Tag: india

  • 28 ರನ್ ಗಳಿಗೆ 7ವಿಕೆಟ್ ಪತನ: ಭಾರತಕ್ಕೆ ವಿರೋಚಿತ ಸೋಲು

    28 ರನ್ ಗಳಿಗೆ 7ವಿಕೆಟ್ ಪತನ: ಭಾರತಕ್ಕೆ ವಿರೋಚಿತ ಸೋಲು

    ಲಾರ್ಡ್ಸ್: ಫೈನಲ್ ನಲ್ಲಿ ಟೀಂ ಇಂಡಿಯಾ ವಿರುದ್ಧ 9 ರನ್ ಗಳ ಜಯವನ್ನು ಸಾಧಿಸುವ ಮೂಲಕ ಮೂಲಕ ಇಂಗ್ಲೆಂಡ್ ವಿಶ್ವಕಪ್ ಎತ್ತಿ ಸಂಭ್ರಮಿಸಿದೆ.

    229 ರನ್‍ಗಳ ಸವಾಲು ಸುಲಭವಾಗಿದ್ದರೂ, ಕೊನೆಯಲ್ಲಿ 28 ರನ್ ಗಳಿಗೆ ಏಳು ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರತಕ್ಕೆ ಫೈನಲ್ ನಲ್ಲಿ ವಿರೋಚಿತ ಸೋಲಾಗಿದೆ.

    ಭಾರತ ಮೂರು ವಿಕೆಟಿಗೆ 191 ರನ್ ಗಳಿಸಿದ್ದಾಗ ಜಯಗಳಿಸುವ ವಿಶ್ವಾಸದಲ್ಲಿತ್ತು. ಆದರೆ ಆರಂಭಿಕ ಬ್ಯಾಟ್ಸ್ ವುಮೆನ್ ಪೂನಂ ರಾವತ್ 42.5 ಓವರ್ ನಲ್ಲಿ ಎಲ್‍ಬಿ ಬಿದ್ದು ಔಟಾದರೋ ಅಲ್ಲಿಂದ ಭಾರತ ಕುಸಿತ ಆರಂಭವಾಯಿತು. ನಂತರ ಬಂದ ಸುಷ್ಮಾ ವರ್ಮಾ ಶೂನ್ಯಕ್ಕೆ ಔಟಾದರೆ ಔಟಾದರೆ, ವೇದ ಕೃಷ್ಣ ಮೂರ್ತಿ ಔಟಾದರು. ನಂತರ ಬಂದ ಜೂಲನ್ ಗೋಸ್ವಾಮಿ ಶೂನ್ಯಕ್ಕೆ ಔಟದರು.

    14ರನ್ ಗಳಿಸಿದ್ದಾಗ ದೀಪ್ತಿ ಶರ್ಮಾ ಕ್ಯಾಚ್ ನೀಡಿ ಔಟಾದರೆ, ಶಿಖಾ ಪಾಂಡೆ ಅನಗತ್ಯ ರನ್ ಕದಿಯಲು ಹೋಗಿ ರನ್ ಔಟ್ ಆದರು. ಕೊನೆಯಲ್ಲಿ ರಾಜೇಶ್ವರಿ ಗಾಯಕ್ವಾಡ್ ಬೌಲ್ಡ್ ಆಗುವ ಮೂಲಕ ಭಾರತ ಸೋಲನ್ನು ಒಪ್ಪಿಕೊಂಡಿತು. ರನ್ ಕಡಿಮೆ ಇದ್ದು ಬಾಲ್ ಜಾಸ್ತಿ ಇದ್ದರೂ ಕೊನೆಯಲ್ಲಿ ಪಟಪಟನೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದ ಭಾರತ ಅಂತಿಮವಾಗಿ 219 ರನ್ ಗಳಿಗೆ ಆಲೌಟ್ ಆಯ್ತು.

    ಅನ್ಯ ಶಬ್ರಸಸೋಲೆ 9.4 ಓವರ್ ಎಸೆದು 46 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಅಂತಿಮವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    ಭಾರತದ ಪರ ಪೂನಂ ರಾವತ್ 86 ರನ್(115 ಎಸೆತ, 4 ಬೌಂಡರಿ, 1 ಸಿಕ್ಸರ್), ಹರಂಪ್ರೀತ್ ಕೌರ್ 51 ರನ್(80 ಎಸೆತ, 3 ಬೌಂಡರಿ, 2 ಸಿಕ್ಸರ್), ವೇದಾ ಕೃಷ್ಣಮೂರ್ತಿ 35 ರನ್(34 ಎಸೆತ, 5 ಬೌಂಡರಿ) ಹೊಡೆದರು.

    ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತ್ತು.  ಆರಂಭದಲ್ಲಿ ರಾಜೇಶ್ವರಿ ಗಾಯಕ್ವಾಡ್ ಮೊದಲ ವಿಕೆಟ್ ಕಿತ್ತರೆ, ನಂತರ ಪೂನಮ್ ಯಾದವ್ ಎರಡು ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡಿಗೆ ಹೊಡೆತ ನೀಡಿದ್ದರು.

    63 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಸಾರಾ ಟೇಲರ್ ಮತ್ತು ನಟಲೈ ಸೀವರ್ 4 ವಿಕೆಟಿಗೆ 83 ರನ್ ಗಳ ಜೊತೆಯಾಟವಾಡಿದರು. ಸಾರಾಟ ಟೇಲರ್ ಜೂಲನ್ ಗೋಸ್ವಾಮಿ ಬೌಲಿಂಗ್ ನಲ್ಲಿ ಕೀಪರ್‍ಗೆ ಕ್ಯಾಚ್ ನೀಡಿ ಔಟಾದರೆ ನಂತರದ ಎಸೆತದಲ್ಲಿ ಫ್ರಾನ್ ವಿಲ್ಸನ್ ಎಲ್‍ಬಿಗೆ ಔಟಾದರು.

    ನಟಲೈ ಸೀವರ್ 51 ರನ್ ಗಳಿಸಿದರೆ, ಕ್ಯಾಥರೀನ್ ಬ್ರಂಟ್ 34 ರನ್ ಗಳಿಸಿದರು. ಜೂಲನ್ ಗೋಸ್ವಾಮಿ 10 ಓವರ್ ನಲ್ಲಿ ಮೂರು ಮೇಡನ್ ಮಾಡಿ 23 ರನ್ ನೀಡಿ 3 ವಿಕೆಟ್ ಕಿತ್ತರು. ಪೂನಂ ಯಾದವ್2 ವಿಕೆಟ್ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ 1 ವಿಕೆಟ್ ಪಡೆದರು.

