Tag: INDIA Block

  • ರಾಹುಲ್ ಗಾಂಧಿ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ, ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಸೋಲಾಗಿದೆ: ಸಿಎಂ

    ರಾಹುಲ್ ಗಾಂಧಿ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ, ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಸೋಲಾಗಿದೆ: ಸಿಎಂ

    ಬೆಂಗಳೂರು: ಈ ಚುನಾವಣೆಯಿಂದ ರಾಹುಲ್ ಗಾಂಧಿ (Rahul Gandhi) ಅವರ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ. ಆದ್ರೆ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಸೋಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

    ಬೆಂಗಳೂರಿನ (Bengaluru) ಗೃಹಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಜೊತೆಗೆ ರಾಜ್ಯದಲ್ಲಿ ಚುನಾವಣೆ ಮತ್ತು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿದ ಅಧಿಕಾರಿಗಳು ಮತ್ತು ರಾಜ್ಯದ ಎಲ್ಲ ಸಂಸತ್ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು.

    ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ (Congress) ನಿರೀಕ್ಷೆ ಮಾಡಿದ ಸ್ಥಾನಗಳನ್ನು ಗೆಲ್ಲಲು ಆಗಲಿಲ್ಲ. 15-20 ಸ್ಥಾನಗಳಲ್ಲಿ ಗೆಲ್ಲುವ ಲೆಕ್ಕಾಚಾರ ಇತ್ತು. ನಮ್ಮ ಲೆಕ್ಕಾಚಾರದಂತೆ ಆಗಲಿಲ್ಲ. ಆದರೆ 2019 ರಲ್ಲಿ ನಾವು ಒಂದು ಸ್ಥಾನ ಗೆದ್ದಿದ್ದೆವು, ಈ ಬಾರಿ 9 ಸ್ಥಾನ ಗೆದ್ದಿದ್ದೇವೆ. ವೋಟಿಂಗ್ ಶೇರ್ ಸಹ ನಮಗೆ 45.34% ಬಂದಿದೆ. ಬಿಜೆಪಿಗೆ 46.04% ವೋಟ್ ಶೇರ್ ಬಂದಿದೆ. 2019ರಲ್ಲಿ ಅವರಿಗೆ 51.38%, ನಮಗೆ 31.88% ಬಂದಿತ್ತು. ಈ ಬಾರಿ ನಮ್ಮ ವೋಟ್ ಶೇರ್ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾದರೂ (BJP JDA Alliance) ವೋಟ್ ಶೇರ್ ಕಡಿಮೆ ಬಂದಿದೆ. ಜೆಡಿಎಸ್ 5.72% ವೋಟ್ ಶೇರ್ ಪಡೆದಿದೆ. ಕಳೆದ ಸಲ ಜೆಡಿಎಸ್‌ಗೆ 9.67% ವೋಟ್ ಶೇರ್ ಸಿಕ್ಕಿತ್ತು ಎಂದು ವಿವರಿಸಿದರು.

    ಮೋದಿ ಜನಪ್ರಿಯತೆ ಕುಗ್ಗಿದೆ:
    ಬಿಜೆಪಿ ಅಧಿಕಾರದಲ್ಲಿದೆ ಅಂತ ಮೋದಿ ಅವರ ಮುಖ ನೋಡಿ ಮತ ಕೇಳುತ್ತಿದ್ದರು. 2019ರಲ್ಲಿ ಬಿಜೆಪಿಗೆ 303 ಸ್ಥಾನ ಬಂದಿತ್ತು. 2014ರಲ್ಲಿ 282 ಸ್ಥಾನ ಪಡೆದಿತ್ತು. ಈ ಸಲ 246 ಸ್ಥಾನಗಳನ್ನ ಬಿಜೆಪಿಗೆ ಗೆದ್ದಿದೆ. ಅಂದ್ರೆ ಯಾವುದೇ ಪಕ್ಷಕ್ಕೆ ಬಹುಮತ ಬಂದಿಲ್ಲ. ಎಲ್ಲಿಯೂ ಮೋದಿ ಅಲೆ ಇಲ್ಲ. ಮೋದಿ ಜನಪ್ರಿಯತೆ ಕುಗ್ಗಿದೆ ಅನ್ನೋದು ಫಲಿತಾಂಶ ನೋಡಿದಾಗ ಸ್ಪಷ್ಟವಾಗುತ್ತದೆ. ಸರ್ಕಾರ ಅವರು ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಆದ್ರೆ ಬಹುಮತ ಬಿಜೆಪಿಗೆ ಬಂದಿಲ್ಲ ಎಂದು ಒತ್ತಿ ಹೇಳಿದರು.

    ದೇಶದಲ್ಲಿ ಮೋದಿ ಅಲೆ ಇಲ್ಲ ಅನ್ನೋದು ಗೊತ್ತಾಗಿಯೇ ಅವರು ಕೊನೆಕೊನೆಗೆ ಧರ್ಮ, ಜಾತಿ ಹೆಸರಲ್ಲಿ ಮತ ಕೇಳಲು ಶುರು ಮಾಡಿದರು. ಮುಸ್ಲಿಮರ ವಿರುದ್ಧ ನೇರ ವಾಗ್ದಾಳಿ ನಡೆಸಲು ಶುರು ಮಾಡಿದರು. ಸೋಲ್ತೀವಿ ಅಂತ ಗೊತ್ತಾಗಿಯೇ ಮೋದಿ ಇದೆಲ್ಲವನ್ನ ಮಾಡಿದರು. ಇದ್ಯಾವುದೂ ಕೈಗೂಡಲಿಲ್ಲ. ಕೋಮುವಾದ ಸುಳ್ಳುಗಳ ಮೇಲೆ ಮತ ಕೇಳಿದ್ದು ವರ್ಕೌಟ್ ಆಗಲಿಲ್ಲ ಎಂದು ತಿರುಗೇಟು ನೀಡಿದರು.

