Tag: india

  • ಕೊನೆಯ ಟಿ20ಯಲ್ಲಿ ವಿಶೇಷ ಸಾಧನೆ ನಿರ್ಮಿಸಿದ ರೋಹಿತ್ ಶರ್ಮಾ

    ಕೊನೆಯ ಟಿ20ಯಲ್ಲಿ ವಿಶೇಷ ಸಾಧನೆ ನಿರ್ಮಿಸಿದ ರೋಹಿತ್ ಶರ್ಮಾ

    ಕೇಪ್‍ಟೌನ್: ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಪರ ವಿಶೇಷ ಸಾಧನೆ ನಿರ್ಮಿಸಿದ್ದಾರೆ.

    ವಿದೇಶ ಪ್ರವಾಸದಲ್ಲಿ ಮೊದಲ ಪಂದ್ಯದಲ್ಲೇ ಜಯಗಳಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎನ್ನುವ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ಕೊನೆಯ ಟಿ20 ಪಂದ್ಯದ ವೇಳೆ ಕೊಹ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.

    ಭಾರತದ ಪರ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೊದಲ ನಾಯಕನಾಗಿದ್ದರೆ, ಏಷ್ಯಾದಲ್ಲಿ ಈ ಸಾಧನೆ ನಿರ್ಮಿಸಿದ 6ನೇ ನಾಯಕ ಎನ್ನುವ ಪಟ್ಟ ಈಗ ಒಲಿದಿದೆ.

    ಕೊನೆಯ ಟಿ 20 ಪಂದ್ಯವನ್ನು ಭಾರತ 7 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಟಿ20 ಸರಣಿಯಲ್ಲಿ 2-1 ಅಂತರದಿಂದ ಗೆದ್ದುಕೊಂಡು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಕ್ತಾಯಗೊಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಭಾರತ 7 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾ 6 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತ್ತು.

    ಬ್ಯಾಟಿಂಗ್ ನಲ್ಲಿ 43 ರನ್(27 ಎಸೆತ, 5 ಬೌಂಡರಿ, 1 ಸಿಕ್ಸರ್) ಸಿಡಿಸಿ ಬೌಲಿಂಗ್ ನಲ್ಲಿ ಒಂದು ವಿಕೆಟ್ ಕಿತ್ತ ಸುರೇಶ್ ರೈನಾ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಭುವನೇಶ್ವರ್ ಕುಮಾರ್ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು.

  • 13 ಡಿಜಿಟ್‍ಗೆ ಮೊಬೈಲ್ ನಂಬರ್ ಬದಲಾಗಲ್ಲ – ದಯವಿಟ್ಟು ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

    13 ಡಿಜಿಟ್‍ಗೆ ಮೊಬೈಲ್ ನಂಬರ್ ಬದಲಾಗಲ್ಲ – ದಯವಿಟ್ಟು ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

    ನವದೆಹಲಿ: “ಜುಲೈ 1ರಿಂದ 10 ಸಂಖ್ಯೆಯ ಮೊಬೈಲ್ ನಂಬರ್ ಹೊಂದಿರುವ ಗ್ರಾಹಕರು ತಮ್ಮ ಮೊಬೈಲ್ ನಂಬರ್ ಅನ್ನು 13 ಡಿಜಿಟ್ ಗೆ ಬದಲಾಯಿಸಬೇಕು. 13 ಡಿಜಿಟ್ ಮೊಬೈಲ್ ನಂಬರ್ ನೀಡುವಂತೆ ಎಲ್ಲ ಟೆಲಿಕಾಂ ಕಂಪೆನಿಗಳಿಗೆ ದೂರ ಸಂಪರ್ಕ ಸಚಿವಾಲಯ ಇಲಾಖೆ ಆದೇಶ ನೀಡಿದೆ”

    ಈ ಮೇಲಿನ ವಾಕ್ಯಗಳಿರುವ ಸಂದೇಶ ಈಗ ಸಾಮಾಜಿಕ ಜಾಲತಾಣದಲ್ಲಿ, ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು, ದಯವಿಟ್ಟು ಯಾರು ಈ ಸಂದೇಶವನ್ನು ಶೇರ್ ಮಾಡಬೇಡಿ. ಇದೊಂದು ಸುಳ್ಳು ಸುದ್ದಿಯಾಗಿದ್ದು, ಯಾರೂ ಗಾಬರಿಯಾಗಿ ಗೊಂದಲಕ್ಕೆ ಬೀಳಬೇಡಿ. ಮೊಬೈಲ್ ಸಂಖ್ಯೆಗಳು ಈಗ ಹೇಗೆ 10 ಸಂಖ್ಯೆಗಳು ಇದೆಯೋ ಅದು ಹಾಗೆಯೇ ಮುಂದುವರಿಯುತ್ತದೆ.

    ಸರಿ ಹಾಗಾದ್ರೆ ಯಾವುದಕ್ಕೆ 13 ನಂಬರ್?
    ದೂರಸಂಪರ್ಕ ಇಲಾಖೆಯ (ಡಿಓಟಿ) ಆದೇಶ ಮೆಷಿನ್ ಟು ಮೆಷಿನ್(ಎಂ2ಎಂ) ಸಿಮ್ ಗಳಿಗೆ ಮಾತ್ರ ಸೀಮಿತವಾಗಿದ್ದು ಪೀರ್ ಟು ಪೀರ್(ಪಿ2ಪಿ) ಸಿಮ್ ಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಸುಳ್ಳು ಸುದ್ದಿ ಪ್ರಕಟವಾಗುತ್ತಿದ್ದಂತೆ ಟೆಲಿಕಾಂ ಕಂಪೆನಿಗಳಾದ ಏರ್‍ಟೆಲ್, ರಿಲಯನ್ಸ್ ಜಿಯೋ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿ ಯಾವುದೇ ಕಾರಣಕ್ಕೂ ಗ್ರಾಹಕರ ನಂಬರ್ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದೆ.

    ಏನಿದು ಎಂ2ಎಂ?
    ಸುಲಭವಾಗಿ ಸರಳವಾಗಿ ಹೇಳುವುದಾದರೆ ದೂರದಲ್ಲಿರುವ ಯಂತ್ರಗಳನ್ನು ನಿಮ್ಮ ಮೊಬೈಲ್ ಮೂಲಕವೇ ನಿಯಂತ್ರಿಸಬಹುದಾದ ವ್ಯವಸ್ಥೆ. ವೈರ್‌ಲೆಸ್‌ ಮೂಲಕ ಎರಡು ಸಾಧನಗಳನ್ನು ಪರಸ್ಪರ ಕೆಲಸಕ್ಕಾಗಿ ಜೋಡಿಸುವ ಹೊಸ ಪೀಳಿಗೆಯ ತಂತ್ರಜ್ಞಾನವೇ ಎಂ2ಎಂ. ಕಾರುಗಳು, ವಿದ್ಯುತ್ ಮೀಟರ್, ಸ್ವೈಪಿಂಗ್ ಯಂತ್ರಗಳಿಗೆ ಎಂ2ಎಂ ಸಂಖ್ಯೆಗಳಿರುವ ಸಿಮ್ ಗಳನ್ನು ನೀಡಲಾಗುತ್ತದೆ.

