ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿ (Rajouri) ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ಐವರು ಯೋಧರು (Soldiers) ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಸೇನೆಯ (Indian Army) ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಉಗ್ರರನ್ನು ಹೊಡೆದುರುಳಿಸಲು ಸೇನೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಯೋಧ ಗಾಯಗೊಂಡಿದ್ದು, ಅವರನ್ನು ಉಧಂಪುರದ (Udhampur) ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಯೋಧರ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ – ಗ್ರೆನೇಡ್ ಬಳಕೆ ಸಾಧ್ಯತೆ
ರಾಜೌರಿ ಜಿಲ್ಲೆಯ ಕಂಡಿ ಪ್ರದೇಶದ ಕೇಸ್ರಿ ಹಿಲ್ನ ಗುಹೆಯೊಂದರಲ್ಲಿ ಭಯೋತ್ಪಾದಕರ ತಂಡ ಅಡಗಿರುವ ಖಚಿತ ಮಾಹಿತಿ ಮೇರೆಗೆ ಸೇನೆ ದಾಳಿ ಆರಂಭಿಸಿದೆ. ಮುನ್ನೆಚ್ಚರಿಕೆಯಾಗಿ ಸ್ಥಳಕ್ಕೆ ಹೆಚ್ಚುವರಿ ಸೇನಾ ಪಡೆಗಳನ್ನು ರವಾನಿಸಲಾಗಿದೆ. ಉಗ್ರರ ಪಡೆಯಲ್ಲಿ ಸಾವು ನೋವಿನ ವರದಿಯಾಗಿಲ್ಲ. ಸೇನೆ ಉಗ್ರರ ನೆಲೆಯನ್ನು ಸುತ್ತುವರಿದಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿ (Poonch Attack) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
ದಾಳಿಯ ಒಂದು ವಾರದ ನಂತರ ಭಯೋತ್ಪಾದಕರು ಪಾಕಿಸ್ತಾನದಿಂದ (Pakistan) ಡ್ರೋನ್ಗಳ ಮೂಲಕ ಶಸ್ತ್ರಾಸ್ತ್ರ (Weapons) ಪೂರೈಕೆ ಮಾಡಿಕೊಳ್ಳುತ್ತಿದ್ದಾರೆ. ಸುಮಾರು 12 ಮಂದಿ ಭಯೋತ್ಪಾದಕರು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ
ಪೂಂಚ್ ಜಿಲ್ಲೆಯಲ್ಲಿ ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದಾಗ ಐವರು ಸೈನಿಕರು ಸಾವನ್ನಪ್ಪಿದರು. ಮರುದಿನ 12 ಜನ ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ನೇತೃತ್ವದ ತಂಡ ಕಳೆದ ಒಂದು ವಾರದಿಂದಲೂ ಭಯೋತ್ಪಾದಕರನ್ನ ಸದೆಬಡಿಯಲು ಬಿಗಿ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಮಾಹಿತಿ ಬೆಳಕಿಗೆ ಬಂದಿದೆ. ವಶಕ್ಕೆ ಪಡೆಯಲಾದ ಶಂಕಿತರ ಪೈಕಿ ನಾಸಿರ್ ಅಹ್ಮದ್ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಾಸಿರ್ ಅಹ್ಮದ್ನನ್ನ ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಮತ್ತಷ್ಟು ಮಹತ್ವದ ಮಾಹಿತಿ ತಿಳಿದು ಬಂದಿದೆ. ಇದೇ ವೇಳೆ ಈ ಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ಪಾಕಿಸ್ತಾನದಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ ಪೂರೈಕೆಯಾಗುತ್ತಿದೆ ಅನ್ನೋದು ಗೊತ್ತಾಗಿದೆ. ಆದ್ರೆ ಅವರನ್ನು ಪತ್ತೆಹಚ್ಚಲು ಮಾಹಿತಿ ಸಹಾಯಕವಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು
ಈಗಾಗಲೇ 12 ಜನ ಶಂಕಿತರನ್ನ ವಶಕ್ಕೆ ಪಡೆದಿದ್ದು, 200ಕ್ಕೂ ಹೆಚ್ಚು ಜನರನ್ನ ವಿಚಾರಣೆಗೆ ಕರೆಸಲಾಗಿದೆ. ದಾಳಿಕೋರರನ್ನ ಪತ್ತೆಹಚ್ಚಲು ಸತತ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.
