Tag: INDIA alliance

  • I.N.D.I.A ಒಕ್ಕೂಟದಲ್ಲಿ ಮುಂದುವರೆಯುವಂತೆ ಎಲ್ಲರಿಗೂ ಪತ್ರ ಬರೆಯುತ್ತೇನೆ: ಮಲ್ಲಿಕಾರ್ಜುನ್ ಖರ್ಗೆ

    I.N.D.I.A ಒಕ್ಕೂಟದಲ್ಲಿ ಮುಂದುವರೆಯುವಂತೆ ಎಲ್ಲರಿಗೂ ಪತ್ರ ಬರೆಯುತ್ತೇನೆ: ಮಲ್ಲಿಕಾರ್ಜುನ್ ಖರ್ಗೆ

    ಕಲಬುರಗಿ: ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಬಲಗೊಳಿಸುವ ನಿಟ್ಟಿನಲ್ಲಿ ಇಂಡಿಯಾ ಒಕ್ಕೂಟದಲ್ಲಿ (I.N.D.I.A Alliance) ಮುಂದುವರೆಯಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆಯಲಾಗಿದೆ. ಅಲ್ಲದೇ ಈ ಬಗ್ಗೆ ಮಾತನಾಡುವ ಪ್ರಯತ್ನ ಸಹ ಮಾಡಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ತಿಳಿಸಿದ್ದಾರೆ.

    ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಐ.ಎನ್.ಡಿ.ಐ.ಎ ಒಕ್ಕೂಟ ಬಿಟ್ಟು ಹೋಗುವ ಬಗ್ಗೆ ಸ್ಪಷ್ಟವಾಗಿ ತಿಳಿದಿಲ್ಲ. ಪ್ರಮುಖವಾಗಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದು ಬಳಿಕ ಸ್ಪಷ್ಟಪಡಿಸುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಜೀವಂತವಾಗಿದ್ರೆ ಶಾಮನೂರು ಶಿವಶಂಕರಪ್ಪರನ್ನ ಸಸ್ಪೆಂಡ್ ಮಾಡಲಿ: ಹೆಚ್.ವಿಶ್ವನಾಥ್

    ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಬಲಪಡಿಸುವ ಮನೋಭಾವ ಹೊಂದಿರುವ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಇತರರೊಂದಿಗೆ ಮಾತನಾಡಿ ತಾವೆಲ್ಲರೂ ಒಗ್ಗಟ್ಟಿನಿಂದ ಒಗ್ಗೂಡಿದಾಗ ಉತ್ತಮ ಫೈಟ್ ಕೊಡಬಹುದಾಗಿದೆ ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

    ಬಿಹಾರದ ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿದೆ. ಐ.ಎನ್.ಡಿ.ಐ.ಎ ಒಕ್ಕೂಟದಿಂದ ಜೆಡಿಯು ಹೊರಬರುವ ಸಾಧ್ಯತೆಗಳು ದಟ್ಟವಾಗಿ ಕಾಣುತ್ತಿದೆ. ಬಿಜೆಪಿ ಜೊತೆ ಸೇರಿ ನಿತೀಶ್ ಕುಮಾರ್ (Nitish Kumar) ಸರ್ಕಾರ ರಚನೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇದರ ನಡುವೆಯೇ ಲಾಲೂ ಪ್ರಸಾದ್ ಯಾದವ್ ಕೆಲ ಶಾಸಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಐ.ಎನ್.ಡಿ.ಐ.ಎ ಒಕ್ಕೂಟಕ್ಕೆ ಆತಂಕ ಎದುರಾಗಿದೆ. ಇದನ್ನೂ ಓದಿ: ನಿಗಮ-ಮಂಡಳಿ ಬೇಡವೇ ಬೇಡ, ನನಗೆ ಸಚಿವ ಸ್ಥಾನ ಕೊಡಿ: ಶಾಸಕ ಸುಬ್ಬಾರೆಡ್ಡಿ ಪಟ್ಟು

  • INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?

    INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?

    ನವದೆಹಲಿ: ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರನ್ನು INDIA ಮೈತ್ರಿಕೂಟದ (INDIA Alliance) ಸಂಚಾಲಕರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಈ ನಿರ್ಧಾರವನ್ನು ಅನುಮೋದಿಸಲು ವಿರೋಧ ಪಕ್ಷಗಳು ಶೀಘ್ರದಲ್ಲೇ ವರ್ಚುವಲ್ ಸಭೆ ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.

    ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಮಂಗಳವಾರ ಈ ಪ್ರಸ್ತಾವಿತ ನೇಮಕಾತಿ ಬಗ್ಗೆ ಕಾಂಗ್ರೆಸ್ ಚರ್ಚಿಸಿದೆ ಎನ್ನಲಾಗಿದೆ. INDIA ಮೈತ್ರಿಕೂಟದ ಇತರ ಪಾಲುದಾರರನ್ನು ಸಹ ಸಮಾಲೋಚಿಸಲಾಗಿದೆ ಮತ್ತು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವಿಚಾರವಾಗಿ ಮಂಗಳವಾರ ನಿತೀಶ್ ಕುಮಾರ್ ಅವರು ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮೈತ್ರಿಕೂಟದ ಇನ್ನೊಬ್ಬ ಪ್ರಮುಖ ನಾಯಕ, ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ವಾರಾಂತ್ಯದಲ್ಲಿ ಈ ಪ್ರಸ್ತಾಪ ಅಧಿಕೃತಗೊಳ್ಳುವ ನಿರೀಕ್ಷೆಗಳಿದೆ. ಇದನ್ನೂ ಓದಿ: ಅದಾನಿ ಕೇಸ್‌ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ – ಪತ್ರಿಕೆಯ ವರದಿಯನ್ನು ಅವಲಂಬಿಸಬೇಡಿ : ಸುಪ್ರೀಂ ಹೇಳಿದ್ದೇನು?

