Tag: indian air force

  • ಅಮೆರಿಕ ಮಷಿನ್ ಕೈಕೊಟ್ಟ ನಂತರ 41 ಕಾರ್ಮಿಕರ ರಕ್ಷಣೆಗೆ ಧಾವಿಸಿದ ವಾಯುಸೇನೆ

    ಅಮೆರಿಕ ಮಷಿನ್ ಕೈಕೊಟ್ಟ ನಂತರ 41 ಕಾರ್ಮಿಕರ ರಕ್ಷಣೆಗೆ ಧಾವಿಸಿದ ವಾಯುಸೇನೆ

    ಡೆಹ್ರಾಡೂನ್: ಕಳೆದ 15 ದಿನಗಳಿಂದ ಉತ್ತರಕಾಶಿಯ (Uttarkashi) ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ ಸುರಂಗದಲ್ಲಿ (Silkyara Tunnel) ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಭಾರತೀಯ ಸೇನೆ ಕೈ ಜೋಡಿಸಿದೆ. ವಾಯುಪಡೆ (Indian Air Force) ಡಿಆರ್‌ಡಿಒ ಉಪಕರಣಗಳನ್ನು ತೆಗೆದುಕೊಂಡು ಘಟನಾ ಸ್ಥಳಕ್ಕೆ ತೆರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆಗರ್ ಯಂತ್ರದ ಬ್ಲೇಡ್‍ಗಳು ಅವಶೇಷಗಳ ಅಡಿ ಸಿಲುಕಿದ ಬಳಿಕ, ಸಿಕ್ಕಿಬಿದ್ದ 41 ಕಾರ್ಮಿಕರ ರಕ್ಷಣೆಗೆ ಕೊನೆಯ ಮಾರ್ಗವಾಗಿ ಕೈಯಿಂದ ಕೊರೆಯಲು ತಯಾರಿ ನಡೆಸಲಾಗಿದೆ. ಮಾನವ ಸಂಪನ್ಮೂಲ ಬಳಸಿ ಸುರಂಗದ 10-15 ಮೀಟರ್‍ಗಳನ್ನು ಕೊರೆಯಲು ಸುಮಾರು 18 ಗಂಟೆಗಳ ಕಾಲ ತೆಗೆದುಕೊಳ್ಳಲಿದೆ. ಇದಕ್ಕಾಗಿ ಭಾರತೀಯ ಸೇನೆ, ಕೇಂದ್ರ ಮತ್ತು ರಾಜ್ಯದ ಏಜೆನ್ಸಿಗಳು ಸೇರಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

    ಅವಶೇಷಗಳ ಅಡಿ ಸಿಲುಕಿರುವ ಆಗರ್ ಯಂತ್ರದ ಭಾಗಗಳನ್ನು ಕತ್ತರಿಸಿ ತೆಗೆಯಲು ಭಾನುವಾರ ಹೈದರಾಬಾದ್‍ನಿಂದ ಪ್ಲಾಸ್ಮಾ ಕಟ್ಟರ್ ತರಿಸಿ ಯತ್ನಿಸಲಾಗಿದೆ. ಅಲ್ಲದೇ ಯಂತ್ರದ ಮೂಲಕ ಕಾರ್ಯಾಚರಣೆ ಮಾಡುವುದನ್ನು ನಿಲ್ಲಿಸಿ, ಕಾರ್ಮಿಕರನ್ನು ಕರತರಲು ಪೈಪ್‍ನ್ನು ಕೈಯ್ಯಾರೆ ತಳ್ಳಲಾಗುತ್ತಿದೆ. ಇದರೊಂದಿಗೆ ಲಂಬವಾಗಿ ಕೊರೆಯಲು ಒಂದು ಯಂತ್ರ ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅವಶೇಷಗಳ ಅಡಿ ಸಿಲುಕಿರುವ ಕಾರ್ಮಿಕರಿಗೆ ಪೈಪ್‍ಗಳ ಮೂಲಕ ಆಹಾರ, ಔಷಧ ಹಾಗೂ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನ.12 ರಂದು ಉತ್ತರಕಾಶಿಯಲ್ಲಿ ಬೆ.5 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬರ್ಕೋಟ್ ಸುರಂಗದ ಒಂದು ಭಾಗವು ಕುಸಿದಿತ್ತು. ಇದರಿಂದಾಗಿ ಕೆಲಸ ಮಾಡುತ್ತಿದ್ದ 41 ಕಾರ್ಮಿಕರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ. ಸಿಲುಕಿದವರ ರಕ್ಷಣೆಗೆ ಕಳೆದ 15 ದಿನಗಳಿಂದ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

  • G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    – ಭದ್ರತೆಗೆ ಸುಧಾರಿತ ಯುದ್ಧ ವಿಮಾನಗಳ ನಿಯೋಜನೆ

    ಶ್ರೀನಗರ: ಜಿ20 ಶೃಂಗಸಭೆಗೆ (G20 Summit) ಭಾರತ ಸಂಪೂರ್ಣ ಸಿದ್ಧವಾಗಿದೆ. ಬರುವ ಗಣ್ಯರಿಗೆ ವಾಸ್ತವ್ಯದೊಂದಿಗೆ ಹಲವು ಹಂತಗಳಲ್ಲಿ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ನಡುವೆ ಭಾರತೀಯ ವಾಯುಸೇನೆಯು (IAF) ಉತ್ತರ ವಲಯದಲ್ಲಿ ನಡೆಯುತ್ತಿರುವ ತ್ರಿಶೂಲ್ ವ್ಯಾಯಾಮಕ್ಕೆ (ಡ್ರಿಲ್ಲಿಂಗ್) ವಿರಾಮ ನೀಡಿದೆ. ಸೆಪ್ಟೆಂಬರ್ 10ರ ವರೆಗೆ ಯಾವುದೇ ಯುದ್ಧ ವಿಮಾನಗಳು (Fighter Jets) ಹಾರಾಟ ನಡೆಸುವುದಿಲ್ಲ. ಡ್ರಿಲ್ಲಿಂಗ್ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗುವುದು ಎಂದು ಐಎಎಫ್ ಅಧಿಕಾರಿಗಳು ಹೇಳಿದ್ದಾರೆ.

