Tag: india

  • 1 ವರ್ಷದ ನಂತ್ರ 10 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ಕಿತ್ತ ಜಾದವ್

    1 ವರ್ಷದ ನಂತ್ರ 10 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ಕಿತ್ತ ಜಾದವ್

    ನಾಗ್ಪುರ: ಕೇದಾರ್ ಜಾದವ್ 1 ವರ್ಷದ ಬಳಿಕ ಪೂರ್ಣ 10 ಓವರ್ ಬೌಲಿಂಗ್ ನಡೆಸಿ ಒಂದು ವಿಕೆಟ್ ಪಡೆದಿದ್ದಾರೆ.

    ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ 2016ರ ಅಕ್ಟೋಬರ್ ನಲ್ಲಿ ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಬೌಲಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ 8 ಓವರ್ ಎಸೆದು 27 ರನ್ ನೀಡಿದ್ದರು.

    ನಾಗ್ಪುರದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಕೇದಾರ್ ಜಾದವ್ ಒಂದು ವಿಕೆಟ್ ಪಡೆದಿದ್ದಾರೆ. 16 ರನ್ ಗಳಿಸಿದ್ದ ನಾಯಕ ಸ್ವೀವ್ ಸ್ಮಿತ್ ಅವರನ್ನು ಕೇದಾರ್ ಜಾದವ್ ಎಲ್‍ಬಿಗೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.

    ಇಂದಿನ ಪಂದ್ಯದಲ್ಲಿ ಐದನೇಯವರಾಗಿ ಬೌಲಿಂಗ್ ಮಾಡಿದ ಜಾದವ್ 10 ಓವರ್ ಗಳ ಕೋಟಾದಲ್ಲಿ 48 ರನ್ ನೀಡಿ ಒಂದು ವಿಕೆಟ್ ಪಡೆದಿದ್ದಾರೆ.

  • ಟೀಂ ಇಂಡಿಯಾ ಇಂದು ಗೆದ್ದರೆ ಆಸೀಸ್ ವಿರುದ್ಧ ಮತ್ತೊಂದು ದಾಖಲೆ – ಮತ್ತೆ ನಂ.1

    ಟೀಂ ಇಂಡಿಯಾ ಇಂದು ಗೆದ್ದರೆ ಆಸೀಸ್ ವಿರುದ್ಧ ಮತ್ತೊಂದು ದಾಖಲೆ – ಮತ್ತೆ ನಂ.1

    ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಆದರೆ ಇಂದಿನ ಪಂದ್ಯವನ್ನು ಗೆದ್ದರೆ ಭಾರತ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಇದೇ ಮೊದಲ ಬಾರಿಗೆ ಗೆದ್ದಂತಾಗುತ್ತದೆ.

    ಈ ಸರಣಿಗೂ ಮುನ್ನ ಒಟ್ಟು 7 ಬಾರಿ ಭಾರತ-ಆಸೀಸ್ 5 ಅಥವಾ 5ಕ್ಕೂ ಹೆಚ್ಚು ಪಂದ್ಯಗಳ ಅಟವಾಡಿದ್ದು, ಇದರಲ್ಲಿ 2 ಬಾರಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 2 ಬಾರಿ 3-2 ಅಂತರದಿಂದ ಸೋಲಿಸಿದೆ. ಎರಡು ಬಾರಿಯೂ ಭಾರತದಲ್ಲೇ ಸರಣಿ ಗೆದ್ದಿದೆ ಎನ್ನುವುದೇ ವಿಶೇಷ. 1986ರಲ್ಲಿ ಮೊದಲ ಬಾರಿ ಹಾಗೂ 2013ರಲ್ಲಿ 2ನೇ ಬಾರಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

    ಮತ್ತೆ ನಂಬರ್ 1 ಪಟ್ಟ: ಮತ್ತೊಂದು ಪ್ರಮುಖ ವಿಚಾರವೆಂದರೆ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಮತ್ತೆ ಐಸಿಸಿ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಲಿದೆ. ಸೆಪ್ಟೆಂಬರ್ 24ರಂದು ಇಂದೋರ್ ನಲ್ಲಿ ನಡೆದ ಪಂದ್ಯದ ಬಳಿಕ ಟೀಂ ಇಂಡಿಯಾ ನಂಬರ್ 1 ಪಟ್ಟಕ್ಕೇರಿತ್ತು. ಆದರೆ 4ನೇ ಪಂದ್ಯವನ್ನು ಸೋತ ಹಿನ್ನೆಲೆಯಲ್ಲಿ ನಂ.2ಕ್ಕೆ ಇಳಿದಿದೆ. ಸದ್ಯ ದಕ್ಷಿಣ ಆಫ್ರಿಕಾ 119 ಅಂಕಗಳ ಜೊತೆ ನಂ.1 ಸ್ಥಾನದಲ್ಲಿದೆ. ಸಮಾನವಾದ 119 ಅಂಕಗಳೊಂದಿಗೆ ಟೀಂ ಇಂಡಿಯಾ 2ನೇ ಸ್ಥಾನದಲ್ಲಿದೆ. ಇಂದು ಭಾರತ ಪಂದ್ಯ ಗೆದ್ದರೆ ಭಾರತದ ಅಂಕ 120ಕ್ಕೆ ಏರಿಕೆಯಾಗಲಿದೆ. ಈ ಮೂಲಕ ಮತ್ತೆ ನಂಬರ್ 1 ಪಟ್ಟಕ್ಕೇರುವ ಆಸೆ ಜೀವಂತವಾಗಿದೆ.

    ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಭಾರತದಲ್ಲಿ 55 ಪಂದ್ಯಗಳನ್ನಾಡಿದೆ. ಇದರಲ್ಲಿ 24 ಪಂದ್ಯಗಳಲ್ಲಿ ಟೀಂ ಇಂಡಿಯಾ ಹಾಗೂ 26 ಪಂದ್ಯಗಳಲ್ಲಿ ಆಸೀಸ್ ಗೆದ್ದಿದೆ. ಬಾಕಿ 5 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಒಂದು ವೇಳೆ ಭಾರತ ಗೆದ್ದರೆ ಇಂಡಿಯಾದಲ್ಲಿ ಆಡಿದ ಒಟ್ಟು ಪಂದ್ಯಗಳ ಫಲಿತಾಂಶ 26-25ರ ಅಂತರಕ್ಕೆ ತಲುಪಲಿದೆ. ಆಸೀಸ್ ಹಾಗೂ ಟೀಂ ಇಂಡಿಯಾ ಇದುವರೆಗೆ ಒಟ್ಟಾರೆಯಾಗಿ 127 ಏಕದಿನ ಪಂದ್ಯಗಳನ್ನಾಡಿದ್ದು ಇದರಲ್ಲಿ ಭಾರತ 44 ಹಾಗೂ ಆಸೀಸ್ 73 ಪಂದ್ಯಗಳನ್ನು ಗೆದ್ದಿವೆ. ಒಟ್ಟು 10 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ.