    ಡಿಸೆಂಬರ್ 19 ರಂದು INDIA ಒಕ್ಕೂಟದ ಪಕ್ಷಗಳು ದೆಹಲಿಯಲ್ಲಿ ತಮ್ಮ ನಾಲ್ಕನೇ ಸಭೆಯನ್ನು ನಡೆಸಿದವು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದ್ದರು. ವಿರೋಧ ಪಕ್ಷದ ಬಣದ ಕೊನೆಯ ಸಭೆಯಲ್ಲಿ, ಸೀಟು ಹಂಚಿಕೆ, ಜಂಟಿ ಪ್ರಚಾರದ ನೀಲನಕ್ಷೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಕಾರ್ಯತಂತ್ರದಂತಹ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿತ್ತು. ಇದನ್ನೂ ಓದಿ: ತೀಸ್ರಿ ಬಾರ್ ಮೋದಿ ಸರ್ಕಾರ್ – ಚುನಾವಣೆಗೆ ಬಿಜೆಪಿಯಿಂದ ಹೊಸ ಘೋಷ ವಾಕ್ಯ

  • ಇಂಡಿಯಾ ಒಕ್ಕೂಟ ವೇಗ ಕಳೆದುಕೊಳ್ಳಲು ಕಾಂಗ್ರೆಸ್ ಕಾರಣ – ದೂಷಣೆ ಬೆನ್ನಲ್ಲೇ ನಿತೀಶ್ ಕುಮಾರ್ ಜೊತೆ ಖರ್ಗೆ ಮಾತುಕತೆ

    ಇಂಡಿಯಾ ಒಕ್ಕೂಟ ವೇಗ ಕಳೆದುಕೊಳ್ಳಲು ಕಾಂಗ್ರೆಸ್ ಕಾರಣ – ದೂಷಣೆ ಬೆನ್ನಲ್ಲೇ ನಿತೀಶ್ ಕುಮಾರ್ ಜೊತೆ ಖರ್ಗೆ ಮಾತುಕತೆ

    ನವದೆಹಲಿ: ಇಂಡಿಯಾ ಒಕ್ಕೂಟದ (INDIA Alliance) ಆರಂಭದಲ್ಲಿದ್ದ ವೇಗವನ್ನು ಕಳೆದುಕೊಳ್ಳಲು ಕಾಂಗ್ರೆಸ್ (Congress) ಕಾರಣ ಎಂದು ದೂಷಿಸುತ್ತಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

    ಕಾಂಗ್ರೆಸ್ ವಿರುದ್ಧ ನಿತೀಶ್ ಕುಮಾರ್ ಹರಿಹಾಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್ ಅಧ್ಯಕ್ಷರು ದೂರವಾಣಿ ಮೂಲಕ ಮಾತುಕತೆ ನಡೆಸಿ ಕಾಂಗ್ರೆಸ್ ಐದು ರಾಜ್ಯಗಳ ಚುನಾವಣೆ ಮೇಲೆ ಹೆಚ್ಚು ಕೇಂದ್ರೀಕರಿಸಿದೆ. ಚುನಾವಣೆ ಅಂತ್ಯವಾಗುತ್ತಿದ್ದಂತೆ ಮತ್ತೆ ಇಂಡಿಯಾ ಒಕ್ಕೂಟದ ಚಟುವಟಿಕೆಗಳನ್ನು ಹೆಚ್ಚಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ನವರು ಮಹದೇವನ ಹೆಸರನ್ನೂ ಬಿಟ್ಟಿಲ್ಲ- ಮೋದಿ ವಾಗ್ದಾಳಿ

    ನವೆಂಬರ್ 2ರಂದು ನಿತೀಶ್ ಕುಮಾರ್ ಅವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹೆಚ್ಚು ಆಸಕ್ತಿ ಹೊಂದಿದೆ. ಇದರಿಂದ ಇಂಡಿಯಾ ಒಕ್ಕೂಟದ ಚಟುವಟಿಕೆಗಳು ಮಂದವಾಗಿದೆ ಎಂದು ದೂಷಿಸಿದ್ದರು. ಒಕ್ಕೂಟದಲ್ಲಿ ನಾವೆಲ್ಲರೂ ಕಾಂಗ್ರೆಸ್‌ಗೆ ಪ್ರಮುಖ ಪಾತ್ರವನ್ನು ನೀಡಲು ಒಪ್ಪಿಕೊಂಡಿದ್ದೇವೆ. ಹೀಗಾಗಿ ಕಾಂಗ್ರೆಸ್ ಜೊತೆಗೆ ಚರ್ಚಿಸಿ ಮುಂದಿನ ಸಭೆಯ ದಿನಾಂಕ ನಿಗದಿ ಮಾಡಲಾಗುವುದು ಎಂದಿದ್ದರು. ಇದನ್ನೂ ಓದಿ: ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದಿನ ಐದು ವರ್ಷಕ್ಕೆ ವಿಸ್ತರಣೆ: ಮೋದಿ ಘೋಷಣೆ

    ಜೂನ್‌ನಲ್ಲಿ ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಮೊದಲ ಸಭೆಯನ್ನು ಆಯೋಜಿಸುವಲ್ಲಿ ಜೆಡಿಯು ನಾಯಕ ಪ್ರಮುಖ ಪಾತ್ರವಹಿಸಿದ್ದಲ್ಲದೇ ಇಂಡಿಯಾ ಒಕ್ಕೂಟದ ರಚನೆಗೆ ಮುಂದಾಳತ್ವ ವಹಿಸಿದ್ದರು. ಜುಲೈನಲ್ಲಿ ಬೆಂಗಳೂರಿನಲ್ಲಿ, ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಮುಂಬೈನಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆಸಲಾಯಿತು. ಇದನ್ನೂ ಓದಿ: ಒಂದೇ ತಿಂಗಳಲ್ಲಿ ಮೂರು ಬಾರಿ ಕಂಪನ- ದೆಹಲಿಯಲ್ಲಿ ನಿರಂತರ ಭೂಕಂಪನಕ್ಕೆ ಕಾರಣವೇನು?

  • RSS ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು INDIA ಬಣ ಬಿಡಲ್ಲ: ರಾಹುಲ್ ಗಾಂಧಿ

    RSS ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು INDIA ಬಣ ಬಿಡಲ್ಲ: ರಾಹುಲ್ ಗಾಂಧಿ

    ನವದೆಹಲಿ: ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ (INDIA) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ. ಮತ್ತು ಪ್ರಜಾಪ್ರಭುತ್ವದ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.

    ಈ ತಿಂಗಳ ಆರಂಭದಲ್ಲಿ ರಾಗಾ ಸಂಸ್ಥೆಗೆ ಭೇಟಿ ನೀಡಿದ ಕ್ಲಿಪ್‌ಅನ್ನು ಕಾಂಗ್ರೆಸ್ (Congress) ಹಂಚಿಕೊಂಡಿದೆ. ಅದರಲ್ಲಿ ಅವರು ಭಾರತೀಯ ಪ್ರಜಾಪ್ರಭುತ್ವದ ಕೊಲೆಯನ್ನು ನಾವು ಸಹಿಸುವುದಿಲ್ಲ ಎಂದು ನಮ್ಮ ಮೈತ್ರಿಕೂಟದ ಪ್ರತಿಯೊಬ್ಬ ವ್ಯಕ್ತಿಯೂ ಒಪ್ಪಿಕೊಂಡಿದ್ದಾರೆ. ಎರಡನೆಯದಾಗಿ ನಮ್ಮ ಸಾಂಸ್ಥಿಕ ಚೌಕಟ್ಟನ್ನು ಆರ್‌ಎಸ್‌ಎಸ್ ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಪ್ರತಿಯೊಬ್ಬ ವ್ಯಕ್ತಿಯೂ ಅಭಿಪ್ರಾಯಪಟ್ಟಿದ್ದಾರೆ ಎಂದು ರಾಹುಲ್ ಹೇಳಿದರು.