ಏನಿದು ಘಟನೆ?
ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿ ಐವರು ಸೈನಿಕರ ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು. ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತ್ತು.
ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇತ್ತು. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿತ್ತು. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್ಗಳು ಮತ್ತು ಬಾಂಬ್ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿದ್ದರು. ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ 3 ರಿಂದ 4 ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ತೀಳಿದು ಬಂದಿತ್ತು. ಜೈಶ್-ಎ-ಮೊಹಮ್ಮದ್ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದೂ ತಿಳಿದುಬಂದಿತ್ತು.
ಶ್ರೀನಗರ: ಸೈನಿಕರು ಸಂಚರಿಸುತ್ತಿದ್ದ ವಾಹನದ (Army Truck) ಮೇಲೆ ಗುರುವಾರ ದಾಳಿ ನಡೆಸಿ ಐವರು ಸೈನಿಕರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ 12 ಜನ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕ ಸಂಘಟನೆಗಳ ಜೊತೆಗಿನ ನಂಟನ್ನು ಖಚಿತಪಡಿಸಿಕೊಳ್ಳಲು ಬಂಧನಕ್ಕೊಳಗಾದವರನ್ನು ವಿವಿಧ ಹಂತಗಳಲ್ಲಿ ಪ್ರಶ್ನಿಸಲಾಗುತ್ತಿದೆ. ಹಾಗೂ ಪೂಂಚ್ ಸೆಕ್ಟರ್ನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಭಯೋತ್ಪಾದಕ ಚಟುವಟಿಕೆಗಳು ಸಕ್ರಿಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯೋಧರ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ – ಗ್ರೆನೇಡ್ ಬಳಕೆ ಸಾಧ್ಯತೆ
ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಶ್ರೇಣಿಯ (Deputy Inspector General rank officer) ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ.
ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇದೆ. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್ಗಳು ಮತ್ತು ಬಾಂಬ್ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಭದ್ರತಾ ದೃಷ್ಟಿಯಿಂದ ಭಿಂಬರ್ ಗಲಿ ಮತ್ತು ಜರ್ರಾನ್ ವಾಲಿ ಗಲಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತ ಎರಡನೇ ದಿನವೂ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ ಮೂರರಿಂದ ನಾಲ್ಕು ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಶ್-ಎ-ಮೊಹಮ್ಮದ್ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದು ಮೂಲಗಳು ತಿಳಿಸಿವೆ.
ಭಯೋತ್ಪಾದಕರನ್ನು ಪತ್ತೆ ಹಚ್ಚಲು ಡ್ರೋನ್ಗಳು ಮತ್ತು ಸ್ನಿಫರ್ ಡಾಗ್ಗಳನ್ನು (Sniffer Dogs) ಬಳಸಲಾಗುತ್ತಿದೆ. ಸೇನೆ ಎಂಐ- ಚಾಪರ್ನೊಂದಿಗೆ ( MI-chopper) ಪ್ರದೇಶದ ಪರಿಶೀಲನೆಯನ್ನು ಸಹ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಾಳಿಯ ನಂತರ ಅವರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ಗುರುವಾರ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಗೊಳಗಾದವರು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾದ ರಾಷ್ಟ್ರೀಯ ರೈಫಲ್ಸ್ ಘಟಕದ ಯೋಧರಾಗಿದ್ದು ಅವರ ಮೃತದೇಹಗಳನ್ನು ಅವರವರ ಊರಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕಟ್ಟೆಚ್ಚರ ಹೆಚ್ಚಿರುವ ಹಿನ್ನೆಲೆಯಲ್ಲಿ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಗಜ್ನವಿ ಫೋರ್ಸ್ನ ಕಮಾಂಡರ್ ರಫೀಕ್ ಅಹ್ಮದ್ ಅಲಿಯಾಸ್ ರಫೀಕ್ ನಯಿ ಅವರು ಇದೇ ಪ್ರದೇಶದ ನಿವಾಸಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ವಿರುದ್ಧ ಬಿಜೆಪಿ (BJP), ವಿಎಚ್ಪಿ (VHP), ಬಜರಂಗದಳ (Bajrang Dal), ಶಿವಸೇನೆ (Shiv Sena), ಡೋಗ್ರಾ ಫ್ರಂಟ್ ಮತ್ತು ಜಮ್ಮು ರಾಜ್ಯತ್ವ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವದಹನ
ಇಟಾನಗರ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ಸಂಭವಿಸಿದ ಚೀತಾ ಹೆಲಿಕಾಪ್ಟರ್ (Cheetah Helicopter) ದುರಂತದಲ್ಲಿ ಭಾರತೀಯ ಸೇನೆಯ (Indian Army) ಇಬ್ಬರು ಪೈಲಟ್ಗಳು (Pilots) ಹುತಾತ್ಮರಾಗಿದ್ದಾರೆ.