    ಇದೇ ಅವಧಿಯಲ್ಲಿ G20 ಶೃಂಗಸಭೆ (G-20 Summit) ನಡೆಯಲಿದ್ದು ರಾಜಧಾನಿಯ ವಾಯು ಪ್ರದೇಶವನ್ನು ರಕ್ಷಿಸಲು ಹಾಗೂ ದೇಶಾದ್ಯಂತ ವಾಯುನೆಲೆಗಳಲ್ಲಿ ಹೆಚ್ಚಿನ ನಿಗಾ ಇರಿಸಲು ಫಾಲ್ಕನ್ ಅವಾಕ್ಸ್ ವಿಮಾನವನ್ನ ಕಾರ್ಯಾಚರಣೆಗೆ ಇಳಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಫೇಲ್ ಸೇರಿದಂತೆ ಇತರೆ ಸುಧಾರಿತ ಯುದ್ಧ ವಿಮಾನಗಳನ್ನ ವಾಯುನೆಲೆಗಳಲ್ಲಿ ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ಜಿ20 ಶೃಂಗಸಭೆ ಹಿನ್ನೆಲೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಆದ್ದರಿಂದ ಶತ್ರು ವಿಮಾನ ಭಾರತಕ್ಕೆ ನುಸುಳಿದರೆ ಅಥವಾ ಡ್ರೋನ್ ಮೂಲಕ ದಾಳಿ ನಡೆಸುವ ಪ್ರಯತ್ನಗಳು ನಡೆದರೆ ತಕ್ಷಣವೇ ಹೊಡೆದುರುಳಿಸಲು ಸುಧಾರಿತ ಯುದ್ಧವಿಮಾನಗಳ ನಿಯೋಜನೆ ಮಾಡಲಾಗಿದೆ. ಅದಕ್ಕಾಗಿ ದೆಹಲಿಯ ಸುತ್ತಮುತ್ತಲಿನ ವಾಯುನೆಲೆಗಳಲ್ಲೂ ಯುದ್ಧ ವಿಮಾನಗಳ ನಿಯೋಜನೆ ಮಾಡಲಾಗಿದೆ ಎಂದು ವಾಯುಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: G20 ಸಭೆಗೆ ಆಗಮಿಸುತ್ತಿರೋ ಜೋ ಬೈಡನ್‌ಗಾಗಿ ಮೂರು ಹಂತದ ಭದ್ರತೆ

    ಭಾರತೀಯ ವಾಯುಪಡೆಯು ಸೆಪ್ಟೆಂಬರ್ 4 ರಿಂದ ಚೀನಾ ಮತ್ತು ಪಾಕಿಸ್ತಾನ ಗಡಿಯುದ್ಧಕ್ಕೂ ಉತ್ತರ ವಲಯದಲ್ಲಿ ತ್ರಿಶೂಲ್ ವ್ಯಾಯಾಮ (ಡ್ರಿಲ್ಲಿಂಗ್) ನಡೆಸುತ್ತಿದೆ. ಲಡಾಖ್, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ಸೇರಿದಂತೆ ಉತ್ತರ ವಲಯದಲ್ಲಿ ಡ್ರಿಲ್ಲಿಂಗ್ ನಡೆಯುತ್ತಿದ್ದು, ಸೆಪ್ಟೆಂಬರ್ 14ರಂದು ಇದು ಮುಕ್ತಾಯಗೊಳ್ಳಲಿದೆ. ರಫೇಲ್, ಮಿರಾಜ್-2000, SU-30MKI, ಹೆವಿ-ಲಿಫ್ಟ್ ಸಾರಿಗೆ ವಿಮಾನಗಳು, ಚಿನೂಕ್ಸ್ ಮತ್ತು ಅಪಾಚೆ ಸೇರಿದಂತೆ ಚಾಪರ್‌ಗಳು ತರಬೇತಿಯಲ್ಲಿ ಪಾಲ್ಗೊಳ್ಳುತ್ತಿವೆ. ಸೆಪ್ಟೆಂಬರ್ 10ರ ವರೆಗೆ ಈ ತರಬೇತಿಗೆ ವಿರಾಮ ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ನವದೆಹಲಿ: ಭಾರತೀಯ ವಾಯುಪಡೆಯು (Indian Air Force) ಚೀನಾ (China) ಮತ್ತು ಪಾಕಿಸ್ತಾನ (Pakistan) ಎರಡೂ ಗಡಿಗಳ ಮೇಲೆ ಏಕಕಾಲಕ್ಕೆ ಕಣ್ಗಾವಲಿರಿಸುವ ಸಾಮರ್ಥ್ಯವುಳ್ಳ 4 ಸರ್ವೇಕ್ಷಣಾ ಡ್ರೋನ್‌ಗಳನ್ನ ನಿಯೋಜಿಸಿದೆ. ಹೆರಾನ್ ಮಾರ್ಕ್-2 ಹೆಸರಿನ ಡ್ರೋಣ್ ಏಕಕಾಲದಲ್ಲಿ ಚೀನಾ ಮತ್ತು ಪಾಕಿಸ್ತಾನ ಗಡಿಗಳಲ್ಲಿ ಗಸ್ತು ತಿರುಗುವ ಸಾಮರ್ಥ್ಯ ಹೊಂದಿದೆ.

