Tag: india

  • ಒಂದು ಸಾವಿರ ಕೋಟಿ ಕ್ಲಬ್ ಸೇರಿದ ಬಾಹುಬಲಿ: ಯಾವ ದಿನ ಎಷ್ಟು ಕೋಟಿ ರೂ. ಕಲೆಕ್ಷನ್ ಆಗಿತ್ತು?

    ಒಂದು ಸಾವಿರ ಕೋಟಿ ಕ್ಲಬ್ ಸೇರಿದ ಬಾಹುಬಲಿ: ಯಾವ ದಿನ ಎಷ್ಟು ಕೋಟಿ ರೂ. ಕಲೆಕ್ಷನ್ ಆಗಿತ್ತು?

    ಮುಂಬೈ: ಭಾರತೀಯ ಸಿನಿಮಾ ಇತಿಹಾಸದಲ್ಲಿ ಬಾಹುಬಲಿ ಮತ್ತೊಂದು ದಾಖಲೆ ಬರೆದಿದ್ದು, ಬಿಡುಗಡೆಯಾದ 9 ದಿನದಲ್ಲಿ ಬಾಕ್ಸ್ ಆಫೀಸ್ ನಲ್ಲಿ 1 ಸಾವಿರ ಕೋಟಿ ರೂ. ಕಲೆಕ್ಷನ್ ಮಾಡಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕಗೆ ಪಾತ್ರವಾಗಿದೆ.

    ಭಾರತದಲ್ಲಿ 800 ಕೋಟಿಗೂ ಅಧಿಕ ಕಲೆಕ್ಷನ್ ಆಗಿದ್ದರೆ, ವಿದೇಶದಲ್ಲಿ 200 ಕೋಟಿಗೂ ಅಧಿಕ ಕಲೆಕ್ಷನ್ ಆಗಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಲ ಟ್ವೀಟ್ ಮಾಡಿದ್ದಾರೆ.

    ಬಹುಬಲಿ ಯಾವ ದಿನ ಎಷ್ಟು ಕಲೆಕ್ಷನ್ ಆಗಿತ್ತು?
    – ಮೊದಲ ದಿನ 217 ಕೋಟಿ ರೂ.
    – ಎರಡನೇ ದಿನ 382.5 ಕೋಟಿ ರೂ.
    – ಮೂರನೇ ದಿನ 540 ಕೋಟಿ ರೂ.
    – ನಾಲ್ಕನೇಯ ದಿನ 625 ಕೋಟಿ ರೂ.
    – ಐದನೇಯ ದಿನ 710 ಕೋಟಿ ರೂ.
    – ಆರನೇ ದಿನ 778 ಕೋಟಿ ರೂ.
    – ಏಳನೇ ದಿನ 860 ಕೋಟಿ ರೂ.
    – ಎಂಟನೇ ದಿನ 915 ಕೋಟಿ ರೂ.

    ಭಾರತದಲ್ಲಿ ಇದೂವರೆಗೆ ಬಾಕ್ಸ್ ಆಫೀಸ್ ದಾಖಲೆ ಅಮೀರ್ ಖಾನ್ ಅಭಿನಯದ ಪಿಕೆ ಸಿನಿಮಾಗೆ ಇತ್ತು. 2014ರಲ್ಲಿ ಬಿಡುಗಡೆಯಾದ ಈ ಫಿಲ್ಮ್ ಬಾಕ್ಸ್ ಆಫೀಸ್ ನಲ್ಲಿ 792 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಈಗ ಈ ದಾಖಲೆಯನ್ನು ರಾಜಮೌಳಿ ನಿರ್ದೇಶನದ ಬಾಹುಬಲಿ ಬ್ರೇಕ್ ಮಾಡಿದೆ.

    ನಿರ್ಮಾಪಕ ಶೋಭಾ ಯರ್ಲಾಗಡ್ಡ ಅವರು ಬಾಹುಬಲಿ ಭಾಗ 1 ಮತ್ತು ಭಾಗ 2 ನಿರ್ಮಾಣಕ್ಕೆ ಒಟ್ಟು 450 ಕೋಟಿ ರೂ. ಖರ್ಚು ಮಾಡಿದ್ದರು. ಬಾಹುಬಲಿ ಭಾಗ 2015ರ ಜುಲೈ 10 ರಂದು ಬಿಡುಗಡೆಯಾದ ಬಾಹುಬಲಿ ದಿ ಬಿಗ್‍ನಿಂಗ್ ಬಾಕ್ಸ್ ಆಫೀಸ್ ನಲ್ಲಿ 650 ಕೋಟಿ ರೂ. ಕಲೆಕ್ಷನ್ ಮಾಡಿತ್ತು.

    ಇದನ್ನೂ ಓದಿ:ಪ್ರಭಾಸ್, ರಾಣಾ, ಅನುಷ್ಕಾ, ತಮನ್ನಾ, ರಮ್ಯಕೃಷ್ಣಗೆ ಎಷ್ಟು ಸಂಭಾವನೆ ಸಿಕ್ಕಿದೆ?

    ಬಾಹುಬಲಿ ದಾಖಲೆಗಳು
    – ತೆಲುಗು, ತಮಿಳು, ಹಿಂದಿಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಆದ ಮೊದಲ ಸಿನಿಮಾ
    – ಬಿಡುಗಡೆಯಾದ ಒಂದೇ ದಿನದಲ್ಲಿ 100 ಕೋಟಿ ಕಲೆಕ್ಷನ್ ಆದ ಮೊದಲ ಭಾರತೀಯ ಸಿನಿಮಾ
    – ವಿಶ್ವದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಹಣ ಕಲೆಕ್ಷನ್ ಆದ ಮೊದಲ ಭಾರತೀಯ ಸಿನಿಮಾ
    – ಒಟ್ಟು 9 ಸಾವಿರಕ್ಕೂ ಅಧಿಕ ಸ್ಕ್ರೀನ್‍ಗಳಲ್ಲಿ ಬಿಡುಗಡೆಯಾದ ಮೊದಲ ಭಾರತೀಯ ಸಿನಿಮಾ

    ಇದನ್ನೂ ಓದಿ: ಈ ಥಿಯೇಟರ್ ನಲ್ಲಿ ಬಾಹುಬಲಿ ಟಿಕೆಟ್ ಬೆಲೆ 30 ರೂ. ಅಷ್ಟೇ!

    ಇದನ್ನೂ ಓದಿ: ಭಾರತೀಯ ಚಿತ್ರರಂಗದಲ್ಲಿ ಒಂದೇ ದಿನ 10 ದಾಖಲೆಗಳನ್ನು ಬರೆದ ಬಾಹುಬಲಿ-2: ಇಲ್ಲಿದೆ ಪೂರ್ಣ ಪಟ್ಟಿ

  • ಭಾರತದಲ್ಲಿ ಐಫೋನ್‍ಗೆ 58 ಸಾವಿರ ರೂ. ಇದ್ದರೆ, 32 ದೇಶಗಳಲ್ಲಿ ಎಷ್ಟು ಬೆಲೆಗೆ ಮಾರಾಟವಾಗುತ್ತಿದೆ?

