Tag: india

  • 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    ನವದೆಹಲಿ: ದೀಪಾವಳಿ ಹಬ್ಬದ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಅಮೆರಿಕದಲ್ಲಿ ಚಂಡಮಾರುತದಿಂದಾಗಿ ತೈಲ ಉತ್ಪಾದನೆ ಕಡಿಮೆಯಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆ ಕಾಣಲಿದ್ದು ದೀಪಾವಳಿ ವೇಳೆಗೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಅವರು ತಿಳಿಸಿದರು.

    ಜಿಎಸ್‍ಟಿ ವ್ಯಾಪ್ತಿಗೆ ತಂದರೆ ತೈಲ ಕಂಪೆನಿಗಳಿಗೆ ಲಾಭವಾಗಲಿದೆ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಅವರು ಜಿಎಸ್‍ಟಿ ಅಡಿ ತೈಲಗಳು ಬಂದರೆ ಗ್ರಾಹಕರಿಗೆ ಲಾಭ ಆಗಲಿದೆ ಎಂದರು.

    ಪೆಟ್ರೋಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ಸೆಪ್ಟೆಂಬರ್ 13 ರಂದು 70.38 ರೂ. ಇತ್ತು. ಇದರಲ್ಲಿ 30.70 ರೂ. ಡೀಲರ್ ಶುಲ್ಕ, 21.48 ರೂ. ಅಬಕಾರಿ ಸುಂಕ 3.24 ರೂ. ಡೀಲರ್ ಕಮಿಷನ್, 14.96 ರೂ. ವ್ಯಾಟ್ ತೆರಿಗೆ ಇದೆ.

    ಡೀಸೆಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಗೆ ಸೆಪ್ಟೆಂಬರ್ 13 ರಂದು 58.72 ರೂ.ಇತ್ತು. ಇದರಲ್ಲಿ 30.54 ರೂ. ಡೀಲರ್ ಶುಲ್ಕ, 17.33 ರೂ. ಅಬಕಾರಿ ಸುಂಕ 2.18 ರೂ. ಡೀಲರ್ ಕಮಿಷನ್, 8.67 ರೂ. ವ್ಯಾಟ್ ತೆರಿಗೆ ಇದೆ.

    ಬೇರೆ ದೇಶಗಳಲ್ಲಿ ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ದರ ಎಷ್ಟಿದೆ?
    ಪೆಟ್ರೋಲ್: ಭಾರತ(ದೆಹಲಿ) 70.38 ರೂ., ಪಾಕಿಸ್ತಾನ 40.82 ರೂ., ಬಾಂಗ್ಲಾದೇಶ 69.16 ರೂ., ಶ್ರೀಲಂಕಾ 49.80 ರೂ., ನೇಪಾಳ 61.88 ರೂ. ಇದೆ.

    ಡೀಸೆಲ್: ಭಾರತ(ದೆಹಲಿ)58.72 ರೂ., ಪಾಕಿಸ್ತಾನ 47.15 ರೂ., ಬಾಂಗ್ಲಾದೇಶ 52.27 ರೂ., ಶ್ರೀಲಂಕಾ 40.43 ರೂ., ನೇಪಾಳ 46.72 ರೂ. ಇದೆ.

    14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್: ಭಾರತ 487 ರೂ., ಪಾಕಿಸ್ತಾನ 1081.32 ರೂ., ಬಾಂಗ್ಲಾದೇಶ 639.50 ರೂ., ಶ್ರೀಲಂಕಾ 638.68 ರೂ., ನೇಪಾಳ 836.62 ರೂ. ಇದೆ.

    ಪೆಟ್ರೋಲ್ ಜಿಎಸ್‍ಟಿ ಅಡಿ ಬರುತ್ತಾ?
    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.

    ಒಂದು ವೇಳೆ ಪೆಟ್ರೋಲ್ ಜಿಎಸ್‍ಟಿ ಅಡಿ ಬಂದರೆ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಇಳಿಕೆಯಾಗುತ್ತದೆ. ಆದರೆ ಆದಾಯಕ್ಕೆ ಭಾರೀ ಹೊಡೆತ ಬೀಳುವ ಕಾರಣ ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿಲ್ಲ.

    ಬೆಲೆ ಕಡಿಮೆಯಾಗಬಾರದು:
    ಪೆಟ್ರೋಲ್ ಬೆಲೆ ಕಡಿಮೆಯಾಗಬಾರದು ಎನ್ನುವ ವಾದವನ್ನು ಕೆಲವರು ಮಂಡಿಸುತ್ತಿದ್ದಾರೆ. ಒಂದು ವೇಳೆ ಭಾರೀ ಇಳಿಕೆಯಾದರೆ ಭಾರೀ ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿಯಬಹುದು. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದಲ್ಲದೇ ವಾಯು ಮಾಲಿನ್ಯ ಹೆಚ್ಚಾಗುತ್ತದೆ. ಹೀಗಾಗಿ ಬೆಲೆ ಇಳಿಕೆಯಾಗಬಾರದು ಎನ್ನುವ ವಾದವನ್ನು ಕೆಲ ಆರ್ಥಿಕ ತಜ್ಞರು ಮಂಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲು ಸಾರ್ವಜನಿಕ ಸಾರಿಗೆಯ ಟಿಕೆಟ್ ಬೆಲೆಯನ್ನು ಇಳಿಸುವುದು ಉತ್ತಮ. ಇದರಿಂದಾಗಿ ಜನರು ಹೆಚ್ಚು ಸಾರ್ವಜನಿಕ ಸಾರಿಗೆ ಬಳಸುವಂತಾಗುತ್ತದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

    ತೈಲ ಬೆಲೆ ಏರಿಕೆ ವಿಚಾರದಲ್ಲಿ ವಿರೋಧ ಪಕ್ಷಗಳು ಈಗ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದರೆ, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಜಿಎಸ್‍ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

  • ಪಾಂಡ್ಯಾ ಬ್ಯಾಟಿಂಗ್, ಬೌಲಿಂಗ್‍ಗೆ ಮಕಾಡೆ ಮಲಗಿದ ಆಸೀಸ್

    ಪಾಂಡ್ಯಾ ಬ್ಯಾಟಿಂಗ್, ಬೌಲಿಂಗ್‍ಗೆ ಮಕಾಡೆ ಮಲಗಿದ ಆಸೀಸ್

    ಚೆನ್ನೈ: ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 26 ರನ್ ಗಳ ಗೆಲುವು ಸಾಧಿಸಿದೆ. ಈ ಮೂಲಕ 5 ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 281 ರನ್ ಗಳಿಸಿತು. ಆಸೀಸ್ ಬ್ಯಾಟಿಂಗ್ ಆರಂಭಕ್ಕೂ ಮುನ್ನಾ ಭಾರೀ ಮಳೆ ಸುರಿದ ಪರಿಣಾಮ ಡಕ್‍ವರ್ಥ್ ಲೂಯಿಸ್ ನಿಯಮದ ಅನ್ವಯ 21 ಓವರ್ ಗಳಲ್ಲಿ 164 ರನ್ ಗುರಿಯನ್ನು ನೀಡಲಾಗಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ 21 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

    ಆಸೀಸ್ ಪರ ಗ್ಲೇನ್ ಮ್ಯಾಕ್ಸ್ ವೆಲ್ ಸ್ಫೋಟಕ 39 ರನ್(18 ಎಸೆತ, 3 ಬೌಂಡರಿ, 4 ಸಿಕ್ಸರ್) ಸಿಡಿಸಿದರೆ ಜೇಮ್ಸ್ ಫಾಲ್ಕನರ್ ಔಟಾಗದೇ 32 ರನ್(25 ಎಸೆತ, 1 ಬೌಂಡರಿ, 1 ಸಿಕ್ಸರ್) ಹೊಡೆದರು.

