸಂಘಟಿತ ಪ್ರದರ್ಶನ ನೀಡಿದ ಭಾರತದ ಬೌಲರ್‌ಗಳು ಲಂಕಾ ಬ್ಯಾಟರ್‌ಗಳ ಆರ್ಭಟವನ್ನು ಅಡಗಿಸಿದರು. ನಿಸ್ಸಾಂಕ, ಪೆರೇರಾ ಜೋಡಿ ವಿಕೆಟ್‌ ಪತನದೊಂದಿಗೆ ಲಂಕಾ ಅವನತಿ ಶುರುವಾಯಿತು. ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿ ಪೆವಿಲಿಯನ್‌ ಪೆರೇಡ್‌ ನಡೆಸಲು ಲಂಕನ್ನರು ಶುರು ಮಾಡಿದರು. ಅಂತಿಮವಾಗಿ ಲಂಕಾ 170 ರನ್‌ಗಳಿಗೆ ಆಲೌಟ್‌ ಆಯಿತು.

    ಶ್ರೀಲಂಕಾ ಪರ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಪಥುಮ್‌ ನಿಸ್ಸಾಂಕ 79 ರನ್‌ (48 ಎಸೆತ, 4 ಸಿಕ್ಸರ್‌, 7 ಬೌಂಡರಿ), ಮೆಂಡಿಸ್‌ 45 ರನ್‌ (27 ಎಸೆತ, 1 ಸಿಕ್ಸರ್‌, 7 ಬೌಂಡರಿ), ಕುಸಾಲ್‌ ಪೆರೇರಾ 20 ರನ್‌ ಹಾಗೂ ಕುಮುಂಡು ಮೆಂಡಿಸ್‌ 12 ರನ್‌ ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ 1.5 ಓವರ್‌ಗಳಲ್ಲಿ ಕೇವಲ 5 ರನ್‌ ಬಿಟ್ಟುಕೊಟ್ಟ ರಿಯಾನ್‌ ಪರಾಗ್‌ 3 ವಿಕೆಟ್‌ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಬ್ಯಾಟರ್‌ಗಳು ಅಬ್ಬರಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಜೋಡಿ ಮೊದಲ ವಿಕೆಟ್​ಗೆ 36 ಎಸೆತಗಳಲ್ಲಿ ಸ್ಫೋಟಕ 76 ರನ್‌ ಬಾರಿಸಿತ್ತು. ಶುಭಮನ್‌ ಗಿಲ್‌ 16 ಎಸೆತಗಳಲ್ಲಿ 34 ರನ್‌ ಚಚ್ಚಿ ಔಟಾಗುತ್ತಿದ್ದಂತೆ, ಯಶಸ್ವಿ ಜೈಸ್ವಾಲ್‌ 20 ಎಸೆತಗಳಲ್ಲಿ 40 ರನ್‌ ಸಿಡಿಸಿ ಪೆವಿಲಿಯನ್‌ಗೆ ಮರಳಿದರು. ಬಳಿಕ ಲಂಕನ್ನರನ್ನು ಚೆಂಡಾಡಿದ ಸೂರ್ಯಕುಮಾರ್‌ ಯಾದವ್‌ ಹಾಗೂ ರಿಷಭ್‌ ಪಂತ್‌ ಜೋಡಿ 3ನೇ ವಿಕೆಟ್‌ಗೆ 43 ಎಸೆತಗಳಲ್ಲಿ 76 ರನ್‌ ಪೇರಿಸಿತ್ತು. ಪರಿಣಾಮ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಟೀಂ ಇಂಡಿಯಾ ಪರ ನಾಯಕ ಸೂರ್ಯಕುಮಾರ್‌ ಯಾದವ್‌ 58 ರನ್‌ (26 ಎಸೆತ, 2 ಸಿಕ್ಸರ್‌, 8 ಬೌಂಡರಿ), ರಿಷಭ್‌ ಪಂತ್‌ 49 ರನ್‌ (33 ಎಸೆತ, 1 ಸಿಕ್ಸರ್‌, 6 ಬೌಂಡರಿ), ಯಶಸ್ವಿ ಜೈಸ್ವಾಲ್‌ 40 ರನ್‌ ಹಾಗೂ ಶುಭಮನ್‌ ಗಿಲ್‌ 34 ರನ್‌ ಬಾರಿಸಿದರು.