    ಬಿಜೆಪಿಗೆ ದೊಡ್ಡ ಹಿನ್ನಡೆ:
    ಒಟ್ಟಾರೆಯಾಗಿ ಈ ಚುನಾವಣೆಯಿಂದ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹಿನ್ನಡೆಯಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿ ಅವರ ಪಾದಯಾತ್ರೆ, ಭಾರತ್ ಜೋಡೋ ಯಾತ್ರೆ, ನ್ಯಾಯ್ ಯಾತ್ರೆಗಳು ಕೈ ಹಿಡಿದಿವೆ. ಹಾಗಾಗಿಯೇ ಇಂಡಿಯಾ ಒಕ್ಕೂಟಕ್ಕೆ ಹೆಚ್ಚು ಸ್ಥಾನ ಬಂದಿವೆ. ಅದಕ್ಕಾಗಿ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

  • NDA vs I.N.D.I.A ನೆಕ್‌ ಟು ನೆಕ್‌ ಫೈಟ್‌ – ಎನ್‌ಡಿಎ 295 ಕ್ಷೇತ್ರಗಳಲ್ಲಿ ಮುನ್ನಡೆ

    NDA vs I.N.D.I.A ನೆಕ್‌ ಟು ನೆಕ್‌ ಫೈಟ್‌ – ಎನ್‌ಡಿಎ 295 ಕ್ಷೇತ್ರಗಳಲ್ಲಿ ಮುನ್ನಡೆ

    ನವದೆಹಲಿ: 2024ರ ಲೋಕಸಭಾ ಚುನಾವಣೆಯ (Lok Sabha Elections) ಮತ ಎಣಿಕೆಯಲ್ಲಿ ಸದ್ಯ ಎನ್‌ಡಿಎ ಹಾಗೂ ಇಂಡಿಯಾ (NDA vs I.N.D.I.A) ಒಕ್ಕೂಟದ ನಡುವೆ ಟಫ್‌ ಫೈಟ್‌ ಶುರುವಾಗಿದೆ.

    ಬೆಳಗ್ಗೆ 9:45ರ ವೇಳೆಗೆ ಎನ್‌ಡಿಎ 295, ಇಂಡಿಯಾ ಒಕ್ಕೂಟ 214 ಹಾಗೂ ಇತರೇ ಪಕ್ಷಗಳು 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಇದನ್ನೂ ಓದಿ: ಅಂಚೆ ಮತದಾನದಲ್ಲಿ ಎನ್‌ಡಿಎ 304, ಇಂಡಿಯಾ ಕೂಟ 167, ಇತರೆ 30 ಕ್ಷೇತ್ರಗಳಲ್ಲಿ ಮುನ್ನಡೆ

    ಉತ್ತರ ಪ್ರದೇಶದ (Uttar Pradesh) ಹೈವೋಲ್ಟೇಜ್‌ ಕ್ಷೇತ್ರಗಳಾಗಿದ್ದ ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರು ಸತತವಾಗಿ ಹಿನ್ನಡೆ ಅನುಭವಿಸಿದ್ದರೆ, ರಾಯ್‌ ಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಯುಪಿನಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಗುಜಜರಾತ್‌, ರಾಜಸ್ಥಾನ, ಹರಿಯಾಣ ಹಾಗೂ ಒಡಿಶಾ ರಾಜ್ಯಗಳಲ್ಲಿ ಎನ್‌ಡಿಎ ಆರಂಭಿಕ ಮುನ್ನಡೆಯಲ್ಲಿದ್ದು, ಇಂಡಿಯಾ ಕೂಟ ಸಹ ಟಫ್‌ ಫೈಟ್‌ ನೀಡುತ್ತಿದೆ.

    ಕರ್ನಾಟಕದಲ್ಲಿ (Karnataka) ಬಿಜೆಪಿ 19, ಜೆಡಿಎಸ್‌ 3 ಹಾಗೂ ಕಾಂಗ್ರೆಸ್‌ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: ಸಾಕ್ಷ್ಯಗಳಿದ್ದ 9 ಫೋನ್‌ ನಾಶ – ಸ್ಟಾರ್‌ ಹೋಟೆಲ್‌ನಲ್ಲಿ 10 ಲಕ್ಷ ರೂ. ಮೌಲ್ಯದ ರೂಮ್‌ನಲ್ಲಿ ವಾಸ!

  • ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಫ್ಯಾಂಟಸಿ ಪೋಲ್‌ – ʻಇಂಡಿಯಾʼ ಒಕ್ಕೂಟಕ್ಕೆ 295 ಸೀಟ್‌ ಪಕ್ಕಾ: ರಾಗಾ ವಿಶ್ವಾಸ

    ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಫ್ಯಾಂಟಸಿ ಪೋಲ್‌ – ʻಇಂಡಿಯಾʼ ಒಕ್ಕೂಟಕ್ಕೆ 295 ಸೀಟ್‌ ಪಕ್ಕಾ: ರಾಗಾ ವಿಶ್ವಾಸ

    ನವದೆಹಲಿ: 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಬಹುಮತ ಎಂದು ಚುನಾವಣೋತ್ತರ ಸಮೀಕ್ಷೆಗಳು (Exit Poll 2024) ಭವಿಷ್ಯ ನುಡಿದಿವೆ.

    ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi), ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಮೀಡಿಯಾ ಪೋಲ್‌, ಮೋದಿ ಫ್ಯಾಂಟಸಿ ಪೋಲ್‌ (Modi Fantasy Poll) ಅಷ್ಟೇ ಎಂದು ಹೇಳಿದ್ದಾರೆ. ಇದೇ ವೇಳೆ ಇಂಡಿಯಾ ಒಕ್ಕೂಟ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಗಾ, ಸಿಧು ಮೂಸೆವಾಲಾ ಅವರ ಸಾಂಗ್‌ ಕೇಳಿದ್ದೀರಲ್ಲ 295?, 295 ಸ್ಥಾನ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಹೆಚ್ಚು ಕಡಿಮೆ ಬಿಜೆಪಿ 5 ರಾಜ್ಯಗಳಲ್ಲಿ ಕ್ವೀನ್‌ ಸ್ವೀಪ್‌ ಮಾಡಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಏರಲು ಸರಳ ಬಹುಮತಕ್ಕೆ 272 ಸ್ಥಾನ ಬೇಕು. ಸದ್ಯ ಪ್ರಕಟವಾಗಿರುವ ಬಹುತೇಕ ಸಮೀಕ್ಷೆಗಳು ಎನ್‌ಡಿಎಗೆ 350+ ಸ್ಥಾನ ನೀಡಿವೆ. ಅದರಲ್ಲೂ ಟುಡೇಸ್‌ ಚಾಣಕ್ಯ ಬಿಜೆಪಿ 335 ± 15, ಎನ್‌ಡಿಎ 400 ± 15 ಸ್ಥಾನ ನೀಡಿದೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌!

    ಇಂಡಿಯಾ ಟುಡೆ ಸಮೀಕ್ಷೆ ಈ ಬಾರಿಗೆ ಎನ್‌ಡಿಎಗೆ 361-401, ಇಂಡಿಯಾ ಒಕ್ಕೂಟಕ್ಕೆ 131-166, ಇತರರಿಗೆ 8-20 ಸ್ಥಾನಗಳನ್ನು ನೀಡಿದೆ. ಈ ಪೈಕಿ 7 ರಾಜ್ಯಗಳಲ್ಲಿ ಬಿಜೆಪಿ ಬಹುತೇಕ ಕ್ಲೀನ್‌ ಸ್ವೀಪ್‌ ಮಾಡಬಹುದು. ದಕ್ಷಿಣ ರಾಜ್ಯ ತಮಿಳುನಾಡಿನಲ್ಲಿ ಕನಿಷ್ಠ 1-3 ಖಾತೆಗಳನ್ನು ತೆರೆಯುವ ಮೂಲಕ ಐತಿಹಾಸಿಕ ಸಾಧನೆಗೆ ಬಿಜೆಪಿ ಸಾಕ್ಷಿಯಾಗಲಿದೆ ಎಂದು ಭವಿಷ್ಯ ನುಡಿದಿವೆ. ಇದನ್ನೂ ಓದಿ: ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಪೊಲೀಸ್ ಅಧಿಕಾರಿ ನಿವೃತ್ತಿ ಹಿಂದಿನ ದಿನವೇ ಸಸ್ಪೆಂಡ್ 

  • Exit Poll | ಎಕ್ಸಿಟ್‌ ಪೋಲ್‌ ಮೇಲೆ ನಂಬಿಕೆಯಿಲ್ಲ, ಬಿಜೆಪಿ 275 ಸ್ಥಾನಗಳನ್ನೂ ದಾಟಲ್ಲ: ಎಂ.ಬಿ ಪಾಟೀಲ್‌

    Exit Poll | ಎಕ್ಸಿಟ್‌ ಪೋಲ್‌ ಮೇಲೆ ನಂಬಿಕೆಯಿಲ್ಲ, ಬಿಜೆಪಿ 275 ಸ್ಥಾನಗಳನ್ನೂ ದಾಟಲ್ಲ: ಎಂ.ಬಿ ಪಾಟೀಲ್‌

    ಬೆಂಗಳೂರು: ಎಕ್ಸಿಟ್‌ ಪೋಲ್‌ (Exit Poll) ಸಮೀಕ್ಷೆಗಳ ಮೇಲೆ ನಮಗೆ ನಂಬಿಕೆಯಿಲ್ಲ. ಈ ಬಾರಿ ಬಿಜೆಪಿ ತನ್ನ ಸ್ವಂತ ಬಲದಿಂದ 275 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಹೇಳಿದ್ದಾರೆ.