     

     

     

  • ಜೂಲನ್ ಗೋಸ್ವಾಮಿ ಭರ್ಜರಿ ಬೌಲಿಂಗ್: ಭಾರತಕ್ಕೆ 229ರನ್‍ಗಳ ಗುರಿ

    ಜೂಲನ್ ಗೋಸ್ವಾಮಿ ಭರ್ಜರಿ ಬೌಲಿಂಗ್: ಭಾರತಕ್ಕೆ 229ರನ್‍ಗಳ ಗುರಿ

     

    ಲಾರ್ಡ್ಸ್: ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು ಇಂಗ್ಲೆಂಡ್ 229 ರನ್ ಗಳ ಗುರಿಯನ್ನು ನೀಡಿದೆ.

    ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ವೇಗದ ಬೌಲರ್ ಜೂಲನ್ ಗೋಸ್ವಾಮಿ ಮಾರಕ ದಾಳಿಗೆ ತತ್ತರಿಸಿ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿದೆ.

    ಆರಂಭದಲ್ಲಿ ರಾಜೇಶ್ವರಿ ಗಾಯಕ್ವಾಡ್ ಮೊದಲ ವಿಕೆಟ್ ಕಿತ್ತರೆ, ನಂತರ ಪೂನಮ್ ಯಾದವ್ ಎರಡು ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡಿಗೆ ಹೊಡೆತ ನೀಡಿದ್ದರು.

    63 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಸಾರಾ ಟೇಲರ್ ಮತ್ತು ನಟಲೈ ಸೀವರ್ 4 ವಿಕೆಟಿಗೆ 83 ರನ್ ಗಳ ಜೊತೆಯಾಟವಾಡಿದರು. ಸಾರಾಟ ಟೇಲರ್ ಜೂಲನ್ ಗೋಸ್ವಾಮಿ ಬೌಲಿಂಗ್ ನಲ್ಲಿ ಕೀಪರ್‍ಗೆ ಕ್ಯಾಚ್ ನೀಡಿ ಔಟಾದರೆ ನಂತರದ ಎಸೆತದಲ್ಲಿ ಫ್ರಾನ್ ವಿಲ್ಸನ್ ಎಲ್‍ಬಿಗೆ ಔಟಾದರು.

    ನಟಲೈ ಸೀವರ್ 51 ರನ್ ಗಳಿಸಿದರೆ, ಕ್ಯಾಥರೀನ್ ಬ್ರಂಟ್ 34 ರನ್ ಗಳಿಸಿದರು. ಜೂಲನ್ ಗೋಸ್ವಾಮಿ 10 ಓವರ್ ನಲ್ಲಿ ಮೂರು ಓವರ್ ಮೇಡನ್ ಮಾಡಿ 23 ರನ್ ನೀಡಿ 3 ವಿಕೆಟ್ ಕಿತ್ತರು. ಪೂನಂ ಯಾದವ್2 ವಿಕೆಟ್ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ 1 ವಿಕೆಟ್ ಪಡೆದರು.

     

  • ಜಿಎಸ್‍ಟಿ ಎಫೆಕ್ಟ್ : ಮಿಟ್ಸುಬಿಸಿ ಪಜೆರೊ ಬೆಲೆ ಭಾರೀ ಇಳಿಕೆ

    ಜಿಎಸ್‍ಟಿ ಎಫೆಕ್ಟ್ : ಮಿಟ್ಸುಬಿಸಿ ಪಜೆರೊ ಬೆಲೆ ಭಾರೀ ಇಳಿಕೆ

    ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಯಾದ ಬಳಿಕ ಸ್ಪೋರ್ಟ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಯಾಗಿರುವ ಮಿಟ್ಸುಬಿಸಿ ಕಂಪೆನಿಯ ಪಜೆರೊ ಬೆಲೆ ಭಾರೀ ಇಳಿಕೆಯಾಗಿದೆ.

    ಪ್ರತಿ ಮಾದರಿ ಮೇಲೂ ಸರಾಸರಿಯಾಗಿ 1.04 ಲಕ್ಷ ರೂಪಾಯಿ ಕಡಿಮೆಯಾಗಿದೆ. ಹೀಗಾಗಿ ಪ್ರಸ್ತುತ ಬೆಲೆಗಳ ಪ್ರಕಾರ ಮಿಟ್ಸುಬಿಸಿ ಪಜೆರೊ ಆರಂಭಿಕ ಕಾರು ಮಾದರಿಗಳ ಬೆಲೆ ರೂ.26.64 ಲಕ್ಷ ರೂ.(ದೆಹಲಿ ಶೋ ರೂಂ) ಲಭ್ಯವಿದೆ. ಈ ಹಿಂದೆ ಈ ಕಾರಿನ ಬೆಲೆ 27.69 ಲಕ್ಷ ರೂ. ಇತ್ತು. ಉನ್ನತ ಕಾರು ಮಾದರಿಯ ಬೆಲೆ ರೂ.28.59 ಲಕ್ಷಕ್ಕೆ ಲಭ್ಯವಿರಲಿವೆ.

    ಈ ಹಿಂದೆ 26.66 ಲಕ್ಷ ರೂ. ನಿಂದ ಆರಂಭವಾಗುವ ಫಾರ್ಚೂನರ್ ಕಾರಿನ ಬೆಲೆ 2,17,000 ರೂ. ಇಳಿಕೆಯಾಗಿದ್ದರೆ, 14 ಲಕ್ಷ ರೂ.ನಿಂದ ಆರಂಭವಾಗುವ ಇನ್ನೋವಾ ಕ್ರಿಸ್ಟಾ ಬೆಲೆಯಲ್ಲಿ 98,500 ರೂ. ಇಳಿಕೆಯಾಗಿತ್ತು.

    ಬೆಲೆ ಇಳಿಕೆಯಾಗಿದ್ದು ಯಾಕೆ?
    ಇಲ್ಲಿಯವರೆಗೆ ವ್ಯಾಟ್, ಮೂಲ ಸೌಕರ್ಯ ತೆರಿಗೆ ಮತ್ತು ಕೆಲ ರಾಜ್ಯಗಳು ವಿಧಿಸುವ ಹಸಿರು ತೆರಿಗೆ ಮತ್ತು ಕಾರಿನ ಶೋ ರೂಂ ಬೆಲೆ ನೋಡಿ ಬೆಲೆಗಳು ನಿಗದಿಯಾಗುತಿತ್ತು. ಜಿಎಸ್‍ಟಿ ವ್ಯವಸ್ಥೆಯಲ್ಲಿ ಕಾರುಗಳ ಮೇಲೆ ಶೇ. 28ರಷ್ಟು ತೆರಿಗೆ ಜತೆಗೆ ಆಯಾ ಕಾರುಗಳ ಗಾತ್ರಕ್ಕೆ ತಕ್ಕಂತೆ ಶೇ. 1ರಿಂದ ಶೇ 15ರವರೆಗೆ ಸೆಸ್ ವಿಧಿಸಲಾಗುತ್ತದೆ.