  • World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    ಮುಂಬೈ: ಶ್ರೀಲಂಕಾ (Sri Lanka) ವಿರುದ್ಧ ಗುರುವಾರ ನಡೆದ ವಿಶ್ವಕಪ್‌ ಪಂದ್ಯದಲ್ಲಿ 49ನೇ ಶತಕ ಸಿಡಿಸಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ (Sachin Tendulkar) ದಾಖಲೆ ಸರಿಗಟ್ಟುವ ಸನಿಹದಲ್ಲಿದ್ದ ಕಿಂಗ್‌ ಕೊಹ್ಲಿ (Virat Kohli) ಮತ್ತೆ ಎಡವಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ರು. ಆದ್ರೂ ಕೂಡ ಕ್ರಿಕೆಟ್‌ ದೇವರ ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಮುರಿದು ಗಮನ ಸೆಳೆದಿದ್ದಾರೆ.

    ಶ್ರೀಲಂಕಾ ವಿರುದ್ಧ 88 ರನ್‌ ಬಾರಿಸಿದ್ದ ಕೊಹ್ಲಿ 32ನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ರು. ಶತಕ ಸಿಡಿಸಿ ದಾಖಲೆ ಬರೆಯುವ ಸನಿಹದಲ್ಲಿದ್ದ ಕೊಹ್ಲಿ ಔಟಾಗುತ್ತಿದ್ದಂತೆ ಹತಾಷಾ ಭಾವದಿಂದ ಹೊರನಡೆದ್ರು. ಈ ವೇಳೆ ಅಭಿಮಾನಿಗಳೂ ಕೊಹ್ಲಿ (Kohli Fans) ಬೇಸರದಿಂದ ನಡೆದು ಹೋಗುತ್ತಿದ್ದ ದೃಶ್ಯವನ್ನ ಮೊಬೈಲ್‌ಗಳಲ್ಲಿ ಸೆರೆಹಿಡಿದ್ರು. ನಂತರ ಕ್ಯಾಬಿನ್‌ನಲ್ಲಿ ಕುಳಿತ ಕೊಹ್ಲಿ ಕಣ್ಣಲ್ಲಿ ಇದ್ದಕ್ಕಿದ್ದಂತೆ ನೀರು ಕಚ್ಚಿತು. ಅಭಿಮಾನಿಗಳನ್ನು ಕಂಡಾಗ ನಗುಮುಖದಿಂದಲೇ ಕೈಸನ್ನೆ ಮಾಡಿದ ಕೊಹ್ಲಿ ಬಳಿಕ ಕ್ಯಾಬಿನ್‌ನಲ್ಲಿ ಕುಳಿತು ಬಿಕ್ಕಿ-ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಭಿಮಾನಿಗಳಿಗೂ ಬೇಸರವುಂಟುಮಾಡಿದೆ. ಇದನ್ನೂ ಓದಿ: 48 ವರ್ಷಗಳಲ್ಲೇ ಮೊದಲು! ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

    ಗುರುವಾರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್‌ ಆರಂಭದ 2ನೇ ಎಸೆತದಲ್ಲೇ ವಿಕೆಟ್‌ ಕೈಚೆಲ್ಲಿದರು. ಆದ್ರೆ 2ನೇ ವಿಕೆಟ್‌ಗೆ ಶುಭಮನ್ ಗಿಲ್, ಜೊತೆಗೂಡಿದ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ, ಶ್ರೀಲಂಕಾ ಬೌಲರ್‌ಗಳನ್ನ ಬೆಂಡೆತ್ತಿದರು. 2ನೇ ವಿಕೆಟ್‌ಗೆ ಈ ಜೋಡಿ 179 ಎಸೆತಗಳಲ್ಲಿ 189 ರನ್‌ ಬಾರಿಸಿತ್ತು. ಇದನ್ನೂ ಓದಿ: ಶಮಿ ದಾಳಿಗೆ ಲಂಕಾ ಭಸ್ಮ – 302 ರನ್‌ಗಳ ಭರ್ಜರಿ ಜಯ, ಸೆಮಿಗೆ ಟೀಂ ಇಂಡಿಯಾ