    ಭಾರತದಲ್ಲಿ ಐಫೋನ್‍ಗೆ 58 ಸಾವಿರ ರೂ. ಇದ್ದರೆ, 32 ದೇಶಗಳಲ್ಲಿ ಎಷ್ಟು ಬೆಲೆಗೆ ಮಾರಾಟವಾಗುತ್ತಿದೆ?

    ನವದೆಹಲಿ: ಕಡಿಮೆ ಬೆಲೆಯಲ್ಲಿ ಐಫೋನ್ 7 ಮಾರಾಟವಾಗುವ 33 ದೇಶಗಳ ಪೈಕಿ ಭಾರತಕ್ಕೆ 11ನೇ ಸ್ಥಾನ ಸಿಕ್ಕಿದೆ.

    ಅಮೆರಿಕದಲ್ಲಿ 128 ಜಿಬಿ ಆಂತರಿಕ ಮೆಮೊರಿಯ ಐಫೋನಿಗೆ 815 ಡಾಲರ್(ಅಂದಾಜು 52,400 ರೂ.) ಇದ್ದರೆ, ಭಾರತದಲ್ಲಿ 902 ಡಾಲರ್(ಅಂದಾಜು 58,000 ರೂ.) ಇದೆ.

    ಜಪಾನ್ ನಲ್ಲಿ ಅಮೆರಿಕದ ದರದಲ್ಲೇ ಐಫೋನ್ ಸಿಗುತ್ತಿದ್ದು, ಹಾಂಕಾಂಗ್ ನಲ್ಲಿ 821 ಡಾಲರ್ ಇದೆ. ಚೀನಾದಲ್ಲಿ 899 ಡಾಲರ್, ಆಸ್ಟ್ರೇಲಿಯಾದಲ್ಲಿ 926 ಡಾಲರ್, ಫ್ರಾನ್ಸ್ ನಲ್ಲಿ 962 ಡಾಲರ್, ಇಟಲಿಯಲ್ಲಿ 995 ಡಾಲರ್ ಇದೆ.

    ಅತಿ ಹೆಚ್ಚು ದರ ದರ: ಪೋಲಂಡ್ ನಲ್ಲಿ 1,005 ಡಾಲರ್, ಗ್ರೀಸ್ ನಲ್ಲಿ 1,028 ಡಾಲರ್, ರಷ್ಯಾದಲ್ಲಿ 1,086 ಡಾಲರ್, ಬ್ರೆಜಿಲ್ 1,115 ಡಾಲರ್, ಟರ್ಕಿ ಯಲ್ಲಿ 1,200 ಡಾಲರ್ ಬೆಲೆಗೆ ಐಫೋನ್7 ಮಾರಾಟವಾಗುತ್ತಿದೆ.

    Deutsche  ಬ್ಯಾಂಕ್  ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಡಾಲರ್ ಮುಂದೆ ಆಯಾ ದೇಶಗಳ ಕರೆನ್ಸಿ ದರ ಮತ್ತು ತೆರಿಗೆಯಿಂದ ಐಫೋನ್ ದರ ಬದಲಾಗಿದೆ ಎಂದು ತಿಳಿಸಿದೆ.

    ಆಪಲ್ ಐಫೋನ್ 7 ಗುಣ ವೈಶಿಷ್ಟ್ಯಗಳು
    ಬಾಡಿ ಮತ್ತು ಡಿಸ್ಪ್ಲೇ: ಸಿಂಗಲ್ ನ್ಯಾನೋ ಸಿಮ್, 138.3*67.1*7.1 ಮಿ.ಮೀ ಗಾತ್ರ, 138 ಗ್ರಾಂ ತೂಕ, 707 ಇಂಚಿನ ಎಲ್‍ಇಡಿ ಬ್ಯಾಕ್‍ಲಿಟ್ ಐಪಿಎಸ್ ಎಲ್‍ಸಿಡಿ ಕೆಪಾಸಿಟೆಟಿವ್ ಟಚ್‍ಸ್ಕ್ರೀನ್(750*1334 ಪಿಕ್ಸೆಲ್,326 ಪಿಪಿಐ)

    ಪ್ಲಾಟ್‍ಫಾರಂ ಮತ್ತು ಮೆಮೊರಿ: ಐಓಎಸ್ 10, ಆಪಲ್ ಎ10 ಕ್ವಾಡ್ ಕೋರ್ 2.34 GHz ಪ್ರೊಸೆಸರ್, ಪವರ್‍ವಿಆರ್ ಸಿರೀಸ್ 7ಎಕ್ಸ್‍ಟಿ ಪ್ಲಸ್ ಗ್ರಾಫಿಕ್ ಪ್ರೊಸೆಸರ್

    ಮೆಮೊರಿ ಮತ್ತು ಕ್ಯಾಮೆರಾ: ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ, 32/128/256 ಜಿಬಿ ಆಂತರಿಕ ಮೆಮೊರಿ, 2ಜಿಬಿ ರಾಮ್ 12 ಎಂಪಿ ಹಿಂದುಗಡೆ ಕ್ಯಾಮೆರಾ, ಮುಂದುಗಡೆ 7 ಎಂಪಿ ಕ್ಯಾಮೆರಾ

    ಇತರೇ: ಫಿಂಗರ್ ಪ್ರಿಂಟ್ ಸೆನ್ಸರ್, 1960 ಎಂಎಚ್ ತೆಗೆಯಲು ಅಸಾಧ್ಯವಾದ ಲಿಯಾನ್ ಬ್ಯಾಟರಿ

     

  • ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋದಿಂದ ಮತ್ತೊಂದು ಇತಿಹಾಸ: ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆ ಯಶಸ್ವಿ

    ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋದಿಂದ ಮತ್ತೊಂದು ಇತಿಹಾಸ: ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆ ಯಶಸ್ವಿ

    ಶ್ರೀಹರಿಕೋಟಾ: ಕಡಿಮೆ ವೆಚ್ಚದಲ್ಲಿ ಏಕಕಾಲದಲ್ಲಿ 104 ಉಪಗ್ರಹಗಳನ್ನು ಉಡಾಯಿಸಿದ್ದ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ. ಸಾರ್ಕ್ ರಾಷ್ಟ್ರಗಳ ಬಾಂಧವ್ಯವೃದ್ಧಿಗೆ ಎರಡು ವರ್ಷಗಳ ಹಿಂದೆ ಪ್ರಧಾನಿ ಮೋದಿ ಕೊಟ್ಟಿದ್ದ ‘ಸೌತ್ ಏಷ್ಯಾ ಸ್ಯಾಟಲೈಟ್’ ಅನ್ನು  ಜಿಎಸ್‍ಎಲ್‍ವಿ ರಾಕೆಟ್ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

    ಸಂಜೆ 4.57ಕ್ಕೆ ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಉಡಾವಣೆಯಾದ ಜಿಸ್ಯಾಟ್–9  ಉಪಗ್ರಹ ಯಶಸ್ವಿಯಾಗುತ್ತಿದ್ದಂತೆಯೇ ಇಸ್ರೋ ಮತ್ತು ಸಾರ್ಕ್ ರಾಷ್ಟ್ರಗಳ ಪ್ರತಿನಿಧಿಗಳು ಸಂಭ್ರಮಿಸಿದ್ರು. ಪಾಕಿಸ್ತಾನ ಹೊರತುಪಡಿಸಿ ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್, ಶ್ರೀಲಂಕಾ, ಅಫ್ಘಾನಿಸ್ತಾನ ಇದರ ಸೇವೆ ಪಡೆಯಲಿದೆ.

