Tag: india

  • ದೆಹಲಿಯಲ್ಲಿ ಕಿವೀಸ್ ವಿರುದ್ಧ ಗೆಲುವಿನ ಖಾತೆ ತೆರೆಯುತ್ತಾ ಟೀಂ ಇಂಡಿಯಾ?

    ದೆಹಲಿಯಲ್ಲಿ ಕಿವೀಸ್ ವಿರುದ್ಧ ಗೆಲುವಿನ ಖಾತೆ ತೆರೆಯುತ್ತಾ ಟೀಂ ಇಂಡಿಯಾ?

    ನವದೆಹಲಿ: ಭಾರತ ಇಲ್ಲಿಯವರೆಗೆ ಟಿ-20ಯಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದಿಲ್ಲ. ಆದರೆ ಈ ಬಾರಿ ಏಕದಿನ ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಭಾರತ ಮೊದಲ ಪಂದ್ಯ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ.

    ಉಭಯ ತಂಡಗಳ ಮಧ್ಯೆ ಇಲ್ಲಿಯವರೆಗೆ 5 ಟಿ-20 ಪಂದ್ಯಗಳು ನಡೆದಿದ್ದು, ಎಲ್ಲ ಮ್ಯಾಚ್ ನಲ್ಲಿ ಕಿವೀಸ್ ಗೆದ್ದಿದೆ. ಹೀಗಾಗಿ ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ಭಾರತ ಗೆದ್ದರೆ ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ.  ಬುಧವಾರ ಸಂಜೆ 7 ಗಂಟೆಗೆ ಟೀಂ ಇಂಡಿಯಾ-ಕಿವೀಸ್ ಮಧ್ಯೆ ಮೊದಲ ಪಂದ್ಯ ನಡೆಯಲಿದೆ.

    ಸದ್ಯ ನ್ಯೂಜಿಲೆಂಡ್ ತಂಡದ 125 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. 124 ಅಂಕಗಳೊಂದಿಗೆ ಪಾಕಿಸ್ತಾನ ಎರಡನೇ ಸ್ಥಾನದಲ್ಲಿದ್ದರೆ, ಭಾರತ ತಂಡ ಕಿವೀಸ್ ವಿರುದ್ಧದ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದರೆ 122 ಅಂಕಗಳನ್ನು ಪಡೆದು ಎರಡನೇ ಸ್ಥಾನಕ್ಕೆ ಜಿಗಿಯಲಿದೆ. ಅಂಕಪಟ್ಟಿಯಲ್ಲಿ 124 ಅಂಕಗಳನ್ನು ಪಡೆದಿರುವ ಪಾಕಿಸ್ತಾನ ಅಗ್ರಸ್ಥಾನಕ್ಕೇರಲಿದೆ. ಇತ್ತ ಭಾರತ ವಿರುದ್ಧ ಕ್ಲೀನ್ ಸ್ವೀಪ್ ಸೋಲು ಕಂಡರೇ ನ್ಯೂಜಿಲೆಂಡ್ 114 ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ಜಿಗಿಯಲಿದೆ.

     

     

  • ದೇಶದ ಮೊದಲ ಬುಲೆಟ್ ರೈಲು ಸಂಚರಿಸೋ ಮಾರ್ಗದಲ್ಲಿ ರೈಲ್ವೇಗೆ ಬರುತ್ತಿಲ್ಲ ನಿರೀಕ್ಷಿತ ಅದಾಯ!

    ದೇಶದ ಮೊದಲ ಬುಲೆಟ್ ರೈಲು ಸಂಚರಿಸೋ ಮಾರ್ಗದಲ್ಲಿ ರೈಲ್ವೇಗೆ ಬರುತ್ತಿಲ್ಲ ನಿರೀಕ್ಷಿತ ಅದಾಯ!

    ನವದೆಹಲಿ: ಅಹಮದಾಬಾದ್- ಮುಂಬೈ ನಡುವಿನ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಆದರೆ ಪ್ರಸ್ತುತ ಈ ಎರಡು ನಗರಗಳ ಮಧ್ಯೆ ಕ್ರಮಿಸುವ ರೈಲಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದು, ರೈಲ್ವೇಗೆ ನಿರೀಕ್ಷಿತ ಆದಾಯ ಬರುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

    ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಅನಿಲ್ ಗಲಗಲಿ ಎಂಬವರು ಜುಲೈ 1 ರಿಂದ – ಸೆಪ್ಟೆಂಬರ್ 30 ರವರೆಗೆ ಮುಂಬೈ- ಅಹಮದಾಬಾದ್ ನಗರಗಳ ಮಧ್ಯೆ ಸಂಚರಿಸುತ್ತಿರುವ ರೈಲುಗಳಿಂದ ಬಂದಿರುವ ಆದಾಯ ಎಷ್ಟು ಎಂದು ಆರ್‍ಟಿಐ ಅಡಿ ಪ್ರಶ್ನೆ ಕೇಳಿದ್ದರು.

    ಈ ಪ್ರಶ್ನೆಗೆ ಪಶ್ಚಿಮ ರೈಲ್ವೇ, ಈ ಮಾರ್ಗದಲ್ಲಿ ಸಂಚರಿಸುವ ರೈಲಿನಲ್ಲಿ ಶೇ.40 ರಷ್ಟು ಸೀಟ್ ಗಳು ಖಾಲಿ ಇರುತ್ತದೆ. ಇದರಿಂದಾಗಿ 30 ಕೋಟಿ ರೂ.(ತಿಂಗಳಿಗೆ 10 ಕೋಟಿ ರೂ.) ನಷ್ಟವಾಗುತ್ತಿದೆ ಎಂದು ಉತ್ತರಿಸಿದೆ.