    ಪಂದ್ಯದ ಆರಂಭದಲ್ಲೇ ಶ್ರೀಲಂಕಾದ ಕ್ಷೇತ್ರ ರಕ್ಷಕರು ತೋರಿದ ಕಳಪೆ ಪ್ರದರ್ಶನದಿಂದ ಹಲವು ಬಾರಿ ಜೀವದಾನ ಪಡೆದಿದ್ದ ವಿರಾಟ್ ಕೊಹ್ಲಿ, ನಂತರ ಸಿಡಿಲಬ್ಬರದ ಆಟಕ್ಕೆ ಮುಂದಾಗಿದ್ದರು. ಒಂದೂ ಸಿಕ್ಸರ್‌ ಸಿಡಿಸದಿದ್ದರೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟುವ ಭರವಸೆ ಮೂಡಿಸಿದ್ದರು. ಆದ್ರೆ ಶ್ರೀಲಂಕಾದ ದಿಲ್ಷಾನ್ ಮಧುಶಂಕ ಬೌಲಿಂಗ್ ನಲ್ಲಿ ನಿಸ್ಸಾಂಕಗೆ ಕ್ಯಾಚ್ ನೀಡಿ ಮೈದಾನ ತೊರೆದರು.‌ ಗಾಡ್ ಆಫ್ ಕ್ರಿಕೆಟ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಏಷ್ಯನ್ ಕಂಡೀಷನ್ಸ್ ಗಳಲ್ಲಿ ಆಡಿದ್ದ 188 ಇನಿಂಗ್ಸ್‌ನಲ್ಲಿ 8 ಸಾವಿರ ರನ್ ಗಡಿ ಮುಟ್ಟಿದ್ದರೆ, ವಿರಾಟ್ ಕೊಹ್ಲಿ 159 ಇನಿಂಗ್ಸ್ ನಲ್ಲೇ ಆ ದಾಖಲೆ ಮುರಿದಿದ್ದಾರೆ. ಇಷ್ಟಾದರೂ ಕೊಹ್ಲಿಗೆ ಸಮಾಧಾನ ತರಿಸದೇ ಕ್ಯಾಬಿನ್‌ನಲ್ಲಿ ಕಣ್ಣೀರಿಟ್ಟರು.

    ಒಟ್ಟಿನಲ್ಲಿ ಇನ್ನೆರಡು ಲೀಗ್‌ ಪಂದ್ಯಗಳಿದ್ದು, ಉಳಿದ ಪಂದ್ಯಗಳಲ್ಲಾದರೂ ಕೊಹ್ಲಿ ಶತಕ ಪೂರೈಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.  ಇದನ್ನೂ ಓದಿ: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಲಂಕಾಗೆ ಬೆಂಕಿ ಹಚ್ಚಿ ನಂ.1 ಪಟ್ಟಕ್ಕೇರಿದ ಶಮಿ

    World Cup 2023: ಲಂಕಾಗೆ ಬೆಂಕಿ ಹಚ್ಚಿ ನಂ.1 ಪಟ್ಟಕ್ಕೇರಿದ ಶಮಿ

    ಮುಂಬೈ: 2023ರ ಐಸಿಸಿ ಏಕದಿನ ವಿಶ್ವಕಪ್‌ (World Cup 2023) ಟೂರ್ನಿಯಲ್ಲಿ ಮೊದಲ ತಂಡವಾಗಿ ಟೀಂ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಕೇವಲ 55 ರನ್‌ಗಳಿಗೆ ಶ್ರೀಲಂಕಾ ತಂಡವನ್ನು ಧೂಳಿಪಟ ಮಾಡಿದ ಭಾರತ, 302 ರನ್​​ಗಳ ವಿಶ್ವದಾಖಲೆಯ ಜಯ ಸಾಧಿಸಿತು. ಅದರಲ್ಲೂ ಲಂಕಾ ವಿರುದ್ಧ ಬೆಂಕಿ ಬೌಲಿಂಗ್‌ ದಾಳಿ ಮಾಡಿದ ಮೊಹಮ್ಮದ್ ಶಮಿ (Mohammed Shami) 5 ವಿಕೆಟ್ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರೊಂದಿಗೆ ವಿಶ್ವಕಪ್​​ನಲ್ಲಿ ದಾಖಲೆಯೊಂದನ್ನು ನಿರ್ಮಿಸಿದರು.