    ಭಾರತದ ಪರವಾಗಿ ಸ್ಪಿನ್ನರ್ ಚಹಲ್ 3 ವಿಕೆಟ್ ಕಬಳಿಸಿದರೆ, ಕಲದೀಪ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯಾ ತಲಾ 2 ವಿಕೆಟ್ ಪಡೆದರು. ಬೂಮ್ರಾ ಮತ್ತು ಭುವನೇಶ್ವರ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು. ಬ್ಯಾಟಿಂಗ್, ಬೌಲಿಂಗ್ ಉತ್ತಮವಾಗಿದ್ದರೂ ಟೀಂ ಇಂಡಿಯಾದ ಫೀಲ್ಡಿಂಗ್ ಉತ್ತಮವಿರಲಿಲ್ಲ. ಕೈಗೆ ಸಿಕ್ಕಿದ್ದ ಹಲವು ಸುಲಭದ ಕ್ಯಾಚ್ ಗಳನ್ನು ಡ್ರಾಪ್ ಮಾಡಿದ್ದರು.

    ಭಾರತದ ಭರ್ಜರಿ ಬ್ಯಾಟಿಂಗ್: 11 ರನ್ ಗಳಿಗೆ 3 ವಿಕೆಟ್ ಪತನಗೊಂಡು 87 ರನ್ ಗಳಿಗೆ 5 ಮಂದಿ ಟಾಪ್ ಬ್ಯಾಟ್ಸ್ ಮನ್ ಗಳು ಔಟಾದಾಗ ಭಾರತ ಶೀಘ್ರವೇ ಆಲೌಟ್ ಆಗಲಿದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಧೋನಿ, ಪಾಂಡ್ಯಾ, ಕೊನೆಯಲ್ಲಿ ಬೌಲರ್ ಭುವನೇಶ್ವರ್ ಕುಮಾರ್ ಅವರ ಭರ್ಜರಿ ಆಟದಿಂದಾಗಿ ಭಾರತ ಆಸ್ಟ್ರೇಲಿಯಾಗೆ 282 ರನ್‍ಗಳ ಗುರಿಯನ್ನು ನೀಡಿತ್ತು.

    ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ 3.3 ಓವರ್ ಗಳಲ್ಲಿ 11 ರನ್ ಗಳಿಸುವಷ್ಟರಲ್ಲೇ ರಹಾನೆ ವಿಕೆಟ್ ಕಳೆದುಕೊಂಡಿತ್ತು. ನಂತರ ಕೊಹ್ಲಿ ಮತ್ತು ಮನೀಷ್ ಪಾಂಡೆ ಶೂನ್ಯಕ್ಕೆ ಔಟಾದರು. ಇಲ್ಲಿಗೆ 5.3 ಮೂರು ಓವರ್ ಮುಕ್ತಾಯಗೊಂಡಿದ್ದರೂ ಭಾರತ ಗಳಿಸಿದ್ದು ಮಾತ್ರ ಅಷ್ಟೇ 11 ರನ್.

    ನಂತರ ಬಂದ ಕೇದಾರ್ ಜಾಧವ್ ರೋಹಿತ್ ಶರ್ಮಾಗೆ ಸಾಥ್ ನೀಡಿದರು. ರೋಹಿತ್ ಶರ್ಮಾ 28 ರನ್ ಗಳಿಸಿದರೆ ಕೇದಾರ್ ಜಾಧವ್ 54 ಎಸೆತದಲ್ಲಿ 5 ಬೌಂಡರಿ ಸಿಡಿಸಿ 40 ರನ್ ಗಳಿಸಿ ಔಟಾದರು.

    ಧೋನಿ ಪಾಂಡ್ಯಾ ಜುಗಲ್‍ಬಂದಿ: 21.3 ಓವರ್ ಗಳಲ್ಲಿ 87 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್ ಗೆ ಹಾರ್ದಿಕ್ ಪಾಂಡ್ಯಾ ಆಗಮಿಸಿದರು. ಆರಂಭದಲ್ಲಿ ನಿಧಾನವಾಗಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದ ಧೋನಿ ಪಾಂಡ್ಯಾ ಜೋಡಿ 36.2 ಓವರ್ ಗಳಲ್ಲಿ ಭಾರತ ರನ್ 150ರ ಗಡಿ ದಾಟಿಸಿತು. 48 ಎಸೆತಗಳಲ್ಲಿ ಅರ್ಧಶತಕ ಹೊಡೆದ ಪಾಂಡ್ಯಾ ಅಂತಿಮವಾಗಿ 66 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಿಡಿಸಿ 83 ರನ್‍ಗಳಿಸಿದ್ದಾಗ ಕ್ಯಾಚ್ ನೀಡಿ ಔಟಾದರು. ಆ್ಯಡಮ್ ಜಂಪಾ ಎಸೆದ 37 ನೇ ಓವರ್ನ ಕೊನೆಯಲ್ಲಿ ಹ್ಯಾಟ್ರಿಕ್ ಸಿಕ್ಸ್ ಹೊಡೆದು ಮತ್ತೊಮ್ಮೆ ತಾನೊಬ್ಬ ಸಮರ್ಥ ಆಲ್‍ರೌಂಡರ್ ಎನ್ನುವುದನ್ನು ಸಾಬೀತುಪಡಿಸಿದರು. ಒಟ್ಟಿನಲ್ಲಿ ಧೋನಿ ಮತ್ತು ಪಾಂಡ್ಯಾ 6ನೇ ವಿಕೆಟ್ ಗೆ 128 ಎಸೆತಗಳಲ್ಲಿ 118 ರನ್ ಹೊಡೆಯುವ ಮೂಲಕ ಭಾರತ 200 ರನ್‍ಗಳ ಗಡಿ ದಾಟಿತ್ತು.

    ಧೋನಿ ಮತ್ತು ಭುವನೇಶ್ವರ್ ಕುಮಾರ್ 7ನೇ ವಿಕೆಟ್‍ಗೆ 72 ರನ್ ಪೇರಿಸಿದರು. 40.3 ಓವರ್ ಗಳಲ್ಲಿ 200 ರನ್ ಗಳಿಸಿದ್ದ ಭಾರತ ಕೊನೆಯ 9.3 ಓವರ್ ಗಳಲ್ಲಿ 81 ರನ್ ಗಳಿಸಿತು. ಧೋನಿ 79 ರನ್(88 ಎಸೆತ, 4 ಬೌಂಡರಿ, 2 ಸಿಕ್ಸರ್) ಹೊಡೆದು ಕೊನೆಯವರಾಗಿ ಔಟಾದರು. ಭುವನೇಶ್ವರ್ ಕುಮಾರ್ ಔಟಾಗದೇ 30 ರನ್(30 ಎಸೆತ, 5 ಬೌಂಡರಿ) ಗಳಿಸಿದರು.

