Tag: INDIA alliance

  • ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ

    ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ

    ನವದೆಹಲಿ: ಹರಿಯಾಣ, ಮಹಾರಾಷ್ಟ್ರ ಚುನಾವಣೆಯಲ್ಲಿ ಸೋಲಿನ ಬಳಿಕ ಇಂಡಿಯಾ (INDIA) ಒಕ್ಕೂಟದಲ್ಲಿ ಬಿರುಕು ಮೂಡಿದೆ. ಇಂಡಿಯಾ ಒಕ್ಕೂಟದ ನಾಯಕತ್ವ ಬದಲಾಗಬೇಕು ಎಂದು ಸಮಾಜವಾದಿ ಪಕ್ಷ ಆಗ್ರಹಿಸಿದರೆ, ಕಾಂಗ್ರೆಸ್ (Congress) ಇದನ್ನು ವಿರೋಧಿಸಿದೆ. ಇತ್ತ ಒಕ್ಕೂಟದ ಶಿಲ್ಪಿ ನಾವು ಎಂದು ಆರ್‌ಜೆಡಿ (RJD) ಪ್ರತಿಪಾದಿಸಿದೆ.

    ಸಮಾಜವಾದಿ ಪಕ್ಷ ಮತ್ತು ಸಿಪಿಐ ಮೈತ್ರಿಕೂಟದಲ್ಲಿ ತಮ್ಮ ಪಾತ್ರ ಹೆಚ್ಚಿಸುವ ಹೇಳಿಕೆ ನೀಡಿದ ಬೆನ್ನಲ್ಲೇ ಈ ಹೇಳಿಕೆಗಳು ಬಂದಿವೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಉದಯವೀರ್ ಸಿಂಗ್, ಇಂಡಿಯಾ ಬಣವು ಬ್ಯಾನರ್ಜಿಯವರ ಸಲಹೆಯನ್ನು ಚರ್ಚಿಸಬೇಕು ಮತ್ತು ಟಿಎಂಸಿ ವರಿಷ್ಠರಿಗೆ 100% ಬೆಂಬಲ ಮತ್ತು ಸಹಕಾರ ವಿಸ್ತರಿಸಬೇಕು ಎಂದು ಹೇಳಿದ್ದರು.ಇದನ್ನೂ ಓದಿ: ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಮಿತ್ ಶಾ ವಿಫಲವಾಗಿದ್ದಾರೆ: ಕೇಜ್ರಿವಾಲ್ ಆರೋಪ

    ಮಮತಾ ಬ್ಯಾನರ್ಜಿ ಅವರಿಗೆ ಒಕ್ಕೂಟ ಮುನ್ನಡೆಸುವ ಆಸೆ ವ್ಯಕ್ತಪಡಿಸಿದ್ದರೆ, ಮೈತ್ರಿಕೂಟದ ನಾಯಕರು ಅದನ್ನು ಪರಿಗಣಿಸಿ ಅವರಿಗೆ ಬೆಂಬಲ ನೀಡಬೇಕು. ಇದು ಮೈತ್ರಿಯನ್ನು ಬಲಪಡಿಸುತ್ತದೆ. ಬಂಗಾಳದಲ್ಲಿ ಬಿಜೆಪಿಯನ್ನು ನಿಲ್ಲಿಸುವಲ್ಲಿ ಮಮತಾ ಬ್ಯಾನರ್ಜಿ ಮುಂದಾಳತ್ವ ವಹಿಸಿದರು. ಅವರ ಬಗ್ಗೆ ನಮಗೆ ಗೌರವ ಇದೆ ಎಂದು ಉದಯವೀರ್ ಸಿಂಗ್ ಹೇಳಿದ್ದಾರೆ.

    ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳಲ್ಲಿ ತನ್ನ ಮಿತ್ರಪಕ್ಷಗಳಿಗೆ ಅವಕಾಶ ನೀಡದ ಕಾಂಗ್ರೆಸ್‌ನ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅಸಮಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಯಲ್ಲಿ ಮೈತ್ರಿಕೂಟದ ಪಾಲುದಾರರಿಗೆ ಅವಕಾಶ ನೀಡಲಿಲ್ಲ. ಕಾಂಗ್ರೆಸ್ ಇಂಡಿಯಾ ಬ್ಲಾಕ್ ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ಹೇಳಿದರು.

    ಲಾಲು ಪ್ರಸಾದ್ ಯಾದವ್ ಅವರ ಉಪಕ್ರಮದ ಮೇರೆಗೆ ಪ್ರತಿಪಕ್ಷಗಳ ಮೈತ್ರಿಕೂಟದ ಮೊದಲ ಸಭೆ ಪಾಟ್ನಾದಲ್ಲಿ ನಡೆಯಿತು ಎಂದು ಆರ್‌ಜೆಡಿಯ ಮೃತ್ಯುಂಜಯ ತಿವಾರಿ ಪ್ರತಿಪಾದಿಸಿದರು. ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮೈತ್ರಿಯ ನಿಜವಾದ ಶಿಲ್ಪಿ ಲಾಲು ಪ್ರಸಾದ್ ಯಾದವ್. ಎಲ್ಲರೂ ತಮ್ಮ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ತೊಡಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಪ್ರಬಲವಾಗಿ ಹೋರಾಡುತ್ತಿದ್ದಾರೆ. 2025ರಲ್ಲಿ ಬಿಹಾರದ ಸರದಿ ಎಂದರು.

    ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಇಂಡಿಯಾ ಒಕ್ಕೂಟದಲ್ಲಿನ ಬಿರುಕು ಗೋಚರಿಸಿತು. ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಿಂದ ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೂರವಿದ್ದವು. ಹೀಗಾಗೀ ಒಕ್ಕೂಟದಲ್ಲಿ ನಾಯಕತ್ವಕ್ಕಾಗಿ ಹೋರಾಟ ಶುರುವಾಗಿದೆ.ಇದನ್ನೂ ಓದಿ: Namma Metro | ಒಂದೇ ದಿನ ದಾಖಲೆಯ 9.20 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚಾರ

  • Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ (Assembly Bypoll Result) ಪ್ರಕಟವಾಗಿದ್ದು, ಇಂಡಿಯಾ ಒಕ್ಕೂಟ (INDIA Alliance) 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ರೆ ಆಡಳಿತ ಪಕ್ಷದ ಭಾಗವಾಗಿರುವ ಬಿಜೆಪಿ (BJP) ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಒಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ.