    ಜಿಎಸ್‍ಟಿಯಲ್ಲಿ ಸಣ್ಣ ಕಾರುಗಳಿಗೆ ನಿಗದಿಯಾದ ಅತ್ಯಧಿಕ ದರ ಶೇ.28 ಜೊತೆಗೆ ಹೆಚ್ಚುವರಿಯಾಗಿ ಶೇ.1ರಷ್ಟು ಸೆಸ್ ವಿಧಿಸಲಾಗುತ್ತದೆ. ಮಧ್ಯಮ ಗಾತ್ರದ ಕಾರುಗಳು ಜಿಎಸ್‍ಟಿ ದರವಲ್ಲದೆ ಶೇ.3ರಷ್ಟು ಹಾಗೂ ಲಕ್ಸುರಿ ಕಾರುಗಳು ಶೇ.15ರಷ್ಟು ಸೆಸ್ ವಿಧಿಸಲಾಗುತ್ತದೆ. ಈ ಹಿಂದೆ ಸ್ಟೋಟ್ರ್ಸ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಮೇಲೆ ಶೇ.48ರಷ್ಟು ತೆರಿಗೆ ವಿಧಿಸಲಾಗುತಿತ್ತು. ಆದರೆ ಈಗ ಜಿಎಸ್‍ಟಿಯಲ್ಲಿ ಶೇ.43 ರಷ್ಟು ಹಾಕಲಾಗುತ್ತದೆ.

    ಸಣ್ಣ ಕಾರುಗಳ ಮೇಲೆ ಈ ಹಿಂದೆಯೂ ಶೇ.29ರಷ್ಟು ತೆರಿಗೆ ಇತ್ತು. ಹೀಗಾಗಿ ಹೊಸ ತೆರಿಗೆ ಈ ದರ ಹಾಗೆಯೇ (ಶೇ. 28 ಜಿಎಸ್‍ಟಿ + ಶೇ.1 ಸೆಸ್) ಇರಲಿರುವ ಕಾರಣ ಸಣ್ಣ ಕಾರುಗಳ ಮೇಲೆ ಜಿಎಸ್‍ಟಿಯಿಂದ ಅಷ್ಟೊಂದು ಪರಿಣಾಮ ಬೀರದ ಕಾರಣ ಬೆಲೆ ಕಡಿಮೆಯಾಗುವುದಿಲ್ಲ.

    ಇದನ್ನೂ ಓದಿ: ಯಾವ ಕಾರಿನ ಬೆಲೆ ಎಷ್ಟು ಇಳಿಕೆಯಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

  • ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

    ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

    ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ.

    ವಿಶ್ವಕಪ್ ಕ್ರಿಕೆಟ್
    ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 54.4 ಓವರ್ ಗಳಲ್ಲಿ 183 ರನ್ ಗಳಿಗೆ ಆಲೌಟ್ ಆಗಿತ್ತು. ಎದರಾಳಿ ವೆಸ್ಟ್ ಇಂಡಿಸ್ 52 ಓವರ್ ಗಳಲ್ಲಿ 140 ರನ್ ಗಳಿಗೆ ಆಲೌಟ್ ಆಗಿತ್ತು. ಈ  ಭಾರತ 43 ರನ್‍ಗಳಿಂದ ಪಂದ್ಯವನ್ನು ಗೆಲ್ಲುವ ಮೂಲಕ ವಿಶ್ವಕಪ್ ಜಯಿಸಿತ್ತು.

    ನ್ಯಾಟ್‍ವೆಸ್ಟ್ ಟ್ರೋಫಿ
    2012ರ ಜುಲೈ 13ಕ್ಕೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿತ್ತು. ನಾಯಕ ನಾಸೀರ್ ಹುಸೇನ್ 115 ರನ್ ಚಚ್ಚಿದ್ದರು. ನಂತರ ಬ್ಯಾಟಿಂಗ್ ಆರಂಭಿಸಿದ ಭಾರತ 146 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಜೊತೆಯಾದ ಮಹಮ್ಮದ್ ಕೈಫ್ ಮತ್ತು ಯುವರಾಜ್ ಸಿಂಗ್ 7 ವಿಕೆಟ್ ಗೆ 121 ರನ್ ಜೊತೆಯಾಟವಾಡಿದ್ದರು. ಅಂತಿಮವಾಗಿ ಮಹಮ್ಮದ್ ಕೈಫ್ ಔಟಾಗದೇ 87 ರನ್ ಸಿಡಿಸುವ ಮೂಲಕ ಭಾರತ 49.3 ಓವರ್ ಗಳಲ್ಲಿ 326 ರನ್ ಗಳಿಸಿ 2 ವಿಕೆಟ್ ಗಳ ರೋಚಕ ಜಯವನ್ನುಗಳಿಸಿತ್ತು. ಈ ಪಂದ್ಯದಲ್ಲಿ ವಿಜಯಿಯಾದ ಬಳಿಕ ಟೀಂ ಇಂಡಿಯಾದ ನಾಯಕ ಸೌರವ್ ಗಂಗೂಲಿ ತಮ್ಮ ಶರ್ಟ್ ಬಿಚ್ಚಿ ಸಂಭ್ರಮಿಸಿದರು.

    ಈ ಅಂಗಣದಲ್ಲಿ ಎರಡು ಬಾರಿ ಫೈನಲ್ ತಲುಪಿರುವ ಭಾರತ ಕಪ್ ಜಯಿಸಿದೆ. ಹೀಗಾಗಿ ಭಾರತ ಪಾಲಿಗೆ ಲಕ್ಕಿ ಸ್ಟೇಡಿಯಂ ಆಗಿರುವ ಲಾರ್ಡ್ಸ್ ನಲ್ಲಿ ಈ ಬಾರಿ ಫಲಿತಾಂಶ ಏನಾಗಲಿದೆ ಎನ್ನುವ ಪ್ರಶ್ನೆಗೆ ಇಂದು ಸಂಜೆ ಉತ್ತರ ಸಿಗಲಿದೆ.

     

     

  • 90 ಎಸೆತದಲ್ಲಿ ಶತಕ, 115 ಎಸೆತದಲ್ಲಿ 171 ರನ್: ಆಸೀಸ್ ವಿರುದ್ಧ ಸಿಡಿದ ಹರ್ಮನ್ ಪ್ರೀತ್

    90 ಎಸೆತದಲ್ಲಿ ಶತಕ, 115 ಎಸೆತದಲ್ಲಿ 171 ರನ್: ಆಸೀಸ್ ವಿರುದ್ಧ ಸಿಡಿದ ಹರ್ಮನ್ ಪ್ರೀತ್

    ಡರ್ಬಿ: ಸಿಕ್ಸರ್, ಬೌಂಡರಿಗಳ ಸುರಿಮಳೆ. ಕೊನೆಯ 16 ಓವರ್ ಗಳಲ್ಲಿ ಭಾರತ ಗಳಿಸಿದ್ದು  179 ರನ್. ಇದು ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹರ್ಮನ್ ಪ್ರೀತ್ ಕೌರ್ ಅವರ ಬ್ಯಾಟಿಂಗ್ ಆರ್ಭಟದ ಝಲಕ್.