    ವಿದರ್ಭ ಮೈದಾನದಲ್ಲಿ: ಇಲ್ಲಿ ಭಾರತ ಒಟ್ಟು 4 ಪಂದ್ಯಗಳನ್ನಾಡಿದ್ದು ಇದರಲ್ಲಿ 2ನ್ನು ಗೆದ್ದು 2 ಪಂದ್ಯದಲ್ಲಿ ಸೋತಿದೆ. ಆಸೀಸ್ ವಿರುದ್ಧ 2 ಪಂದ್ಯವನ್ನಾಡಿದ್ದು ಅದರಲ್ಲಿ 2 ಪಂದ್ಯದಲ್ಲಿಯೂ ಗೆದ್ದಿರುವುದು ವಿಶೇಷ. 2013ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಈ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯವನ್ನಾಡಿತ್ತು. ಅಕ್ಟೋಬರ್ ತಿಂಗಳಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ಗೆಲುವು ಸಾಧಿಸಿತ್ತು.


     

  • ಟೀಂ ಇಂಡಿಯಾ ದಾಖಲೆ ಕನಸು ಭಗ್ನ -ಬೆಂಗಳೂರಲ್ಲಿ ಕೊಹ್ಲಿ ಪಡೆಗೆ ಸೋಲು

    ಟೀಂ ಇಂಡಿಯಾ ದಾಖಲೆ ಕನಸು ಭಗ್ನ -ಬೆಂಗಳೂರಲ್ಲಿ ಕೊಹ್ಲಿ ಪಡೆಗೆ ಸೋಲು

    ಬೆಂಗಳೂರು: ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 21 ರನ್ ಗಳಿಂದ ಸೋಲಿಸಿತು. ಈ ಮೂಲಕ ಸತತ 10 ಗೆಲುವಿನ ಸವಿಯ ನಿರೀಕ್ಷೆಯಲ್ಲಿದ್ದ ಟೀಂ ಇಂಡಿಯಾ ಕನಸು ಕನಸಾಗಿಯೇ ಉಳಿಯಿತು.

    50 ಓವರ್ ಗಳಲ್ಲಿ ಗೆಲ್ಲಲು 335 ಟಾರ್ಗೆಟ್ ಬೆನ್ನತ್ತಿದ ಭಾರತ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 313 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ಮಹೇಂದ್ರ ಸಿಂಗ್ ಧೋನಿ ಔಟಾಗುವವರೆಗೆ ಟೀಂ ಇಂಡಿಯಾ ಗೆಲುವಿನ ನಿರೀಕ್ಷೆಯಲ್ಲಿತ್ತು.

    ಅಜಿಂಕ್ಯಾ ರಹಾನೆ ಹಾಗೂ ರೋಹಿತ್ ಶರ್ಮಾ ಮೊದಲ ವಿಕೆಟ್ ಗೆ ಶತಕದ ಜೊತೆಯಾಟ ನೀಡಿದರು. ಮಧ್ಯದಲ್ಲಿ ಬಂದ ಹಾರ್ದಿಕ್ ಪಾಂಡ್ಯ 3 ಸಿಕ್ಸರ್ ಗಳನ್ನು ಸಿಡಿಸಿದರೂ ಭಾರತದ ಗೆಲುವಿಗೆ ಇದು ಸಾಕಾಗಲಿಲ್ಲ. ರಹಾನೆ 53, ರೋಹಿತ್ ಶರ್ಮಾ 65, ವಿರಾಟ್ ಕೊಹ್ಲಿ 21, ಪಾಂಡ್ಯ 41, ಕೇದಾರ್ ಜಾಧವ್ 67, ಮನೀಷ್ ಪಾಂಡೆ 33, ಧೋನಿ 13, ಅಕ್ಷರ್ ಪಟೇಲ್ 5, ಮೊಹಮ್ಮದ್ ಶಮಿ 6 ಹಾಗೂ ಉಮೇಶ್ ಯಾದವ್ 2 ರನ್ ಗಳಿಸಿದರು.

    ಆಸ್ಟ್ರೇಲಿಯಾ ಪರವಾಗಿ ರಿಚಡ್ರ್ಸನ್ 3, ಕಾಲ್ಟರ್‍ನೈಲ್2, ಕಮಿನ್ಸ್ ಹಾಗೂ ಝಂಪಾ ತಲಾ 1 ವಿಕೆಟ್ ಗಳಿಸಿದರು.

    ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕಿಳಿಯಿತು. ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಶತಕ ಬಾರಿಸಿದರು. 119 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಬೌಂಡರಿಗಳ ನೆರವಿನಿಂದ 124 ರನ್ ಗಳಿಸಿದರು. ಆಸ್ಟ್ರೇಲಿಯಾದ ಆಕ್ರಮಣಕಾರಿ ಆಟ ಎಷ್ಟಿತ್ತೆಂದರೆ ತಂಡದ ಮೊದಲ ವಿಕೆಟ್ ಪತನವಾಗಿದ್ದತ 35ನೇ ಓವರ್ ನಲ್ಲಿ. 35ನೇ ಓವರ್ ನ ಕೊನೆಯ ಎಸೆತದಲ್ಲಿ ತಂಡದ ಮೊತ್ತ 231 ರನ್ ಆಗಿದ್ದಾಗ ಡೇವಿಡ್ ವಾರ್ನರ್ ಔಟಾದರು. ವಾರ್ನರ್ ಗೆ ಫಿಂಚ್ ಉತ್ತಮ ಜೊತೆಯಾಟ ನೀಡಿದರೂ ಶತಕ ವಂಚಿತರಾದರು. 96 ಎಸೆತಗಳಲ್ಲಿ ಫಿಂಚ್ 10 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 94 ರನ್ ಗಳಿಸಿ ಔಟಾದರು. ಹೆಡ್ 29, ಸ್ಮಿತ್ 3, ಹ್ಯಾಂಡ್ಸ್ ಕಾಂಬ್ 43, ಸ್ಟಾಯ್ನಿಸ್ 15, ವೇಡ್ 3 ರನ್ ಗಳಿಸಿದರು.

