Tag: India Ratna

  • ಸಾವರ್ಕರ್ ಬದಲು ಗೋಡ್ಸೆಗೆ ಭಾರತರತ್ನ ಕೊಡಿ: ಹೆಚ್‍ಡಿಕೆ ವಿವಾದ

    ಸಾವರ್ಕರ್ ಬದಲು ಗೋಡ್ಸೆಗೆ ಭಾರತರತ್ನ ಕೊಡಿ: ಹೆಚ್‍ಡಿಕೆ ವಿವಾದ

    ಬೆಂಗಳೂರು : ಸಿಎಎ, ಎನ್‍ಆರ್ ಸಿ ವಿರೋಧ ಪ್ರತಿಭಟನೆಗಳು, ಸಭೆಗಳು ಹೊಸ ಹೊಸ ವಿವಾದಗಳಿಗೆ ಎಡೆ ಮಾಡಿಕೊಡುತ್ತಿದೆ. ನಿನ್ನೆ ಸಿಎಎ, ಎನ್‍ಆರ್ ಸಿ  ವಿರೋಧಿ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

    ಬೆಂಗಳೂರಿನ ಖುದಾಸ್ ಸಾಹೇಬ್ ಈದ್ಗಾ ಹಾಲ್ ನಲ್ಲಿ ಮುಸ್ಲಿಂ ಮುಖಂಡರು ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ನಿನ್ನೆ ಸಭೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಗಾಂಧೀಜಿ ಹಂತಕನಿಗೆ ಭಾರತ ರತ್ನ ಕೊಡಿ ಅಂತ ವಿವಾದದ ಹೇಳಿಕೆ ನೀಡಿದರು.

    ಜಾಯಿಂಟ್ ಆಕ್ಷನ್ ಕಮಿಟಿ ಕರ್ನಾಟಕ ಆಯೋಜನೆ ಮಾಡಿದ್ದ ಸಭೆಯಲ್ಲಿ ಮಾತನಾಡಿ ಕುಮಾರಸ್ವಾಮಿ, ಬಿಜೆಪಿ ಒಂದು ಸಮುದಾಯ ತುಳಿಯಲು ಸಿಎಎ, ಎನ್‍ಆರ್ ಸಿ ಜಾರಿಗೆ ತಂದಿದೆ. ಮುಸ್ಲಿಮರ ಶಕ್ತಿ ಕುಂದಿಸುವ ಕೆಲಸ ಬಿಜೆಪಿ ಮಾಡ್ತಿದೆ. ಮುಸ್ಲಿಮರ ವಿರುದ್ಧ ಹಿಡನ್ ಅಜೆಂಡಾ ಇಟ್ಟುಕೊಂಡು ಬಿಜೆಪಿ ಕೆಲಸ ಮಾಡ್ತಿದೆ ಅಂತ ಕಿಡಿಕಾರಿದ್ರು. ಈ ವೇಳೆ ಸಾವರ್ಕರ್ ಬಗ್ಗೆ ಪ್ರಸ್ತಾಪಿಸಿದ ಕುಮಾರಸ್ವಾಮಿ ಸಾವರ್ಕರ್ ಭಾರತ ರತ್ನ ಕೊಡೋದಕ್ಕೆ ಬಿಜೆಪಿ ಮುಂದಾಗಿದೆ. ಸಾವರ್ಕರ್ ಗೆ ಭಾರತರತ್ನ ಕೊಡೋ ಬದಲು ನಾಥೂರಾಮ್ ಗೋಡ್ಸೆಗೆ ಬಿಜೆಪಿ ಅವರು ಭಾರತರತ್ನ ಕೊಡಲಿ ಅಂತ ವಿವಾದಾತ್ಮಕ ಹೇಳಿಕೆ ಕೊಟ್ಟರು.

  • ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ

    ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: ಅಯೋಧ್ಯೆ ತೀರ್ಪಿನ ಕುರಿತು ಸಂತಸ ವ್ಯಕ್ತಪಡಿಸಿರುವ ರಾಜ್ಯಸಭಾ ಎಂಪಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಮಾಜಿ ವಿಎಚ್‍ಪಿ ನಾಯಕ ಅಶೋಕ್ ಸಿಂಘಾಲ್ ಅವರಿಗೆ ಭಾರತ ರತ್ನ ನೀಡಿ ಎಂದು ಹೇಳಿದ್ದಾರೆ.