ಅರುಣಾಚಲ ಪ್ರದೇಶದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಆರ್ಮಿ ಏವಿಯೇಷನ್ನ ಚೀತಾ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸುತ್ತಿತ್ತು. ಜಿಲ್ಲೆಯ ಸಂಗೆ ಗ್ರಾಮದಿಂದ ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅಸ್ಸಾಂನ ಸೋನಿತ್ಪುರ ಜಿಲ್ಲೆಯ ಮಿಸ್ಸಮರಿ ಕಡೆಗೆ ತೆರಳುತ್ತಿತ್ತು. ಬೆಳಗ್ಗೆ 9.15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲ್ನೊಂದಿಗೆ (ATC) ಸಂಪರ್ಕ ಕಳೆದುಕೊಂಡಿತ್ತು. ಬಳಿಕ ಮಂಡಲ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದರು.
ಘಟನೆ ಬಳಿಕ ಸಶಸ್ತç ಸೀಮಾ ಬಾಲ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸೇರಿದಂತೆ ಭಾರತೀಯ ಸೇನಾಪಡೆಯ ಐದು ತಂಡಗಳು ಕಾರ್ಯಾಚರಣೆ ನಡೆಸಿತ್ತು. ಕೆಲ ಗಂಟೆಗಳ ಬಳಿಕ ಮಂಡಲದ ಪೂರ್ವ ಗ್ರಾಮದ ಬಂಗ್ಲಾಜಾಪ್ ಬಳಿ ವಿಮಾನ ಅವಶೇಷಗಳು ಪತ್ತೆಯಾಗಿದ್ದು, ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ಆದೇಶಿಸಲಾಗಿದೆ. ಇದನ್ನೂ ಓದಿ: ಕೊಲೆ ಆರೋಪಿಗಳ ಜಮೀನಿಗೆ ನುಗ್ಗಿದ ಬುಲ್ಡೋಜರ್ – ಬೆಳೆಗಳು ನೆಲಸಮ
ಹೆಲಿಕಾಪ್ಟರ್ ಅಪಘಾತಕ್ಕೀಡಾದ ಪ್ರದೇಶದಲ್ಲಿ ಮೊಬೈಲ್ ಸಂಪರ್ಕ ಸಾಧ್ಯವಿಲ್ಲ. ಅಲ್ಲದೇ ಹೆಚ್ಚಾಗಿ ಮಂಜಿನಿಂದ ಕೂಡಿತ್ತು ಎಂದು ವಿಶೇಷ ತನಿಖಾ ಕೋಶದ (SIC) ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್ಬೀರ್ ಸಿಂಗ್ ತಿಳಿಸಿದ್ದಾರೆ.
ಚೀತಾ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಸುಮಾರು 9.15 ಗಂಟೆಗೆ ಏರ್ ಟ್ರಾಫಿಕ್ ಕಂಟ್ರೋಲ್ (Air Traffic Control)ನೊಂದಿಗೆ ಸಂಪರ್ಕ ಕಳೆದುಕೊಂಡಿದೆ ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದಾರೆ.