     ಪ್ರಧಾನಿ ಮೋದಿ ಮಾತನಾಡಿ ಇದೊಂದು ಐತಿಹಾಸಿಕ ಹೆಜ್ಜೆ. ಸಾರ್ಕ್ ರಾಷ್ಟ್ರಗಳ ಪರಸ್ಪರ ಅಭಿವೃದ್ಧಿಗೆ ಸಹಕಾರವಾಗಲಿದೆ ಎಂದರೆ, ಸಾರ್ಕ್ ರಾಷ್ಟ್ರಗಳ ಪ್ರಧಾನಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡ್ರು.

    ಉಪಗ್ರಹದ ವಿಶೇಷತೆ ಏನು?
    235 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಉಪಗ್ರಹ 2,230 ಕೆ.ಜಿ ತೂಕ, 50 ಮೀಟರ್ ಉದ್ದ, 12 ವರ್ಷ ಕಾರ್ಯಾವಧಿಯನ್ನು ಹೊಂದಿದೆ. ಇಸ್ರೋದ ಐ-2ಕೆ ಬಸ್ ಮಟ್ಟಕ್ಕೆ ಅನುಗುಣವಾಗಿ ಅಭಿವೃದ್ಧಿಯಾಗಿದ್ದು, ದೂರಸಂಪರ್ಕ, ದೂರಸಂವಹನ, ಡಿಟಿಎಚ್, ವಿಸ್ಯಾಟ್, ದೂರಶಿಕ್ಷಣ ಮತ್ತು ಟೆಲಿ ಮೆಡಿಸಿನ್ ಕ್ಷೇತ್ರಕ್ಕೆ ಉಪಯೋಗವಾಗಲಿದೆ. ಅಷ್ಟೇ ಅಲ್ಲದೇ ಪ್ರಕೃತಿ ವಿಕೋಪ ಸಂಭವಿಸಿದಾಗ ಹಾಟ್‍ಲೈನ್ ಸಂಪರ್ಕ ಮೂಲಕ ಪರಿಹಾರ ಕಾರ್ಯಾಚರಣೆ ನಡೆಸಬಹುದಾಗಿದೆ.

    ಮುಂದಿನ ವರ್ಷದ ಆರಂಭದಲ್ಲಿ ಇಸ್ರೋ ಚಂದ್ರಯಾನ-2 ಉಡಾವಣೆ ಮಾಡಲಿದೆ ಎಂದು ಇಸ್ರೋ ಅಧ್ಯಕ್ಷರಾದ ಎಎಸ್ ಕಿರಣ್ ಕಿಮಾರ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

     

  • ಭಾರತೀಯ ಚಿತ್ರರಂಗದಲ್ಲಿ ಬಾಹುಬಲಿ ಸುನಾಮಿ: ಒಟ್ಟು ಐದು ದಿನದಲ್ಲಿ ಎಷ್ಟು ಕಲೆಕ್ಷನ್ ಆಗಿದೆ?

    ಭಾರತೀಯ ಚಿತ್ರರಂಗದಲ್ಲಿ ಬಾಹುಬಲಿ ಸುನಾಮಿ: ಒಟ್ಟು ಐದು ದಿನದಲ್ಲಿ ಎಷ್ಟು ಕಲೆಕ್ಷನ್ ಆಗಿದೆ?

    ಹೈದರಾಬಾದ್: ಭಾರತೀಯ ಚಿತ್ರ ರಂಗದದಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ಬಾಹುಬಲಿ ಬಿಡುಗಡೆಯಾದ ಐದೇ ದಿನದಲ್ಲಿ ಬಾಕ್ಸ್ ಆಫೀಸ್ ನಲ್ಲಿ ಒಟ್ಟು 710 ಕೋಟಿ ರೂ. ಗಳಿಕೆ ಮಾಡಿದೆ.

    ಭಾರತದಲ್ಲಿ 565 ಕೋಟಿ ರೂ. ಗಳಿಕೆ ಮಾಡಿದರೆ, ವಿದೇಶದಲ್ಲಿ ಒಟ್ಟು 145 ಕೋಟಿ ರೂ. ಗಳಿಕೆ ಮಾಡಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಲ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಬಹುಬಲಿ ಮೊದಲ ದಿನ 217 ಕೋಟಿ ರೂ ಗಳಿಸಿದ್ದರೆ, ಎರಡನೇ ದಿನ 382.5 ಕೋಟಿ ರೂ. ಗಳಿಸಿತ್ತು. ಮೂರನೇ ದಿನ 540 ಕೋಟಿ ರೂ. ಕಲೆಕ್ಷನ್ ಮಾಡಿದ್ದರೆ, ನಾಲ್ಕನೇಯ ದಿನ 625 ಕೋಟಿ ರೂ. ಕಲೆಕ್ಷನ್ ಮಾಡಿತ್ತು.

    ಬಾಹುಬಲಿ ಹಿಂದಿ ನಾಲ್ಕು ದಿನದಲ್ಲಿ ಒಟ್ಟು 168. 25 ಕೋಟಿ ರೂ. ಗಳಿಸಿದರೆ, ಮಂಗಳವಾರ 30 ಕೋಟಿ ಕಲೆಕ್ಷನ್ ಆಗಿದ್ದು, ಒಟ್ಟು ಐದು ದಿನದಲ್ಲಿ 198.25 ಕೋಟಿ ರೂ. ಗಳಿಕೆಗೆ ಮಾಡಿದೆ ಎಂದು ರಮೇಶ್ ಬಲ ತಿಳಿಸಿದ್ದಾರೆ.

    ದಂಗಲ್ ದಾಖಲೆ ಬ್ರೇಕ್:
    ಭಾರತದಲ್ಲಿ 5 ದಿನದಲ್ಲಿ ಇದೂವರೆಗೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆಯ ಅಮೀರ್ ಖಾನ್ ಅಭಿನಯದ ದಂಗಲ್ ಪಾತ್ರವಾಗಿತ್ತು. ದಂಗಲ್ 5 ದಿನದಲ್ಲಿ 387.39 ಕೋಟಿ ಗಳಿಸಿತ್ತು.

    ನಿರ್ಮಾಪಕ ಶೋಭಾ ಯರ್ಲಾಗಡ್ಡ ಅವರು ಬಾಹುಬಲಿ ಭಾಗ 1 ಮತ್ತು ಭಾಗ 2 ನಿರ್ಮಾಣಕ್ಕೆ ಒಟ್ಟು 450 ಕೋಟಿ ರೂ. ಖರ್ಚು ಮಾಡಿದ್ದರು.