    ಪಶ್ಚಿಮ ಬಂಗಾಳದ (West Bengal) 4, ಹಿಮಾಚಲ ಪ್ರದೇಶದ 3, ಉತ್ತರಾಖಂಡದ 2 ಹಾಗೂ ಪಂಜಾಬ್‌, ಮಧ್ಯಪ್ರದೇಶ, ಬಿಹಾರ ತಮಿಳುನಾಡಿನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಪೈಕಿ ಇಂಡಿಯಾ ಒಕ್ಕೂಟ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್‌, ಟಿಎಂಸಿ, ಆಮ್‌ ಆದ್ಮಿ ಪಕ್ಷ ಹಾಗೂ ದ್ರಾವೀಡ ಮುನ್ನೇತ್ರ ಕಳಗಂ (DMK) ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

    ಈ ಪೈಕಿ ಪಶ್ಚಿಮ ಬಂಗಾಳದ ನಾಲ್ಕು ಸ್ಥಾನಗಳು ಟಿಎಂಸಿ ಪಾಲಾಗಿವೆ. ಹಿಮಾಚಲ ಪ್ರದೇಶದ (Himachala Pradesh) ಮೂರು ಸ್ಥಾನಗಳ ಪೈಕಿ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಅಲ್ಲದೇ ಉತ್ತರಾಖಂಡದ ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದೆ. ಪಂಜಾಬ್‌ ಕ್ಷೇತ್ರ ಎಎಪಿ ಪಾಲಾದರೆ, ತಮಿಳುನಾಡಿನ ಒಂದು ಕ್ಷೇತ್ರ ಡಿಎಂಕೆ ಗೆದ್ದುಕೊಂಡಿದೆ. ಇದನ್ನೂ ಓದಿ: ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ಬಿಜೆಪಿಗೆ 2 ಸ್ಥಾನ:
    2024ರ ಲೋಕಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ವಿಧಾನಸಭಾ ಉಪಚುನಾವಣೆಯಲ್ಲಿ ಕೇವಲ 2 ಕ್ಷೇತ್ರಗಳನ್ನು ಮಾತ್ರ ಗೆದ್ದುಕೊಂಡಿದೆ. ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: 200 ಅಡಿ ಆಳದ ಕಮರಿಗೆ ಉರುಳಿದ ಬಸ್ – ಇಬ್ಬರು ಸಾವು, 25 ಮಂದಿಗೆ ಗಾಯ

    ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ:
    ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಡಿಎಂಕೆ ಪಕ್ಷದ ಅಣ್ಣಿಯೂರ್‌ ಶಿವ ಅವರು ಸುಮಾರು 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನೂ ಪಂಜಾಬ್‌ನಲ್ಲಿ ಆಪ್‌ನ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳ ಅಂತರದಿಂದ ಗೆದ್ದಿದ್ದರೆ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಡೆಹ್ರಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಭಾಗಗಳಲ್ಲಿ ಟೆಲಿಕಾಂ ಸಂಪರ್ಕ ಸುಧಾರಣೆಗೆ ‘ಡಿಜಿಟಲ್‌ ಭಾರತ್‌ ನಿಧಿ’ – ಏನಿದು ಯೋಜನೆ?

  • Assembly Bypolls: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು – ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಮುನ್ನಡೆ!

    Assembly Bypolls: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು – ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಮುನ್ನಡೆ!

    – ಆಡಳಿತ ಎನ್‌ಡಿಎ ಕೂಟಕ್ಕೆ ಭಾರೀ ಹಿನ್ನಡೆ

    ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶವಿಂದು (Assembly ByPoll Result) ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಗೆಲುವು (INDIA Alliance) ಸಾಧಿಸಿದ್ದು, 7 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

    13 ಕ್ಷೇತ್ರಗಳ ಪೈಕಿ ಈಗಾಗಲೇ ಹಲವು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್‌ 2ರಲ್ಲಿ ಗೆಲುವು ಸಾಧಿಸಿದ್ದು 2 ಸ್ಥಾನಗಳಲ್ಲಿ ಮುಂದಿದೆ. ಟಿಎಂಸಿ (TMC) 3 ಸ್ಥಾನ ಗೆದ್ದಿದ್ದು, 1 ಕ್ಷೇತ್ರದಲ್ಲಿ ಮುಂದಿದೆ. ಪಶ್ಚಿಮ ಜಾರ್ಜಂಡ್‌ ಕ್ಷೇತ್ರವನ್ನು ಆಪ್‌ (AAP) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿದ್ದು, ಉಳಿದ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ತಮಿಳುನಾಡಿನ ಒಂದು ಕ್ಷೇತ್ರದಲ್ಲಿ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಇದನ್ನೂ ಓದಿ: ʻಮಹಾʼ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!

    ಪಂಜಾಬ್‌ನಲ್ಲಿ ಆಪ್‌ನ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಕಂಡಿದ್ದು, ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿದಿದೆ. ಇಂಡಿಯಾ ಮೈತ್ರಿಕೂಟ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ಇದನ್ನೂ ಓದಿ: ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್, ಡೆಹ್ರಾ ಕ್ಷೇತ್ರದಿಂದ ಗೆದ್ದಿದ್ದಾರೆ. ಮತ್ತೊಂದು ಕ್ಷೇತ್ರ ನಲಗಢದಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಮುನ್ನಡೆ ಕಾಯ್ದುಕೊಂಡಿದ್ದಾರೆ.

  • ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

    ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

    ನವದೆಹಲಿ: ಆಪ್ ನಾಯಕಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಇಂಡಿಯಾ (INDIA) ಒಕ್ಕೂಟದ ಪ್ರಮುಖ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಖುದ್ದು ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ನಾನು ಕಳೆದ 18 ವರ್ಷಗಳಿಂದ ತಳಹಂತದಲ್ಲಿ ಜನರ ನಡುವೆ ಕೆಲಸ ಮಾಡಿದ್ದೇನೆ. ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳಾ ಆಯೋಗದಲ್ಲಿ 1.7 ಲಕ್ಷ ಪ್ರಕರಣಗಳನ್ನು ಆಲಿಸಿದ್ದೇನೆ. ಮಹಿಳಾ ಆಯೋಗವನ್ನು ಅತ್ಯಂತ ಉನ್ನತ ಸ್ಥಾನಕ್ಕೆ ಏರಿಸಿದೆ. ಮುಂದೆಯೂ ನಾನು ಯಾರಿಗೂ ಹೆದರುವುದಿಲ್ಲ, ಯಾರ ಮುಂದೆಯೂ ತಲೆಬಾಗುವುದಿಲ್ಲ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

