Tag: Indecent Behavior

  • ಯುವತಿಯ ಹಿಂಬದಿ ಟಚ್‌ ಮಾಡಿ ಅಸಭ್ಯ ವರ್ತನೆ ತೋರಿದ್ದ ಎಂಬಿಎ ಪದವೀಧರ ಅರೆಸ್ಟ್‌

    ಯುವತಿಯ ಹಿಂಬದಿ ಟಚ್‌ ಮಾಡಿ ಅಸಭ್ಯ ವರ್ತನೆ ತೋರಿದ್ದ ಎಂಬಿಎ ಪದವೀಧರ ಅರೆಸ್ಟ್‌

    ಬೆಂಗಳೂರು: ನಗರದ ಮಾರತ್ತಹಳ್ಳಿಯಲ್ಲಿ ಯುವತಿಯ (Young Woman) ಜೊತೆಗೆ ಅಸಭ್ಯ ವರ್ತನೆ ತೋರಿದ್ದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ.

    ಇಲ್ಲಿನ ದೇವರ ಬಿಸನಹಳ್ಳಿ ವಾಸಿಯಾಗಿರೋ ಶ್ರೀಕಾಂತ್ ಬಂಧಿತ ಬೀದಿ ಕಾಮಣ್ಣ. ಕಳೆದ ಏ.30ರಂದು ರಾತ್ರಿ 11:30 ಗಂಟೆ ಸುಮಾರಿಗೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆಲಸ ಮುಗಿಸಿ ಇಕೋ ಸ್ಪೇಸ್‌ನ ಮುಖ್ಯದ್ವಾರದ ಬಳಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿ, ಯುವತಿಯ ಹಿಂಬದಿ ಡಚ್ ಮಾಡಿ ನಂತರ ಅಸಭ್ಯವಾಗಿ ವರ್ತಿಸಿ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಬಾಲಾಕೋಟ್‌ ದಾಳಿಯ ನಂತರ ಶಕ್ತಿಶಾಲಿಯಾದ ಭಾರತ! – ಬತ್ತಳಿಕೆಗೆ ಏನೇನು ಸೇರಿದೆ?

    ಈ ವೇಳೆ ಯುವತಿ ಜೋರಾಗಿ ಕೂಗಿಕೊಂಡು ಸಹಾಯಕ್ಕಾಗಿ ಕರೆದಿದ್ದರು. ಆದ್ರೂ ಕೂಡ ಯುವತಿಯ ಸಹಾಯಕ್ಕೆ ಯಾರೋಬ್ಬರೂ ಬಂದಿರಲಿಲ್ಲ ಅಂತ ಆಕೆ ಅಸಮಾಧಾನ ವ್ಯಕ್ತಪಡಿಸಿದ್ಲು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮಾರತ್ತಹಳ್ಳಿ ಪೊಲೀಸರು, ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲಿಸಿ, ಅಲ್ಲಿದ್ದ ಸೆಕ್ಯೂರಿಟಿಗಳಿಂದ ಮಾಹಿತಿ ಕಲೆಹಾಕಿದ್ದರು.

    ತನಿಖೆ ಮುಂದುವರೆಸಿ ಆರೋಪಿ ಶ್ರೀಕಾಂತ್‌ನನ್ನ ಬಂಧಿಸಿದ್ದಾರೆ. ಆರೋಪಿ ಕೂಡ ಎಂಬಿಎ ಪದವೀಧರನಾಗಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅನ್ನೋದು ಗೊತ್ತಾಗಿದೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 700 ಅಡಿ ಆಳದ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ಮೂವರು ಯೋಧರು ಸಾವು 

  • ಮಹಿಳಾ ಭಕ್ತರಿಗೆ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕರಿಂದ ಲೈಂಗಿಕ ಕಿರುಕುಳ?

    ಮಹಿಳಾ ಭಕ್ತರಿಗೆ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕರಿಂದ ಲೈಂಗಿಕ ಕಿರುಕುಳ?

    ಕೊಪ್ಪಳ: ವಿಶ್ವ ಪ್ರಸಿದ್ಧ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

    ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಾಬಾರನ್ನು ಈಗ ಅರ್ಚಕ ಸ್ಥಾನದಿಂದ ಕೆಳಗಿಳಿಸಲು ಟ್ರಸ್ಟ್ ನಿರ್ಣಯ ಕೈಗೊಂಡಿದೆ.