    ಇದನ್ನೂ ಓದಿ: ರಾಜಮೌಳಿ ದೇವರು ಕೊಟ್ಟ ಮಗು: ಬಾಹುಬಲಿಗೆ ಗಣ್ಯರ ವಿಮರ್ಶೆ ಹೀಗಿದೆ ನೋಡಿ

    ಇದನ್ನೂ ಓದಿ: ಬಾಹುಬಲಿಗಾಗಿ 5 ವರ್ಷ ಮುಡಿಪಿಟ್ಟ ನಿರ್ದೇಶಕ ರಾಜಮೌಳಿಗೆ ಎಷ್ಟು ಹಣ ಸಿಗುತ್ತೆ ಗೊತ್ತಾ?

  • ಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ ಮಗಳ ಮಾತು

    ಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ ಮಗಳ ಮಾತು

    ನವದೆಹಲಿ: ನನ್ನ ತಂದೆಯ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು ಎಂದು ಪಾಕಿಸ್ತಾನದ ಸೈನಿಕರ ಪೈಶಾಚಿಕ ಕೃತ್ಯದಿಂದ ಹುತಾತ್ಮರಾದ ಯೋಧರೊಬ್ಬರ ಮಗಳು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.

    ಸೋಮವಾರದಂದು ಪಾಕಿಸ್ತಾನದ ಸೈನಿಕರು ಕಾಶ್ಮೀರದಲ್ಲಿ ಭಾರತದೊಳಗೆ ನುಗ್ಗಿ ಇಬ್ಬರು ಯೋಧರನ್ನು ಕೊಂದು ಅವರ ಶಿರಚ್ಛೇದನ ಮಾಡಿದ್ದರು. ಮೃತರಲ್ಲಿ ಬಿಎಸ್‍ಎಫ್ ಯೋಧ ಪ್ರೇಮ್ ಸಾಗರ ಕೂಡ ಒಬ್ಬರಾಗಿದ್ದು, ಅವರ ಮಗಳು ತನ್ನ ತಂದೆಯ ಬಲಿದಾನಕ್ಕೆ ಭಾರತ ಹೇಗೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬುದನ್ನ ಈ ಮಾತುಗಳ ಮೂಲಕ ಹೇಳಿದ್ದಾರೆ.

    ಪಾಕಿಸ್ತಾನಿ ಸೈನಿಕರ ಈ ಅಮಾನವೀಯ ಕೃತ್ಯಕ್ಕೆ ಹುತಾತ್ಮರಾದ ಮತ್ತೊಬ್ಬ ಯೋಧ ಪರಮ್‍ಜೀತ್ ಸಿಂಗ್ ಅವರ ಮೃತದೇಹವನ್ನು ಇಂದು ಪಂಜಾಬ್‍ನ ಸ್ವಗ್ರಾಮ ಟಾರ್ನ್ ಟರಾನ್‍ಗೆ ಕೊಂಡೊಯ್ಯಲಾಯ್ತು. ಆಕ್ರೋಶಗೊಂಡ ಪರಮ್‍ಜೀತ್ ಅವರ ಸಂಬಂಧಿಕರು, ನಾವು ಅವರ ಮುಖವನ್ನು ನೋಡುವವರೆಗೂ ದೇಹವನ್ನು ಅಂತ್ಯಕ್ರಿಯೆ ಮಾಡುವುದಿಲ್ಲ. ಯಾರ ದೇಹ ಇದು? ಬಾಕ್ಸ್‍ನೊಳಗೆ ಮುಚ್ಚಲಾಗಿದೆ ಎಂದು ರಾಷ್ಟ್ರಧ್ವಜವನ್ನು ಹೊದಿಸಿದ್ದ ಶವಪೆಟ್ಟಿಗೆಯನ್ನು ತೋರಿಸುತ್ತಾ ಹೇಳಿ ದುಃಖಿತರಾದ್ರು. ನಮಗೆ ದೇಹವನ್ನು ತೋರುಸುತ್ತಿಲ್ಲವಲ್ಲ ಯಾಕೆ? ಎಂದು ಪ್ರಶ್ನಿಸಿದ್ರು.

    ಸೋಮವಾರ ಬೆಳಿಗ್ಗೆ 8.30ರ ವೇಳೆಗೆ ಪೂಂಚ್ ಸೆಕ್ಟರ್‍ನ ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಯೋಧರು ಎರಡು ಪೋಸ್ಟ್‍ಗಳ ನಡುವೆ ಗಸ್ತು ತಿರುಗುತ್ತಿದ್ದ ವೇಳೆ ಅವರ ಮೇಲೆ ಪಾಕಿಸ್ತಾನಿಗಳು ಮಾರ್ಟರ್ ಬಾಂಬ್‍ಗಳಿಂದ ದಾಳಿ ನೆಡೆಸಿದ್ದರು. ಈ ವೇಳೆ ಇಬ್ಬರು ಯೋಧರು ರಕ್ಷಣೆಗಾಗಿ ಓಡಿದ್ರು. ಇನ್ನುಳಿದ ಇಬ್ಬರ ಮೇಲೆ ಪಾಕಿಸ್ತಾನಿಗಳು ದಾಳಿ ಮಾಡಿ ಶಿರಚ್ಛೇದನ ಮಾಡಿದ್ದರು.

  • ಪಾಕ್ ಸೇನೆಯಿಂದ ಪೈಶಾಚಿಕ ಕೃತ್ಯ – ಇಬ್ಬರು ಭಾರತೀಯ ಯೋಧರ ಶಿರಚ್ಛೇದ

    ಪಾಕ್ ಸೇನೆಯಿಂದ ಪೈಶಾಚಿಕ ಕೃತ್ಯ – ಇಬ್ಬರು ಭಾರತೀಯ ಯೋಧರ ಶಿರಚ್ಛೇದ

    ನವದೆಹಲಿ: ಭಾರತೀಯ ಯೋಧರ ಸಹನೆ ಪರೀಕ್ಷಿಸಿ ಕಾಲ್ಕೆರದು ಪದೇ ಪದೇ ಕದನವಿರಾಮ ಉಲ್ಲಂಘಿಸುವ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿಸೆಪ್ಟೆಂಬರ್ 29, 2016ರಲ್ಲಿ `ಸರ್ಜಿಕಲ್ ಸ್ಟ್ರೈಕ್’ ಮಾಡಿದ್ರೂ ಪಾಕಿಸ್ತಾನಕ್ಕೆ ಬುದ್ಧಿ ಬಂದಿಲ್ಲ. ಸೋಮವಾರ ಬೆಳಗ್ಗೆ ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಗಡಿ ನಿಯಂತ್ರಣ ರೇಖೆ ದಾಟಿ ಭಾರತೀಯ ಸೇನೆಯ ಇಬ್ಬರು ಯೋಧರನ್ನು ಬರ್ಬರ, ಅಮಾನುಷವಾಗಿ ಕೊಂದಿದೆ.