ಹಾಸನ: ಭಾರತೀಯ ಸೇನೆ (Indian Army) ಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಂಪನಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಹರೀಶ್ ಅವರ ದ್ವಿತಿಯ ಪುತ್ರ ಹೆಚ್.ಯೋಗೇಶ್ (28) ಆತ್ಮಹತ್ಯೆಗೆ ಶರಣಾದ ಯೋಧ (Soldier). ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜ.4 ರಂದು ಕರ್ತವ್ಯಕ್ಕೆ ರಜೆ ಹಾಕಿ ಗ್ರಾಮಕ್ಕೆ ಬಂದಿದ್ದ ಯೋಗೇಶ್ ಅವರು ತಮ್ಮ ಪತ್ನಿ ದೀಕ್ಷಾ ಹಾಗೂ ಕುಟುಂಬಸ್ಥರೊಂದಿಗೆ ಒಂದು ತಿಂಗಳಿಂದ ಚೆನ್ನಾಗಿದ್ದರು.
ಮಂಗಳವಾರ ಬೆಳಗ್ಗೆ 10 ಗಂಟೆ ಸಮಯವಾದರೂ ಯೋಗೇಶ್ ಮಲಗಿದ್ದ ರೂಂ ಬಾಗಿಲು ತೆರೆದಿರಲಿಲ್ಲ. ಮನೆಯವರು ಎಷ್ಟು ಕೂಗಿದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಬಾಗಿಲನ್ನು ಒಡೆದು ನೋಡಿದಾಗ ಯೋಗೇಶ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಕೂಡಲೇ ಕುಟುಂಬದವರು ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ. ವೈದ್ಯರು ಪರೀಕ್ಷಿಸಿ ಯೋಧ ಯೋಗೀಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಯೋಗೇಶ್ ಅವರು 2011 ರಲ್ಲಿ ಹಾಸನದಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಎರಡು ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 4 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು.
Remembering our valorous heroes who we lost on this day in Pulwama. We will never forget their supreme sacrifice. Their courage motivates us to build a strong and developed India.
ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 4 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. ಇದನ್ನೂ ಓದಿ: ಅಭಿನಂದನ್ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್ಗಳು ಧ್ವಂಸ ಆಗ್ತಿತ್ತು – ಧನೋವಾ
ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆ ಇಂದು ನೆನಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಅನೇಕ ಗಣ್ಯರು ಸ್ಮರಿಸಿದ್ದಾರೆ.
ಈ ದಿನ ನಾವು ಪುಲ್ವಾಮಾದ್ಲಿ ನಮ್ಮ ಪರಾಕ್ರಮಿಗಳನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಳ್ಳುತ್ತೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ಭಾವುಕ ಟ್ವೀಟ್ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಭಿನಂದನ್ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ
ದಾಳಿಯ ಪ್ರಮುಖ ಅಂಶಗಳು – 14 ಫೆಬ್ರವರಿ 2019:
ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದನು.
15 ಫೆಬ್ರವರಿ 2019:
ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೆಎಂನ ನಾಯಕ ಮಸೂದ್ ಅಜರ್ಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು. ಇದನ್ನೂ ಓದಿ: ಅಭಿನಂದನ್ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ
ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತು. ಮಸೂದ್ ಅಜರ್ ಭಯೋತ್ಪಾದಕ ಸಂಘಟನೆಗೆ ಸೇರಿದವನಲ್ಲ ಎಂದು ಚೀನಾ ಸಮರ್ಥಿಸಿಕೊಂಡಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನು ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು ಎಂದು ಅಂದು ಭಾರತದ ಪ್ರಧಾನಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲಾಯಿತು.
16 ಫೆಬ್ರವರಿ 2019:
ರಾಜಕೀಯ ಪಕ್ಷಗಳು ಭದ್ರತಾ ಪಡೆಗಳನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದವು, ಸ್ವಲ್ಪ ಸಮಯದ ನಂತರ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 200 ಪ್ರತಿಶತಕ್ಕೆ ಹೆಚ್ಚಿಸಲಾಯಿತು. – ಜೆಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ 7 ಜನರನ್ನು ಪುಲ್ವಾಮದಲ್ಲಿ ಬಂಧಿಸಲಾಯಿತು.