    ಟೀಂ ಇಂಡಿಯಾ ಪರವಾಗಿ ಉಮೇಶ್ ಯಾದವ್ 4 ಹಾಗೂ ಕೇದಾರ್ ಜಾಧವ್ 1 ವಿಕೆಟ್ ಪಡೆದರು. ನಿಗದಿತ 50 ಓವರ್ ಗಳು ಮುಗಿದಾಗ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿತ್ತು.

    https://twitter.com/BCCI_Tv/status/913429402817613824

  • ಸತತ 10ನೇ ಗೆಲುವು ಸಾಧಿಸಿ ದಾಖಲೆ ಮಾಡುತ್ತಾ ಟೀಂ ಇಂಡಿಯಾ!

    ಸತತ 10ನೇ ಗೆಲುವು ಸಾಧಿಸಿ ದಾಖಲೆ ಮಾಡುತ್ತಾ ಟೀಂ ಇಂಡಿಯಾ!

    ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಟೀಂ ಇಂಡಿಯಾ ದಾಖಲೆ ಮಾಡುತ್ತಾ..? ಅಥವಾ ಮಳೆರಾಯ ಭಾರತದ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕ್ತಾನಾ..?

    ಆಸ್ಟ್ರೇಲಿಯಾ ವಿರುದ್ಧ ಇಂದು ನಡೆಯಲಿರುವ 4ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ವಿರಾಟ್ ಕೊಹ್ಲಿ ಪಡೆ ಸತತ 4 ಏಕದಿನ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಗೆದ್ದ ಮೊದಲ ತಂಡ ಎನಿಸಿಕೊಳ್ಳಲಿದೆ. ಈ ಹಿಂದೆ ಭಾರತ 2 ಬಾರಿ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳನ್ನು ಗೆದ್ದಿತ್ತು. 1986ರಲ್ಲಿ 6 ಪಂದ್ಯಗಳ ಸರಣಿಯನ್ನು 3-2 ಹಾಗೂ 2013ರಲ್ಲಿ 7 ಪಂದ್ಯಗಳ ಸರಣಿಯನ್ನು 3-2 ಅಂತರದಿಂದ ಗೆದ್ದಿತ್ತು.

    ಬೆಂಗಳೂರಿನಲ್ಲಿ ನಡೆಯುವ ಈ ಪಂದ್ಯವನ್ನು ಭಾರತ ಗೆದ್ದರೆ ಸತತ 10ನೇ ಜಯ ಗಳಿಸಿದರೆ ಮತ್ತೊಂದು ದಾಖಲೆಯೂ ಭಾರತ ತಂಡಕ್ಕೆ ಸಿಗಲಿದೆ. ಟೀಂ ಇಂಡಿಯಾ ಈ ವರ್ಷ ಜುಲೈಯಿಂದ ಸೆಪ್ಟೆಂಬರ್ ವರೆಗೆ ಸತತ 9 ಪಂದ್ಯಗಳನ್ನು ಗೆದ್ದಿದೆ. ಈ ಹಿಂದೆ 2008ರ ನವೆಂಬರ್ ನಿಂದ 2009ರ ಫೆಬ್ರವರಿವರೆಗೆ ನಡೆದ 9 ಪಂದ್ಯಗಳನ್ನು ಸತತವಾಗಿ ಭಾರತ ಗೆದ್ದಿತ್ತು. ಇದೇ ಜುಲೈ 24ರಂದು ಆಸ್ಟ್ರೇಲಿಯಾ ವಿರುದ್ಧ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಹಳೆಯ ದಾಖಲೆಯನ್ನು ಸರಿಗಟ್ಟಿದೆ.

    ಈ ವರ್ಷ ಜುಲೈನಲ್ಲಿ ಆಂಟಿಗಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 11 ರನ್ ಗಳಿಗೆ ಸೋತ ಬಳಿಕ ಭಾರತ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಆದರೆ ಆಸ್ಟ್ರೇಲಿಯಾ ಜನವರಿ 26ರಂದು ಪಾಕಿಸ್ತಾನವನ್ನು ಸೋಲಿಸಿದ ಬಳಿಕ ನಂತರ ಯಾವುದೇ ಪಂದ್ಯವನ್ನು ಗೆದ್ದಿಲ್ಲ. ದಕ್ಷಿಣ ಆಫ್ರಿಕಾ 5 ಹಾಗೂ ಆಸ್ಟ್ರೇಲಿಯಾ 6 ಬಾರಿ ಸತತ 10 ಪಂದ್ಯಗಳನ್ನು ಗೆದ್ದ ದಾಖಲೆ ಮಾಡಿದೆ. ಸತತ 10 ಏಕದಿನ ಪಂದ್ಯವನ್ನು ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ಎರಡೆರಡು ಬಾರಿ ಗೆದ್ದ ದಾಖಲೆ ಮಾಡಿದ್ದರೆ ನ್ಯೂಜಿಲೆಂಡ್ 1 ಬಾರಿ 10 ಪಂದ್ಯವನ್ನು ನಿರಂತರವಾಗಿ ಗೆದ್ದಿದೆ.

     

    ಬೆಂಗಳೂರಿನಲ್ಲಿ ಇಂದಿ ಬೆಳಗ್ಗಿನಿಂದಲೂ ಮೋಡ ಮುಸುಕಿದ ವಾತಾವರಣವಿದ್ದು ಯಾವುದೇ ಕ್ಷಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಪಂದ್ಯ ಸಂಪೂರ್ಣ 50 ಓವರ್ ಆಡಲು ಸಾಧ್ಯವಾಗುತ್ತಾ ಎನ್ನುವುದು ಸದ್ಯದ ಕುತೂಹಲಕಾರಿ ಪ್ರಶ್ನೆ.