    ಯೋಧರ ಶಿರಚ್ಛೇದನ ಮಾಡಿ ದೇಹವನ್ನು ತುಂಡರಿಸಿ ಪೈಶಾಚಿಕವಾಗಿ ನಡೆದುಕೊಂಡಿದೆ. ಮಧ್ಯಾಹ್ನ ಗಸ್ತಿನಲ್ಲಿ ಯೋಧರಿಗೆ ಕೃಷ್ಣಘಾಟ್ ಬಳಿ ಶಿರಚ್ಛೇದನವಾಗಿ ಬಿದ್ದಿದ್ದ ಸೇನಾ ಕಿರಿಯ ಕಮಾಂಡೆಂಟ್ ಪರಮ್‍ಜಿತ್ ಸಿಂಗ್ ಹಾಗೂ ಬಿಎಸ್‍ಎಫ್‍ನ ಹೆಡ್ ಕಾನ್ಸಟೇಬಲ್ ಪರಮ್ ಸಾಗರ್ ಎಂಬ ಇಬ್ಬರು ಯೋಧರ ಶವ ಪತ್ತೆಯಾಗಿದೆ.

    ಈ ಇಬ್ಬರು ನೆಲ ಬಾಂಬ್ ನಿಷ್ಕ್ರಿಯಗೊಳಿಸಲು ಎಲ್‍ಒಸಿಯಲ್ಲಿ ಪಹರೆ ನಡೆಸ್ತಿದ್ರು. ಇನ್ನು, ಪಾಕಿಸ್ತಾನದ ಕೃತ್ಯವನ್ನು ಅತ್ಯುಘ್ರವಾಗಿ ಖಂಡಿಸಿರೋ ಸೇನೆ, ಶೀಘ್ರದಲ್ಲೇ ತಕ್ಕ ಉತ್ತರ ಕೊಡೋದಾಗಿ ಎಚ್ಚರಿಕೆ ರವಾನಿಸಿದೆ.

    ಅಂದಹಾಗೆ, ನಿನ್ನೆ ತಾನೇ ಎಲ್‍ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಖಮರ್ ಭಜ್ವಾ ಭೇಟಿ ನೀಡಿ ತಮ್ಮ ಜಾಗವನ್ನು ಉಳಿಸಿಕೊಳ್ಳೋಣ. ನೀವು ಹೋರಾಡಿ ಅಂತಾ ಅವರ ಸೈನಿಕರಿಗೆ ಹುರಿದುಂಬಿಸಿದ್ರು. ಈ ಭೇಟಿಯ ಬೆನ್ನಲ್ಲೇ ಪಾಕ್ ಸೈನಿಕರು ನಮ್ಮ ಭಾರತೀಯ ಸೈನಿಕರ ಶಿರಚ್ಛೇದನ ಮಾಡಿದ್ದಾರೆ.

    ಘಟನೆ ಬಗ್ಗೆ ಪ್ರಧಾನಿ ಮೋದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮಾಹಿತಿ ನೀಡಿದ್ದಾರೆ. ಪಾಕಿಸ್ಥಾನಕ್ಕೆ ತಿರುಗೇಟು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನು, ಪಾಕಿಸ್ತಾನ ತನ್ನ ಅವಸಾನವನ್ನ ಆಹ್ವಾನಿಸಿಕೊಳ್ತಿದೆ ಅಂತ ರಾಜಕೀಯ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

  • ಭಾರತೀಯ ಚಿತ್ರರಂಗದ ಎಲ್ಲ ದಾಖಲೆ ಉಡೀಸ್: ಮೂರು ದಿನದ ಕಲೆಕ್ಷನ್ ಎಷ್ಟು? ಯಾವ ದೇಶದಲ್ಲಿ ಎಷ್ಟು ಕಲೆಕ್ಷನ್ ಆಗಿದೆ?

    ಭಾರತೀಯ ಚಿತ್ರರಂಗದ ಎಲ್ಲ ದಾಖಲೆ ಉಡೀಸ್: ಮೂರು ದಿನದ ಕಲೆಕ್ಷನ್ ಎಷ್ಟು? ಯಾವ ದೇಶದಲ್ಲಿ ಎಷ್ಟು ಕಲೆಕ್ಷನ್ ಆಗಿದೆ?

     

    ಮುಂಬೈ: ರಾಜಮೌಳಿ ನಿರ್ದೇಶನದ ಬಾಹುಬಲಿ ಬಾಕ್ಸ್ ಆಫೀಸ್ ಕಲೆಕ್ಷನ್ ದಾಖಲೆ ಮುಂದುವರಿದಿದ್ದು, ರಿಲೀಸ್ ಆದ ಮೂರನೇ ದಿನದಲ್ಲಿ 500 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿದೆ.

    2015ರಲ್ಲಿ ಬಿಡುಗಡೆಯಾದ ಬಾಹುಬಲಿ ಭಾಗ ಒಂದು ಬಾಕ್ಸ್ ಆಫೀಸ್ ನಲ್ಲಿ ಒಟ್ಟು 650 ಕೋಟಿ ರೂ. ಕಲೆಕ್ಷನ್ ಮಾಡಿದ್ದರೆ, ಭಾಗ ಎರಡು ಮೂರೇ ದಿನದಲ್ಲಿ 540 ಕೋಟಿ ಕಲೆಕ್ಷನ್ ಮಾಡಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಲ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
    .

    ವಿಶ್ವದೆಲ್ಲೆಡೆ 9 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಹುಬಲಿ ಮೊದಲ ದಿನ ಭಾರತದಲ್ಲಿ 121 ಕೋಟಿ ರೂ. ಕಲೆಕ್ಷನ್ ಮಾಡಿದರೆ, ಒಟ್ಟು 217 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಎರಡನೇ ದಿನ ಭಾರತದಲ್ಲಿ 285 ಕೋಟಿ ರೂ. ಕಲೆಕ್ಷನ್ ಮಾಡಿದರೆ, ಒಟ್ಟು 382 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ರಮೇಶ್ ಬಲ ತಿಳಿಸಿದ್ದಾರೆ.

    ಅಂದಾಜು 250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬಾಹುಬಲಿ ಈಗಾಗಲೇ ಸ್ಯಾಟಲೈಟ್ ಮತ್ತು ವಿತರಣೆ ಹಕ್ಕು ಮೂಲಕ 500 ಕೋಟಿ ರೂ. ಹಣವನ್ನು ಪಡೆದುಕೊಂಡಿದೆ.