    ಡಿಓಟಿ ಆದೇಶದಲ್ಲಿ ಏನಿದೆ?
    ಪ್ರಸ್ತುತ ಇರುವ 10 ಅಂಕಿಗಳ ಸಂಖ್ಯೆಯಿಂದ 13 ಅಂಕಿಗಳ ಸಂಖ್ಯೆಗೆ ಬದಲಾವಣೆ ಪ್ರಕ್ರಿಯೆ 2018ರ ಅಕ್ಟೋಬರ್ 1ರಿಂದ ಆರಂಭವಾಗಲಿದ್ದು, ಡಿಸೆಂಬರ್ 31ರೊಳಗೆ ಪೂರ್ಣಗೊಳ್ಳಬೇಕಿದೆ. 2018ರ ಜುಲೈ 1ರಿಂದ ವಿತರಣೆಯಾಗಲಿರುವ ಎಲ್ಲ ಹೊಸ ಎಂ2ಎಂ ಸಂಖ್ಯೆಗಳು 13 ಅಂಕಿಗಳದ್ದಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

    ಸುಳ್ಳು ಸುದ್ದಿ ಪ್ರಸಾರ ಆಗಿದ್ದು ಹೇಗೆ?
    ಮೆಷಿನ್ ಟು ಮೆಷಿನ್(ಎಂ2ಎಂ)ಗಳಿಗೆ ಸಂಬಂಧಿಸಿದಂತೆ ಈ ಆದೇಶ ಪ್ರಕಟವಾಗಿದ್ದರೂ ಇದೂ ಪೀರ್ ಟು ಪೀರ್(ಪಿ2ಪಿ) ಗ್ರಾಹಕರಿಗೂ ಅನ್ವಯವಾಗುತ್ತದೆ ಎಂದು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಪ್ರಕಟಿಸಿದ್ದರಿಂದ ಸುಳ್ಳು ಸುದ್ದಿ ಈಗ ಸೃಷ್ಟಿಯಾಗಿದೆ.

    ಎಂ2ಎಂ ತಂತ್ರಜ್ಞಾನ ಹೇಗೆ ಭಿನ್ನ?
    ಈಗ ನೀವು ನಿಮ್ಮ ಮನೆಯಲ್ಲಿ ಸಿಸಿಕ್ಯಾಮೆರಾ ಹಾಕಿದ್ದೀರಿ ಎಂದು ಭಾವಿಸಿಕೊಳ್ಳಿ. ಕ್ಯಾಮೆರಾ ತನ್ನ ಮುಂದುಗಡೆ ಏನು ನಡೆಯುತ್ತಿರುತ್ತದೋ ಆ ಎಲ್ಲ ದೃಶ್ಯಗಳನ್ನು ಮಾತ್ರ ಸೆರೆಹಿಡಿಯುತ್ತದೆ. ಅಂದರೆ ಸಿಸಿ ಕ್ಯಾಮೆರಾ ನಿಮ್ಮ ಮನೆಗೆ ನುಗ್ಗಿದ ಕಳ್ಳನ ಚಲನವಲನಗಳನ್ನು ಸೆರೆ ಹಿಡಿಯಬಹುದೇ ವಿನಾಃ ಕಳ್ಳತನವನ್ನು ತಪ್ಪಿಸಲು ಸಾಧ್ಯವಿಲ್ಲ. ಆದರೆ ಎಂ2ಎ ತಂತ್ರಜ್ಞಾನದಲ್ಲಿ ಕಳ್ಳತನವನ್ನು ತಡೆಯಬಹುದು. ಹೌದು. ಎಂ2ಎಂ ಅಪ್ಲಿಕೇಶನ್ ಆಧಾರಿತ ಕ್ಷೇತ್ರದಲ್ಲಿ ಮೊಬೈಲ್ ಫೋನ್‍ ನಲ್ಲಿರುವ ಒಂದು ಬಟನ್ ಕ್ಲಿಕ್ ಮಾಡಿ ದೂರದಲ್ಲಿರುವ ಯಂತ್ರಗಳನ್ನು ನಿಯಂತ್ರಿಸಿ ಕಳ್ಳತನವನ್ನು ತಡೆಯಬಹುದು.

    ವೈರ್‌ಲೆಸ್‌ ಕ್ಯಾಮೆರಾಗಳನ್ನು ಮನೆಯಲ್ಲಿ ನಿಮಗೆ ಎಲ್ಲಿ ಬೇಕೋ ಅಲ್ಲಿ ಅಳವಡಿಸಿದರೆ ಆಯ್ತು. ಈ ಸ್ಮಾರ್ಟ್ ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯವನ್ನು ಮೊಬೈಲ್ ಮೂಲಕವೇ ವೀಕ್ಷಿಸಬಹುದು. ಕ್ಯಾಮೆರಾವನ್ನು ಯಾವ ಕಡೆಗೂ ಬೇಕಾದರೂ ತಿರುಗಿಸಿ ಝೂಮ್ ಮಾಡಬಹುದು. ಯಾರಾದರೂ ಪ್ರವೇಶಿಸಿದ್ದಲ್ಲಿ ಎಂ2ಎಂ ಅಪ್ಲಿಕೇಶನ್ ಮೂಲಕ ಎಚ್ಚರಿಕೆಯ ಸಂದೇಶವನ್ನು ರವಾನಿಸಲು ಸಾಧ್ಯವಿದೆ. ಇದನ್ನೂ ಓದಿ: ಉಚಿತ ಕರೆ ನೀಡುತ್ತಿರೋ ಜಿಯೋಗೆ ಎಷ್ಟು ಕೋಟಿ ನಷ್ಟವಾಗಿದೆ? ನಷ್ಟವಾಗಿದ್ದು ಎಲ್ಲಿ?

