Tag: india

  • ಟಿ20ಯಲ್ಲಿ ಮೊದಲ ಬಾರಿಗೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ!

    ಟಿ20ಯಲ್ಲಿ ಮೊದಲ ಬಾರಿಗೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ!

    ಗುವಾಹಟಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊತ್ತ ಮೊದಲ ಬಾರಿಗೆ ಶೂನ್ಯಕ್ಕೆ ಔಟಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಗುವಾಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಕೊಹ್ಲಿ ಸೊನ್ನೆ ರನ್ ಗಳಿಸಿ ಔಟಾಗಿದ್ದಾರೆ.

    ಎರಡು ಎಸೆತ ಎದುರಿಸಿದ್ದ ಕೊಹ್ಲಿ ಜೇಸನ್ ಬೆಹಂಡ್ರೂಫ್ ಎಸೆತದಲ್ಲಿ ಅವರಿಗೆ ಕ್ಯಾಚ್ ನೀಡುವ ಮೂಲಕ ಪೆವಿಲಿಯನ್ ಸೇರಿಕೊಂಡರು.

    ಇದುವರೆಗೆ ಒಟ್ಟು 52 ಪಂದ್ಯಗಳ 48 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಆಡಿದ್ದಾರೆ. 52 ಪಂದ್ಯಗಳಲ್ಲಿ 1852 ರನ್ ಗಳಿಸಿದ್ದಾರೆ. 17 ಬಾರಿ ಅರ್ಧ ಶತಕ ಬಾರಿಸಿರುವ ಕೊಹ್ಲಿ ಟಿ20 ಪಂದ್ಯದ ಗರಿಷ್ಠ ಮೊತ್ತ 90. 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿರುವ ಕೊಹ್ಲಿ, 5 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು 48 ಇನ್ನಿಂಗ್ಸ್ ಗಳಲ್ಲಿ 199 ಬೌಂಡರಿ ಹಾಗೂ 35 ಸಿಕ್ಸ್ ಬಾರಿಸಿದ್ದಾರೆ.

    ಕಳೆದ ವರ್ಷ ಜನವರಿ 26ರಂದು ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ 55 ಎಸೆತಗಳಲ್ಲಿ 90 ರನ್ ಗಳಿಸಿದ್ದೇ ಕೊಹ್ಲಿಯ ಗರಿಷ್ಠ ರನ್ ಸಾಧನೆಯಾಗಿದೆ.

     

     

  • ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

    ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

    ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್ ಸ್ವದೇಶಕ್ಕೆ ವಾಪಾಸಾಗಬೇಕಾಗುತ್ತದೆ.

    ಇಂದಿನ ಪಂದ್ಯಕ್ಕೂ ಮಳೆ ಭೀತಿಯಿದ್ದು ನಿನ್ನೆ ಗುವಾಹಟಿಯಲ್ಲಿ ಮೋಡ ಕವಿದ ವಾತಾವರಣವಿತ್ತು. ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದರೆ 51ನೇ ಟಿ20 ಗೆಲುವು ಸಾಧಿಸಿದಂತಾಗುತ್ತದೆ. ಶ್ರೀಲಂಕಾವೂ ಇಷ್ಟೇ ಪಂದ್ಯವನ್ನು ಟಿ20ಯಲ್ಲಿ ಗೆದ್ದಿದೆ. ಆದರೆ ಭಾರತದ ಗೆಲುವಿನ ಸರಾಸರಿ ಶ್ರೀಲಂಕಾ ತಂಡಕ್ಕಿಂತ ಉತ್ತಮವಾಗಿದೆ. ಹೀಗಾಗಿ ಭಾರತ 3ನೇ ಸ್ಥಾನವನ್ನು ತಲುಪುವುದು ಖಚಿತ.

    84 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಇದುವರೆಗೆ 50 ಪಂದ್ಯದಲ್ಲಿ ಗೆದ್ದಿದ್ದು 31ರಲ್ಲಿ ಸೋತಿದೆ. ಇಲ್ಲಿ ಗೆಲುವಿನ ಪ್ರಮಾಣ ಶೇ.62ರಷ್ಟಿದೆ. ಮತ್ತೊಂದೆಡೆ ಸಿಂಹಳೀಯರು ಇದುವರೆಗೆ 96 ಟಿ20 ಪಂದ್ಯಗಳನ್ನಾಡಿದ್ದು 51ರಲ್ಲಿ ಗೆದ್ದು, 43 ಪಂದ್ಯಗಳಲ್ಲಿ ಸೋತಿದ್ದಾರೆ. ಶ್ರೀಲಂಕಾ ಗೆಲುವಿನ ಪ್ರಮಾಣ ಶೇ.54ರಷ್ಟಾಗುತ್ತದೆ.

    ಆಸೀಸ್ ಗೆ ಸ್ಪಿನ್ನರ್ ಗಳ ಕಾಟ: ಸದ್ಯ ಆಸೀಸ್ ತಂಡಕ್ಕೆ ತಲೆನೋವಾಗಿರೋದು ಭಾರತದ ಸ್ಪಿನ್ನರ್ ಗಳು. ಅದರಲ್ಲೂ ಕುಲದೀಪ್ ಯಾದವ್ ಹಾಗೂ ಚಾಹಲ್ ಆಸೀಸ್ ತಂಡಕ್ಕೆ ಭಾರೀ ಸವಾಲಾಗಿ ಪರಿಣಮಿಸಿದ್ದಾರೆ. ಎಷ್ಟೇ ಜಾಗ್ರತೆಯಿಂದ ಆಟವಾಡಿದರೂ ಇವರಿಬ್ಬರಿಗೆ ವಿಕೆಟ್ ಒಪ್ಪಿಸುತ್ತಿದ್ದಾರೆ.