    ಮೂರು ದಿನಗಳಲ್ಲಿ 500 ಕೋಟಿ ರೂ. ಗಳಿಸಿದ ಬಾಹುಬಲಿ ಸೋಮವಾರವೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಷ್ಟೇ ಅಲ್ಲದೇ ಮೇ 1 ಕಾರ್ಮಿಕರ ದಿನಾಚರಣೆಯಾಗಿರುವುದರಿಂದ ಉದ್ಯೋಗಿಗಳಿಗೆ ರಜೆ ಸಿಕ್ಕಿದ್ದು ಮತ್ತಷ್ಟು ಕಲೆಕ್ಷನ್ ಆಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ

    ವಿದೇಶದಲ್ಲಿ ಹಿಟ್ ಆಗಿದ್ದು ಹೇಗೆ?
    ಅಮೆರಿಕದಲ್ಲಿ ಉದ್ಯೋಗ ಮಾಡುತ್ತಿರುವ ಕೆಲ ಭಾರತೀಯರು ಸಂಪೂರ್ಣ ಸ್ಕ್ರೀನ್ ಗಳನ್ನು ಬುಕ್ ಮಾಡಿದ್ದು, ಕುಟುಂಬ ಸಮೇತರವಾಗಿ ಬಾಹುಬಲಿಯನ್ನು ವೀಕ್ಷಿಸುತ್ತಿದ್ದಾರೆ. ಹೀಗಾಗಿ ಅಮೆರಿಕದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ವಾರಾಂತ್ಯದಲ್ಲಿ ಅಮೆರಿಕ ಕೆನಡಾದಲ್ಲಿ 65 ಕೋಟಿ ರೂ., ಯುಎಇ 24 ಕೋಟಿ ರೂ., ಆಸ್ಟ್ರೇಲಿಯಾ 6.8 ಕೋಟಿ ರೂ., ಇಂಗ್ಲೆಂಡ್ 3.2 ಕೋಟಿ ರೂ., ನ್ಯೂಜಿಲೆಂಡ್ 1.5 ಕೋಟಿ ರೂ. ಕಲೆಕ್ಷನ್ ಮಾಡಿದೆ. ಬಹರೈನ್ 1.38 ಕೋಟಿ ರೂ., ಕತಾರ್ 1.42 ಕೋಟಿ ರೂ., ಒಮನ್ 97 ಲಕ್ಷ ರೂ. ಕಲೆಕ್ಷನ್ ಮಾಡಿದೆ.

    ಹಿಂದಿ ಕಲೆಕ್ಷನ್ ಎಷ್ಟು?
    ಏ. 28 – 41 ಕೋಟಿ ರೂ.
    ಏ. 29 – 42 ಕೋಟಿ ರೂ.
    ಏ. 30 – 46 ಕೋಟಿ ರೂ.
    ಒಟ್ಟು 129 ಕೋಟಿ ರೂ.

    ಎಸ್‍ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ರಮ್ಯಕೃಷ್ಣ, ಅನುಷ್ಕ ಶೆಟ್ಟಿ, ಸತ್ಯರಾಜ್, ನಾಸೀರ್, ತಮನ್ನಾ ಅಭಿನಯಿಸಿದ್ದಾರೆ. ತೆಲುಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಯಲ್ಲಿ ಏಪ್ರಿಲ್ 28ರಂದು ಬಿಡುಗಡೆಯಾಗಿದೆ.

    ಇದನ್ನೂ ಓದಿ: ಭಾರತೀಯ ಚಿತ್ರರಂಗದಲ್ಲಿ ಒಂದೇ ದಿನ 10 ದಾಖಲೆಗಳನ್ನು ಬರೆದ ಬಾಹುಬಲಿ-2: ಇಲ್ಲಿದೆ ಪೂರ್ಣ ಪಟ್ಟಿ

    ಇದನ್ನೂ ಓದಿ: ಮೊದಲ ದಿನವೇ ನೂರು ಕೋಟಿ ಬಾಚಿದ ಬಾಹುಬಲಿ: ಕರ್ನಾಟಕದಲ್ಲಿ ಎಷ್ಟು ಕಲೆಕ್ಷನ್? ಉಳಿದ ಕಡೆ ಎಷ್ಟು?

    ಇದನ್ನೂ ಓದಿ: ಬೆಂಗ್ಳೂರಿನಲ್ಲಿ 1200 ರೂ, ಆಂಧ್ರದಲ್ಲಿ ಬಾಹುಬಲಿ-2 ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

    ಇದನ್ನೂ ಓದಿ: ಟಿಕೆಟ್ ಬುಕ್ಕಿಂಗ್‍ನಲ್ಲೂ ಹೊಸ ದಾಖಲೆ: 24 ಗಂಟೆಯಲ್ಲಿ ಎಷ್ಟು ಬಾಹುಬಲಿ ಟಿಕೆಟ್ ಮಾರಾಟವಾಗಿದೆ ಗೊತ್ತಾ?

    ಇದನ್ನೂ ಓದಿ: ಕಟ್ಟಪ್ಪ ಬಾಹುಬಲಿಯನ್ನ ಕೊಂದಿದ್ದು ಏಕೆ? – ಮಿಲಿಯನ್ ಡಾಲರ್ ಪ್ರಶ್ನೆಗೆ ಇಲ್ಲಿದೆ ಉತ್ತರ

     

  • 2024ರ ವೇಳೆಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಸಿ: ನೀತಿ ಆಯೋಗ

    2024ರ ವೇಳೆಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಸಿ: ನೀತಿ ಆಯೋಗ

    ನವದೆಹಲಿ: 2024ರಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಿ ಎಂದು ನೀತಿ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ಚುನಾವಣೆಗಳು ಮುಕ್ತವಾಗಿ ನಡೆಯಬೇಕು. ಅಷ್ಟೇ ಅಲ್ಲದೇ ಕಡಿಮೆ ಅವಧಿಯಲ್ಲಿ ಪ್ರಚಾರ ನಡೆಸಬೇಕು. 2024ರ ವೇಳೆಗೆ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸಬಹುದು ಎಂದು ತನ್ನ ಮೂರು ವರ್ಷದ ಕಾರ್ಯ ಯೋಜನೆಯಲ್ಲಿ ನೀತಿ ಆಯೋಗ ಹೇಳಿದೆ.

    ಈ ಸಲಹೆಯನ್ನು ಪರಿಗಣಿಸಿ ಕಾರ್ಯರೂಪಕ್ಕೆ ತರಲು ಸುಗಮ ದಾರಿಯ ವ್ಯವಸ್ಥೆ ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ತಿಳಿಸಿದೆ.

    ಇದೆ ವೇಳೆ ಸರ್ಕಾರಿ ಕೆಲಸವನ್ನು ಹೊರಗುತ್ತಿಗೆ ನೀಡಿ ಖಾಸಗಿ ವಲಯದಲ್ಲಿರುವ ಪ್ರತಿಭೆಗಳನ್ನು ವ್ಯವಸ್ಥೆಗೆ ತನ್ನಿ ಎಂದು ಸರ್ಕಾರಕ್ಕೆ ಸಲಹೆ ನೀಡಿದೆ. ನೀತಿ ಆಯೋಗದ ಈ ಸಲಹೆಗೆ ಐಎಎಸ್ ಅಧಿಕಾರಿಗಳಿಂದ ವಿರೋಧ ವ್ಯಕ್ತವಾಗಿದೆ.

    ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ವಿಧಾನ ಸಭೆ ಮತ್ತು ಲೋಕಸಭಾ ಚುನಾವಣೆಗಳು ಒಂದೇ ಬಾರಿಗೆ ನಡೆದರೆ ಉತ್ತಮ ಎಂದು ಹೇಳಿದ್ದರು.