    ಎಂ2ಎಂ ಸಿಮ್ ಯಾರು ಕೊಡ್ತಾರೆ?
    ವಿದೇಶದಲ್ಲಿ ಈ ವ್ಯವಸ್ಥೆ ಹೆಚ್ಚು ಬಳಕೆಯಾಗುತ್ತಿದ್ದರೂ ಭಾರತದಲ್ಲಿ ಈಗಷ್ಟೇ ಹೆಚ್ಚು ಬಳಕೆಯಾಗುತ್ತಿದೆ. ಸ್ವೈಪಿಂಗ್ ಯಂತ್ರಗಳಲ್ಲಿ ಈ ತಂತ್ರಜ್ಞಾನವೇ ಬಳಕೆ ಆಗುತ್ತಿದೆ. ಬಿಎಸ್‍ಎನ್‍ಎಲ್, ಏರ್‍ಟೆಲ್, ವೊಡಾಫೋನ್, ಆರ್ ಕಾಂ ಕಂಪೆನಿಗಳು ಎಂ2ಎಂ ಸಿಮ್ ನೀಡುತ್ತಿವೆ. ಏರ್‍ಟೆಲ್ ಸ್ಮಾರ್ಟ್ ಮೀಟರ್, ಟ್ರಾಫಿಕ್ ಮ್ಯಾನೇಜ್ ಮೆಂಟ್ ಸಿಸ್ಟಂ ನಂತಹ ಸೌಲಭ್ಯಗಳನ್ನು ನೀಡುತ್ತಿದೆ.  ಇದನ್ನೂ ಓದಿ: ಇನ್ನು ಮುಂದೆ ಡಿಎಲ್, ಆರ್ ಸಿ ಕೇಳಿದ್ರೆ ಮೊಬೈಲ್‍ನಲ್ಲೇ ತೋರಿಸಿ

     

     

     

  • ಧವನ್ ಸ್ಫೋಟಕ ಬ್ಯಾಟಿಂಗ್, ಭುವಿ ಭರ್ಜರಿ ಬೌಲಿಂಗ್ – ಭಾರತಕ್ಕೆ 28 ರನ್‍ಗಳ ಜಯ

    ಧವನ್ ಸ್ಫೋಟಕ ಬ್ಯಾಟಿಂಗ್, ಭುವಿ ಭರ್ಜರಿ ಬೌಲಿಂಗ್ – ಭಾರತಕ್ಕೆ 28 ರನ್‍ಗಳ ಜಯ

    ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ -20 ಪಂದ್ಯವನ್ನು ಭಾರತ 28 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

    ಗೆಲ್ಲಲು 204 ರನ್ ಗಳ ಕಠಿಣ ಗುರಿಯನ್ನು ಪಡೆದ ದಕ್ಷಿಣ ಆಫ್ರಿಕಾ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು. ವೇಗಿ ಭುವನೇಶ್ವರ್ ಕುಮಾರ್ 4 ಓವರ್ ಗಳಲ್ಲಿ 24 ರನ್ ನೀಡಿ 5 ವಿಕೆಟ್ ಕೀಳುವ ಮೂಲಕ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

    ಒಂದು ಹಂತದಲ್ಲಿ 48 ರನ್‍ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ರೀಝ ಹೆಂಡ್ರಿಕ್ಸ್ ಮತ್ತು ಬೆಹರ್ಡಿನ್ ನಾಲ್ಕನೇಯ ವಿಕೆಟ್ ಗೆ 81 ರನ್‍ಗಳ ಜೊತೆಯಾಟವಾಡಿ ಅಪಾಯದಿಂದ ಪಾರು ಮಾಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್ ಮನ್ ಗಳು ಜಾಸ್ತಿ ಹೊತ್ತು ನಿಲ್ಲದ ಕಾರಣ ದಕ್ಷಿಣ ಆಫ್ರಿಕಾ ಸೋಲನ್ನು ಒಪ್ಪಿಕೊಂಡಿತು.

    ರೀಝ ಹೆಂಡ್ರಿಕ್ಸ್ 70 ರನ್(50 ಎಸೆತ, 8 ಬೌಂಡರಿ, 1 ಸಿಕ್ಸರ್) ಫರ್ಹಾನ್ ಬೆಹರ್ಡಿನ್ 39 ರನ್(27 ಎಸೆತ, 3 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರು. ಭುವನೇಶ್ವರ್ ಕುಮಾರ್ 5 ವಿಕೆಟ್ ಪಡೆದರೆ, ಜೈದೇವ್ ಉನಾದ್ಕತ್, ಹಾರ್ದಿಕ್ ಪಾಂಡ್ಯಾ , ಚಹಲ್ ತಲಾ ಒಂದು ವಿಕೆಟ್ ಪಡೆದರು.

    ಭಾರತದ ಪರ ಶಿಖರ್ ಧವನ್ 72 ರನ್(39 ಎಸೆತ, 10 ಬೌಂಡರಿ, 2 ಸಿಕ್ಸರ್) ವಿರಾಟ್ ಕೊಹ್ಲಿ 26 ರನ್(20 ಎಸೆತ, 2 ಬೌಂಡರಿ, 1ಸಿಕ್ಸರ್), ಮನೀಶ್ ಪಾಂಡೆ ಔಟಾಗದೇ 29 ರನ್(27 ಎಸೆತ, 1 ಸಿಕ್ಸರ್) ಹೊಡೆದರು.

    ಜೂನಿಯರ್ ಡಾಲ 2 ವಿಕೆಟ್ ಪಡೆದರೆ, ಕ್ರಿಸ್ ಮೊರಿಸ್, ತಬ್ರೈಜ್ ಶಂಸಿ, ಯಂಡಿಲ್ ಫೆಲುಕ್ವಾಯೊ ತಲಾ ಒಂದೊಂದು ವಿಕೆಟ್ ಪಡೆದರು. ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭುವನೇಶ್ವರ್ ಕುಮಾರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಎರಡನೇ ಟಿ 20 ಪಂದ್ಯ ಬುಧವಾರ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