    ಗಡಿಯಲ್ಲಿ 4 ಹೆರಾನ್ ಮಾರ್ಕ್-2 ಡ್ರೋನ್‌ಗಳನ್ನು (Heron Mark-2 Drones) ನಿಯೋಜಿಸಲಾಗಿದೆ. ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಹೊಂದಿದೆ. ಜೊತೆಯಲ್ಲೇ ಹತ್ತಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಈ ಡ್ರೋನ್‌ಗಳಲ್ಲಿ ಇರಲಿವೆ. ಭಾರತದ ಉತ್ತರ ವಲಯದ ಗಡಿಯ ಮುಂಚೂಣಿ ಪ್ರದೇಶಗಳಲ್ಲಿ ಈ ಡ್ರೋನ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: ಪಾಕ್, ಚೀನಾಕ್ಕೆ ಠಕ್ಕರ್ – ಶ್ರೀನಗರದಲ್ಲಿ ಮೇಲ್ದರ್ಜೆಗೆರಿಸಿದ MiG- 29 ಯುದ್ಧ ವಿಮಾನ ನಿಯೋಜನೆ

    ಹೆರಾನ್ ಮಾರ್ಕ್-2 ವಿಶೇಷತೆ ಏನು?
    ಈ ಡ್ರೋನ್‌ಗಳು ಉಪಗ್ರಹಗಳ ಜೊತೆಗೆ ಸಂವಹನ ಸಂಪರ್ಕ ಹೊಂದಿರುತ್ತವೆ. ಭಾರತೀಯ ವಾಯುಪಡೆಯು ಅತ್ಯಂತ ಸುದೀರ್ಘ ಸಮಯದಿಂದ ಈ ರೀತಿಯ ಡ್ರೋನ್‌ಗಳ ಅಗತ್ಯತೆಯನ್ನ ಪ್ರತಿಪಾದಿಸಿತ್ತು. ಈ ಡ್ರೋನ್‌ಗಳು ಅತಿ ದೂರದವರೆಗೆ ಇಂಧನ ಮರುಭರ್ತಿ ಇಲ್ಲದೇ ಸಂಚರಿಸಬಲ್ಲವು. ಒಮ್ಮೆ ಇಂಧನ ಭರ್ತಿಯಾದರೆ 36 ಗಂಟೆ ಕಾಲ ಕಾರ್ಯ ನಿರ್ವಹಿಸಬಲ್ಲವು. ಲೇಸರ್ ತಂತ್ರಜ್ಞಾನದ ಮೂಲಕ ಶತ್ರುಗಳ ನೆಲೆ ಗುರುತಿಸಬಲ್ಲವು. ಅತಿ ದೂರದಿಂದಲೇ ಶತ್ರುಗಳ ನೆಲೆಯನ್ನ ಗುರುತಿಸುವ ಸಾಮರ್ಥ್ಯ ಡ್ರೋನ್‌ಗಳಿಗೆ ಇರುವ ಕಾರಣ, ಇವುಗಳ ನೆರವಿನಿಂದ ವಾಯುಪಡೆಯ ಫೈಟರ್ ಜೆಟ್‌ಗಳು ಶತ್ರುಗಳ ನೆಲೆಗಳನ್ನು ದೂರಗಾಮಿ ಕ್ಷಿಪಣಿಗಳ ಮೂಲಕ ನಾಶಪಡಿಸಬಹುದಾಗಿದೆ ಎಂದು ವಾಯುಪಡೆ ತಿಳಿಸಿದೆ.

    ಹೆರಾನ್ ಮಾರ್ಕ್-2 ಡ್ರೋನ್ ದೃಷ್ಟಿಯ ವ್ಯಾಪ್ತಿಯ ಆಚೆಗಿನ ಸರ್ವೇಕ್ಷಣೆಗೂ ನೆರವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಇವುಗಳ ನೆರವಿನಿಂದ ಇಡೀ ದೇಶವನ್ನ ಒಂದೇ ಸ್ಥಳದಿಂದ ಸರ್ವೇಕ್ಷಣೆ ಮಾಡಲು ಸಾಧ್ಯ ಎಂದು ಡ್ರೋನ್ ಸ್ವಾಡರ್ನ್‌ನ ವಿಂಗ್ ಕಮಾಂಡರ್ ಪಂಕಜ್ ರಾಣಾ ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್‌; ಹಾಸ್ಟೆಲ್‌ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್‌ಗೆ ಕಳಿಸ್ತಿದ್ದ ವಿದ್ಯಾರ್ಥಿನಿ