     

  • ಅರುಣ್ ಜೇಟ್ಲಿ ಆರ್ಥಿಕ ನೀತಿ ಟೀಕಿಸಿ ಲೇಖನ ಬರೆದ ಯಶವಂತ್ ಸಿನ್ಹಾ

    ಅರುಣ್ ಜೇಟ್ಲಿ ಆರ್ಥಿಕ ನೀತಿ ಟೀಕಿಸಿ ಲೇಖನ ಬರೆದ ಯಶವಂತ್ ಸಿನ್ಹಾ

    ನವದೆಹಲಿ: ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಬಿಜೆಪಿಯ ಹಿರಿಯ ಮುಖಂಡ, ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಟೀಕಿಸಿ ಲೇಖನ ಬರೆದಿದ್ದಾರೆ.

    ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಂದಾಗಿ ದೇಶದ ಅರ್ಥ ವ್ಯವಸ್ಥೆ ಹದಗೆಟ್ಟಿದೆ ಎಂದು ಇಂಡಿಯನ್ಸ್ ಎಕ್ಸ್ ಪ್ರೆಸ್ ಪತ್ರಿಕೆಗೆ ಯಶವಂತ್ ಸಿನ್ಹಾ ಲೇಖನ ಬರೆದಿದ್ದು, “ಈಗಲೂ ನಾನು ಮಾತನಾಡದೇ ಇದ್ದರೆ ದೇಶದ ಕರ್ತವ್ಯವವನ್ನು ನಿಭಾಯಿಸಲು ವಿಫಲನಾದಂತೆ” ಎಂದು ಬರೆದುಕೊಂಡಿದ್ದಾರೆ.

    ನಾವು ವಿರೋಧ ಪಕ್ಷದಲ್ಲಿದ್ದಾಗ ರೈಡ್ ರಾಜ್(ತನಿಖಾ ಸಂಸ್ಥೆಗಳು ನಡೆಸುವ ದಾಳಿ) ಖಂಡಿಸಿದ್ದೇವು. ಆದರೆ ಈಗ ದಾಳಿ ಎನ್ನುವುದು ದೈನಂದಿನ ಚಟುವಟಿಕೆಯಾಗಿದೆ. ಪ್ರತಿ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಕಡಿಮೆಯಾಗುತ್ತಿದೆ. ಕೈಗಾರಿಕಾ ಉತ್ಪಾದನೆ ಕುಂಠಿತವಾಗಿದೆ. ಕೃಷಿ ಬೆಳವಣಿಗೆ ಆಗುತ್ತಿಲ್ಲ. ಖಾಸಗಿ ವಲಯದಲ್ಲಿ ಹೂಡಿಕೆ ಕಡಿಮೆ ಆಗುತ್ತಿದೆ. ಸೇವಾ ವಲಯದಲ್ಲೂ ಪ್ರಗತಿ ಕಾಣುತ್ತಿಲ್ಲ. ಕೆಟ್ಟದಾಗಿ ತಂದಿರುವ ಜಿಎಸ್‍ಟಿಯಿಂದ ದೇಶದ ಅರ್ಥ ವ್ಯವಸ್ಥೆ ಕುಸಿಯುತ್ತಿದೆ ಎಂದು ಹೇಳಿದ್ದಾರೆ.

    ಸರ್ಕಾರದ ಅಧಿಕಾರಿಗಳು ನೋಟು ರದ್ಧತಿಯಿಂದ ಸಮಸ್ಯೆ ಆಗಿಲ್ಲ ಎಂದು ಹೇಳುತ್ತಾರೆ. ಆದರೆ ಆರ್ಥಿಕ ಸಮಸ್ಯೆ ಬಹಳ ಹಿಂದೆಯೇ ಶುರುವಾಗಿತ್ತು. ಈ ಬೆಂಕಿಗೆ ನೋಟು ರದ್ದತಿ ತುಪ್ಪ ಸುರಿದಂತೆ ಆಯಿತು ಎಂದು ಬರೆದಿದ್ದಾರೆ.

    ಅಮೃತಸರ ಲೋಕಸಭಾ ಕ್ಷೇತ್ರದಲ್ಲಿ ಅರುಣ್ ಜೇಟ್ಲಿ ಸೋತಿದ್ದರೂ ಅವರನ್ನು ರಾಜ್ಯಸಭೆಗೆ ಆರಿಸಿ ಹಣಕಾಸು ಸಚಿವರನ್ನಾಗಿಸಿದ ನಡೆಯನ್ನು ಅವರು ಲೇಖನಲ್ಲಿ ಉಲ್ಲೇಖಿಸಿದ್ದಾರೆ. ಈ ಸಮಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಜಸ್ವಂತ್ ಸಿಂಗ್ ಮತ್ತು ಪ್ರಮೋದ್ ಮಹಾಜನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು ಎಂದು ಅಭಿಪ್ರಾಯವನ್ನು ತಿಳಿಸಿದ್ದಾರೆ.

    ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗುತ್ತಿದ್ದು, ಲಕ್ಷಾಂತರ ಕೋಟಿ ರೂ. ಲಾಭವಾಗುತ್ತಿರುವ ಸಂದರ್ಭದಲ್ಲಿ ಅರುಣ್ ಜೇಟ್ಲಿ ಹಣಕಾಸು ಸಚಿವರಾಗಿರುವುದು ಅವರ ಅದೃಷ್ಟ. ಆದರೆ ಈ ಸುವರ್ಣ ಅವಕಾಶವನ್ನು ಜೇಟ್ಲಿ ಹಾಳು ಮಾಡಿದ್ದಾರೆ ಎಂದು ಸಿನ್ಹಾ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

    2015ರಲ್ಲಿ ಜಿಡಿಪಿ ಅಳೆಯುವ ಮಾನದಂಡ ಬದಲಾಗಿದೆ. ಒಂದು ವೇಳೆ ಈ ಹಿಂದಿನಂತೆ ಜಿಡಿಪಿ ಲೆಕ್ಕಾಚಾರ ಹಾಕಿದರೆ ಶೇ. 5.7ರ ಪ್ರಗತಿ ದರದ ಬದಲಾಗಿ ಶೇ.3.7 ಅಥವಾ ಅದಕ್ಕಿಂತಲೂ ಕಡಿಮೆ ಪ್ರಗತಿ ದರ ಇರಬಹುದು ಎಂದು ಅವರು ಅಂದಾಜಿಸಿದ್ದಾರೆ.