    ಲಂಕಾ (Sri Lanka) ವಿರುದ್ಧ ಕೇವಲ 5 ಓವರ್‌ ಬೌಲಿಂಗ್‌ ಮಾಡಿದ ಶಮಿ, 18 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಕಿತ್ತರು. ಇದರೊಂದಿಗೆ ಟೀಂ ಇಂಡಿಯಾ ಪರ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್​ ಕಿತ್ತ ಮೊದಲ ಬೌಲರ್​ ಎಂಬ ಖ್ಯಾತಿ ಗಳಿಸಿದ್ರು. ಪ್ರಸ್ತುತ ಟೂರ್ನಿಯಲ್ಲಿ ತಾನು ಆಡಿದ ಮೂರೇ ಪಂದ್ಯಗಳಲ್ಲಿ 14 ವಿಕೆಟ್ ಪಡೆದ ಶಮಿ, ಆ ಮೂಲಕ ವಿಶ್ವಕಪ್​​ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಅತಿಹೆಚ್ಚು ವಿಕೆಟ್​ ಪಡೆದ ಜಹೀರ್​ ಖಾನ್ ಮತ್ತು ಜಾವಗಲ್ ಶ್ರೀನಾಥ್ (Zaheer Khan And Javagal Srinath) ಅವರ 44 ವಿಕೆಟ್​ಗಳ ಜಂಟಿ ದಾಖಲೆಯನ್ನ ನುಚ್ಚು ನೂರು ಮಾಡಿದ್ರು. ಇದನ್ನೂ ಓದಿ: World Cup 2023: ಗಿಲ್‌ ಕೈ ತಪ್ಪಿದ ಶತಕ – ಸಾರಾಗೆ ಬೇಸರ 

    ಸದ್ಯ 14 ವಿಶ್ವಕಪ್​ ಪಂದ್ಯಗಳನ್ನಾಡಿರುವ ಶಮಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಒಟ್ಟು 45 ವಿಕೆಟ್‌ ಪಡೆದು ನಂ.1 ಸ್ಥಾನದಲ್ಲಿದ್ದರೆ, 44 ವಿಕೆಟ್​ ಪಡೆದ ಜಹೀರ್ ಖಾನ್, ಜಾವಗಲ್ ಶ್ರೀನಾಥ್ ಕ್ರಮವಾಗಿ 2-3ನೇ ಸ್ಥಾನದಲ್ಲಿದ್ದಾರೆ. 33 ವಿಕೆಟ್​ ಜಸ್ಪ್ರೀತ್ ಬುಮ್ರಾ 4ನೇ ಸ್ಥಾನ ಮತ್ತು 31 ವಿಕೆಟ್​ ಪಡೆದಿರುವ ಅನಿಲ್ ಕುಂಬ್ಳೆ 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 48 ವರ್ಷಗಳಲ್ಲೇ ಮೊದಲು! ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

    ಇದೇ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್, ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಉಡೀಸ್‌ ಮಾಡಿದ್ದ ಶಮಿ ಶ್ರೀಲಂಕಾ ವಿರುದ್ಧವೂ ಪ್ರಮುಖ 5 ವಿಕೆಟ್‌ಗಳನ್ನ ಪಡೆಯುವ ಮೂಲಕ ಲಂಕಾ ದಹನಕ್ಕೆ ಕಾರಣವಾದರು. ಇದರೊಂದಿಗೆ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 45 ವಿಕೆಟ್​​ ಪಡೆದ ಸಾಧನೆ ಮಾಡಿದರು. ಜೊತೆಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಸತತ 2 ಬಾರಿ 4ಕ್ಕೂ ಹೆಚ್ಚು ವಿಕೆಟ್‌ ಪಡೆದ ವಿಶ್ವದ 2ನೇ ಬೌಲರ್ ಎಂಬ ವಿಶೇಷ ಸಾಧನೆಗೂ ಪಾತ್ರರಾದರು. ಇದನ್ನೂ ಓದಿ: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023: ಕ್ರಿಕೆಟ್‌ನಲ್ಲಿ ಚಿನ್ನ – ಇತಿಹಾಸ ನಿರ್ಮಿಸಿದ ಭಾರತದ ಮಹಿಳೆಯರು

    Asian Games 2023: ಕ್ರಿಕೆಟ್‌ನಲ್ಲಿ ಚಿನ್ನ – ಇತಿಹಾಸ ನಿರ್ಮಿಸಿದ ಭಾರತದ ಮಹಿಳೆಯರು

    ಹ್ಯಾಂಗ್‌ಝೌ: ಇದೇ ಮೊದಲ ಬಾರಿಗೆ ಏಷ್ಯನ್‌ ಗೇಮ್ಸ್‌ನಲ್ಲಿ (Asian Games 2023) ಪಾಲ್ಗೊಂಡಿರುವ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ (Indian Women’s Team) ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. 2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಶ್ರೀಲಂಕಾ ತಂಡ ಈ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