    ಆಸ್ಟ್ರೇಲಿಯಾದ ಪರ ನೇಥನ್ ಕೌಲ್ಟರ್ ನೈಲ್ 3 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್ 2ವಿಕೆಟ್ ಪಡೆದರು. ಜೇಮ್ಸ್ ಫಾಲ್ಕೂನರ್ ಮತ್ತು ಆ್ಯಡಂ ಜಂಪಾ ತಲಾ ಒಂದೊಂದು ವಿಕೆಟ್ ಪಡೆದರು.

    ಸ್ಫೋಟಕ 83 ರನ್ ಸಿಡಿಸಿ 2 ವಿಕೆಟ್ ಕಿತ್ತ ಹಾರ್ದಿಕ್ ಪಾಂಡ್ಯಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

     

    https://twitter.com/editorsuresh/status/909275189392715777
     


  • 11ಕ್ಕೆ 3, 87ಕ್ಕೆ 5 ಕೊನೆಗೆ 7 ವಿಕೆಟ್ ನಷ್ಟಕ್ಕೆ 281 ರನ್: ಇದು ಧೋನಿ, ಪಾಂಡ್ಯಾ, ಭುವಿ ಬ್ಯಾಟಿಂಗ್ ಕರಾಮತ್ತು

    11ಕ್ಕೆ 3, 87ಕ್ಕೆ 5 ಕೊನೆಗೆ 7 ವಿಕೆಟ್ ನಷ್ಟಕ್ಕೆ 281 ರನ್: ಇದು ಧೋನಿ, ಪಾಂಡ್ಯಾ, ಭುವಿ ಬ್ಯಾಟಿಂಗ್ ಕರಾಮತ್ತು

    ಚೆನ್ನೈ: 11 ರನ್ ಗಳಿಗೆ 3 ವಿಕೆಟ್ ಪತನಗೊಂಡು 87 ರನ್ ಗಳಿಗೆ 5 ಮಂದಿ ಟಾಪ್ ಬ್ಯಾಟ್ಸ್ ಮನ್ ಗಳು ಔಟಾದಾಗ ಭಾರತ ಶೀಘ್ರವೇ ಆಲೌಟ್ ಆಗಲಿದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಧೋನಿ, ಪಾಂಡ್ಯಾ, ಕೊನೆಯಲ್ಲಿ ಬೌಲರ್ ಭುವನೇಶ್ವರ್ ಕುಮಾರ್ ಅವರ ಭರ್ಜರಿ ಆಟದಿಂದಾಗಿ ಭಾರತ ಆಸ್ಟ್ರೇಲಿಯಾಗೆ 282 ರನ್‍ಗಳ ಗುರಿಯನ್ನು ನೀಡಿದೆ.

    ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ 3.3 ಓವರ್ ಗಳಲ್ಲಿ 11 ರನ್ ಗಳಿಸುವಷ್ಟರಲ್ಲೇ ರಹಾನೆ ವಿಕೆಟ್ ಕಳೆದುಕೊಂಡಿತ್ತು. ನಂತರ ಕೊಹ್ಲಿ ಮತ್ತು ಮನೀಷ್ ಪಾಂಡೆ ಶೂನ್ಯಕ್ಕೆ ಔಟಾದರು. ಇಲ್ಲಿಗೆ 5.3 ಮೂರು ಓವರ್ ಮುಕ್ತಾಯಗೊಂಡಿದ್ದರೂ ಭಾರತ ಗಳಿಸಿದ್ದು ಮಾತ್ರ ಅಷ್ಟೇ 11 ರನ್.

    ನಂತರ ಬಂದ ಕೇದಾರ್ ಜಾಧವ್ ರೋಹಿತ್ ಶರ್ಮಾಗೆ ಸಾಥ್ ನೀಡಿದರು. ರೋಹಿತ್ ಶರ್ಮಾ 28 ರನ್ ಗಳಿಸಿದರೆ ಕೇದಾರ್ ಜಾಧವ್ 54 ಎಸೆತದಲ್ಲಿ 5 ಬೌಂಡರಿ ಸಿಡಿಸಿ 40 ರನ್ ಗಳಿಸಿ ಔಟಾದರು.

    ಧೋನಿ ಪಾಂಡ್ಯಾ ಜುಗಲ್‍ಬಂದಿ: 21.3 ಓವರ್ ಗಳಲ್ಲಿ 87 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್ ಗೆ ಹಾರ್ದಿಕ್ ಪಾಂಡ್ಯಾ ಆಗಮಿಸಿದರು. ಆರಂಭದಲ್ಲಿ ನಿಧಾನವಾಗಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದ ಧೋನಿ ಪಾಂಡ್ಯಾ ಜೋಡಿ 36.2 ಓವರ್ ಗಳಲ್ಲಿ ಭಾರತ ರನ್ 150ರ ಗಡಿ ದಾಟಿಸಿತು. 48 ಎಸೆತಗಳಲ್ಲಿ ಅರ್ಧಶತಕ ಹೊಡೆದ ಪಾಂಡ್ಯಾ ಅಂತಿಮವಾಗಿ 66 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಿಡಿಸಿ 83 ರನ್‍ಗಳಿಸಿದ್ದಾಗ ಕ್ಯಾಚ್ ನೀಡಿ ಔಟಾದರು. ಆ್ಯಡಮ್ ಜಂಪಾ ಎಸೆದ 37 ನೇ ಓವರ್‍ನ ಕೊನೆಯಲ್ಲಿ ಹ್ಯಾಟ್ರಿಕ್ ಸಿಕ್ಸ್ ಹೊಡೆದು ಮತ್ತೊಮ್ಮೆ ತಾನೊಬ್ಬ ಸಮರ್ಥ ಆಲ್‍ರೌಂಡರ್ ಎನ್ನುವುದನ್ನು ಸಾಬೀತುಪಡಿಸಿದರು. ಒಟ್ಟಿನಲ್ಲಿ ಧೋನಿ ಮತ್ತು ಪಾಂಡ್ಯಾ 6ನೇ ವಿಕೆಟ್ ಗೆ 128 ಎಸೆತಗಳಲ್ಲಿ 118 ರನ್ ಹೊಡೆಯುವ ಮೂಲಕ ಭಾರತ 200 ರನ್‍ಗಳ ಗಡಿ ದಾಟಿತು.

    ಧೋನಿ ಮತ್ತು ಭುವನೇಶ್ವರ್ ಕುಮಾರ್ 7ನೇ ವಿಕೆಟ್‍ಗೆ 72 ರನ್ ಪೇರಿಸಿದರು. 40.3 ಓವರ್ ಗಳಲ್ಲಿ 200 ರನ್ ಗಳಿಸಿದ್ದ ಭಾರತ ಕೊನೆಯ 9.3 ಓವರ್ ಗಳಲ್ಲಿ 81 ರನ್ ಗಳಿಸಿತು. ಧೋನಿ 79 ರನ್(88 ಎಸೆತ, 4 ಬೌಂಡರಿ, 2 ಸಿಕ್ಸರ್) ಹೊಡೆದು ಕೊನೆಯವರಾಗಿ ಔಟಾದರು. ಭುವನೇಶ್ವರ್ ಕುಮಾರ್ ಔಟಾಗದೇ 30 ರನ್(30 ಎಸೆತ, 5 ಬೌಂಡರಿ) ಗಳಿಸಿದರು.