    ಯಶವಂತ ಸಿನ್ಹಾ ಅವರು ಮೋದಿ ಸೇರಿದಂತ ಪಕ್ಷದ ನಾಯಕರನ್ನು ಟೀಕಿಸುವುದು ಇದೆ ಮೊದಲಲ್ಲ. 2014ರ ಲೋಕಸಭಾ ಚುನಾವಣೆಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲಾದ ಬಳಿಕ ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಆಡ್ವಾಣಿ, ಯಶವಂತ್ ಸಿನ್ಹಾ ಮತ್ತು ಮುರಳಿ ಮನೋಹರ ಜೋಷಿ ಅವರು ಪಕ್ಷದ ನಾಯಕತ್ವವನ್ನು ಹಲವು ಸಂದರ್ಭಗಳಲ್ಲಿ ಟೀಕಿಸಿದ್ದರು.

    ತಮ್ಮ ಸಚಿವ ಸಂಪುಟ ಸೇರ್ಪಡೆಗೆ ಸಚಿವರ ಗರಿಷ್ಠ ವಯೋಮಿತಿಯನ್ನು 75ಕ್ಕೆ ಸೀಮಿತಗೊಳಿಸಿದ್ದಕ್ಕೆ ಯಶವಂತ್ ಸಿನ್ಹಾ, ಈಗಿನ ಸರ್ಕಾರ 75 ದಾಟಿದವರನ್ನು “ಬ್ರೇನ್ ಡೆಡ್ ಎಂದು ಡಿಕ್ಲೇರ್ ಮಾಡಿದೆ”ಎಂದು ಲೇವಡಿ ಮಾಡಿದ್ದರು.

    ಯಶವಂತ್ ಸಿನ್ಹಾ ಸಹಿತ ಹಲವು ಹಿರಿಯ ಬಿಜೆಪಿ ನಾಯಕರನ್ನು ಮೂಲೆ ಗುಂಪು ಮಾಡಿ ‘ಮಾರ್ಗದರ್ಶಕ ಮಂಡಳಿ’ಯ ಸದಸ್ಯರನ್ನಾಗಿ ನೇಮಿಸಿದ್ದಾರೆ ಎನ್ನುವ ಆರೋಪ ಮೋದಿ ಮೇಲಿದೆ. ಸಿನ್ಹಾ ಅವರು ಮಾರ್ಗದರ್ಶಕ ಮಂಡಳಿಯನ್ನು ಆನೇಕ ಬಾರಿ ಲೇವಡಿ ಮಾಡಿ ಮಾತನಾಡಿದ್ದರು.

     

     

  • 2020ರ ವೇಳೆಗೆ ಭಾರತದಲ್ಲಿ ಬರುತ್ತೆ 5ಜಿ: ನೆಟ್ ಸ್ಪೀಡ್ ಎಷ್ಟು ಗೊತ್ತಾ?

    2020ರ ವೇಳೆಗೆ ಭಾರತದಲ್ಲಿ ಬರುತ್ತೆ 5ಜಿ: ನೆಟ್ ಸ್ಪೀಡ್ ಎಷ್ಟು ಗೊತ್ತಾ?

    ನವದೆಹಲಿ: 2020ರ ವೇಳೆಗೆ ದೇಶದಲ್ಲಿ 5ಜಿ ತಂತ್ರಜ್ಞಾನ ಸೇವೆ ಆರಂಭಗೊಳ್ಳಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಸಮಿತಿ ರಚಿಸಿದೆ.

    3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ನಾವು ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿದ್ದೇವು. ಆದರೆ ವಿಶ್ವದಲ್ಲಿ 5ಜಿ ಮಾನದಂಡ ಸಿದ್ಧತೆ ಮಾಡುವ ಸಂದರ್ಭದಲ್ಲಿ ಭಾರತವೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತದೆ. ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಕೈತಪ್ಪಲು ಬಿಡುವುದಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ.

    500 ಕೋಟಿ ಮೂಲನಿಧಿಯೊಂದಿಗೆ 5ಜಿ ಸಂಬಂಧಿತ ಸಂಶೋಧನೆ ಹಾಗೂ ಅಭಿವೃದ್ಧಿ ನಡೆಯಲಿದ್ದು, ಈ ಸಮಿತಿಯಲ್ಲಿ ಟೆಲಿಕಾಂ, ಮಾಹಿತಿ ತಂತ್ರಜ್ಞಾನ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಇರಲಿದ್ದಾರೆ.

    5ಜಿ ಬಂದರೆ ನಗರ ಪ್ರದೇಶದಲ್ಲಿ 10 ಗಿಗಾ ಬೈಟ್ಸ್ ಪರ್ ಸೆಕೆಂಡ್ ಬ್ರಾಡ್‍ಬ್ಯಾಂಡ್ ಸಂಪರ್ಕ ಸಿಕ್ಕಿದರೆ, ಗ್ರಾಮಾಂತರ ಪ್ರದೇಶದಲ್ಲಿ 1 ಗಿಗಾ ಬೈಟ್ಸ್ ಪರ್ ಸೆಕೆಂಡ್ ಸಿಗಲಿದೆ.

    ಕೆಲ ದಿನಗಳ ಹಿಂದೆ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) 5ಜಿ ಸೇವೆಗೆ 3300- 3400 Mhz ಮತ್ತು 3400- 3600 Mhz ಬ್ಯಾಂಡ್ ಬಳಸಲು ಸಮಯ ನಿಗದಿ ಪಡಿಸಿ ಎಂದು ಟೆಲಿಕಾಂ ಕಂಪೆನಿಗಳಿಗೆ ಹೇಳಿತ್ತು.  ಕೇಂದ್ರ ಸರ್ಕಾರ 5ಜಿ ಸೇವೆ ಆರಂಭಿಸಲು ಉತ್ಸುಕವಾಗಿದ್ದರೂ ಭಾರತೀಯ ಟೆಲಿಕಾಂ ಕಂಪೆನಿ ಹಣಕಾಸು ಸಮಸ್ಯೆ ಎದುರಿಸುತ್ತಿರುವ ಕಾರಣ 2021-2022ರ ವೇಳೆಗೆ 5ಜಿ ಭಾರತದಲ್ಲಿ ಆರಂಭವಾಗಬಹುದು ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಇಂಟರ್‍ನ್ಯಾಷನಲ್ ಟೆಲಿಕಮ್ಯೂನಿಕೇಷನ್ ಯುನಿಯನ್(ಐಟಿಯು) 5ಜಿ ಮಾನದಂಡವನ್ನು ಸಿದ್ಧಪಡಿಸಲಿದ್ದು, ಈಗಾಗಲೇ ಪ್ರಸ್ತಾವನೆ ಸಿದ್ದಪಡಿಸಿದೆ. ಫೆಬ್ರವರಿಯಲ್ಲಿ ಪ್ರಸ್ತಾಪಗೊಂಡ ಪ್ರಕಾರ 5ಜಿ ಡೌನ್‍ಲಿಂಕ್ ಸ್ಪೀಡ್ 20 ಗಿಗಾಬೈಟ್ಸ್ ಪರ್ ಸೆಕೆಂಡ್ ಇರಬೇಕೆಂದು ಹೇಳಿದೆ.