  • ತ್ರಿವರ್ಣ ಧ್ವಜ ಸರಿ ಹಿಡಿಯುವಂತೆ ಅಭಿಮಾನಿಗೆ ಹೇಳಿದ್ದು ಯಾಕೆ? ಅಫ್ರಿದಿ ಹೇಳ್ತಾರೆ ಓದಿ

    ತ್ರಿವರ್ಣ ಧ್ವಜ ಸರಿ ಹಿಡಿಯುವಂತೆ ಅಭಿಮಾನಿಗೆ ಹೇಳಿದ್ದು ಯಾಕೆ? ಅಫ್ರಿದಿ ಹೇಳ್ತಾರೆ ಓದಿ

    ಕರಾಚಿ: ಬೇರೆ ದೇಶಗಳ ಧ್ವಜವನ್ನು ಗೌರವಿಸುವುದು ನಮ್ಮ ಕರ್ತವ್ಯ. ಹಾಗಾಗಿ ನಾನು ಮಹಿಳಾ ಅಭಿಮಾನಿಯ ಕೈಯಲ್ಲಿದ್ದ ತ್ರಿವರ್ಣ ಧ್ವಜವನ್ನು ಸರಿಯಾಗಿ ಹಿಡಿದುಕೊಳ್ಳಲು ಹೇಳಿದೆ ಎಂದು ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನ ನಡೆಯುತ್ತಿರುವ ರಾಜಕೀಯ ಸಂಘರ್ಷದ ಬಗ್ಗೆ ಪ್ರತಿಕ್ರಿಯಿಸಿದ ಅಫ್ರಿದಿ, ಈ ವಿಷಯವು ಕ್ರಿಕೆಟ್ ಪಂದ್ಯಗಳ ಮೇಲೆ ಪರಿಣಾಮ ಬೀರಿದೆ. ಆದರೆ ಎರಡೂ ದೇಶದ ಸ್ನೇಹದ ಸಂಬಂಧಕ್ಕೆ ಯಾವುದೇ ಅಡ್ಡಿ ಮಾಡಿಲ್ಲ. ರಾಷ್ಟ್ರಗಳ ನಡುವಿನ ಸಂಬಂಧಗಳ ಸುಧಾರಣೆಗಾಗಿ ಎರಡೂ ದೇಶದ ಆಟಗಾರರು ಕ್ರಿಕೆಟ್ ಆಡಲು ಪ್ರಯತ್ನಿಸುತ್ತಿದ್ದಾರೆ. ಶಾಂತಿಯ ರಾಯಭಾರಿಯಾದ ನಾವು ಸ್ನೇಹ, ಪ್ರೀತಿ ಮತ್ತು ಶಾಂತಿಯನ್ನು ಇಡೀ ಜಗತ್ತಿಗೆ ಸಾರಬೇಕು ಎಂದು ತಿಳಿಸಿದರು.

    ಫೆ.8 ರಂದು ಸೇಂಟ್ ಮೊರಿಟ್ಜ್ ನಗರದ ಸ್ಕಿ ರಿಸಾರ್ಟ್ ನಲ್ಲಿ ನಡೆದ ಐಸ್ ಕ್ರಿಕೆಟ್ ಟೂರ್ನಿಯಲ್ಲಿ ವಿರೇಂದ್ರ ಸೆಹ್ವಾಗ್, ಆಸ್ಟ್ರೇಲಿಯಾದ ಮೈಕ್ ಹಸ್ಸಿ, ಪಾಕಿಸ್ತಾನದ ಶೊಯೆಬ್ ಅಖ್ತರ್ ಹಾಗೂ ಶ್ರೀಲಂಕಾದ ಮಹೇಲಾ ಜಯವರ್ಧನೆ ಸೇರಿದಂತೆ ಹಲವು ಕ್ರಿಕೆಟಿಗರು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

    ಸೆಹ್ವಾಗ್ ನೇತೃತ್ವದ ಪ್ಯಾಲೇಸ್ ಡೈಮಂಡ್ಸ್ ತಂಡವನ್ನು ಶಾಹಿದ್ ಅಫ್ರಿದಿ ನೇತೃತ್ವದ ರಾಯಲ್ಸ್ ತಂಡ ಸೋಲಿಸಿತ್ತು. ಪಂದ್ಯದ ಬಳಿಕ ಅಫ್ರಿದಿ ಅಭಿಮಾನಿಗಳ ಬಳಿ ಧಾವಿಸಿ ಫೋಟೋಗಳಿಗೆ ಪೋಸ್ ನೀಡುತ್ತಿದ್ದರು. ಈ ವೇಳೆ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡಿದ್ದ ಭಾರತದ ಮಹಿಳಾ ಅಭಿಮಾನಿಯೊಬ್ಬರು ಅಫ್ರಿದಿ ಜೊತೆ ಫೋಟೋ ತೆಗೆಯಲು ಮುಂದಾಗಿದ್ದರು.

    ಮಹಿಳಾ ಅಭಿಮಾನಿ ಸರಿಯಾಗಿ ಧ್ವಜ ಹಿಡಿದುಕೊಳ್ಳದೇ ಇರುವುದನ್ನು ಗಮನಿಸಿದ ಅಫ್ರಿದಿ, ಧ್ವಜವನ್ನು ಬಿಡಿಸಿ ಎಂದು ಹೇಳಿದರು. ಕೂಡಲೇ ಮಹಿಳಾ ಅಭಿಮಾನಿ ಧ್ವಜವನ್ನು ಬಿಡಿಸಿ ಅಫ್ರಿದಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮೆಚ್ಚುಗೆಗೆ ಪಾತ್ರರಾಗಿದ್ದರು.

    https://twitter.com/Nibrazcricket/status/962004645806718977?

  • ಮತ್ತೊಂದು ಸೂರ್ಯ ಗ್ರಹಣ-ಭಾರತಕ್ಕಿದೆಯಾ ಖಂಡಗ್ರಾಸ ಗ್ರಹಣದ ಎಫೆಕ್ಟ್?

    ಮತ್ತೊಂದು ಸೂರ್ಯ ಗ್ರಹಣ-ಭಾರತಕ್ಕಿದೆಯಾ ಖಂಡಗ್ರಾಸ ಗ್ರಹಣದ ಎಫೆಕ್ಟ್?

    ಬೆಂಗಳೂರು: ಹದಿನೈದು ದಿನಗಳ ಹಿಂದಷ್ಟೇ ಶತಮಾನದ ಭೂಮಂಡಲದ ಅಪರೂಪದ ಕೌತುಕ ರಕ್ತಚಂದಿರನ ಕಣ್ತುಂಬಿಕೊಂಡಿದ್ದೇವೆ. ಈಗ ಮತ್ತೊಂದು ಸೂರ್ಯ ಗ್ರಹಣಕ್ಕೆ ಜನ ಅಣಿಯಾಗಬೇಕಿದೆ. ಇಂದು ಮಧ್ಯರಾತ್ರಿ 12:25 ಗ್ರಹಣ ಆರಂಭವಾಗಿ, ಮುಂಜಾನೆ 4:17 ನಿಮಿಷಕ್ಕೆ ಮುಕ್ತಾಯವಾಗಲಿದೆ.

    ಹುಡುಕಿದಷ್ಟೂ ಕೆದಕಿದಷ್ಟು ಕೌತುಕಗಳನ್ನ ಅಡಗಿಸಿಟ್ಟುಕೊಂಡಿರುವ ಸೌರಮಂಡಲದಲ್ಲಿ ಇಂದು ಮತ್ತೊಂದು ಕೌತುಕ ಘಟನೆ ನಡೆಯಲಿದೆ. ಈ ಖಂಡಗ್ರಾಸ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ, ಕರ್ನಾಟಕಕ್ಕೆ ಯಾವ ಎಫೆಕ್ಟ್ ಇರುವದಿಲ್ಲ. ಈ ಸೂರ್ಯಗ್ರಹಣ ದಕ್ಷಿಣ ಅಮೇರಿಕಾ, ಅಂರ್ಜೆಟೈನಾ, ಅಂಟಾರ್ಟಿಕಾದಲ್ಲಿ ಮಾತ್ರ ಗೋಚರಿಸುತ್ತದೆ. ಸೂರ್ಯಾಸ್ತದ ಸಮಯದಲ್ಲಿ ಗ್ರಹಣ ಸಂಭವಿಸಲಿದ್ದು, ಸೂರ್ಯನ ಶೇಕಡಾ 30 ರಿಂದ 40 ರಷ್ಟು ಭಾಗ ಮಾತ್ರ ಗ್ರಹಣ ಪೀಡಿತವಾಗಿರುತ್ತದೆ.