    ಭಾರತದಲ್ಲಿ 2-3 ವ್ಯಾಪಾರ ಸಂಸ್ಥೆಗಳ ಏಕಸ್ವಾಮ್ಯವಿದೆ. ಕಳೆದ 9 ವರ್ಷಗಳಲ್ಲಿ 20 ಕೋಟಿ ಜನರು ಬಡತನಕ್ಕೆ ಜಾರಿದ್ದಾರೆ. ಮೂರನೆಯದಾಗಿ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಹೆಚ್ಚು ಖರ್ಚು ಮಾಡಬೇಕು ಮತ್ತು ತೊಡಗಿಸಿಕೊಳ್ಳಬೇಕು ಎಂದು ನಾವೆಲ್ಲರೂ ಒಪ್ಪುತ್ತೇವೆ. ದಲಿತರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಸೇರಿದಂತೆ ಕೆಲವು ಜನರ ಗುಂಪುಗಳು ಭಾರತದ ಬೆಳವಣಿಗೆಯ ಕಥೆಗಳಲ್ಲಿಯೇ ಸೇರಿಸಲಾಗಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ಆದರೂ ಹಲವಾರು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯಗಳಿವೆ. ಉದಾಹರಣೆಗೆ ಕೇರಳದಲ್ಲಿ ಎಡಪಕ್ಷಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಹೋರಾಟವಿದೆ. ಆದರೆ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಎಂದಿಗೂ ಅಧಿಕಾರ ಹಿಡಿಯದಂತೆ ನೋಡಿಕೊಳ್ಳುವುದು ನಮ್ಮ ಗುರಿಯಾಗಿದೆ. ಬಂಗಾಳದಲ್ಲಿ ಬಿಜೆಪಿ ವಿರುದ್ಧ ನಿಲ್ಲುವುದು ಪ್ರಯೋಜನಕಾರಿ ಎಂಬುದು ಸ್ಪಷ್ಟವಾಗಿದೆ. ಆ ಗುರಿಯನ್ನು ಸಾಧಿಸಬಹುದೇ? ಇದು ಮುಂದೆ ಏನಾಗಬಹುದು? ಎಂಬುದನ್ನು ಈಗಲೇ ಹೇಳುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: ಓಲಾ ಬೈಕ್ ನಿಲ್ಲಿಸುವಂತೆ ಸಾರಿಗೆ ಆಯುಕ್ತರಿಗೆ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • INDIA ಒಕ್ಕೂಟವು ಸನಾತನ ಧರ್ಮವನ್ನು ನಾಶ ಮಾಡಲು ಬಯಸಿದೆ: ಮೋದಿ ವಾಗ್ದಾಳಿ

    INDIA ಒಕ್ಕೂಟವು ಸನಾತನ ಧರ್ಮವನ್ನು ನಾಶ ಮಾಡಲು ಬಯಸಿದೆ: ಮೋದಿ ವಾಗ್ದಾಳಿ

    ಭೋಪಾಲ್: ಸ್ವಾಮಿ ವಿವೇಕಾನಂದ ಮತ್ತು ಲೋಕಮಾನ್ಯ ತಿಲಕರಿಗೆ ಸ್ಫೂರ್ತಿ ನೀಡಿದ ಸನಾತನ ಧರ್ಮವನ್ನು ಈ ಇಂಡಿಯಾ ಮೈತ್ರಿಕೂಟದ (INDIA Alliance) ಜನರು ಅಳಿಸಿ ಹಾಕಲು ಬಯಸುತ್ತಿದ್ದಾರೆ. ಈ ಒಕ್ಕೂಟವು ಸನಾತನ ಧರ್ಮವನ್ನು (Sanatan Dharma Row) ನಾಶ ಮಾಡಲು ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

    ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಕ್ಕೂಟದ ನಾಯಕರು ಬಹಿರಂಗವಾಗಿ ಸನಾತನ ಧರ್ಮವನ್ನು ಗುರಿಯಾಗಿಸಲು ಆರಂಭಿಸಿದ್ದಾರೆ. ನಾಳೆ ನಮ್ಮ ಮೇಲೆ ದಾಳಿಯನ್ನು ಹೆಚ್ಚಿಸುತ್ತಾರೆ. ದೇಶದಾದ್ಯಂತ ಎಲ್ಲಾ ಸನಾತನಿಗಳು ಮತ್ತು ನಮ್ಮ ದೇಶವನ್ನು ಪ್ರೀತಿಸುವ ಜನರು ಎಚ್ಚೆತ್ತುಕೊಳ್ಳಬೇಕು. ಅಂತಹವರನ್ನು ನಾವು ತಡೆಯಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

    INDIA ಒಕ್ಕೂಟಕ್ಕೆ INDI ಎಂದು ಕರೆದ ಪ್ರಧಾನಿ ಮೋದಿ, INDI ಒಕ್ಕೂಟಕ್ಕೆ ನಾಯಕರಿಲ್ಲ. ಭಾರತದ ಸಂಸ್ಕೃತಿಯ ಮೇಲೆ ದಾಳಿ ಮಾಡಲು ಗುಪ್ತ ಕಾರ್ಯಸೂಚಿಯನ್ನು ಮಾಡಿದೆ. ಸನಾತನ ಸಂಸ್ಕೃತಿಯನ್ನು ಕೊನೆಗೊಳಿಸುವ ನಿರ್ಣಯದೊಂದಿಗೆ ಮೈತ್ರಿ ಅನುಷ್ಠಾನಕ್ಕೆ ಬಂದಿದೆ. ದೇಶ ಮತ್ತು ಸಮಾಜವನ್ನು ವಿಭಜನೆ ಮಾಡುವ ಕೆಲಸ ಮಾಡ್ತಿದೆ. ಭಾರತದ ಸಂಸ್ಕೃತಿ ಮೇಲೆ ದಾಳಿ ಮಾಡುವ ಕುತಂತ್ರ ಮಾಡಿದೆ. ಸಾವಿರಾರು ವರ್ಷಗಳ ನಂಬಿಕೆ ಮುಗಿಸುವ ಕೆಲಸ‌ ಮಾಡುತ್ತಿದೆ ಎಂದು ಆರೋಪಿಸಿದರು.

