ಜಗತ್ತು ನಿಮ್ಮನ್ನು ನೋಡಿದಾಗ ಭಾರತದ ಶಕ್ತಿಯೇ ಕಾಣುತ್ತದೆ. ಆದರೆ ಶತ್ರುಗಳು ನಿಮ್ಮನ್ನು ನೋಡಿದಾಗ, ಅವರು ತಮ್ಮ ಕೆಟ್ಟ ಯೋಜನೆಗಳ ಅಂತ್ಯವನ್ನು ನೋಡುತ್ತಾರೆ ಎಂದು ಯೋಧರನ್ನು ಮೋದಿ ಹುರಿದುಂಬಿಸಿದ್ದಾರೆ.
ಕೋಲ್ಕೊತಾ: ಇತ್ತೀಚೆಗಷ್ಟೇ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ (Seema Haider) ತನ್ನ ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಓಡಿಬಂದು ಪಬ್ಜಿ ಪ್ರೇಮಿಯನ್ನ (PUBG Lover) ಸೇರಿಕೊಂಡಿದ್ದಾಳೆ. ಅದೇ ರೀತಿ ಮತ್ತೊಂದು ಕೇಸ್ ಬೆಳಕಿಗೆ ಬಂದಿದೆ. ತನ್ನ ಪ್ರೇಮಿಯನ್ನ ಹುಡುಕಿಕೊಂಡು ಅಕ್ರಮವಾಗಿ ಭಾರತವನ್ನ ಪ್ರವೇಶಿಸಿದ್ದ ಬಾಂಗ್ಲಾದೇಶದ (Bangladesh) ಯುವತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬಾಂಗ್ಲಾದೇಶದ ಜೆಸ್ಸೋರ್ ಮೂಲದ ಸಪ್ಲಾ ಅಖ್ತರ್ ಬಂಧಿತ ಯುವತಿ. ತನ್ನ ಪ್ರಿಯಕರನನ್ನ ಭೇಟಿಯಾಗಲು ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇರೆಗೆ ಸಿಲಿಗುರಿ ಕಮಿಷನರೇಟ್ ವ್ಯಾಪ್ತಿಯ ಪ್ರಧಾನನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಕೆಗೆ ಪಬ್ಜಿ ಗೇಮ್ ಆಡುವ ವೇಳೆ ಭಾರತ ಮೂಲದ ಯುವಕನ ಪರಿಚಯವಾಗಿದೆ. ಇಬ್ಬರ ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿ ಕಳೆದ ಎರಡೂವರೆ ತಿಂಗಳಿಂದ ಪ್ರತಿದಿನ ಫೋನ್ ಸಂಪರ್ಕದಲ್ಲಿದ್ದರು.
ಗಡಿ ದಾಟಿ ಬಂದ ಯುವತಿ ಜೀವನೋಪಾಯಕ್ಕಾಗಿ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಇದೇ ಸಂದರ್ಭದಲ್ಲಿ ಯುವತಿಗೆ ತನ್ನ ಪ್ರಿಯಕರ ಮೋಸ ಮಾಡಿ ತನ್ನನ್ನು ನೇಪಾಳಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದಾನೆ ಎಂಬ ವಿಷಯ ಗೊತ್ತಾಗಿದೆ. ಕೂಡಲೇ ಪ್ರಿಯಕರನಿಂದ ತಪ್ಪಿಸಿಕೊಂಡು ಸಿಲಿಗುರಿ ಪಟ್ಟಣದಲ್ಲಿ ರಾತ್ರಿಯೆಲ್ಲ ಸುತ್ತಾಡಿದ್ದಾಳೆ. ಇದನ್ನು ಕಂಡ ಸ್ವಯಂಸೇವಾ ಸಂಸ್ಥೆಯೊಂದರ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗೆ ಬೆಂಕಿ ಹಚ್ಚಿದ ಪ್ರಕರಣ- ಮನೆಗೆ ಬೀಗ ಜಡಿದು ಯುವತಿ ಮನೆಯವರು ಎಸ್ಕೇಪ್
ಸಪ್ಲಾ ಭಾರತಕ್ಕೆ ಬಂದಿದ್ದು ಹೇಗೆ?
