Tag: Indefinite Strike

  • ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ನವದೆಹಲಿ: ರಾಜ್ಯದಲ್ಲಿ ಚುನಾವಣೆ ಘೋಷಣೆಗೆ ದಿನಗಣನೆ ಶುರುವಾಗಿದೆ. ಈ ಹೊತ್ತಲ್ಲೇ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು (Government Employees) ಸಮರ ಸಾರಿದ್ದಾರೆ. 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಮುಷ್ಕರಕ್ಕೆ (Indefinite Strike) ಮುಂದಾಗಿದ್ದಾರೆ.

    ಈ ಸಂಬಂಧ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಘದ ನಿಯೋಗದ ಜೊತೆ ಸಭೆ ನಡೆಸಿ, ಸಂಧಾನಕ್ಕೆ ಯತ್ನಿಸಿದರು. ಬೇಡಿಕೆ ಈಡೇರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಸರ್ಕಾರಿ ನೌಕರರು ಒಪ್ಪದ ಕಾರಣ ಸಂಧಾನ ಸಭೆ ವಿಫಲವಾಗಿದೆ.

    ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಸರ್ಕಾರಿ ಸಂಘದ ನೌಕರರಲ್ಲಿ ಯಾವುದೇ ಒಡಕಿಲ್ಲ. ಎಲ್ಲ ಸರ್ಕಾರಿ ನೌಕರರು ಒಗ್ಗಟ್ಟಾಗಿದ್ದೇವೆ ಎಂದರು. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗುತ್ತೇವೆ ಎಂದು 40 ಸಂಘಟನೆಗಳ 10 ಲಕ್ಷ ನೌಕರರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

    ಪರಿಸ್ಥಿತಿ ವಿಷಮ ಆಗದಂತೆ ತಡೆಯಲು ಮಂಗಳವಾರ ರಾತ್ರಿ 9:30ಕ್ಕೆ ಸಿಎಂ ಬೊಮ್ಮಾಯಿ (CM Basavaraj Bommai) ತುರ್ತುಸಭೆ ಕರೆದಿದ್ದಾರೆ. ಒಂದೊಮ್ಮೆ ಸಂಧಾನ ವಿಫಲವಾದರೆ ಬುಧವಾರದಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಬಂದ್ ಆಗಲಿವೆ.

    ಯಾವ ಕಚೇರಿಗಳು ಬಂದ್?
    ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು, ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯತ್‌, ಸರ್ಕಾರಿ ಶಾಲೆಗಳು, ಪುರಸಭೆ, ಸರ್ಕಾರಿ ಹಾಸ್ಟೆಲ್ ಗಳು, ಕಂದಾಯ ಇಲಾಖೆ, ಸರ್ಕಾರಿ ಕಾಲೇಜುಗಳು ಬಂದ್‌ ಆಗಲಿವೆ.

    ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಸೇವೆಯಷ್ಟೇ ಲಭ್ಯವಿದ್ದು, ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆಯಿದೆ. ಮುಷ್ಕರಕ್ಕೆ ಜಲಮಂಡಳಿ, ಬೆಸ್ಕಾಂ ನೌಕರರ ಸಂಘ ನೈತಿಕ ಬೆಂಬಲ ನೀಡಿವೆ.

  • ಮಾ. 1ರಿಂದ ಸರ್ಕಾರಿ ನೌಕರರ ಮುಷ್ಕರ

    ಮಾ. 1ರಿಂದ ಸರ್ಕಾರಿ ನೌಕರರ ಮುಷ್ಕರ

    ಬೆಂಗಳೂರು: ಮಾ. 1ರಿಂದ ಸರ್ಕಾರಿ ನೌಕರರು (Government Employees) ಮುಷ್ಕರ (Indefinite Strike) ಆರಂಭಿಸುವುದಾಗಿ ಸರ್ಕಾರಕ್ಕೆ ಎಚ್ಚರ ನೀಡಿದ್ದಾರೆ.

    ಸಿಎಂ ಬೊಮ್ಮಾಯಿ (CM Basavaraj Bommai) ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ (7th Pay Commission) ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರ್ಕಾರಿ ನೌಕರರು ನಂಬುವ ಸ್ಥಿತಿಯಲ್ಲಿ ಇಲ್ಲ. ಅಧಿಕೃತ ಆದೇಶಕ್ಕೆ ಪಟ್ಟು ಹಿಡಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘ ನಿಗದಿಯಂತೆ ಮಾರ್ಚ್ ಒಂದರಿಂದ ಮುಷ್ಕರ ಆರಂಭಿಸಲು ಮುಂದಾಗಿದೆ.

    ಇಂದು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ನಿಗಮ,ಪ್ರಾಧಿಕಾರ ಸೇರಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲು ಸೂಚನೆ ಕೊಟ್ಟಿದ್ದೇವೆ. ಈಗಾಗಲೇ ಒಂಭತ್ತು ತಿಂಗಳು ತಡವಾಗಿದೆ. ನಮ್ಮ ಬೇಡಿಕೆ ಈಡೇರಲೇ ಬೇಕು.. ಅಲ್ಲಿಯವರೆಗೂ ವಿರಮಿಸಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸ್ಪಷ್ಟಪಡಿಸಿದೆ.

    ರಾಜ್ಯ ಸರ್ಕಾರಿ ನೌಕರರ ಸಂಘ ಹೇಳಿದಂತೆಯೇ ಮಾಡಿದರೆ ತುರ್ತು ಸೇವೆಗಳು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಲಿವೆ. ರಾಜ್ಯದ ಜನ ನಾನಾ ಸಮಸ್ಯೆ ಅನುಭವಿಸಬೇಕಾಗುತ್ತದೆ. ಈಗ ಸರ್ಕಾರದ ಬಳಿ ಒಂದೇ ದಿನದ ಸಮಯ ಉಳಿದಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅವಮಾನ, ಖರ್ಗೆಗೆ ಛತ್ರಿಯೇ ಸಿಗಲಿಲ್ಲ: ಮೋದಿ

    ಯಾವ ಯಾವ ಇಲಾಖೆ ಬಂದ್?
    * ವಿಧಾನಸೌಧದ ಎಲ್ಲಾ ಕಚೇರಿ
    * ಸಚಿವಾಲಯದ ಎಲ್ಲಾ ಕಚೇರಿ
    * ಬಿಬಿಎಂಪಿ/ಪುರಸಭೆ/ನಗರಸಭೆ
    * ಡಿಸಿ ಕಚೇರಿ/ತಾಲೂಕು ಕಚೇರಿ
    * ಗ್ರಾಮ ಪಂಚಾಯಿತಿ
    * ಸರ್ಕಾರಿ ಶಾಲೆ-ಕಾಲೇಜು, ಹಾಸ್ಟೆಲ್
    * ಕಂದಾಯ ಇಲಾಖೆ
    * ಜಲಮಂಡಳಿ