    ಈ ಗ್ರಹಣದ ಬಗ್ಗೆ ಭಯ ಬೇಡ ಅನ್ನೋದು ಕೆಲ ಜ್ಯೋತಿಷಿಗಳ ವಾದ. ಯಾಕೆಂದರೆ ಗ್ರಹಣ ಪೀಡಿತ ಪ್ರದೇಶದಲ್ಲಿ ಭಾರತವಾಗಲೀ ಅಥವಾ ಕರ್ನಾಟಕವಾಗಲೀ ಇಲ್ಲ. ಅಲ್ಲದೇ ಮಧ್ಯರಾತ್ರಿ ಗ್ರಹಣ ಆರಂಭವಾಗಿ ಮುಂಜಾನೆಯಷ್ಟರೊಳಗೆ ಮುಗಿದು ಹೋಗತ್ತದೆ. ಹಾಗಾಗಿ ಗ್ರಹಣ ಸಂಭವಿಸುವ ವೇಳೆ ನಾವೆಲ್ಲಾ ನಿದ್ರಾವಸ್ಥೆಯಲ್ಲಿರುತ್ತೇವೆ. ಹಾಗಾಗಿ ಆತಂಕ ಬೇಡ ಎಂದು ಜ್ಯೋತಿಷಿ ಡಾ. ವಿದ್ವಾನ್ ಕಮಲಾಕರ್ ಭಟ್ ಹೇಳುತ್ತಾರೆ.

    ಮನುಷ್ಯನ ದೇಹ ಪಂಚಭೂತಗಳಿಂದ ಕೂಡಿದೆ. ಜಗತ್ತಿಗೆ ಒಬ್ಬನೇ ಸೂರ್ಯ. ಹಾಗಾಗಿ ಗ್ರಹಣ ಪೀಡಿತ ಸೂರ್ಯನಿಂದ ಕೆಲ ವ್ಯತಿರಿಕ್ತ ಪರಿಣಾಮಗಳು ಬೀರುತ್ತವಂತೆ. ಹಾಗಾಗಿ ಗ್ರಹಣ ಕಾಲದ ವ್ರತಾಚರಣೆಗಳನ್ನ ಪಾಲಿಸಬೇಕಂತೆ. ಒಟ್ಟಿನಲ್ಲಿ ಸೂರ್ಯ ಕಿರಣಗಳಂತೂ ನಮ್ಮ ಮೇಲೆ ಬೀಳಲ್ಲ. ಆದರೂ ಗ್ರಹಣ ಅತೀವವಾಗಿ ನಂಬುವವರು ಗ್ರಹಣ ಕಾಲಸ ರೀತಿ ರಿವಾಜುಗಳನ್ನ ಪಾಲಿಸೋದ್ರಿಂದ ಯಾವ ನಷ್ಟವೂ ಇಲ್ಲ ಅಂತಾ ಕೆಲ ಜ್ಯೋತಿಷಿಗಳು ಹೇಳುತ್ತಾರೆ.

  • ಅಭಿಮಾನಿಯ ಜೊತೆ ಪೋಸ್ ನೀಡಿ ಭಾರತೀಯರ ಮನಗೆದ್ದ ಅಫ್ರಿದಿ

    ಅಭಿಮಾನಿಯ ಜೊತೆ ಪೋಸ್ ನೀಡಿ ಭಾರತೀಯರ ಮನಗೆದ್ದ ಅಫ್ರಿದಿ

    ಸೇಂಟ್ ಮೊರಿಟ್ಜ್: ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಫೆ.8 ರಂದು ಸೈಂಟ್ ಮೊರಿಟ್ಜ್ ನಗರದ ಸ್ಕಿ ರಿಸಾರ್ಟ್ ನಲ್ಲಿ ನಡೆದ ಐಸ್ ಕ್ರಿಕೆಟ್ ಟೂರ್ನಿಯಲ್ಲಿ ವಿರೇಂದ್ರ ಸೆಹ್ವಾಗ್, ಆಸ್ಟ್ರೇಲಿಯಾಗ ಮೈಕ್ ಹಸ್ಸಿ, ಪಾಕಿಸ್ತಾನದ ಶೊಯೆಬ್ ಅಖ್ತರ್ ಹಾಗೂ ಶ್ರೀಲಂಕಾದ ಮಹೇಲಾ ಜಯವರ್ಧನೆ ಸೇರಿದಂತೆ ಹಲವು ಕ್ರಿಕೆಟಿಗರು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

    ಸೆಹ್ವಾಗ್ ನೇತೃತ್ವದ ಪ್ಯಾಲೇಸ್ ಡೈಮಂಡ್ಸ್ ತಂಡವನ್ನು ಶಾಹಿದ್ ಅಫ್ರಿದಿ ನೇತೃತ್ವದ ರಾಯಲ್ಸ್ ತಂಡ ಸೋಲಿಸಿತ್ತು. ಪಂದ್ಯದ ಬಳಿಕ ಅಫ್ರಿದಿ ಅಭಿಮಾನಿಗಳ ಬಳಿ ಧಾವಿಸಿ ಫೋಟೋಗಳಿಗೆ ಪೋಸ್ ನೀಡುತ್ತಿದ್ದರು.

    ಈ ವೇಳೆ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡಿದ್ದ ಭಾರತದ ಮಹಿಳಾ ಅಭಿಮಾನಿಯೊಬ್ಬರು ಅಫ್ರಿದಿ ಜೊತೆ ಫೋಟೋ ತೆಗೆಯಲು ಮುಂದಾಗಿದ್ದರು. ಮಹಿಳಾ ಅಭಿಮಾನಿ ಸರಿಯಾಗಿ ಧ್ವಜ ಹಿಡಿದುಕೊಳ್ಳದೇ ಇರುವುದನ್ನು ಗಮನಿಸಿದ ಅಫ್ರಿದಿ, ಧ್ವಜವನ್ನು ಬಿಡಿಸಿ ಎಂದು ಹೇಳಿದರು. ಕೂಡಲೇ ಮಹಿಳಾ ಅಭಿಮಾನಿ ಧ್ವಜವನ್ನು ಬಿಡಿಸಿ ಅಫ್ರಿದಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು.