    ಇದಕ್ಕೂ ಮುನ್ನ ಸನಾತನ ಧರ್ಮದ ವಿರುದ್ಧ ನೀಡುವ ಹೇಳಿಕೆಗಳನ್ನು ನೋಡಿಕೊಂಡು ಸುಮ್ಮನಿರದಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಯಾಬಿನೆಟ್ ಸಚಿವರಿಗೆ ಸೂಚನೆ ನೀಡಿದ್ದರು. ಪ್ರಧಾನಿ ನರೇಂದ್ರ‌ ಮೋದಿ ಹೇಳಿಕೆ ಬಳಿಕ ಬಿಜೆಪಿ ನಾಯಕರು ಇಂಡಿಯಾ ಒಕ್ಕೂಟವನ್ನು ಟಾರ್ಗೆಟ್ ಮಾಡಲು ಆರಂಭಿಸಿದ್ದರು. ಇದನ್ನೂ ಓದಿ: ಜಿ20 ಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ್ದ ಚೀನಾ – ತಪಾಸಣೆಗೆ ನಿರಾಕರಿಸಿ ಹೋಟೆಲ್‌ನಲ್ಲಿ ಹೈಡ್ರಾಮಾ

    ಈ ತಿಂಗಳ ಆರಂಭದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದರು. ಈ ಹೇಳಿಕೆ‌ ಬೆನ್ನಲ್ಲೇ ಡಿಎಂಕೆ ನಾಯಕ, ಲೋಕಸಭಾ ಸಂಸದ ಮತ್ತು ಕೇಂದ್ರ ಮಾಜಿ ಸಚಿವ ಎ. ರಾಜಾ ಸನಾತನ ಧರ್ಮವನ್ನು ಕುಷ್ಠರೋಗ ಮತ್ತು ಹೆಚ್‌ಐವಿಯಂತಹ ಕಾಯಿಲೆಗಳಿಗೆ ಹೋಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • One Nation One Election: ಸಂವಿಧಾನದ 5 ಆರ್ಟಿಕಲ್‌ಗಳಿಗೆ ಮಾಡಬೇಕಾಗುತ್ತೆ ತಿದ್ದುಪಡಿ

    One Nation One Election: ಸಂವಿಧಾನದ 5 ಆರ್ಟಿಕಲ್‌ಗಳಿಗೆ ಮಾಡಬೇಕಾಗುತ್ತೆ ತಿದ್ದುಪಡಿ

    ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಸಾಧ್ಯತೆ ಕುರಿತು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ (Ram nath Kovind) ಅವರ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಕೇಂದ್ರ ನಡೆಸುತ್ತಿರುವ ಈ ಅಭಿಯಾನಕ್ಕೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಪರಿಸ್ಥಿತಿ, ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದಲ್ಲಿ ಆಗಬೇಕಾದ ತಿದ್ದುಪಡಿ ಹೀಗೆ ಅನೇಕ ವಿಚಾರಗಳ ಸುತ್ತ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಗಿರಕಿ ಹೊಡೆಯುತ್ತಿದೆ. ಅದೇನು ಎಂಬುದರ ಬಗ್ಗೆ ಇಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ.

    ಏನಿದು ಒಂದು ರಾಷ್ಟ್ರ, ಒಂದು ಚುನಾವಣೆ?
    ದೇಶಾದ್ಯಂತ ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವುದೇ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದರ ಪರಿಕಲ್ಪನೆ. ಅಂದರೆ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲೇ ಚುನಾವಣೆ ನಡೆಸುವುದು. ದೇಶದಲ್ಲಿ ಇದುವರೆಗೆ ಸಾಮಾನ್ಯವಾಗಿ ಸಂಸದ ಹಾಗೂ ಶಾಸಕರ ಸ್ಥಾನಗಳಿಗಾಗಿ ಚುನಾವಣೆಗಳು ಪ್ರತ್ಯೇಕವಾಗಿ ನಡೆಯುತ್ತವೆ. ಆದರೆ ಈ ಪರಿಕಲ್ಪನೆಯಡಿ ಎರಡೂ ಸ್ಥಾನಗಳಿಗೆ ಏಕಕಾಲದಲ್ಲೇ ಚುನಾವಣೆ ನಡೆಸುವುದಾಗಿದೆ. ಇದನ್ನೂ ಓದಿ: ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು? 

    ಇದು ಹೊಸ ಪರಿಕಲ್ಪನೆಯೇ?
    ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಹೊಸದೇನಲ್ಲ. ಭಾರತ ಸ್ವತಂತ್ರಗೊಂಡ ಆರಂಭದಿಂದಲೂ ಈ ಪರಿಕಲ್ಪನೆಯಲ್ಲೇ ಚುನಾವಣೆಗಳು ನಡೆಯುತ್ತಿದ್ದವು. 1952ರ ಮೊದಲ ಚುನಾವಣೆಯಿಂದ ಹಿಡಿದು 1967ರ ನಾಲ್ಕನೇ ಸಾರ್ವತ್ರಿಕ ಚುನಾವಣೆವರೆಗೆ ಲೋಕಸಭೆ ಹಾಗೂ ಎಲ್ಲಾ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲಾಗಿತ್ತು. 1968 ಮತ್ತು 1969 ರಲ್ಲಿ ಹಲವು ವಿಧಾನಸಭೆಗಳ ಅವಧಿ ಪೂರ್ವ ವಿಸರ್ಜನೆಯಾಯಿತು. ಅಲ್ಲದೇ 1970 ರಲ್ಲಿ ಲೋಕಸಭೆ ಅವಧಿಪೂರ್ವ ವಿಸರ್ಜನೆಯಾದ ಕಾರಣ ಏಕಕಾಲದ ಚುನಾವಣೆ ಪ್ರಕ್ರಿಯೆ ಏರುಪೇರಾಯಿತು.

    ಪರ ವಾದ ಏನು?
    ಇಡೀ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆದರೆ ಭಾರೀ ಪ್ರಮಾಣದ ವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂಬುದು ಈ ವ್ಯವಸ್ಥೆ ಪರವಾಗಿ ಇರುವವರ ವಾದ. ಈಗಿರುವ ಲೆಕ್ಕಾಚಾರದ ಪ್ರಕಾರ, ದೇಶದಲ್ಲಿ ಚುನಾವಣೆ ಪ್ರಕ್ರಿಯೆಗಾಗಿ 50 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತದೆ. ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬಂದಲ್ಲಿ ದೇಶದ ಬೊಕ್ಕಸಕ್ಕೆ ಆಗುವ ಬಹುದೊಡ್ಡ ಹೊರೆಯನ್ನು ತಪ್ಪಿಸಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲ, ಚುನಾವಣೆಗಳ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿದ್ದ ನೀತಿ ಸಂಹಿತೆ ಕಿರಿಕಿರಿಗೂ ಇದರಿಂದ ಮುಕ್ತಿ ಸಿಗಬಹುದು ಎಂಬ ವಾದವೂ ಇದೆ. ಅಲ್ಲದೇ ಏಕಕಾಲದ ಚುನಾವಣೆಗಳು ಮತದಾನದ ಪ್ರಮಾಣವನ್ನೂ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಭೂಮಿ ನಿರ್ನಾಮ ಹಂತ ತಲುಪಿದ್ರೆ ಮುಂದೇನು?