    ಚುನಾವಣೋತ್ತರ ಸಮೀಕ್ಷೆಗಳ ಕುರಿತು ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ಸಮೀಕ್ಷೆ ನಂಬಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್‌ (Congress) ಅನ್ನೋ ಕಾರಣಕ್ಕೆ ಈ ಮಾತನ್ನು ಹೇಳುತ್ತಿಲ್ಲ. ಆದ್ರೆ ವಾಸ್ತವಾಂಶವೇ ಬೇರೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Exit Polls: ಕರ್ನಾಟಕದಲ್ಲಿ 20 ರ ಗಡಿ ದಾಟಿದ ಬಿಜೆಪಿ – ಕಾಂಗ್ರೆಸ್‌ಗೆ ಎಷ್ಟು?

    2019ರ ಚುನಾವಣೆಯಲ್ಲಿ ಪುಲ್ವಾಮಾ ದಾಳಿ, ಬಾಲಾಕೋಟ್ ಏರ್‌ಸ್ಟ್ರೈಕ್‌ ಇವೆಲ್ಲವೂ ರಾಷ್ಟ್ರೀಯತೆಯ ಭಾವನೆ ಬಿತ್ತಿತ್ತು. ದೇಶಕ್ಕೆ ಗಂಡಾಂತರ ಬರಬಾರದು ಅನ್ನೋ ಕಾರಣಕ್ಕೆ ಎಲ್ಲರೂ ಬಿಜೆಪಿ ಪರವಾಗಿದ್ದರು. ಆದ್ದರಿಂದ ಬಿಜೆಪಿ ಗೆದ್ದಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Exit Polls | ಮೋದಿ ಹ್ಯಾಟ್ರಿಕ್‌ – 350ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎನ್‌ಡಿಎ

    2024ರ ಚುನಾವಣೆಯಲ್ಲಿ ಮೋದಿ ಅಲೆ ಇಲ್ಲವೇ ಇಲ್ಲ, ಆರ್‌ಎಸ್‌ಎಸ್ ಕೂಡ ಅಷ್ಟೊಂದು ದೊಡ್ಡಮಟ್ಟದ ಪ್ರಚಾರ ಮಾಡಿಲ್ಲ. ಎನ್‌ಆರ್‌ಐ ಸಮುದಾಯಗಳೂ ಸಹ ಮೋದಿ ಪರವಾಗಿ ಅಷ್ಟೊಂದು ಪ್ರಚಾರ ಮಾಡಿಲ್ಲ. ಬಿಜೆಪಿ ಕಳೆದ ಬಾರಿ 303 ಸ್ಥಾನಗಳನ್ನ ಪಡೆದುಕೊಂಡಿತ್ತು. ಈ ಬಾರಿ ಉತ್ತರ ಪ್ರದೇಶದಲ್ಲಿ 15 ರಿಂದ 20 ಸ್ಥಾನಗಳು, ಕರ್ನಾಟಕದಲ್ಲಿ 13 ಸ್ಥಾನ ಕಳೆದುಕೊಳ್ತಾರೆ. ಮಹಾರಾಷ್ಟ್ರದಲ್ಲಿ 15 ಸ್ಥಾನಗಳು ಸೇರಿ 60-70 ಸ್ಥಾನಗಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಹೀಗಿರುವಾಗ ಬಿಜೆಪಿ ಗೆಲ್ಲುವುದು ಹೇಗೆ ಆಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

    ಬಿಜೆಪಿ ಸ್ವಂತ ಬಲದಿಂದ 275 ಸ್ಥಾನಗಳನ್ನೂ ಪಡೆಯಲು ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ. ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿಯಾ ಒಕ್ಕೂಟ 295 ಸ್ಥಾನ ಗೆಲ್ಲುತ್ತೆ ಎಂದು ಹೇಳಿದ್ದಾರೆ. ಈ ಬಾರಿ ಇಂಡಿಯಾ ಕೂಟದ ಪರವಾಗಿ ಅಲೆ ಇದೆ ಎಂದು ಎಂಬಿಪಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exit Poll 2024 | ದ್ರಾವಿಡರ ನಾಡಿನಲ್ಲಿ ಕಮಲೋತ್ಪತ್ತಿ – ಬಿಜೆಪಿಯಿಂದ ಐತಿಹಾಸಿಕ ಸಾಧನೆ! 

  • ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್‌ ಗಾಂಧಿ – ಬೆಂಬಲಿಸಿದ ಮಲ್ಲಿಕಾರ್ಜುನ ಖರ್ಗೆ

    ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್‌ ಗಾಂಧಿ – ಬೆಂಬಲಿಸಿದ ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಈ ಬಾರಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಉತ್ತರಾಧಿಕಾರಿಯಾಗಲು ರಾಹುಲ್‌ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬೆಂಬಲಿಸಿದ್ದಾರೆ.

    ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಇಂಡಿಯಾ ಒಕ್ಕೂಟ ((INDIA Block)) ಅಧಿಕಾರಕ್ಕೆ ಬಂದ್ರೆ ಪ್ರಧಾನಿಯಾಗಿ ಯಾರು ಆಯ್ಕೆಯಾಗಬೇಕು ಎನ್ನುವ ಬಗ್ಗೆ ಅವರು ಮಾತನಾಡಿದ್ದಾರೆ. ಇದೇ ವೇಳೆ ಮುಂದಿನ ದಿನಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಚುನಾವಣಾ ಸ್ಪರ್ಧೆಗೂ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 76 ದಿನ, 206 ಕಾರ್ಯಕ್ರಮ – ಪ್ರಚಾರ ಆರಂಭಿಸಿದ ಕನ್ಯಾಕುಮಾರಿಯಲ್ಲೇ ಮೋದಿ ಧ್ಯಾನ

    ಏಕೆಂದರೆ ಈ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಹೈವೋಲ್ಟೇಜ್‌ ಕ್ಷೇತ್ರಗಳಾಗಿದ್ದ ಅಮೇಥಿಯಿಂದ ರಾಹುಲ್‌ ಗಾಂಧಿ (Rahul Gandhi) ಹಾಗೂ ರಾಯ್‌ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧಿಸುವ ಬಗ್ಗೆ ಮಾತುಕತೆ ನಡೆದಿತ್ತು. ಆದ್ರೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣದಿಂದ ಹೊರಗುಳಿದರು. ಆದರೂ ರಾಯ್‌ ಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಪರ ಬಿರುಸಿನ ಪ್ರಚಾರ ನಡೆಸಿದ್ದರು.

    ಪ್ರಮುಖ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ಚುನಾವಣೆಗೆ ಮುನ್ನ ಎರಡು ಭಾರತ್‌ ಜೋಡೋ ಯಾತ್ರೆಗಳನ್ನ ನಡೆಸಿದ್ದಾರೆ. ಮಿತ್ರ ಪಕ್ಷಗಳೊಂದಿಗೆ ಸಮನ್ವಯತೆ ಕಾಯ್ದುಕೊಂಡಿದ್ದಾರೆ. ಮೋದಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸುತ್ತಾರೆ. ಆದ್ದರಿಂದ ಪ್ರಧಾನಿ ಹುದ್ದೆಗೆ ಜನಪ್ರಿಯ ಆಯ್ಕೆ ಎಂದರೆ ರಾಹುಲ್‌ ಗಾಂಧಿ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ನನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ- ಜನರಲ್ಲಿ ಕೇಜ್ರಿವಾಲ್‌ ಭಾವನಾತ್ಮಕ ಮನವಿ

    ಪ್ರಧಾನಿ ಹುದ್ದೆಗೆ ರಾಹುಲ್‌ ಗಾಂಧಿ ನನ್ನ ಆಯ್ಕೆಯಾಗಿದ್ದಾರೆ. ಏಕೆಂದರೆ ರಾಹುಲ್‌ ಗಾಂಧಿ ಕಾಂಗ್ರೆಸ್‌ನ ಬಾಸ್‌. ಯುವಸಮೂಹವನ್ನ ಪ್ರತಿನಿಧಿಸುತ್ತಾರೆ. ದೇಶದ ಆಳ-ಅಗಲ ಅರಿತಿದ್ದಾರೆ. ಅಲ್ಲದೇ ಇಂಡಿಯಾ ಕೂಟದ ಅನೇಕ ಮಂದಿ ರಾಹುಲ್‌ ಗಾಂಧಿ ಅವರನ್ನ ಒಮ್ಮತದ ಅಭ್ಯರ್ಥಿಯಾಗಿ ನೋಡುತ್ತಾರೆ. ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ಇಂಡಿಯಾ ಕೂಟ ಚುನಾವಣೆಯಲ್ಲಿ ಗೆದ್ದ ಬಳಿಕ ಒಟ್ಟಾಗಿ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರ್ತೀವಿ ಎಂದು ಖರ್ಗೆ ಹೇಳಿದ್ದಾರೆ.

  • `ಇಂಡಿಯಾ’ ಕೂಟ ಅಧಿಕಾರಕ್ಕೆ ಬಂದ್ರೆ ಹಣ ಹಾಕುವ ಘೋಷಣೆ – ‘ಟಕಾ ಟಕ್‌’ ಖಾತೆ ಮಾಡಿಸಲು ಮಹಿಳೆಯರ ಕ್ಯೂ

    `ಇಂಡಿಯಾ’ ಕೂಟ ಅಧಿಕಾರಕ್ಕೆ ಬಂದ್ರೆ ಹಣ ಹಾಕುವ ಘೋಷಣೆ – ‘ಟಕಾ ಟಕ್‌’ ಖಾತೆ ಮಾಡಿಸಲು ಮಹಿಳೆಯರ ಕ್ಯೂ

    ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡುವ ಯೋಜನೆ ಜಾರಿಗೊಳಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ಪ್ರಧಾನ ಅಂಚೆ ಕಚೇರಿಗೆ (GPO) ಕಳೆದ ಎರಡು ದಿನಗಳಿಂದ ಬೆಳ್ಳಂ ಬೆಳಗ್ಗೆ ಆಗಮಿಸಿ ಅಂಚೆ ಖಾತೆ ತೆರೆಯಲು ಮುಗಿಬಿದ್ದಿದ್ದರು.