    ಇದೇ ವೇಳೆ ಈ ಎರಡು ನಗರಗಳ ಮಧ್ಯೆ ಹೊಸದಾಗಿ ಯಾವುದೇ ರೈಲು ಓಡಿಸುವ ಪ್ರಸ್ತಾಪ ಇಲ್ಲ. ಕಳೆದ ಮೂರು ತಿಂಗಳ ಅವಧಿಯಲ್ಲಿ ಮುಂಬೈ- ಅಹಮದಾಬಾದ್ ನಡುವೆ ಸಂಚರಿಸುವ ರೈಲಿನಲ್ಲಿ ಶೇ.40 ಸೀಟ್ ಗಳು ಖಾಲಿ ಇದ್ದರೆ, ಅಹಮದಾಬಾದ್- ಮುಂಬೈ ನಡುವೆ ಸಂಚರಿಸುವ ರೈಲಿನಲ್ಲಿ ಶೇ.44 ಸೀಟ್ ಗಳು ಖಾಲಿ ಇದೆ ಎಂದು ಉತ್ತರಿಸಿದೆ.

    ಈ ಅವಧಿಯಲ್ಲಿ ಮುಂಬೈ- ಅಹಮದಾಬಾದ್ ನಡುವೆ ಒಟ್ಟು 7,35,630 ಸೀಟ್‍ಗಳ ಪೈಕಿ 4,44,795 ಸೀಟ್ ಗಳು ಬುಕ್ ಆಗಿದ್ದು, ಒಟ್ಟು 30,16,24,623 ರೂ. ಆದಾಯ ಸಂಗ್ರಹವಾಗಿದೆ. 44,29,08,220 ರೂ. ಆದಾಯವನ್ನು ನಿರೀಕ್ಷಿಸಿದ್ದ ರೈಲ್ವೇಗೆ 14,12,83,597 ರೂ. ನಷ್ಟವಾಗಿದೆ ಎಂದು ಹೇಳಿದೆ.

    ಅಹಮದಾಬಾದ್- ಮುಂಬೈ ನಡುವೆ ಒಟ್ಟು 7,06,446 ಸೀಟ್ ಗಳ ಪೈಕಿ ಕೇವಲ 3,98,002 ಸೀಟ್ ಗಳು ಬುಕ್ ಆಗಿವೆ. ಒಟ್ಟು ಸೀಟ್ ಗಳಿಂದ 26,74,56,982 ರೂ. ಆದಾಯವನ್ನು ನಿರೀಕ್ಷಿಸಿದ್ದ ರೈಲ್ವೇಗೆ ಒಟ್ಟು 42,53,11,471 ರೂ. ಆದಾಯ ಬಂದಿದ್ದು, 15,78,54,489 ರೂ. ನಷ್ಟವಾಗಿದೆ ಎಂದು ಉತ್ತರಿಸಿದೆ.

    ಅತಿ ಹೆಚ್ಚು ಪ್ರಯಾಣಿಕರು ಸ್ಲೀಪರ್ ಕೋಚ್ ನಲ್ಲಿ ಪ್ರಯಾಣಿಸಿದರೆ, ಹೆಚ್ಚಿನ ಸಂಖ್ಯೆಯ ಎಸಿ ಸೀಟ್ ಗಳು ಖಾಲಿ ಇರುತ್ತದೆ ಎಂದು ಮಾಹಿತಿ ನೀಡಿದೆ.

    ಈ ಎರಡು ನಗರಗಳ ಮಧ್ಯೆ ಸಂಚರಿಸುತ್ತಿರುವ ದುರಂತೋ, ಶತಾಬ್ಧಿ ಎಕ್ಸ್ ಪ್ರೆಸ್, ಲೋಕಶಕ್ತಿ ಎಕ್ಸ್ ಪ್ರೆಸ್, ಗುಜರಾತ್ ಮೇಲ್, ಭಾವಾ ನಗರ್ ಎಕ್ಸ್ ಪ್ರೆಸ್, ಸೌರಾಷ್ಟ್ರ ಎಕ್ಸ್ ಪ್ರೆಸ್, ವಿವೇಕ್ – ಭುಜ್ ಎಕ್ಸ್ ಪ್ರೆಸ್ ರೈಲುಗಳು ಸಂಚರಿಸುತ್ತಿವೆ.

    ಭಾರತ ಸರ್ಕಾರ ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ತರಾತುರಿಯಲ್ಲಿ ಬುಲೆಟ್ ಯೋಜನೆ ಆರಂಭಿಸಲು ಮುಂದಾಗಿದೆ. 1 ಲಕ್ಷ ಕೋಟಿ ರೂ. ಹಣದ ಯೋಜನೆ ನಿಜವಾಗಿಯೂ ಕಾರ್ಯಸಾಧುವೆ ಎಂದು ಅನಿಲ್ ಗಲಗಲಿ ಅವರು ಗಂಭೀರ ಪ್ರಶ್ನೆ ಎತ್ತಿದ್ದಾರೆ.