    ದಿನದ 24 ಗಂಟೆಯೂ ಕಾರ್ಯನಿರ್ವಹಿಸಬಲ್ಲ ಸಾಮರ್ಥ್ಯ ಹೊಂದಿರುವ ಈ ಡ್ರೋನ್‌ಗಳು ಯಾವುದೇ ಹವಾಮಾನದಲ್ಲೂ ಕೆಲಸ ಮಾಡುತ್ತವೆ. ಅದಕ್ಕಾಗಿ ಇವುಗಳ ಎಂಜಿನ್ ಸಾಮರ್ಥ್ಯವನ್ನೂ ಹೆಚ್ಚಿಸಲಾಗಿದೆ. ಒಂದೇ ಕಾರ್ಯಾಚರಣೆಗಳಲ್ಲಿ ಈ ಡ್ರೋನ್‌ಗಳು ಹಲವು ವಲಯಗಳ ಕಾರ್ಯಗಳನ್ನು ಸುದೀರ್ಘ ಕಾಲ ನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಬೇಹುಗಾರಿಕೆ, ಸರ್ವೇಕ್ಷಣೆ ಹಾಗೂ ಭಾರತೀಯ ವಾಯುಪಡೆಗೆ ಮಾಹಿತಿ ರವಾನಿಸುವ ಕಾರ್ಯಗಳನ್ನು ಈ ಡ್ರೋನ್ ಮಾಡುತ್ತದೆ ಎಂದು ರಾಣಾ ವಿವರಿಸಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ಭಾರತೀಯ ವಾಯುಪಡೆ ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿದ್ದ ಮಿಗ್-21 ವಿಮಾನಗಳ ಬದಲಿಗೆ ಮೇಲ್ದರ್ಜೆಗೇರಿಸಿದ ಮಿಗ್-29 ಫೈಟರ್ ಜೆಟ್‌ಗಳನ್ನ ಗಸ್ತಿಗೆ ನಿಯೋಜನೆ ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ

    ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ

    ನವದೆಹಲಿ: ತನ್ನ ಸಿಬ್ಬಂದಿಗಾಗಿ ನೂತನ ಯುದ್ಧ ಸಮವಸ್ತ್ರವನ್ನು ಭಾರತೀಯ ವಾಯುಪಡೆ (Indian Air Force) ಇಂದು ಅನಾವರಣಗೊಳಿಸಿದೆ.

    ಚಂಡೀಗಢದಲ್ಲಿ ನಡೆದ ವಾಯುಪಡೆಯ 90ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐಎಎಫ್‍ನ ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು. ಇದೇ ಮೊದಲ ಬಾರಿಗೆ ವಾಯುಪಡೆಯ ವಾರ್ಷಿಕೋತ್ಸವವನ್ನು ದೆಹಲಿಯ ಹೊರಗೆ ನಡೆಸಲಾಯಿತು. ಹೊಸ ಸಮವಸ್ತ್ರವನ್ನು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅನಾವರಣಗೊಳಿಸಿದರು.

    ಈ ವರ್ಷದ ಆರಂಭದಲ್ಲಿ ಭಾರತೀಯ ಸೇನೆಯು (Army) ತನ್ನ ಸಿಬ್ಬಂದಿಗೆ ಡಿಜಿಟಲ್ ಕ್ಯಾಮೌಪ್ಲಾಗೆ ಸಮವಸ್ತ್ರವನ್ನು (Digital Camouflage Uniform) ಪರಿಚಯಿಸಿತ್ತು. ಇದು ಭೂಪ್ರದೇಶ ಸ್ನೇಹಿಯಾಗಿದ್ದು, ಮರುಭೂಮಿ, ಕಾಡುಪ್ರದೇಶ, ಪರ್ವತಮಯ ಪ್ರದೇಶಗಳಿಗೆ ಹೊಂದಿಕೊಳ್ಳುವ ಸಮವಸ್ತ್ರವಾಗಿದೆ. ಇದನ್ನೂ ಓದಿ: ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆ ಉಡೀಸ್ -ಕ್ರಿಮಿಯಾ ಸಂಪರ್ಕ ಕಡಿತ

    ನೂತನ ಸಮವಸ್ತ್ರವು ಹಿಂದಿನ ಆವೃತ್ತಿಗಳಿಗಿಂತ ಭಿನ್ನವಾಗಿದ್ದು, ಹಳೆಯ ಮಾದರಿಗಳ ಅನೇಕ ವಿನ್ಯಾಸಗಳೊಂದಿಗೆ ಬದಲಾಯಿಸಲಾಗಿದೆ. ಪ್ರಪಂಚದಾದ್ಯಂತದ ಹೆಚ್ಚಿನ ಯುದ್ಧ ಪಡೆಗಳು ಹಾಗೂ ಮಿಲಿಟರಿಗಳು ಈ ಡಿಜಿಟಲ್ ಕ್ಯಾಮೌಪ್ಲಾ ಸಮವಸ್ತ್ರಗಳನ್ನು ಅಳವಡಿಸಿಕೊಂಡಿವೆ.

    1932ರಲ್ಲಿ ಯುಕೆಯ ರಾಯಲ್ ಏರ್ ಫೋರ್ಸ್‍ನ ಬೆಂಬಲ ಪಡೆಯಾಗಿ ಐಎಎಫ್ ಅಧಿಕೃತವಾಗಿ ಸೇರ್ಪಡೆಗೊಂಡಿತು. ಈ ದಿನದ ನೆನಪಿಗಾಗಿ ಪ್ರತಿವರ್ಷ ಐಎಎಫ್ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಾಗಮಂಟಪ ಉದ್ಘಾಟನೆ – ಜನವರಿಯಲ್ಲಿ ಆದಿಯೋಗಿ ಪ್ರತಿಮೆ ಲೋಕಾರ್ಪಣೆ

    Live Tv
    [brid partner=56869869 player=32851 video=960834 autoplay=true]

  • ಉಗ್ರರ ತವರು ನೆಲ ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು

    ಉಗ್ರರ ತವರು ನೆಲ ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು

    ವಾಷಿಂಗ್ಟನ್: ಭವಿಷ್ಯದ ಭಯೋತ್ಪಾದನಾ ಬೆದರಿಕೆಗಳನ್ನು ನಿಯಂತ್ರಿಸಲು ಎಫ್-16 ಫೈಟರ್ ಜೆಟ್ (F-16 fighter Jet) ಪಡೆಯ ಸುಸ್ಥಿರ ಕಾರ್ಯಕ್ರಮದ ಅಡಿಯಲ್ಲಿ ಪಾಕಿಸ್ತಾನಕ್ಕೆ (Pakistan) 3,500 ಕೋಟಿ (450 ಮಿಲಿಯನ್ ಡಾಲರ್) ಮೊತ್ತದ ಸೇನಾ ನೆರವು ನೀಡುವುದಾಗಿ ಅಮೆರಿಕ ಘೋಷಿಸಿದೆ.