    ಪ್ರಧಾನಿ ನರೇಂದ್ರಮೋದಿ ಈ ಹಿಂದೆ ಈ ವಿಚಾರವನ್ನು ಪ್ರಸ್ತಾಪಿಸಿದ್ದು ಎಲ್ಲ ಪಕ್ಷಗಳು ಈ ವಿಚಾರದ ಬಗ್ಗೆ ಒಗ್ಗಟ್ಟಾಗಿ ಒಂದೇ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಕೇಳಿಕೊಂಡಿದ್ದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಚುನಾವಣೆ ಒಟ್ಟಿಗೆ ನಡೆದರೆ ಉತ್ತಮ ಎನ್ನುವ ಅಭಿಪ್ರಾಯವನ್ನು ಈ ಹಿಂದೆ ವ್ಯಕ್ತಪಡಿಸಿದ್ದರು.

    ಲಾಭ ಏನು?
    ಪ್ರಸ್ತುತ ದೇಶದಲ್ಲಿ ಲೋಕಸಭಾ ಮತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಪ್ರತ್ಯೇಕವಾಗಿ ನಡೆಯುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಸರ್ಕಾರಗಳ ಮಂತ್ರಿಗಳು ಪ್ರಚಾರ ಕೈಗೊಳ್ಳುವುದರಿಂದ ಆಡಳಿತ ಕೆಲಸಗಳು ಬಾಕಿಯಾಗುತ್ತದೆ. ಅಷ್ಟೇ ಅಲ್ಲದೇ ಸರ್ಕಾರದ ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಬೇಕಾಗುತ್ತದೆ. ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಹೊಸದಾಗಿ ಯೋಜನೆಗಳನ್ನು ಪ್ರಕಟಿಸಲು ಆಗುವುದಿಲ್ಲ. ಈ ಎಲ್ಲ ಕಾರಣಗಳಿಂದ ಸರ್ಕಾರದ ವೆಚ್ಚ, ರಾಜಕೀಯ ಪಕ್ಷಗಳ ಖರ್ಚು ಮತ್ತು ಸಮಯವನ್ನು ಉಳಿಸಲು ಒಂದೇ ಬಾರಿಗೆ ಎರಡು ಚುನಾವಣೆಗಳನ್ನು ಒಟ್ಟಾಗಿ ನಡೆಸುವುದು ಉತ್ತಮ ಎನ್ನುವ ಅಭಿಪ್ರಾಯ ಕೇಳಿಬಂದಿದೆ.

    ಇದನ್ನೂ ಓದಿ: 2019ರಲ್ಲಿ ಬಿಜೆಪಿ ಸೋಲಿಸಲು ಲಾಲೂ ಪ್ರಸಾದ್ ಯಾದವ್ ಐಡಿಯಾ

  • ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಗೂಗಲ್ 2016ರಲ್ಲಿ ನೀಡಿದ ಸಂಬಳ ಎಷ್ಟು ಗೊತ್ತೆ?

    ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಗೂಗಲ್ 2016ರಲ್ಲಿ ನೀಡಿದ ಸಂಬಳ ಎಷ್ಟು ಗೊತ್ತೆ?

    ಕ್ಯಾಲಿಫೋರ್ನಿಯಾ: ಗೂಗಲ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮೂಲದ 44 ವರ್ಷದ ಸುಂದರ್ ಪಿಚೈ ಅವರಿಗೆ 200 ದಶಲಕ್ಷ ಡಾಲರ್(ಅಂದಾಜು 1,285 ಕೋಟಿ ರೂ.) ಸಂಭಾವನೆ ನೀಡಿದೆ.

    2015ರ ಸಂಬಳಕ್ಕೆ ಹೋಲಿಸಿದರೆ ಸಂಬಳ ಡಬಲ್ ಆಗಿದೆ. 2015ರಲ್ಲಿ ವಾರ್ಷಿಕ ಪರಿಹಾರ ಮೊತ್ತ ಸೇರಿದಂತೆ 6,50,000 ಡಾಲರ್ ಸಂಬಳ ಸಿಕ್ಕಿತ್ತು. 2015ರಲ್ಲಿ ಷೇರು ರೂಪದಲ್ಲಿ 99.8 ದಶಲಕ್ಷ ಡಾಲರ್ ಪಡೆದಿದ್ದ ಸುಂದರ್ ಪಿಚೈ ಅವರು 2016ರಲ್ಲಿ 198.7 ದಶಲಕ್ಷ ಡಾಲರ್ ಹಣವನ್ನು ಪಡೆದಿದ್ದಾರೆ.

    ಕಂಪೆನಿಯ ಪರವಾಗಿ ಉತ್ತಮ ಉತ್ಪನ್ನವನ್ನು ಹೊರ ತಂದಿದ್ದಕ್ಕೆ ಗೂಗಲ್ ಸಂಬಳವನ್ನು ಏರಿಕೆ ಮಾಡಿದೆ ಎಂದು ಸಿಎನ್‍ಎನ್ ವರದಿ ಮಾಡಿದೆ.

    2016ರಲ್ಲಿ ಗೂಗಲ್ ಹೊಸ ಸ್ಮಾರ್ಟ್ ಫೋನ್, ವರ್ಚುವಲ್ ರಿಯಾಲಿಟಿ ಹೆಡ್ ಸೆಟ್, ರೂಟರ್, ವಾಯ್ಸ್ ಆಧಾರಿತ ಸ್ಪೀಕರ್ ಬಿಡುಗಡೆ ಮಾಡಿತ್ತು. ಈ ಎಲ್ಲ ಕೆಲಸಕ್ಕೆ ಗೂಗಲ್ ಪಿಚೈ ಸಂಬಳವನ್ನು ಭಾರೀ ಏರಿಕೆ ಮಾಡಿದೆ.

    ಯಾರು ಸುಂದರ್ ಪಿಚೈ:
    ಸುಂದರ್ ಪಿಚೈ ಭಾರತೀಯ ಮೂಲದ ಅಮೆರಿಕದ ಕಂಪ್ಯೂಟರ್ ಎಂಜಿನಿಯರ್. ಮೂಲತಃ ಚೆನ್ನೈರವರಾದ ಸುಂದರ್ ಇಲ್ಲಿಯವರಗೆ ಗೂಗಲ್ ಕ್ರೋಮ್,ಆಂಡ್ರಾಯ್ಡ್ ಅಪ್ಲಿಕೇಶನ್, ಮತ್ತು ಗೂಗಲ್ ಡ್ರೈವ್ ವಿಭಾಗದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದರು. 2004ರಲ್ಲಿ ಗೂಗಲ್‍ಗೆ ಸೇರಿದ ಸುಂದರ್, ಖರಗ್‍ಪುರ್ ಐಐಟಿಯಿಂದ ಬಿ.ಟೆಕ್ ಪದವಿ,ಸ್ಟಾನ್‍ಫೋರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ ಪದವಿಗಳಿಸಿದ್ದಾರೆ. ಮೈಕ್ರೋ ಸಾಫ್ಟ್ ಸಿಇಒ ಆಗಿ ಸತ್ಯ ನಾಡೆಲ್ಲಾ ನೇಮಕವಾದ ಬಳಿಕ ಆಗಸ್ಟ್ 10, 2015ರಂದು ಪಿಚೈ ಅವರನ್ನು ಗೂಗಲ್ ಸಿಇಒ ಆಗಿ ನೇಮಕಗೊಳಿಸಿತ್ತು.