    ಮುಂಬೈ- ಅಹಮದಾಬಾದ್ ಮಾರ್ಗ ನಷ್ಟದಲ್ಲಿರುವುದಾಗಿ ಆರ್‍ಟಿಐ ಅಡಿ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಯೋಜನೆ ಆರಂಭಿಸುವ ಮುನ್ನ ಮತ್ತೊಮ್ಮೆ ಪರಿಶೀಲಿಸುವುದು ಒಳಿತು. ಆರಂಭಗೊಂಡ ಬಳಿಕ ಭಾರತೀಯ ಪ್ರಜೆಗಳಿಗೆ ಇದು ಬಿಳಿಯಾನೆ ಆಗಬಾರದು ಎನ್ನುವುದೇ ನನ್ನ ಕಳಕಳಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

    ಜಪಾನ್ ನೀಡುತ್ತಿರುವ 88 ಸಾವಿರ ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಬೇಕಾದರೆ ಪ್ರತಿ ದಿನ 100 ಟ್ರಿಪ್ ರೈಲು ಸಂಚರಿಸಬೇಕು ಅಥವಾ ದಿನಕ್ಕೆ 88 ಸಾವಿರದಿಂದ 1.18 ಲಕ್ಷ ಪ್ರಯಾಣಿಕರು ಸಂಚರಿಸಬೇಕು ಎಂದು ಈ ಹಿಂದೆ ಈ ಯೋಜನೆ ಬಗ್ಗೆ ಅಧ್ಯಯನ ನಡೆಸಿದ್ದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಹಮದಾಬಾದ್ ರೈಲ್ವೇ ಇಲಾಖೆಗೆ ವರದಿ ನೀಡಿತ್ತು. ಅಷ್ಟೇ ಅಲ್ಲದೇ 300 ಕಿ.ಮೀ ಪ್ರಯಾಣಕ್ಕೆ ಒಂದು ಟಿಕೆಟ್‍ಗೆ 1500 ರೂ ದರವನ್ನು ನಿಗದಿ ಮಾಡಬೇಕೆಂಬ ಅಂಶವನ್ನು ವರದಿಯಲ್ಲಿ ತಿಳಿಸಿತ್ತು.

    ಬುಲೆಟ್ ರೈಲು ಬೇಕು ಎನ್ನುವವರ ವಾದ ಏನು?
    ಈ ಹಿಂದೆ ಭಾರತ ಸರ್ಕಾರ ಉಪಗ್ರಹ ನಿರ್ಮಾಣಕ್ಕೆ ಕೈ ಹಾಕಿದಾಗಲೂ ವಿರೋಧ ಕೇಳಿ ಬಂದಿತ್ತು. ವಿಮಾನ ಯಾನ ಸೇವೆ ಆರಂಭಗೊಂಡ ಅವಧಿಯಲ್ಲಿ ಭಾರತಕ್ಕೆ ಈ ಸೇವೆ ಅಗತ್ಯವಿದೆಯೇ? ವಿಮಾನದಲ್ಲಿ ಎಷ್ಟು ಮಂದಿ ಹೋಗುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈಗ ವಿಮಾನ ಪ್ರಯಾಣ ದುಬಾರಿ ಆಗಿದ್ದರೂ ಹೆಚ್ಚಿನ ಸಂಖ್ಯೆಯ ಜನ ಈ ಸೇವೆ ಬಳಸುತ್ತಿದ್ದಾರೆ. ಮೆಟ್ರೋ ಸೇವೆ ಆರಂಭಗೊಂಡಾಗಲೂ ಜನರಿಂದ ಪ್ರಶ್ನೆ ಎದ್ದಿತ್ತು. ಆದರೆ ಈಗ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಬುಲೆಟ್ ರೈಲು ಆರಂಭದಲ್ಲಿ ಎಷ್ಟೇ ಟೀಕೆ ಬಂದರೂ ಭವಿಷ್ಯದಲ್ಲಿ ಜನರಿಗೆ ನೆರವಾಗಲಿದೆ ಎನ್ನುವ ವಾದ ಬುಲೆಟ್ ರೈಲು ಪ್ರಿಯ ಜನರದ್ದು.

    ಇದನ್ನೂ ಓದಿ: 31ನೇ ಬಾರಿ ಹಿಡಿಯಿತು ಅದೃಷ್ಟ -ಬುಲೆಟ್ ರೈಲು ಯೋಜನೆಗೆ ಲೋಗೋ ರೂಪಿಸಿದ ವಿದ್ಯಾರ್ಥಿಯ ಸಾಧನೆಯ ಕತೆ

    ಪರ ವಿರೋಧ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತ ಬುಲೆಟ್ ರೈಲು ಯೋಜನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಇದರಿಂದ ದೇಶದ ಆರ್ಥಿಕತೆ ಬದಲಾಗುತ್ತಾ? ಕಮೆಂಟ್ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಿ.

  • ಸುಲಭ ವಹಿವಾಟು ವಿಶ್ವದ ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಏರಿ 100ನೇ ಸ್ಥಾನಕ್ಕೆ ಜಿಗಿದ ಭಾರತ

    ಸುಲಭ ವಹಿವಾಟು ವಿಶ್ವದ ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಏರಿ 100ನೇ ಸ್ಥಾನಕ್ಕೆ ಜಿಗಿದ ಭಾರತ

    ನವದೆಹಲಿ: 500, 1 ಸಾವಿರ ರೂ. ನೋಟು ಮತ್ತು ಜಿಎಸ್‍ಟಿಯಿಂದ ದೇಶದ ಅರ್ಥವ್ಯವಸ್ಥೆ ಅಧಃಪತನಗೊಂಡಿದೆ. ಅಭಿವೃದ್ಧಿ ಹಳ್ಳ ಹಿಡಿದಿದೆ ಎಂದು ಮೋದಿ ಸರ್ಕಾರವನ್ನು ಟೀಕಿಸಿದ್ದ ಜನ ಈಗ ಬಾಯಿಮುಚ್ಚಿಕೊಳ್ಳುವ ವರದಿ ಪ್ರಕಟವಾಗಿದೆ.

    ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಉದ್ಯಮ ವಹಿವಾಟುಗಳನ್ನು ಸುಲಭವಾಗಿ ಆರಂಭಿಸಿ ನಿರ್ವಹಿಸಲು ನೆರವಾಗುವ ವಿಷಯದಲ್ಲಿ ಭಾರತ, ಜಾಗತಿಕ ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಏರಿಕೆಯಾಗಿ 100ನೇ ಸ್ಥಾನಕ್ಕೆ ಜಿಗಿದಿದೆ.