    ಕೊಪ್ಪಳದ ಗಂಗಾವತಿ ಅಂಜನಾದ್ರಿ ಪರ್ವತಕ್ಕೆ ಇತ್ತೀಚೆಗೆ ದೇಶ ವಿದೇಶದಿಂದ ಅಸಂಖ್ಯಾತ ಭಕ್ತರು ಆಗಮಿಸುತ್ತಿದ್ದು, ದೇವಾಲಯಕ್ಕೆ ಆಗಮಿಸುವ ಮಹಿಳಾ ಭಕ್ತರ ಜೊತೆ ವಿದ್ಯಾದಾಸ ಬಾಬಾ ಅಸಭ್ಯವಾಗಿ ವರ್ತಿಸ್ತಿದ್ದಾರೆ. ಜೊತೆಗೆ ಅನೈತಿಕ ಚಟುವಟಿಕೆ ಗಳಿಗೆ ಅರ್ಚಕರು ಪ್ರೋತ್ಸಾಹ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೇ ದೇವಾಲಯದ ಸುತ್ತಮುತ್ತಲಿನ ಭಕ್ತರೊಂದಿಗೂ ಅಸಭ್ಯ ವರ್ತಿಸುತ್ತಿದ್ದು, ವಿನಾಕಾರಣ ಜಗಳವಾಡುತ್ತಾರೆ ಎಂದು ಆರೋಪಿಸಲಾಗಿದೆ.

    ಭಕ್ತರಿಂದ ದೇವಾಲಯಕ್ಕೆ ಇಲ್ಲಿಯವರೆಗೆ ಲಕ್ಷಾಂತರ ರೂ. ಹಣ ದೇಣಿಗೆಯಾಗಿ ಬಂದಿದೆ. ಆದರೆ ವಿದ್ಯಾದಾಸ ಬಾಬಾ ಲೆಕ್ಕ ನೀಡುತ್ತಿಲ್ಲ. ಇದರಿಂದ ಅಂಜನಾದ್ರಿ ಪರ್ವತ ಚಾರಿಟೇಬಲ್ ರಿಲಿಜಿಯಿಸ್ ಟ್ರಸ್ಟ್ ಸದಸ್ಯರು ಸಭೆ ಸೇರಿ ಅರ್ಚಕರ ನಡೆಯನ್ನು ಖಂಡಿಸಿದ್ದಾರೆ. ಇದೀಗ ವಿದ್ಯಾದಾಸ ಬಾಬಾರನ್ನು ಅರ್ಚಕ ಹುದ್ದೆಯಿಂದ ಕೆಳಗಿಳಿಸಿ ಬ್ರಾಹ್ಮಣ ಪಂಡಿತರೊಬ್ಬರನ್ನು ಅರ್ಚಕರನ್ನಾಗಿ ನೇಮಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.

    ವಿದ್ಯಾದಾಸ ಬಾಬಾ 2009 ರಲ್ಲಿ ಪ್ರಧಾನ ಅರ್ಚಕರಾಗಿ ನೇಮಕಗೊಂಡಿದ್ದರು. ಈಗಾಗಲೇ ದೇವಾಲಯದ ಪೂಜಾ ವಿಷಯವಾಗಿ ತುಳಸಿದಾಸಬಾಬಾ, ವಿದ್ಯಾದಾಸಬಾಬಾ ನಡುವೆ ಕಲಹ ಏರ್ಪಟಿದ್ದು, ಈ ಕುರಿತು ಕೋರ್ಟ್‍ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಪ್ರಸ್ತುತ ವಿದ್ಯಾದಾಸಬಾಬಾರನ್ನು ಪ್ರಧಾನ ಅರ್ಚಕ ಹುದ್ದೆಯಿಂದ ಕೆಳಗಿಳಿಸಿದ್ದರಿಂದ ಪೂಜಾ ವಿವಾದ ಪ್ರಕರಣ ತಾರ್ಕಿಕ ಅಂತ್ಯ ಕಂಡಂತಾಗಿದೆ.

     

    https://www.youtube.com/watch?v=6ddrM4Fje_M