    ವಿರೋಧ ಯಾಕೆ?
    ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಗೆ ಕಾಂಗ್ರೆಸ್ ಸೇರಿದಂತೆ ಅನೇಕ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಏಕಕಾಲದ ಚುನಾವಣೆಯಿಂದ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಇದೆ. ಭಾರತದಂತಹ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ವ್ಯವಸ್ಥೆಯ ಮಧ್ಯದಲ್ಲಿಯೇ ಬಹುಮತ ಕಳೆದುಕೊಂಡು ಸರ್ಕಾರವೊಂದು ಅಧಿಕಾರದಿಂದ ಕೆಳಗಿಳಿಯಬಹುದು ಮತ್ತು ಹೊಸ ಸರ್ಕಾರ ರಚನೆಯಾಗಬಹುದು. ಆದರೆ ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ ಎನ್ನುವುದು ಮತ್ತೊಂದು ವಾದವಾಗಿದೆ.

    ಈ ಪರಿಕಲ್ಪನೆಯಲ್ಲಿ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ರಾಷ್ಟ್ರಪತಿ ಆಳ್ವಿಕೆಗೆ ಬದಲಾಗುತ್ತಿದ್ದೇವೆ ಎಂದರ್ಥ. ಇದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಷ್ಟ್ರಪತಿ ಆಡಳಿತ ವ್ಯವಸ್ಥೆಗೆ ಬದಲಾಯಿಸಲು ಸಂವಿಧಾನದ ಹಲವಾರು ತಿದ್ದುಪಡಿಗಳ ಅಗತ್ಯವಿದೆ ಎನ್ನಲಾಗಿದೆ.

    ಸಂವಿಧಾನಕ್ಕೆ ಮಾಡಬೇಕಾದ ತಿದ್ದುಪಡಿ ಏನು?
    ಕೇಂದ್ರ ಸರ್ಕಾರ ಹಾಗೂ ವಿಧಾನಸಭೆಗಳ ಅವಧಿ ವಿಸ್ತರಿಸುವುದು ಅಥವಾ ಕಡಿತಗೊಳಿಸುವ ಮಹತ್ವದ ಸಂವಿಧಾನ ತಿದ್ದುಪಡಿಗಳನ್ನು ಮಾಡಬೇಕಿದೆ. ಅದು ಈ ಕೆಳಕಂಡಂತಿದೆ.

    ಆರ್ಟಿಕಲ್ 83 (2): ಲೋಕಸಭೆಯ ಅವಧಿಯು ಐದು ವರ್ಷಗಳನ್ನು ಮೀರಬಾರದು ಎಂದು ಅದು ಹೇಳುತ್ತದೆ. ಆದರೆ ಅದನ್ನು ಶೀಘ್ರದಲ್ಲೇ ವಿಸರ್ಜಿಸಬಹುದು.

    ಆರ್ಟಿಕಲ್ 85 (2): ವಿಸರ್ಜನೆಯು ಅಸ್ತಿತ್ವದಲ್ಲಿರುವ ಸದನದ ಅವಧಿಯನ್ನು ಕೊನೆಗೊಳಿಸುತ್ತದೆ. ಸಾರ್ವತ್ರಿಕ ಚುನಾವಣೆಯ ನಂತರ ಹೊಸ ಸದನವನ್ನು ರಚಿಸಲಾಗುತ್ತದೆ.

    ಆರ್ಟಿಕಲ್ 172 (1): ರಾಜ್ಯ ವಿಧಾನಸಭೆಗಳ ಅವಧಿ ವಿಸ್ತರಿಸುವುದು ಅಥವಾ ಕಡಿತಗೊಳಿಸುವುದು. ಇದನ್ನೂ ಓದಿ: ಚೀನಾಗೆ ಭಾರತದ ಮೇಲೆ ಕಣ್ಣು ಯಾಕೆ?

    ಆರ್ಟಿಕಲ್ 174 (2) (ಬಿ): ಸಂಪುಟದ ನೆರವು ಮತ್ತು ಸಲಹೆ ಮೇರೆಗೆ ವಿಧಾನಸಭೆ ವಿಸರ್ಜಿಸುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಹುಮತ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಯಿAದ ತಿಳಿದು ಬಂದಾಗ ರಾಜ್ಯಪಾಲರು ತಮ್ಮ ಅಧಿಕಾರ ಚಲಾಯಿಸಬಹುದು.

    ಆರ್ಟಿಕಲ್ 356: ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು.

    ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಹೇಗೆ?
    ಸಾಂವಿಧಾನಿಕ ತಿದ್ದುಪಡಿಗಾಗಿ, ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರು ಮತದಾನಕ್ಕೆ ಹಾಜರಿರಬೇಕು. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಒಮ್ಮತದ ಅಗತ್ಯವಿದೆ. ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಂತರ, ಅದನ್ನು ಭಾರತದ ಅರ್ಧದಷ್ಟು ರಾಜ್ಯಗಳು ತಮ್ಮ ಅಸೆಂಬ್ಲಿಗಳಲ್ಲಿ ನಿರ್ಣಯಗಳ ಮೂಲಕ ಅನುಮೋದಿಸಬೇಕಾಗುತ್ತದೆ.

    ಇದಕ್ಕೂ ಬೇಕು ಅಪಾರ ಸಂಪನ್ಮೂಲ
    ಏಕಕಾಲಕ್ಕೆ ಲೋಕಸಭೆ ಮತ್ತು ರಾಜ್ಯ ಚುನಾವಣೆಗಳನ್ನು ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ತಂದರೂ ಅಪಾರ ಸಂಪನ್ಮೂಲ ಬೇಕಾಗುತ್ತದೆ. ಮತದಾನ ನಡೆಸಲು 25 ಲಕ್ಷಕ್ಕೂ ಹೆಚ್ಚು ಇವಿಎಂ ಮತ್ತು 25 ಲಕ್ಷ ವಿವಿಪ್ಯಾಟ್‌ಗಳು ಬೇಕಾಗಬಹುದು. ಚುನಾವಣಾ ಆಯೋಗವು ಈಗ ಕೇವಲ 12 ಲಕ್ಷ ಇವಿಎಂಗಳನ್ನು ಮಾತ್ರ ಹೊಂದಿದೆ. ಇದನ್ನೂ ಓದಿ: ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