    2015ರಲ್ಲಿ ಭಾರತಕ್ಕೆ 130ನೇ ಸ್ಥಾನ ಸಿಕ್ಕಿತ್ತು. 2016ರಲ್ಲೂ ಭಾರತದ ಸ್ಥಾನಮಾನದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಏಷ್ಯಾ ರಾಷ್ಟ್ರಗಳ ಪೈಕಿ ಚೀನಾ ಈ ಪಟ್ಟಿಯಲ್ಲಿ 78ನೇ ಸ್ಥಾನ ಸಿಕ್ಕಿದೆ.

    ಉದ್ದಿಮೆ ವಹಿವಾಟು ಆರಂಭಿಸಲು ಅನುಕೂಲತೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಹಲವಾರು ಮಾನದಂಡಗಳನ್ನು ಆಧರಿಸಿ ವಿಶ್ವಬ್ಯಾಂಕ್ 190 ದೇಶಗಳ ಆರ್ಥಿಕತೆಗಳನ್ನು ಲೆಕ್ಕಹಾಕಿ ಪ್ರತಿವರ್ಷ ಶ್ರೇಯಾಂಕ ಪಟ್ಟಿಯನ್ನು ನೀಡುತ್ತದೆ.

    ಯಾವ ವರ್ಷ ಎಷ್ಟನೇ ಶ್ರೇಯಾಂಕ?
    132(2012), 132(2013), 134(2014), 130(2015), 130(2016), 100(2017)

  • 5 ಇಂಚಿನ ಎಚ್‍ಡಿ ಸ್ಕ್ರೀನ್, 4100 ಎಂಎಎಚ್ ಬ್ಯಾಟರಿ ಹೊಂದಿರೋ ನೋಕಿಯಾ ಫೋನ್ ಬಿಡುಗಡೆ

    5 ಇಂಚಿನ ಎಚ್‍ಡಿ ಸ್ಕ್ರೀನ್, 4100 ಎಂಎಎಚ್ ಬ್ಯಾಟರಿ ಹೊಂದಿರೋ ನೋಕಿಯಾ ಫೋನ್ ಬಿಡುಗಡೆ

    ನವದೆಹಲಿ: ದೇಶೀಯ ಮಾರುಕಟ್ಟೆಗೆ ಮತ್ತೊಂದು ನೋಕಿಯಾ ಸ್ಮಾರ್ಟ್ ಫೋನ್ ಬಿಡುಗಡೆಯಾಗಿದೆ.

    ನೋಕಿಯಾ ಬ್ರಾಂಡ್ ಹೆಸರಿನಲ್ಲಿ ಎಚ್‍ಎಂಡಿ ಗ್ಲೋಬಲ್ ಈ ಫೋನನ್ನು ಬಿಡುಗಡೆ ಮಾಡಿದ್ದು, ಈ ಫೋನಿಗೆ 99 ಯುರೋ( ಅಂದಾಜು 7 ಸಾವಿರ ರೂ.) ದರವನ್ನು ನಿಗದಿ ಪಡಿಸಿದೆ. ನವೆಂಬರ್ ಮಧ್ಯಭಾಗದಲ್ಲಿ ಈ ಫೋನ್ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಭಾರತದಲ್ಲಿ 6 ಸಾವಿರ ರೂ.ದಿಂದ 6,500 ರೂ. ಒಳಗಡೆ ದರ ನಿಗದಿಯಾಗುವ ಸಾಧ್ಯತೆಯಿದೆ ಎಂದು ಮಧ್ಯಮಗಳು ವರದಿ ಮಾಡಿವೆ.

    ಗುಣವೈಶಿಷ್ಟ್ಯಗಳು:
    ಬಾಡಿ ಮತ್ತು ಡಿಸ್ಪ್ಲೇ
    143.5*71.3*9.3 ಮಿಲಿ ಮೀಟರ್ ಗಾತ್ರ, ಡ್ಯುಯಲ್ ಸಿಮ್, 5 ಇಂಚಿನ ಎಚ್‍ಡಿ ಸ್ಕ್ರೀನ್(1280*720 ಪಿಕ್ಸೆಲ್,294 ಪಿಪಿಐ, 67% ಸ್ಕ್ರೀನ್ ಬಾಡಿ ಅನುಪಾತ) ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3

    ಓಎಸ್ ಮತ್ತು ಪ್ರೊಸೆಸರ್:
    ಆಂಡ್ರಾಯ್ಡ್ ನೂಗಟ್ ಪ್ರೊಸೆಸರ್, ಕ್ವಾಲಕಂ ಸ್ನಾಪ್‍ಡ್ರಾಗನ್  212 1.3 GHz Cortex-A7 ಪ್ರೊಸೆಸರ್, 1 ಜಿಬಿ ರಾಮ್, Adreno 304 ಗ್ರಾಫಿಕ್ಸ್ ಪ್ರೊಸೆಸರ್

    ಮೆಮೊರಿ, ಕ್ಯಾಮೆರಾ, ಇತರೇ:
    8 ಜಿಬಿ ಆಂತರಿಕ ಮಮೊರಿ, 128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ, 8 ಎಂಪಿ ಹಿಂದುಗಡೆ, 5 ಎಂಪಿ ಮುಂದುಗಡೆ ಕ್ಯಾಮೆರಾ., 4100 ಎಂಎಎಚ್ ಬ್ಯಾಟರಿ

  • ಕ್ಸಿಯೋಮಿ ಮ್ಯಾಕ್ಸ್ 2 ಫೋನಿನ ಬೆಲೆ ದಿಢೀರ್ ಭಾರೀ ಇಳಿಕೆ

    ಕ್ಸಿಯೋಮಿ ಮ್ಯಾಕ್ಸ್ 2 ಫೋನಿನ ಬೆಲೆ ದಿಢೀರ್ ಭಾರೀ ಇಳಿಕೆ

    ನವದೆಹಲಿ:  ಕ್ಸಿಯೋಮಿ ಎಂಐ ಮ್ಯಾಕ್ಸ್ 2 ಫೋನಿನ ಬೆಲೆ ದಿಢೀರ್ ಎಂಬಂತೆ 1 ಸಾವಿರ ರೂ. ಇಳಿಕೆಯಾಗಿದೆ.

