Tag: india

  • ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ನವದೆಹಲಿ: ಏರ್‌ ಇಂಡಿಯಾ (Air India) ಸಂಸ್ಥೆ 4,000 ಕೋಟಿಗೂ ಅಧಿಕ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ (Campbell Wilson) ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಹಲ್ಗಾಮ್‌ ಭಯೋತ್ಪಾದಕ ದಾಳಿ (Pahalgam Attack) ಬಳಿಕ ಎರಡೂ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದರಿಂದ ಭಾರತ ಮತ್ತು ಪಾಕಿಸ್ತಾನ ಪರಸ್ಪರ ತಮ್ಮ ವಾಯುಪ್ರದೇಶವನ್ನು ಮುಚ್ಚಿದವು. ಇದು ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಿತು. ಏರ್‌ ಇಂಡಿಯಾ ಒಂದೇ ಸಂಸ್ಥೆ ಸುಮಾರು 4,000 ಕೋಟಿ ರೂ.ಗೂ ಹೆಚ್ಚು ನಷ್ಟ ಅನುಭವಿಸಿತು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಸಂಘರ್ಷದ ಬಳಿಕ ಪಾಕಿಸ್ತಾನ ತನ್ನ ವಾಯುಸೀಮೆಯನ್ನು (Pakistans Airspace) ನಿರಂತರವಾಗಿ ಮುಚ್ಚಿತು. ಇದರಿಂದ ಏರ್‌ ಇಂಡಿಯಾ ಸಂಸ್ಥೆ ನಿರಂತರ ನಷ್ಟ ಅನುಭವಿಸಿತು. ಏಕೆಂದ್ರೆ ಪಹಲ್ಗಾಮ್‌ ದಾಳಿ ಬಳಿಕ ಏರ್‌ ಇಂಡಿಯಾ ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನ ಬದಲಾಯಿಸಬೇಕಾಯಿತು. ಇದರಿಂದ ಕಾರ್ಯಾಚರಣೆಯ ವೆಚ್ಚ ಹೆಚ್ಚಾಯಿತು. ಇದೆಲ್ಲ ಕಾರಣಗಳಿಂದ ವಿಮಾನಯಾನ ಸಂಸ್ಥೆ ನಷ್ಟ ಅನುಭವಿಸಬೇಕಾಯ್ತು ಎಂದ ತಿಳಿಸಿದ್ರು. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಈ ಅವಧಿಯಲ್ಲಿ ಯುರೋಪ್‌ ಮತ್ತು ಯುನೈಟೆಡ್‌ ಸ್ಟೇಸ್ಟ್‌ಗೆ ಹೋಗುವ ಮಾರ್ಗಗಳು ಹೆಚ್ಚು ಪರಿಣಾಮ ಬೀರಿತು. ಈ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದರಿಂದ 60 ರಿಂದ 90 ನಿಮಿಷಗಳ ಪ್ರಯಾಣ ಸಮಯ ಹೆಚ್ಚಾಯಿತು. ಜೊತೆಗೆ ಸಿಬ್ಬಂದಿ ಖರ್ಚು ಹೆಚ್ಚಾಯ್ತು ಎಂದು ವಿವರಿಸಿದ್ರು. ಇದನ್ನೂ ಓದಿ:  ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ಪಹಲ್ಗಾಮ್‌ನಲ್ಲಿ ಹರಿಯಿತು ನೆತ್ತರು
    ಏಪ್ರಿಲ್ 22ರಂದು ಶ್ರೀನಗರದ ಪಹಲ್ಗಾಮ್‌ನಲ್ಲಿರುವ ಬೈಸರನ್ ಕಣಿವೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಾಜರಿದ್ದರು. ಹಠಾತ್ ಭಯೋತ್ಪಾದಕ ದಾಳಿಯ ಸಮಯದಲ್ಲಿ, 26 ಜನರು ಸಾವನ್ನಪ್ಪಿದರು ಮತ್ತು ಗುಂಡಿನ ದಾಳಿಯಲ್ಲಿ 17 ಜನರು ಗಾಯಗೊಂಡರು. 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿತ್ತು. ಟಿಆರ್‌ಎಫ್‌ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು.

  • ಮೋದಿ ಕಠಿಣ ವ್ಯಕ್ತಿ, ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ: ಟ್ರಂಪ್‌ ಸುಳಿವು

    ಮೋದಿ ಕಠಿಣ ವ್ಯಕ್ತಿ, ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ: ಟ್ರಂಪ್‌ ಸುಳಿವು

    – ಮತ್ತೆ ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇನೆಂದು ಬೆನ್ನು ತಟ್ಟಿಕೊಂಡ ಅಧ್ಯಕ್ಷ

    ಸಿಯೋಲ್‌: ನರೇಂದ್ರ ಮೋದಿ (Narendra Modi) ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

    ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ (APEC) ಸಿಇಒಗಳ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್‌ ಮತ್ತೆ ಭಾರತ ಮತ್ತು ಪಾಕಿಸ್ತಾನ (India-Pakistan) ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಮತ್ತೆ ತನ್ನ ಬೆನ್ನನ್ನು ತಟ್ಟುವ ಕೆಲಸವನ್ನು ಮುಂದುವರಿಸಿದ್ದಾರೆ.

    ಇದೇ ವೇಳೆ ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ (India-USA Trade Deal) ಮಾಡುವ ಬಗ್ಗೆ ಟ್ರಂಪ್‌ ಸುಳಿವು ನೀಡಿದ್ದಾರೆ. ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ ಎಂದು ಹೇಳಿದರು.

    ಟ್ರಂಪ್‌ ಹೇಳಿದ್ದೇನು?
    ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ. ನಮಗೆ ಉತ್ತಮ ಸಂಬಂಧವಿದೆ. ಅದೇ ರೀತಿ, ಪಾಕಿಸ್ತಾನದ ಪ್ರಧಾನಿ ಒಬ್ಬ ಉತ್ತಮ ವ್ಯಕ್ತಿ. ಅವರಲ್ಲಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಎನ್ನುವುದು ನಿಮಗೆ ತಿಳಿದಿದ್ಯಾ? ಅವರು ಒಬ್ಬ ಉತ್ತಮ ಹೋರಾಟಗಾರ. ಇದನ್ನೂ ಓದಿ:  ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಸುಂದರವಾಗಿರುವ ಏಳು ಹೊಸ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ನಾನು ಓದಿದ್ದೇನೆ. ಎರಡು ಪರಮಾಣು ರಾಷ್ಟ್ರಗಳು ಯುದ್ಧದಲ್ಲಿ ತೊಡಗಿದ್ದಾಗ ನಾನು ಮೋದಿ ಮತ್ತು ಪಾಕಿಸ್ತಾನಕ್ಕೆ ಕರೆ ಮಾಡಿ ಯುದ್ಧವನ್ನು ನಿಲ್ಲಿಸುವಂತೆ ಕೇಳಿದೆ. ಯುದ್ಧ ನಿಲ್ಲಿಸದೇ ಇದ್ದರೆ ವ್ಯಾಪಾರ ಒಪ್ಪಂದ ಮಾಡುವುದಿಲ್ಲ ಎಂದು ಹೇಳಿದ್ದೆ. ಎರಡು ದಿನಗಳ ನಂತರ ಈ ಯುದ್ಧ ನಿಂತಿತು.

    ಯುದ್ಧ ನಿಂತಿರುವುದು ಅದ್ಭುತವಲ್ಲವೇ? ಒಂದು ವೇಳೆ ಜೋ ಬೈಡೆನ್‌ ಅಧಿಕಾರದಲ್ಲಿ ಇದ್ದರೆ ಯುದ್ಧ ನಿಲ್ಲಿಸುತ್ತಿದ್ದರು ಎಂದು ಭಾವಿಸುತ್ತೀರಾ? ನಾನು ಹಾಗೆ ಭಾವಿಸುವುದಿಲ್ಲ ಎಂದು ಹೇಳಿ ತಾನೊಬ್ಬ ಶಾಂತಿದೂತ ಎಂದು ಬಿಂಬಿಸುವ ಪ್ರಯತ್ನ ಮಾಡಿದರು.

  • ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ (FDI) ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.

    ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜೊತೆ ಈ ವಿಷಯದ ಬಗ್ಗೆ ಚರ್ಚಿಸುತ್ತಿದೆ. ಈ ಪ್ರಸ್ತಾವನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ಪ್ರಸ್ತುತ ಶೇ.20 ಎಫ್‌ಡಿಐ ಮಿತಿ ಹೇರಿದೆ. ಹೊಸ ಕ್ರಮವು ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ನಿಯಮಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿದೆ. ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಪ್ರಸ್ತುತ ಎಫ್‌ಡಿಐ ಮಿತಿ ಶೇ.74 ರಷ್ಟಿದೆ. ಈ ಬಗ್ಗೆ ಆರ್‌ಬಿಐ ಜೊತೆಗೆ ಹಣಕಾಸು ಸಚಿವಾಲಯ ಚರ್ಚಿಸುತ್ತಿದೆ.

    ಭಾರತದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲು ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ. ಶೀಘ್ರದಲ್ಲೇ ಹೂಡಿಕೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

    ದುಬೈ ಮೂಲದ ಎಮಿರೇಟ್ಸ್ ಎನ್‌ಬಿಡಿ ಇತ್ತೀಚೆಗೆ ಆರ್‌ಬಿಎಲ್ ಬ್ಯಾಂಕಿನಲ್ಲಿ 60% ಪಾಲನ್ನು 3 ಬಿಲಿಯನ್‌ ಡಾಲರ್‌ಗೆ ಖರೀದಿಸಿದೆ. ಸುಮಿಟೊಮೊ ಮಿಟ್ಸುಯಿ ಬ್ಯಾಂಕಿಂಗ್ ಕಾರ್ಪ್ ಯೆಸ್ ಬ್ಯಾಂಕಿನಲ್ಲಿ 20% ಪಾಲನ್ನು 1.6 ಬಿಲಿಯನ್‌ ಡಾಲರ್‌ಗೆ ಸ್ವಾಧೀನಪಡಿಸಿಕೊಂಡಿದ್ದು, ಜಪಾನಿನ ಸಾಲದಾತ ನಂತರ ಇದನ್ನು ಮತ್ತೊಂದು 4.99% ಹೆಚ್ಚಿಸಿದ್ದರಿಂದ ಭಾರತದ ಬ್ಯಾಂಕಿಂಗ್ ಉದ್ಯಮದಲ್ಲಿ ವಿದೇಶಿ ಆಸಕ್ತಿ ಹೆಚ್ಚುತ್ತಿದೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ವಿದೇಶಿ ಹೂಡಿಕೆದಾರರಿಂದ ಆಸಕ್ತಿಯನ್ನು ನಿರೀಕ್ಷಿಸುತ್ತಿವೆ. ವಿದೇಶಿ ಮಾಲೀಕತ್ವದ ಮಿತಿಯನ್ನು ಹೆಚ್ಚಿಸುವುದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಬಂಡವಾಳವನ್ನು ಪಡೆಯಲು ಸಹಾಯವಾಗುತ್ತದೆ.

  • 21 ವರ್ಷದ ಬಳಿಕ ದೇಶಾದ್ಯಂತ ಎಸ್‌ಐಆರ್‌: ಚುನಾವಣಾ ಆಯೋಗ

    21 ವರ್ಷದ ಬಳಿಕ ದೇಶಾದ್ಯಂತ ಎಸ್‌ಐಆರ್‌: ಚುನಾವಣಾ ಆಯೋಗ

    – ಎರಡನೇ ಹಂತದಲ್ಲಿ 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿ
    – ಕರ್ನಾಟಕದಲ್ಲಿ ಈ ಬಾರಿ ಎಸ್‌ಐಆರ್‌ ಇಲ್ಲ

    ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರದಲ್ಲಿ ನಡೆಸಿದ SIR ಯಶಸ್ವಿಯಾಗಿದೆ. ಈಗ ಎರಡನೇ ಹಂತದಲ್ಲಿ ಮುಂದೆ 1-2 ವರ್ಷದ ಒಳಗಡೆ  ಚುನಾವಣೆ ನಡೆಯಲಿರುವ  12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ SIR ಶುರುವಾಗಲಿದೆ ಎಂದು ತಿಳಿಸಿದರು.

    ಆಯೋಗದ ಕಾನೂನಿನ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಅಗತ್ಯವಿದೆ. ಪ್ರತಿಯೊಂದು ರಾಜಕೀಯ ಪಕ್ಷವೂ ಪರಿಷ್ಕರಣೆ ನಡೆಸದ ಬಗ್ಗೆ ದೂರು ನೀಡಿವೆ. ಇಲ್ಲಿಯವರಗೆ ಎಂಟು ಬಾರಿ SIR ನಡೆಸಿದೆ. 2002-2004 ರಲ್ಲಿ ಕೊನೆಯದಾಗಿ SIR ನಡೆಸಲಾಗಿತ್ತು. ಎರಡು ದಶಕದ ಬಳಿಕ ಈಗ SIR ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಕಳೆದ 20 ವರ್ಷದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಾಕಷ್ಟು ಮತದಾರರ ವಿಳಾಸ ಬದಲಾವಣೆಯಾಗಿರುತ್ತದೆ, ವಿದೇಶಿಗರು ಪಟ್ಟಿಯಲ್ಲಿ ಸೇರಿರುತ್ತಾರೆ. ಕೆಲವರು ಮರಣದ ಬಳಿಕವೂ ಪಟ್ಟಿಯಲ್ಲಿ ಹೆಸರು ಉಳಿದುಕೊಂಡಿರುತ್ತದೆ. ಇದನ್ನು ತೆರವು ಮಾಡಲು SIR ಅಗತ್ಯವಿದೆ ಎಂದು ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡರು.

    ಎಲ್ಲೆಲ್ಲಿ ಎಸ್‌ಐಆರ್‌?
    ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಪುದುಚೇರಿ, ಛತ್ತೀಸ್‌ಗಢ, ಗುಜರಾತ್, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಲಕ್ಷದ್ವೀಪ.

  • 5 ವರ್ಷದ ಬಳಿಕ ಭಾರತದಿಂದ ಚೀನಾಗೆ ಹಾರಿತು ವಿಮಾನ!

    5 ವರ್ಷದ ಬಳಿಕ ಭಾರತದಿಂದ ಚೀನಾಗೆ ಹಾರಿತು ವಿಮಾನ!

    ನವದೆಹಲಿ: ಭಾರತ (India) ಮತ್ತು ಚೀನಾ (China) ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ (Direct Flights) ಸೇವೆ ಆರಂಭಗೊಂಡಿದೆ. ಕೋಲ್ಕತ್ತಾ-ಗುವಾಂಗ್‌ಝೌ ನಡುವಿನ ಇಂಡಿಗೋ (Indigo) ವಿಮಾನ ಭಾನುವಾರ ರಾತ್ರಿ 10 ಗಂಟೆಗೆ ಟೇಕಾಫ್‌ ಆಗಿದೆ.

    ಶಾಂಘೈನಿಂದ ನವದೆಹಲಿಗೆ ವಿಮಾನಗಳು ನವೆಂಬರ್ 9 ರಿಂದ ಪುನರಾರಂಭಗೊಳ್ಳಲಿವೆ. ವಾರಕ್ಕೆ ಮೂರು ದಿನ ಈ ವಿಮಾನ ಸಂಚಾರ ಇರಲಿದೆ. ದೆಹಲಿಯಿಂದ ಗುವಾಂಗ್‌ಝೌಗೆ ಇಂಡಿಗೋ ವಿಮಾನ ನವೆಂಬರ್ 10 ರಿಂದ ಪ್ರಾರಂಭವಾಗಲಿದೆ. ಇದನ್ನೂ ಓದಿ:  ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

     

    ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಈ ತಿಂಗಳ ಆರಂಭದಲ್ಲಿ ಒಪ್ಪಿಗೆ ನೀಡಿತ್ತು.

    ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ಡೋಕ್ಲಾಮ್ ಘರ್ಷಣೆಯ ಬಳಿಕ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗ ಬಂದ ನಂತರ ಸ್ಥಗಿತಗೊಂಡಿದ್ದ ವಿಮಾನ ಹಾರಾಟ ಮತ್ತೇ ಆರಂಭಗೊಂಡಿರಲಿಲ್ಲ.

  • ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ವಾಷಿಂಗ್ಟನ್‌: ಭಾರತವು (India) ರಷ್ಯಾದಿಂದ (Russia) ತೈಲ (Oil) ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಪುನರುಚ್ಚರಿಸಿದ್ದಾರೆ.

    ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರೊಂದಿಗೆ ಟ್ರಂಪ್ ಮಾತನಾಡಿದ್ದಾರೆ. ಈ ವೇಳೆ, ಭಾರತವು ತನ್ನ ರಷ್ಯಾದ ತೈಲ ಖರೀದಿಯನ್ನು ಕಡಿತಗೊಳಿಸುತ್ತಿದೆ. ಚೀನಾ ರಷ್ಯಾದ ತೈಲ ಖರೀದಿಯನ್ನು ಗಣನೀಯವಾಗಿ ಕಡಿತಗೊಳಿಸುತ್ತಿದೆ ಎಂದಿದ್ದಾರೆ. ಇದೇ ವೇಳೆ ರಷ್ಯಾದ ತೈಲ ಕಂಪನಿಗಳಾದ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲಿನ ಹೊಸ ನಿರ್ಬಂಧಗಳನ್ನು ಅವರು ಉಲ್ಲೇಖಿಸಿ ಮಾತನಾಡಿದ್ದಾರೆ. ಇದನ್ನೂ ಓದಿ: ವ್ಯಾಪಾರ ಬೆದರಿಕೆ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ: ಟ್ರಂಪ್‌

    ವ್ಯಾಪಾರ, ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳ ಪ್ರವೇಶದ ಕುರಿತು ವಾಷಿಂಗ್ಟನ್ ಮತ್ತು ಚೀನಾ ನಡುವೆ ಘರ್ಷಣೆ ನಡೆಯುತ್ತಿದೆ. ಇದರ ನಡುವೆ ಏಷ್ಯಾ ಪ್ರವಾಸದ ಭಾಗವಾಗಿ ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಟ್ರಂಪ್ ಭೇಟಿಯಾಗಲಿದ್ದಾರೆ. ಅವರ ನಿಗದಿತ ಭೇಟಿಗೂ ಮನ್ನವೇ ಟ್ರಂಪ್‌ ಈ ಹೇಳಿಕೆ ನೀಡಿದ್ದಾರೆ.

    ಇತ್ತೀಚೆಗೆ ಟ್ರಂಪ್‌ ವರದಿಗಾರರೊಂದಿಗೆ ಮಾತನಾಡುತ್ತಾ, ವರ್ಷಾಂತ್ಯದ ವೇಳೆಗೆ ರಷ್ಯಾದೀಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭಾರತ ಭರವಸೆ ನೀಡಿದೆ. ಈ ಪ್ರಕ್ರಿಯೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದಿದ್ದರು.

    ಇದರ ನಡುವೆ ಟ್ರಂಪ್ ಹೇಳಿಕೆಗಳನ್ನು ಭಾರತ ನಿರಂತರವಾಗಿ ತಿರಸ್ಕರಿಸುತ್ತಾ ಬಂದಿದೆ. ಅಲ್ಲದೇ ನಮ್ಮ ಇಂಧನ ನೀತಿಯು ಸ್ವತಂತ್ರವಾಗಿ ಉಳಿದಿದೆ. ಕಚ್ಚಾ ತೈಲ ಆಮದಿನ ಬಗ್ಗೆ ನಿರ್ಧಾರಗಳನ್ನು ರಾಷ್ಟ್ರೀಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಒತ್ತಿ ಹೇಳಿದೆ. ಇದನ್ನೂ ಓದಿ: ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

  • ಕುಳಿತಲ್ಲೇ ಫುಡ್‌ ಆರ್ಡರ್‌; ಬೊಜ್ಜು, ಶುಗರ್‌, ಹೃದಯ ಸಂಬಂಧಿ ಕಾಯಿಲೆಗಳಿಗೆ ಆಹ್ವಾನ – ಶಾಕ್‌ ಕೊಟ್ಟ WHO, UNICEF ರಿಪೋರ್ಟ್‌

    ಕುಳಿತಲ್ಲೇ ಫುಡ್‌ ಆರ್ಡರ್‌; ಬೊಜ್ಜು, ಶುಗರ್‌, ಹೃದಯ ಸಂಬಂಧಿ ಕಾಯಿಲೆಗಳಿಗೆ ಆಹ್ವಾನ – ಶಾಕ್‌ ಕೊಟ್ಟ WHO, UNICEF ರಿಪೋರ್ಟ್‌

    ಕುಳಿತಲ್ಲೇ ಆರ್ಡರ್ ಮಾಡಿದರೆ ಎಲ್ಲವೂ ಮನೆ ಬಾಗಿಲಿಗೆ ಬರುತ್ತವೆ. ಊಟ, ದಿನಸಿ, ತಿನಿಸುಗಳು ಹೀಗೆ ಬೇಕಾದ್ದನ್ನು ಆರ್ಡರ್ ಮಾಡಿ ತರಿಸಿಕೊಳ್ಳಬಹುದು. ಎಲ್ಲವೂ ಮೊಬೈಲ್‌ನಲ್ಲಿ ಒಂದು ಕ್ಲಿಕ್‌ನಲ್ಲಿ ಆಗುತ್ತವೆ. ನಗರ ಭಾಗದ ಜನರು ತುಂಬಾ ಬ್ಯುಸಿಯಾಗಿದ್ದಾರೆ. ತಮಗೆ ಬೇಕಾದ್ದನ್ನು ಹೊರಗಡೆ ಹೋಗಿ ತರುವಷ್ಟು ಸಮಯ ಇಲ್ಲ. ಹೀಗಾಗಿ, ಆನ್‌ಲೈನ್ ಸೇವೆಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಹೋಟೆಲ್, ರೆಸ್ಟೋರೆಂಟ್‌ಗಳಿಂದ ತಮ್ಮಿಷ್ಟದ ಊಟ-ತಿಂಡಿಗಳನ್ನು ಮನೆಗೆ ತರಿಸಿಕೊಂಡು ಸೇವಿಸುವ ಪರಿಪಾಠ ದಿನೇ ದಿನೆ ಹೆಚ್ಚುತ್ತಿದೆ. ಪರಿಣಾಮವಾಗಿ ಮನೆಯಲ್ಲೇ ಅಡುಗೆ ಮಾಡುಕೊಳ್ಳುವಂತಹ ಸಂಪ್ರದಾಯ ಕ್ಷೀಣಿಸುತ್ತಿದೆ. ತಂತ್ರಜ್ಞಾನ ದೃಷ್ಟಿಯಲ್ಲಿ ಇದು ಒಳ್ಳೆಯ ಬೆಳವಣಿಗೆ. ಆದರೆ, ಈ ಪ್ರವೃತ್ತಿಯಿಂದ ಜನರ ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮ ಕಳವಳಕಾರಿಯಾಗಿದೆ.