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನನ್ನ 21 ವರ್ಷದ ಸಪ್ಲಾ ಅಖ್ತರ್ ನಂಬಿದ್ದಳು. ಎರಡೂವರೆ ತಿಂಗಳ ಹಿಂದೆಯೇ ಸಪ್ಲಾ, ಗಡಿ ದಾಟಿ ಭಾರತ ಪ್ರವೇಶಿಸಿದ್ದಳು. ಭದ್ರತಾ ಪಡೆಗಳ ಕಣ್ತಪ್ಪಿಸಿ ಗಡಿಯಲ್ಲಿನ ಮುಳ್ಳು ತಂತಿ ಬೇಲಿಯನ್ನು ದಾಟಿ ಬಂದಿದ್ದಳು. ಆಕೆಯ ಬಳಿ ಪಾಸ್ಪೋರ್ಟ್ ಕೂಡ ಇಲ್ಲ. ಆರಂಭದಲ್ಲಿ ಪ್ರಿಯಕರನ ಜೊತೆ ಸೇರಿಕೊಳ್ಳುವ ಸಂತಸದಲ್ಲಿದ್ದ ಸಪ್ಲಾ, ಗೆಳೆಯನೊಂದಿಗೆ ವಿದೇಶಿ ನೆಲದಲ್ಲಿ ಜೀವನ ಕಟ್ಟಿಕೊಳ್ಳುವ ಕನಸು ಕಂಡಿದ್ದಳು. ಆದ್ರೆ ಗೆಳೆಯನ ಮುಖವಾಡ ಬಯಲಾಗುತ್ತಿದ್ದಂತೆ ಆತನ ಹಿಡಿತದಿಂದ ಹೇಗೋ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.
ಪ್ರಿಯಕರನಿಗಾಗಿ ಹುಡುಕಾಟ:
ಕೂಲಂಕಷ ವಿಚಾರಣೆ ಬಳಿಕ ಸಪ್ಲಾಳನ್ನು ಅಕ್ರಮವಾಗಿ ಗಡಿ ದಾಟಿದ ಕಾರಣಕ್ಕಾಗಿ ಪೊಲೀಸರು ಬಂಧಿಸಿದ್ದಾರೆ. ಸಪ್ಲಾಳ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ಆಕೆಗೆ ಕೈಕೊಟ್ಟಿರುವ ಪ್ರಿಯಕರನಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
ಇತ್ತೀಚೆಗೆ ಪಾಕಿಸ್ತಾನದಿಂದ ನಾಲ್ಕು ಮಕ್ಕಳ ಸಹಿತ ನೇಪಾಳ ಮಾರ್ಗವಾಗಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಸೀಮಾ ಹೈದರ್ ಎಂಬ ಮಹಿಳೆ ಬಂಧಿತಳಾಗಿ ಜಾಮೀನಿನ ಮಲೆ ಹೊರಗೆ ಬಂದಿದ್ದಾಳೆ. ಆಕೆ ಈಗ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ನೊಯ್ಡಾದಲ್ಲಿ ಹೊಸ ಜೀವನ ಪ್ರಾರಂಭಿಸಿದ್ದಾಳೆ. ಕಳೆದ ವರ್ಷವೂ ಬಾಂಗ್ಲಾದೇಶದಿಂದ ಯುವತಿಯೊಬ್ಬಳು ಪ್ರಿಯಕರನಿಗಾಗಿ ನದಿ ಈಜಿ ಭಾರತಕ್ಕೆ ಬಂದಿದ್ದ ಘಟನೆ ಸದ್ದು ಮಾಡಿತ್ತು.
ಅಗರ್ತಲ: ಚಾಕೊಲೇಟ್ ಖರೀದಿಸಲು ಗಡಿ ದಾಟಿ ಭಾರತಕ್ಕೆ ಪ್ರವೇಶಿಸಿದ್ದ ಬಾಂಗ್ಲಾದೇಶದ ಹುಡುಗನನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಶುಕ್ರವಾರ ತಿಳಿಸಿದೆ.