    ಟಾಸ್ ಗೆದ್ದು ಬ್ಯಾಟ್ ಮಾಡಿದ ಭಾರತದ ಪರವಾಗಿ ಹರ್ಮನ್ ಪ್ರೀತ್ ಅವರು ಸ್ಫೋಟಕ ಔಟಾಗದೇ 171 ರನ್(115 ಎಸೆತ) ಸಿಡಿಸುವ ಮೂಲಕ 42 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 281 ರನ್ ಗಳಿಸಿತ್ತು

    ವಿಶೇಷ ಏನೆಂದರೆ 90 ಎಸೆತದಲ್ಲಿ ಶತಕ ಹೊಡೆದ ಹರ್ಮನ್‍ಪ್ರೀತ್ ಕೌರ್ ನಂತರ 25 ಎಸೆತದಲ್ಲಿ 71 ರನ್ ಚಚ್ಚಿದ್ದರು. ಇವರ ಈ ವಿಹಂಗಮ ಇನ್ನಿಂಗ್ಸ್ ನಲ್ಲಿ 20 ಬೌಂಡರಿ, 7 ಸಿಕ್ಸರ್ ಗಳು ಸಿಡಿಯಲ್ಪಟ್ಟಿತ್ತು.

    64 ಎಸೆತದಲ್ಲಿ 50 ರನ್ ಗಳಿಸಿದ್ದ ಇವರು ನಂತರ 26 ಎಸೆತದಲ್ಲಿ ಶತಕ ಹೊಡೆದಿದ್ದರು.64 ಎಸೆತದಲ್ಲಿ 50 ರನ್ ಗಳಿಸಿದ್ದ ಇವರು ನಂತರ 26 ಎಸೆತದಲ್ಲಿ ಶತಕ ಹೊಡೆದಿದ್ದರು. 171 ರನ್‌ಗಳಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಹೊಡೆದ ಐದನೇ ಆಟಗಾರ್ತಿಯಾಗಿ  ಕೌರ್ ಹೊಮ್ಮಿದ್ದಾರೆ.

    ಸಿಟ್ಟಿನಲ್ಲಿ ಶತಕ: 35 ನೇ ಓವರ್ ನಲ್ಲಿ ಕೌರ್ 98 ರನ್ ಗಳಿಸಿ ಸ್ಟ್ರೈಕ್ ನಲ್ಲಿದ್ದರು. ಈ ಕೊನೆಯ ಎಸೆತದಲ್ಲಿ ಕೌರ್ ಸಿಂಗಲ್ ರನ್ ತೆಗೆಯಲು ಎಡಗಡೆ ಹೊಡೆದಿದ್ದರು. ಈ ವೇಳೆ ದೀಪ್ತಿ ಶರ್ಮಾ ಎರಡು ರನ್ ಓಡಿದ್ದರು. ಈ ವೇಳೆ ಫೀಲ್ಡರ್ ಎಸೆದ ಬಾಲ್ ನೇರವಾಗಿ ಬೌಲರ್ ಕೈಗೆ ಸಿಕ್ಕಿತ್ತು. ಈ ಸಂದರ್ಭದಲ್ಲಿ ಕೌರ್ ಸ್ಟ್ರೈಕ್ ನತ್ತ ಓಡುತ್ತಿದ್ದರು. ಇದನ್ನು ನೋಡಿದ ಕೂಡಲೇ ಬೌಲರ್ ಬೀಮ್ಸ್ ನೇರವಾಗಿ ಸ್ಟ್ರೈಕ್ ನಲ್ಲಿರುವ ವಿಕೆಟ್ ಗೆ ತ್ರೋ ಮಾಡಿದ್ರು. ಪರಿಣಾಮ ಔಟ್ ನಿರ್ಧಾರ ಮೂರನೇ ಅಂಪೈರ್ ಹೋಯ್ತು. ಕೂಡಲೇ ಸಿಟ್ಟಾದ ಕೌರ್ ಹೆಲ್ಮೆಟ್ ಎಸೆದು ತಮ್ಮ ಆಕ್ರೋಶವನ್ನು ಹೊರ ಹಾಕಿದ್ರು. ಮೂರನೇ ಅಂಪೈರ್ ನಟೌಟ್ ಎಂದು ತೀರ್ಪು ನೀಡಿದ್ರು. ಶತಕ ಪೂರ್ಣ ಗೊಳಿಸಿದ್ದರೂ ಕೌರ್ ಬ್ಯಾಟನ್ನು ಮೇಲಕ್ಕೆ ಎತ್ತಿರಲಿಲ್ಲ. 150 ರನ್ ಗಳಿಸಿದಾಗ ಬ್ಯಾಟ್ ಮೇಲಕ್ಕೆ ಎತ್ತಿ ಸಂಭ್ರಮಿಸಿದರು. ಕೊನೆಯ 23 ಎಸೆತದಲ್ಲಿ 71 ರನ್( 4, 6, 6, 4, 4, 2, 0, 4, 4, 0, 6, 4, 1, 4, 1, 1, 6, 6, 1, 1, 4, 1, 1 ) ಚಚ್ಚಿದ್ದರು.

    ಭಾರತದ ಪರವಾಗಿ ಮಿಥಾಲಿ ರಾಜ್ 36 ರನ್(61 ಎಸೆತ, 2 ಬೌಂಡರಿ) ದೀಪ್ತಿ ಶರ್ಮಾ 25 ರನ್( 35 ಎಸೆತ, 1 ಬೌಂಡರಿ), ವೇದ ಕೃಷ್ಣ ಮೂರ್ತಿ 16 ರನ್(10 ಎಸೆತ,2 ಬೌಂಡರಿ) ಗಳಿಸಿದರು. ಮಳೆ ಬಂದ ಕಾರಣ 50 ಓವರ್ ಗಳ ಪಂದ್ಯವನ್ನು 42 ಓವರ್ ಗಳಿಗೆ ಇಳಿಸಲಾಯಿತು.

    ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ವೈಭವ ಹೀಗಿತ್ತು
    50 ರನ್ – 64 ಎಸೆತ
    100 ರನ್ – 90 ಎಸೆತ
    150 ರನ್ – 107 ಎಸೆತ
    171 ರನ್ – 115 ಎಸೆತ

    https://twitter.com/AkashKu64782024/status/888073567191146496

  • ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು: ಉಪ್ಪಿ ಪ್ರಶ್ನೆ

    ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು: ಉಪ್ಪಿ ಪ್ರಶ್ನೆ

     

    ಬೆಂಗಳೂರು: ನಾವು ಸಣ್ಣ ಸಣ್ಣ ವಿಚಾರಗಳಿಗೆ ಬಂದ್ ಮಾಡುತ್ತೇವೆ. ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ರಿಯಲ್ ಸ್ಟಾರ್ ಉಪೇಂದ್ರ ಪ್ರಶ್ನಿಸಿದ್ದಾರೆ.