  • ಟಿಕೆಟ್ ಬುಕ್ಕಿಂಗ್‍ನಲ್ಲೂ ಹೊಸ ದಾಖಲೆ: 24 ಗಂಟೆಯಲ್ಲಿ ಎಷ್ಟು ಬಾಹುಬಲಿ ಟಿಕೆಟ್ ಮಾರಾಟವಾಗಿದೆ ಗೊತ್ತಾ?

    ಟಿಕೆಟ್ ಬುಕ್ಕಿಂಗ್‍ನಲ್ಲೂ ಹೊಸ ದಾಖಲೆ: 24 ಗಂಟೆಯಲ್ಲಿ ಎಷ್ಟು ಬಾಹುಬಲಿ ಟಿಕೆಟ್ ಮಾರಾಟವಾಗಿದೆ ಗೊತ್ತಾ?

    ನವದೆಹಲಿ: ಈಗಾಗಲೇ ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುವ ಮೂಲಕ ಹೊಸ ದಾಖಲೆ ಬರೆಯಲಿರುವ ಬಾಹುಬಲಿ ಈಗ ಟಿಕೆಟ್ ಬುಕ್ಕಿಂಗ್ ನಲ್ಲೂ ದಾಖಲೆ ಬರೆದಿದೆ.

    ‘ಬುಕ್‍ಮೈಶೋ’ದಲ್ಲಿ ಅತಿ ಹೆಚ್ಚು ಟಿಕೆಟ್ ಬುಕ್ ಆದ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಉತ್ತರ ಭಾರತದಲ್ಲಿ ಬುಕ್ಕಿಂಗ್ ಓಪನ್ ಆದ 24 ಗಂಟೆಯಲ್ಲೇ 10 ಲಕ್ಷ ಟಿಕೆಟ್ ಮಾರಾಟವಾಗಿದೆ.

    ಬುಕ್‍ಮೈ ಶೋದಲ್ಲಿ ಇದೂವರೆಗೆ ರಿಲೀಸ್ ಗೆ ಮೊದಲೇ ಅತಿಹೆಚ್ಚು ಟೆಕೆಟ್ ಖರೀದಿಯಾಗಿದ್ದು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರಕ್ಕೆ. ಈಗ ರಾಜಮೌಳಿ ನಿರ್ದೇಶನದ ಬಾಹುಬಲಿ ದಂಗಲ್ ದಾಖಲೆಯನ್ನು ಬ್ರೇಕ್ ಮಾಡಿದೆ.

    ಸಿಂಗಲ್ ಸ್ಕ್ರೀನ್ ಸಿನಿಮಾದಲ್ಲಿ ಏಪ್ರಿಲ್ 22ರಿಂದ ಬುಕ್ಕಿಂಗ್ ಓಪನ್ ಆದರೆ, ಮಲ್ಟಿಪ್ಲೆಕ್ಸ್ ಗಳಲ್ಲಿ ಏ.24ರಿಂದ ಓಪನ್ ಆಗಿದೆ. ತೆಲುಗು, ತಮಿಳು, ಹಿಂದಿ, ಮಲೆಯಾಳಂ ನಾಲ್ಕು ಭಾಷೆಯಲ್ಲಿ ಈ ಸಿನಿಮಾದ 10 ಲಕ್ಷಕ್ಕೂ ಅಧಿಕ ಟಿಕೆಟ್‍ಗಳು ಬಿಡುಗಡೆಗೂ ಮೊದಲೇ ಮಾರಾಟವಾಗಿದೆ ಎಂದು ಸಿನಿ ಮಾರುಕಟ್ಟೆಯ ವಿಶ್ಲೇಷಕ ಶ್ರೀಧರ್ ಪಿಳ್ಳೈ ಎಂಬವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಬಾಹುಬಲಿ ಮೊದಲ ದಿನ 100 ಕೋಟಿ ರೂ. ಕಲೆಕ್ಷನ್ ಮಾಡಿದರೆ, ವಾರಾಂತ್ಯಕ್ಕೆ ಒಟ್ಟು 300-350 ರೂ. ಕಲೆಕ್ಷನ್ ಮಾಡಬಹುದು. ಮೊದಲ ವಾರದಲ್ಲಿ ಒಟ್ಟು 500 ಕೋಟಿ ರೂ. ಕಲೆಕ್ಷನ್ ಆಗಬಹುದು ಎಂದು ಅಂದಾಜಿಸಿದ್ದಾರೆ.

    ಆಂಧ್ರಪ್ರದೇಶ ಮತ್ತು ತೆಲಂಗಣಾ ಸರ್ಕಾರ ಸಿಂಗಲ್ ಸ್ಕ್ರೀನ್ ಟಿಕೆಟ್‍ಗೆ 160 ರೂ. ಮಲ್ಟಿಪ್ಲೆಕ್ಸ್ ಗೆ 200 ರೂ. ದರವನ್ನು ಏರಿಸಲು ಅನುಮತಿ ನೀಡಿದೆ. ಕರ್ನಾಟಕದಲ್ಲೂ ಈಗಾಗಲೇ ಟಿಕೆಟ್‍ಗಳು ಸೋಲ್ಡ್ ಔಟ್ ಆಗಿರುವ ಕಾರಣ ದಕ್ಷಿಣ ಭಾರತದಲ್ಲಿ ಉತ್ತಮ ಕಲೆಕ್ಷನ್ ಮಾಡುವ ಸಾಧ್ಯತೆಯಿದೆ.

    ಶುಕ್ರವಾರ ಬಿಡುಗಡೆಯಾಗಬೇಕಾದ ಬಾಹುಬಲಿ ದೇಶದ ಹಲವೆಡೆ ಗುರುವಾರ ರಾತ್ರಿಯೇ ಬಿಡುಗಡೆಯಾಗುತ್ತಿದೆ. ಬೆಗಳೂರಿನಲ್ಲಿ ರಾತ್ರಿ ತೆಲುಗು ಭಾಷೆಯಲ್ಲಿರುವ ಚಿತ್ರ 52 ಸ್ಕ್ರೀನ್ ಗಳಲ್ಲಿ ಬಿಡುಗಡೆಯಾದರೆ 9 ಪರದೆಯಲ್ಲಿ ತಮಿಳು ಬಾಹುಬಲಿ ತೆರೆ ಕಾಣಲಿದೆ. ಹಿಂದಿಯಲ್ಲಿ 20 ಪರದೆಯಲ್ಲಿ ಬಿಡುಗಡೆಯಾಗುತ್ತಿದೆ.

    ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ!

     

    ಇದನ್ನೂ ಓದಿ:  ಮತ್ತೊಂದು ದಾಖಲೆ: ಎಷ್ಟು ಸ್ಕ್ರೀನ್ ಗಳಲ್ಲಿ ಬಾಹುಬಲಿ ಬಿಡುಗಡೆಯಾಗಲಿದೆ ಗೊತ್ತಾ?