Tag: Independent candidates

  • ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಕೆ

    ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಕೆ

    ಧಾರವಾಡ: ಧಾರವಾಡ ಗ್ರಾಮೀಣ (Dharawada Rural) ಕ್ಷೇತ್ರದ ಹಾಲಿ ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

    ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಇಂದು ನಾಲ್ಕು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಎರಡು ನಾಮಪತ್ರ ಪಕ್ಷೇತರವಾಗಿ ನೀಡಿರೋದು ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದನ್ನೂ ಓದಿ: ಯಾರು ತೆರೆಯುತ್ತಾರೆ ಬೆಂಗಳೂರಿನ ಹೆಬ್ಬಾಗಿಲು?

    ಕಳೆದ 2018 ರ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಮೃತ ದೇಸಾಯಿ (Amruta Desai) ಅವರೊಂದಿಗೆ ನಿಂತು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಸವರಾಜ ಕೊರವರ ಹಾಗೂ ತವನಪ್ಪ ಅಷ್ಟಗಿ ಇಂದು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

    ಗಮನಾರ್ಹ ವಿಷಯ ಏನಂದ್ರೆ, ಬಸವರಾಜ ಕೊರವರ ಹಾಗೂ ತವನಪ್ಪ ಅಷ್ಟಗಿ ಇಬ್ಬರೂ ಸಹ ಒಂದೇ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿ, ಬೇರೆ ಬೇರೆಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿಗೆ ಹಿನ್ನಡೆಯಾಗುತ್ತಾ ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದನ್ನೂ ಓದಿ: ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಕೋರ್ಟ್ ಅಸ್ತು

  • ಚಾಮುಂಡೇಶ್ವರಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೋಲಿಸಲು ಒಂದಾದ ಪಕ್ಷೇತರರು

    ಚಾಮುಂಡೇಶ್ವರಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೋಲಿಸಲು ಒಂದಾದ ಪಕ್ಷೇತರರು

    ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಪಕ್ಷೇತರ ಅಭ್ಯರ್ಥಿಗಳು ಒಂದಾಗಿ ಮೂರು ಪಕ್ಷಗಳ ವಿರುದ್ಧ ಸಮರ ಸಾರಿದ್ದಾರೆ.

    ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ವಿರುದ್ಧ ಗೆಲುವು ಸಾಧಿಸಲು ಪಕ್ಷೇತರ ಅಭ್ಯರ್ಥಿಗಳು ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಿ ಒಟ್ಟಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.

    12 ಜನ ಪಕ್ಷೇತರ ಅಭ್ಯರ್ಥಿಗಳಲ್ಲಿ ಯಾರಿಗಾದರೂ ಮತ ಹಾಕಿ. ಆದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಜನರಲ್ಲಿ ಮನವಿ ಮಾಡುವ ತೀರ್ಮಾನ ಮಾಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಹಾಲಿ ಶಾಸಕ ಜಿ ಟಿ ದೇವೇಗೌಡ ಅವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಇದ್ದರೂ ಸಿದ್ದರಾಮಯ್ಯ ಅವರನ್ನು ಮಣಿಸಲು ಜೆಡಿಎಸ್ ಜೊತೆ ಕೈಜೋಡಿಸಿದೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದೆ.

    ಗುರುಮಲ್ಲೇಶ್ (ಆಲ್ ಇಂಡಿಯಾ ಮಹಿಳಾ ಎಂಪ್‍ಪವರ್‍ಮೆಂಟ್ ಪಾರ್ಟಿ), ಎಂ.ಎಸ್.ಪ್ರವೀಣ್ (ಭಾರತೀಯ ಜನಶಕ್ತಿ ಕಾಂಗ್ರೆಸ್), ಎಂ.ಮಾದೇಶ (ಸಾಮಾನ್ಯ ಜನತಾ ಪಾರ್ಟಿ-ಲೋಕತಾಂತ್ರಿಕ್), ಪಿ.ಕರಿಗೌಡ, ಕೆ.ಸಿ.ನಂದೀಶ, ಪಿ.ಪುರುಷೋತ್ತಮ, ಆರ್.ಬಿ.ಬಸವೇಗೌಡ, ಎಂ.ಎಂ.ಮಹೇಶಗೌಡ, ಎಂ.ಮಂಜು, ಎಂ.ಎಸ್.ರಾಚಣ್ಣ, ಶಾಂತರಾಜು, ಪಿ.ಸುರೇಶನಾಯಕ (ಪಕ್ಷೇತರರು) ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.