    ಆದರೆ ನನಗೆ ಮುಖ್ಯಮಂತ್ರಿಗಳ ಮನೆಯಲ್ಲಿ ಮೊದಲು ಕೆಟ್ಟದಾಗಿ ಥಳಿಸಲಾಯಿತು. ನಂತರ ನನ್ನ ಚಾರಿತ್ರ್ಯಹರಣ ಮಾಡಿರುವುದು ತುಂಬಾ ದುಃಖಕರವಾಗಿದೆ. ಇಂದು ನಾನು ಈ ವಿಷಯದ ಬಗ್ಗೆ ಮಾತನಾಡಲು ಇಂಡಿಯಾ ಒಕ್ಕೂಟದ ಎಲ್ಲಾ ದೊಡ್ಡ ನಾಯಕರಿಗೆ ಪತ್ರ ಬರೆದಿದ್ದೇನೆ. ನಾನು ಎಲ್ಲರಿಗೂ ಭೇಟಿಗೆ ಸಮಯ ಕೇಳಿದ್ದೇನೆ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ: ರಚಿತಾ ರಾಮ್

    ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಆಪ್ತ ಸಹಾಯಕ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಸ್ವಾತಿ ಮಲಿವಾಲ್ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ದೆಹಲಿ ಪೊಲೀಸರು ಬಿಭವ್ ಕುಮಾರ್ ಬಂಧಿಸಿದ್ದು, ನ್ಯಾಯಂಗ ಬಂಧನಕ್ಕೆ ನೀಡಿದ್ದಾರೆ. ಈ ನಡುವೆ ಆಪ್ ನಾಯಕರು ಸ್ವಾತಿ ಮಲಿವಾಲ್ ವಿರುದ್ಧ ತಿರುಗಿ ಬಿದಿದ್ದಾರೆ. ಇದನ್ನೂ ಓದಿ: ರೀಲ್ಸ್‌ಗಾಗಿ ಡ್ರೈವಿಂಗ್ ಮಾಡಲು ಹೋಗಿ ಆಕ್ಸಿಲರೇಟರ್ ಒತ್ತಿದ ಯುವತಿ- ಮುಂದೇನಾಯ್ತು..?

  • ಭಾರತದ ಮಹಾ ತೀರ್ಪಿಗೆ ಕ್ಷಣಗಣನೆ- ಮಹಾಫಲಿತಾಂಶಕ್ಕೆ ಕಾಯುತ್ತಿದೆ ಜಗತ್ತು 

    ಭಾರತದ ಮಹಾ ತೀರ್ಪಿಗೆ ಕ್ಷಣಗಣನೆ- ಮಹಾಫಲಿತಾಂಶಕ್ಕೆ ಕಾಯುತ್ತಿದೆ ಜಗತ್ತು 

    ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ (Loksabha Election Result 2024) ಇದೀಗ ಕ್ಷಣಗಣನೆ ಆರಂಭವಾಗಿದೆ. 7 ಹಂತಗಳಲ್ಲಿ ನಡೆದ ಚುನಾವಣಾ ಹಬ್ಬದ ಮಹಾ ಫಲಿತಾಂಶಕ್ಕಾಗಿ ಇಡೀ ಜಗತ್ತೇ ತುದಿಗಾಲಲ್ಲಿ ನಿಂತಿದೆ.
    ಮತ ಎಣಿಕೆಗೆ ಅಂತಿಮ ಹಂತದ ಸಿದ್ದತೆಗಳು ಎಲ್ಲಾ ಕಡೆ ಮುಗಿದಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮೊದಲಿಗೆ ಅಂಚೆ ಮತಗಳು ಮತ್ತು ಹಿರಿಯ ಮತದಾರರ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಅರ್ಧ ಗಂಟೆ ನಂತರ ಇವಿಎಂ ಮತಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನದ ಹೊತ್ತಿಗೆ ನಿಖರ ಟ್ರೆಂಡ್ ಗೊತ್ತಾಗುವ ನಿರೀಕ್ಷೆ ಇದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಮತ ಎಣಿಕೆ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ, ಬೆಂಗಳೂರು ಉತ್ತರ ಕ್ಷೇತ್ರದ ಮತ ಎಣಿಕೆ ಸೆಂಟ್ ಜೋಸೆಫ್ ಕಾಲೇಜಿಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಮತ ಎಣಿಕೆ ಜಯನಗರದ ಎಸ್‍ಎಸ್‍ಎಂಆರ್‍ವಿ ಕಾಲೇಜಿನಲ್ಲಿ ನಡೆಯಲಿದೆ.
    ಬೆಂಗಳೂರು ಗ್ರಾಮಾಂತರದ ಮತ ಎಣಿಕೆ ರಾಮನಗರದಲ್ಲಿ, ಬೆಳಗಾವಿ ಮತ ಎಣಿಕೆ ಬೆಳಗಾವಿಯಲ್ಲಿ, ಚಿಕ್ಕೋಡಿ ಮತ ಎಣಿಕೆ ಚಿಕ್ಕೋಡಿಯಲ್ಲಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮತ ಎಣಿಕೆ ಉಡುಪಿಯಲ್ಲಿ, ಮೈಸೂರು-ಮಡಿಕೇರಿ ಕ್ಷೇತ್ರದ ಮತ ಎಣಿಕೆ ಮೈಸೂರಿನಲ್ಲಿ ಇನ್ನುಳಿದಂತೆ ಆಯಾ ಕ್ಷೇತ್ರಗಳ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದೇ ವೇಳೆ, ಸುರಪುರ ವಿಧಾನಸಭೆ ಉಪ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟ ಆಗಲಿದೆ.
    ಈಗಾಗಲೇ ಎಕ್ಸಿಟ್ ಪೋಲ್‍ಗಳಲ್ಲಿ ಎನ್‍ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಅಂತ ಹೇಳುತ್ತಿದ್ದರೂ, ಐಎನ್‍ಡಿಐಎ ಮೈತ್ರಿಕೂಟದ ಉತ್ಸಾಹವೇನೂ ಕುಗ್ಗಿಲ್ಲ. ಪ್ರಧಾನಿ ನರೇಂದ್ರ ಮೋದಿ, ಹ್ಯಾಟ್ರಿಕ್ ರಾಜ್ಯಭಾರದ ನಿರೀಕ್ಷೆಯಲ್ಲಿದ್ದಾರೆ. 27 ಪಕ್ಷಗಳ ಮೈತ್ರಿಕೂಟ ಕಟ್ಟಿಕೊಂಡಿರೋ ಇಂಡಿ ಒಕ್ಕೂಟ ಕೂಡ ಅಧಿಕಾರದ ಹಿಡಿಯುವ ನಂಬಿಕೆಯಲ್ಲಿದೆ.
    ಇದೇ ಹೊತ್ತಲ್ಲಿ ಸೋಮವಾರ ಕೇಂದ್ರ ಚುನಾವಣಾ ಆಯೋಗ ವಿಶೇಷ ಸುದ್ದಿಗೋಷ್ಠಿ ನಡೆಸಿದೆ. ಚುನಾವಣೆ ಮುಗಿಯುವ ಹೊತ್ತಲ್ಲಿ ಚುನಾವಣಾ ಆಯೋಗ ಹೀಗೆ ಸುದ್ದಿಗೋಷ್ಠಿ ನಡೆಸಿರೋದು ದೇಶದ ಚುನಾವಣಾ ಇತಿಹಾಸದಲ್ಲಿಯೇ ಇದೇ ಮೊದಲು.. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದ್ದೇವೆ ಎಂದು ವಿವರ ನೀಡಿದ್ರು.
    ಮತ ಹಬ್ಬದ ವಿಶೇಷ: 96.88 ಕೋಟಿ ಮತದಾರರ ಪೈಕಿ 64.2 ಕೋಟಿ ಮಂದಿ ಮತದಾನ ಮಾಡಿದ್ದಾರೆ. 31.2 ಕೋಟಿ ಮಹಿಳಾ ಮತದಾರರು ಮತದಾನ ಮಾಡಿದ್ದಾರೆ. 10.5 ಲಕ್ಷ ಮತಗಟ್ಟೆಗಳಲ್ಲಿ 1.5 ಕೋಟಿ ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. 135 ಪ್ರತ್ಯೇಕ ರೈಲು ಸೇರಿ 4 ಲಕ್ಷ ವಾಹನಗಳ ಬಳಕೆ ಮಾಡಲಾಗಿದೆ. 27 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಮರುಮತದಾನ ನಡೆದಿಲ್ಲ. ಈ ಬಾರಿ ಕೇವಲ 39 ಕಡೆ ಮಾತ್ರ ಮರುಮತದಾನ ನಡೆದಿದೆ.
    2019ರಲ್ಲಿ 540 ಮತಗಟ್ಟೆಗಳಲ್ಲಿ ಮರುಮತದಾನ ನಡೆದಿತ್ತು. ಕಳೆದ ನಾಲ್ಕು ದಶಕಕ್ಕೆ ಹೋಲಿಸಿದ್ರೆ ಜಮ್ಮು ಕಾಶ್ಮೀರದಲ್ಲಿ ಅತ್ಯಧಿಕ ಮತದಾನವಾಗಿದೆ. (ಜಮ್ಮು ಕಾಶ್ಮೀರದಲ್ಲಿ 58.58ರಷ್ಟು ಮತದಾನ.. ಕಣಿವೆಯಲ್ಲಿ 51.05ರಷ್ಟು ಮತದಾನ). ಹಿಂಸಾಚಾರಪೀಡಿತ ಮಣಿಪುರದಲ್ಲಿಯೂ 61.84%ರಷ್ಟು ಮತದಾನ ನಡೆದಿದೆ. ನಗದು ಪ್ರವಾಹಕ್ಕೆ ಆಯೋಗ ತಡೆ ನೀಡಿದ್ದು, 10 ಸಾವಿರ ಕೋಟಿ ಮೌಲ್ಯದ (4391 ಕೋಟಿ ಮೌಲ್ಯದ ಡ್ರಗ್ಸ್, 1054 ಕೊಟಿ ನಗದು.. 898 ಕೋಟಿ ಮೌಲ್ಯದ ಮದ್ಯ, 1459 ಕೋಟಿ ಮೌಲ್ಯದ ಚಿನ್ನಾಭರಣ..2198 ಕೋಟಿ ಮೌಲ್ಯದ ಗಿಫ್ಟ್) ವಸ್ತುಗಳು ಸೀಜ್ ಆಗಿದೆ.
    2019ರಲ್ಲಿ 3500 ಕೋಟಿ ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿತ್ತು. ಸಿ-ವಿಜಿಲ್ ಆಪ್ ಮೂಲಕ 4.56 ಲಕ್ಷ ದೂರು ಸ್ವೀಕಾರ.. 99.9% ದೂರುಗಳಿಗೆ ಪರಿಹಾರ ನೀಡಲಾಗಿದೆ. ಮತದಾನ ದಿನಗಳಲ್ಲಿ ಚುನಾವಣೆ ಬಗ್ಗೆ 62 ಕೋಟಿ ಜನ ಗೂಗಲ್ ಸರ್ಚ್ ಮಾಡಿದ್ದಾರೆ.
  • ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

    ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

    ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಇಂಡಿಯಾ (INDIA) ಒಕ್ಕೂಟ ಗೆಲುವು ಸಾಧಿಸಿದರೆ ಫಲಿತಾಂಶದ ಮರುದಿನವೇ ನಾನು ಜೈಲಿನಿಂದ ಹೊರಬರುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದರು. ತಿಹಾರ್‌ನಲ್ಲಿರುವ ನನ್ನ ಸೆಲ್‌ನಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳಿದ್ದವು. ಆ ವಿಡಿಯೋಗಳನ್ನು 13 ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದರು. ಸಿಸಿಟಿವಿ ವಿಡಿಯೋಗಳನ್ನು ಪ್ರಧಾನಮಂತ್ರಿ ಕಚೇರಿಗೆ ನೀಡಲಾಗಿದೆ. ಮೋದಿ ಅವರು ನನ್ನ ಮೇಲೆ ನಿಗಾ ಇಡುತ್ತಿದ್ದಾರೆ. ಮೋದಿಯವರಿಗೆ ನನ್ನ ಮೇಲೆ ಯಾವ ದ್ವೇಷವಿದೆ ಗೊತ್ತಿಲ್ಲ ಎಂದು ಕೇಜ್ರಿವಾಲ್ ದೂರಿದರು. ಇದನ್ನೂ ಓದಿ:  ಭದ್ರತಾ ಪಡೆಗಳಿಂದ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ

    ಪ್ರಧಾನಿ ಮೋದಿ (Narendra Modi) ಕೇಜ್ರಿವಾಲ್ ಖಿನ್ನತೆಗೆ ಒಳಗಾಗಿದ್ದಾರಾ ಇಲ್ಲವಾ ಎಂದು ನೋಡಲು ಬಯಸಿದ್ದರು. ಕೇಜ್ರಿವಾಲ್ ಖಿನ್ನತೆಗೆ ಒಳಗಾಗಿಲ್ಲ. ನನಗೆ ಭಗವಾನ್ ಹನುಮಂತನ ಆಶೀರ್ವಾದವಿದೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಕೇಜ್ರಿವಾಲ್ ಈ ರೀತಿ ಒಡೆದು ಹೋಗುತ್ತಾನೆ ಎಂದು ಅವರು ಭಾವಿಸುತ್ತಾರೆ. ಆದರೆ ಅದು ಆಗುವುದಿಲ್ಲ ಎಂದರು. ಇದನ್ನೂ ಓದಿ: ಸಂತ್ರಸ್ತೆಯ ಅಪಹರಣ ಕೇಸ್- ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು

    ಜೂನ್ 2 ರಂದು ತಿಹಾರ್ ಜೈಲಿಗೆ ಹೋಗುತ್ತೇನೆ. ನಾನು ಜೂನ್ 4 ರಂದು ಜೈಲಿನೊಳಗೆ ಚುನಾವಣಾ ಫಲಿತಾಂಶಗಳನ್ನು ನೋಡುತ್ತೇನೆ. ನಾನು ಕಷ್ಟಪಟ್ಟು ಕೆಲಸ ಮಾಡಿದರೆ, ಇಂಡಿಯಾ ಬ್ಲಾಕ್ ಗೆದ್ದರೆ ನಾನು ಮತ್ತೆ ಜೂನ್ 5 ರಂದು ಹೊರಬರುತ್ತೇನೆ. ಆದರೆ ನಾವು ಈಗ ಕಷ್ಟಪಟ್ಟು ಕೆಲಸ ಮಾಡದಿದ್ದರೆ ನಾವು ಯಾವಾಗ ಮತ್ತೆ ಭೇಟಿಯಾಗಬಹುದು ಎಂದು ನನಗೆ ತಿಳಿದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ

    ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಚುನಾವಣಾ ಪ್ರಚಾರಗಳನ್ನು ನಡೆಸುತ್ತಿದ್ದಾರೆ. ಜೂನ್ 1 ರಂದು ಅವರ ಜಾಮೀನು ಅವಧಿ ಅಂತ್ಯವಾಗಲಿದ್ದು, ಜೂನ್ 2 ರಂದು ಜೈಲಿಗೆ ಮರಳಬೇಕಿದೆ. ಇದನ್ನೂ ಓದಿ: ರಾಹುಲ್‌ ಜೊತೆ ಸಂವಾದಕ್ಕೆ BJYM ಉಪಾಧ್ಯಕ್ಷ ಅಭಿನವ್‌ ಪ್ರಕಾಶ್‌ ಕಳುಹಿಸುತ್ತೇವೆ : ತೇಜಸ್ವಿ ಸೂರ್ಯ ಕೌಂಟರ್‌

  • ರಾಹುಲ್‌ ಗಾಂಧಿಗೆ ಅನಾರೋಗ್ಯ – ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಗೈರು

    ರಾಹುಲ್‌ ಗಾಂಧಿಗೆ ಅನಾರೋಗ್ಯ – ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಗೈರು

    ನವದೆಹಲಿ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi) ಅನಾರೋಗ್ಯದ ಕಾರಣ ಇಂದು (ಭಾನುವಾರ) ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ‍್ಯಾಲಿಗೆ ಗೈರಾಗಿದ್ದಾರೆ.

    ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್‌ನ ರಾಂಚಿಯಲ್ಲಿ ವಿಪಕ್ಷಗಳ ಮೈತ್ರಿಕೂಟದ ಮೆಗಾ ರ‍್ಯಾಲಿಯಲ್ಲಿ ಭಾಗವಹಿಸಿ ರಾಹುಲ್‌ ಗಾಂಧಿ ಪ್ರಚಾರ ನಡೆಸಬೇಕಿತ್ತು. ಆದರೆ ಅನಾರೋಗ್ಯದಿಂದ ಗೈರಾಗಿದ್ದಾರೆ ಎಂದು ಕಾಂಗ್ರೆಸ್‌ನ (Congress) ಜೈರಾಮ್‌ ರಮೇಶ್‌ ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡ್‌ನಲ್ಲಿ ರಾಹುಲ್‌ಗೆ ಬಿಗ್‌ ಶಾಕ್‌ – ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ

    ರಾಹುಲ್ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ದೆಹಲಿಯಿಂದ ಹೊರಡಲು ಸಾಧ್ಯವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ನಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ರಾಂಚಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಕ್ಸ್‌ ಖಾತೆಯಲ್ಲಿ ಜೈರಾಮ್‌ ರಮೇಶ್‌ ಬರೆದುಕೊಂಡಿದ್ದಾರೆ.

    ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರ ಪೋಸ್ಟರ್‌ಗಳನ್ನು ರಾಂಚಿಯಲ್ಲಿ ಮೆಗಾ ರ‍್ಯಾಲಿಗೂ ಮುನ್ನ ಹಾಕಲಾಗಿತ್ತು. ಇದನ್ನೂ ಓದಿ: Madhya Pradesh : ಮಹಿಳೆ ಮೇಲೆ 1 ತಿಂಗಳ ಕಾಲ ರೇಪ್‌ – ಜೆಸಿಬಿಯಿಂದ ಆರೋಪಿಯ ಮನೆ ಧ್ವಂಸ

    ಖರ್ಗೆ ಅಲ್ಲದೇ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ರಾಂಚಿಯಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿತ್ತು.

  • ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು INDIA ಒಕ್ಕೂಟದ ಒಗ್ಗಟ್ಟು ಪ್ರದರ್ಶನ

    ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು INDIA ಒಕ್ಕೂಟದ ಒಗ್ಗಟ್ಟು ಪ್ರದರ್ಶನ

    ನವದೆಹಲಿ: ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆ ಒಂದು ಕಡೆ ಪ್ರಧಾನಿ ಮೋದಿ (Narendra Modi) ಅಬ್ಬರದ ಪ್ರಚಾರ ಶುರುಮಾಡಿದ್ದರೆ ಮತ್ತೊಂದೆಡೆ ರಾಷ್ಟ್ರರಾಜಧಾನಿಯಲ್ಲಿ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಬಂಧನ ಖಂಡಿಸಿ ‘ಲೋಕತಂತ್ರ ಬಚಾವೋ’ ಹೆಸರಿನಲ್ಲಿ ಇಂಡಿಯಾ ಒಕ್ಕೂಟ ಬೃಹತ್ ಸಮಾವೇಶ ಹಾಗೂ ರ‍್ಯಾಲಿ ನಡೆಸಲಿದೆ. ಪ್ರತಿಭಟನಾ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿ 28 ವಿಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಕೋಟೆಗೆ ಅಮಿತ್ ಶಾ ಎಂಟ್ರಿ – ಚನ್ನಪಟ್ಟಣದಲ್ಲಿ ರೋಡ್ ಶೋ

    ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ನಾಯಕರು ಕೇಂದ್ರ ಸರ್ಕಾರ, ಇಡಿ, ಐಟಿ, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ. ಅಲ್ಲದೇ ಪ್ರತಿಭಟನೆ ಮೂಲಕ ಮೋದಿ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶನ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸುನೀತಾ ಕೇಜ್ರಿವಾಲ್ ಭೇಟಿಯಾದ ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಪತ್ನಿ