    2014ರಲ್ಲಿ ಬಿಜೆಪಿ ನೀಡಿದ್ದ ಭರವಸೆ ಏನು?
    ಬಿಜೆಪಿ ತನ್ನ 2014 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಭರವಸೆ ನೀಡಿತ್ತು. ದಕ್ಷಿಣ ಆಫ್ರಿಕಾದಲ್ಲಿ ರಾಷ್ಟ್ರೀಯ ಮತ್ತು ಪ್ರಾಂತೀಯ ಶಾಸಕಾಂಗಗಳಿಗೆ ಐದು ವರ್ಷಗಳ ಬಳಿಕ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುತ್ತದೆ. ಎರಡು ವರ್ಷಗಳ ನಂತರ ಪುರಸಭೆಯ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಸ್ವೀಡನ್‌ನಲ್ಲಿ, ರಾಷ್ಟ್ರೀಯ ಶಾಸಕಾಂಗ (ರಿಕ್ಸ್ಡಾಗ್) ಮತ್ತು ಪ್ರಾಂತೀಯ ಶಾಸಕಾಂಗ/ಕೌAಟಿ ಕೌನ್ಸಿಲ್ (ಲ್ಯಾಂಡ್‌ಸ್ಟಿಂಗ್) ಮತ್ತು ಸ್ಥಳೀಯ ಸಂಸ್ಥೆಗಳು/ಮುನ್ಸಿಪಲ್ ಅಸೆಂಬ್ಲಿಗಳಿಗೆ ಚುನಾವಣೆಗಳನ್ನು ನಿಗದಿತ ದಿನಾಂಕದಂದು ನಡೆಸಲಾಗುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎರಡನೇ ಬಾರಿ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ಮೋದಿ – ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

    ಎರಡನೇ ಬಾರಿ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ಮೋದಿ – ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

    – ಬೆಂಗಳೂರಲ್ಲಿ ಯುಪಿಎಗೆ ಅಂತ್ಯಕ್ರಿಯೆ ಮಾಡಲಾಗಿದೆ ಎಂದ ಪ್ರಧಾನಿ

    ನವದೆಹಲಿ: ಲೋಕಸಭೆಯಲ್ಲಿ (Lok Sabha) ನಿರೀಕ್ಷೆಯಂತೆ ಎಲ್ಲವೂ ನಡೆದಿದೆ. ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿಲುವಳಿಗೆ ಸೋಲಾಗಿದೆ. ಎರಡನೇ ಬಾರಿ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದು ಬೀಗಿದೆ.

    ವಿಪಕ್ಷಗಳ ಗೈರಿನಲ್ಲಿ ಧ್ವನಿಮತದ ಮೂಲಕ ಅವಿಶ್ವಾಸ ನಿಲುವಳಿಯನ್ನು ಎನ್‌ಡಿಎ ಸರ್ಕಾರ ಸೋಲಿಸಿದೆ. ಈ ಸೋಲನ್ನು ವಿಪಕ್ಷಗಳ ಕೂಟ ಕೂಡ ನಿರೀಕ್ಷೆ ಮಾಡಿತ್ತು. ಏಕೆಂದರೆ, ವಿಪಕ್ಷಗಳ ಕೂಟದ ಬಳಿ ಅಗತ್ಯ ಸಂಖ್ಯಾ ಬಲವೇ ಇರಲಿಲ್ಲ. ಮೋದಿಯನ್ನು ಸಂಸತ್‌ಗೆ ಕರೆಯಿಸಿ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ಕೊಡಿಸಬೇಕೆಂಬ ಏಕೈಕ ಉದ್ದೇಶದಿಂದ ಐಎನ್‌ಡಿಐಎ ಕೂಟ ಈ ನಿಲುವಳಿಯನ್ನು ಮಂಡಿಸಿತ್ತು. ಇದನ್ನೂ ಓದಿ: ಮಣಿಪುರ ಶೀಘ್ರದಲ್ಲೇ ಶಾಂತಿಯ ಬೆಳಕನ್ನು ಕಾಣಲಿದೆ: ಮೋದಿ ಭರವಸೆ

    ಒಂದರ್ಥದಲ್ಲಿ ವಿಪಕ್ಷ ಕೂಟ ತಮ್ಮ ಉದ್ದೇಶ ಸಾಧನೆಯಲ್ಲಿ ಯಶಸ್ಸು ಸಾಧಿಸಿತು. ಕಾರಣ ಅವಿಶ್ವಾಸ ನಿಲುವಳಿ ಮೇಲಿನ ಚರ್ಚೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು, ಮಣಿಪುರದ ಹಿಂಸಾಚಾರದ ಬಗ್ಗೆ ಸುದೀರ್ಘ ಹೇಳಿಕೆ ಕೊಟ್ಟರು.

    ಅವಿಶ್ವಾಸ ನಿರ್ಣಯದ ಮೇಲೆ ಕಳೆದ ಮೂರು ದಿನಗಳಿಂದ ನಡೆದ ಚರ್ಚೆಯಲ್ಲಿ ಕೇಂದ್ರದ ವಿರುದ್ಧ ನಾನಾ ಆರೋಪ ಮಾಡಿದ್ದ ವಿಪಕ್ಷಗಳಿಗೆ ಲಘು ಧಾಟಿಯಲ್ಲಿಯೇ ಪ್ರಧಾನಿ ತಿರುಗೇಟು ನೀಡಿದರು. ಸುದೀರ್ಘ 2 ಗಂಟೆ 13 ನಿಮಿಷ ಪ್ರತ್ಯುತ್ತರ ನೀಡಿದ ಪ್ರಧಾನಿ ಮೋದಿ ವಿಪಕ್ಷಗಳ ಕೂಟದ ಬಂಡವಾಳವನ್ನು ಇಂಚಿAಚಾಗಿ ಬಯಲು ಮಾಡಿದರು. ಮೋದಿಯ ಪ್ರತಿ ಮಾತನ್ನು ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಬೆಂಬಲಿಸಿದರೆ, ವಿಪಕ್ಷ ಸದಸ್ಯರು ಮಾತು ಮಾತಿಗೂ ಅಡ್ಡಿಪಡಿಸಲು ನೋಡಿದರು. ಮಣಿಪುರ.. ಮಣಿಪುರ ಎಂದು ಘೋಷಣೆ ಕೂಗುತ್ತಿದ್ದರು. ಇದಕ್ಕೆ ತಲೆಕೆಡಿಸಿಕೊಳ್ಳದ ಮೋದಿ ವ್ಯಂಗ್ಯಾಸ್ತçಗಳನ್ನು ಪ್ರಯೋಗಿಸುತ್ತಾ ಸಾಗಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ಮೋದಿ ಭಾಷಣದ ಮಧ್ಯೆ ಸಭಾತ್ಯಾಗ ಮಾಡಿದ ವಿಪಕ್ಷಗಳ ಸಂಸದರು

    ಅವಿಶ್ವಾಸ ಪರೀಕ್ಷೆ ಇಟ್ಟ ವಿಪಕ್ಷಗಳಿಗೆ ಧನ್ಯವಾದ. ದೇವರೇ ಅವಿಶ್ವಾಸ ನಿಲುವಳಿ ಮಂಡಿಸಲು ವಿಪಕ್ಷಗಳಿಗೆ ಸೂಚಿಸಿದ್ದಾರೆ. 2018ರಲ್ಲಿ ಏನಾಯ್ತು ಅಂತಾ ಗೊತ್ತಲ್ಲ. ಈಗಲೂ ಅದೇ ಆಗಲಿದೆ. 2024ರಲ್ಲಿ ಎನ್‌ಡಿಎ ಎಲ್ಲಾ ದಾಖಲೆ ಉಡೀಸ್ ಮಾಡಲಿದೆ. ಇದು ನಮಗೆ ಪರೀಕ್ಷೆಯಲ್ಲ. ಇದು ನಮಗೆ ಶುಭಸೂಚಕ ಎಂದು ಮೋದಿ ವ್ಯಾಖ್ಯಾನಿಸಿದರು.