    ಆಸ್ಟ್ರೇಲಿಯಾದ ಪರ ನೇಥನ್ ಕೌಲ್ಟರ್ ನೈಲ್ 3 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್ 2ವಿಕೆಟ್ ಪಡೆದರು. ಜೇಮ್ಸ್ ಫಾಲ್ಕೂನರ್ ಮತ್ತು ಆ್ಯಡಂ ಜಂಪಾ ತಲಾ ಒಂದೊಂದು ವಿಕೆಟ್ ಪಡೆದರು. ಆಸ್ಟ್ರೇಲಿಯಾದ ಬ್ಯಾಟಿಂಗ್ ವೇಳೆ ಮಳೆ ಅಡ್ಡಿಪಡಿಸಿದ್ದು, ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

     


     

  • ಬುಲೆಟ್ ರೈಲಿನಿಂದಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ: ಮೋದಿ

    ಬುಲೆಟ್ ರೈಲಿನಿಂದಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ: ಮೋದಿ

    ಅಹಮದಾಬಾದ್: ಬುಲೆಟ್ ರೈಲಿನಿಂದ ಎರಡು ಪ್ರದೇಶಗಳ ನಡುವಿನ ಅಂತರ ಕಡಿಮೆಯಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಜಪಾನಿನ ಪ್ರಧಾನಿ ಶಿಂಜೋ ಅಬೆ ಜೊತೆಗೂಡಿ ಅಹಮದಾಬಾದ್‍ನಲ್ಲಿ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕಸ್ಥಾಪನೆಯನ್ನು ಮೋದಿ ನೆರವೇರಿಸಿದರು. ಬಳಿಕ ಬುಲೆಟ್ ರೈಲು ಯೋಜನೆಗೆ ಹಣಕಾಸಿನ ಸಹಕಾರ ನೀಡಿದ್ದಕ್ಕೆ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಧನ್ಯವಾದ ಹೇಳಿದರು.

    ಇದು ಭಾರತದ ದಶಕಗಳ ಕನಸನಾಗಿದ್ದು, ಎರಡು ದೇಶಗಳ ಸ್ನೇಹ ಪೂರಕವಾಗಿ ಜಪಾನ್ ಭಾರತಕ್ಕೆ ಬುಲೆಟ್ ರೈಲನ್ನು ನೀಡುತ್ತಿರುವ ಉಡುಗೊರೆಯಿದು. ಬುಲೆಟ್ ರೈಲು ಯೋಜನೆಯು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಾವಿರಾರು ಮಂದಿ ಉದ್ಯೋಗ ನೀಡಲಿದೆ. ಇದರಿಂದಾಗಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗಿ ಬಡತನ ನಿರ್ಮೂಲನೆಯಾಗುವ ಮೂಲಕ ದೇಶ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

    ಯಾವುದೇ ದೇಶ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಹೊಂದಿದ್ದರೆ ಅದು ಅಭಿವೃದ್ಧಿಯನ್ನು ಸೂಚಿಸುತ್ತದೆ. ಆದ್ದರಿಂದ ಸಾರಿಗೆ ವ್ಯವಸ್ಥೆ ರಾಷ್ಟ್ರದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

    ಭಾರತವು ಯಾವಾಗ ಬುಲೆಟ್ ರೈಲನ್ನು ಪ್ರಾರಂಭಿಸುತ್ತದೆ ಎಂದು ಚಿಂತೆಯಾಗಿತ್ತು. ಆದರೆ ಇಂದು ಈ ಯೋಜನೆಗೆ ಚಾಲನೆ ನೀಡಿದ ಬಳಿಕ ನನಗೆ ಭರವಸೆ ಬಂದಿದೆ. ಆದ್ದರಿಂದ ಈ ಯೋಜನೆಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದರು.

    ಯಾವುದೇ ವ್ಯಕ್ತಿಯಾಗಲಿ ಅಥವಾ ದೇಶವಾಗಲಿ ಸಾಲ ಕೊಟ್ಟು 50 ವರ್ಷಗಳಲ್ಲಿ ಸಾಲ ಹಿಂದಿರುಗಿಸು ಎಂದು ಯಾರಾದರೂ ಹೇಳುತ್ತಾರಾ? ಆದರೆ ಭಾರತದ ಮಿತ್ರ ಜಪಾನ್ ನಮ್ಮ ಮೇಲೆ ನಂಬಿಕೆಯನ್ನು ಇಟ್ಟು ತಾಂತ್ರಿಕ ನೆರವು ಅಲ್ಲದೇ ಶೇ.01 ಬಡ್ಡಿ ದರದಲ್ಲಿ 88 ಸಾವಿರ ಕೋಟಿ ರೂ. ಹಣವನ್ನು ಸಾಲವಾಗಿ ನೀಡಿದೆ. ಈ ಕಾರಣಕ್ಕೆ ಬುಲೆಟ್ ರೈಲು ಜಪಾನ್ ನೀಡುತ್ತಿರುವ ಉಡುಗೊರೆ ಎಂದು ಹೇಳಿದೆ ಎಂದು ಮೋದಿ ಬಣ್ಣಿಸಿದರು.

    ಬುಲೆಟ್ ರೈಲು ನವ ಭಾರತದ ಸಂಕೇತವಾಗಿದ್ದು ಇದಕ್ಕೆ ಕಾರಣರಾದ ನನ್ನ ಮಿತ್ರ ಅಬೆ ಅವರಿಗೆ ಧನ್ಯವಾದಗಳು. ಜೊತೆಗೆ ಈ ಯೋಜನೆಗೆ ಸಂಪೂರ್ಣ ಬೆಂಬಲವನ್ನು ನೀಡಿದ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಮತ್ತು ಭಾರತದ ಸಮಸ್ತ ಜನರಿಗೆ ಧನ್ಯವಾದಗಳನ್ನು ತಿಳಿಸಿ ಮೋದಿ ಭಾಷಣ ಮುಕ್ತಾಯಗೊಳಿಸಿದರು.

  • ನಿವೃತ್ತರಾಗಿರೋ ಪ್ರಾಧ್ಯಾಪಕರಿಗೆ ಗುಡ್‍ನ್ಯೂಸ್, ನೀವು ಮತ್ತೆ ಪಾಠ ಮಾಡಬಹದು!

    ನಿವೃತ್ತರಾಗಿರೋ ಪ್ರಾಧ್ಯಾಪಕರಿಗೆ ಗುಡ್‍ನ್ಯೂಸ್, ನೀವು ಮತ್ತೆ ಪಾಠ ಮಾಡಬಹದು!

    ಆಗ್ರಾ: ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಗುಡ್ ನ್ಯೂಸ್. ನೀವು ಬಯಸಿದ್ದಲ್ಲಿ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಬಹುದು.