    2018ರಲ್ಲಿ ತಾಲಿಬಾನ್ (Taliban) ಮತ್ತು ಹಕ್ಕಾನಿ ಉಗ್ರ ಸಂಘಟನೆಗಳನ್ನು ಹತ್ತಿಕ್ಕಲು ವಿಫಲವಾದ ಪಾಕಿಸ್ತಾನಕ್ಕೆ ಅಂದಿನ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 15,000 ಕೋಟಿ ನೆರವನ್ನು ತಡೆಹಿಡಿದಿದ್ದರು. ಅದಾದ ಬಳಿಕ ಪಾಕ್‌ಗೆ ಅಮೆರಿಕ ನೀಡುತ್ತಿರುವ ಮೊದಲ ನೆರವು ಇದಾಗಿದೆ. ಇದು ಪಾಕಿಸ್ತಾನ ಅಮೆರಿಕ (US) ದ್ವಿಪಕ್ಷಿಯ ಸಂಬಂಧದ ಭಾಗವಾಗಿದ್ದು, ಭಯೋತ್ಪಾದನೆ ನಿಗ್ರಹಕ್ಕೆ ಎಫ್-16 ಸಹಾಯಕವಾಗಲಿದೆ. ಈ ನೆರವಿನ ಅಡಿಯಲ್ಲಿ ಯಾವುದೇ ಸಾಮರ್ಥ್ಯದ ಶಸ್ತ್ರಾಸ್ತ್ರ ಯುದ್ಧ ಸಾಮಗ್ರಿಗಳನ್ನು ಒಳಗೊಂಡಿಲ್ಲ ಎಂದು ಅಮೆರಿಕ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್-2 ಇನ್ನಿಲ್ಲ

    2019ರಲ್ಲಿ ಬಾಲಾಕೋಟ್ ದಾಳಿಯ ನಂತರ ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನ ಇದೇ ವಿಮಾನವನ್ನು ಬಳಲು ಮುಂದಾಗಿತ್ತು. ಜೊತೆಗೆ ಅಂದಿನ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಮಿಗ್-21 ಅನ್ನು ಹೊಡೆದುರುಳಿಸಲು ಪಾಕಿಸ್ತಾನ AIM-120 C-5 AMRAAM (Advanced Medium-Range Air-to-Air Missile) ಬಳಸಿತ್ತು. ಅಮೆರಿಕ ಪಾಕಿಸ್ತಾನಕ್ಕೆ ಈ ಕ್ಷಿಪಣಿಯನ್ನು ಉಗ್ರರ ವಿರುದ್ಧ ಬಳಸಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಈ ಷರತ್ತು ಉಲ್ಲಂಘಿಸಿ ಭಾರತದ ವಿರುದ್ಧ ಪ್ರಯೋಗಿಸಿತ್ತು.

    ಸದ್ಯ ಪಾಕಿಸ್ತಾನ ವಾಯುಪಡೆಯು ಎಫ್-16 ಫೈಟರ್ ಜೆಟ್ ಹಾಗೂ ಸೇನಾ ಬೆಂಬಲ ಕೋರಿದ ನಂತರ ಯುಎಸ್ ಕಾಂಗ್ರೆಸ್ ಸಂಭವನೀಯ ಮಾರಾಟದ ಕುರಿತು ಬುಧವಾರ ಮಾತುಕತೆ ನಡೆಸಿದೆ. ಇದರಿಂದಾಗಿ ವಿಮಾನ, ಇಂಜಿನ್, ಹಾರ್ಡ್‌ವೇರ್‌ ಮತ್ತು ಸಾಫ್ಟ್‌ವೇರ್‌ ನ ಮಾರ್ಪಾಡುಗಳ ಬೆಂಬಲವನ್ನೂ ಪಾಕಿಸ್ತಾನ ಒಳಗೊಂಡಿರಲಿದೆ. ಜೊತೆಗೆ ಜೆಟ್‌ಗಳು ಹಾಗೂ ಅದರ ಇಂಜಿನ್ ಬಿಡಿ ಭಾಗಗಳ ದುರಸ್ತಿ ಮತ್ತು ವಾಪಾಸಾತಿ, ವರ್ಗೀಕರಿಸದ ತಂತ್ರಾಂಶಗಳ ಬೆಂಬಲವನ್ನೂ ಪಾಕ್ ಒಳಗೊಂಡಿರಲಿದೆ.