     

    ಚಾಹಲ್ ಹಾಗೂ ಕುಲದೀಪ್ ಯಾದವ್ ಇದುವರೆಗೆ ಈ ಪ್ರವಾಸದಲ್ಲಿ 4 ಏಕದಿನ ಹಾಗೂ 1 ಟಿ20 ಪಂದ್ಯದಿಂದ ಒಟ್ಟು 16 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಕುಲದೀಪ್ 9 ಹಾಗೂ ಚಾಹಲ್ 7 ವಿಕೆಟ್ ಹಂಚಿಕೊಂಡಿದ್ದಾರೆ. ಗ್ಲೆನ್ ಮ್ಯಾಕ್ಸ್ ವೆಲ್ ಅಂತಾ ಚಾಹಲ್ ದಾಳಿಗೆ ಕಕ್ಕಾಬಿಕ್ಕಿಯಾಗಿದ್ದಾರೆ. ಯಾಕೆಂದರೆ ಇದುವರೆಗೆ ಒಟ್ಟು 4 ಬಾರಿ ಚಾಹಲ್ ಗೆ ವಿಕೆಟ್ ಒಪ್ಪಿಸಿ ಮ್ಯಾಕ್ಸ್ ವೆಲ್ ಪೆವಿಲಿಯನ್ ನತ್ತ ಮುಖ ಮಾಡಿದ್ದಾರೆ.

  • 36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

    36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

    ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯ ಇಂದು ಇಲ್ಲಿನ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಈಗಾಗಲೇ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ.

    ಟೀಂ ಇಂಡಿಯಾ ಈ ಪಂದ್ಯಕ್ಕಾಗಿ ಉತ್ತಮ ಅಭ್ಯಾಸವನ್ನೇ ನಡೆಸಿದೆ. ಪ್ರಾಕ್ಟೀಸ್ ವೇಳೆ ಟೀಂ ಇಂಡಿಯಾ ಆಟಗಾರರು ಫುಟ್ಬಾಲ್ ಆಡಿ ಗಮನ ಸೆಳೆದರು.

    ಸತತ 7 ವರ್ಷದ ಬಳಿಕ ಇಂದು ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಹೀಗಾಗಿ ಈ ಪಿಚ್ ಯಾವ ರೀತಿ ವರ್ತಿಸುತ್ತದೆ ಎಂದು ಹೇಳುವುದು ಕಷ್ಟ ಎಂದು ಕ್ರಿಕೆಟ್ ತಜ್ಞರು ಹೇಳಿದ್ದಾರೆ. ಈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಇದಾಗಲಿದೆ.

    ಆಸೀಸ್ ಆಟಗಾರರಿಗೆ ಟೀಂ ಇಂಡಿಯಾದ ಸ್ಪಿನ್ ಬೌಲರ್ ಗಳಾದ ಕುಲದೀಪ್ ಯಾದವ್ ಹಾಗೂ ಚಾಹಲ್ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ಅದರಲ್ಲೂ ಚಾಹಲ್ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಈ ಪ್ರವಾಸದಲ್ಲಿ 4 ಬಾರಿ ಔಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

    ಕಳೆದ ಸೀಸನ್ ನಲ್ಲಿ ನಡೆದ ರಣಜಿ ಪಂದ್ಯಾವಳಿಯಲ್ಲಿ ಹೈದರಾಬಾದ್ ತಂಡ ಇದೇ ಕ್ರೀಡಾಂಗಣದಲ್ಲಿ 36 ರನ್ ಗಳಿಗೆ ಆಲೌಟಾಗಿತ್ತು. 2010ರ ನವೆಂಬರ್ 28ರಂದು ಇಲ್ಲಿ ಕೊನೆಯ ಬಾರಿಗೆ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿತ್ತು. ಆ ಪಂದ್ಯದಲ್ಲಿ ಭಾರತ 40 ರನ್ ಗಳ ಗೆಲುವು ಸಾಧಿಸಿತ್ತು.

    ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇದುವರೆಗೆ ಒಟ್ಟು 14 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 10 ಹಾಗೂ ಆಸ್ಟ್ರೇಲಿಯಾ 4 ಪಂದ್ಯಗಳನ್ನು ಗೆದ್ದಿವೆ. 2012ರ ನವೆಂಬರ್ 28ರ ನಂತರ ಭಾರತ ವಿರುದ್ಧ ನಡೆದ ಎಲ್ಲಾ ಟಿ20 ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ.