    ಅಫ್ರಿದಿ ಈಗ ಮಹಿಳಾ ಅಭಿಮಾನಿಯ ಜೊತೆ ಕ್ಲಿಕ್ಕಿಸಿಕೊಂಡ ವಿಡಿಯೋ ಈಗ ವೈರಲ್ ಆಗಿದ್ದು, ಭಾರತೀಯರ ಅಫ್ರಿದಿಯನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ.

    https://twitter.com/Nibrazcricket/status/962004645806718977

     

  • ಈಗ ವಾಟ್ಸಪ್ ನಲ್ಲೂ  ಹಣವನ್ನು ಸೆಂಡ್ ಮಾಡಿ!

    ಈಗ ವಾಟ್ಸಪ್ ನಲ್ಲೂ ಹಣವನ್ನು ಸೆಂಡ್ ಮಾಡಿ!

    ನವದೆಹಲಿ: ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್. ಈಗ ವಾಟ್ಸಪ್ ಮೂಲಕವೇ ಹಣವನ್ನು ಆಪ್ತರಿಗೆ ಸೆಂಡ್ ಮಾಡಬಹುದು. ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿಯು ಭಾರತದಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಮುಖಾಂತರ ಹಣ ವರ್ಗಾವಣೆ ಮಾಡುವ ವಿಶೇಷತೆಯನ್ನು ಆ್ಯಪ್‍ಗೆ ಸೇರಿಸಿದೆ.

    ಈ ಹೊಸ ವಿಶೇಷತೆಯನ್ನು ಐಓಎಸ್ ಮತ್ತು ಆಂಡ್ರಾಯ್ಡ್ ವಾಟ್ಸಪ್ ಬೀಟಾ ಬಳಕೆದಾರರಿಗೆ ಲಭ್ಯವಾಗಿದೆ. ಈ ಹೊಸ ವಿಶೇಷತೆಯನ್ನು ವಾಟ್ಸಪ್ 2.18.21 ಐಓಎಸ್ ಮತ್ತು ಆಂಡ್ರಾಯ್ಡ್ಗೆ 2.18.41 ಆವೃತ್ತಿಯ ಆ್ಯಪ್ ಬಳಸುವ ಮಂದಿಗೆ ಸಿಕ್ಕಿದೆ.

    ವಾಟ್ಸಪ್‍ನ ಈ ವಿಶೇಷತೆಯು ಚಾಟ್ ವಿಂಡೋ ನಲ್ಲಿ ಕಾಣಿಸಲಿದ್ದು, ಅಟಾಚ್ಮೆಂಟ್ ಮೆನುವಿನಲ್ಲಿ ಸಿಗುವ ಗ್ಯಾಲರಿ, ವಿಡಿಯೋ, ಡಾಕ್ಯುಮೆಂಟ್‍ಗಳ ಜೊತೆಯಲ್ಲಿ ಈ ವಿಶೇಷತೆ ಸಿಗುತ್ತದೆ. ಇದರಲ್ಲಿ ಹಣ ಪಾವತಿಸುವ ವಿಶೇಷತೆಯನ್ನು ಕ್ಲಿಕ್ ಮಾಡಿದರೆ, ವಿವಿಧ ಬ್ಯಾಂಕ್‍ಗಳ ಆಯ್ಕೆ ಮಾಡಬಹುದಾಗಿದೆ.

    ನಮಗೆ ಬೇಕಾದ ಬ್ಯಾಂಕ್ ಅನ್ನು ಸೆಲೆಕ್ಟ್ ಮಾಡಿ ನಂತರ ಯುಪಿಐಗೆ ಕನೆಕ್ಟ್ ಮಾಡಬೇಕು. ತದನಂತರ ಹೊಸ ಯುಪಿಐ ಖಾತೆ ತೆರೆದು ಪಿನ್ ಸೆಟ್ ಮಾಡಿ, ನಮ್ಮ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಬಹುದು. ಹಣ ಕಳುಹಿಸುವ ಹಾಗು ಹಣ ಪಡೆದು ಕೊಳ್ಳುವ ವ್ಯಕ್ತಿಗಳಿಬ್ಬರು ಈ ವಿಶೇಷತೆ ಬಳಸಬೇಕಾದರೆ ಆ್ಯಪ್ ಅಪ್‍ಡೇಟ್ ಮಾಡಿಕೊಳ್ಳಬೇಕಾಗುತ್ತದೆ.

    ವಾಟ್ಸಪ್ 8ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆ ವಾಟ್ಸಪ್ ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮಾತನಾಡಿದ್ದರು. ಈ ವೇಳೆ ಈ ವೇಳೆ ಬುಸಿನೆಸ್ ಕ್ಷೇತ್ರವನ್ನು ಹೇಗೆ ವಿಸ್ತರಿಸುತ್ತೀರಿ ಎನ್ನುವ ಪ್ರಶ್ನೆಗೆ, ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆದಿದೆ. ವಿಚಾರದ ಬಗ್ಗೆ ಪ್ರಾಥಮಿಕ ಹಂತದ ಮಾತುಕತೆ ನಡೆಯುತ್ತಿದೆ, ಭಾರತೀಯ ಬಳಕೆದಾರರಿಗೆ ಕೆಲಸ ಮಾಡುವುದು ಸಂತದ ತಂದಿದೆ ಎಂದು ಅವರು ತಿಳಿಸಿದ್ದರು.

    2017ರ ಫೆಬ್ರವರಿ 24ರಂದು ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಬ್ರಿಯಾನ್ ಆಕ್ಟನ್ ಭೇಟಿ ಮಾಡಿ `ಡಿಜಿಟಲ್ ಇಂಡಿಯಾ’ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದರು.

    ನವೆಂಬರ್ 8ರಂದು ಕೇಂದ್ರ ಸರ್ಕಾರ 1 ಸಾವಿರ ಮತ್ತು 500 ರೂ. ನೋಟುಗಳನ್ನು ನಿಷೇಧಗೊಳಿಸಿದ ಬಳಿಕ ಭಾರತದಲ್ಲಿ ಡಿಜಿಟಲ್ ಪಾವತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಾಟ್ಸಪ್ ಈಗ ಈ ಕ್ಷೇತ್ರದತ್ತ ಕಣ್ಣುಹಾಕಿದೆ. ಈ ಸಂಬಂಧವಾಗಿ ವಾಟ್ಸಪ್ ಕಂಪೆನಿ ಈ ಹಿಂದೆ ಜಾಹಿರಾತು ಪ್ರಕಟಿಸಿ, ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಭೀಮ್ ಆ್ಯಪ್ ಮತ್ತು ಆಧಾರ್ ನಂಬರ್ ಇವುಗಳಲ್ಲಿ ಪರಿಣಿತಿ ಹೊಂದಿರುವ ಅಭ್ಯರ್ಥಿಗಳನ್ನು ಹುಡುಕುತ್ತಿರುವುದಾಗಿ ತಿಳಿಸಿತ್ತು.