ಎರಡು ದೇಶಗಳ ನಡುವಿನ ಅಂತರಾಷ್ಟ್ರೀಯ ಗಡಿಯನ್ನು ಗುರುತಿಸುವ ಶಾಲ್ದಾ ನದಿಯ ಸಮೀಪವಿರುವ ಬಾಂಗ್ಲಾದೇಶದ ಹಳ್ಳಿಯೊಂದರ ನಿವಾಸಿ ಎಮಾನ್ ಹೊಸೈನ್ನನ್ನು ಬಿಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ತ್ರಿಪುರಾದ ಸಿಪಾಹಿಜಾಲಾ ಜಿಲ್ಲೆಯಲ್ಲಿ ತನ್ನ ಅಚ್ಚುಮೆಚ್ಚಿನ ಭಾರತೀಯ ಚಾಕೊಲೇಟ್ ಖರೀದಿಸಲು ಆಗಾಗ ಈ ನದಿ ಮಾರ್ಗವಾಗಿ ಭಾರತಕ್ಕೆ ಬರುತ್ತಿದ್ದ. ಇದನ್ನೂ ಓದಿ: ಅಮರನಾಥ ಯಾತ್ರೆ – ಕೇಂದ್ರ ಗೃಹ ಇಲಾಖೆಯಿಂದ ಭದ್ರತಾ ಪರಿಶೀಲನೆ
ಆತ ಭಾರತದ ಕಲಾಂಚೌರಾ ಗ್ರಾಮದ ಅಂಗಡಿಯಿಂದ ಚಾಕೊಲೇಟ್ ಖರೀದಿಸಲು ಮುಳ್ಳುತಂತಿ ಬೇಲಿ ಬಳಿ ರಂಧ್ರವೊಂದನ್ನು ಮಾಡಿ ಅದರ ಮೂಲಕ ನುಸುಳುತ್ತಿದ್ದ. ಅದೇ ರಂಧ್ರದ ಮೂಲಕ ಮತ್ತೆ ತನ್ನ ಮನೆಗೆ ವಾಪಾಸ್ಸಾಗುತ್ತಿದ್ದ. ಸಾಹಸ ಕೃತ್ಯಕ್ಕೆ ಮುಂದಾಗಿದ್ದ ಆತನನ್ನು ಏ.13 ರಂದು ಬಿಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ವಿಚಾರಣೆ ವೇಳೆ, ಬಾಂಗ್ಲಾದೇಶದ ಕೊಮಿಲ್ಲಾ ಜಿಲ್ಲೆಯ ನಿವಾಸಿಯಾಗಿರುವ ಬಾಲಕ ಚಾಕೊಲೇಟ್ ಖರೀದಿಗಾಗಿ ಭಾರತಕ್ಕೆ ನುಸುಳಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿ ಕೇವಲ 100 ಬಾಂಗ್ಲಾದೇಶಿ ಟಾಕಾ (ಕರೆನ್ಸಿ) ಪತ್ತೆಯಾಗಿದೆ. ಆದರೆ ಆತ ಅಕ್ರಮವಾಗಿ ಏನನ್ನೂ ಹೊಂದಿರಲಿಲ್ಲ. ಅಗತ್ಯ ದಾಖಲೆಗಳಿಲ್ಲದೆ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ. ಅವರ ಕುಟುಂಬದ ಯಾರೂ ಇದುವರೆಗೆ ಭಾರತೀಯ ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಎಂದು ದಾಸ್ ಅವರು ಮಾಹಿತಿ ನೀಡಿದ್ದಾರೆ.
ಲಡಾಕ್: ಭಾರತವನ್ನು ಚೀನಾ ಸೈನಿಕರು ಮತ್ತೆ ಕೆಣಕಿದ್ದಾರೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯ 100 ಸೈನಿಕರು ಕುದುರೆ ಮೂಲಕ ಭಾರತದ ಉತ್ತರಾಖಂಡದ ಬಾರಹೋಟಿಗೆ ಪ್ರವೇಶಿಸಿ ಸುಮಾರು 3 ಗಂಟೆ ಕಾಲ ತಂಗಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೂ ಮತಾಂತರ- ಸೈಟ್ ಆಸೆ ತೋರಿಸಿ ಕೃತ್ಯ, ಸ್ಥಳೀಯರಿಂದ ಆಕ್ರೋಶ
ಭಾರತೀಯ ರಕ್ಷಣಾ ಪಡೆಯ ಸೈನಿಕರು ಇಲ್ಲದೇ ಇರುವ ಹೊತ್ತಿನಲ್ಲಿ ಗಡಿಗೆ ಪ್ರವೇಶಿಸಿದ ಚೀನಾ ಸೇನೆಯು ಕಾಲು ಸೇತುವೆಯನ್ನು ನಾಶಪಡಿಸಿದೆ. ಬಳಿಕ ಅದೇ ವೇಳೆ ಐಟಿಬಿಪಿ ಪಡೆ ಬಂದಾಗ, ಪೀಪಲ್ಸ್ ಲಿಬರೇಶನ್ ಆರ್ಮಿಯ ಸೈನಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ.
ಪೂರ್ವ ಲಡಾಕ್ನಲ್ಲಿ ಕಿರಿಕ್ ಮಾಡಿದ್ದ ಚೀನಿ ಸೈನಿಕರಿಗೆ ಭಾರತ ಸರಿಯಾಗಿ ತಿರುಗೇಟು ನೀಡಿತ್ತು. ಈ ಘಟನೆಯ ಬಳಿಕ ಎರಡು ದೇಶಗಳು ಗಡಿಗಳಲ್ಲಿ ಭಾರೀ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿತ್ತು. ಹಲವು ಸುತ್ತಿನ ಮಾತುಕತೆಯ ಬಳಿಕ ಎರಡೂ ದೇಶಗಳು ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡಿದ್ದವು. ಈ ವಿಚಾರ ತಣ್ಣಗಾಗುವ ಸಮಯದಲ್ಲೇ ಮತ್ತೆ ಚೀನಾ ಕಿರಿಕ್ ತೆಗೆದಿದೆ.