Tag: India Pakistan Conflict

  • ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

    ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಕದನ ವಿರಾಮವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಸ್ವಾಗತಿಸಿದ್ದಾರೆ.

    ಕದನ ವಿರಾಮದ (Ceasefire) ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮೊದಲಿಗೆ ಸಿಎಂ ಹೇಳಿದರು. ಆಗ ಪಕ್ಕದಲ್ಲೇ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ಕದನ ವಿರಾಮವನ್ನು ಸ್ವಾಗತಿಸಿದರು.

    ಕದನ ವಿರಾಮ ಘೋಷಣೆಯಾದ್ರೂ ಕೂಡ ಎಚ್ಚರಿಕೆಯಿಂದ ಇರಬೇಕು. ಭಯೋತ್ಪಾದನೆಯನ್ನು ನಿಗ್ರಹಿಸುವ ಕೆಲಸ ಮಾಡುತ್ತೇವೆ. ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

  • ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

    ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

    ನವದೆಹಲಿ: ಭೂ, ಜಲ, ವಾಯು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಭಾರತ ಮತ್ತು ಪಾಕಿಸ್ತಾನ (India Pakistan) ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

    ಜಗತ್ತನ್ನು ಆತಂಕಕ್ಕೀಡು ಮಾಡಿದ ನಾಲ್ಕು ದಿನಗಳ ಉದ್ವಿಗ್ನತೆ ನಂತರ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ. ಇಂದು ಸಂಜೆ 5 ಗಂಟೆಯಿಂದಲೇ ಎಲ್ಲಾ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಕ್ಸ್‌ ಖಾತೆಯಲ್ಲಿ, ಭಾರತ ಮತ್ತು ಪಾಕ್‌ ನಡುವಿನ ಸಂಧಾನದ ಬಗ್ಗೆ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಭಾರತವು ಕದನ ವಿರಾಮವನ್ನು ದೃಢಪಡಿಸಿತು.

    ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸಂಜೆ 5 ಗಂಟೆಯಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ

    ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಮಿಶ್ರಿ ಮಾಹಿತಿ ನೀಡಿದ್ದಾರೆ.

  • ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    – ಭಯೋತ್ಪಾದನೆ ವಿರುದ್ಧ ಮಾತ್ರ ಭಾರತ ಎಂದೂ ರಾಜಿಯಾಗಲ್ಲ: ಸ್ಪಷ್ಟಪಡಿಸಿದ ವಿದೇಶಾಂಗ ಸಚಿವ

    ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (S.Jaishankar) ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಸಚಿವ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ

    ಭಾರತ ಮತ್ತು ಪಾಕ್‌ ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದರು. ಅಮೆರಿಕ ಮಧ್ಯಸ್ಥಿಕೆಯೊಂದಿಗೆ ಕೊನೆಗೂ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

    ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ಆಗಿದೆ ಎಂದು ಡೊನಾಲ್ಡ್‌ ಟ್ರಂಪ್‌ ಎಕ್ಸ್‌ ಪೋಸ್ಟ್‌ ಮೂಲಕ ತಿಳಿಸಿದ್ದರು. ಅದರ ಬೆನ್ನಲ್ಲೇ ಎರಡೂ ದೇಶಗಳು ಅಧಿಕೃತವಾಗಿ ಕದನ ವಿರಾಮದ ಬಗ್ಗೆ ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