    2009 ಫೆಬ್ರವರಿ 9ರಂದು ಆರಂಭಗೊಂಡ ವಾಟ್ಸಪ್ ಕಂಪೆನಿಯನ್ನು 19 ಶತಕೋಟಿ ಡಾಲರ್ ನೀಡಿ ಫೇಸ್‍ಬುಕ್ 2014ರಲ್ಲಿ ಖರೀದಿಸಿದೆ. ಯಾವುದೇ ಕಾರಣಕ್ಕೂ ಜಾಹೀರಾತುಗಳನ್ನು ತೋರಿಸುವುದಿಲ್ಲ ಎಂದು ವಾಟ್ಸಪ್ ಹೇಳಿಕೊಂಡಿದೆ. ಪ್ರಸ್ತುತ ವಿಶ್ವದಲ್ಲಿ ಪ್ರತಿ ತಿಂಗಳು 102 ಕೋಟಿ ಸಕ್ರೀಯ ಬಳಕೆದಾರರಿದ್ದು, ಭಾರತದಲ್ಲೇ 20 ಕೋಟಿ ಮಂದಿ ವಾಟ್ಸಪ್ ಬಳಸುತ್ತಿದ್ದಾರೆ.

    ವಾಟ್ಸಪ್ ಪ್ರಕಟಿಸಿದ್ದ ಜಾಹಿರಾತು

  • 2013ರ ಟ್ವೀಟ್ ಎತ್ತಿ ಮೋದಿ ವಿರುದ್ಧ ರಮ್ಯಾ ವಾಗ್ದಾಳಿ

    2013ರ ಟ್ವೀಟ್ ಎತ್ತಿ ಮೋದಿ ವಿರುದ್ಧ ರಮ್ಯಾ ವಾಗ್ದಾಳಿ

    ಬೆಂಗಳೂರು: ಮಾಜಿ ಸಂಸದೆ ಹಾಗೂ ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಪ್ರಧಾನಿ ಮೋದಿ ವಿರುದ್ಧ ಟ್ವಿಟ್ಟರ್ ವಾರ್ ಮುಂದುವರೆಸಿದ್ದಾರೆ.

    ಭಾನುವಾರವಷ್ಟೇ ಮೋದಿ ಭಾಷಣವನ್ನ ವ್ಯಂಗ್ಯ ಮಾಡಿದ್ದ ರಮ್ಯಾ ಇಂದು ಮತ್ತೆ ಮೋದಿ ಅವರೇ, ‘ದೋಖಾ’ಲಾಂ (ಡೋಕ್ಲಾಂ) ಬಗ್ಗೆ ಮಾತನಾಡೋಣ ಎಂದು ಬರೆದಿದ್ದಾರೆ. ಮೋದಿ ಪ್ರಧಾನಿಯಾಗುವುದಕ್ಕೂ ಮುಂಚೆ 2013ರಲ್ಲಿ ಯುಪಿಎ ಸರ್ಕಾರದ ವಿರುದ್ಧ ಮಾಡಿದ್ದ ಟ್ವೀಟ್‍ನ ಸ್ಕ್ರೀನ್‍ಶಾಟ್ ಬಳಸಿ ಯುಪಿಎ ಬದಲಿಗೆ ಎನ್‍ಡಿಎ ಎಂದು ತಿದ್ದಿ ಚಿತ್ರವನ್ನ ಹಾಕಿದ್ದಾರೆ. ಇದನ್ನೂ ಓದಿ:  ಮೋದಿ ಭಾಷಣವನ್ನ ಮೂರು ಅಕ್ಷರಗಳಲ್ಲಿ ಟೀಕಿಸಿದ ರಮ್ಯಾ

    ಮೋದಿ ಟ್ವೀಟ್‍ನಲ್ಲಿ ಏನಿತ್ತು?: ಚೀನಾದ ಒಳನುಸುಳುವಿಕೆಯಿಂದ ಹಿಡಿದು ಪಾಕಿಸ್ತಾನದ ದಾಳಿಗಳವರೆಗೆ – ಯುಪಿಎ ಸರ್ಕಾರ ಭಾರತದ ಗಡಿಯನ್ನು ಭದ್ರಪಡಿಸಿಕೊಳ್ಳುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಹೊಂದಿದೆ. ಕೇಂದ್ರ ಎಚ್ಚೆತ್ತುಕೊಳ್ಳುವುದು ಯಾವಾಗ? ಎಂದು 2013ರ ಆಗಸ್ಟ್ 6ರಂದು ಮೋದಿ ಟ್ವೀಟ್ ಮಾಡಿದ್ದರು.

    ಇದೇ ಟ್ವೀಟ್ ಬಳಸಿ ಯುಪಿಎ ಬದಲಿಗೆ ಎನ್‍ಡಿಎ ಎಂದು ಹಾಕಿ ಮೋದಿ ಅವರೇ  ಡೋಕ್ಲಾಂ ಬಗ್ಗೆ ಮಾತನಾಡೋಣ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ. ‘ದೋಖಾ’ಲಾಂ (ದೋಖಾ= ವಂಚನೆ) ಹ್ಯಾಶ್ ಟ್ಯಾಗ್ ಬಳಸಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧದ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

    ಟಿಬೆಟ್‍ನಲ್ಲಿ ಚೀನಾದ ಸೇನಾ ಉಪಸ್ಥಿತಿ ಹೆಚ್ಚಾಗಿರುವ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

    ಇದೇ ವರ್ಷ ಜನವರಿಯಲ್ಲಿ ಗುಪ್ತಚರ ಮೂಲಗಳು ತಿಳಿಸಿರುವ ಪ್ರಕಾರ ಟಿಬೆಟ್‍ನಲ್ಲಿ ಚೀನಾದ ಫೈಟರ್ ಜೆಟ್‍ಗಳ ಸಂಖ್ಯೆ ಕಳೆದ ಮೂರು ವಾರಗಳಲ್ಲಿ 47 ರಿಂದ 51 ಇವೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಫೈಟರ್ ಜೆಟ್‍ಗಳ ಸಂಖ್ಯೆ ಸುಮಾರು 10 ಹೆಚ್ಚಾಗಿದೆ ಎಂದು ವರದಿ ಪ್ರಸಾರ ಮಾಡಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಮೋದಿಯ ಈ ಹಿಂದಿನ ಟ್ವೀಟನ್ನೇ ಬಳಸಿ ಕೇಂದ್ರಕ್ಕೆ ಡೋಕ್ಲಾಂ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಇದನ್ನೂ ಓದಿ: ಈಕೆ ಯಾರು? ಸಾಧನೆ ಏನು? ಕನ್ನಡ ಬಾರದ ಕಾಡುಪಾಪ- ಮೋದಿ ಕಾಲೆಳೆದ ರಮ್ಯಾ ವಿರುದ್ಧ ಜಗ್ಗೇಶ್ ಕಿಡಿ

  • ಮದುವೆ ಮನೆಯಲ್ಲಿ ಭಾರತದ ಬಾವುಟ ಹಿಡಿದು ವಧು- ವರನ ಸಂಭ್ರಮ

    ಮದುವೆ ಮನೆಯಲ್ಲಿ ಭಾರತದ ಬಾವುಟ ಹಿಡಿದು ವಧು- ವರನ ಸಂಭ್ರಮ

    ಚಾಮರಾಜನಗರ: ಭಾರತ ಕಿರಿಯರ ಕ್ರಿಕೆಟ್ ತಂಡ ವಿಶ್ವಕಪ್ ಜಯಿಸಿದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಮದುವೆ ಮಂಟಪದಲ್ಲಿ ವಧು- ವರರು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ.