    ಜುಲೈ ನಲ್ಲಿ 14,999 ರೂ.ಗೆ ಬಿಡುಗಡೆಯಾಗಿದ್ದ 32 ಜಿಬಿ ಆಂತರಿಕ ಮೆಮೊರಿಯ ಫೋನ್ ಈಗ 13,999 ರೂ.ಗೆ ಲಭ್ಯವಿದ್ದರೆ, 16,999 ರೂ. ಗೆ ಬಿಡುಗಡೆಯಾಗಿದ್ದ 64 ಜಿಬಿ ಆಂತರಿಕ ಫೋನ್ 15,999 ರೂ.ಗೆ ಲಭ್ಯವಿದೆ.

    ಭಾರತದ ಕ್ಸಿಯೋಮಿ ಕಂಪೆನಿಯ ಉಪಾಧ್ಯಕ್ಷ ಮನು ಕುಮಾರ್ ಜೈನ್, ಎರಡು ಫೋನಿನ ಬೆಲೆ 1 ಸಾವಿರ ರೂ. ಕಡಿತ ಮಾಡಲಾಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಗುಣವೈಶಿಷ್ಟ್ಯಗಳು:
    ಬಾಡಿ ಮತ್ತು ಡಿಸ್ಪ್ಲೇ:
    174.1*88.7*7.6 ಮಿಲಿ ಮೀಟರ್, 211 ಗ್ರಾಂ ತೂಕ, ಹೈ ಬ್ರಿಡ್ ಡ್ಯುಯಲ್ ಸಿಮ್(ನ್ಯಾನೋ ಸಿಮ್, ಮೈಕ್ರೋ ಸಿಮ್), 6.4 ಇಂಚಿನ ಐಪಿಎಸ್ ಎಲ್‍ಸಿಡಿ ಸ್ಕ್ರೀನ್(1080*1920 ಪಿಕ್ಸೆಲ್, 342 ಪಿಪಿಐ, 74.0% ಬಾಡಿ ಅನುಪಾತ) ಕಾರ್ನಿಂಗ್ ಗೊರಿಲ್ಲ ಗ್ಲಾಸ್ 3

    ಓಎಸ್, ಪ್ರೊಸೆಸರ್:
    ಆಂಡ್ರಾಯ್ಡ್ 7.1.1 ನೂಗಟ್ ಓಎಸ್, ಕ್ವಾಲಕಂ ಸ್ನಾಪ್ ಡ್ರಾಗನ್ 2.0 GHz  ಅಕ್ಟಾ ಕೋರ್ ಕಾರ್ಟೆಕ್ಸ್ ಎ53 ಪ್ರೊಸೆಸರ್, Adreno 506 ಗ್ರಾಫಿಕ್ಸ್ ಪ್ರೊಸೆಸರ್.

    ಮೆಮೊರಿ:
    ಎರಡನೇ ಸ್ಲಾಟ್ ನಲ್ಲಿ ಸಿಮ್ ಹಾಕಿದ್ರೆ 256 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ,  32/64 ಜಿಬಿ ಆಂತರಿಕ ಮೆಮೊರಿ, 4ಜಿಬಿ ರಾಮ್

    ಕ್ಯಾಮೆರಾ, ಇತರೇ:
    ಹಿಂದುಗಡೆ 12 ಎಂಪಿ ಕ್ಯಾಮೆರಾ, ಮುಂದುಗಡೆ 5 ಎಂಪಿ ಕ್ಯಾಮೆರಾ, ಫಿಂಗರ್ ಪ್ರಿಂಟ್ ಸ್ಕ್ಯಾನರ್, ತೆಗೆಯಲು ಅಸಾಧ್ಯವಾದ 5300 ಎಂಎಎಚ್ ಬ್ಯಾಟರಿ, ಫಾಸ್ಟ್ ಬ್ಯಾಟರಿ ಚಾರ್ಜಿಂಗ್ (ಕ್ವಿಕ್ ಚಾರ್ಜ್ 3.0)

     

     

     

  • ರೋ’ಹಿಟ್’ ಶರ್ಮಾ – ‘ವಿರಾಟ’ ಶತಕ ದರ್ಶನ – ಹಲವು ದಾಖಲೆಗಳ ಸೃಷ್ಟಿ!

    ರೋ’ಹಿಟ್’ ಶರ್ಮಾ – ‘ವಿರಾಟ’ ಶತಕ ದರ್ಶನ – ಹಲವು ದಾಖಲೆಗಳ ಸೃಷ್ಟಿ!

    ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಕೊನೆಯ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಭರ್ಜರಿಯಾಗಿ ಆಡುತ್ತಿದೆ. 44 ಓವರ್ ನಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

    ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದಾರೆ. ರೋಹಿತ್ ಶರ್ಮಾ ತನ್ನ ವೃತ್ತಿ ಜೀವನದ 15ನೇ ಶತಕ ದಾಖಲಿಸಿದರೆ, ಕೊಹ್ಲಿ ಶತಕ ದಾಖಲಿಸಿದ್ದಾರೆ. ಈ ನಡುವೆ ವಿರಾಟ್ ಕೊಹ್ಲಿ ಏಕದಿನ 9 ಸಾವಿರ ರನ್ ಗಡಿ ದಾಟಿದ ದಾಖಲೆಗೂ ಸೇರ್ಪಡೆಯಾದರು. ಪಂದ್ಯದಲ್ಲಿ 83 ರನ್ ಗಳಿಸುತ್ತಿದ್ದಂತೆಯೇ ಈ ದಾಖಲೆಗೆ ಪಾತ್ರರಾದರು.

    ಏಕದಿನ ಪಂದ್ಯದಲ್ಲಿ 9 ಸಾವಿರ ರನ್ ಗಳಿಸಿದ 6ನೇ ಕ್ರಿಕೆಟಿಗ ಎಂದೆನಿಸಿದರು. ಇದಕ್ಕೂ ಮುನ್ನ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಮಹೇಂದ್ರ ಸಿಂಗ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ದಾಖಲೆ ಮಾಡಿದ್ದಾರೆ.

    18 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ರೋಹಿತ್ ಶರ್ಮಾ 138 ಎಸೆತಗಳಲ್ಲಿ 147 ರನ್ ಗಳಿಸಿ ರೋಹಿತ್ ಶರ್ಮಾ ಔಟಾದರು. 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ವಿರಾಟ್ ಕೊಹ್ಲಿ ಶತಕ ಬಾರಿಸಿದರು. ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾದ ಮೊದಲ ವಿಕೆಟ್ 7ನೇ ಓವರ್ ನ ಮೊದಲ ಎಸೆತದಲ್ಲಿ ಉರುಳಿತು. 14 ರನ್ ಗಳಿಸಿದ ಓಪನರ್ ಶಿಖರ್ ಧವನ್ ಸೌದಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸನ್ ಗೆ ಕ್ಯಾಚ್ ನೀಡಿ ಔಟಾದರು.

    ಈ ಪಂದ್ಯದಲ್ಲಿ 71 ರನ್ ಗಳಿಸುತ್ತಿದ್ದಂತೆಯೇ 2017ರಲ್ಲಿ 1 ಸಾವಿರ ರನ್ ಗಳಿಸಿದ ದಾಖಲೆಯೂ ರೋಹಿತ್ ಶರ್ಮಾ ಪಾಲಾಯಿತು. ವಿರಾಟ್ ಕೊಹ್ಲಿ ಕೂಡಾ ಈ ವರ್ಷ 1000 ರನ್ ಗಡಿ ದಾಟಿದ್ದಾರೆ. ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿರುವ ಟೀಂ ಇಂಡಿಯಾ 9 ಪಂದ್ಯಗಳನ್ನು ಗೆದ್ದಿದ್ದು, 4 ಪಂದ್ಯಗಳಲ್ಲಿ ಸೋತಿದೆ.

  • ಇನ್ಮುಂದೆ ಬ್ರಿಟಿಷ್ ಗೌನ್ ಕ್ಯಾನ್ಸಲ್- ಹೊಸ ಡ್ರೆಸ್ ಸ್ಟೈಲ್‍ನಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವ

    ಇನ್ಮುಂದೆ ಬ್ರಿಟಿಷ್ ಗೌನ್ ಕ್ಯಾನ್ಸಲ್- ಹೊಸ ಡ್ರೆಸ್ ಸ್ಟೈಲ್‍ನಲ್ಲಿ ವಿಶ್ವವಿದ್ಯಾಲಯದ ಘಟಿಕೋತ್ಸವ

    ನವದೆಹಲಿ: ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಸ್ವೀಕರಿಸುವಾಗ ಇಂದಿಗೂ ಬ್ರಿಟಿಷ್ ಗೌನ್ ಹಾಕಲಾಗುತ್ತಿದೆ. ಹೀಗಾಗಿ ಗೌನ್ ಬದಲಾಗಿ ಸ್ವದೇಶಿ ನಿರ್ಮಿತ ಕುರ್ತಾ ಬಳಸಬೇಕು ಅಂತ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ.

    ಕುರ್ತಾ ಡಿಸೈನ್ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳಿಂದ ಡಿಸೈನ್ ಬಂದ ಮೇಲೆ ಉನ್ನತವಾದ ಕುರ್ತಾವನ್ನು ಅಂತಿಮವಾಗಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿರುವುದಾಗಿ ವರದಿಯಾಗಿದೆ.

    ಕಳೆದ ತಿಂಗಳಷ್ಟೇ ದೆಹಲಿಯಲ್ಲಿ ನಡೆದ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಸಭೆಯಲ್ಲಿ ಗೌನ್ ಸಂಸ್ಕೃತಿಯು ಬ್ರಿಟಿಷ್ ವಸಾಹತು ಶಾಹಿಯ ಪ್ರತಿರೂಪವಾಗಿದೆ ಎನ್ನುವ ಒಮ್ಮತ ಅಭಿಪ್ರಾಯ ಮೂಡಿಬಂದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲು ಮುಂದಾಗಿತ್ತು. ಅಲ್ಲದೇ ಶೀಘ್ರದಲ್ಲಿಯೇ ದೇಶದ ಎಲ್ಲಾ ವಿಶ್ವ ವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಯಾವ ರೀತಿಯ ಉಡುಪು ಧರಿಸಬೇಕು ಎನ್ನುವುದರ ಬಗ್ಗೆ ಸೂಚನೆಯನ್ನು ನೀಡಲಾಗುವುದು ಎಂದು ತಿಳಿಸಿತ್ತು.