  • ರವಿಶಾಸ್ತ್ರಿ ರಣತಂತ್ರವನ್ನು ಹಾಡಿ ಹೊಗಳಿದ ಕೊಹ್ಲಿ

    ರವಿಶಾಸ್ತ್ರಿ ರಣತಂತ್ರವನ್ನು ಹಾಡಿ ಹೊಗಳಿದ ಕೊಹ್ಲಿ

    ಇಂದೋರ್: ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾವಣೆ ಮಾಡಿ 4ನೇ ಬ್ಯಾಟ್ಸ್‍ಮನ್ ಆಗಿ ಹಾರ್ದಿಕ್ ಪಾಂಡ್ಯರನ್ನ ಕಣಕ್ಕಿಳಿಸಿ ಪಂದ್ಯವನ್ನು ಗೆಲ್ಲಿಸಿದ ಕೋಚ್ ರವಿಶಾಸ್ತ್ರಿ ಐಡಿಯಾವನ್ನು ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.

    ಈ ಬಗ್ಗೆ ಕೊಹ್ಲಿ ಮಾತನಾಡಿ ಭಾರತದ ಗೆಲುವಿಗೆ ಹಾರ್ದಿಕ್ ಪಾಂಡ್ಯ ಶ್ರಮ ದೊಡ್ಡದು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‍ನಲ್ಲೂ ಭಾರತವನ್ನು ಗೆಲ್ಲಿಸುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಭಾರತ ತಂಡದ ಆಲ್ ರೌಂಡರ್ ವಿಭಾಗದಲ್ಲಿ ದೊಡ್ಡ ಆಸ್ತಿಯಾಗಿ ಹೊರಹೊಮ್ಮಿದ್ದಾರೆ. ಉಪಾಯದಿಂದ ಆಸ್ಟ್ರೇಲಿಯಾವನ್ನು ಮಣಿಸಿ ಸರಣಿ ಪಡೆದು ಏಕದಿನ ಕ್ರಿಕೆಟ್‍ನಲ್ಲಿ ರ್ಯಾಂಕಿಂಗ್ ಪಟ್ಟಿಯಲ್ಲಿ 1ನೇ ಸ್ಥಾನ ಪಡೆದುಕೊಳ್ಳುವಲ್ಲಿ ಸಹಾಯವಾಯಿತು ಇದಕ್ಕೆಲ್ಲ ಕೋಚ್ ರವಿಶಾಸ್ತ್ರೀ ಐಡಿಯಾವೇ ಕಾರಣ ಎಂದು ಹೇಳಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಆಲ್‍ರೌಂಡರ್ ಪ್ರದರ್ಶನ ನೀಡಿತು. 294 ರನ್‍ಗಳ ಗುರಿ ಬೆನ್ನತ್ತಿದ ಭಾರತ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿ ಹಾರ್ದಿಕ್ ಪಾಂಡ್ಯನನ್ನು 4ನೇ ಕ್ರಮಾಂಕಕ್ಕೆ ಇಳಿಸಿತ್ತು. ಬಿರುಸಿನ ಆಟವಾಡಿದ ಪಾಂಡ್ಯ 72 ಬಾಲ್‍ಗಳಲ್ಲಿ 78 ರನ್ ಬಾರಿಸಿ ಪಂದ್ಯದ ಗೆಲುವಿಗೆ ಕಾರಣರಾಗಿದ್ದರು. ಬೌಲಿಂಗ್‍ನಲ್ಲಿ ಒಂದು ವಿಕೆಟ್ ಮತ್ತು ಅರ್ಧಶ ಶತಕ ಸಿಡಿಸಿದ್ದ ಪಾಂಡ್ಯಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಸಿಕ್ಕಿತ್ತು. ಈ ಮೂಲಕ ಈ ಪಾಂಡ್ಯ ತಂಡದ ಪ್ರಮುಖ ಆಲ್ ರೌಂಡರ್ ಆಗಿ ಹೊರ ಹೊಮ್ಮಿದ್ದಾರೆ.

    ಬಿಸಿಸಿಐ ಹಾಗೂ ಆಯ್ಕೆ ಸಮಿತಿ ನೀಡಿದ ಅವಕಾಶವನ್ನು ನಾನು ಸರಿಯಾಗಿ ಬಳಿಸಿಕೊಂಡು ಗುರುತಿಸಿಕೊಂಡಿದ್ದೇನೆ. ನನಗೆ ತುಂಬಾ ಖುಷಿ ತಂದಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

    ಇನ್ನು ಪಂದ್ಯ ಕೈ ತಪ್ಪಿದರ ಬಗ್ಗೆ ಮಾತನಾಡಿದ ಸ್ಟಿವ್ ಸ್ಮಿತ್ 37-38ನೇ ಓವರ್ ವರೆಗೆ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದೆವು. ನಮ್ಮ ಗುರಿ 330 ರನ್ ಇತ್ತು. ಆದರೆ ಭಾರತದ ಬೌಲರ್‍ಗಳು ನಮ್ಮ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಹಾರ್ದಿಕ್ ಪಾಂಡ್ಯ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು ಎಂದರು.