     

  • ಟಿ20ಯಲ್ಲಿ ಟೀಂ ಇಂಡಿಯಾ ‘ಅರ್ಧ ಶತಕ’ದ ಗೆಲುವು

    ಟಿ20ಯಲ್ಲಿ ಟೀಂ ಇಂಡಿಯಾ ‘ಅರ್ಧ ಶತಕ’ದ ಗೆಲುವು

    ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ದಾಖಲೆ ಮಾಡಿದೆ. ಟಿ20 ಪಂದ್ಯದಲ್ಲಿ ಭಾರತ ತನ್ನ ಅರ್ಧ ಶತಕದ ಗೆಲುವನ್ನು ದಾಖಲಿಸಿದೆ. ಅರ್ಥಾತ್ ಭಾರತ ಇದುವರೆಗೆ 50 ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

    ಭಾರತ ಇದುವರೆಗೆ ಒಟ್ಟು 84 ಪಂದ್ಯವನ್ನು ಆಡಿದ್ದು 31 ಪಂದ್ಯಗಳಲ್ಲಿ ಸೋಲು ಕಂಡಿದೆ. ಆಸ್ಟ್ರೇಲಿಯಾ ತಂಡದ ವಿರುದ್ಧ ಇದು ಭಾರತದ 10ನೇ ಗೆಲುವು. ಇದುವರೆಗೆ ಎರಡು ರಾಷ್ಟ್ರಗಳ ನಡುವೆ 14 ಪಂದ್ಯಗಳು ನಡೆದಿದ್ದು ಕೇವಲ 4 ಪಂದ್ಯಗಳಲ್ಲಿ ಮಾತ್ರ ಸೋತಿದೆ.

    2012ರ ಸೆಪ್ಟೆಂಬರ್ ನಲ್ಲಿ ಟೀಂ ಇಂಡಿಯಾ ಸೋತಿದ್ದೇ ಕೊನೆ. ಅಲ್ಲಿಂದ ನಿನ್ನೆ ನಡೆದ ಪಂದ್ಯದವರೆಗೆ ಆಸೀಸ್ ಒಂದು ಪಂದ್ಯವನ್ನೂ ಗೆದ್ದಿಲ್ಲ. ಉಭಯ ರಾಷ್ಟ್ರಗಳ ನಡುವೆ 2012ರ ಭಾರತದ ಸೋಲಿನ ಬಳಿಕ 7 ಪಂದ್ಯಗಳು ನಡೆದಿದ್ದು 7ರಲ್ಲೂ ಭಾರತವೇ ಗೆಲುವು ಸಾಧಿಸಿದೆ. ಟಿ20 ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇವೆ. ಅಕ್ಟೋಬರ್ 10ರಂದು ಗುವಾಹಟಿ ಹಾಗೂ ಅಕ್ಟೋಬರ್ 13ರಂದು ಹೈದರಾಬಾದ್ ನಲ್ಲಿ ಪಂದ್ಯಗಳು ನಡೆಯಲಿವೆ.

    ಪ್ರಸ್ತುತ ಆಸೀಸ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿದೆ. ಭುವನೇಶ್ವರ್ ಕುಮಾರ್, ಬೂಮ್ರಾ, ಹಾರ್ದಿಕ್ ಪಾಂಡ್ಯ, ಧೋನಿ, ಕೊಹ್ಲಿ, ರೋಹಿತ್ ಶರ್ಮಾ, ಕುಲದೀಪ್ ಯಾದವ್ ಹಾಗೂ ಚಾಹಲ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಅದರಲ್ಲೂ ಕುಲದೀಪ್ ಯಾದವ್ ಹಾಗೂ ಚಾಹಲ್ ಬೌಲಿಂಗ್ ಮುಂದೆ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ತಿಣುಕಾಡುತ್ತಿದ್ದಾರೆ.

    ಟೀ ಇಂಡಿಯಾ ಪರವಾಗಿ ಜಸ್ಪ್ರೀತ್ ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯಾ ಹಾಗೂ ಚಾಹಲ್ ತಲಾ 1 ವಿಕೆಟ್ ಪಡೆದರು. ಸ್ಪಿನ್ನರ್ ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

  • ಆಸೀಸ್ ವಿರುದ್ಧ ಸತತ 7ನೇ ಟಿ20 ಗೆದ್ದ ಟೀಂ ಇಂಡಿಯಾ!

    ಆಸೀಸ್ ವಿರುದ್ಧ ಸತತ 7ನೇ ಟಿ20 ಗೆದ್ದ ಟೀಂ ಇಂಡಿಯಾ!

    ರಾಂಚಿ:  ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಟಿ20 ಕ್ರಿಕೆಟ್ ಪಂದ್ಯದಲ್ಲಿ ಸತತ 7ನೇ ಗೆಲುವು ಸಾಧಿಸಿದೆ. 2012ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತ್ತು. ಇದಾದ ನಂತರ ಒಟ್ಟು 6 ಪಂದ್ಯಗಳು ಇತ್ತಂಡಗಳ ನಡುವೆ ನಡೆದಿತ್ತು. ಈ ಆರೂ ಪಂದ್ಯಗಳಲ್ಲಿ ಟೀಂ ಇಂಡಿಯಾವೇ ಗೆಲುವು ಸಾಧಿಸಿತ್ತು.  ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳ ಗೆಲುವು ಸಾಧಿಸಿದೆ. ಮಳೆ ಹಿನ್ನೆಲೆಯಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಂತೆ ಗೆಲ್ಲಲು ಭಾರತಕ್ಕೆ 6 ಓವರ್ ಗಳಲ್ಲಿ 48 ರನ್ ಗಳ ಟಾರ್ಗೆಟ್ ಸಿಕ್ಕಿತ್ತು. 48 ರನ್ ಟಾರ್ಗೆಟ್ ಬೆನ್ನತ್ತಿದ ಭಾರತಕ್ಕೆ ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. 7 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದ ರೋಹಿತ್ ಶರ್ಮಾ 11 ರನ್ ಗೆ ಔಟಾದರು.