    ಹೌದು. ಕೇಂದ್ರ ಸರ್ಕಾರ ಈಗಾಗಲೇ ನಿವೃತ್ತರಾಗಿರುವ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಬೋಧನೆ ಮಾಡುವ ಅವಕಾಶ ನೀಡಲು ಮುಂದಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

    42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ಪ್ರಾಧ್ಯಾಪಕರನ್ನು ಮರಳಿ ಕರೆತರುವ ಬಗ್ಗೆ ಚರ್ಚೆ ಸಚಿವರು ನಡೆಸಿದ್ದಾರೆ. ಕೇಂದ್ರ ಸರ್ಕಾರ ಅನುದಾನ ಪಡೆಯುವ ಸಂಸ್ಥೆ ಮತ್ತು ವಿಶ್ವವಿದ್ಯಾಲಯಗಳಲ್ಲಿ ಹೆಚ್ಚಿನ ಹುದ್ದೆಗಳು ಖಾಲಿ ಇದೆ. ಹೀಗಾಗಿ ಉತ್ತಮ ಸೇವಾ ದಾಖಲೆ ಹೊಂದಿರುವ ಪ್ರಾಧ್ಯಾಪಕರಿಗೆ ಅವಕಾಶ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದರು.

    ವಿವಿಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ವಿದೇಶದಲ್ಲಿರುವ ಪ್ರಸಿದ್ಧ ವಿವಿಗಳಲ್ಲಿರುವ ಸಂಶೋಧಕರಿಗೂ ಅವಕಾಶ ನೀಡಲಾಗುವುದು. ವೈದ್ಯಕೀಯವಾಗಿ ಯಾರು ಆರೋಗ್ಯವಾಗಿರುತ್ತಾರೋ ಅಂತಹವರನ್ನು ಮಾತ್ರ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

    ಪ್ರಸ್ತುತ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಶೇ.53.28 ಮತ್ತು ನ್ಯಾಷನಲ್ ಇನ್ಸ್ ಟ್ಯೂಟ್ ಟೆಕ್ನಾಲಜಿ(ಎನ್‍ಐಟಿ) ಗಳಲ್ಲಿ ಶೇ.47% ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗುತ್ತಿದೆ.

    ಮಾನವ ಸಂಪನ್ಮೂಲ ಸಚಿವಾಲಯದ ದಾಖಲೆಗಳ ಪ್ರಕಾರ ಹರ್ಯಾಣ ಕೇಂದ್ರೀಯ ವಿವಿಯಲ್ಲಿ ಏಪ್ರಿಲ್ 1,2017 ರ ಅವಧಿ ವರೆಗೆ ಶೇ.75.11 ಹುದ್ದೆಗಳು ಖಾಲಿ ಇದ್ದರೆ, ದೆಹಲಿಯ ವಿವಿಯಲ್ಲಿ ಶೇ.54.75% ಹುದ್ದೆಗಳು ಖಾಲಿಯಿವೆ.

  • ಮತ್ತೆ ಮಲತಾಯಿ ಧೋರಣೆ, ಕರ್ನಾಟಕಕ್ಕಿಲ್ಲ ಬುಲೆಟ್ ರೈಲು ಭಾಗ್ಯ!

    ಮತ್ತೆ ಮಲತಾಯಿ ಧೋರಣೆ, ಕರ್ನಾಟಕಕ್ಕಿಲ್ಲ ಬುಲೆಟ್ ರೈಲು ಭಾಗ್ಯ!

    ನವದೆಹಲಿ: ಇಂದು ಇಡೀ ದೇಶಕ್ಕೆ ಮಹತ್ವದ ದಿನ. ಪ್ರಗತಿಯತ್ತ ಭಾರತ ಮತ್ತೊಂದು ಮೈಲಿಗಲ್ಲಿನ ಕಡೆಗೆ ದಾಪುಗಾಲು ಇಡುತ್ತಿದೆ. ಜಪಾನ್‍ನ ಸಹಕಾರದಲ್ಲಿ ಬುಲೆಟ್ ರೈಲು ಓಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇಂದು ಶಂಕುಸ್ಥಾಪನೆ ನಡೆಯಲಿದೆ. ಆದರೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ.

    2022 ಆಗಸ್ಟ್ 15ಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಪೂರ್ಣವಾಗಲಿದ್ದು ಅದೇ ದಿನ ಅಹಮದಾಬಾದ್ – ಮುಂಬೈ ಬುಲೆಟ್ ರೈಲಿನ ಸಂಚಾರ ಆರಂಭಿಸಲು ರೈಲ್ವೇ ಇಲಾಖೆ ಗುರಿಯನ್ನು ಹಾಕಿಕೊಂಡಿದೆ. ಈ ರೈಲು ಮಾರ್ಗ ಅಲ್ಲದೇ ಇನ್ನು 6 ಮಾರ್ಗಗಳಲ್ಲಿ ಬುಲೆಟ್ ರೈಲು ಓಡಿಸಲು ಸರ್ಕಾರ ಚಿಂತನೆ ನಡೆಸಿದೆ. ಆದರೆ ಈ ಮಾರ್ಗಗಳ ಪಟ್ಟಿಯಲ್ಲಿ ಕರ್ನಾಟಕವನ್ನು ಕೈಬಿಡಲಾಗಿದೆ.

    ಸಪ್ತ ಮಾರ್ಗಗಳು:
    ಅಹಮದಾಬಾದ್- ಮುಂಬೈ, ದೆಹಲಿ – ಕೋಲ್ಕತ್ತಾ, ದೆಹಲಿ – ಮುಂಬೈ, ಮುಂಬೈ – ಚೆನ್ನೈ, ದೆಹಲಿ – ಚಂಡೀಘಡ, ಮುಂಬೈ – ನಾಗಪುರ, ದೆಹಲಿ – ನಾಗಪುರ. ಈ ಏಳು ಮಾರ್ಗಗಳ ಪೈಕಿ ಕರ್ನಾಟಕಕ್ಕೆ ಒಂದೇ ಒಂದು ಮಾರ್ಗವನ್ನು ಕೇಂದ್ರ ಸರ್ಕಾರ ನೀಡಿಲ್ಲ. ಚೆನ್ನೈ ಮತ್ತು ನಾಗಪುರಕ್ಕೆ ಎರಡು ಮಾರ್ಗಗಳನ್ನು ನೀಡಿದ್ದು ಐಟಿ ಬಿಟಿ ಸಿಟಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರನ್ನು ಯಾಕೆ ಕೈ ಬಿಟ್ಟಿದ್ದಾರೆ ಎನ್ನುವುದು ಈಗಿರುವ ಪ್ರಶ್ನೆ.