    ಭವಿಷ್ಯದ ಸ್ಪಿನ್ನರ್‍ಗಳಾದ ಯಾದವ್-ಚಾಹಲ್:
    ಹೊಸ ಪ್ರತಿಭೆಯ ಸ್ಪಿನ್ ಬೌಲರ್‍ಗಳನ್ನು ಬೆಂಬಲಿಸಿ ಪಂದ್ಯಗಳಿಗೆ ಹಾಕಿಕೊಳ್ಳಬೇಕು ಎಂಬ ಮಾತು ಕೇಳಿ ಬರುತ್ತಿದ್ದ ಕಾರಣ ಯಜುವೇಂದ್ರ ಚಾಹಲ್, ಮತ್ತು ಕುಲದೀಪ್ ಯಾದವ್‍ಗೆ ಅವಕಾಶ ನೀಡಿತ್ತು. ಅಂತಯೇ ಕಳೆದ ಪಂದ್ಯದಲ್ಲಿ ಕುಲದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದರು. ಜೊತೆಗೆ ಚಾಹಲ್ ಕೂಡ ಉತ್ತಮ ಸ್ಪಿನ್ ದಾಳಿ ನಡೆಸಿ ಗಮನ ಸೆಳೆದಿದ್ದಾರೆ. ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸ್ಪಿನ್ ಬೌಲಿಂಗ್ ನಡೆಸಿ ಐ ಆಮ್ ಬ್ಯಾಕ್ ಅನ್ನೋ ತರ ಬೌಲ್ ಮಾಡಿದರು.

    ಆಟಗಾರರಿಗೆ ಅವಕಾಶ?
    ಮೂರು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಮೂರು ಪಂದ್ಯಗಳನ್ನು ಆಡದೇ ಇರುವ ಆಟಗಾರರನ್ನು ಉಳಿದ ಎರಡು ಪಂದ್ಯಗಳಿಗೆ ಪರಿಗಣಿಸಬಹುದು ಎನ್ನುವ ಮಾತುಗಳು ಕೇಳಿ ಬಂದಿದೆ.

     

  • ಆಸೀಸ್ ಸೋಲಿಸಿ ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

    ಆಸೀಸ್ ಸೋಲಿಸಿ ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

    ದುಬೈ: ಇಂದೋರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು 5 ವಿಕೆಟ್ ಗಳೊಂದಿಗೆ ಗೆಲ್ಲುವ ಮೂಲಕ ಟೀಂ ಇಂಡಿಯಾ ಈಗ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಿದೆ.

    ಸೆಪ್ಟೆಂಬರ್ 24ಕ್ಕೆ ಅಂತ್ಯಗೊಂಡ ಹೊಸ ಶ್ರೇಯಾಂಕ ಪಟ್ಟಿಯ ಪ್ರಕಾರ ಒಟ್ಟು 48 ಪಂದ್ಯಗಳಿಂದ 5,764 ಅಂಕಗಳೊಂದಿಗೆ 120 ರೇಟಿಂಗ್ ಸಂಪಾದಿಸಿದ ಭಾರತ ಮೊದಲ ಸ್ಥಾನವನ್ನು ಪಡೆದಿದೆ.

    50 ಪಂದ್ಯಗಳಿಂದ 5,957 ಅಂಗಳೊಂದಿಗೆ ದಕ್ಷಿಣ ಆಫ್ರಿಕಾ 119 ರೇಟಿಂಗ್ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, 50 ಪಂದ್ಯಗಳಿಂದ ಆಸ್ಟ್ರೇಲಿಯಾ 5,709 ಅಂಕ, 114 ರೇಟಿಂಗ್ ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

    ಟೆಸ್ಟ್ ನಲ್ಲಿ 36 ಪಂದ್ಯಗಳಿಂದ 4,493 ಅಂಕಗಳೊಂದಿಗೆ 125 ರೇಟಿಂಗ್ ಸಂಪಾದಿಸಿ ಭಾರತ ಮೊದಲ ಸ್ಥಾನದಲ್ಲಿದ್ದರೆ, ಟಿ20ಯಲ್ಲಿ 13 ಪಂದ್ಯಗಳನ್ನು ಆಡಿರುವ ಭಾರತ 2,328 ಅಂಕಗಳೊಂದಿಗೆ 116 ರೇಟಿಂಗ್ ಪಾಯಿಂಟ್ ಪಡೆಯುವ ಮೂಲಕ 5ನೇ ಸ್ಥಾನವನ್ನು ಪಡೆದುಕೊಂಡಿದೆ.

     

     

  • ಇಂದೋರ್ ಭಾರತದ ಪಾಲಿಗೆ ಅದೃಷ್ಟದ ತಾಣ ಅನ್ನೋದು ಮತ್ತೆ ಸಾಬೀತಾಯ್ತು!

    ಇಂದೋರ್ ಭಾರತದ ಪಾಲಿಗೆ ಅದೃಷ್ಟದ ತಾಣ ಅನ್ನೋದು ಮತ್ತೆ ಸಾಬೀತಾಯ್ತು!

    ಇಂದೋರ್: ಆಸ್ಟ್ರೇಲಿಯಾವನ್ನು 5 ವಿಕೆಟ್ ಗಳಿಂದ ಬಗ್ಗು ಪಡೆಯುವ ಮೂಲಕ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂ ಭಾರತದ ಪಾಲಿಗೆ ಅದೃಷ್ಟದ ತಾಣ ಎನ್ನುವುದು ಮತ್ತೆ ಸಾಬೀತಾಗಿದೆ.

    ಈ ಮೂಲಕ ಒಂದೇ ಕ್ರೀಡಾಂಗಣದಲ್ಲಿ ಸತತ 5 ಪಂದ್ಯವನ್ನು ಗೆದ್ದ ದಾಖಲೆಗೆ ಭಾರತ ಪಾತ್ರವಾಗಿದೆ. ಇದುವರೆಗೆ ಭಾರತ ಯಾವುದೇ ಕ್ರೀಡಾಂಗಣದಲ್ಲಿ ಸತತ 5 ಪಂದ್ಯವನ್ನು ಗೆದ್ದಿರುವ ದಾಖಲೆಗಳಿಲ್ಲ.

    ಶಾರ್ಜಾ, ಮೀರ್ ಪುರ, ದೆಹಲಿ ಹಾಗೂ ವಿಶಾಖಪಟ್ಟಣಂನಲ್ಲಿ ಭಾರತ ಸತತ 4 ಪಂದ್ಯಗಳನ್ನು ಗೆದ್ದಿತ್ತು. ಇದರ ಜೊತೆಗೆ ಟೀಂ ಇಂಡಿಯಾ ಸತತ 4 ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಗೆದ್ದಂತಾಗಿದು. ಇದು ಕೂಡಾ ಭಾರತದ ಪಾಲಿಗೆ ದಾಖಲೆ.