    Shehbaz Sharif

    ಪಾಕ್ ಎಫ್-16 ಹಿನ್ನೆಲೆ:
    ಪಾಕಿಸ್ತಾನವು 1980 ರಿಂದ ಎಫ್-16 ಜೆಟ್‌ಗಳನ್ನು ಮಾರಾಟ ಮಾಡುವ ಹಾಗೂ ನವೀಕರಿಸಿದ ನೀತಿಯ ಅಡಿಯಲ್ಲಿ ಯುಎಸ್ ಮಿಲಿಟರಿಯ ಸಹಾಯದ ಭಾಗವಾಗಿದೆ. 1981ರಲ್ಲಿ ಅಫ್ಘಾನಿಸ್ತಾನದ ಮೇಲೆ ಸೋವಿಯತ್ ಆಕ್ರಮಣದ ನಂತರ ಎಫ್ -16 ಜೆಟ್‌ಗಳನ್ನು ಯುಎಸ್ ಪಾಕಿಸ್ತಾನಕ್ಕೆ ಮಾರಾಟ ಮಾಡಲು ಒಪ್ಪಿಕೊಂಡಿತು. ಇದನ್ನೂ ಓದಿ: ಮೋದಿ ಉತ್ತಮ ವ್ಯಕ್ತಿ; ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ – ಟ್ರಂಪ್‌ ಬಣ್ಣನೆ

    ವರದಿಗಳ ಪ್ರಕಾರ 1986 – 1990ರ ನಡುವೆ ಪಾಕಿಸ್ತಾನದ ಎಫ್-16 ಜೆಟ್‌ಗಳು ಕನಿಷ್ಠ 10 ಅಫ್ಘಾನ್ ಮತ್ತು ಸೋವಿಯತ್ ಜೆಟ್‌ಗಳು, ಹೆಲಿಕಾಪ್ಟರ್‌ಗಳು ಹಾಗೂ ವಿಮಾನಗಳನ್ನ ಹೊಡೆದುರುಳಿಸಿವೆ. 1990ರ ದಶಕದಲ್ಲಿ ನಡೆದ ಪಾಕಿಸ್ತಾನದ ಪರಮಾಣು ಕಾರ್ಯಕ್ರಮದ ಬೆಳವಣಿಗೆಯಿಂದಾಗಿ ಅಮೆರಿಕ ಅಸಮಾಧಾನಗೊಂಡಿತು. ಬಳಿಕ ಅಮೆರಿಕ ಎಫ್-16 ಜೆಟ್‌ಗಳ ವಿತರಣೆಯನ್ನು ತಡೆಹಿಡಿದಿತ್ತು.

    Live Tv
    [brid partner=56869869 player=32851 video=960834 autoplay=true]

  • ಬಿಗಿ ಭದ್ರತೆಯಲ್ಲಿ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    ಬಿಗಿ ಭದ್ರತೆಯಲ್ಲಿ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    ಲಕ್ನೋ: ಕೇಂದ್ರವು ಹೊಸದಾಗಿ ಪ್ರಾರಂಭಿಸಿರುವ ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ವಾಯುಪಡೆ(IAF) ಸಿಬ್ಬಂದಿ ಮೊದಲ ಬ್ಯಾಚ್‍ನ ನೇಮಕಾತಿಗಾಗಿ ಪರೀಕ್ಷೆಯು ಭಾನುವಾರ ಯುಪಿಯ ಕಾನ್ಪುರದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ನಡೆಯಿತು.

    ದೇಶದಾದ್ಯಂತ ಜುಲೈ 24 ರಿಂದ ಜುಲೈ 31 ರವರೆಗೆ ನಡೆಯಲಿರುವ ಪರೀಕ್ಷೆಯಲ್ಲಿ ನಗರದಿಂದ ಸುಮಾರು 2.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಗ್ನಿವೀರ್ ಪರೀಕ್ಷೆಗೆ ಒಟ್ಟು 11 ಕೇಂದ್ರಗಳನ್ನು ನಿಗದಿಪಡಿಸಲಾಗಿದ್ದು, ಈ ಪೈಕಿ ಆರು ಕೇಂದ್ರಗಳು ಕಾನ್ಪುರ ಔಟರ್‌ನಲ್ಲಿವೆ. ಪ್ರತಿ ಕೇಂದ್ರದಲ್ಲಿ ಪ್ರತಿ ದಿನ 1,875 ಅಭ್ಯರ್ಥಿಗಳು ಮೂರು ಪಾಳಿಯಲ್ಲಿ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಇದನ್ನೂ ಓದಿ: 5ನೇ ಮಹಡಿ ಕಿಟಕಿಯಿಂದ ಬೀಳುತ್ತಿದ್ದ 2 ವರ್ಷದ ಕಂದಮ್ಮನನ್ನು ರಕ್ಷಿಸಿದ – ನಮ್ಮ ಹೀರೋ ಎಂದ ನೆಟ್ಟಿಗರು 

    ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ವಾಯುಪಡೆಯ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಬ್ರಿಜೇಶ್ ಶ್ರೀವಾಸ್ತವ ಈ ಕುರಿತು ಮಾತನಾಡಿದ್ದು, ವಾಯುಪಡೆಯ ಸಹಾಯದಿಂದ ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲಾಗುತ್ತಿದೆ. ಎಲ್ಲಾ ಕೇಂದ್ರಗಳನ್ನು ಕಟ್ಟುನಿಟ್ಟಾದ ಸಿಸಿಟಿವಿ ಮತ್ತು ಡ್ರೋನ್ ವೀಕ್ಷಣೆಗೆ ಒಳಪಡಿಸಲಾಗಿದೆ. ಎಲ್ಲೆಡೆ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ

    ಭಾರತೀಯ ಯುವಕರಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಕೇಂದ್ರವು ಜೂನ್ 14 ರಂದು ಹೊಸ ಅಲ್ಪಾವಧಿಯ ನೇಮಕಾತಿ ನೀತಿಯನ್ನು ಅನಾವರಣಗೊಳಿಸಿತ್ತು. ಅಗ್ನಿಪಥ್ ಎಂದು ಕರೆಯಲ್ಪಡುವ ಈ ಯೋಜನೆಯು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ‘ಅಗ್ನಿವೀರರು’ ಎಂದು ಸೇವೆಗೆ ನಿಯೋಜಿಸಲಾಗುವುದು. ಇದನ್ನೂ ಓದಿ: ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್

    Live Tv
    [brid partner=56869869 player=32851 video=960834 autoplay=true]

  • ರಾವತ್ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ: ಭಾರತೀಯ ವಾಯುಪಡೆ

    ರಾವತ್ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ: ಭಾರತೀಯ ವಾಯುಪಡೆ

    ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ  ಎಂದು ಭಾರತೀಯ ವಾಯುಪಡೆ ಹೇಳಿದೆ.