    ಕಾವೇರಿ, ಮಹದಾಯಿಯಲ್ಲಿ ಅನ್ಯಾಯ ಆಗಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಈಗ ಬುಲೆಟ್ ರೈಲು ಕರ್ನಾಟಕಕ್ಕೆ ಕೈತಪ್ಪಿದೆ. ಈ ಬೃಹತ್ ಯೋಜನೆ ರಾಜ್ಯಕ್ಕೆ ಕೈತಪ್ಪಲು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವುದು ಕಾರಣವೇ? ಅಥವಾ ಅಥವಾ ರಾಜ್ಯ ಬಿಜೆಪಿ ಸಂಸದರಿಗೆ ಇಚ್ಛಾ ಶಕ್ತಿ ಕೊರತೆಯೇ ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

    ಇದನ್ನೂ ಓದಿ: ಬುಲೆಟ್ ರೈಲು ಯೋಜನೆಗೆ ಅಡಿಗಲ್ಲು: ನೀವು ತಿಳಿದುಕೊಳ್ಳಲೇಬೇಕಾದ 10 ವಿಚಾರಗಳು ಇಲ್ಲಿದೆ

     

  • ಬುಲೆಟ್ ರೈಲು ಯೋಜನೆಗೆ ನಾಳೆ ಅಡಿಗಲ್ಲು: ನೀವು ತಿಳಿದುಕೊಳ್ಳಲೇಬೇಕಾದ 10 ವಿಚಾರಗಳು ಇಲ್ಲಿದೆ

    ಬುಲೆಟ್ ರೈಲು ಯೋಜನೆಗೆ ನಾಳೆ ಅಡಿಗಲ್ಲು: ನೀವು ತಿಳಿದುಕೊಳ್ಳಲೇಬೇಕಾದ 10 ವಿಚಾರಗಳು ಇಲ್ಲಿದೆ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ. ಹೀಗಾಗಿ ಈ ಯೋಜನೆಗೆ ಸಂಬಂಧಿಸಿದ ಕಿರು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    ಯೋಜನೆಯ ಪ್ರಮುಖ 12 ಅಂಶಗಳು

    1) ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಸುಮಾರು 1.10 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆಯ ಒಟ್ಟು ವೆಚ್ಚದಲ್ಲಿ 88 ಸಾವಿರ ಕೋಟಿ(ಶೇ.81)ಹಣವನ್ನು ಜಪಾನ್ ಸಾಲ ರೂಪದಲ್ಲಿ ಭಾರತಕ್ಕೆ ಒದಗಿಸುತ್ತಿದೆ. ಜಪಾನ್ ಸಾಲವನ್ನು 50 ವರ್ಷದ ಒಳಗಡೆ ಮರು ಪಾವತಿ ಮಾಡಬೇಕಾಗಿದ್ದು, ಈ ಸಾಲಕ್ಕೆ ಶೇ.0.1 ರಷ್ಟು ಬಡ್ಡಿಯನ್ನು ವಿಧಿಸಿದೆ.

    2) ಹೊಸ ಬುಲೆಟ್ ಟ್ರೈನ್ ಗುಜರಾತ್‍ನಿಂದ ಮುಂಬೈಗೆ ಸಂಚಾರವನ್ನು ನಡೆಸಲಿದ್ದು, ಒಮ್ಮೆ 750 ಪ್ರಯಾಣಿಕರನ್ನು ಹೊತ್ತು ಸಾಗಲಿದೆ. ಪ್ರತಿ ದಿನ 70 ಬಾರಿ ಅಹಮದಾಬಾದ್ – ಮುಂಬೈ ನಡುವೆ ಈ ರೈಲು ಸಂಚರಿಸಲಿದೆ.

    3) ಬುಲೆಟ್ ಟ್ರೈನ್ ಸರಾಸರಿ ಘಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಗರಿಷ್ಟ 350 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.

    4) ಬುಲೆಟ್ ಟ್ರೈನ್ 508 ಕಿ.ಮೀ ಉದ್ದದ ಮಾರ್ಗವನ್ನು ಹೊಂದಿದ್ದು, ಶೇ.92 ರಷ್ಟು ಮೇಲ್ಸೇತುವೆ, ಶೇ.6 ರಷ್ಟು ಸುರಂಗ ಹಾಗೂ ಇನ್ನುಳಿದ ಶೇ.2 ರಷ್ಟು ನೆಲದಲ್ಲಿ ಹಾದು ಹೋಗಲಿದೆ. ಅಂದರೆ ಸುಮಾರು 460 ಕಿ.ಮೀ ಮೇಲ್ಸೇತುವೆ ಮಾರ್ಗದಲ್ಲೂ, 27 ಕಿಮೀ ಸುರಂಗ ಮಾರ್ಗದಲ್ಲೂ, ಉಳಿದ 13 ಕಿ.ಮೀ ನೆಲದಲ್ಲಿ ಸಂಚರಿಸಲಿದೆ.

    5) ದೇಶದ ಅತೀ ದೊಡ್ಡ ಸುರಂಗ ಮಾರ್ಗವನ್ನು (21 ಕಿ.ಮೀ) ಹೊಂದಿರಲಿದ್ದು, 7 ಕಿ.ಮೀ ಸಮುದ್ರ ಅಡಿಯ ಸುರಂಗದಲ್ಲಿ ಸಂಚರಿಸುವುದು ವಿಶೇಷ. ಒಟ್ಟು 508 ಕಿ.ಮೀ ಮಾರ್ಗದಲ್ಲಿ 351 ಕಿ.ಮೀ ಗುಜರಾತ್ ರಾಜ್ಯದಲ್ಲಿ ಹಾಗೂ 156 ಕಿ.ಮೀ ಮಹಾರಾಷ್ಟ್ರ ರಾಜ್ಯದಲ್ಲಿ ಬುಲೆಟ್ ರೈಲು ಸಂಚರಿಸಲಿದೆ.

    6) ದಿನದಲ್ಲಿ 20 ಗಂಟೆಗಳ ಕಾಲ ರೈಲು ಓಡಲಿದ್ದು, ನಾಲ್ಕು ಗಂಟೆಯಲ್ಲಿ ರೈಲನ್ನು ಸ್ವಚ್ಛಗೊಳಿಸಲಾಗುತ್ತದೆ. ಜಪಾನ್ ನಲ್ಲಿ ಕೇವಲ 7 ನಿಮಿಷದಲ್ಲಿ ರೈಲನ್ನು ಸ್ವಚ್ಛಗೊಳಿಸಲಾಗುತ್ತದೆ.

    7) ಬುಲೆಟ್ ರೈಲು ಮೊದಲ ಸಂಚಾರವನ್ನು 2022ರ ಆಗಸ್ಟ್ 15 ರಂದು ಆರಂಭಿಸಬೇಕೆಂಬ ಗುರಿಯನ್ನು ರೈಲ್ವೇ ಸಚಿವಾಲಯ ಹಾಕಿಕೊಂಡಿದೆ. ಆರಂಭದಲ್ಲಿ 2023ಕ್ಕೆ ಈ ಯೋಜನೆ ಪೂರ್ಣಗೊಳಿಸಲು ಡೆಡ್‍ಲೈನ್ ನಿಗದಿಗೊಳಿಸಲಾಗಿತ್ತು. ಆದರೆ 2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಆಚರಿಸುವ ಕಾರಣ ಜನರಿಗೆ ಉಡುಗೊರೆ ಎಂಬಂತೆ ಅವಧಿಗೂ ಮುನ್ನವೇ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

    8) ಮುಂಬೈ – ಅಹಮದಾಬಾದ್ ಮಾರ್ಗವು 12 ನಿಲ್ದಾಣಗಳನ್ನು ಹೊಂದಿರಲಿದೆ. ಎಲ್ಲಾ ನಿಲ್ದಾಣಗಳಲ್ಲಿಯೂ ರೈಲು ನಿಲ್ಲಿಸಿ ಪ್ರಯಾಣ ನಡೆಸಿದರೂ ಕೇವಲ 3 ಘಂಟೆಯಲ್ಲಿ ಕೊನೆಯ ನಿಲ್ದಾಣವನ್ನು ತಲುಪಲಿದೆ. ಸದ್ಯ ಈ ದೂರವನ್ನು ಕ್ರಮಿಸಲು ಸುಮಾರು 8 ಗಂಟೆಯ ಅವಧಿಯನ್ನು ರೈಲು ತೆಗೆದುಕೊಳ್ಳುತ್ತಿದೆ.

    9) ಜಪಾನ್ ಸಾಲವನ್ನು ಮರುಪಾವತಿ ಮಾಡಬೇಕಾದರೆ ಪ್ರತಿ ದಿನ 100 ಟ್ರಿಪ್ ರೈಲು ಸಂಚರಿಸಬೇಕು ಅಥವಾ ದಿನಕ್ಕೆ 88 ಸಾವಿರದಿಂದ 1.18 ಲಕ್ಷ ಪ್ರಯಾಣಿಕರು ಸಂಚರಿಸಬೇಕು ಎಂದು ಈ ಹಿಂದೆ ಈ ಯೋಜನೆ ಬಗ್ಗೆ ಅಧ್ಯಯನ ನಡೆಸಿದ್ದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಹಮದಾಬಾದ್ ರೈಲ್ವೇ ಇಲಾಖೆಗೆ ವರದಿ ನೀಡಿತ್ತು. ಅಷ್ಟೇ ಅಲ್ಲದೇ 300 ಕಿ.ಮೀ ಪ್ರಯಾಣಕ್ಕೆ ಒಂದು ಟಿಕೆಟ್‍ಗೆ 1500 ರೂ ದರವನ್ನು ನಿಗದಿ ಮಾಡಬೇಕೆಂಬ ಅಂಶವನ್ನು ವರದಿಯಲ್ಲಿ ತಿಳಿಸಿತ್ತು.

    10) ಜಪಾನ್ ಶಿಕಾನ್‍ಸೆನ್ ಬುಲೆಟ್ ರೈಲು 1964ರಲ್ಲಿ ಆರಂಭವಾಗಿದ್ದು, ಈವರೆಗೂ ಒಂದೇ ಒಂದು ಅಪಘಾತವಾಗಿಲ್ಲ. ಈ ರೈಲಿನಲ್ಲಿ ಸೆನ್ಸರ್ ಅಳವಡಿಸಲಾಗಿದ್ದು ಹಳಿಯಲ್ಲಿ ಏನಾದರೂ ಇದ್ದರೆ ಅಥವಾ ಹಳಿ ತುಂಡಾಗಿದ್ದರೆ ಅದರ ಮಾಹಿತಿ ತಿಳಿದು ಸ್ವಯಂ ಚಾಲಿತವಾಗಿ ನಿಲ್ಲುವ ವ್ಯವಸ್ಥೆಯನ್ನು ರೈಲು ಹೊಂದಿದೆ.

  • ಫಸ್ಟ್ ಟೈಂ ಅಲ್ಟೋ ಹಿಂದಿಕ್ಕಿದ ಡಿಸೈರ್: ಆಗಸ್ಟ್ ನಲ್ಲಿ ಯಾವ ಕಾರು ಎಷ್ಟು ಮಾರಾಟವಾಗಿದೆ?

    ಫಸ್ಟ್ ಟೈಂ ಅಲ್ಟೋ ಹಿಂದಿಕ್ಕಿದ ಡಿಸೈರ್: ಆಗಸ್ಟ್ ನಲ್ಲಿ ಯಾವ ಕಾರು ಎಷ್ಟು ಮಾರಾಟವಾಗಿದೆ?

    ಬೆಂಗಳೂರು: ಇದೇ ಮೊದಲ ಬಾರಿಗೆ ಮಾರುತಿ ಸುಜುಕಿ ಡಿಸೈರ್ ಭಾರತದಲ್ಲಿ ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

    ಭಾರತೀಯ ವಾಹನ ತಯಾರಿಕಾ ಕಂಪೆನಿಗಳ ಒಕ್ಕೂಟ(ಎಸ್‍ಐಎಎಂ) ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಅವಧಿಯಲ್ಲಿ
    30,934 ಡಿಸೈರ್ ಕಾರುಗಳು ಮಾರಾಟವಾಗಿದ್ದರೆ, 21,521 ಆಲ್ಟೋ ಕಾರುಗಳು ಮಾರಾಟವಾಗಿದೆ.

    ಈ ಪಟ್ಟಿಯಲ್ಲಿ ಮಾರುತಿ ಇಂಡಿಯಾ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದು ಟಾಪ್ 10 ಕಾರುಗಳ ಪಟ್ಟಿಯಲ್ಲಿ 7 ಕಾರುಗಳು ಸ್ಥಾನ ಪಡೆದುಕೊಂಡಿದ್ದರೆ, ಹುಂಡೈ ಕಂಪೆನಿಯ ಮೂರು ಕಾರುಗಳು ಸ್ಥಾನ ಪಡೆದುಕೊಂಡಿದೆ.

    ಯಾವ ಕಾರುಗಳು ಎಷ್ಟು ಮಾರಾಟವಾಗಿದೆ?
    1. ಮಾರುತಿ ಸುಜುಕಿ ಡಿಸೈರ್ – 30,934


    2. ಮಾರುತಿ ಅಲ್ಟೋ – 21,521


    3. ಮಾರುತಿ ಬಲೆನೊ – 17,190


    4. ಮಾರುತಿ ವಿಟಾರಾ ಬ್ರೆಜಾ – 14,396


    5. ಮಾರುತಿ ವ್ಯಾಗನ್ ಆರ್ – 13,907


    6. ಸ್ವಿಫ್ಟ್ – 12,631


    7. ಹುಂಡೈ ಗ್ರಾಂಡ್ ಐ10 – 12,306


    8. ಹುಂಡೈ ಗ್ರಾಂಡ್ ಐ20 – 11,832


    9. ಹುಂಡೈ ಕ್ರೇಟಾ – 10,158


    10. ಸೆಲರಿಯೋ – 9,210

  • ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

    ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

    ಬೆಂಗಳೂರು: 2016 ಸೆಪ್ಟೆಂಬರ್ ನಲ್ಲಿ ಆರಂಭಗೊಂಡ ರಿಲಿಯನ್ಸ್ ಜಿಯೋಗೆ ಈಗ ಒಂದು ವರ್ಷ ಪೂರ್ಣಗೊಂಡಿದೆ. ಜಿಯೋ ಆರಂಭವಾದ ಬಳಿಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಏನು ಬದಲಾವಣೆಯಾಗಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.

    1. ಮೊಬೈಲ್ ಡೇಟಾ ಬಳಕೆ:
    ಆಗಸ್ಟ್ 2016 – 1 ತಿಂಗಳಿಗೆ 20 ಕೋಟಿ ಜಿಬಿ
    ಆಗಸ್ಟ್, 2017 – 1 ತಿಂಗಳಿಗೆ 150 ಕೋಟಿ ಜಿಬಿ – ವಿಶ್ವದಲ್ಲೇ ಅತಿ ಹೆಚ್ಚು ಸಾಧ್ಯತೆ

     

    2. ಡೇಟಾ ಶುಲ್ಕ
    ಆಗಸ್ಟ್ 2016 – 1 ಜಿಬಿ ಡೇಟಾಗೆ 250 ರೂ.
    ಆಗಸ್ಟ್ 2017 – 1 ಜಿಬಿಗೆ ಡೇಟಾ 50 ರೂ.ಗಿಂತ ಕಡಿಮೆ

     

     

    3. ತಿಂಗಳ ಪೋಸ್ಟ್ ಪೇಯ್ಡ್ ಬಿಲ್
    ಡಿಸೆಂಬರ್ 2016 – 349 ರೂ.
    ಈಗ ರೂ.240 – 280 ರೂ.