    ಶಿಖರ್ ಧವನ್ 12 ಎಸೆತದಿಂದ 3 ಬೌಂಡರಿಗಳ ನೆರವಿನಿಂದ 15 ಹಾಗೂ ನಾಯಕ ವಿರಾಟ್ ಕೊಹ್ಲಿ 14 ಎಸೆತದಿಂದ 3 ಬೌಂಡರಿಗಳ ಜೊತೆ 22 ರನ್ ಗಳಿಸಿದರು. 5.3ನೇ ಓವರ್ ನಲ್ಲಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಟೀಂ ಇಂಡಿಯಾವನ್ನು ಗೆಲುವಿನ ದಡ ದಾಟಿಸಿದರು.

    ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಆಸ್ಟ್ರೇಲಿಯಾಗೆ ಕೇವಲ 18.4 ಓವರ್ ಮಾತ್ರ ಆಡಲು ಸಾಧ್ಯವಾಯಿತು. ಪಂದ್ಯದ ನಿಗದಿತ ಓವರ್ ಮುಗಿಯಲು 8 ಎಸೆತ ಬಾಕಿ ಇರುವಂತೆಯೇ ಮಳೆ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಆಸೀಸ್ ಇನ್ನಿಂಗ್ಸನ್ನು ಅಲ್ಲಿಗೇ ಕೊನೆಗೊಳಿಸಲಾಯಿತು. ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಓವರ್ ನಲ್ಲೇ ಭುವನೇಶ್ವರ್ ಕುಮಾರ್ ಆಘಾತ ನೀಡಿದರು. 5 ಎಸೆತಗಳಲ್ಲಿ 2 ಬೌಂಡರಿಗಳ ನೆರವಿನಿಂದ 8 ರನ್ ಗಳಿಸಿದ ನಾಯಕ ಡೇವಿಡ್ ವಾರ್ನರ್ ಬೌಲ್ಡ್ ಆದ್ರು.

    ಆದರೆ ಫಿಂಚ್ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆಸರೆಯಾದರು. ಒಂದೆಡೆ ಫಿಂಚ್ ಉತ್ತಮವಾಗಿ ಆಡುತ್ತಿದ್ದರೆ ಆಸ್ಟ್ರೇಲಿಯಾ ಆಟಗಾರರೆಲ್ಲರೂ ಪೆವಿಲಿಯನ್ ಪರೇಡ್ ನಡೆಸುತ್ತಿದ್ದರು. ಮ್ಯಾಕ್ಸ್ ವೆಲ್ 17, ಪೇನ್ 17, ಹೆಡ್ 9, ಹೆನ್ರಿಕ್ಸ್ 8, ಕ್ರಿಶ್ಚಿಯನ್ 9, ಕಾಲ್ಟರ್ ನೈಲ್ 1, ಝಂಪಾ 4 ರನ್ ಗಳಿಸಿದರು.

    ಟೀ ಇಂಡಿಯಾ ಪರವಾಗಿ ಜಸ್ಪ್ರೀತ್ ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯಾ ಹಾಗೂ ಚಾಹಲ್ ತಲಾ 1 ವಿಕೆಟ್ ಪಡೆದರು. ಸ್ಪಿನ್ನರ್ ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

  • ಆಸೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದ್ರೆ ಟೀಂ ಇಂಡಿಯಾ ಟಿ-20ಯಲ್ಲಿ ನಂ.2

    ಆಸೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದ್ರೆ ಟೀಂ ಇಂಡಿಯಾ ಟಿ-20ಯಲ್ಲಿ ನಂ.2

    ರಾಂಚಿ: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಒಂದು ವೇಳೆ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದರೆ ಟಿ-20ಯಲ್ಲೂ ನಂ.2 ಪಟ್ಟಕ್ಕೇರಲಿದೆ. ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿರುವ ಟೀಂ ಇಂಡಿಯಾ ಟಿ20ಯಲ್ಲಿ ಸದ್ಯ 5ನೇ ಸ್ಥಾನದಲ್ಲಿದೆ.

    ಈ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದರೆ ಭಾರತ 2ನೇ ಸ್ಥಾನ ಖಚಿತವಾಗಲಿದೆ. ರಾಂಚಿಯ ಜೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಸರಣಿ ಆರಂಭಕ್ಕೆ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಭಾರೀ ಹೊಡೆತ ಬಿದ್ದಿದೆ. ಕಾರಣ ನಾಯಕ ಸ್ಟೀವ್ ಸ್ಮಿತ್ ಭುಜದ ನೋವಿನಿಂದಾಗಿ ಸರಣಿಯಿಂದ ಸಂಪೂರ್ಣವಾಗಿ ಹೊರಗೆ ಬಿದ್ದಿದ್ದಾರೆ. ಸ್ಮಿತ್ ಸ್ಥಾನಕ್ಕೆ ಮಾಕ್ರ್ಸ್ ಸ್ಟಾಯಿನ್ಸ್ ಆಯ್ಕೆಯಾಗಿದ್ದಾರೆ. ಪಂದ್ಯಕ್ಕೆ ಅಭ್ಯಾಸ ನಡೆಸುವ ವೇಳೆ ರಾಂಚಿಯಲ್ಲಿ ಸ್ಮಿತ್ ಗೆ ಗಾಯವಾಗಿತ್ತು. ಆರಂಭದಲ್ಲಿ ವೈದ್ಯರು ಪಂದ್ಯ ಆಡಬಹುದು ಎಂದಿದ್ದರೂ ಈಗ ಸರಣಿಯಲ್ಲಿ ಆಡಲು ಸ್ಮಿತ್ ಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ದಾಖಲೆಗಳಿಂದ…: ಭಾರತ ಹಾಗೂ ಆಸೀಸ್ ಇದುವರೆಗೆ ಒಟ್ಟು 14 ಟಿ20 ಪಂದ್ಯಗಳನ್ನಾಡಿದ್ದು ಇದರಲ್ಲಿ ಭಾರತ 9 ಹಾಗೂ ಆಸ್ಟ್ರೇಲಿಯಾ 4 ಪಂದ್ಯಗಳನ್ನು ಗೆದ್ದಿದೆ. ಭಾರತದಲ್ಲಿ ಎರಡೂ ತಂಡಗಳು 3 ಪಂದ್ಯವನ್ನಾಡಿದ್ದು ಇದರಲ್ಲಿ ಮೂರೂ ಪಂದ್ಯಗಳನ್ನು ಭಾರತವೇ ಗೆದ್ದಿದೆ. ಭಾರತದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 23 ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಿದ್ದು 12ರಲ್ಲಿ ಗೆಲುವು ಸಾಧಿಸಿದರೆ, 11 ಪಂದ್ಯದಲ್ಲಿ ಸೋತಿದೆ.