    ಟ್ಟಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಉಪೇಂದ್ರ, ನಾವು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಳ್ಳುತ್ತಿದ್ದೇವೆ. ಅತ್ತ ಸಿಕ್ಕಿಂನಲ್ಲಿ ನಮ್ಮ ಸೈನಿಕರು ಯುದ್ಧದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ನಾವ್ಯಾಕೆ ಒಂದಾಗಿ ಸೈನಿಕರನ್ನು ಬೆಂಬಲಿಸಿ ಬೀದಿಗಿಳಿದು ಚೀನಾಕ್ಕೆ ಯಾಕೆ ಎಚ್ಚರಿಕೆ ನೀಡುತ್ತಿಲ್ಲ ಎಂದು ಕೇಳಿದ್ದಾರೆ.

    ನಾವು ಆಳಬೇಕಾದವರು, ಆಳಿಸಿಕೊಳ್ಳುವವರು ನಾವಲ್ಲ. ನಾವು ಇಸ್ರೇಲಿನಿಂದ ಪಾಠ ಕಲಿಯಬೇಕಿದೆ ಎಂದು ಅವರು ಮತ್ತೊಂದು ಟ್ವೀಟ್ ಮಾಡಿ ಚೀನಾ ಆಕ್ರೋಶವನ್ನು ಹೊರ ಹಾಕಿದ್ದಾರೆ.

     

     

     

     

     

  • ಮತ್ತೊಮ್ಮೆ ಬ್ಯಾಂಕ್ ಗಳ ವಿಲೀನ: ಯಾವ ಬ್ಯಾಂಕ್ ಜೊತೆ ಯಾವ ಬ್ಯಾಂಕ್ ಗಳು ವಿಲೀನ?

    ಮತ್ತೊಮ್ಮೆ ಬ್ಯಾಂಕ್ ಗಳ ವಿಲೀನ: ಯಾವ ಬ್ಯಾಂಕ್ ಜೊತೆ ಯಾವ ಬ್ಯಾಂಕ್ ಗಳು ವಿಲೀನ?

    ನವದೆಹಲಿ: ಸಾರ್ವಜನಿಕ ವಲಯದಲ್ಲಿರುವ 21 ಬ್ಯಾಂಕ್ ಗಳನ್ನು 12ಕ್ಕೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ 5 ಬ್ಯಾಂಕ್ ಗಳು ವಿಲೀನ ಪ್ರಕ್ರಿಯೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮತ್ತಷ್ಟು ಬ್ಯಾಂಕ್ ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

    ಮೂರು ಬ್ಯಾಂಕ್ ಗಳನ್ನು ಒಂದು ಬ್ಯಾಂಕಿನಲ್ಲಿ ವಿಲೀನಗೊಳಿಸುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಝೀ ಬಿಸಿನೆಸ್ ವಾಹಿನಿಯು ಯಾವೆಲ್ಲ ಬ್ಯಾಂಕ್ ಗಳು ಯಾವ ಬ್ಯಾಂಕ್ ಜೊತೆ ವಿಲೀನಗೊಳ್ಳಲಿದೆ ಎನ್ನುವ ವರದಿಯನ್ನು ಪ್ರಕಟಿಸಿದೆ.

    21 ಸಣ್ಣ ಪುಟ್ಟ ಬ್ಯಾಂಕ್ ಗಳ ಬದಲಿಗೆ 12 ದೊಡ್ಡ ಬ್ಯಾಂಕ್ ಗಳನ್ನು ಸೃಷ್ಟಿಸಲು ಸರ್ಕಾರ ಮುಂದಾಗಿದೆ. ಎಸ್‍ಬಿಐ ವಿಲೀನದಂತೆ ಮತ್ತಷ್ಟು ಬ್ಯಾಂಕ್ ಗಳನ್ನು ಮುಂದೆ ವಿಲೀನ ಮಾಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಜೂನ್ ಮೊದಲ ವಾರದಲ್ಲಿ ಹೇಳಿಕೆ ನೀಡಿದ್ದರು.

    ಯಾವ ಬ್ಯಾಂಕ್ ಯಾವ ಬ್ಯಾಂಕ್ ಜೊತೆ ವಿಲೀನ
    1. ಯುನೈಟೆಡ್ ಬ್ಯಾಂಕ್ + ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್ —-> ಬ್ಯಾಂಕ್ ಆಫ್ ಬರೋಡಾ
    2. ಸಿಂಡಿಕೇಟ್ ಬ್ಯಾಂಕ್ + ಇಂಡಿಯನ್ ಓವರ್‍ಸೀಸ್ ಬ್ಯಾಂಕ್ + ಯುಕೋ ಬ್ಯಾಂಕ್ —-> ಕೆನರಾ ಬ್ಯಾಂಕ್
    3. ಐಡಿಬಿಐ ಬ್ಯಾಂಕ್ + ಸೆಂಟ್ರಲ್ ಬ್ಯಾಂಕ್ + ದೆನಾ ಬ್ಯಾಂಕ್ —-> ಯೂನಿಯನ್ ಬ್ಯಾಂಕ್
    4. ಆಂಧ್ರ ಬ್ಯಾಂಕ್ + ಬ್ಯಾಂಕ್ ಆಫ್ ಮಹಾರಾಷ್ಟ್ರ+ ವಿಜಯ ಬ್ಯಾಂಕ್ —-> ಬ್ಯಾಂಕ್ ಆಫ್ ಇಂಡಿಯಾ

    ಬ್ಯಾಂಕ್ ಗಳು ಎಸ್‍ಬಿಐ ಜೊತೆ ವಿಲೀನವಾಗಿದ್ದು ಯಾಕೆ?
    ವಿಶ್ವದ ಟಾಪ್ 50 ಪಟ್ಟಿಯಲ್ಲಿ ಭಾರತದ ಯಾವೊಂದು ಬ್ಯಾಂಕ್ ಸ್ಥಾನ ಪಡೆದಿಲ್ಲ. ಈ ಪಟ್ಟಿಯಲ್ಲಿ ಸ್ಥಾನ ಪಡೆಯಲು ಎಸ್‍ಬಿಐ ಮುಂದಾಗುತ್ತಿದ್ದು, ಕೇಂದ್ರದ ಒಪ್ಪಿಗೆಯ ಹಿನ್ನೆಲೆಯಲ್ಲಿ ಬ್ಯಾಂಕ್‍ಗಳ ವಿಲೀನ ಪ್ರಕ್ರಿಯೆ ನಡೆದಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್‍ಬಿಎಂ), ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಹಾಗೂ ಜೈಪುರ್ (ಎಎಸ್‍ಬಿಜೆ), ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್(ಎಸ್‍ಟಿ), ಸ್ಟೇಟ್ ಬ್ಯಾಂಕ್ ಪಟಿಯಾಲಾ (ಎಎಸ್‍ಬಿಪಿ), ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ (ಎಎಸ್‍ಬಿಎಚ್)ಹಾಗೂ ಭಾರತೀಯ ಮಹಿಳಾ ಬ್ಯಾಂಕ್ (ಬಿಬಿಎಂ)ಗಳು ಎಸ್‍ಬಿಐ ಜೊತೆ ಏಪ್ರಿಲ್ 1ರಂದು ವಿಲೀನವಾಗಿತ್ತು.