    ಪ್ರತಿ ತಿಂಗಳು ಖಾತೆಗೆ 8 ಸಾವಿರ ರೂ. ಹಣ ಜಮೆಯಾಗುವ ಈ ಯೋಜನೆ ಜಾರಿಗೆ ಬರಲಿದೆ ಎಂಬ ವಿಶ್ವಾಸದಿಂದ ಮಹಿಳೆಯರು ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (IPPB) ಅಡಿ ಖಾತೆ ತೆರೆಯಲು ನಗರದ ವಿವಿಧ ಭಾಗಗಳಿಂದ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಹಿನ್ನೆಲೆ ಬೆಂಗಳೂರು ಕಚೇರಿಯಲ್ಲೂ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಖಾತೆಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿತ್ತು. ಇಂಡಿಯನ್‌ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಅಕೌಂಟ್‌ (Post Office Accounts) ತೆರೆದವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂಬ ವದಂತಿಗಳು ಕಳೆದ ವಾರಾಂತ್ಯದಲ್ಲಿ ಹರಿದಾಡುತ್ತಿದ್ದವು. ಇದರಿಂದ ಮಹಿಳೆಯರು ಪೋಸ್ಟ್‌ ಆಫೀಸ್‌ಗಳಿಗೆ ಮುಗಿ ಬಿದ್ದಿದ್ದರು.

    ಎರಡು ವರ್ಷಗಳ ಹಿಂದೆಯೇ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಅಕೌಂಟ್‌ ಯೋಜನೆಯನ್ನು ಪರಿಚಯಿಸಲಾಗಿದ್ದು, ಇದು ಉಳಿತಾಯ ಖಾತೆಯಾಗಿರುತ್ತದೆ. ಆದರೆ ಈಗ ವದಂತಿ ಹರಡಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಖಾತೆ ತೆರೆಯಲು ಮುಂದಾಗಿದ್ದಾರೆ ಎಂದು ಅಂಚೆ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ 15 ದಿನಗಳಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಖಾತೆ ಮಾಡಿಸಲು ದಾಂಗುಡಿಯಿಡುತ್ತಿದ್ದು, ಬೆಂಗಳೂರು ಅಂಚೆ ಕಚೇರಿ ಸಿಬ್ಬಂದಿ ಸಂಪೂರ್ಣ ಹೈರಾಣಾಗಿದ್ದಾರೆ. ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಟೋಕನ್ ಪಡೆದು ಖಾತೆ ಮಾಡಿಸಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಕಚೇರಿ ಸಿಬ್ಬಂದಿಯಾಗಲಿ, ಅಧಿಕಾರಿಗಳಾಗಲಿ ಮಹಿಳೆಯರನ್ನ ಕೇಳಿದ್ರೆ `ಅಕ್ಕಪಕ್ಕದವರು ಅಕೌಂಟ್‌ಗೆ ಹಣ ಬರುತ್ತೆ ಅಂತ ಹೇಳಿದ್ರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಣ ನೀಡುತ್ತಾರಂತೆ. ಅದಕ್ಕಾಗಿ ಖಾತೆ ಮಾಡಿಸಲು ಕ್ಯೂನಲ್ಲಿ ನಿಂತಿದ್ದೇವೆ’ ಅಂತಾ ಹೇಳಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಅಧಿಕಾರಿಗಳು, 8,500 ರೂ. ಖಾತೆಗೆ ಬರುವ ಯಾವ್ದೇ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ, ಇದೆಲ್ಲವೂ ವದಂತಿ ಎಂದು ಹೇಳಿದ್ದಾರೆ. ಈ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆಯೂ ಅಧಿಕಾರಿಗಳು ಅಂಚೆ ಕಚೇರಿ ಸಿಬ್ಬಂದಿಗೆ ಹೇಳಿದ್ದಾರೆ.

  • ಬಿಜೆಪಿ ಸೋಲಿಸಲು ಬಯಸಿದ್ರೆ ಕಾಂಗ್ರೆಸ್ & ಸಿಪಿಐಗೆ ಮತ ನೀಡಬೇಡಿ: ದೀದಿ

    ಬಿಜೆಪಿ ಸೋಲಿಸಲು ಬಯಸಿದ್ರೆ ಕಾಂಗ್ರೆಸ್ & ಸಿಪಿಐಗೆ ಮತ ನೀಡಬೇಡಿ: ದೀದಿ

    ನವದೆಹಲಿ: ವಿರೋಧ ಪಕ್ಷಗಳ ಒಕ್ಕೂಟ INDIA ರಚನೆ ಮಾಡಿದ್ದು ನಾನು, ಅದಕ್ಕೆ ಹೆಸರು ಸೂಚಿಸಿದ್ದು ನಾನು, ದೇಶದಲ್ಲಿರುವ ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿಲ್ಲ, ಕಾಂಗ್ರೆಸ್ ಮತ್ತು ಸಿಪಿಎಂ ಬಿಜೆಪಿ ಪರವಾಗಿ ಕೆಲಸ‌ ಮಾಡುತ್ತಿವೆ. ನೀವೂ ಬಿಜೆಪಿ ಸೋಲಿಸಬೇಕಾದರೆ ಟಿಎಂಸಿಗೆ ಮತ‌ ನೀಡಬೇಕು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಮುರ್ಷಿದಾಬಾದ್‌ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಂಗಾಳದಲ್ಲಿ TMC ಯಾರ ಜೊತೆಗೂ ಮೈತ್ರಿ ಮಾಡಿಕೊಂಡಿಲ್ಲ. ಇಲ್ಲಿರುವ ಕಾಂಗ್ರೆಸ್ ಮತ್ತು ಟಿಎಂಸಿ ನಾಯಕರು ಬಿಜೆಪಿ ನಾಯಕರ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂಡಿಯಾ ಒಕ್ಕೂಟ ನಾನೇ ಕಾರಣಿಭೂತರಾದರೂ ಬಂಗಾಳದಲ್ಲ ಈ ಮೈತ್ರಿ ಅಸ್ತಿತ್ವದಲ್ಲಿಲ್ಲ. ಹೀಗಾಗಿ ಬಿಜೆಪಿ ಸೋಲಿಸಲು ನಮಗೆ ಮತ ನೀಡಿದ ಎಂದು ಮನವಿ ಮಾಡಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ – ರಾಮನವಮಿ ಶೋಭಾಯಾತ್ರೆಯ ವೇಳೆ ಬಾಂಬ್‌ ಸ್ಫೋಟ, ಕಲ್ಲು ತೂರಾಟ