ಈ ದಾಳಿ ಪರಿಣಾಮದಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟೂ ಹದಗೆಟ್ಟಿತ್ತು. ಭಾರತವು ತನ್ನ ಅತ್ಯಂತ ಆದ್ಯತೆಯ ರಾಷ್ಟ್ರವಾಗಿ ಪಾಕಿಸ್ತಾನದ ಸ್ಥಾನಮಾನವನ್ನು ತೆಗೆದುಹಾಕಿತು. ಭಾರತಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಹೆಚ್ಚಿಸಲಾಯಿತು. ಭಾರತದ ಸರ್ಕಾರದ ಪ್ರಕಾರ, ಪಾಕಿಸ್ತಾನವನ್ನು ಮನಿ ಲಾಂಡರಿಂಗ್ (ಎಫ್ಎಟಿಎಫ್) ಕಪ್ಪುಪಟ್ಟಿಗೆ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ ಸೇರಿಸಬೇಕು. ಜಮ್ಮು ಮತ್ತು ಕಾಶ್ಮೀರ ಆಡಳಿತವು ಫೆಬ್ರವರಿ 17 ರಂದು ಪ್ರತ್ಯೇಕತಾವಾದಿ ನಾಯಕರ ಭದ್ರತಾ ಕ್ರಮಗಳನ್ನು ಕೊನೆಗೊಳಿಸಿತು.
26 ಫೆಬ್ರವರಿ 2019:
ಭಾರತೀಯ ವಾಯುಪಡೆಯ ಜೆಟ್ಗಳು 12 ದಿನಗಳ ನಂತರ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿರುವ ಬಾಲಾಕೋಟ್ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. 1971ರ ಭಾರತ-ಪಾಕಿಸ್ತಾನ ಯುದ್ಧದ ನಂತರ, ದಾಳಿಯ ವಿಮಾನವು ನಿಯಂತ್ರಣ ರೇಖೆಯನ್ನು ದಾಟಿದ್ದು ಇದೇ ಮೊದಲಾಗಿತ್ತು. ಫೆಬ್ರವರಿ 26 ರಂದು, ಭಾರತೀಯ ವಾಯುಪಡೆಯ 12 ಮಿರಾಜ್-2000 ಜೆಟ್ಗಳು, ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಾಲಕೋಟ್ನಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿತು. ಇದು ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ನಡೆಸಿದ ದಾಳಿ ಮತ್ತು ಈ ದಾಳಿಯಲ್ಲಿ ಸುಮಾರು 250 ಉಗ್ರಗಾಮಿಗಳು ಬಲಿಯಾದರು ಎಂದು ವರದಿ ಹೇಳಿದೆ.
27 ಫೆಬ್ರವರಿ 2019:
ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಭಾರತದ ವಾಯುನೆಲೆಯನ್ನು ಪ್ರವೇಶಿಸಿದವು. ಈ ಯುದ್ಧವಿಮಾನಗಳು ಭಾರತೀಯ ಮಿಗ್-21 ಬೈಸನ್ ಎರಡು ಯುದ್ಧವಿಮಾನಗಳನ್ನು ನಾಶಪಡಿಸಿದವು. ಇದೇ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಲ್ಟಿಹೊಡೆಯುವಂತೆ ಮಾಡಿದ್ದರು. ಈ ವೇಳೆ ಅಭಿನಂದನ್ ಅವರನ್ನ ಪಾಕಿಸ್ತಾನ ಸೆರೆಹಿಡಿಯಿತು.