    4. ವಯರ್‍ಲೆಸ್ ಬ್ರಾಂಡ್‍ಬ್ಯಾಂಡ್ ಪಡೆದುಕೊಂಡ ಗ್ರಾಹಕರ ಸಂಖ್ಯೆ
    ಆಗಸ್ಟ್ 2016 – 15.4 ಕೋಟಿ
    ಜೂನ್ 2017 -28.2 ಕೋಟಿ

    5. 4ಜಿ ಸ್ಮಾರ್ಟ್ ಫೋನ್ ಮಾರಾಟದ ಸಂಖ್ಯೆಯಲ್ಲಿ ಹೆಚ್ಚಳ
    2016ರ ಪ್ರಥಮ ತ್ರೈಮಾಸಿಕ – ಶೇ.66
    2017ರ ಪ್ರಥಮ ತ್ರೈಮಾಸಿಕ – ಶೇ.95

    6. 4ಜಿ ಫೋನ್ ಫೋನ್ ಎಷ್ಟು ಮಾರಾಟ
    ಮಾರ್ಚ್ 2016 – 47 ಲಕ್ಷ
    ಮಾರ್ಚ್ 2017 -1.31 ಕೋಟಿ

    7. ಎವರೇಜ್ ರೆವೆನ್ಯೂ ಪರ್ ಯೂಸರ್(ಎಆರ್‍ಪಿಯು)
    ಡಿಸೆಂಬರ್‍ಗೆ ಅಂತ್ಯಗೊಂಡ ತ್ರೈಮಾಸಿಕ – 141 ರೂ.
    ಮಾರ್ಚ್ ಗೆ ಅಂತ್ಯಗೊಂಡ ತ್ರೈಮಾಸಿಕ – 131 ರೂ.

    8. ಸಿಮ್ ಆ್ಯಕ್ಟಿವೇಶನ್ ಅವಧಿ
    ಆಗಸ್ಟ್ 2016 – ಕನಿಷ್ಟ 3 ದಿನ
    ಆಗಸ್ಟ್ 2017 – ಕನಿಷ್ಟ 10 ನಿಮಿಷ

    9. ಎವರೇಜ್ ರೆವೆನ್ಯೂ ಪರ್ ಯೂಸರ್(ವಾಯ್ಸ್)
    ಆಗಸ್ಟ್ 2016 – 180 ರೂ.
    ಆಗಸ್ಟ್ 2017 – 68 ರೂ.

    ಇದನ್ನೂ ಓದಿ: ಜಿಯೋಗೆ ಫೈಟ್ ನೀಡಲು ಬಿಎಸ್‍ಎನ್‍ಎಲ್‍ನಿಂದ ಹೊಸ ಬಂಪರ್ ಆಫರ್

  • ಐಸಿಸಿ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಜಸ್‍ಪ್ರೀತ್ ಬುಮ್ರಾ ಸರ್ವಶ್ರೇಷ್ಠ ಸಾಧನೆ!

    ಐಸಿಸಿ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಜಸ್‍ಪ್ರೀತ್ ಬುಮ್ರಾ ಸರ್ವಶ್ರೇಷ್ಠ ಸಾಧನೆ!

    ದುಬೈ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ 15 ವಿಕೆಟ್ ಕಿತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಜಸ್‍ಪ್ರೀತ್ ಬುಮ್ರಾ ಐಸಿಸಿ ಪ್ರಕಟಿಸಿದ ನೂತನ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ.

    23 ವರ್ಷದ ಬುಮ್ರಾ ಜೂನ್ ತಿಂಗಳಿನಲ್ಲಿ 24 ಶ್ರೇಯಾಂಕ ಪಡೆಯುವ ಮೂಲಕ ಜೀವನ ಶ್ರೇಷ್ಠ ಸಾಧನೆ ಮಾಡಿದ್ದರು. ಆದರೆ ಈಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನವನ್ನು ನೀಡುವ ಮೂಲಕ 687 ರೇಟಿಂಗ್ ಪಡೆಯುವ ಮೂಲಕ 4 ಸ್ಥಾನಕ್ಕೆ ಹಾರಿ ಸರ್ವಶ್ರೇಷ್ಠ ಸಾಧನೆ ಮಾಡಿದ್ದಾರೆ.

    ಕೊನೆಯದಾಗಿ ಸೆಪ್ಟೆಂಬರ್ 3ಕ್ಕೆ ಅಪ್‍ಡೇಟ್ ಆಗಿರುವ ಶ್ರೇಯಾಂಕ ಪಟ್ಟಿಯಲ್ಲಿ ಅಕ್ಷರ್ ಪಟೇಲ್ 645 ರೇಟಿಂಗ್ ಪಡೆಯುವ ಮೂಲಕ 10ನೇ ಸ್ಥಾನವನ್ನು ಪಡೆದರೆ, 613 ರೇಟಿಂಗ್ ಪಡೆಯುವ ಮೂಲಕ ಭುವನೇಶ್ವರ್ ಕುಮಾರ್ 14ನೇ ಸ್ಥಾನವನ್ನು ಗಳಿಸಿದ್ದಾರೆ. ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 23ನೇ ಸ್ಥಾನ, ಅಮಿತ್ ಮಿಶ್ರಾ 25ನೇ ಶ್ರೇಯಾಂಕ ಪಡೆದಿದ್ದಾರೆ.

    ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‍ವುಡ್ 732 ರೇಟಿಂಗ್ ಪಡೆಯುವ ಮೂಲಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರೆ, 718 ರೇಟಿಂಗ್ ಪಡೆದಿರುವ ದಕ್ಷಿಣ ಆಫ್ರಿಕಾದ ಇಮ್ರಾನ್ ತಾಹೀರ್ ಎರಡನೇ ಸ್ಥಾನ ಪಡೆದಿದ್ದಾರೆ. 701 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾದ ಮೈಕಲ್ ಸ್ಟ್ರಾಕ್ ಮೂರನೇ ಸ್ಥಾನ ಪಡೆದಿದ್ದಾರೆ.

    ಏಕದಿನ ಬ್ಯಾಟಿಂಗ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 887 ರೇಟಿಂಗ್ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ. 764 ರೇಟಿಂಗ್ ಪಡೆಯುವ ಮೂಲಕ ರೋಹಿತ್ ಶರ್ಮಾ 9ನೇ ಸ್ಥಾನ ಪಡೆದುಕೊಂಡಿದ್ದಾರೆ.

    ಆಲ್‍ರೌಂಡರ್ ಟಾಪ್ 10 ಪಟ್ಟಿಯಲ್ಲಿ ಸ್ಥಾನಗಳಿಸಲು ಟೀಂ ಇಂಡಿಯಾ ಆಟಗಾರರು ವಿಫಲರಾಗಿದ್ದು, 228 ರೇಟಿಂಗ್ ಪಡೆಯುವ ಮೂಲಕ ರವೀಂದ್ರ ಜಡೇಜಾ 15ನೇ ಸ್ಥಾನಗಳಿಸಿದ್ದಾರೆ.