    ನೆರೆಹೊರೆಯ ಅಂಗಡಿಗೆ ಹೋಗುವ ಅಥವಾ ವೀಕೆಂಡ್ ಸಂತೋಷಕೂಟ ಯೋಜಿಸುವ ದಿನಗಳು ಮರೆಯಾಗಿವೆ. ಆನ್‌ಲೈನ್ ಫುಡ್ ಡೆಲಿವರಿ ಮಾಡುವ ಅಪ್ಲಿಕೇಶನ್‌ಗಳ ಹೆಚ್ಚಳವು ಜನರ ಆಹಾರ ಸೇವನೆ ಕ್ರಮವನ್ನೇ ಬದಲಾಯಿಸಿವೆ. ಆನ್‌ಲೈನ್‌ ಫುಡ್‌ ಡೆಲಿವರಿ (Online Food Delivery) ಪ್ಲಾಟ್‌ಫಾರ್ಮ್‌ಗಳ ಕಡೆಗಿನ ಜನರ ಒಲವು ಹೆಚ್ಚುತ್ತಿದೆ. ಇದರಿಂದ ಜನರ ದೈಹಿಕ ಚಟುವಟಿಕೆ ಗಣನೀಯವಾಗಿ ಕಡಿಮೆಯಾಗಿದೆ. ಹೆಚ್ಚಿನ ಕ್ಯಾಲೊರಿ ಇರುವ ಆಹಾರಗಳ ಮೇಲಿನ ಅವಲಂಬನೆ ಜಾಸ್ತಿಯಾಗಿದೆ. ರುಚಿಯೆನಿಸುವ ಜಂಕ್‌ಫುಡ್ ಸೇವನೆಯೂ ಮಿತಿಮೀರಿದೆ. ಇದು ಜನರಿಗೆ ಅರಿವಾಗದಂತೆ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಬೊಜ್ಜು ಮತ್ತು ಇತರೆ ಆರೋಗ್ಯದ ಅಪಾಯಗಳು ಹೆಚ್ಚುತ್ತಿವೆ.

    WHO ಬಿಚ್ಚಿಟ್ಟ ಆತಂಕಕಾರಿ ವಿಷಯ ಏನು?
    2022 ರಲ್ಲಿ ವಿಶ್ವದಾದ್ಯಂತ ಎಂಟು ಜನರಲ್ಲಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದರು. ಅಧಿಕ ತೂಕ ಹೊಂದಿದ್ದ 250 ಕೋಟಿ ವಯಸ್ಕರಲ್ಲಿ 89 ಕೋಟಿ ಜನರು ಬೊಜ್ಜು ಸಮಸ್ಯೆಗೆ ಒಳಗಾಗಿದ್ದಾರೆ. ಮಕ್ಕಳು ಮತ್ತು ಹದಿಹರೆಯದವರಲ್ಲಿಯೂ ಬೊಜ್ಜು ಹೆಚ್ಚಾಗಿದೆ. 5-19 ವರ್ಷ ವಯಸ್ಸಿನ ಸುಮಾರು 16 ಕೋಟಿ ಹದಿಹರೆಯದವರು ಬೊಜ್ಜು ಸಮಸ್ಯೆಗೆ ತುತ್ತಾಗಿದ್ದಾರೆ.

    ಬೊಜ್ಜು ಹೊಂದುವವರಲ್ಲಿ ಭಾರತವೇ ನಂ.1
    ಭಾರತದಲ್ಲಿಯೂ ಬೊಜ್ಜು ಹೆಚ್ಚುತ್ತಿರುವುದು ಕಳವಳಕಾರಿ ವಿಷಯವಾಗಿದೆ. 2030 ರ ವೇಳೆಗೆ ಭಾರತವು ಜಾಗತಿಕವಾಗಿ ಅತಿ ಹೆಚ್ಚು ತೂಕ ಮತ್ತು ಬೊಜ್ಜು ಹೊಂದಿರುವ ಮಕ್ಕಳನ್ನು ಹೊಂದಬಹುದು ಎಂದು ಯುನಿಸೆಫ್ ಎಚ್ಚರಿಸಿದೆ. ಸುಮಾರು 3 ಕೋಟಿ ಹದಿಹರೆಯದವರು ಬೊಜ್ಜು ಹೊಂದುವ ನಿರೀಕ್ಷೆಯಿದೆ. ಜಗತ್ತಿನ ಒಟ್ಟು ಪ್ರಮಾಣದಲ್ಲಿ ಶೇ.11 ರಷ್ಟು ಭಾರತದ್ದೇ ಪಾಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೊಜ್ಜು/ತೂಕ ಹೆಚ್ಚಳದಿಂದ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕೀಲು ಸಮಸ್ಯೆಗಳಂತಹ ಸಾಂಕ್ರಾಮಿಕವಲ್ಲದ ಕಾಯಿಲೆಗಳ (ಎನ್‌ಸಿಡಿ) ಅಪಾಯವೂ ಹೆಚ್ಚುತ್ತಿದೆ. ಇದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

    1995ರಲ್ಲಿ ಆರಂಭ
    ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡುವ ಪರಿಕಲ್ಪನೆ ಹೊಸದೇನಲ್ಲ. 1995 ರ ಆರಂಭದಲ್ಲಿ, Waiter.com (ಆಗ ವರ್ಲ್ಡ್ ವೈಡ್ ವೇಟರ್ ಎಂದು ಕರೆಯಲಾಗುತ್ತಿತ್ತು) ಎಂಬ ಪ್ಲಾಟ್‌ಫಾರ್ಮ್ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಇಂಟರ್ನೆಟ್ ಆಧಾರಿತ ಆಹಾರ ವಿತರಣೆಯನ್ನು ನೀಡಲು ಪ್ರಾರಂಭಿಸಿತು. ನಂತರ ಇತರ ಯುಎಸ್ ನಗರಗಳಿಗೆ ಇದು ವಿಸ್ತರಿಸಿತು. ಗ್ರಾಹಕರು ಡಿಜಿಟಲ್ ಮೆನುಗಳಿಗೆ ಆಕರ್ಷಿತರಾದರು. ತಮ್ಮ ಆರ್ಡರ್‌ಗಳನ್ನು ನೀಡಿದರು, ಆನ್‌ಲೈನ್ ಪಾವತಿ ಮಾಡಿದರು. ಇದು ಈಗ ಪ್ರಪಂಚದಾದ್ಯಂತ ವ್ಯಾಪಿಸಿದೆ.

    ಭಾರತದಲ್ಲಿ ಹೆಚ್ಚುತ್ತಿವೆ ಫುಡ್ ಆರ್ಡರ್‌ಗಳು
    ಕಳೆದ ದಶಕದಲ್ಲಿ ಭಾರತದಲ್ಲಿ ಈ ವಲಯವು ಉತ್ತುಂಗಕ್ಕೇರಿತು. ಹೆಚ್ಚಿದ ಸ್ಮಾರ್ಟ್‌ಫೋನ್‌ಗಳ ಬಳಕೆ, ಕಡಿಮೆ ಬೆಲೆಯ ಮೊಬೈಲ್ ಡೇಟಾ, ಆದಾಯದಲ್ಲಿನ ಹೆಚ್ಚಳ ಮೊದಲಾದ ಕಾರಣಗಳಿಗೆ ಫುಡ್ ಆರ್ಡರ್ ಪ್ರವೃತ್ತಿ ಮಿತಿಮೀರಿದೆ. 2008 ರಲ್ಲಿ ಸ್ಥಾಪನೆಯಾದ ಪ್ಲಾಟ್‌ಫಾರ್ಮ್‌ವೊಂದು, ರೆಸ್ಟೋರೆಂಟ್ ಅನ್ವೇಷಣೆ ಸೇವೆಯಾಗಿ ಪ್ರಾರಂಭವಾಯಿತು. ಆದರೆ, ಅದು 2015 ರಲ್ಲಿ ವಿತರಣಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿತು. 2014 ರಲ್ಲಿ ಪ್ರಾರಂಭವಾದ ಮತ್ತೊಂದು ಪ್ಲಾಟ್‌ಫಾರ್ಮ್‌ ತ್ವರಿತ ಸೇವೆ ಕ್ರಮದೊಂದಿಗೆ ಬಹುಬೇಗ ತನ್ನ ನೆಲೆ ವಿಸ್ತರಿಸಿಕೊಂಡಿತು. ಭಾರತದ ಆನ್‌ಲೈನ್ ಆಹಾರ ವಿತರಣಾ ಮಾರುಕಟ್ಟೆಯು 2019 ರಿಂದ 2023 ರವರೆಗೆ 2.8 ಪಟ್ಟು ಬೆಳೆದಿದೆ. ವಾರ್ಷಿಕವಾಗಿ 18% ನಷ್ಟು ಬೆಳೆಯುವ ನಿರೀಕ್ಷೆಯಿದೆ. ಇದು ಭಾರತೀಯ ಆಹಾರ ಸೇವಾ ಉದ್ಯಮದ ಬೆಳವಣಿಗೆಯ ದರಕ್ಕಿಂತ 1.5 ಪಟ್ಟು ಹೆಚ್ಚು ಎಂದು ಬೈನ್ & ಕಂಪನಿ ಹಾಗೂ ಐಪಿಒ-ಬೌಂಡ್ ಸ್ವಿಗ್ಗಿಯ 2024 ರ ವರದಿಯು ತಿಳಿಸಿದೆ. ಭಾರತದಲ್ಲಿ ಆಹಾರ ಸೇವೆಗಳ ಮಾರುಕಟ್ಟೆ 2030 ರ ವೇಳೆಗೆ ಸುಮಾರು 9-10 ಲಕ್ಷ ಕೋಟಿ ರೂ.ಗಳನ್ನು ಮುಟ್ಟುವ ನಿರೀಕ್ಷೆಯಿದೆ. ಈ ಹೊತ್ತಿಗೆ ಆನ್‌ಲೈನ್ ಆಹಾರ ವಿತರಣೆಯು ಒಟ್ಟಾರೆ ಮಾರುಕಟ್ಟೆಗೆ ಸುಮಾರು 20% ನಷ್ಟು ಕೊಡುಗೆ ನೀಡುವ ನಿರೀಕ್ಷೆಯಿದೆ. ಇದು ಆಹಾರ ಪದ್ಧತಿಯಲ್ಲಿ ಸಾಂಸ್ಕೃತಿಕ ಪರಿವರ್ತನೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಸಂದರ್ಭಗಳಿಗೆ ಮಾತ್ರ ಮೀಸಲಾಗಿದ್ದು, ಈಗ ದೈನಂದಿನ ಪರಿಪಾಠವಾಗಿ ಬದಲಾಗಿದೆ.