    ಝೆಜಿಯಾಂಗ್ ಟೆಕ್‌ ವಿವಿ ಕ್ರೀಡಾಂಗಣದಲ್ಲಿಂದು ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಭಾರತೀಯ ಮಹಿಳಾ ತಂಡ 20 ಓವರ್‌ಗಳಲ್ಲಿ 116 ರನ್‌ ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಶ್ರೀಲಂಕಾ (SriLanka) ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 97 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಇದರಿಂದ ಭಾರತ 19 ರನ್‌ಗಳ ಜಯ ಸಾಧಿಸಿ ಚಿನ್ನದ ಪದಕ್ಕೆ ಕೊರಳೊಡ್ಡಿತು. ಇದನ್ನೂ ಓದಿ: Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

    2010ರ ಏಷ್ಯನ್‌ ಗೇಮ್ಸ್‌ ಟೂರ್ನಿಯಲ್ಲಿ ಪಾಕಿಸ್ತಾನ ಚಿನ್ನ ಗೆದ್ದರೆ, ಬಾಂಗ್ಲಾದೇಶ ಬೆಳ್ಳಿ ಹಾಗೂ ಜಪಾನ್‌ ಕಂಚಿನ ಪದಕ ಗೆದ್ದುಕೊಂಡಿತ್ತು. 2014ರಲ್ಲಿ ಪಾಕಿಸ್ತಾನ ಸತತ 2ನೇ ಬಾರಿ ಚಿನ್ನ ಗೆದ್ದರೆ, ಬಾಂಗ್ಲಾದೇಶ ತಂಡ ಬೆಳ್ಳಿ ಹಾಗೂ ಶ್ರೀಲಂಕಾ ತಂಡ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆದ್ರೆ ಇದೇ ಮೊದಲ ಬಾರಿಗೆ ಏಷ್ಯನ್‌ ಗೇಮ್ಸ್‌ಗೆ ತೆರಳಿದ ಭಾರತ ತಂಡ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿತು.

    ಚೇಸಿಂಗ್‌ ಆರಂಭಿಸಿದ ಲಂಕಾ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಹಾಸಿನಿ ಪೆರೆರಾ, ನೀಲಾಕ್ಷಿ ಡಿ ಸಿಲ್ವಾ ಹಾಗೂ ಓಷದಿ ರಣಸಿಂಗ್ ಅವರಿಂದ ಸಣ್ಣ ಪ್ರಮಾಣದ ಜೊತೆಯಾಟ ಬಂದರೂ ತಂಡ ನಿಗದಿತ ರನ್‌ ಕಲೆಹಾಕುವಲ್ಲಿ ವಿಫಲವಾಯಿತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿ ಮಂಡಿಯೂರಿತು.

    ಟೀಂ ಇಂಡಿಯಾ ಪರ ಟಿಟಾಸ್‌ ಸಾಧು 4 ಓವರ್‌ನಲ್ಲಿ 3 ವಿಕೆಟ್‌ ಕಿತ್ತರೆ, ರಾಜೇಶ್ವರಿ ಗಾಯಕ್ವಾಡ್‌ 2 ವಿಕೆಟ್‌ ಹಾಗೂ ದೀಪ್ತಿ ಶರ್ಮಾ, ಪೂಜಾ ವಸ್ತ್ರಕಾರ್‌, ದೇವಿಕಾ ವೈದ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: Asian Games Women’s Cricket: ಬಾಂಗ್ಲಾ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ

    ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕಾರ ಶಫಾಲಿ ವರ್ಮಾ 9 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದರು. 2ನೇ ವಿಕೆಟ್‌ಗೆ ಜೊತೆಯಾದ ಸ್ಮೃತಿ ಮಂಧಾನ (Smriti Mandhana) ಹಾಗೂ ಜೆಮಿಮಾ ರೊಡ್ರಿಗಸ್‌ 67 ಎಸೆತಗಳಲ್ಲಿ 73 ರನ್‌ಗಳ ಜೊತೆಯಾಟ ನೀಡುವ ಮೂಲಕ ಚೇತರಿಕೆ ನೀಡಿದರು. ಇದರಿಂದ 100 ರನ್‌ಗಳ ಗಡಿ ದಾಟುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಆದರೆ ರಿಚಾ ಘೋಷ್ 9, ನಾಯಕಿ ಹರ್ಮನ್ ಪ್ರೀತ್ ಕೌರ್ (Harmanpreet Kaur) 2 ರನ್‌, ಪೂಜಾ ವಸ್ತ್ರಾಕರ್ 2 ರನ್ ಗಳನ್ನು ಮಾತ್ರಗಳಿಸಿ ನಿರಾಸೆ ಮೂಡಿಸಿದರು.

    ಶ್ರೀಲಂಕಾ ಪರ ಉದೇಶಿಕ ಪ್ರಬೋಧನಿ, ಸೌಗಂದಿಕಾ ಕುಮಾರಿ ಮತ್ತು ಇನೋಕಾ ರಣವೀರಾ ತಲಾ 2 ವಿಕೆಟ್ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    ಕೊಲಂಬೊ: ಇಲ್ಲಿನ ಆರ್‌ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯವು ಬೌಲರ್‌ಗಳ ಆಟಕ್ಕೆ ಸೀಮಿತವಾಗಿತ್ತು. ಇತ್ತಂಡಗಳಿಂದಲೂ ಸ್ಪಿನ್‌ ಬೌಲರ್‌ಗಳ ಕೈಚಳಕ ಜೋರಾಗಿತ್ತು. ಆದ್ರೆ ಚೇಸಿಂಗ್‌ನಲ್ಲಿ ಲಂಕಾ ವಿರುದ್ಧ ಬಿಗಿ ಹಿಡಿತ ಸಾಧಿಸಿದ ರೋಹಿತ್‌ ಪಡೆ 41 ರನ್‌ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

    ರೋಹಿತ್‌ ಶರ್ಮಾ ಅರ್ಧಶತಕ ಬ್ಯಾಟಿಂಗ್‌ ನೆರವು ಹಾಗೂ ಕುಲ್ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಭಾರತ, ಶ್ರೀಲಂಕಾ ವಿರುದ್ಧ 41 ರನ್‌ಗಳ ಜಯ ಸಾಧಿಸಿದ್ದು, ಫೈನಲ್‌ ಕನಸು ಜೀವಂತವಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 49.1 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಯಿತು. 214 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಟೀಂ ಇಂಡಿಯಾ ಸ್ಪಿನರ್‌ಗಳ ದಾಳಿಗೆ ನಲುಗಿತು. 41.3 ಓವರ್‌ಗಳಲ್ಲಿ 172 ರನ್‌ಗಳಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಲಂಕಾ ತಂಡ ಟೀಂ ಇಂಡಿಯಾ ಸ್ಪಿನ್‌ ಬೌಲಿಂಗ್‌ ದಾಳಿಗೆ ನಲುಗಿಹೋಗಿತ್ತು. 7 ಓವರ್‌ಗಳಲ್ಲಿ 26 ರನ್‌ಗಳಿಸಿ ಪ್ರಮುಖ 3 ವಿಕೆಟ್‌ಗಳನ್ನ ಕಳೆದುಕೊಂಡಿತ್ತು. 26 ಓವರ್‌ಗಳಲ್ಲಿ 104 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಪಾತುಮ್ ನಿಸ್ಸಾಂಕ 6 ರನ್‌, ದಿಮುತ್ ಕರುಣಾರತ್ನೆ 2 ರನ್‌, ಕುಸಲ್ ಮೆಂಡಿಸ್ 15 ರನ್‌, ಸದೀರ ಸಮರವಿಕ್ರಮ 17 ರನ್‌, ಚರಿತ್ ಅಸಲಂಕಾ 22 ರನ್‌ ಹಾಗೂ ದಸುನ್‌ ಶನಾಕ 9 ರನ್‌ಗಳಿಸಿ ವಿಕೆಟ್‌ ಕೈಚೆಲ್ಲಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಧನಂಜಯ ಡಿ ಸಿಲ್ವಾ ಹಾಗೂ ದುನಿತ್ ವೆಲ್ಲಲಾಗೆ ತಂಡಕ್ಕೆ ನೆರವಾದರು.