    ರಾಜ್ಯದಲ್ಲಿ ರಾಮನವಮಿ (Ramanavami) ಆಚರಣೆಯ ಸಂದರ್ಭದಲ್ಲಿ ಬಿಜೆಪಿ (BJP) ಹಿಂಸಾಚಾರವನ್ನು ಪ್ರಚೋದಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ (Mamta Banerjee) ಆರೋಪಿಸಿದರು. ಬಿಜೆಪಿಯು ಮಮತಾ ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿಯನ್ನು ಹೊಣೆಗಾರರನ್ನಾಗಿಸುವ ಮೂಲಕ ಬಂಗಾಳಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾದ ಕಾರಣಕ್ಕೆ ಆಕೆಯನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದೆ.

  • I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ

    I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ

    ಪಾಟ್ನಾ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನ ಜೈಲಿಗೆ ಹಾಕಲಾಗುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಪುತ್ರಿ ಮಿಸಾ ಭಾರತಿ (Misa Bharti) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಪಾಟಲಿಪುತ್ರ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ (RJD Candidate) ಮಿಸಾ ಭಾರತಿ ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪ್ರಧಾನಿ ಮೋದಿ ಬಿಹಾರಕ್ಕೆ ಬಂದಾಗಲೆಲ್ಲಾ ಅವರು ನಮ್ಮ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್- ಕಾಂಗ್ರೆಸ್‌ನಿಂದ ಮಿಡ್‍ನೈಟ್ ಆಪರೇಷನ್

    ಭ್ರಷ್ಟಾಚಾರ ಎಷ್ಟು ದೊಡ್ಡದು ಎಂದು ನಿಮಗೆ ತಿಳಿದಿದೆಯೇ? ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ನಿಜವಾಗಿಯೂ ಭ್ರಷ್ಟಾಚಾರ ಮಾಡಿದೆ. ಹಾಗಾಗಿ ದೇಶದ ಜನ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರದ ಅವಕಾಶ ಮಾಡಿಕೊಟ್ಟರೆ, ಪ್ರಧಾನಿಯಿಂದ ಹಿಡಿದು ಎಲ್ಲ ಬಿಜೆಪಿ ನಾಯಕರೂ ಜೈಲು ಪಾಲಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್‌

    ಜೆಪಿ ನಡ್ಡಾ ಕೌಂಟರ್‌ ಅಟ್ಯಾಕ್‌:
    ಮಿಸಾ ಭಾರತಿ ಹೇಳಿಕೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ಎದುರಿಸುತ್ತಿರುವವರು ಮತ್ತು ಜಾಮೀನಿನ ಮೇಲೆ ಹೊರಗಿರುವವರು ಲಾಲು ಕುಟುಂಬದವರು. ಲಾಲು ಪ್ರಸಾದ್‌ ಹಾಗೂ ಮಿಸಾ ಭಾರತಿ ವಿವಿಧ ಹಗರಣದಲ್ಲಿ ಆಪಾದಿತರು. ಕಳಂಕರಹಿತ ರಾಜಕೀಯ ಜೀವನವನ್ನು ಹೊಂದಿರುವ ಮೋದಿ ಮೇಲೆ ಆರೋಪ ಮಾಡುವುದು ಖಂಡನಾರ್ಹ. ಇಂತಹವರಿಗೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ.

  • ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಫೈನಲ್

    ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಫೈನಲ್

    – ಉದ್ಧವ್‌ ಬಣಕ್ಕೆ 21, ಕಾಂಗ್ರೆಸ್‌ 17 ಸ್ಥಾನದಲ್ಲಿ ಸ್ಪರ್ಧೆ

    ನವದೆಹಲಿ: ಲೋಕಸಭಾ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಶಿವಸೇನೆ (UBT) ಬಣ 21 ಸ್ಥಾನಗಳಲ್ಲಿ, ಕಾಂಗ್ರೆಸ್ (Congress) 17 ಸ್ಥಾನಗಳಲ್ಲಿ ಮತ್ತು ಶರದ್ ಪವಾರ್ (Sharad Pawar) ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವು 10 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

    ವಿವಾದಿತ ಸ್ಥಾನ ಸಾಂಗ್ಲಿಯನ್ನು ಶಿವಸೇನೆ (ಯುಬಿಟಿ) ಉಳಿಸಿಕೊಂಡಿದೆ ಮತ್ತು ಭಿವಂಡಿಯನ್ನು ಕಾಂಗ್ರೆಸ್ ತೆಗೆದುಕೊಂಡಿದೆ. ಶಿವಸೇನೆ ಸ್ಪರ್ಧಿಸುತ್ತಿದ್ದ ಮುಂಬೈ ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಉದ್ಧವ್ ಠಾಕ್ರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಮಹಾರಾಷ್ಟ್ರದ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಜಂಟಿಯಾಗಿ ಸೀಟು ಹಂಚಿಕೆ ಒಪ್ಪಂದವನ್ನು ಘೋಷಿಸಿದರು.