    ಶನಿವಾರ ನಡೆದ ಕಿರಿಯರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದ ಹಿನ್ನೆಲೆಯಲ್ಲಿ ದೇಶದ್ಯಾಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಆದರೆ ಚಾಮರಾಜನಗರದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಇಂದು ನವ ಜೀವನಕ್ಕೆ ಕಾಲಿಡುತ್ತಿದ್ದ ಕೆ.ಆರ್ ಕಾರ್ತಿಕ್ ಮತ್ತು ಕೆ.ಪಿ ಶ್ವೇತಾ ಮದುವೆ ಮಂಟಪದಲ್ಲಿ ಭಾರತದ ಬಾವುಟ ಹಿಡಿದು ಸಂಭ್ರಮಪಟ್ಟರು.

    ಇದಲ್ಲದೇ ಆರತಕ್ಷತೆ ವೇಳೆ ಭಾರತದ ಕಿರಿಯ ಕ್ರಿಕೆಟ್ ತಂಡದ ಸದಸ್ಯರ ಬಾವುಟ ಹಿಡಿದು ಫೋಟೋ ಕ್ಲಿಕ್ ಮಾಡಿಸಿಕೊಂಡರು. ಈ ಮೂಲಕ ಈ ನವ ದಂಪತಿಗಳು ತಮ್ಮ ದೇಶ ಪ್ರೇಮ ಹಾಗೂ ಕ್ರಿಕೆಟ್ ಮೇಲೆ ಇರುವ ಒಲವನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರಾಟ್ ಕೊಹ್ಲಿ, ಉನ್ಮುಕ್ತ್ ಚಾಂದ್ ದಾಖಲೆ ಮುರಿದ ಪೃಥ್ವಿ ಶಾ

  • 2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

    2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

    ಬೆಂಗಳೂರು: 2003ರ ಫೈನಲ್‍ನಲ್ಲಿ ಭಾರತವನ್ನು ಸೋಲಿಸಿದ್ದ ಆಸ್ಟ್ರೇಲಿಯಾವನ್ನು ರಾಹುಲ್ ದ್ರಾವಿಡ್ ಕೊನೆಗೂ ಸೋಲಿಸುವ ಮೂಲಕ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿದ್ದಾರೆ.

    ಪ್ರತಿಯೊಬ್ಬ ಕ್ರಿಕೆಟ್ ಆಟಗಾರನಿಗೆ ವಿಶ್ವಕಪ್ ಗೆಲ್ಲುವ ಆಸೆ ಇರುತ್ತದೆ. ಈ ಆಸೆಯ ಸಮೀಪ ದ್ರಾವಿಡ್ ಬಂದಿದ್ದರು. 2003ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್‍ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ರಿಕ್ಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ 125 ರನ್ ಗಳಿಂದ ಜಯಗಳಿಸಿತ್ತು. ರಿಕ್ಕಿ ಪಾಟಿಂಗ್ ಔಟಾಗದೇ 140 ರನ್(121 ಎಸೆತ, 4 ಬೌಂಡರಿ, 8 ಸಿಕ್ಸರ್) ಸಿಡಿಸಿ ತಂಡವನ್ನು ಗೆಲ್ಲಿಸಿಕೊಟ್ಟಿದ್ದರು.

    ಈ ಪಂದ್ಯದಲ್ಲಿ ದ್ರಾವಿಡ್ 47 ರನ್(57 ಎಸೆತ, 2 ಬೌಂಡರಿ) ಹೊಡೆದಿದ್ದರು. ಉಪನಾಯಕನಾಗಿದ್ದುಕೊಂಡು ವಿಶ್ವಕಪ್ ಗೆಲ್ಲುವ ಕನಸು ನನಸಾಗದೇ ಇದ್ದರೂ 2018ರಲ್ಲಿ ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಾರ್ಗದರ್ಶನ ನೀಡಿ ಆಸ್ತ್ರೇಲಿಯಾ ತಂಡವನ್ನು ಸೋಲಿಸಿ ದ್ರಾವಿಡ್ ವಿಶ್ವಕಪ್ ಗೆದ್ದಷ್ಟೇ ಸಂಭ್ರಮಿಸಿದ್ದಾರೆ.

    1999ರಲ್ಲಿ ರಾಹುಲ್ ದ್ರಾವಿಡ್ ಮೊದಲ ವಿಶ್ವಕಪ್ ಕ್ರಿಕೆಟ್ ಆಡಿದ್ದರು. ನಯನ್ ಮೊಂಗಿಯಾ ಕೀಪರ್ ಆಗಿದ್ದರೆ, ರಾಹುಲ್ ದ್ರಾವಿಡ್ ಅವರನ್ನು ಎರಡನೇ ಕೀಪರ್ ಆಗಿ ಆಯ್ಕೆ ಮಾಡಲಾಗಿತ್ತು. ಈ ಸರಣಿಯಲ್ಲಿ ದ್ರಾವಿಡ್ 8 ಪಂದ್ಯಗಳಲ್ಲಿ 8 ಇನ್ನಿಂಗ್ಸ್ ಆಡಿ 65.85 ಸರಾಸರಿಯಲ್ಲಿ 461 ರನ್ ಹೊಡೆದಿದ್ದರು. ಎರಡು ಶತಕ, 3 ಅರ್ಧ ಶತಕ ಹೊಡೆದಿದ್ದರು. ಈ ಮೂಲಕ ಟೂರ್ನಿಯನ್ನು ಅತಿ ಹೆಚ್ಚು ರನ್ ಹೊಡೆದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

    2007ರ ವೆಸ್ಟ್ ಇಂಡೀಸ್ ನಲ್ಲಿ ನಡೆದ ವಿಶ್ವಕಪ್ ವೇಳೆ ದ್ರಾವಿಡ್ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಇದನ್ನೂ ಓದಿ: ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!