  • ಪ್ರತ್ಯೇಕ ನಾಡ ಧ್ವಜ ಚರ್ಚೆ: ಕಾಂಗ್ರೆಸ್, ಬಿಜೆಪಿ ಹೇಳಿದ್ದೇನು? ಡಿವಿಎಸ್ ಹೊರಡಿಸಿದ ಸುತ್ತೋಲೆ ಏನಾಯ್ತು?

    ಪ್ರತ್ಯೇಕ ನಾಡ ಧ್ವಜ ಚರ್ಚೆ: ಕಾಂಗ್ರೆಸ್, ಬಿಜೆಪಿ ಹೇಳಿದ್ದೇನು? ಡಿವಿಎಸ್ ಹೊರಡಿಸಿದ ಸುತ್ತೋಲೆ ಏನಾಯ್ತು?

    ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ 9 ಜನರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದು ದೇಶದಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

    ಸಿಎಂ ಸಮರ್ಥಿಸಿದ್ದು ಹೀಗೆ:
    ಪ್ರತ್ಯೇಕ ಕನ್ನಡ ಧ್ವಜವನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಧ್ವಜದ ಬಗ್ಗೆ ಕೂಗು ಕೇಳಿಬಂದಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದೇವೆ. ಸಮಿತಿ ವರದಿ ಬಳಿಕ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

    ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಕರ್ನಾಟಕದ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಡ ಎಂದು ಬಿಜೆಪಿಯವರು ಹೇಳಿಕೆ ನೀಡಲಿ. ಬಿಜೆಪಿ ಇಂಥಹ ವಿಚಾರದಲ್ಲಿ ಅಪಪ್ರಚಾರ ಮಾಡುವುದಕ್ಕೆ ಇರುವುದು. ಚುನಾವಣೆ ಸಮಯದಲ್ಲಿ ಪ್ರತ್ಯೇಕ ಧ್ವಜ ಸ್ಥಾಪನೆ ಮಾಡಲು ಸಮಿತಿಯನ್ನು ನಾನು ರಚನೆ ಮಾಡಿಲ್ಲ. ಎಲೆಕ್ಷನ್ ಇರುವುದು ಮುಂದಿನ ಮೇ ತಿಂಗಳಿನಲ್ಲಿ. ನಾಳೆ ನಾಡಿದ್ದು ಅಲ್ಲ. ರಾಜ್ಯಕ್ಕೆ ಪ್ರತ್ಯೇಕ ಧ್ವಜ ಇರಬಾರದು ಸಂವಿಧಾನದಲ್ಲಿ ತಿಳಿಸಿದೆಯಾ? ಪ್ರತ್ಯೇಕ ಧ್ವಜದ ಬಗ್ಗೆ ಸಂವಿಧಾನದಲ್ಲಿ ಏನಿದೆ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಮಿತಿಯಲ್ಲಿ ಯಾರು ಇರುತ್ತಾರೆ?
    ನಾಡ ಧ್ವಜ ರೂಪಿಸುವ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಅಧ್ಯಕ್ಷರಾಗಿರುತ್ತಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗೃಹ ಇಲಾಖೆ, ಕಾನೂನು ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಇದರ ಜೊತೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಹಂಪಿ ಕನ್ನಡ ವಿವಿ ಕುಲಸಚಿವರು ಸದಸ್ಯರಾಗಿರುತ್ತಾರೆ. ಉಳಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

    ಆರ್‍ಎಸ್‍ಎಸ್ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಲಿ:
    ಎಐಸಿಸಿ ನಾಯಕ ಬಿ.ಕೆ.ಹರಿಪ್ರಸಾದ್ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ನಾಗಪುರದ ಆರ್‍ಎಸ್‍ಎಸ್ ಕಚೇರಿಯಲ್ಲಿ ಮೊದಲು ರಾಷ್ಟ್ರಧ್ವಜ ಹಾರಿಸಲಿ. ಬಿಜೆಪಿಯವರಿಂದ ನಾವು ರಾಷ್ಟ್ರಪ್ರೇಮ ಕಲಿಯುವ ಅಗತ್ಯವಿಲ್ಲ, ರಾಜ್ಯದ ಸಾಹಿತಿಗಳ ಒತ್ತಾಯದ ಮೇರೆಗೆ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

    ಬೇರೆಡೆ ಸೆಳೆಯಲು ತಂತ್ರ:
    ರಾಜ್ಯದ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರದ ವೈಫಲ್ಯವನ್ನು ಮರೆಮಾಚಲು ಸರ್ಕಾರ ಈ ಕೆಲಸ ಮಾಡುತ್ತಿದೆ. ಬೇರೆ ಬಾವುಟ ಮಾಡುವ ಯಾವುದೇ ನಿಯಮವಿಲ್ಲ. ದೇಶಕ್ಕೆ ಒಂದೇ ಬಾವುಟ ಬೇರೆ ಬಾವುಟಕ್ಕೆ ಸಂವಿಧಾನದಲ್ಲಿ ಅವಕಾಶ ಇಲ್ಲ. ಸರ್ಕಾರದ ನಡೆ ಅಕ್ಷ್ಯಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

    ಕಾನೂನು ಏನು ಹೇಳುತ್ತೆ?
    ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 2012ರಲ್ಲಿ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸಂಸ್ಥೆಗಳ ಮೇಲೆ ಕನ್ನಡ ಬಾವುಟ ಹಾರಿಸುವಂತೆ ಬಜೆಟ್ ಮಂಡಿಸುವ ವೇಳೆ ಸುತ್ತೋಲೆ ಹೊರಡಿಸಿದ್ದರು. ಈ ಮಧ್ಯೆ ವಕೀಲ ಪ್ರಕಾಶ್ ಶೆಟ್ಟಿ ಎಂಬುವರು ಕನ್ನಡ ಧ್ವಜವನ್ನು ದುರ್ಬಳಕೆ ಆಗುತ್ತಿರುವ ಬಗ್ಗೆ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

    ಈ ಅರ್ಜಿಯ ವಿಚಾರಣೆ ವೇಳೆ ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಇಲ್ಲ ಜಗದೀಶ್ ಶೆಟ್ಟರ್ ನೇತೃತ್ವದ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿತ್ತು. ಅಷ್ಟೇ ಅಲ್ಲದೇ ಕನ್ನಡ ನಾಡಿಗೆಂದು ಅಧಿಕೃತ ಧ್ವಜ ಇಲ್ಲ. ಖಾಸಗಿಯವರು ಭಾವನಾತ್ಮಕವಾಗಿ ಧ್ವಜವನ್ನು ಹಾರಿಸುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದರು.