    ದೇಶದಲ್ಲಿ 800 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಇದ್ದು, 40 ಸಾವಿರಕ್ಕೂ ಹೆಚ್ಚು ಶಿಕ್ಷಣದ ಸಂಸ್ಥೆಗಳಲ್ಲಿ 3ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕುರ್ತಾ ಬಳಸುವ ಮೂಲಕ ಮೇಕ್ ಇನ್ ಇಂಡಿಯಾಗೆ ಒತ್ತು ನೀಡುತ್ತದೆ. ಈ ಹಿನ್ನೆಲೆಯಲ್ಲಿ ಇಂತಹ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತಿಳಿಸಿದೆ ಎಂದು ತಿಳಿದುಬಂದಿದೆ.

    ಕಳೆದ ವರ್ಷ ಮುಂಬೈಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವದ ವೇಳೆ ವಿದ್ಯಾರ್ಥಿಗಳು ಖಾದಿ ವಸ್ತ್ರಗಳನ್ನು ಧರಿಸಿ ಬಂದಿದ್ದರು.

  • ಕಾನ್ಪುರದಲ್ಲಿ ನಾಳೆ ನಿರ್ಣಾಯಕ ಏಕದಿನ – ಗೆದ್ದವರಿಗೆ ಸರಣಿ

    ಕಾನ್ಪುರದಲ್ಲಿ ನಾಳೆ ನಿರ್ಣಾಯಕ ಏಕದಿನ – ಗೆದ್ದವರಿಗೆ ಸರಣಿ

    ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟೀಂ ಇಂಡಿಯಾದ ಕೊನೆಯ ಹಾಗೂ ನಿರ್ಣಾಯಕ 3ನೇ ಏಕದಿನ ಪಂದ್ಯಕ್ಕೆ ಕಾನ್ಪುರ ಗ್ರೀನ್ ಪಾರ್ಕ್ ಕ್ರೀಡಾಂಗಣ ಸಜ್ಜಾಗಿದೆ.

    ಮುಂಬೈನಲ್ಲಿ ನಡೆದ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದರೆ, ಪುಣೆಯಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಗೆದ್ದಿತ್ತು. ಹೀಗಾಗಿ ಇಂದು ಇತ್ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.

    ಕಾನ್ಪುರದಲ್ಲಿ ಅತಿ ಹೆಚ್ಚು ರನ್ ಬಾರಿಸಿದವರಲ್ಲಿ ಮೂವರು ಈಗಲೂ ಟೀಂ ಇಂಡಿಯಾ ಪರವಾಗಿ ಆಟವಾಡುತ್ತಿದ್ದಾರೆ. ಆದರೆ ವಿರಾಟ್ ಕೊಹ್ಲಿಗೆ ಮಾತ್ರ ಈ ಕ್ರೀಡಾಂಗಣ ಅದೃಷ್ಟದ ಕ್ರೀಡಾಂಗಣವಲ್ಲ ಎಂದೇ ಹೇಳಬಹುದು. ಯಾಕೆಂದರೆ ಕೊಹ್ಲಿ ಇಲ್ಲಿ 2 ಪಂದ್ಯವನ್ನಾಡಿದ್ದು, ಈ ಎರಡೂ ಇನ್ನಿಂಗ್ಸ್ ಗಳಲ್ಲಿ ಕೇವಲ 30 ರನ್ ಮಾತ್ರ ಗಳಿಸಿದ್ದಾರೆ. ಆದರೆ ಈ ಸರಣಿಯಲ್ಲಿ ಕೊಹ್ಲಿ ಉತ್ತಮ ಫಾರ್ಮ್‍ನಲ್ಲಿದ್ದು 2 ಪಂದ್ಯಗಳಲ್ಲಿ ಒಂದು ಶತಕ ಸಹಿತ 150 ರನ್ ಗಳಿಸಿದ್ದಾರೆ. ಇಲ್ಲಿಯೂ ಈ ಫಾರ್ಮ್ ಮುಂದುವರೆಸಿ ಉತ್ತಮ ಆಟದ ಪ್ರದರ್ಶನ ನೀಡಿದರೆ ಟೀಂ ಇಂಡಿಯಾದ ಗೆಲುವು ಅಷ್ಟೇನೂ ಕಷ್ಟವಲ್ಲ. ಶಿಖರ್ ಧವನ್, ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯಾ ಉತ್ತಮ ಫಾರ್ಮ್ ನಲ್ಲಿದ್ದಾರೆ. ರೋಹಿತ್ ಶರ್ಮಾ,

    ಪುಣೆಯಲ್ಲಿ ನಡೆದ ಪಂದ್ಯಕ್ಕೂ ಮುನ್ನ ಖಾಸಗಿ ಚಾನೆಲ್ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಹಿನ್ನೆಲೆಯಲ್ಲಿ ಪಿಚ್ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅವರನ್ನು ಅಮಾನತು ಮಾಡಲಾಗಿತ್ತು. ಇದರಿಂದಾಗಿ ಕಾನ್ಪುರ ಪಿಚ್ ಗೆ ಭಾರೀ ಭದ್ರತೆ ಒದಗಿಸಲಾಗಿದೆ. ಅಧಿಕೃತ ಪಾಸ್ ಇದ್ದವರನ್ನು ಮಾತ್ರ ಪಿಚ್ ನತ್ತ ಹೋಗಲು ಬಿಡುತ್ತಿದ್ದಾರೆ.

    ಕಾನ್ಪುರ ಸ್ಪಿನ್ನರ್ ಕುಲದೀಪ್ ಯಾದವ್ ತವರು ನೆಲವಾಗಿರುವುದರಿಂದ ಅವರು ಈ ಪಂದ್ಯದಲ್ಲಿ ಸೇರ್ಪಡೆಯಾಗುವ ಸಾಧ್ಯತೆಯಿದೆ.