    ಬೃಹತ್ ಸಮಾವೇಶದ ಹಿನ್ನೆಲೆ ಮೈದಾನದ ಪ್ರತಿ ಗೇಟ್‌ನಲ್ಲಿ ತಪಾಸಣೆ ನಡೆಸಲಾಗಿದೆ ಮತ್ತು ಸುತ್ತಮುತ್ತ ಅರೆಸೇನಾಪಡೆಯ ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಕೆಲವು ಷರತ್ತುಗಳೊಂದಿಗೆ ರ‍್ಯಾಲಿಯನ್ನು ನಡೆಸಲು ಪೊಲೀಸರು ಅನುಮತಿಸಿದ್ದಾರೆ. ಇದನ್ನೂ ಓದಿ: ಅಖಿಲೇಶ್ ಯಾದವ್ ಕರೆ ಮಾಡಿದ್ರು; ಟಿಕೆಟ್ ಆಫರ್ ಬಗ್ಗೆ ಸುಳಿವು ಬಿಟ್ಟುಕೊಟ್ರಾ ಈಶ್ವರಪ್ಪ

    ಹೆಚ್ಚುವರಿಯಾಗಿ ರಾಜಕೀಯ ಪಕ್ಷಗಳ ಕಚೇರಿಗಳು ಇರುವ ಡಿಡಿಯು ಮಾರ್ಗದಲ್ಲಿ ಸೆಕ್ಷನ್ 144 ವಿಧಿಸಲಾಗುವುದು. ರಾಮಲೀಲಾ ಮೈದಾನದಿಂದ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ, ಯಾವುದೇ ಉಲ್ಲಂಘನೆಗಳು ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಿ.ವಿ ನರಸಿಂಹ ರಾವ್ ಸೇರಿ ಐವರಿಗೆ `ಭಾರತ ರತ್ನ’

  • ಜೆಡಿಎಸ್‌ನಲ್ಲಿ ಉಳಿದಿರೋ ನಿಷ್ಠಾವಂತರು ‘ಇಂಡಿಯಾ’ ಕೂಟಕ್ಕೆ ಬೆಂಬಲ ಕೊಡ್ತೀವಿ: ಸಿಎಂ ಇಬ್ರಾಹಿಂ

    ಜೆಡಿಎಸ್‌ನಲ್ಲಿ ಉಳಿದಿರೋ ನಿಷ್ಠಾವಂತರು ‘ಇಂಡಿಯಾ’ ಕೂಟಕ್ಕೆ ಬೆಂಬಲ ಕೊಡ್ತೀವಿ: ಸಿಎಂ ಇಬ್ರಾಹಿಂ

    – ಕುಮಾರಸ್ವಾಮಿ, ಡಾ.ಮಂಜುನಾಥ್ ಗೆಲ್ಲುವುದು ಕಷ್ಟ

    ಬೆಂಗಳೂರು: ಜೆಡಿಎಸ್‌ನಲ್ಲಿ (JDS) ಉಳಿದಿರೋ ನಿಷ್ಠಾವಂತರು ಇಂಡಿಯಾ (INDIA) ಕೂಟಕ್ಕೆ ಬೆಂಬಲ ಕೊಡ್ತೀವಿ. ನಾವೇ ಇಂಡಿಯಾ ಕೂಟದ ಪರ ಪ್ರಚಾರ ಮಾಡ್ತೀವಿ ಎಂದು ಜೆಡಿಎಸ್ ಉಚ್ಚಾಟಿತ ನಾಯಕ ಸಿಎಂ ಇಬ್ರಾಹಿಂ (CM Ibrahim) ಇಂಡಿಯಾ ಒಕ್ಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಬಗ್ಗೆ ನಾನೇನು ಹೇಳಿದ್ದೆನೋ ಅದು ಸತ್ಯವಾಗಿದೆ. ಕಾಂಗ್ರೆಸ್ ಅವರು 2-3 ಸೀಟು ಆದರೂ ಮುಸ್ಲಿಮರಿಗೆ ಕೊಡಬೇಕಿತ್ತು. 21% ಮತ ಇರೋರಿಗೆ ಕಡಿಮೆ ಸೀಟು ಕೊಟ್ಟಿದ್ದೀರಾ. 5% ಇರೋರಿಗೆ ಹೆಚ್ಚು ಸೀಟು ಕೊಡುತ್ತಿದ್ದೀರಾ. ವಿಧಿ ಇಲ್ಲದೆ ಕಾಂಗ್ರೆಸ್‌ಗೆ ಬೆಂಬಲ ಕೊಡುತ್ತಿದ್ದೇವೆ. ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ದರೆ 6 ಸ್ಥಾನ ಗೆಲ್ಲುತ್ತಿದ್ದೆವು. ಮೈಸೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಬಿಜಾಪುರ, ತುಮಕೂರು ಗೆಲ್ಲುತ್ತಿದ್ದೆವು. ಮಂಡ್ಯಕೋಸ್ಕರ ಕಿತ್ತಾಟ ಮಾಡಿದ್ರಿ. ಸುಮಲತಾ ಏನು ಮಾಡುತ್ತಾರೋ ಗೊತ್ತಿಲ್ಲ. ಬಿಜೆಪಿಗೂ ಜೆಡಿಎಸ್‌ಗೂ ಸಂಬಂಧವೇ ಬರಲ್ಲ. ಮಂಡ್ಯದಲ್ಲಿ 2 ಲಕ್ಷ ವೋಟ್ ಜೆಡಿಎಸ್ ಕಳೆದುಕೊಂಡಿದೆ. ಒಕ್ಕಲಿಗರು ಬಿಜೆಪಿಗೆ ವೋಟ್ ಹಾಕಲ್ಲ. ಕುಮಾರಸ್ವಾಮಿಗೆ ಆರೋಗ್ಯ ಕೊಡಲಿ ಅಂತ ದೇವರಲ್ಲಿ ಕೇಳಿಕೊಳ್ಳುತ್ತೇನೆ. ದೇವೇಗೌಡರಿಗೆ ಈ ವಯಸ್ಸಿನಲ್ಲಿ ಇಂತಹ ಸ್ಥಿತಿ ಆಗಬಾರದು ಎಂದರು. ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