    ಆರೋಗ್ಯದ ಮೇಲಾಗುತ್ತಿರೋ ಎಫೆಕ್ಟ್ ಏನು?
    ಆನ್‌ಲೈನ್ ಫುಡ್ ಆರ್ಡರ್ ಪ್ರವೃತ್ತಿಯಿಂದ ಜನರ ಜೀವನಶೈಲಿಯಲ್ಲಿ ಬದಲಾವಣೆಯಾಗಿದೆ. ದೈಹಿಕ ಚಟುವಟಿಕೆ ಕಡಿಮೆಯಾಗಿದೆ. ಮನೆಯಲ್ಲೇ ಆರೋಗ್ಯಕರ ಅಡುಗೆ ತಯಾರಿಸುವ ಪರಿಪಾಠವೂ ಇಲ್ಲವಾಗಿದೆ. ಆರೋಗ್ಯಕರವಲ್ಲದ ಹೊರಗಡೆಯ ರುಚಿಕರ ಆಹಾರ ಮತ್ತು ಜಂಕ್‌ಫುಡ್‌ಗಳಿಗೆ ಜನರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅಧಿಕ ತೂಕ, ಬೊಜ್ಜು ಮತ್ತು ಇತರೆ ಆರೋಗ್ಯ ಸಮಸ್ಯೆಗಳಿಗೆ ಜನರು ತುತ್ತಾಗುತ್ತಿದ್ದಾರೆಂದು ಅಧ್ಯಯನಗಳು ತಿಳಿಸಿವೆ. 2024ರಲ್ಲಿ ಚೀನಾ ಅಧ್ಯಯನವೊಂದನ್ನು ನಡೆಸಿತು. ಆನ್‌ಲೈನ್‌ನಲ್ಲಿ ಹೆಚ್ಚಾಗಿ ಫುಡ್ ಆರ್ಡರ್ ಮಾಡಿ ಸೇವಿಸುವವರಲ್ಲಿ ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆ ಎದುರಿಸುತ್ತಿರುವುದು ಕಂಡುಬಂದಿದೆ. ಕುಳಿತಲ್ಲೇ ತಮಗೆ ಬೇಕಾದ್ದನ್ನು ಸುಲಭವಾಗಿ ಆರ್ಡರ್ ಮಾಡುತ್ತಾರೆ. ಇದರಿಂದ ಅತಿಯಾಗಿ ತಿನ್ನುವ ಹವ್ಯಾಸವೂ ರೂಢಿಯಾಗಿದೆ. ಹೆಚ್ಚಿನ ಕ್ಯಾಲೋರಿ ಇರುವ ತಿನಿಸುಗಳನ್ನೇ ಆಯ್ಕೆ ಮಾಡುತ್ತಾರೆ. ಪೌಷ್ಟಿಕತೆಗೆ ಬದಲಾಗಿ ಸಂಸ್ಕರಿಸಿದ ಆಹಾರಗಳನ್ನೇ ಹೆಚ್ಚಾಗಿ ಆರ್ಡರ್ ಮಾಡುತ್ತಾರೆ. ಹೀಗಾಗಿ, ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.

    ‘ಕಳಪೆ ಆಹಾರ ಪದ್ಧತಿಗಳು: ಭಾರತದಲ್ಲಿ ಆನ್‌ಲೈನ್ ಫುಡ್ ಆರ್ಡರ್ ಕಡೆಗಿನ ಆಕರ್ಷಣೆ’ ಎಂಬ ಶೀರ್ಷಿಕೆಯಡಿ 2021 ರಲ್ಲಿ ಅಧ್ಯಯನ ನಡೆಸಲಾಗಿತ್ತು. ಜಂಕ್‌ಫುಡ್‌ನ್ನು ಹೆಚ್ಚಾಗಿ ಆರ್ಡರ್ ಮಾಡಿ ಸೇವಿಸುತ್ತಿರುವುದೇ ಜನರಲ್ಲಿ ಬೊಜ್ಜು ಸಮಸ್ಯೆಗೆ ಕಾರಣವಾಗಿದೆ. ಸಕ್ಕರೆಯುಕ್ತ ಆಹಾರದ ಅತಿಯಾದ ಸೇವನೆಯು ಹಲ್ಲುಗಳ ಮೇಲೆ ಪರಿಣಾಮ ಬೀರುತ್ತಿದೆ. ಆದರೆ, ಮನೆ ಆಹಾರ ಸೇವಿಸುವವರಲ್ಲಿ ಯಾವುದೇ ಅನಾರೋಗ್ಯ ತೊಂದರೆಗಳು ಕಂಡುಬಂದಿಲ್ಲ ಎಂಬುದನ್ನು ಅಧ್ಯಯನ ಬಹಿರಂಗಪಡಿಸಿದೆ. ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡುವಾಗ, ಹೆಚ್ಚಿನ ಕ್ಯಾಲೊರಿ, ಪೋಷಕಾಂಶಗಳ ಕೊರತೆ ಮತ್ತು ಅಲ್ಟ್ರಾ-ಸಂಸ್ಕರಿಸಿದ ಆಹಾರವನ್ನೇ ಜನರು ಆರಿಸಿಕೊಳ್ಳುತ್ತಿದ್ದಾರೆ. ಉದಾಹರಣೆಗೆ, ಅಮೆರಿಕನ್ ಅಧ್ಯಯನದ ವರದಿಯಲ್ಲಿ, ಹೆಚ್ಚು ಆರ್ಡರ್ ಮಾಡಿದ ಆಹಾರಗಳಲ್ಲಿ ‘ಚೀಸ್ ಬರ್ಗರ್ ಮತ್ತು ಫ್ರೈಸ್, ಪಿಜ್ಜಾ, ನ್ಯಾಚೋಸ್, ಚೀಸ್‌ಕೇಕ್, ಬೇಬಿ ಬ್ಯಾಕ್ ಹಂದಿ ಪಕ್ಕೆಲುಬು, ಚಿಕನ್ ಮತ್ತು ವೇಫಲ್ ಸ್ಲೈಡರ್‌ಗಳು ಇತ್ಯಾದಿಗಳಿವೆ. ಆನ್‌ಲೈನ್ ಸೇವೆಗಳಲ್ಲಿ ಆಹಾರದ ಗುಣಮಟ್ಟ, ಸುರಕ್ಷತೆ ಇರಲ್ಲ. ಆರ್ಡರ್ ಮಾಡಿ ಆಹಾರದೊಳಗೆ ಇಲಿ, ಹಲ್ಲಿ, ಜಿರಳೆ, ಹುಳ, ಪ್ಲಾಸ್ಟಿಕ್ ಕವರ್ ಮೊದಲಾದವು ಇವೆ ಎಂದು ಗ್ರಾಹಕರು ದೂರಿರುವ ಸಾಕಷ್ಟು ಪ್ರಕರಣಗಳು ಇದಕ್ಕೆ ನಿದರ್ಶನ.

    ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಇ-ಕಾಮರ್ಸ್ ಆಹಾರ ವೇದಿಕೆಗಳಿಗೆ ಕಠಿಣ ನಿಯಮಗಳನ್ನು ರೂಪಿಸಿದೆ. ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ಗಳ 70 ಕ್ಕೂ ಹೆಚ್ಚು ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ, FSSAI ಎಲ್ಲಾ ರಶೀದಿಗಳು ಮತ್ತು ಇನ್‌ವಾಯ್ಸ್‌ಗಳಲ್ಲಿ ಪರವಾನಗಿ ಮತ್ತು ನೋಂದಣಿ ಸಂಖ್ಯೆಗಳನ್ನು ಪ್ರದರ್ಶಿಸಬೇಕು, ಗೋದಾಮು ಮತ್ತು ಸಂಗ್ರಹಣಾ ಸೌಲಭ್ಯದ ವಿವರಗಳನ್ನು FoSCoS ಪೋರ್ಟಲ್‌ನಲ್ಲಿ ಬಹಿರಂಗಪಡಿಸಬೇಕು. ಎಲ್ಲಾ ಆಹಾರ ನಿರ್ವಾಹಕರು ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣೀಕರಣ (FoSTaC) ಕ್ಕೆ ಒಳಗಾಗಬೇಕು, ಗೋದಾಮುಗಳನ್ನು ಪರವಾನಗಿ ನೀಡಬೇಕು ಮತ್ತು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಆದೇಶಿಸಿದೆ.

    ವೇಗದ ಜೀವನ.. ಕಾಯಿಲೆಗೆ ಆಹ್ವಾನ
    ನವಿ ಮುಂಬೈನ ಖಾರ್ಘರ್‌ನಲ್ಲಿರುವ ಮೆಡಿಕವರ್ ಆಸ್ಪತ್ರೆಯ ಡಯೆಟಿಕ್ಸ್ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಪಾಂಡಾ, ಆನ್‌ಲೈನ್ ಫುಡ್‌ ಆರ್ಡರ್‌ ಅಪ್ಲಿಕೇಶನ್‌ಗಳನ್ನು ತ್ವರಿತ ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾಗಿದೆ. ಆದರೆ, ಅವುಗಳ ವ್ಯಾಪಕ ಬಳಕೆಯು ಭಾರತದಲ್ಲಿ ಹೆಚ್ಚುತ್ತಿರುವ ಬೊಜ್ಜು, ಮಧುಮೇಹ ಮತ್ತು ಜೀವನಶೈಲಿ-ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಫುಡ್‌ ಡೆಲಿವರಿ ಪ್ಲಾಟ್‌ಫಾರ್ಮ್‌ಗಳು ಅಲ್ಟ್ರಾ-ಸಂಸ್ಕರಿಸಿದ ಆಹಾರವನ್ನು ಸಾಮಾನ್ಯ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತವೆ. ಹೆಚ್ಚುತ್ತಿರುವ ಬೊಜ್ಜಿಗೆ ಅವುಗಳ ಕೊಡುಗೆ ಗಣನೀಯವಾಗಿದೆ. ಹಾಗಂತ, ಈ ಅಪ್ಲಿಕೇಶನ್‌ಗಳ ಮೇಲೆ ದೂಷಣೆ ಸರಿಯಲ್ಲ. ಜೀವನಶೈಲಿ ಆಯ್ಕೆಗಳು, ಆಹಾರ ಪದ್ಧತಿ ಮತ್ತು ವೈಯಕ್ತಿಕ ದಿನಚರಿ ಸಹ ಪ್ರಮುಖ ಪಾತ್ರವಹಿಸುತ್ತವೆ. ಹಠಾತ್‌ ನಿರ್ಧಾರ, ಬಾಯಿಚಪಲ ಮೊದಲಾದ ಕಾರಣಗಳು ಸಾಮಾನ್ಯವಾಗಿ ಜನರಿಗೆ ಹಸಿವಿಲ್ಲದಿದ್ದರೂ ತಿನ್ನಲು ಪ್ರೇರೇಪಿಸುತ್ತವೆ ಎಂದು ತಿಳಿಸಿದ್ದಾರೆ. ಫುಡ್‌ ಡೆಲಿವರಿಗೆ ಅಪ್ಲಿಕೇಶನ್‌ಗಳಿಂದ ನಿರಂತರವಾಗಿ ತಿನಿಸುಗಳು ಮತ್ತು ರಿಯಾಯಿತಿಗೆ ಸಂಬಂಧಿಸಿದ ಸಂದೇಶಗಳು ಮೊಬೈಲ್‌ಗೆ ಬರುತ್ತಿರುತ್ತವೆ. ಅದನ್ನು ನೋಡಿ ತಿನ್ನಲು ಆಸೆ ಪಡುವವರೇ ಹೆಚ್ಚು. ತಕ್ಷಣ ಬುಕ್‌ ಮಾಡಿ ಆರ್ಡರ್‌ ಪಡೆಯುವವರು ಹೆಚ್ಚಾಗಿದ್ದಾರೆ.

    ಈ ರೀತಿಯ ಆಕರ್ಷಣೆ ತಿನ್ನಲು ಹಸಿವಿಲ್ಲದಿದ್ದರೂ ತಿನ್ನುವಂತೆ ಮಾಡುತ್ತದೆ. ಇದನ್ನು ಜನರು ಮಿತಿಗೊಳಿಸಬೇಕು. ಪ್ರಜ್ಞಾಪೂರ್ವಕ ಆಯ್ಕೆಗಳು ಇರಬೇಕು. ಆಹಾರವನ್ನು ಸೇವಿಸುವ ಮೊದಲು ಅದು ಸುರಕ್ಷಿತ, ಆರೋಗ್ಯಕರ ಮತ್ತು ಪೌಷ್ಟಿಕಾಂಶಕ್ಕೆ ಸೂಕ್ತವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯ. ಲೇಬಲ್ ಅನ್ನು ಎಚ್ಚರಿಕೆಯಿಂದ ಓದುವುದು ಮತ್ತು ಮಾರ್ಕೆಟಿಂಗ್ ಒತ್ತಡಗಳನ್ನು ವಿರೋಧಿಸುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಜನರು ಆರೋಗ್ಯಕರ ಆಯ್ಕೆಗಳಿಗೆ ಒತ್ತು ನೀಡಬೇಕು. ಸರಿಯಾದ ಆಯ್ಕೆಗಳನ್ನು ಮಾಡಬೇಕು.