    ಈ ಹಿಂದೆ  ಇಂಗ್ಲೆಂಡ್ ವಿರುದ್ಧ 2 ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಲಾ ಒಂದೊಂದು ಗೆಲುವು ಒಲಿದಿತ್ತು. ಈಗ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲೂ ಗೆಲ್ಲುವ ಮೂಲಕ ತನ್ನ ಅಜೇಯ ಗೆಲುವಿನ ಸರಣಿಯನ್ನು ಟೀಂ ಇಂಡಿಯಾ ಮುಂದುವರಿಸಿದೆ.

    2006ರಲ್ಲಿ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್ ಜಯ ಸಾಧಿಸಿದ್ದರೆ, 2008ರಲ್ಲಿ ಮತ್ತೆ ಇಂಗ್ಲೆಂಡ್ ವಿರುದ್ಧ 54 ರನ್ ಗಳ ಜಯವನ್ನು ಸಾಧಿಸಿತ್ತು. 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 153 ರನ್ ಗಳಿಂದ ಗೆದ್ದಿದ್ದರೆ, 2015 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 22 ರನ್ ಗಳಿಂದ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು.

    ಜಸ್‍ಪ್ರೀತ್ ಬುಮ್ರಾ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಚಹಲ್ ಮತ್ತು ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.

  • ಆಸೀಸ್‍ಗೆ ಮತ್ತೆ ಮುಖಭಂಗ: ಸರಣಿ ಗೆದ್ದ ಟೀಂ ಇಂಡಿಯಾ

    ಆಸೀಸ್‍ಗೆ ಮತ್ತೆ ಮುಖಭಂಗ: ಸರಣಿ ಗೆದ್ದ ಟೀಂ ಇಂಡಿಯಾ

    ಇಂದೋರ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವನ್ನು ಭಾರತ 5 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಗೆದ್ದುಕೊಂಡಿದೆ.

    ಗೆಲ್ಲಲು 294 ರನ್ ಗಳ ಸವಾಲು ಸ್ವೀಕರಿಸಿದ ಭಾರತ 5 ವಿಕೆಟ್ ಗಳನ್ನು ಕಳೆದುಕೊಂಡು 47.5 ಓವರ್ ಗಳಲ್ಲಿ ಗುರಿಯನ್ನು ಮುಟ್ಟಿತು. ಈ ಮೂಲಕ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ.

    ಅಜಿಂಕ್ಯಾ ರಹಾನೆ ಮತ್ತು ರೋಹಿತ್ ಶರ್ಮಾ ಮೊದಲ ವಿಕೆಟ್ ಗೆ 21.4 ಓವರ್ ಗಳಲ್ಲಿ 139 ರನ್ ಗಳ ಜೊತೆಯಾಟ ಹಾಕುವ ಮೂಲಕ ಭದ್ರ ಬುನಾದಿ ಹಾಕಿದರು. ರೋಹಿತ್ ಶರ್ಮಾ 71 ರನ್(62 ಎಸೆತ, 6 ಬೌಂಡರಿ, 4 ಸಿಕ್ಸರ್), ಅಜಿಂಕ್ಯಾ ರಹಾನೆ 70 ರನ್(76 ಎಸೆತ, 9 ಬೌಂಡರಿ) ಹೊಡೆದರೆ ಕೊಹ್ಲಿ 28 ರನ್(35 ಎಸೆತ, 2 ಬೌಂಡರಿ) ಹೊಡೆದು ಔಟಾದರು.

    ಕೇದಾರ್ ಜಾದವ್ 2 ರನ್ ಹೊಡೆದರೆ, ಕೊನೆಯಲ್ಲಿ 5ನೇ ವಿಕೆಟ್ ಗೆ ಹಾರ್ದಿಕ್ ಪಾಂಡ್ಯ ಮತ್ತು ಮನೀಷ್ ಪಾಂಡೆ 78 ರನ್ ಗಳ ಜೊತೆಯಾಟವಾಡಿದರು. ಗೆಲುವಿನ 10 ರನ್ ಬೇಕಿದ್ದಾಗ ಪಾಂಡ್ಯ 78 ರನ್(72 ಎಸೆತ, 5 ಬೌಂಡರಿ, 4 ಸಿಕ್ಸರ್) ಹೊಡೆದು ಕ್ಯಾಚ್ ನೀಡಿ ಹೊರನಡೆದರು. ಮನೀಷ್ ಪಾಂಡೆ ಔಟಾಗದೇ 36 ರನ್(32 ಎಸೆತ, 6 ಬೌಂಡರಿ), ಧೋನಿ ಔಟಾಗದೇ 3 ರನ್ ಹೊಡೆಯುವ ಮೂಲಕ ಗೆಲುವಿನ ದಡ ಸೇರಿಸಿದರು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಆರನ್ ಫಿಂಚ್ 124 ರನ್(125 ಎಸೆತ, 12 ಬೌಂಡರಿ, 5 ಸಿಕ್ಸರ್) ನಾಯಕ ಸ್ಮಿತ್ 63 ರನ್( 71 ಎಸೆತ, 5 ಬೌಂಡರಿ) ಡೇವಿಡ್ ವಾರ್ನರ್ 42 ರನ್(44 ಎಸೆತ, 4 ಬೌಂಡರಿ, 1 ಸಿಕ್ಸರ್) ಹೊಡೆಯುವ ಮೂಲಕ 6 ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿತು.

    37.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 224 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿ ಆಸ್ಟ್ರೇಲಿಯಾ 260 ರನ್ ಗಳಿಸಿದ್ದಾಗ 6 ವಿಕೆಟ್ ಕಳೆದುಕೊಂಡಿತ್ತು. ಆರಂಭದಲ್ಲಿ ಹೆಚ್ಚು ರನ್ ಬಿಟ್ಟು ಕೊಟ್ಟಿದ್ದ ಭಾರತೀಯ ಬೌಲರ್ ಗಳು ಕೊನೆಯ 12 ಓವರ್ ಗಳು 69 ರನ್ ನೀಡಿ 4 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ರನ್‍ಗೆ ಕಡಿವಾಣ ಹಾಕಿದ್ದು ಸರಣಿ ಗೆಲ್ಲಲು ಸಹಕಾರಿ ಆಯ್ತು. 1 ವಿಕೆಟ್ ಕಿತ್ತು 78 ರನ್ ಹೊಡೆದ ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.