    ಕಾನೂನು ಪಂಡಿತರು ಏನ್ ಹೇಳ್ತಾರೆ?
    ರಾಜ್ಯಕ್ಕೆಂದೇ ಪ್ರತ್ಯೇಕ ಧ್ವಜವನ್ನು ರೂಪಿಸುವ ಬಗ್ಗೆ ಸಂವಿಧಾನದಲ್ಲಿ ವಿಶೇಷವಾಗಿ ಉಲ್ಲೇಖವಾಗಿಲ್ಲ. ಆದರೆ ರಾಷ್ಟ್ರಧ್ವಜಕ್ಕಿಂತ ಕಡಿಮೆ ಎತ್ತರದಲ್ಲಿ ರಾಜ್ಯಧ್ವಜ ಹಾರಿಸಬೇಕಾಗುತ್ತದೆ. ರಾಜ್ಯಧ್ವಜ ಕಡಿಮೆ ಎತ್ತರದಲ್ಲಿ ಹಾರಿಸಿದರೆ ರಾಷ್ಟ್ರಧ್ವಜಕ್ಕೆ ಅವಮಾನ ಆಗುವುದಿಲ್ಲ ಎಂದು ಹೇಳಿದ್ದಾರೆ.

    ಹೈಕಮಾಂಡ್ ಅಸಮಾಧಾನ:
    ಸಿದ್ದರಾಮಯ್ಯ ಸರ್ಕಾರದ ಈ ನಿರ್ಧಾರಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಶೇಷವಾಗಿ ಕಾಂಗ್ರೆಸ್ ಹಿರಿಯ ನಾಯಕ ಪ್ರದೀಪ್ ಭಟ್ಟಾಚಾರ್ಯ ಅವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ.

    ಕರ್ನಾಟಕ ಧ್ವಜದ ಹಿನ್ನೆಲೆ:
    1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.

    ಸರ್ಕಾರದ ನಿರ್ಧಾರ ವಿವಾದವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯನವರು ಫೇಸ್‍ಬುಕ್ ನಲ್ಲಿ ಈ ವಿಚಾರದ ಬಗ್ಗೆ ಪೋಸ್ಟ್ ಪ್ರಕಟಿಸಿ ಯಾಕೆ 9 ಜನರ ಸಮಿತಿಯನ್ನು ರಚಿಸಿದ್ದೇವೆ ಎನ್ನುವುದಕ್ಕೆ ಸ್ಪಷ್ಟನೆ ನೀಡಿದ್ದಾರೆ.

    ನಾಡಧ್ವಜದ ಕುರಿತು ಅನಗತ್ಯ ವಿವಾದವನ್ನು ಎಬ್ಬಿಸಲು ಕೆಲಶಕ್ತಿಗಳು ಮುಂದಾಗುತ್ತಿರುವುದು ಖಂಡನೀಯ. ಈ ಕುರಿತು ಸರ್ಕಾರ ಸ್ಪಷ್ಟ ಹಾಗೂ ಖಚಿತ ನಿಲುವನ್ನು ಹೊಂದಿದೆ. ಕನ್ನಡ ನಾಡಿಗೆ ಪ್ರತ್ಯೇಕ ಧ್ವಜವನ್ನು ವಿನ್ಯಾಸಗೊಳಿಸಿ ಅದಕ್ಕೆ ಕಾನೂನಿನ ಸ್ವರೂಪ ನೀಡುವಂತೆ ಡಾ. ಪಾಟೀಲ ಪುಟ್ಟಪ್ಪ ಅವರೂ ಸೇರಿದಂತೆ ಹಲವಾರು ಕನ್ನಡಪರ ಹೋರಾಟಗಾರರು ಸಲ್ಲಿಸಿರುವ ಮನವಿಗಳ ಪರಿಶೀಲನೆಗೆ ಸರ್ಕಾರ ಈಗಾಗಲೇ ಸಮಿತಿಯೊಂದನ್ನು ರಚನೆ ಮಾಡಿದೆ. ಆ ಸಮಿತಿ ನೀಡುವ ಶಿಫಾರಸು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

    ನಮ್ಮ ರಾಜ್ಯದಲ್ಲಿ ಈಗಾಗಲೇ ನಾಡಗೀತೆ ಅಧಿಕೃತವಾಗಿ ಇದೆ. ಅದೇ ರೀತಿ ನಾಡ ಧ್ವಜ ಇದ್ದರೆ ತಪ್ಪೇನೂ ಇಲ್ಲ. ಆದರೆ ಸರ್ಕಾರ ಈ ವಿಚಾರದಲ್ಲಿ ಪ್ರಸ್ತುತ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ನಿರ್ಣಯವನ್ನು ಕೈಗೊಳ್ಳಲಾಗುವುದು. ಆದರೆ ಈ ವಿಚಾರಕ್ಕೆ ವಿವಾದದ ಸ್ವರೂಪ ನೀಡುವ ಪ್ರಯತ್ನ ನಡೆದಿದೆ. ಬಿಜೆಪಿ ನಾಯಕರು ಇಂಥ ವಿಷಯದಲ್ಲಿ ಅಪ ಪ್ರಚಾರ ಮಾಡುವುದು ಸರಿಯಲ್ಲ. ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಡ ಎಂದು ಬಿಜೆಪಿಯವರು ಹೇಳಿಕೆ ಕೊಡಲಿ.

    ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಸಮಿತಿ ರಚನೆ ಮಾಡಿಲ್ಲ. ಚುನಾವಣೆ ಇರುವುದು ಮುಂದಿನ ಮೇ ತಿಂಗಳಿನಲ್ಲಿ ನಾಳೆ ಅಥವಾ ನಾಳಿದ್ದು ಅಲ್ಲ. ಪ್ರತ್ಯೇಕ ಧ್ವಜ ಕುರಿತು ಸಂವಿಧಾನದಲ್ಲಿ ಏನಿದೆ ಎಂಬುದನ್ನು ತಿಳಿದುಕೊಂಡು ಬಿಜೆಪಿ ನಾಯಕರು ಮಾತನಾಡಲಿ.
    ರಾಜ್ಯ ಪ್ರತ್ಯೇಕ ಧ್ವಜ ಹೊಂದುವುದು ರಾಷ್ಟ್ರೀಯತೆ ಅಥವಾ ದೇಶದ ಏಕತೆಗೆ ವಿರುದ್ಧ ಅಲ್ಲ. ಇದರಿಂದ ರಾಷ್ಟ್ರಧ್ವಜದ ಮೇಲಿನ ಗೌರವ ಕಡಿಮೆ ಆಗುವುದಿಲ್ಲ. ಗೌರವ ಕೊಟ್ಟೇ ಕೊಡುತ್ತೇವೆ.