    ಈ ಕುರಿತು ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರವು ಸುಬ್ರಮಣಿಯನ್ ಸ್ವಾಮಿ ಅವರು, ಈ ಸಮಯದಲ್ಲಿ ಶ್ರೀ ಅಶೋಕ್ ಸಿಂಘಾಲ್ ಅವರನ್ನ ನೆನಪಿಸಿಕೊಳ್ಳಬೇಕಿದೆ. ನಮೋ ಸರ್ಕಾರ ಕೂಡಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

    1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಶೋಕ್ ಸಿಂಘಾಲ್ ಆರೋಪಿಯಾಗಿದ್ದರು. ಅಡ್ವಾನಿ ಅವರ ಹೆಸರಿನೊಂದಿಗೆ ಸಿಂಘಾಲ್, ಮುರಳಿ ಮನೋಹರ್ ಜೋಷಿ, ವಿಷ್ಣು ಹರಿ, ಉಮಾ ಭಾರತಿ, ಗಿರಿರಾಜ್ ಕಿಶೋರ್ ಸೇರಿದಂತೆ ಪ್ರಮುಖರ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಸರ್ವೋಚ್ಚ, ಆದ್ರೆ ದೋಷಾತೀತ: ಓವೈಸಿ

    ಸದ್ಯ ಅಯೋಧ್ಯೆ ತೀರ್ಪು ಪ್ರಕಟವಾಗಿದ್ದು, ರಾಮ ಜನ್ಮ ಭೂಮಿಯಲ್ಲೇ ಮಂದಿರ ನಿರ್ಮಾಣಕ್ಕೆ ಅವಕಾಶ ಲಭಿಸಿದೆ. ಈ ಹಿನ್ನೆಲೆಯಲ್ಲಿ ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಅಶೋಕ್ ಸಿಂಘಾಲ್ ಅವರಿಗೆ ಭಾರತ ರತ್ನ ನೀಡಿ ಎಂದು ಸ್ವಾಮಿ ಆಗ್ರಹಿಸಿದ್ದಾರೆ.

    ಅಂದಹಾಗೇ 2015 ರಲ್ಲಿ ಸಿಂಘಾಲ್ ಅವರು ಮೃತಪಟ್ಟಿದ್ದು, ರಾಮಮಂದಿರ ನಿರ್ಮಾಣಕ್ಕಾಗಿ ಸತತ ಹೋರಾಟ ನಡೆಸಿದ್ದರು. 1984ರಲ್ಲೇ ವಿಎಚ್‍ಪಿ ವತಿಯಿಂದ ಮೊದಲ ಧರ್ಮ ಸಂಸತ್ ಆಯೋಜಿಸಿ ರಾಮಮಂದಿರ ನಿರ್ಮಾಣಕ್ಕೆ ಪ್ರಾಮುಖ್ಯತೆ ತಂದಿದ್ದರು. ಅದರಲ್ಲೂ ಮೊದಲ ಬಾರಿಗೆ 5 ವರ್ಷಗಳ ಕಾಲ ಆಡಳಿತ ನಡೆಸಿದ ವಾಜಪೇಯಿ ಸರ್ಕಾರ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಒತ್ತಡ ಹೇರಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಇದನ್ನೂ ಓದಿ: ಶಿಯಾ ಮತ್ತು ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿ ವಜಾ – ಸುಪ್ರೀಂ ಆದೇಶದಲ್ಲಿ ಏನಿದೆ?