    ವಿಪಕ್ಷಗಳಿಗೆ ಅಧಿಕಾರ ದಾಹ ಹೆಚ್ಚಿದೆ. ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಪಕ್ಷಗಳೆಲ್ಲಾ ಒಂದಾಗಿವೆ. ಬೆಂಗಳೂರಲ್ಲಿ ಯುಪಿಎಗೆ ಅಂತ್ಯಕ್ರಿಯೆ ಮಾಡಲಾಗಿದೆ. ನಮ್ಮ ಎನ್‌ಡಿಎ ಅಕ್ಷರ ಕದ್ದು ಆ ಕಡೆ ಈ ಕಡೆ ಐಐ ಸೇರಿಸಿಕೊಂಡಿದ್ದಾರೆ. ಇದು ಘಮಾಂಡಿಯಾ ಕೂಟ ಎಂದು ಲೇವಡಿ ಮಾಡಿದರು. ಮೋದಿ ಮಾತು ಕೇಳಲಾಗದೇ ವಿಪಕ್ಷಗಳು ವಾಕೌಟ್ ಮಾಡಿದವು. ಇದನ್ನೂ ಓದಿ: ವಿಪಕ್ಷಗಳ ನೋ ಬಾಲ್‌ಗೆ ನಮ್ಮವರಿಂದ ಸಿಕ್ಸರ್‌, ಬೌಂಡರಿ, ಕೊನೆಗೆ ಸೆಂಚುರಿ: ನರೇಂದ್ರ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ

    ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ

    ನವದೆಹಲಿ: ಸಂಘರ್ಷ ಪೀಡಿತ ಮಣಿಪುರ (Manipur) ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಮಧ್ಯಸ್ಥಿಕೆ ವಹಿಸುವಂತೆ ವಿಪಕ್ಷಗಳ ಬಣ INDIA ಒಕ್ಕೂಟದ ನಾಯಕರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ಎರಡು ದಿನಗಳ ಕಾಲ ಮಣಿಪುರಕ್ಕೆ ಭೇಟಿ ನೀಡಿದ ವಿರೋಧ ಪಕ್ಷಗಳ ಸಂಸದರ 21 ಸದಸ್ಯರ ನಿಯೋಗ ಸೇರಿದಂತೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ ಒಟ್ಟು 31 ಸದಸ್ಯರು ಇಂದು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ನಿರ್ಲಜ್ಜ ಉದಾಸೀನಕ್ಕೆ ಸಾಕ್ಷಿ: INDIA ಒಕ್ಕೂಟದ ಸಂಸದರ ಟೀಕೆ

    ಮಣಿಪುರದ ಪರಿಸ್ಥಿತಿಯು ಕಳೆದ ಕೆಲವು ವಾರಗಳಲ್ಲಿ ನಿರ್ಣಾಯಕ ಹಂತವನ್ನು ತಲುಪಿದೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಆಘಾತಕಾರಿ ವೈರಲ್ ವೀಡಿಯೋ ರಾಷ್ಟ್ರವನ್ನು ಆಘಾತಕ್ಕೆ ತಳ್ಳಿದೆ. ರಾಜ್ಯ ಆಡಳಿತ ಮತ್ತು ಪೊಲೀಸರು ಈ ವಿಷಯವನ್ನು ತ್ವರಿತವಾಗಿ ಪರಿಹರಿಸಲು ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿ ಬಂಧಿಸಲು ಎರಡು ತಿಂಗಳ ಕಾಲ ವಿಳಂಬ ಮಾಡಿರುವುದು ಸಮಸ್ಯೆಯ ತೀವ್ರತೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಯಾವುದೇ ವಿಳಂಬವಿಲ್ಲದೆ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸ್ಥಾಪಿಸಲು ನೀವು ತುರ್ತಾಗಿ ಮಧ್ಯಸ್ಥಿಕೆ ವಹಿಸಬೇಕೆಂದು ವಿನಂತಿಸುತ್ತೇವೆ. ಕಳೆದ 92 ದಿನಗಳ ವಿನಾಶಕ್ಕೆ ಉತ್ತರದಾಯಿತ್ವ ಇರಬೇಕು. ಸಂತ್ರಸ್ತ ಸಮುದಾಯಗಳಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಬದ್ಧರಾಗಬೇಕು. ಮಣಿಪುರದ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ತುರ್ತಾಗಿ ಪ್ರಸ್ತಾಪಿಸಲು ಪ್ರಧಾನ ಮಂತ್ರಿಯ ಮೇಲೆ ಒತ್ತಡ ಹೇರಲು ನಾವು ನಿಮ್ಮನ್ನು ಕೋರುತ್ತೇವೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ?

    ವಿಪಕ್ಷಗಳ ಒಕ್ಕೂಟದ ಸಂಸದರ ನಿಯೋಗವು ಮಣಿಪುರಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿದ್ದರು. ಬಿಷ್ಣುಪುರ ಜಿಲ್ಲೆಯ ಇಂಫಾಲ್‌, ಮೊಯಿರಾಂಗ್‌, ಚುರಾಚಂದ್‌ಪುರ ಸೇರಿ ಹಲವಾರು ಶಿಬಿರಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಜನಾಂಗೀಯ ಘರ್ಷಣೆಯಿಂದ ಸ್ಥಳಾಂತರಗೊಂಡ ಸ್ಥಳೀಯರ ಜೊತೆ ಸಂವಾದ ಕೂಡ ನಡೆಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ನಿರ್ಲಜ್ಜ ಉದಾಸೀನಕ್ಕೆ ಸಾಕ್ಷಿ: INDIA ಒಕ್ಕೂಟದ ಸಂಸದರ ಟೀಕೆ

    ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ನಿರ್ಲಜ್ಜ ಉದಾಸೀನಕ್ಕೆ ಸಾಕ್ಷಿ: INDIA ಒಕ್ಕೂಟದ ಸಂಸದರ ಟೀಕೆ

    – ಸಂಘರ್ಷ ಪೀಡಿತ ಮಣಿಪುರಕ್ಕೆ INDIA ಒಕ್ಕೂಟದ 21 ಸಂಸದರ ನಿಯೋಗ ಭೇಟಿ; ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಕೆ

    ಇಂಫಾಲ್: ಮಣಿಪುರ ಹಿಂಸಾಚಾರ (Manipur Violence) ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಪಕ್ಷಗಳ INDIA ಒಕ್ಕೂಟ ಈಗ ಮಣಿಪುರಕ್ಕೆ ಭೇಟಿ ನೀಡಿದೆ. INDIA ಒಕ್ಕೂಟದ 21 ಸಂಸದರ ನಿಯೋಗವು ಭಾನುವಾರ ಮಣಿಪುರದ ಪರಿಸ್ಥಿತಿಯನ್ನು ಅವಲೋಕಿಸಿತು.

    ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ (Anusuiya Uikey) ಅವರನ್ನು ಭೇಟಿಯಾಗಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಂಘರ್ಷದ ಕುರಿತು ತಮ್ಮ ಜ್ಞಾಪನಾ ಪತ್ರವನ್ನು ಸಹ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ, ಮೇ ಆರಂಭದಿಂದ ರಾಜ್ಯವನ್ನು ಆವರಿಸಿರುವ ಜನಾಂಗೀಯ ಹಿಂಸಾಚಾರದಿಂದ ನೊಂದಿರುವ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ. ಇದನ್ನೂ ಓದಿ:

    ನಿಯೋಗವು ಚುರಾಚಂದ್‌ಪುರ, ಇಂಫಾಲ್ ಮತ್ತು ಮೊಯಿರಾಂಗ್‌ನಲ್ಲಿನ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದೆ. ‘ಸಂಘರ್ಷದ ಆರಂಭದಿಂದಲೂ ಎರಡೂ ಕಡೆಯವರು ಬಿಚ್ಚಿಟ್ಟ ಹಿಂಸಾಚಾರದ ಕರಾಳ ಸನ್ನಿವೇಶಗಳು, ಸಂತ್ರಸ್ತರ ಆತಂಕ, ಅನಿಶ್ಚಿತತೆ, ನೋವು ಮತ್ತು ದುಃಖದ ಕಥೆಗಳನ್ನು ಕೇಳಿ ನಾವು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇವೆ. ಎಲ್ಲಾ ಸಮುದಾಯಗಳಲ್ಲಿ ಕೋಪ ಮತ್ತು ಪರಕೀಯತೆಯ ಭಾವನೆ ಇದೆ. ಇದನ್ನು ತಡ ಮಾಡದೇ ಪರಿಹರಿಸಬೇಕು’ ಎಂದು ನಿಯೋಗವು ಜ್ಞಾಪನಾ ಪತ್ರದಲ್ಲಿ ಒತ್ತಾಯಿಸಿದೆ.

    ಮಣಿಪುರ ಸಂಘರ್ಷದಲ್ಲಿ ಇದುವರೆಗೂ 140 ಕ್ಕೂ ಹೆಚ್ಚು ಸಾವು, 500 ಕ್ಕೂ ಹೆಚ್ಚು ಮಂದಿಗೆ ಗಾಯ, 5,000 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ ಅಂಕಿಅಂಶಗಳಿವೆ. ಎರಡು ಸಮುದಾಯಗಳ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೈಫಲ್ಯವಾಗಿರುವುದು ಅಂಕಿಅಂಶಗಳಿಂದ ಸ್ಪಷ್ಟವಾಗಿದೆ. ಇದುವರೆಗೂ 60,000 ಕ್ಕಿಂತ ಹೆಚ್ಚು ಜನರ ತಮ್ಮ ನೆಲವನ್ನು ಬಿಟ್ಟು ಬೇರೆಡೆಗೆ ಸ್ಥಳಾಂತರ ಆಗಿದ್ದಾರೆ ಎಂದು ಪತ್ರದಲ್ಲಿ ಒಕ್ಕೂಟ ಹೇಳಿದೆ.

    ಆದ್ಯತೆಯ ಆಧಾರದ ಮೇಲೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಬೇಕು. ವಿವಿಧ ಸ್ಟ್ರೀಮ್‌ಗಳ ವಿದ್ಯಾರ್ಥಿಗಳು ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿದ್ದಾರೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆದ್ಯತೆಯಾಗಿರಬೇಕು ಎಂದು ನಿಯೋಗವು ಪತ್ರದ ಮೂಲಕ ಸಲಹೆ ನೀಡಿದೆ.

    ಕಳೆದ ಮೂರು ತಿಂಗಳಿನಿಂದ ಮುಂದುವರಿದ ಇಂಟರ್ನೆಟ್ ನಿಷೇಧವು ಆಧಾರರಹಿತ ವದಂತಿಗಳನ್ನು ಹೆಚ್ಚಿಸುತ್ತಿದೆ. ಇದು ಅಸ್ತಿತ್ವದಲ್ಲಿರುವ ಅಪನಂಬಿಕೆಯನ್ನು ಹೆಚ್ಚಿಸುತ್ತದೆ. ಗೌರವಾನ್ವಿತ ಪ್ರಧಾನಿಯವರ ಮೌನವು ಮಣಿಪುರದ ಹಿಂಸಾಚಾರದ ಬಗ್ಗೆ ಅವರ ನಿರ್ಲಜ್ಜ ಉದಾಸೀನತೆಯನ್ನು ತೋರಿಸುತ್ತದೆ ಎಂದು ನಿಯೋಗ ತರಾಟೆಗೆ ತೆಗೆದುಕೊಂಡಿದೆ.

    ಸಂಘರ್ಷ ಪೀಡಿತ ಮಣಿಪುರಕ್ಕೆ INDIA ಒಕ್ಕೂಟದ 21 ಸಂಸದರ ನಿಯೋಗವು ಎರಡು ದಿನಗಳ ಭೇಟಿ ಕೈಗೊಂಡಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಭಾರತದ ಪ್ರತಿಷ್ಠೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ರಾಜಕೀಯ ಮಾಡಲು ನಾವು ರಾಜ್ಯದಲ್ಲಿಲ್ಲ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸ್ಪಷ್ಟಪಡಿಸಿದ್ದಾರೆ. ‘ನಾವು ಜನಾಂಗೀಯ ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಲು ಮತ್ತು ಸಮಸ್ಯೆ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಹಿಂಸಾಚಾರದ ಅಂತ್ಯ ಮತ್ತು ಶಾಂತಿಯ ಮರುಸ್ಥಾಪನೆಯನ್ನು ನಾವು ಬಯಸುತ್ತೇವೆ. ಮಣಿಪುರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಇಡೀ ಜಗತ್ತು ಗಮನಿಸುತ್ತಿದೆ’ ಎಂದು ಮಾತನಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]