  • ಭಾರತದ ವಿರುದ್ಧ ಯುದ್ಧದಿಂದ ಪ್ರಯೋಜನವಿಲ್ಲ, ಯಾಕಂದ್ರೆ ಪಾಕಿಸ್ತಾನಿಗಳೇ ಸೋಲುತ್ತಾರೆ: ಪಾಕ್‌ ಕಾರ್ಯಾಚರಣೆಗಳ ಮಾಜಿ ಸಿಐಎ

    ಭಾರತದ ವಿರುದ್ಧ ಯುದ್ಧದಿಂದ ಪ್ರಯೋಜನವಿಲ್ಲ, ಯಾಕಂದ್ರೆ ಪಾಕಿಸ್ತಾನಿಗಳೇ ಸೋಲುತ್ತಾರೆ: ಪಾಕ್‌ ಕಾರ್ಯಾಚರಣೆಗಳ ಮಾಜಿ ಸಿಐಎ

    ಇಸ್ಲಾಮಾಬಾದ್: ಭಾರತದ ವಿರುದ್ಧ ಯುದ್ಧ ಮಾಡುವುದರಿಂದ ಪಾಕಿಸ್ತಾನಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪಾಕ್ ಕಾರ್ಯಾಚರಣೆಗಳ ನೇತೃತ್ವ ವಹಿಸಿದ್ದ ಮಾಜಿ ಸಿಐಎ ಅಧಿಕಾರಿ ಜಾನ್ ಕಿರಿಯಾಕೌ ಹೇಳಿಕೆ ನೀಡಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದಿಂದ ಏನೂ ಒಳ್ಳೆಯದಾಗುವುದಿಲ್ಲ. ಏಕೆಂದರೆ ಪಾಕಿಸ್ತಾನಿಗಳು ಸೋಲುತ್ತಾರೆ. ನಾನು ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ಮಾತನಾಡುತ್ತಿಲ್ಲ. ನಾನು ಸಾಂಪ್ರದಾಯಿಕ ಯುದ್ಧದ ಬಗ್ಗೆ ಮಾತ್ರ ಮಾತನಾಡುತ್ತಿದ್ದೇನೆ. ನಿರಂತರವಾಗಿ ಭಾರತೀಯರನ್ನು ಪ್ರಚೋದಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    2016 ರಲ್ಲಿ ಸರ್ಜಿಕಲ್ ಸ್ಟ್ರೈಕ್, 2019 ರಲ್ಲಿ ಬಾಲಾಕೋಟ್ ದಾಳಿ ಮತ್ತು ಈ ವರ್ಷದ ಏಪ್ರಿಲ್‌ನಲ್ಲಿ 26 ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಹಲವು ವರ್ಷಗಳಿಂದ ಗಡಿಯಾಚೆಯಿಂದ ಭಯೋತ್ಪಾದಕರು ನಡೆಸಿದ ದಾಳಿಗಳಿಗೆ ಭಾರತ ನಿರ್ಣಾಯಕವಾಗಿ ಪ್ರತ್ಯುತ್ತರ ನೀಡಿದೆ.

    2001 ರ ಸಂಸತ್ತಿನ ದಾಳಿಯ ನಂತರ, ಆಪರೇಷನ್ ಪರಾಕ್ರಮ್‌ ಕಾರ್ಯಾಚರಣೆ ನಡೆಯಿತು. ಭಾರತ-ಪಾಕಿಸ್ತಾನದ ಉದ್ವಿಗ್ನತೆಗಳು ಯುದ್ಧಕ್ಕೆ ಕಾರಣವಾಗಬಹುದೆಂದು ಅಮೆರಿಕವು ನಿರೀಕ್ಷಿಸಿತ್ತು. ಆಗ ಪಾಕಿಸ್ತಾನ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಿತ್ತು ಎಂದು ಕಿರಿಯಾಕೌ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: PUBLiC TV Explainer| ಅಮೆರಿಕ Vs ಚೀನಾ – ಏನಿದು ಗೋಲ್ಡ್‌ ಬಾಂಬ್‌? ವಿಶ್ವದ ಮೇಲೆ ಪರಿಣಾಮ ಏನು?

    ಪಾಕಿಸ್ತಾನದ ಪರಮಾಣು ಬಾಂಬ್ ವಿನ್ಯಾಸಗೊಳಿಸಿದ ಅಬ್ದುಲ್ ಖದೀರ್ ಖಾನ್ ಅವರನ್ನು ಅಮೆರಿಕ ನಿರ್ಮೂಲನೆ ಮಾಡಬಹುದಿತ್ತು. ಆದರೆ ಸೌದಿ ಅರೇಬಿಯಾದ ಕೋರಿಕೆಯ ಮೇರೆಗೆ ಅವರನ್ನು ಉಳಿಸಿತು ಎಂದು ಕಿರಿಯಾಕೌ ತಿಳಿಸಿದ್ದಾರೆ.

    ನಾವು ಇಸ್ರೇಲಿ ವಿಧಾನವನ್ನು ಅಳವಡಿಸಿಕೊಂಡಿದ್ದರೆ, ಅವನನ್ನು ಕೊಲ್ಲುತ್ತಿದ್ದೆವು. ಅವನು ಎಲ್ಲಿ ವಾಸಿಸುತ್ತಿದ್ದಾನೆಂಬ ಬಗ್ಗೆ ನಮಗೆ ತಿಳಿದಿತ್ತು. ಆದರೆ, ಅವನಿಗೆ ಸೌದಿ ಸರ್ಕಾರದ ಬೆಂಬಲವಿತ್ತು. ಸೌದಿಗಳು ನಮ್ಮ ಬಳಿಗೆ ಬಂದು, ‘ದಯವಿಟ್ಟು ಅವನನ್ನು ಬಿಟ್ಟುಬಿಡಿ. ನಮಗೆ ಎಕ್ಯೂ ಖಾನ್ ಇಷ್ಟ. ನಾವು ಎಕ್ಯೂ ಖಾನ್ ಜೊತೆ ಕೆಲಸ ಮಾಡುತ್ತಿದ್ದೇವೆ. ಅವನನ್ನು ಬಿಟ್ಟುಬಿಡಿ’ ಎಂದು ಕೇಳಿಕೊಂಡಿತ್ತೆಂದು ತಿಳಿಸಿದ್ದಾರೆ.

  • ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    – ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತದೊಂದಿಗೆ ಇಬ್ಬಗೆಯ ಆಟ

    ನವದೆಹಲಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಅವರ ಆಡಳಿತದ ಸಂದರ್ಭದಲ್ಲಿ ಅಮೆರಿಕ ಪಾಕಿಸ್ತಾನದ ಪರಮಾಣು ಶಸ್ತ್ರಾಗಾರದ ಮೇಲೆ ನಿಯಂತ್ರಣ ಹೊಂದಿತ್ತು ಎಂದು ಮಾಜಿ ಕೇಂದ್ರ ಗುಪ್ತಚರ ಸಂಸ್ಥೆ (CIA) ಏಜೆಂಟ್ ಜಾನ್ ಕಿರಿಯಾಕೌ (John Kiriakou) ಗಂಭೀರ ಆರೋಪ ಮಾಡಿದ್ದಾರೆ.

    CIA ಯಲ್ಲಿ ವಿಶ್ಲೇಷಕರಾಗಿ, ನಂತರ ಭಯೋತ್ಪಾದನಾ ನಿಗ್ರಹ ಘಟಕದಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ ಜಾನ್ ಕಿರಿಯಾಕೌ, ಪರ್ವೇಜ್ ಮುಷರಫ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಒಂದು ಕಾಲದಲ್ಲಿ ಪರ್ವೇಜ್ ಮುಷರಫ್‌ ಸರ್ಕಾರವನ್ನ ಖರೀದಿಸಲು ಅಮೆರಿಕ ಹೇಗೆ ಪಾಕಿಸ್ತಾನಕ್ಕೆ ಲಕ್ಷಾಂತರ ರೂಪಾಯಿ ನೆರವು ನೀಡಿತ್ತು ಅನ್ನೋ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅಲ್ಲದೇ ಪಾಕಿಸ್ತಾನವು (Pakistan) ಭ್ರಷ್ಟಾಚಾರದ ಅಡಿಯಲ್ಲಿ ಹೂತುಹೋಗಿದೆ. ಅಲ್ಲಿನ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರಂತಹ ನಾಯಕರು ವಿದೇಶಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರೆ, ಇತ್ತ ದೇಶದ ಸಾಮಾನ್ಯ ನಾಗರಿಕರು ಬಳಲುತ್ತಿದ್ದರು ಎಂದು ಬೇಸರ ಹೊರಹಾಕಿದ್ದಾರೆ.