28 ಫೆಬ್ರವರಿ 2019:
ಬಂಧಿತ ಐಎಎಫ್ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಶುಕ್ರವಾರ ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಫೆಬ್ರವರಿ 28 ರಂದು ಘೋಷಿಸಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಚೀನಾ-ಭಾರತ ಗಡಿ (India-China Clash) ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಕಾಂಗ್ರೆಸ್ (Congress) ನಡೆಸಿದ ಧರಣಿಯನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷ ಕಾಂಗ್ರೆಸ್ ಸದನ ಪೀಠಕ್ಕೆ ಅಗೌರವ ತೋರುವ ರೀತಿ ನಡೆದುಕೊಳ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಂಸತ್ತಿನಲ್ಲಿ ಸೂಕ್ಷ್ಮ ವಿಷಯಗಳ ಚರ್ಚೆ ನಡೆಯದ ಹಲವು ನಿದರ್ಶನಗಳು ನಮ್ಮ ಮುಂದಿವೆ. ಪ್ರತಿಪಕ್ಷದ ಸರ್ಕಾರದ ಅವಧಿಯಲ್ಲೂ ಇಂತಹ ಆಚರಣೆಯನ್ನು ಕಂಡಿದ್ದೇವೆ. ಸ್ವತಃ ರಾಜ್ಯಸಭೆ ಸಭಾಪತಿಯವರು ಸಂಧಾನಕ್ಕೆ ಕರೆದರೂ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬರಲು ಒಪ್ಪಲಿಲ್ಲ. ರಾಜ್ಯಸಭೆ ಪೀಠದಿಂದ ಏನೇ ನಿರ್ದೇಶನಗಳು ಬಂದರೂ ಅದನ್ನ ಉಲ್ಲಂಘಿಸಬೇಕು ಎಂಬ ನಿರ್ಧಾರ ಪ್ರತಿಪಕ್ಷಗಳು ಮಾಡಿದಂತಿದೆ. ಈ ರೀತಿಯ ನಡವಳಿಕೆ ಸದನದಲ್ಲಿ ತೋರುವುದು ಖರ್ಗೆಯವರಿಗೆ ಸರಿಯಾದುದಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಚೀನಾ ಗಡಿ ಸಂಘರ್ಷ – ಮೊಬೈಲ್ ಸಂಪರ್ಕ ಸುಧಾರಣೆಗೆ ತವಾಂಗ್ನಲ್ಲಿ 22 ಟವರ್
ರಾಜ್ಯಸಭೆ ಸಭಾಪತಿ ಅವರು ಪ್ರತಿಪಕ್ಷಗಳಲ್ಲಿ ಕೈ ಮುಗಿದು ಮನವಿ ಮಾಡಿದರು. ಸದನದಲ್ಲಿ ಪೀಠಾಧ್ಯಕ್ಷರು ಎದ್ದು ನಿಂತು ಕೈ ಮುಗಿದು ರಿಕ್ವೆಸ್ಟ್ ಮಾಡುತ್ತಾರೆ ಎಂದರೆ, ಪ್ರತಿಪಕ್ಷ ನಾಯಕ ಹಾಗೂ ಸಭಾ ನಾಯಕರು ಅದನ್ನ ಗೌರವಿಸಬೇಕು. ಆ ಮನವಿಯನ್ನ ಸಾರಾಸಗಟಾಗಿ ಮಲ್ಲಿಕಾರ್ಜುನ ಖರ್ಗೆ ತಳ್ಳಿ ಹಾಕುತ್ತಾರೆ ಎಂದರೆ ಏನರ್ಥ? ಸಂಧಾನದ ಮಾತುಕತೆಗೆ ನಾನು ಬರಲ್ಲ ಅಂತಾ ಖರ್ಗೆ ನೇರವಾಗಿ ಹೇಳಿದರು. ಒಂದು ಸೌಜನ್ಯವನ್ನ ತೋರಿಸಲಿಲ್ಲ. ಈ ನಡವಳಿಕೆ ಖಂಡನೀಯ ಎಂದರು.