    ಆಸೀಸ್ ಇದುವರೆಗೆ ವಿದೇಶದಲ್ಲಿ 63 ಪಂದ್ಯವನ್ನಾಡಿದೆ. ಇದರಲ್ಲಿ 29 ಗೆಲುವು ಸಾಧಿಸಿದರೆ 31ರಲ್ಲಿ ಸೋತಿದೆ. 2 ಪಂದ್ಯ ಟೈ ಆಗಿದ್ದು 1 ಪಂದ್ಯದಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ.

    2012ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿದ್ದು, ಇದಾದ ನಂತರ ಒಟ್ಟು 6 ಪಂದ್ಯಗಳು ಇತ್ತಂಡಗಳ ನಡುವೆ ನಡೆದಿದೆ. ಈ ಆರೂ ಪಂದ್ಯಗಳಲ್ಲಿ ಟೀಂ ಇಂಡಿಯಾವೇ ಗೆಲುವು ಸಾಧಿಸಿದೆ ಎನ್ನುವುದೇ ವಿಶೇಷ.

  • ನಿರಾಶಾವಾದಿಗಳಿಂದ ಅಪಪ್ರಚಾರ, ಆರ್ಥಿಕತೆ ಕುಸಿತವಾಗಿಲ್ಲ: ಮೋದಿಯಿಂದ ಅಂಕಿಸಂಖ್ಯೆಯ ಭಾಷಣ

    ನಿರಾಶಾವಾದಿಗಳಿಂದ ಅಪಪ್ರಚಾರ, ಆರ್ಥಿಕತೆ ಕುಸಿತವಾಗಿಲ್ಲ: ಮೋದಿಯಿಂದ ಅಂಕಿಸಂಖ್ಯೆಯ ಭಾಷಣ

    ನವದೆಹಲಿ: ದೇಶದ ಆರ್ಥಿಕತೆ ಕುಸಿದಿಲ್ಲ. ಆದರೆ ನಿರಾಶಾವಾದಿಗಳು ಹಿಂಜರಿತವಾಗಿದೆ ಎನ್ನುವ ಸುದ್ದಿಯನ್ನು ಹರಡಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ವಿರೋಧಿ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿದ್ದಾರೆ.

    ದೆಹಲಿಯ ವಿಜ್ಞಾನ ಭವನದಲ್ಲಿ ಇನ್ಸ್ ಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಅಂಕಿಸಂಖ್ಯೆಗಳಿಂದ ಕೂಡಿದ ಮಾಹಿತಿ ಇರುವ ಭಾಷಣವನ್ನು ಮಾಡುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

    500, 1ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದರಿಂದ ದೇಶಕ್ಕೆ ಒಳ್ಳೆದಾಗುತ್ತಿದೆ. ನೋಟ್ ಬ್ಯಾನ್ ಬಳಿಕ ನಗದು ಚಲಾವಣೆ ಪ್ರಮಾಣ ಶೇ.12ರಿಂದ ಶೇ.9ಕ್ಕೆ ಕುಸಿದಿದೆ ಎಂದು ಹೇಳಿದರು.

    ದೇಶದ ಆರ್ಥಿಕ ಪ್ರಗತಿ (ಜಿಡಿಪಿ) ಮೊದಲ ತ್ರೈಮಾಸಿಕದಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟವಾದ ಶೇ 5.7ಕ್ಕೆ ಕುಸಿತ ಕಂಡಿದ್ದನ್ನು ಒಪ್ಪಿಕೊಂಡ ಅವರು, ಯುಪಿಎ ಅವಧಿಯಲ್ಲಿ 8 ಬಾರಿ ಶೇ.5.7ಕ್ಕಿಂತ ಕಡಿಮೆ ಜಿಡಿಪಿ ಕುಸಿದಿತ್ತು ಎಂದು ಹೇಳಿದರು. ಆರಂಭದಲ್ಲಿ ಸಮಸ್ಯೆಯಾದರೂ ಭವಿಷ್ಯದಲ್ಲಿ ದೇಶಕ್ಕೆ ಲಾಭವಾಗಲಿದೆ ಎನ್ನುವ ದೃಷ್ಟಿಯನ್ನು ನೋಡಿಕೊಂಡೇ ನೋಟ್ ನಿಷೇಧ ಮಾಡಿ ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್‍ಟಿ) ತಂದಿದ್ದೇವೆ. ನಮ್ಮ ಮೂರು ವರ್ಷದ ಅವಧಿಯಲ್ಲಿ ಜಿಡಿಪಿ ದರ ಶೇ.7.5 ಇತ್ತು ಎನ್ನುವುದನ್ನು ಎಲ್ಲರು ತಿಳಿದುಕೊಳ್ಳಬೇಕು. ಮುಂದಿನ ತ್ರೈಮಾಸಿಕದಲ್ಲಿ ಶೇ.7.7 ಜಿಡಿಪಿ ದರ ಬೆಳವಣಿಗೆಯಾಗುವ ನಿರೀಕ್ಷೆಯಲ್ಲಿದೆ ಎಂದು ಹೇಳಿದರು.