    ರಾಷ್ಟ್ರಧ್ವಜ ಯಾವಾಗಲೂ ಎತ್ತರದಲ್ಲಿ ಹಾರಾಡಬೇಕು. ಅದನ್ನು ಮೀರಿಸಿ ಮತ್ತೊಂದು ಧ್ವಜವನ್ನು ಹಾರಿಸುವ ಪ್ರಶ್ನೆಯೇ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪ್ರತ್ಯೇಕ ಧ್ವಜ ಹೊಂದುವುದಕ್ಕೆ ಸಂವಿಧಾನದಲ್ಲಿ ಯಾವುದೇ ನಿರ್ಬಂಧ ಇಲ್ಲ.

    ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಕೇ? ನಿಮ್ಮ ಅಭಿಪ್ರಾಯವನ್ನು ಟ್ವಿಟ್ಟರ್ ನಲ್ಲಿ ತಿಳಿಸಿ

     

     

  • ಪಾಕ್ ಅಪ್ರಚೋದಿತ ದಾಳಿಗೆ 8ರ ಬಾಲಕಿ, ಯೋಧ ಬಲಿ

    ಪಾಕ್ ಅಪ್ರಚೋದಿತ ದಾಳಿಗೆ 8ರ ಬಾಲಕಿ, ಯೋಧ ಬಲಿ

    ಶ್ರೀನಗರ: ಪಾಕಿಸ್ತಾನದ ಪದೇ ಪದೇ ಭಾರತದ ಮೇಲೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಇಂದು ಬೆಳಗ್ಗೆ ನಡೆಸಿದ ದಾಳಿಯಲ್ಲಿ ಯೋಧ ಹಾಗೂ 8 ವರ್ಷದ ಬಾಲಕಿ ಬಲಿಯಾಗಿದ್ದಾರೆ.

    ಪಾಕಿಸ್ತಾನದ ಈ ಅಪ್ರಚೋದಿತ ಗುಂಡಿನ ದಾಳಿಗೆ ಜಮ್ಮು ಮತ್ತು ಕಾಶ್ಮೀರದ ಟ್ರಾಲ್ ಗೆ ಸೇರಿದ ಸೈನಿಕ ನಾಯಕ್ ಮುದ್ದಾಸರ್ ಅಹ್ಮದ್ ರಜೌರಿಯಲ್ಲಿ ಹುತಾತ್ಮರಾಗಿದ್ದಾರೆ. ಇನ್ನು ಪೂಂಚ್ ಜಿಲ್ಲೆಯಲ್ಲಿ ಬಾಲಕಿ ಸೈದಾ ಪಾಕಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾಳೆ. ಕದನ ವಿರಾಮ ಉಲ್ಲಂಘನೆಯಲ್ಲಿ ಇಬ್ಬರು ನಾಗರೀಕರು ಗಂಭೀರ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

    ಇಬ್ಬರು ಮಕ್ಕಳ ತಂದೆಯಾಗಿರೋ 37 ವರ್ಷದ ರಜೌರಿ, ಒಬ್ಬ ಪ್ರಾಮಾಣಿಕ ಸೈನಿಕರಾಗಿದ್ದು, ತಮ್ಮ ಕೆಲಸವನ್ನು ತುಂಬಾನೇ ಪ್ರೀತಿಸುತ್ತಿದ್ದರು ಅಂತ ಸೇನೆ ತಿಳಿಸಿದೆ.

    ಇದೇ ಸಂದರ್ಭದಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಭಾರತೀಯ ಸೇನೆಯ ಡಿಜಿಎಂಒ ಎಕೆ ಭಟ್ `ಎಲ್ಲಾ ಅಪ್ರಚೋದಿತ ಗುಂಡಿನ ದಾಳಿಗಳನ್ನು ಪಾಕಿಸ್ತಾನವೇ ನಡೆಸುತ್ತದೆ. ಈ ದಾಳಿಯನ್ನು ಮಟ್ಟ ಹಾಕಲು ಭಾರತಕ್ಕೆ ಹಕ್ಕಿದೆ. ಆ ಮೂಲಕ ಭಾರತ ಪಾಕಿಸ್ತಾನಕ್ಕೆ ತಕ್ಕ ಭಾರತ ಉತ್ತರ ನೀಡುತ್ತದೆ’ ಎಂದು ಪಾಕಿಸ್ತಾನದ ಅಧಿಕಾರಿಗಳಿಗೆ ಹೇಳಿದ್ದಾರೆ.

     

  • ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ.

    ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ.

    ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. ಜಾಸ್ತಿ ಇರಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರವಿಶಾಸ್ತ್ರಿ ಈ ಹಿಂದೆ ಮಾರ್ಗದರ್ಶಕರಾಗಿದ್ದಾಗಲೂ ಅವರಿಗೆ ಸಂಬಳ 7.5 ಕೋಟಿ ರೂ. ಒಳಗಡೆ ಇತ್ತು. ಭಾರತ ಎ ತಂಡ ಮತ್ತು 19 ವರ್ಷದ ಒಳಗಿನ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರಿಗೆ ಮೊದಲ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಿದ್ದರೆ ಎರಡನೇ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಲಾಗಿತ್ತು. ಈಗ ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ದ್ರಾವಿಡ್ ಅವರನ್ನು ಬ್ಯಾಟಿಂಗ್ ಸಲಹೆಗಾರನ್ನಾಗಿ ನೇಮಿಸಲಾಗಿದೆ.

    ಬೌಲಿಂಗ್ ಕೋಚ್ ಆಗಿ ನೇಮಕವಾಗಿರುವ ಜಹೀರ್ ಖಾನ್ ಅವರಿಗೆ ಎಷ್ಟು ಸಂಭಾವನೆ ಎನ್ನುವುದು ನಿಗದಿಯಾಗಿಲ್ಲ. ಅವರು ಎಷ್ಟು ದಿನ ತಂಡದ ಜೊತೆ ಇರುತ್ತಾರೆ ಆ ಅವಧಿಗೆ ಸಂಬಳ ನೀಡಲು ಬಿಸಿಸಿಐ ಮುಂದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಜಹೀರ್ ಖಾನ್ ಅವರು 100 ದಿನಕ್ಕೆ ವಾರ್ಷಿಕವಾಗಿ 4 ಕೋಟಿ ರೂ. ಸಂಭಾವನೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಬಿಸಿಸಿಐ ತಿರಸ್ಕರಿಸಿತ್ತು.

    ಬ್ಯಾಟಿಂಗ್ ಕೋಚ್, ಆಟಗಾರರಿಗೆ ಸಂಬಳ ಎಷ್ಟು?
    ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಮಾರ್ಚ್ ನಲ್ಲಿ ಇವರ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿತ್ತು.

    ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದರು.

    ಮಾರ್ಚ್ ತಿಂಗಳಿನಲ್ಲಿ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

    ಎಷ್ಟಿತ್ತು? ಈಗ ಎಷ್ಟು ಆಗಿದೆ?
    `ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈಗ ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

    ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಎ ದರ್ಜೆ:
    ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

    ಬಿ ದರ್ಜೆ:
    ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

    ಸಿ ದರ್ಜೆ:
    ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.