ಕೊನೆಪಕ್ಷ ಪ್ರತಿಪಕ್ಷಗಳು ಚೀನಾ ವಿಚಾರದಲ್ಲಿ ನಮ್ಮ ಸೇನೆಯ ಹೇಳಿಕೆಯನ್ನಾದರೂ ನಂಬಬೇಕು. ಭಾರತೀಯ ಸೇನೆಯ ಮೇಲೆ ಕಾಂಗ್ರೆಸ್ಗೆ ನಂಬಿಕೆ ಇಲ್ಲವೇ? ಚೀನಾ-ಭಾರತ ಗಡಿ ವಿಚಾರ ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕವಾಗಿ ಚರ್ಚೆ ನಡೆಸುವುದು ಎಷ್ಟು ಸೂಕ್ತ? ಕೆಲವು ಸೂಕ್ಷ್ಮ ವಿಚಾರಗಳನ್ನ ಸದನದಲ್ಲಿ ಚರ್ಚಿಸುವುದಕ್ಕಿದ್ದ ಸಭಾ ನಾಯಕರು, ಪ್ರತಿಪಕ್ಷ ನಾಯಕರು ಒಟ್ಟಾಗಿ ಸೇರಿ ಚರ್ಚಿಸುವ ಅಗತ್ಯತೆ ಇರುತ್ತದೆ. ಕಾಂಗ್ರೆಸ್ ಆಡಳಿತ ನಡೆಸುವಾಗಲು ಇಂಥಹ ಹಲವು ನಿದರ್ಶನಗಳಿವೆ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಲಾಕ್ಡೌನ್ ಅಗತ್ಯವಿಲ್ಲ : IMA
ಕಾಂಗ್ರೆಸ್ ಆಡಳಿತ ನಡೆಸುವಾಗ ಇಂಥಹ ಸಂದರ್ಭಗಳಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ರಾಷ್ಟ್ರದ ಹಿತ ಗಮನಿಸಿ ಸರ್ಕಾರಕ್ಕೆ ಸಹಕಾರ ನೀಡಿದೆ. ಸದನದಲ್ಲಿ ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿಕೆ ನೀಡಿದ್ದಾರೆ. ಅಲ್ಲದೇ ಭಾರತೀಯ ಸೇನೆ ಕೂಡ ಹೇಳಿಕೆ ನೀಡಿದೆ. ಸೇನೆಯ ಹೇಳಿಕೆಯನ್ನಾದ್ರೂ ನಂಬಿ ಕಾಂಗ್ರೆಸ್ ಸುಗಮವಾಗಿ ಸದನ ನಡೆಯಲು ಅವಕಾಶ ಮಾಡಿಕೊಡಬಹುದಿತ್ತು. ಆದರೆ ಮಲ್ಲಿಕಾರ್ಜುನ ಖರ್ಗೆ ತಮ್ಮ ಪಕ್ಷದ ಮೇಲಿನವರನ್ನ ಮೆಚ್ಚಿಸಬೇಕಿದೆ. ಯಾರನ್ನೋ ಮೆಚ್ಚಿಸಲು ಸಂವಿಧಾನಾತ್ಮಕವಾಗಿ ನಡೆಯುವ ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಧರಣಿಗೆ ಜೋಶಿ ತಿರುಗೇಟು ನೀಡಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ/ಇಟಾನಗರ: ಚೀನಾ ಯುದ್ಧಕ್ಕೆ (China War) ತಯಾರಿ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ ನಂತರ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮುಂದಿಟ್ಟಿದೆ. ಉತ್ತರಕೊಡಿ ಪ್ರಧಾನ ಮಂತ್ರಿ ಎಂದು ಪಟ್ಟು ಹಿಡಿದಿದೆ.
Don’t deflect, distract and divert by getting your drum beaters to attack a man who has walked 20-25 kms a day, listening to the pain, hope and aspirations of the people of India for the past 100 days. Jawaab Do, Pradhan Mantri @narendramodipic.twitter.com/K2lVvWVv60
ಅರುಣಾಚಲ ಪ್ರದೇಶದ (Arunachal Pradesh) ಎಲ್ಎಸಿಯಲ್ಲಿ (LAC) ಭಾರತ ಮತ್ತು ಚೀನಾದ ಸೈನಿಕರ ನಡುವೆ ಇದೇ ತಿಂಗಳ ಡಿಸೆಂಬರ್ 9ರಂದು ಘರ್ಷಣೆ ಏರ್ಪಟ್ಟಿತ್ತು. ಮೊದಲು ಚೀನಾ ಪಡೆಗಳು ಗಡಿಯನ್ನು ದಾಟಿ ಬಂದಿದ್ದು, ಭಾರತೀಯ ಸೈನಿಕರು ಪ್ರತಿರೋಧ ಒಡ್ಡಿದ್ದರು. ಈ ಕುರಿತು ಸಂಸತ್ತಿನಲ್ಲಿ ಚರ್ಚಿಸಬೇಕೆನ್ನುವ ಕಾಂಗ್ರೆಸ್ ನಾಯಕರ ಬೇಡಿಕೆಯನ್ನೂ ತಿರಸ್ಕರಿಸಲಾಯಿತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) 7 ಪ್ರಶ್ನೆಗಳನ್ನ ಪ್ರಧಾನಿ ಅವರ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು? ಅರುಣಾಚಲದ ಗಡಿಯಲ್ಲಿ ನಿಜವಾಗಿ ಏನಾಯ್ತು?