    ನಾನು 2002 ರಲ್ಲಿ ಪಾಕಿಸ್ತಾನದಲ್ಲಿದ್ದಾಗ ಅಮೆರಿಕದ ಪೆಂಟಗನ್ ಪಾಕಿಸ್ತಾನದ ಪರಮಾಣು ಶಸ್ತ್ರಾಗಾರವನ್ನ ನಿಯಂತ್ರಿಸುತ್ತಿದೆ ಎಂದು ನನಗೆ ಅನಧಿಕೃತ ಮೂಲಗಳಿಂದ ಗೊತ್ತಾಯಿತು. ಆದರೆ ಇತ್ತೀಚಿನ ವರ್ಷಗಳಲ್ಲಿ, ಪಾಕಿಸ್ತಾನಿಯರು ಇದನ್ನ ನಿರಾಕರಿಸಿದ್ದಾರೆ. ಪಾಕಿಸ್ತಾನಿ ಜನರಲ್‌ಗಳು ನಿಯಂತ್ರಣದಲ್ಲಿದ್ದರೆ, ರಾಜಕೀಯವಾಗಿ ಯಾರು ಉಸ್ತುವಾರಿ ವಹಿಸುತ್ತಾರೆ ಎಂಬುದರ ಬಗ್ಗೆ ನನಗೆ ತುಂಬಾ ಚಿಂತೆಯಾಗುತ್ತದೆ ಎಂದು ಖಾಸಗಿ ಸಂದರ್ಶನದಲ್ಲಿ ತಿಳಿಸಿದ್ದಾರೆ.

    ಮುಷರಫ್ ಸರ್ಕಾರದೊಂದಿಗೆ ಅಮೆರಿಕವು ಉತ್ತಮ ಸಂಬಂಧ ಹೊಂದಿತ್ತು. ಆ ಸಂದರ್ಭದಲ್ಲಿ ನಮ್ಮ ಸಂಬಂಧಗಳೂ ಕೂಡ ಪಾಕ್‌ ಸರ್ಕಾರದೊಂದಿಗೆ ಚೆನ್ನಾಗಿತ್ತು. ಆದ್ರೆ ಅಮೆರಿಕ ಸರ್ವಾಧಿಕಾರಿಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತದೆ. ಏಕೆಂದ್ರೆ ಆಗ ನೀವು ಜನಾಭಿಪ್ರಾಯದ ಬಗ್ಗೆ ಚಿಂತಿಸಬೇಕಾಗಿಲ್ಲ, ಮಾಧ್ಯಮಗಳಿಗೂ ಹೆದರಬೇಕಿಲ್ಲ. ಆದ್ದರಿಂದ ಅಮೆರಿಕ ಮುಷರಫ್‌ ಅವರನ್ನ ಖರೀದಿ ಮಾಡಿತ್ತು. ಜೊತೆಗೆ ತನ್ನ ಭದ್ರತಾ ಆದ್ಯತೆಗಳನ್ನ ಖಚಿತಪಡಿಸಿಕೊಳ್ಳಲು ಪಾಕಿಸ್ತಾನದ ಪರಮಾಣು ಶಸ್ತ್ರಗಾರದ ಮೇಲೆ ಹಿಡಿತ ಸಾಧಿಸಿತು ಅಂತ ಹೇಳಿದ್ದಾರೆ.

    ಮಿಲಿಟರಿ ಹಾಗೂ ಆರ್ಥಿಕವಾಗಿಯೂ ಅಮೆರಿಕ ಪಾಕಿಸ್ತಾನಕ್ಕೆ ಮಿಲಿಯನ್‌ ಡಾಲರ್‌ಗಟ್ಟಲೇ ಸಹಾಯ ನೀಡಿತು. ಆಗ ಮುಷರಫ್ ಪೆಂಟಗನ್‌ಗೆ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಅಧಿಕಾರ ನೀಡಿದರು.

    ಭಾರತದ ವಿರುದ್ಧ ಉಗ್ರ ಕೃತ್ಯಕ್ಕೂ ಸಾಥ್‌
    ಮುಂದುವರಿದು ಮಾತನಾಡಿದ ಕಿರಿಯಾಕೌ, ಭಾರತದ ವಿರುದ್ಧ ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸುವ ವಿಚಾರದಲ್ಲಿ ಅವರು ಇಬ್ಬಗೆಯ ನೀತಿ ಹೊಂದಿದ್ದರು. ಒಂದು ಕಡೆ ಭಾರತದ ಬಗ್ಗೆ ಕಾಳಜಿ ವಹಿಸಿದಂತೆ ನಡೆದುಕೊಳ್ಳುತ್ತಿದ್ದರು. ಮತ್ತೊಂದು ಕಡೆ ಪಾಕ್‌ ಸೈನ್ಯ ಹಾಗೂ ಕೆಲವು ಉಗ್ರರನ್ನ ತೃಪ್ತಿಪಡಿಸಲು ಭಾರತದ ವಿರುದ್ಧದ ಭಯೋತ್ಪಾದನೆ ಕೃತ್ಯಗಳಿಗೆ ಸಾಥ್‌ ನೀಡುತ್ತಿದ್ದರು. ಈ ವಿಚಾರದಲ್ಲಿ ಅಮೆರಿಕನ್ನರೊಂದಿಗೆ ಸಹಕರಿಸುತ್ತಿರುವುದಾಗಿಯೂ ನಟಿಸುತ್ತಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ನವದೆಹಲಿ: ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಸೇನೆಯ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ (Human Rights Violation) ಎಂದು ಭಾರತ (India) ಖಂಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ (Parvathaneni Harish), ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಕ್ರೌರ್ಯವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.

    80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕೆಂದು ನಾವು ಪಾಕಿಸ್ತಾನವನ್ನು ಒತ್ತಾಯಿಸುತ್ತೇವೆ. ಪಾಕಿಸ್ತಾನದ ಮಿಲಿಟರಿ ಆಕ್ರಮಣ, ದಬ್ಬಾಳಿಕೆ, ಕ್ರೂರತೆ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆಯ ವಿರುದ್ಧ ಜನಸಂಖ್ಯೆಯು ಬಹಿರಂಗ ದಂಗೆಯಲ್ಲಿ ತೊಡಗಿದೆ ಎಂದರು. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    ಜಮ್ಮು ಮತ್ತು ಕಾಶ್ಮೀರವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿ ಉಳಿಯುತ್ತದೆ ಮತ್ತು ಇಲ್ಲಿನ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಆನಂದಿಸುತ್ತಾರೆ. ಅಂತಹ ಸ್ವಾತಂತ್ರ‍್ಯಗಳು ಪಾಕಿಸ್ತಾನದಲ್ಲಿ ಪರಕೀಯ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

    ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಕಾಲ-ಪರೀಕ್ಷಿತ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಅನುಸಾರವಾಗಿ ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಾರೆ. ಇವು ಪಾಕಿಸ್ತಾನಕ್ಕೆ ಅನ್ಯವಾದ ಪರಿಕಲ್ಪನೆಗಳು ಎಂದು ನಮಗೆ ತಿಳಿದಿದೆ ಎಂದರು. ಇದನ್ನೂ ಓದಿ: ‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ – ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ಗುಂಡು ಹಾರಿಸಿದ ನಂತರ ಹಲವಾರು ನಾಗರಿಕರು ಸಾವನ್ನಪ್ಪಿದರು. ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ನಂತರ ಅಶಾಂತಿ ಭುಗಿಲೆದ್ದಿತು. ಜಂಟಿ ಅವಾಮಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು. ಮಾರುಕಟ್ಟೆಗಳು, ಅಂಗಡಿಗಳು ಮತ್ತು ಸಾರಿಗೆ ಸೇವೆಗಳು ಹಲವಾರು ದಿನಗಳವರೆಗೆ ಈ ಪ್ರದೇಶದಾದ್ಯಂತ ಮುಚ್ಚಲ್ಪಟ್ಟವು. ಇದನ್ನೂ ಓದಿ: ಪರೀಕ್ಷೆಯಲ್ಲಿ ಕಳಪೆ ಅಂಕ ಬಂತೆಂದು MBBS ವಿದ್ಯಾರ್ಥಿನಿ ಆತ್ಮಹತ್ಯೆ