  • ‘ಪ್ರಚೋದನಕಾರಿ ಹೇಳಿಕೆ ನೀಡುವವರು ಈ ಮಣ್ಣಿನಲ್ಲಿ ಇರಬಾರದು’- ಸಿದ್ದರಾಮಯ್ಯ ವಿರುದ್ಧ ರಾಮುಲು ಕಿಡಿ

    ‘ಪ್ರಚೋದನಕಾರಿ ಹೇಳಿಕೆ ನೀಡುವವರು ಈ ಮಣ್ಣಿನಲ್ಲಿ ಇರಬಾರದು’- ಸಿದ್ದರಾಮಯ್ಯ ವಿರುದ್ಧ ರಾಮುಲು ಕಿಡಿ

    ಚಿತ್ರದುರ್ಗ: ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಕೇಂದ್ರ ಸರ್ಕಾರ ಚಿಂತನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆರೋಗ್ಯ ಸಚಿವ ಶ್ರೀರಾಮುಲು ಕಿಡಿಕಾರಿದ್ದು, ವೀರ ಸಾವರ್ಕರ್ ಬಗ್ಗೆ ಓದಿಕೊಂಡು ಮಾತನಾಡಲಿ ಎಂದು ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜನರನ್ನು ಪ್ರಚೋದಿಸಿ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಅವರು ಅದೇ ಸಂಸ್ಕಾರದಿಂದ ಬೆಳೆದು ಬಂದ ಕಾರಣದಿಂದ ಈ ರೀತಿ ಮಾತನಾಡುತ್ತಿದ್ದಾರೆ. ಆದರೆ ಅವರು ಸಾರ್ವಕರ್ ಅವರ ಬಗ್ಗೆ ಓದಿಕೊಂಡು ಮಾತನಾಡಲಿ. ಆದರೆ ಈ ರೀತಿ ಮಾತನಾಡುವವರನ್ನು ಜನರು ಸಹಿಸಬಾರದು. ಹಗುರವಾಗಿ ಮಾತನಾಡುವವರು ಈ ಮಣ್ಣಿನಲ್ಲಿ ಇರಬಾರದು ಎಂದರು.

    ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಜನರನ್ನು ಪ್ರಚೋದಿಸುವ ಕೆಲಸವನ್ನು ಮಾಡುವವರು ಈ ಮಣ್ಣಿನಲ್ಲಿ ಇರಬಾರದರು. ಅಲ್ಲದೇ ಇಂತಹ ಹೇಳಿಕೆಗಳನ್ನು ಜನರು ಕೂಡ ಸಹಿಸಿಕೊಳ್ಳಬಾರದು. ಪ್ರಶಸ್ತಿ ನೀಡುವುದನ್ನು ಸರ್ಕಾರ ನಿರ್ಧರಿಸುತ್ತದೆ. ಆದರೆ ಇಷ್ಟು ಮಾತನಾಡುವವರು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲು ಆಗಲಿಲ್ಲ. ಇಂತಹವರಿಗೆ ಪ್ರಶಸ್ತಿ ಕೊಡುವ ಬಗ್ಗೆ ಮಾತಾಡುವ ನೈತಿಕತೆ ಏನಿದೆ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಸಿದ್ದಗಂಗಾ ಶ್ರೀಗಳು ಹಾಗೂ ಪುಟ್ಟರಾಜ ಗವಾಯಿ ಅವರಿಗೂ ಭಾರತರತ್ನ ಕೊಡಬೇಕಿತ್ತು ಎಂದರು.

    ಇದೇ ವೇಳೆ ವಿಜಯಪುರ ಆಸ್ಪತ್ರೆ ಹೊರ ಆವರಣದಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಆ ಆಸ್ಪತ್ರೆಯಲ್ಲಿ 24 ಗಂಟೆ ಇರುವ ಆಸ್ಪತ್ರೆ ವ್ಯವಸ್ಥೆ ಇಲ್ಲ. ಬೆಳಗ್ಗೆ ತಡವಾಗಿ ಬಂದ ಕಾರಣ ಇಂತಹ ಘಟನೆ ನಡೆದಿದ್ದು, ನಿರ್ಲಕ್ಷ ತೋರಿದ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ತಾಯಿ ಮಗು ಸುರಕ್ಷಿತವಾಗಿದ್ದಾರೆ, ಅವರಿಗೆ ಸೂಕ್ತ ಸೌಲಭ್ಯ ಕೊಡುವ ವ್ಯವಸ್ಥೆ ಮಾಡುತ್ತೇವೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದರು.

    ಸಿದ್ದರಾಮಯ್ಯ ಹೇಳಿದ್ದೇನು?: ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ. ಸಾವರ್ಕರ್, ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ. ಆದರೆ ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.