ಕಾಂಗ್ರೆಸ್ ಪ್ರಶ್ನೆಗಳೇನು?
2020ರ ಜೂನ್ 20 ರಂದು ಪೂರ್ವ ಲಡಾಖ್ನಲ್ಲಿ ಚೀನಾದಿಂದ ಭಾರತದ ಭೂಪ್ರದೇಶದ ಮೇಲೆ ಯಾವುದೇ ಆಕ್ರಮಣ ನಡೆದಿಲ್ಲ ಎಂದು ನೀವು ಏಕೆ ಹೇಳಿದ್ದೀರಿ? ಮೇ 2020ರ ಮೊದಲು ನಾವು ನಿಯಮಿತವಾಗಿ ಗಸ್ತು ತಿರುಗುತ್ತಿದ್ದ ಪೂರ್ವ ಲಡಾಖ್ನಲ್ಲಿ ಸಾವಿರಾರು ಚದರ ಕಿಮೀ ಗಳನ್ನು ಪ್ರವೇಶಿಸದಂತೆ ನಮ್ಮ ಸೈನ್ಯವನ್ನೇ ತಡೆಯಲು ಚೀನಿಯರಿಗೇಕೆ ಅನುಮತಿಸಿದ್ದೀರಿ? ಮೌಂಟೇನ್ ಸ್ಟ್ರೈಕ್ ಕಾರ್ಪ್ಸ್ ಅನ್ನು ಸ್ಥಾಪಿಸಲು 2013ರ ಜುಲೈ 17 ರಂದು ಕ್ಯಾಬಿನೆಟ್ ಅನುಮೋದಿಸಿದ ಯೋಜನೆಯನ್ನು ನೀವು ಏಕೆ ಕೈಬಿಟ್ಟಿದ್ದೀರಿ? ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ
ಪಿಎಂ ಕೇರ್ ನಿಧಿಗೆ ಕೊಡುಗೆ ನೀಡಲು ಚೀನಾ ಕಂಪನಿಗಳಿಗೆ ಏಕೆ ಅವಕಾಶ ಕೊಟ್ಟಿದ್ದೀರಿ? ಕಳೆದ 2 ವರ್ಷಗಳಲ್ಲಿ ಚೀನಾದಿಂದ ದಾಖಲೆಯ ಮಟ್ಟದ ಆಮದುಗಳನ್ನು ಏಕೆ ಅನುಮತಿಸಿದ್ದೀರಿ? ಗಡಿ ಪರಿಸ್ಥಿತಿ ಮತ್ತು ಚೀನಾದಿಂದ ಭಾರತ ಎದುರಿಸುತ್ತಿರುವ ಸವಾಲುಗಳನ್ನು ಸಂಸತ್ತಿನಲ್ಲಿ ಚರ್ಚಿಸಬಾರದು ಎಂದು ಏಕೆ ಒತ್ತಾಯಿಸಿದ್ದೀರಿ? ನೀವು 18 ಬಾರಿ ಚೀನಾದ ನಾಯಕನನ್ನು ಭೇಟಿ ಮಾಡಿದ್ದೀರಿ, ಇತ್ತೀಚೆಗೆ ಕ್ಸಿ ಜಿನ್ಪಿಂಗ್ ಅವರೊಂದಿಗೆ ಹಸ್ತಲಾಘವ ಮಾಡಿದ್ದೀರಿ. ಇದಾದ ಕೆಲವೇ ದಿನಗಳಲ್ಲಿ ಚೀನಾ ತವಾಂಗ್ಗೆ ಅತಿಕ್ರಮಣ ಪ್ರಾರಂಭಿಸಿತು. ಇಷ್ಟಾದರೂ ನೀವು ದೇಶವನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಜೈರಾಮ್ ರಮೇಶ್ ಅವರು ಈ ಪ್ರಶ್ನೆಗಳ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]