  • ಈ ಕಾರಣಕ್ಕೆ ಭಾರತಕ್ಕೆ ಡಾನ್ ದಾವೂದ್ ಬರೋದೇ ಇಲ್ವಂತೆ

    ಈ ಕಾರಣಕ್ಕೆ ಭಾರತಕ್ಕೆ ಡಾನ್ ದಾವೂದ್ ಬರೋದೇ ಇಲ್ವಂತೆ

    ಮುಂಬೈ: ಭೂಗತ ಪಾತಕಿ, ಮುಂಬೈ ಸರಣಿ ಬಾಂಬ್ ಸ್ಫೋಟದ ಸಂಚುಕೋರ ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂದಿರುಗಿ ಬರುವ ಸಾಧ್ಯತೆ ಇಲ್ಲ ಎಂದು ಮುಂಬೈನ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ದಾವೂದ್ ಪ್ರಮುಖ ಆರೋಪಿಯಾಗಿರುವ 1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸುಮಾರು 227 ಜನರು ದಾರಣವಾಗಿ ಸಾವನ್ನಪ್ಪಿದ್ದರು. ಜೊತೆಗೆ 713 ಜನ ಗಂಭೀರವಾಗಿ ಗಾಯಗೊಂಡಿದ್ದರು. ಅಷ್ಟೇ ಅಲ್ಲದೇ ಸುಮಾರು 27 ಕೋಟಿ. ರೂ ನಷ್ಟವಾಗಿತ್ತು.

     

    ಮಾಜಿ ಪೊಲೀಸ್ ಆಯುಕ್ತರಾದ ಎಂಎನ್ ಸಿಂಗ್ ಅವರು ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿ, ನಾವು ಅವನು ಮಾಡಿರುವ ಅಪರಾಧಗಳನ್ನು ಮರೆತುಬಿಡಬೇಕು ಎಂದು ಹೇಳುತ್ತಿಲ್ಲ. ಆದರೆ ಅವನು ಭಾರತಕ್ಕೆ ಹಿಂದಿರುಗುವುದಿಲ್ಲ. ಇದಕ್ಕೆ ಪಾಕಿಸ್ತಾನ ಅವಕಾಶ ಮಾಡಿ ಕೊಡಲ್ಲ. ಒಂದು ವೇಳೆ ದಾವೂದ್ ಅಲ್ಲಿಂದ ಭಾರತಕ್ಕೆ ಬರಲು ಯತ್ನಿಸಿದರೆ ಆತನನ್ನು ಕೊಂದೇ ಬಿಡುತ್ತಾರೆ. ಆತ ಈಗ ಪಾಕಿಸ್ತಾನದ ಐಎಸ್‍ಐನ ವಶದಲ್ಲಿದ್ದಾನೆ ಎಂದು ಹೇಳಿದ್ದಾರೆ.

    ಪ್ರಸ್ತುತ ಮುಂಬೈ ನಗರ ಮತ್ತು ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ದಾವೂದ್ ಭಯ ಕಡಿಮೆಯಾಗಿದೆ. ಇಂತಹ ಗ್ಯಾಂಗ್‍ಗಳಿಗೆ ಸ್ಥಳೀಯ ರಾಜಕಾರಣಿಗಳು ಹಾಗೂ ಪೊಲೀಸರ ಬೆಂಬಲವಿರುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬಾಂಬ್ ಸ್ಫೋಟದ ಕೇಸ್ ತನಿಖೆ ಮಾಡುವ ಸಂದರ್ಭದಲ್ಲಿ ಇಬ್ಬರು ಪೊಲೀಸರಿಗೆ ದಾವೂದ್ ಜೊತೆ ಲಿಂಕ್ ಇರೋದು ನನಗೆ ಗೊತ್ತಾಗಿತ್ತು ಎಂಬುದನ್ನ ನಾನು ಒಪ್ಪಿಕೊಳ್ಳುತ್ತೇನೆ. ನಂತರ ಆ ಪೊಲೀಸರನ್ನು ವಜಾ ಮಾಡಲಾಯಿತು. ಇದೊಂದು ದುರದೃಷ್ಟಕರವಾದ ಸಂಗತಿ ಎಂದು ಸಿಂಗ್ ಹೇಳಿದರು.

    1993 ರ ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಸಿಂಗ್ ಜಂಟಿ ಆಯುಕ್ತರಾಗಿ ವಿಶೇಷ ತನಿಖಾ ತಂಡದ ನೇತೃತ್ವವನ್ನು ವಹಿಸಿಕೊಂಡಿದ್ದರು. ಇತ್ತ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್‍ನನ್ನು ತನಿಖೆ ಮಾಡುತ್ತಿರುವ ಥಾಣೆಯ ಪೊಲೀಸ್ ಆಯುಕ್ತರಾದ ಪರಮ್ ಬೀರ್ ಸಿಂಗ್ ಮಾತನಾಡಿ, ಥಾಣೆಯ ಸ್ಥಳೀಯ ಕಾರ್ಪೋರೇಟರ್‍ಗಳೊಂದಿಗೆ ಸಂಪರ್ಕ ಹೊಂದಿರುವ ಬಗ್ಗೆ ಅನುಮಾನವಿದೆ ಎಂದಿದ್ದಾರೆ. ಕಳೆದ ತಿಂಗಳು ಬಿಲ್ಡರ್‍ವೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸುಲಿಗೆ ಆರೋಪದಡಿ ಕಸ್ಕರ್‍ನನ್ನು ಬಂಧಿಸಲಾಗಿತ್ತು.