    ಸೀಟು ಹಂಚಿಕೆ ಒಪ್ಪಂದದ ಕುರಿತು ಮಾತನಾಡಿದ ಉದ್ಧವ್ ಠಾಕ್ರೆ, ಎಲ್ಲರೂ ಸೀಟುಗಳಿಗಾಗಿ ಹೋರಾಡಲು ಬಯಸುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಅಂತಿಮವಾಗಿ ಗೆಲುವಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯು (Maharastra Loksabha Election 2024) ಏಪ್ರಿಲ್ 19, 26, ಮತ್ತು ಮೇ 7, 13 ಮತ್ತು 20 ರಂದು ಐದು ಹಂತಗಳಲ್ಲಿ ನಡೆಯಲಿದೆ, ರಾಜ್ಯದಲ್ಲಿ 48 ಲೋಕಸಭಾ ಕ್ಷೇತ್ರಗಳಿವೆ. ಇದನ್ನೂ ಓದಿ: ಕರ್ನೂರು ಚೆಕ್‍ಪೋಸ್ಟ್ ಬಳಿ ಬೈಕ್‍ನಲ್ಲಿ ಸಾಗಿಸುತ್ತಿದ್ದ 25 ಲಕ್ಷ ರೂ. ಸೀಜ್

  • Loksabha Election 2024: ದೆಹಲಿಯಲ್ಲಿ ಕೈಗೆ 3 ಸ್ಥಾನ ಬಿಟ್ಟು ಕೊಟ್ಟು 4 ಸ್ಥಾನಗಳಲ್ಲಿ AAP ಸ್ಪರ್ಧೆ?

    Loksabha Election 2024: ದೆಹಲಿಯಲ್ಲಿ ಕೈಗೆ 3 ಸ್ಥಾನ ಬಿಟ್ಟು ಕೊಟ್ಟು 4 ಸ್ಥಾನಗಳಲ್ಲಿ AAP ಸ್ಪರ್ಧೆ?

    ನವ ದೆಹಲಿ: ಲೋಕಸಭಾ ಚುನಾವಣೆ 2024ಕ್ಕೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ (SP) ಕಾಂಗ್ರೆಸ್‌ನ ಸೀಟು ಹಂಚಿಕೆ ಒಪ್ಪಂದದ ಬಳಿಕ ಆಮ್ ಆದ್ಮಿ ಪಕ್ಷವು (AAP) ದೆಹಲಿ, ಗುಜರಾತ್, ಅಸ್ಸಾಂ ಮತ್ತು ಹರಿಯಾಣದಲ್ಲಿ ಸ್ಥಾನಗಳ ಬಗ್ಗೆ ಹಳೆಯ ಪಕ್ಷದೊಂದಿಗೆ ಸಹಮತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

    ಉಭಯ ಪಕ್ಷಗಳ ನಾಯಕರ ನಡುವೆ ಹಲವಾರು ಸುತ್ತಿನ ಮಾತುಕತೆಯ ನಂತರ ಅವರು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆಯ ಬಗ್ಗೆ ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು, ಮೈತ್ರಿ ಕುರಿತು ಮಾತುಕತೆ ವಿಳಂಬವಾಗಿದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಹೊಸ ಬೆಳವಣಿಗೆಗಳ ಸುಳಿವು ನೀಡಿದ್ದಾರೆ.

    ಒಪ್ಪಂದದ ಪ್ರಕಾರ, ದೆಹಲಿಯಲ್ಲಿ ಎಎಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಚುನಾವಣೆ ಎದುರಿಸಲಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್, ಎಎಪಿಗೆ ಎರಡು ಸ್ಥಾನಗಳನ್ನು ನೀಡಿದರೆ, ಹರಿಯಾಣ ಮತ್ತು ಅಸ್ಸಾಂನಲ್ಲಿ ತಲಾ ಒಂದು ಸ್ಥಾನಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆಯಂತೆ. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜೊತೆ SP ಮೈತ್ರಿ ಖಚಿತ: ಅಖಿಲೇಶ್‌ ಯಾದವ್‌

    ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷ ಎಸ್‌ಪಿ ಮತ್ತು ಕಾಂಗ್ರೆಸ್ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಯನ್ನು ಬುಧವಾರ ಅಂತಿಮಗೊಳಿಸಿವೆ. ಸಮಾಜವಾದಿ ಪಕ್ಷ ಮತ್ತು ಇತರ ಮೈತ್ರಿ ಪಕ್ಷಗಳು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್‌ಗೆ 17 ಸೀಟು ಹಂಚಿಕೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 29 ಸ್ಥಾನಗಳಲ್ಲಿ 28 ರಲ್ಲಿ ಸ್ಪರ್ಧಿಸಲಿದೆ. ಎಸ್‌ಪಿ ಒಂದು ಸ್ಥಾನದಲ್ಲಿ ಬಲಪ್ರಯೋಗ ಮಾಡಲಿದೆ ಎಂಬುದಾಗಿ ತಿಳಿದುಬಂದಿದೆ.