    ಮೋದಿ (Narendra Modi) ಬಾರಿ ಬುದ್ದಿವಂತರು. ಎಲ್ಲಾ ವಿಷಯಕ್ಕೆ ಕೈ ಹಾಕಲ್ಲ. ಸೆಲೆಕ್ಟ್ ಸೀಟುಗಳಲ್ಲಿ ಮಾತ್ರ ಹ್ಯಾಕ್ ಮಾಡುತ್ತಾರೆ. 2004 ರಿಂದಲೂ ಇವಿಎಂ ಹ್ಯಾಕ್ ಆಗುತ್ತಿತ್ತು. ಕಾಂಗ್ರೆಸ್ ಗೆಲ್ಲುತ್ತಿತ್ತು. ಅದಕ್ಕೆ ಅವರು ಮಾತನಾಡುತ್ತಿರಲಿಲ್ಲ. ಇವಿಎಂ ಹ್ಯಾಕ್ ಮಾಡಬಹುದು. ಅದಕ್ಕೆ ಇವಿಎಂ ಬೇಡ. ಬ್ಯಾಲೆಟ್ ಪೇಪರ್ ಬೇಕು ಅಂತ ಕಾಂಗ್ರೆಸ್ ಧ್ವನಿ ಎತ್ತಬೇಕು. ಮೋದಿ ಅಹಂ ಬ್ರಹ್ಮಾಸ್ಮಿ ಆಗಿದ್ದಾರೆ. ಆರ್‌ಎಸ್‌ಎಸ್ ಮೀರಿ ಅವರು ಹೋಗುತ್ತಿದ್ದಾರೆ. ಹೀಗಾಗಿಯೇ ಆರ್‌ಎಸ್‌ಎಸ್ ಅವರು ಚುನಾವಣೆ ಬಾಂಡ್ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್‌ನಲ್ಲೂ ಒಳ್ಳೆಯವರು ಇದ್ದಾರೆ. ಮೋದಿ ಇವತ್ತು ಆರ್‌ಎಸ್‌ಎಸ್ ಮೀರಿ ಬೆಳೆದಿದ್ದೇನೆ ಎಂದು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

    ಮಂಡ್ಯದಲ್ಲಿ ಕುಮಾರಸ್ವಾಮಿ (HD Kumaraswamy) ಗೆಲ್ಲೋದು ಕಷ್ಟ ಇದೆ. ಅದಕ್ಕೆ ನಾನು ಕುಮಾರಸ್ವಾಮಿ ನಿಲ್ಲೋದು ಬೇಡ ಎಂದು ಹೇಳಿದೆ. ಅವರ ಆರೋಗ್ಯ ಸರಿಯಿಲ್ಲ. ಸೀಟು ಹಂಚಿಕೆಯ ವಿಚಾರದಲ್ಲಿ ನೀವು ಹೇಳಿದ್ದೇ ನಿಜ ಅಂತ ನನ್ನ ಬಳಿ ಜೆಡಿಎಸ್ ಅವರೇ ಮಾತನಾಡಿದ್ದಾರೆ. ಯಾರು ಮಾತಾಡಿದ್ದಾರೆ ಎಂದು ನಾನು ಹೇಳಲ್ಲ. ಕುಮಾರಸ್ವಾಮಿ ಮಾತಾಡಿಲ್ಲ. ಬೇರೆಯವರು ಮಾತಾಡಿದ್ದಾರೆ. ಚುನಾವಣೆ ಆದ ಮೇಲೆ ಎಲ್ಲವೂ ಬದಲಾವಣೆ ಆಗಲಿದೆ. ಜೆಡಿಎಸ್ ಸಭೆಯಲ್ಲೂ ನಾನು ಹೇಳಿದ್ದು ಸತ್ಯ ಅಂತ ಚರ್ಚೆ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ನಿಧನ

    ಡಾ.ಮಂಜುನಾಥ್ (Dr Manjunath) ಅವರನ್ನು ಯಾಕೆ ಜೆಡಿಎಸ್‌ನಿಂದ ನಿಲ್ಲಿಸಿಲ್ಲ? ಜೆಡಿಎಸ್‌ನಿಂದ ನಿಲ್ಲಿಸಬಹುದಿತ್ತು. ಯಾಕೆ ಬಿಜೆಪಿಯಿಂದ ನಿಲ್ಲಿಸಿದ್ರಿ? ಈಗ ಅವರಿಗೆ ಆಪರೇಷನ್ ಮಾಡಿದಂತೆ ಇದೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಗೆಲ್ಲೋದು ಕಷ್ಟ ಇದೆ. ಜನರು ಬುದ್ಧಿವಂತರು. ಎಲ್ಲರೂ ಅರ್ಥ ಮಾಡಿಕೊಳ್ಳುತ್ತಾರೆ. ಇಂಡಿಯಾ ಕೂಟದಲ್ಲಿ ಇನ್ನು ಸರಿ ಆಗಬೇಕು. ಬಿಜೆಪಿಯಲ್ಲಿ ಒನ್‌ಮ್ಯಾನ್ ಆರ್ಮಿ ಆಗಿದೆ. ಪ್ರಜಾಪ್ರಭುತ್ವ ಉಳಿಸಲು ಇಂಡಿಯಾ ಕೂಟಕ್ಕೆ ಬೆಂಬಲ ಕೊಡಿ ಎಂದು ಪ್ರಚಾರ ಮಾಡುತ್ತೇವೆ. ಏಪ್ರಿಲ್ ಆದ ಮೇಲೆ ಏನೇನು ಆಗುತ್ತೋ ನೋಡಿ. ಯಾರ‍್ಯಾರು ಎಲ್ಲಿ ಹೋಗುತ್ತಾರೆ ನೋಡಿ. ಸಿದ್ದರಾಮಯ್ಯ ಅವರನ್ನು ನಾನು ಹೊರಗಡೆ ಬಂದಾಗಿನಿಂದ ಮಾತನಾಡಿಸಿಲ್ಲ. ಅವರ ಮೇಲೆ ಗೌರವ ಇದೆ. ನಾನು ಅವರ ಜೊತೆ ಮಾತಾಡಿಲ್ಲ. ಸಿದ್ದರಾಮಯ್ಯ ಅವರಿಗೂ ಪಕ್ಷದಲ್ಲಿ ಅವರದ್ದೇ ಆದ ಗೊಂದಲ ಇವೆ. ಕೋಲಾರದಲ್ಲಿ ಗೊಂದಲ ಆಗ್ತಿದೆ ಎಂದರು. ಇದನ್ನೂ ಓದಿ: KSRTC ನೌಕರರಿಗೆ ಗುಡ್‌ನ್ಯೂಸ್ – ಡಬಲ್ ಡ್ಯೂಟಿಯಿಂದ ಮುಕ್ತಿ

    ಅಧ್ಯಕ್ಷ ಸ್ಥಾನದ ಕೇಸ್ ವಿಚಾರವಾಗಿ ಮಾತನಾಡಿ, ಸಿಟಿ ಕೋರ್ಟ್‌ನಲ್ಲಿ ವಿಚಾರಣೆ ಆಗದೇ ತೀರ್ಪು ಕೊಟ್ಟರು. ಇದು ವಿಚಿತ್ರವಾಗಿದೆ. ಹೈಕೋರ್ಟ್‌ಗೆ ಮೇಲ್ಮನವಿ ಹಾಕಿದ್ದೇನೆ. ನನಗೆ ಕೋರ್ಟ್ ಮೇಲೆ ನಂಬಿಕೆ ಇದೆ. ಏಪ್ರಿಲ್ 12ರ ಬಳಿಕ ಜಿಲ್ಲಾ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ

  • ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    – ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್!

    ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಶಾಕ್ ಸರಣಿ ಮುಂದುವರಿದಿದೆ. ಒಂದೆಡೆ ಐ.ಎನ್.ಡಿ.ಐ.ಎ ಒಕ್ಕೂಟದಿಂದ (INDIA Alliance) ಒಬ್ಬೊಬ್ಬರೇ ಜಾಗ ಖಾಲಿ ಮಾಡುತ್ತಿದ್ದರೆ, ಮತ್ತೊಂದೆಡೆ ದಶಕಗಳ ಕಾಲ ಅಧಿಕಾರ ಅನುಭವಿಸಿದ ನಾಯಕರು ಗುಡ್‌ಬೈ ಹೇಳ್ತಿದ್ದಾರೆ.

    ಮಹಾರಾಷ್ಟ್ರದಲ್ಲಿ ಅಶೋಕ್ ಚೌಹಾಣ್ ಬಳಿಕ ಮಧ್ಯಪ್ರದೇಶದಲ್ಲಿ ಶಾಕ್ ಎದುರಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ 3ನೇ ಮಗ ಎಂದೇ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರ ಸಚಿವ, ಮಧ್ಯಪ್ರದೇಶ ಸಿಎಂ ಆಗಿದ್ದ ಕಮಲ್‌ನಾಥ್ (Kamal Nath) ಇದೀಗ ಬಿಜೆಪಿಗೆ ಜಂಪ್ ಆಗುತ್ತಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿಯಿತಾ ಸರ್ಕಾರ – ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚನೆ ಪ್ರಸ್ತಾಪಿಸುವ ಸಾಧ್ಯತೆ?

    ಛಿಂದ್ವಾರ ಸಂಸದ, ಪುತ್ರ ನಕುಲ್‌ನಾಥ್ ಜೊತೆ ಸೇರಿ ಕಮಲ್‌ನಾಥ್ 12 ಕ್ಕೂ ಹೆಚ್ಚು ಶಾಸಕರ ಜೊತೆಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಫೆ.22ಕ್ಕೆ ಮಧ್ಯಪ್ರದೇಶ ಪ್ರವೇಶವಾಗುವ ಹೊತ್ತಲ್ಲೇ ಈ ವಿಚಾರ ಕೇಳಿಬಂದಿದೆ.

    ಆದರೆ ಈ ವದಂತಿಗಳನ್ನು ಕಮಲ್‌ನಾಥ್ ಅಲ್ಲಗಳೆದಿದ್ದಾರೆ. ಪಕ್ಷಕ್ಕೆ ಯಾವುದೇ ರಾಜೀನಾಮೆ ಕೊಟ್ಟಿಲ್ಲ. ಆದರೆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಬೇಸರವಾಗಿದೆ. ಐದು ದಶಕಗಳ ಹಿಂದೆ ಇದ್ದ ಸಂಘಟನೆ ಈಗ ಇಲ್ಲ ಎಂದು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾನು ಬಿಜೆಪಿ ಸೇರೋದಾರೆ ಎಲ್ಲರಿಗೂ ತಿಳಿಸಿಯೇ ಸೇರ್ಪಡೆ ಆಗ್ತೇನೆ ಎಂದಿದ್ದಾರೆ. ಇತ್ತ, ಕಮಲನಾಥ್ ಕಾಂಗ್ರೆಸ್ ತೊರೆಯಲ್ಲ. ನಾನು ಅವರ ಜೊತೆ ಮಾತಾಡಿದ್ದೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: 2029ರಲ್ಲಿ ಆಪ್‌ನಿಂದ ಬಿಜೆಪಿ ಮುಕ್ತ – 3ನೇ ಬಾರಿ ವಿಶ್ವಾಸಮತ ಗೆದ್ದ ಕೇಜ್ರಿವಾಲ್‌

    ಎಸ್‌ಪಿಯ 10 ಶಾಸಕರು ಯೋಗಿ ಬಲೆಗೆ?
    ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದಿಂದ 10 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸಮಾಜವಾದಿ ಪಕ್ಷದ 10 ಶಾಸಕರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಬಲೆ ಬೀಳಲಿದ್ದಾರೆ ಎನ್ನಲಾಗಿದೆ.

    ನವಜೋತ್ ಸಿಂಗ್ ಸಿಧು ಬಿಜೆಪಿ ಸೇರ್ಪಡೆ?
    ಮತ್ತೊಂದು ಕಡೆ ಪಂಜಾಬ್‌ನ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಸಹ ಬಿಜೆಪಿ ಸೇರುವ ಮಾತುಗಳು ಕೇಳಿಬರುತ್ತಿವೆ. ಫೆ.22 ರ ನಂತರ ಸಿಧು ಕಾಂಗ್ರೆಸ್ ಪಕ್ಷದ ಮೂವರು ಶಾಸಕರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏಕಾಏಕಿ ಮಲ್ಲಿಕಾರ್ಜುನ ಖರ್ಗೆಗೆ Z+ ಸೆಕ್ಯೂರಿಟಿ

    ಇಂಡಿಯಾ ಒಕ್ಕೂಟಕ್ಕೆ ಶಾಕ್!
    ಐಎನ್‌ಡಿಐಎ ಮೈತ್ರಿಕೂಟದಿಂದ ಮಮತಾ ಬ್ಯಾನರ್ಜಿ ಔಟ್ ಆಗಿದ್ದಾರೆ. ಕಾಂಗ್ರೆಸ್ ಮೈತ್ರಿ ತೊರೆದು ನಿತೀಶ್ ಕುಮಾರ್ ಎನ್‌ಡಿಎ ಒಕ್ಕೂಟ ಸೇರಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಲ್ಲೇ ಇಂಡಿಯಾ ಒಕ್ಕೂಟದಿಂದ ದೆಹಲಿ ಸಿಎಂ ಕೇಜ್ರಿವಾಲ್ ಕೂಡ ಹೊರಕ್ಕೆ ಬಂದಿದ್ದಾರೆ. ಇತ್ತ ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಗದೀಶ್ ಶೆಟ್ಟರ್ ಘರ್‌ವಾಪ್ಸಿ ಆಗಿದ್ದಾರೆ. ಮಹಾರಾಷ್ಟçದಲ್ಲಿ ಅಶೋಕ್ ಚವಾಣ್ ಬಿಜೆಪಿ ಸೇರಿದ್ದಾರೆ.