    ಬಿಪಿನ್ ರಾವತ್ ಮತ್ತು ಇತರ 13 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ದುರಂತವಾಗಿತ್ತು. ಹೆಲಿಕಾಪ್ಟರ್ ದುರಂತಕ್ಕೆ ಯಾಂತ್ರಿಕ ವೈಫಲ್ಯ, ವಿಧ್ವಂಸಕ ಅಥವಾ ನಿರ್ಲಕ್ಷ್ಯ ಕಾರಣವಲ್ಲ. ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಹೆಲಿಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಕಾರಣ ಪತನಗೊಂಡಿದೆ ಭಾರತೀಯ ವಾಯುಪಡೆ ತಿಳಿಸಿದೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಕಳೆದ ವರ್ಷ ಡಿಸೆಂಬರ್ ರಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಪ್ರಯಾಣಿಸುತ್ತಿದ್ದರು. ತಮಿಳುನಾಡಿನ ಕೂನೂರ್​ ಬಳಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು ಇತರ 12 ಸೇನಾ ಅಧಿಕಾರಿಗಳು ಮೃತಪಟ್ಟಿದ್ದರು. ಈ Mi-17 V5 ಹೆಲಿಕಾಪ್ಟರ್ ದುರಂತದ ಬಗ್ಗೆ ತನಿಖೆ ನಡೆಸಿದ ಮೂರು ಪಡೆಗಳನ್ನು ಒಳಗೊಂಡ ತನಿಖಾ ತಂಡ ತನ್ನ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.

    ವಿಚಾರಣೆಯ ನೇತೃತ್ವವನ್ನು ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ವಹಿಸಿದ್ದರು. ಈ ತಂಡವು ಹೆಲಿಕಾಪ್ಟರ್​​ನಲ್ಲಿ ಸಂಭವಿಸಿರಬಹುದಾದ ಮಾನವ ದೋಷ ಅಥವಾ ಹೆಲಿಕಾಪ್ಟರ್ ಲ್ಯಾಂಡಿಂಗ್‌ ತಯಾರಿಯಲ್ಲಿ ನಡೆದಿರಬಹುದಾದ ಸಮಸ್ಯೆಯ ಸಂಭವನೀಯ ಸನ್ನಿವೇಶಗಳನ್ನು ಪರಿಶೀಲನೆ ನಡೆಸಿ ಮೋಡ ಕಾರಣ ಎಂದು ಹೇಳಿದೆ.

  • ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ಜೈಪುರ: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯು ಸೇನೆಯ ಮಿಗ್-21 ವಿಮಾನ ಇಂದು ಸಂಜೆ ಪತನಗೊಂಡಿದೆ.

    ಮಿಗ್-21 ವಿಮಾನ ಪತನದ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಜೈಸಲ್ಮೇರ್‍ನ ಎಸ್‍ಪಿ ಅಜಯ್ ಸಿಂಗ್, ನಮಗೆ ಇಂದು ಸಂಜೆ ಭಾರತೀಯ ಸೇನೆಯ ಮಿಗ್-21 ವಿಮಾನ ಮರುಭೂಮಿ ರಾಷ್ಟ್ರೀಯ ಉದ್ಯಾನವನ (DNP) ಬಳಿ ಪತನ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ನಾವು ವಿಮಾನ ಪತನಗೊಂಡ ಸ್ಥಳಕ್ಕೆ ತೆರಳುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 44 ವರ್ಷ ಹಳೆಯ ಕಾರನ್ನು ಯಾರೂ ಬಳಸಲಾರರು – ಮಿಗ್ ಬಳಕೆ ಕುರಿತು ಧನೋವಾ ಮಾತು

    ವಿಮಾನ ಪತನಗೊಂಡಿರುವುದನ್ನು ಮೊದಲು ಅರಣ್ಯ ಅಧಿಕಾರಿಗಳು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಾಯು ಸೇನೆ ಪೈಲಟ್ ಹುತಾತ್ಮರಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದೆ.

    ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿ ಒಟ್ಟು 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಇದನ್ನೂ ಓದಿ: ಯೋಧರ ನಾಡಿಗೆ ಬಂದ ಮಿಗ್-21 ಯುದ್ಧ ವಿಮಾನ

    ಸದ್ಯ ಭಾರತದಲ್ಲಿ ಈಗ 100ಕ್ಕೂ ಅಧಿಕ ಮಿಗ್ ವಿಮಾನಗಳಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ. ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯಗೊಂಡು ಪತನದ ಸೂಚನೆ ಸಿಕ್ಕಿದ ಕೂಡಲೇ ಹಲವು ಪೈಲಟ್ ಗಳು ಎಜೆಕ್ಟ್ ಆಗದೇ ವಿಮಾನವನ್ನು ಜನವಸತಿ ಇಲ್ಲದ ಕಡೆಗೆ ತಿರುಗಿಸಿ ಪ್ರಾಣಬಿಟ್ಟಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ

    “ಹಾರುವ ಶವಪೆಟ್ಟಿಗೆ” ಎಂಬ ಕುಖ್ಯಾತಿ, ಎಫ್ 16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನ ಮೂಲಕವೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನು ಉರುಳಿಸಿದ್ದರು. 2016 ರಲ್ಲಿ 110 ಮಿಗ್ 21 ಜೆಟ್ ವಿಮಾನಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಈ ಸಂದರ್ಭದಲ್ಲಿ ಮಲ್ಟಿ ಮೋಡ್ ರೇಡಾರ್, ಉತ್ತಮ ಏವಿಯಾನಿಕ್ಸ್, ಸಂವಹನ ವ್ಯವಸ್ಥೆಯನ್ನು ನೀಡಲಾಗಿತ್ತು.