    ಹೊಟ್ಟೆ ತುಂಬಿರುವವರು ನನ್ನನ್ನು ದುರ್ಬಲ ಮಾಡಲು ನೋಡುತ್ತಿದ್ದಾರೆ. ದೇಶದ ಭವಿಷ್ಯಕ್ಕಾಗಿ ನಮ್ಮ ಕೆಲಸ ಕಠಿಣವಾಗಿರಬಹುದು. ಆದ್ರೆ, ಹೃದಯ ಮೃದು, ಸಂವೇದನಾಶೀಲವಾಗಿದೆ. ಕಪ್ಪುಹಣವನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ನೊಂದಣಿಯಾದ 3 ಲಕ್ಷ ಕಂಪೆನಿಗಳಲ್ಲಿ 2.1 ಲಕ್ಷಕ್ಕೂ ಅಧಿಕ ಕಂಪೆನಿಗಳು ನಕಲಿಯಾಗಿದೆ ಎನ್ನುವ ವಿಚಾರ ನೋಟ್ ಬ್ಯಾನ್ ಬಳಿಕ ತಿಳಿದು ಬಂದಿದೆ ಎಂದು ವಿವರಿಸಿದರು.

    ಎಫ್‍ಡಿಐನಲ್ಲಿ ದಾಖಲೆಯಾಗಿದ್ದು, 21 ಇಲಾಖೆಗಳಲ್ಲಿ 87 ಸುಧಾರಣೆಗಳನ್ನು ತಂದಿದ್ದೇವೆ. ಜಿಎಸ್‍ಟಿಯಲ್ಲಿ ಸಮಸ್ಯೆಯಾದರೆ ಅಗತ್ಯ ಬದಲಾವಣೆ ತರಲು ಸಿದ್ಧವಾಗಿದ್ದೇವೆ. ದೇಶದ ಆರ್ಥಿಕತೆಯ ಮೂಲ ಸದೃಢವಾಗಿದೆ. ಜನರು ಕಷ್ಟಪಟ್ಟು ದುಡಿದ ಹಣದ ಮಹತ್ವ ಸರ್ಕಾರಕ್ಕೆ ಗೊತ್ತಿದೆ. ನಮ್ಮ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದ ಜನರ ಉತ್ತಮ ಜೀವನವನ್ನು ಕೇಂದ್ರೀಕರಿಸಿವೆ. 2022ರಲ್ಲಿ ಹೊಸ ಭಾರತಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಲಿದೆ ಎಂದು ಹೇಳಿದರು.

  • ಅಲ್ಪಾವಧಿ ಬಡ್ಡಿ ದರ ಯಥಾಸ್ಥಿತಿ, ಜಿಡಿಪಿ ಕುಸಿಯುವ ಮುನ್ಸೂಚನೆ

    ಅಲ್ಪಾವಧಿ ಬಡ್ಡಿ ದರ ಯಥಾಸ್ಥಿತಿ, ಜಿಡಿಪಿ ಕುಸಿಯುವ ಮುನ್ಸೂಚನೆ

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ತನ್ನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯನ್ನು ಉಳಿಸಿಕೊಂಡಿದೆ.

    ದೇಶದ ಆರ್ಥಿಕ ಪ್ರಗತಿ (ಜಿಡಿಪಿ) ಮೊದಲ ತ್ರೈಮಾಸಿಕದಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟವಾದ ಶೇ 5.7ಕ್ಕೆ ಕುಸಿತ ಕಂಡ ಹಿನ್ನೆಲೆಯಲ್ಲಿ ಅಲ್ಪಾವಧಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವ ನಿರ್ಧಾರವನ್ನು ಆರ್‍ಬಿಐ ಕೈಗೊಂಡಿದೆ.

    ಗವರ್ನರ್ ಉರ್ಜಿತ್ ಪಟೇಲ್ ನೇತೃತ್ವ ಐದು ಮಂದಿಯ ಸದಸ್ಯರು ಇರುವ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆ ಬುಧವಾರ ನಡೆಯಿತು. ಈ ಸಭೆಯಲ್ಲಿ ವಾಣಿಜ್ಯ ಬ್ಯಾಂಕ್‍ಗಳಿಂದ ಪಡೆಯುವ ಸಾಲಕ್ಕೆ ಪಾವತಿಸುವ ಬಡ್ಡಿ ದರವನ್ನು (ರಿವರ್ಸ್ ರೆಪೊ) ಶೇ.5.75, ಬ್ಯಾಂಕ್‍ಗಳಿಗೆ ಆರ್‍ಬಿಐ ನೀಡುವ ಸಾಲದ ಬಡ್ಡಿ ದರವನ್ನು (ರೆಪೊ) ಶೇ.6ರ ಮಟ್ಟದಲ್ಲೇ ಉಳಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಇದೇ ವೇಳೆ ವಾರ್ಷಿಕವಾಗಿ ಈ ಹಿಂದೆ ಅಂದಾಜಿಸಿದ್ದ ಜಿಡಿಪಿ ದರ ಶೇ.7.3ರ ಬದಲಾಗಿ ಈ ಶೇ.6.7ಕ್ಕೆ ಕುಸಿತವಾಗಬಹುದು ಎಂದು ಅಂದಾಜಿಸಿದೆ.

    ರೆಪೊ ದರ: ವಾಣಿಜ್ಯ ಬ್ಯಾಂಕುಗಳು ಆರ್‍ಬಿಐನಿಂದ ಪಡೆಯುವ ಅಲ್ಪಾವಧಿ ಸಾಲನ ಮೇಲಿನ ಬಡ್ಡಿದರಕ್ಕೆ ರಿಪೊ ದರ ಎಂದು ಕರೆಯಲಾಗುತ್ತದೆ. ರೆಪೊ ದರ ಕಡೆಮೆಯಾದರೆ ಬ್ಯಾಂಕ್ ಗಳು ಕಡಿಮೆ ದರದಲ್ಲಿ ಹೆಚ್ಚು ಹಣವನ್ನು ಪಡೆಯಬಹುದು.

    ರಿವರ್ಸ್ ರೆಪೊ: ವಾಣಿಜ್ಯ ಬ್ಯಾಂಕುಗಳು ಆರ್‍ಬಿಐಯಲ್ಲಿ ಇಡುವ ಠೇವಣಿಗಳ ಮೇಲೆ ಪಡೆಯುವ ಬಡ್ಡಿದರವೇ ವಿರುದ್ಧ ರೆಪೊ ರೇಟ್. ಆರ್‍ಬಿಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವರ್ಸ್ ರೆಪೊ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‍ಬಿಐಗೆ ವರ್ಗಾಯಿಸುತ್ತದೆ.

     

  • ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಸರಣಿ: ಯಾವ ದಿನ ಎಲ್ಲಿ ಪಂದ್ಯ?

    ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಸರಣಿ: ಯಾವ ದಿನ ಎಲ್ಲಿ ಪಂದ್ಯ?

    ಮುಂಬೈ: ಭಾರತ ಪ್ರವಾಸವನ್ನು ಕೈಗೊಳ್ಳಲಿರುವ ಶ್ರೀಲಂಕಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ ವಿರಾಟ್ ಪಡೆಯನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

    ನವೆಂಬರ್ 16 ರಿಂದ ಡಿಸೆಂಬರ್ 24ರ ವರೆಗೆ ಶ್ರೀಲಂಕಾ ಭಾರತ ನೆಲದಲ್ಲಿ ಆಡಲಿದೆ. ನವೆಂಬರ್ 11 ರಿಂದ 13ರ ವರೆಗೆ ಕೋಲ್ಕತ್ತಾದ ಈಡನ್ ಗಾರ್ಡನ್‍ನಲ್ಲಿ ಶ್ರೀಲಂಕಾ ಅಭ್ಯಾಸ ಪಂದ್ಯವನ್ನು ಆಡಲಿದೆ. ನವೆಂಬರ್ 16ರಿಂದ 20ರವರೆಗೆ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ.

    ಟೆಸ್ಟ್ ವೇಳಾಪಟ್ಟಿ
    ಮೊದಲ ಟೆಸ್ಟ್-ನವೆಂಬರ್ 16-20
    ಎರಡನೇ ಟೆಸ್ಟ್-ನವೆಂಬರ್ 24-28
    ಮೂರನೇ ಟೆಸ್ಟ್ ಡಿಸೆಂಬರ್ 2-6

    ಏಕದಿನ ಕ್ರಿಕೆಟ್ ವೇಳಾಪಟ್ಟಿ
    ಡಿಸೆಂಬರ್ 10 – ಧರ್ಮಶಾಲಾ
    ಡಿಸೆಂಬರ್ 13 – ಮೊಹಾಲಿ
    ಡಿಸೆಂಬರ್ 17 – ವೈಜಾಗ್

    ಟಿ-20 ವೇಳಾಪಟ್ಟಿ
    ಡಿಸೆಂಬರ್ 20 – ಕಟಕ್
    ಡೆಸಂಬರ್ 22 – ಇಂದೋರ್
    ಡಿಸೆಂಬರ್ 24 -ಮುಂಬೈ

    ಇದನ್ನೂ ಓದಿ: ಭಾರತ, ಶ್ರೀಲಂಕಾ ಟಿ-20ಯಲ್ಲಿ ಟಾಸ್ ಗೆದ್ದವರು ಯಾರು: ಈ ವಿಡಿಯೋ ನೋಡಿ

  • ಭಾರತಕ್ಕೆ 7 ವಿಕೆಟ್‍ಗಳ ಭರ್ಜರಿ ಜಯ: ಮತ್ತೆ  ಸಿಕ್ತು ನಂಬರ್ 1 ಪಟ್ಟ

    ಭಾರತಕ್ಕೆ 7 ವಿಕೆಟ್‍ಗಳ ಭರ್ಜರಿ ಜಯ: ಮತ್ತೆ ಸಿಕ್ತು ನಂಬರ್ 1 ಪಟ್ಟ

    ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದೆ. ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಇದೇ ಮೊದಲ ಬಾರಿಗೆ ಸರಣಿಯನ್ನು ಜಯಗಳಿಸಿದೆ.

    ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ 42.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿ ವಿಜಯದ ನಗೆ ಬೀರಿತು.

    ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಅಜಿಂಕ್ಯಾ ರಹಾನೆ ಮೊದಲ ವಿಕೆಟ್ ಗೆ 22.3 ಓವರ್ ಗಳಲ್ಲಿ 124 ರನ್ ಜೊತೆಯಾಟವಾಡಿದರು. ರಹಾನೆ 61 ರನ್(74 ಎಸೆತ, 7 ಬೌಂಡರಿ) ಗಳಿಸಿದ್ದಾಗ ಎಲ್‍ಬಿ ಬಲಿಯಾದರು. ನಂತರ ಬಂದ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಜೊತೆಗೂಡಿ ಎರಡನೇ ವಿಕೆಟ್ ಗೆ 99 ರನ್ ಗಳ ಜೊತೆಯಾಟವಾಡಿದರು. ತಂಡದ ಮೊತ್ತ 223 ಆಗಿದ್ದಾಗ ಕೊಹ್ಲಿ 39 ರನ್(55 ಎಸೆತ, 2 ಬೌಂಡರಿ) ಗಳಿಸಿದ್ದಾಗ ಕ್ಯಾಚ್ ನೀಡಿ ಔಟಾದರು.

    94 ಎಸೆತದಲ್ಲಿ 14ನೇ ಶತಕ ಪೂರ್ಣಗೊಳಿಸಿದ ರೋಹಿತ್ ಶರ್ಮಾ 125 ರನ್(109 ಎಸೆತ, 11 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಔಟಾದರು. ಕೇದಾರ್ ಜಾದವ್ ಅಜೇಯ 5 ರನ್, ಮನೀಷ್ ಪಾಂಡೆ ಅಜೇಯ 11ರನ್ ಗಳಿಸಿದರು.

    ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರವಾಗಿ ಡೇವಿಡ್ ವಾರ್ನರ್ 53 ರನ್(62 ಎಸೆತ, 5 ಬೌಂಡರಿ) ಸ್ಟೊಯಿನ್ಸ್ 46 ರನ್(63 ಎಸೆತ, 4 ಬೌಂಡರಿ 1 ಸಿಕ್ಸರ್) ಹೊಡೆದು ಔಟಾದರು.

    ಅಕ್ಷರ್ ಪಟೇಲ್ ಮೂರು ವಿಕೆಟ್ ಪಡೆದರೆ, ಬೂಮ್ರಾ 2 ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಕೇದಾರ್ ಜಾದವ್ ತಲಾ ಒಂದೊಂದು ವಿಕೆಟ್ ಕಿತ್ತರು. ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಹಾರ್ದಿಕ್ ಪಾಂಡ್ಯ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

    ಈ ಸರಣಿಗೂ ಮುನ್ನ ಒಟ್ಟು 7 ಬಾರಿ ಭಾರತ-ಆಸೀಸ್ 5 ಅಥವಾ 5ಕ್ಕೂ ಹೆಚ್ಚು ಪಂದ್ಯಗಳ ಅಟವಾಡಿದ್ದು, ಇದರಲ್ಲಿ 2 ಬಾರಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 2 ಬಾರಿ 3-2 ಅಂತರದಿಂದ ಸೋಲಿಸಿತ್ತು. 1986ರಲ್ಲಿ ಮೊದಲ ಬಾರಿ ಹಾಗೂ 2013ರಲ್ಲಿ 2ನೇ ಬಾರಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

    ಮತ್ತೆ ನಂಬರ್ 1 ಪಟ್ಟ: ಇಂದಿನ ಪಂದ್ಯದಲ್ಲಿ ಭಾರತ ಗೆದ್ದ ಹಿನ್ನೆಲೆಯಲ್ಲಿ ಮತ್ತೆ ಐಸಿಸಿ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೆ ಏರಿದೆ. ಸೆಪ್ಟೆಂಬರ್ 24ರಂದು ಇಂದೋರ್ ನಲ್ಲಿ ನಡೆದ ಪಂದ್ಯದ ಬಳಿಕ ಟೀಂ ಇಂಡಿಯಾ ನಂಬರ್ 1 ಪಟ್ಟಕ್ಕೇರಿತ್ತು. ಆದರೆ 4ನೇ ಪಂದ್ಯವನ್ನು ಸೋತ ಹಿನ್ನೆಲೆಯಲ್ಲಿ ನಂ.2ಕ್ಕೆ ಇಳಿದಿತ್ತು. ಈ ಪಂದ್ಯಕ್ಕೂ ಮುನ್ನಾ ದಕ್ಷಿಣ ಆಫ್ರಿಕಾ 119 ಅಂಕಗಳ ಜೊತೆ ನಂ.1 ಸ್ಥಾನದಲ್ಲಿತ್ತು. ಸಮಾನವಾದ 119 ಅಂಕಗಳೊಂದಿಗೆ ಟೀಂ ಇಂಡಿಯಾ 2ನೇ ಸ್ಥಾನದಲ್ಲಿತ್ತು. ಆದರೆ ಇಂದು ಪಂದ್ಯ ಗೆದ್ದ ಹಿನ್ನೆಲೆಯಲ್ಲಿ ಭಾರತದ ಅಂಕ 120ಕ್ಕೆ ಏರಿಕೆಯಾಗಿದ್ದು, ಈ ಮೂಲಕ ಮತ್ತೆ ನಂಬರ್ 1 ಪಟ್ಟಕ್ಕೆ ಏರಿದೆ.