    ಧನಂಜಯ ಹಾಗೂ ದುನಿತ್‌ ಜೋಡಿ 7ನೇ ವಿಕೆಟ್‌ಗೆ 75 ಎಸೆತಗಳಲ್ಲಿ 63 ರನ್‌ಗಳ ಜೊತೆಯಾಟ ನೀಡಿತ್ತು. ಕೊನೆಯ ಹಂತ ತಲುಪುತ್ತಿದ್ದಂತೆ ಸ್ಪೋಟಕ ಆಟಕ್ಕೆ ಪ್ರಯತ್ನಿಸಿತ್ತು. ಅಷ್ಟರಲ್ಲೇ ಜಡೇಜಾ ಧನಂಜಯ್‌ ಸೆಲ್ವಾ ಆಟಕ್ಕೆ ಬ್ರೇಕ್‌ ಹಾಕಿದರು. ಸಿಲ್ವಾ 66 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 41 ರನ್‌ ಗಳಿಸಿ ಔಟಾಗುತ್ತಿದ್ದಂತೆ ಮಹೀಶ್‌ ತೀಕ್ಷಣ, ಕಸುನ್‌ ರಜಿತ ಹಾಗೂ ಮಹೇಶ್‌ ಪಥಿರಣ ವಿಕೆಟ್‌ ಒಪ್ಪಿಸಿದ್ರು. ಕೊನೆಯವರೆಗೂ ಹೋರಾಟ ನಡೆಸಿದ ದುನಿತ್‌ 46 ಎಸೆತಗಳಲ್ಲಿ 42 ರನ್‌ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಶ್ರೀಲಂಕಾ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ಸರ್ವಪತನ ಕಂಡಿತು.

    ಟೀಂ ಇಂಡಿಯಾ ವಿರುದ್ಧ ಕುಲ್ದೀಪ್‌ ನಾಲ್ಕು ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಜೋಡಿ 15.1 ಓವರ್‌ಗಳಲ್ಲಿ 91 ರನ್‌ಗಳ ಜೊತೆಯಾಟ ನೀಡಿತು. ಶುಭಮನ್‌ ಗಿಲ್‌ 19‌ ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಪಾಕ್‌ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ್ದ ಕೊಹ್ಲಿ ಕೇವಲ 3 ರನ್‌ಗಳಿಗೆ ಔಟಾದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್‌ ಕಿಶನ್‌ 61 ಎಸೆತಗಳಲ್ಲಿ 33 ರನ್ ಹಾಗೂ ಕೆ.ಎಲ್‌ ರಾಹುಲ್‌ 44 ಎಸೆತಗಳಲ್ಲಿ 39 ರನ್‌ ಬಾರಿಸುವ ಮೂಲಕ ಛೇರಿಕೆ ನೀಡಿದ್ದರು. ಇವರಿಬ್ಬರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಒಂದೊಂದೇ ವಿಕೆಟ್‌ ಕಳೆದುಕೊಂಡಿತು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 26 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಮೊದಲ 15 ಓವರ್‌ಗಳಲ್ಲಿ 91 ರನ್‌ ಗಳಿಸಿದ್ದ ಭಾರತ 25 ಓವರ್‌ಗಳಲ್ಲಿ 128 ರನ್‌ ಗಳಿಸಿತ್ತು. ಬಳಿಕ ನಿಧಾನ ಗತಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ 43 ಓವರ್‌ಗಳಲ್ಲಿ 186 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿತ್ತು. ಇದರಿಂದ 200 ರನ್‌ ಗಳಿಸುವುದೂ ಕಷ್ಟವಾಗಿತ್ತು. ಈ ವೇಳೆ ಅಕ್ಷರ್‌ ಪಟೇಲ್‌ ಜವಾಬ್ದಾರಿಯುತ ಆಟದಿಂದ 200ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಶ್ರೀಲಂಕಾ ಪರ ದುನಿತ್ ವೆಲ್ಲಲಾಗೆ 10 ಓವರ್‌ಗಳಲ್ಲಿ 40 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಕಿತ್ತರೆ, ಚರಿತ್‌ ಹಸಲಂಕಾ 9 ಓವರ್‌ಗಳಲ್ಲಿ ಕೇವಲ 18 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಉರುಳಿಸಿದರು. ಮಹೀಶ್‌ ತೀಕ್ಷಣ ಒಂದು ವಿಕೆಟ್‌ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]