  • ಹೆಲಿಕಾಪ್ಟರ್ ದುರಂತ ಬಗ್ಗೆ ಊಹಾಪೋಹ ನಿಲ್ಲಿಸಿ: ಐಎಎಫ್

    ಹೆಲಿಕಾಪ್ಟರ್ ದುರಂತ ಬಗ್ಗೆ ಊಹಾಪೋಹ ನಿಲ್ಲಿಸಿ: ಐಎಎಫ್

    ನವದೆಹಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ. ಮೃತರ ಘನತೆಯನ್ನು ಕಾಪಾಡುವಂತೆ ಭಾರತೀಯ ವಾಯುಸೇನೆ ಮನವಿ ಮಾಡಿದೆ.

    ಟ್ವೀಟ್‍ನಲ್ಲಿ ಏನಿದೆ?: ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ದುರಂತಕ್ಕೆ ಕಾರಣವಾದ ಸತ್ಯವನ್ನೂ ಹೊರತರಲಾಗುತ್ತದೆ. ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು ಎಂದು ವಾಯುಪಡೆಯ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಿದೆ. ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ

    ತಮಿಳುನಾಡಿನ ಕೂನೂರು ಸಮೀಪ ಬುಧವಾರ ಸೇನಾ ಹೆಲಿಕಾಪ್ಟರ್ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ ವೀಡಿಯೋ ಅಸಲಿಯತ್ತಿನ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

  • ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ  ಪಡೆದ ಅಭಿನಂದನ್

    ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ ಪಡೆದ ಅಭಿನಂದನ್

    ನವದೆಹಲಿ: ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿ ಅಭಿನಂದನ್ ವರ್ಧಮಾನ್ ಬಡ್ತಿ ಪಡೆದಿದ್ದಾರೆ.

    ವಿಂಗ್ ಕಮಾಂಡರ್ ಅಭಿನಂದನ್ ಎಂದಾಕ್ಷಣ ಅಂದು ಪಾಕ್‍ಗೆ ದಿಟ್ಟ್ ಉತ್ತರ ಕೊಟ್ಟು ಜೀವಂತ ಮರಳಿದ ಆರೋಚಕ ಕ್ಷಣಗಳು ನೆನಪಾಗುತ್ತದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಭಿನಂದನ್ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದರು. ಅವರಿದ್ದ ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಸಿಕ್ಕಿಬಿದ್ದಿದ್ದರು. ನಂತರ ಪಾಕ್ ಯೋಧರು ಅವರನ್ನು ಬೇರೆಡೆಗೆ ಕರೆದೊಯ್ದಿದ್ದರು.

    ಬಂಧನದ ಅವಧಿಯಲ್ಲಿಯೂ ಆತ್ಮಗೌರವ ಕಾಪಾಡಿಕೊಂಡ ರೀತಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ತಲೆ ಎತ್ತಿಯೇ ಗರ್ವದಿಂದ ಎಲ್ಲೆಡೆ ನಡೆಯುತ್ತಿದ್ದ ವೈಖರಿಯನ್ನೂ ಜನರು ಮೆಚ್ಚಿಕೊಂಡಿದ್ದರು. ಅಭಿನಂದನ್ ಅವರಿದ್ದ ವಾಯುಪಡೆಯ 51ನೇ ಸ್ಕ್ವಾರ್ಡನ್‍ಗೂ ಭಾರತ ಸರ್ಕಾರದಿಂದ ವಿಶೇಷ ಮಾನ್ಯತೆ ಸಿಕ್ಕಿತ್ತು. ಪಾಕಿಸ್ತಾನ ವಾಯುಪಡೆಯು ಫೆಬ್ರುವರಿ 27, 2019ರಂದು ಭಾರತದ ಮೇಲೆ ದಾಳಿ ನಡೆಸಲು ಮಾಡಿದ ಪ್ರಯತ್ನವನ್ನು ಹಿಮ್ಮೆಟ್ಟಿಸುವಲ್ಲಿ ಈ ತುಕಡಿಯ ಕಾರ್ಯಕ್ಷಮತೆ ಪರಿಣಾಮಕಾರಿಯಾಗಿತ್ತು. ಕೇಂದ್ರೀಯ ಮೀಸಲು ಪೊಲೀಸ್ ಸಿಬ್ಬಂದಿ ಇದ್ದ ಬಸ್ ಒಂದರ ಮೇಲೆ ಉಗ್ರರು ನಡೆಸಿದ ಬಾಂಬ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತವು ಬಾಲಾಕೋಟ್‍ನಲ್ಲಿದ್ದ ಉಗ್ರಗಾಮಿ ಶಿಬಿರಗಳ ಮೇಲೆ ದಾಳಿ ನಡೆಸಿತ್ತು. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು

    ಅಭಿನಂದನ್ ವರ್ಧಮಾನ್ ಅವರಿಗೆ ಶೌರ್ಯ ಪ್ರಶಸ್ತಿಯನ್ನೂ ನೀಡಲಾಗಿತ್ತು. ಇದೀಗ ಭಾರತೀಯ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಆಗಿ ಪದೋನ್ನತಿ ನೀಡಿದೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು