Tag: indian army

  • RSS ಕಾರ್ಯಕರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನು: ಸುಧಾಕರ್ ಪ್ರಶ್ನೆ

    RSS ಕಾರ್ಯಕರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನು: ಸುಧಾಕರ್ ಪ್ರಶ್ನೆ

    ಚಿಕ್ಕಬಳ್ಳಾಪುರ: ಆರ್‌ಎಸ್‌ಎಸ್ ಕಾರ್ಯರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದ್ದಾರೆ.

    ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಬಗ್ಗೆ ತಿಳಿದುಕೊಳ್ಳದೇ ಪ್ರತಿಪಕ್ಷಗಳು ಸುಮ್ಮನೇ ಸದ್ದು ಮಾಡುತ್ತಿದ್ದಾರೆ. ದೇಶದ ಮೇಲೆ ಅಭಿಮಾನ ಇರುವ ಪ್ರತಿಯೊಬ್ಬರೂ ಅಗ್ನಿಪಥ್ ಯೋಜನೆಯ ಅಗ್ನಿವೀರರಾಗಲು ಅರ್ಹರಿದ್ದಾರೆ. ಅದು ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆ ಸದಸ್ಯರಾದರೂ ಆಗಬಹುದು ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ

    ನಾಲ್ಕು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಬಂದ ಯುವಕ ಯಾವುದೇ ಕೆಲಸಕ್ಕೆ ಸೇರಿದರೂ ಅಲ್ಲಿ ಶಿಸ್ತು, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ದೇಶದ ಬಗ್ಗೆ ಅಭಿಮಾನ ತೋರುತ್ತಾರೆ ಎಂಬ ಜ್ಞಾನವೂ ಇವರಿಗಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ

    ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ, ಎರಡು ದಿನಗಳ ರಾಜ್ಯ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿ, ನಾಳೆ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿಯವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಭಾಗವಹಿಸಲಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಫಲಾನುಭವಿಗಳಿಗೆ ಸಲಕರಣೆ ಮತ್ತು ಆದೇಶ ಪತ್ರಗಳನ್ನು ಪ್ರಧಾನಿಯವರು ಇದೇ ಸಂದರ್ಭದಲ್ಲಿ ವಿತರಿಸಲಿದ್ದಾರೆ ಎಂದು ಹೇಳಿದರು.

    Live Tv

  • ಅಗ್ನಿವೀರ್‌ ನೇಮಕಾತಿ ನೋಟಿಫಿಕೇಶನ್‌ ಪ್ರಕಟ – 8ನೇ ತರಗತಿ ಪಾಸ್‌ ಆದ್ರೂ ಸೇನೆ ಸೇರಬಹುದು

    ಅಗ್ನಿವೀರ್‌ ನೇಮಕಾತಿ ನೋಟಿಫಿಕೇಶನ್‌ ಪ್ರಕಟ – 8ನೇ ತರಗತಿ ಪಾಸ್‌ ಆದ್ರೂ ಸೇನೆ ಸೇರಬಹುದು

    ನವದಹಲಿ: ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಅಗ್ನಿವೀರ್‌ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ.

    ಸೋಮವಾರ joinindianarmy.nic.in ವೆಬ್‌ಸೈಟ್‌ನಲ್ಲಿನೋಟಿಫಿಕೇಶನ್‌ ಅಪ್ಲೋಡ್‌ ಮಾಡಿದೆ. ಮುಂದಿನ ತಿಂಗಳಿನಿಂದ  ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ  ಸೇನಾ ನೇಮಕಾತಿ ರ‍್ಯಾಲಿ ಆಗಸ್ಟ್‌ ಮಧ್ಯದಲ್ಲಿ ನಡೆಯಲಿದೆ.

    ಜನರಲ್‌ ಡ್ಯೂಟಿ, ಟೆಕ್‌, ಕ್ಲರ್ಕ್‌, ಸ್ಟೋರ್‌ ಕೀಪರ್‌ ಟೆಕ್ನಿಕಲ್‌, ಅಗ್ನಿವೀರ್‌ ಟ್ರೇಡ್ಸ್‌ಮನ್‌ ಹುದ್ದೆಗಳಿಗೆ ಅರ್ಜಿ ಆಹ್ವನಿಸಲಾಗಿದೆ. ಅಗ್ನಿವೀರ್‌ ಟ್ರೇಡ್ಸ್‌ಮನ್‌ ಹುದ್ದೆಗೆ 8ನೇ ತರಗತಿ ಕನಿಷ್ಠ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಾಪಸ್ ಇಲ್ಲ – ಗಲಭೆಕೋರರಿಗೆ ಸೇವೆ ಸೇರಲು ಅವಕಾಶವಿಲ್ಲ: ಲೆ.ಜ ಅನಿಲ್‌ಪುರಿ ವಾರ್ನಿಂಗ್

    ಕನಿಷ್ಠ 17 ವರ್ಷ 6 ತಿಂಗಳು ಗರಿಷ್ಠ 23 ವರ್ಷದ ಒಳಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯ ವೇಳೆ ಎನ್‌ಸಿಸಿ ಸಿ ಸರ್ಟಿಫಿಕೇಟ್‌ ಇದ್ದವರಿಗೆ 15 ಬೋನಸ್‌ ಅಂಕ ನೀಡಲಾಗುತ್ತದೆ.

     

    ಸಂಬಳ ಎಷ್ಟು?
    ಮೊದಲ ವರ್ಷ 30 ಸಾವಿರ ರೂ., ಎರಡನೇ ವರ್ಷ 33 ಸಾವಿರ ರೂ., ಮೂರನೇ ವರ್ಷ 36,500 ರೂ., ನಾಲ್ಕನೇಯ ವರ್ಷ 40 ಸಾವಿರ ರೂ. ಸಿಗಲಿದೆ. ಅಷ್ಟೇ ಅಲ್ಲದೇ ಪ್ರತಿ ವರ್ಷ ನಿಗದಿ ಪಡಿಸಿದ ಭತ್ಯೆ ಸಿಗಲಿದೆ.

    ಅಗ್ನಿ ವೀರರಿಗೆ 48 ಲಕ್ಷ ರೂ. ಮೌಲ್ಯದ ವಿಮೆ ಸಿಗಲಿದೆ. ಆದರೆ ಇವರು ಆರ್ಮಿ ಗ್ರೂಪ್‌ ಇನ್ಶೂರೆನ್ಸ್‌ ಫಂಡ್‌(ಎಜಿಐಎಫ್‌) ಯೋಜನೆಯ ಭಾಗವಾಗಿರುವುದಿಲ್ಲ. ಅಗ್ನಿವೀರರಾಗಿ ಸೇನೆಗೆ ಸೇರಲು ಬಯಸುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಬೇಕಾಗುತ್ತದೆ.

    ನೋಟಿಫಿಕೇಶನ್‌ ಪಿಡಿಎಫ್‌ ಫೈಲ್‌ ಡೌನ್‌ಲೋಡ್‌ ಮಾಡಲು ಕ್ಲಿಕ್‌ ಮಾಡಿ:  joinindianarmy.nic.in

    Live Tv

  • ಇಂಡಿಯನ್ ಆರ್ಮಿ ವಿಶ್ವದಲ್ಲೇ ಫೈನೆಸ್ಟ್ ಆರ್ಮಿ, ಇದಕ್ಕೆ ಡಿಸ್ಟರ್ಬ್ ಮಾಡ್ಬೇಡಿ: ನಿವೃತ್ತ ಸೇನಾಧಿಕಾರಿ ಎಚ್ಚರಿಕೆ

    ಇಂಡಿಯನ್ ಆರ್ಮಿ ವಿಶ್ವದಲ್ಲೇ ಫೈನೆಸ್ಟ್ ಆರ್ಮಿ, ಇದಕ್ಕೆ ಡಿಸ್ಟರ್ಬ್ ಮಾಡ್ಬೇಡಿ: ನಿವೃತ್ತ ಸೇನಾಧಿಕಾರಿ ಎಚ್ಚರಿಕೆ

    ಮಡಿಕೇರಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಅಗ್ನಿಪಥ್ ಯೋಜನೆಯು ಸೇನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎನ್ನುವುದು ಕೊಡಗಿನ ವೀರ ಯೋಧರ ಆತಂಕ. ಸೈನಿಕ ನೇಮಕಾತಿಗೆ ಸಂಬAಧಿಸಿದAತೆ ಅಗ್ನಿಪಥ್ ಎಂಬ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಆದರೆ ಇಂಡಿಯನ್ ಆರ್ಮಿ ವಿಶ್ವದ ಒಂದು ಫೈನೆಸ್ಟ್ ಆರ್ಮಿಯಾಗಿದೆ. ಇಷ್ಟು ಚೆನ್ನಾಗಿರುವಾಗ ಯಾಕೆ ಅದಕ್ಕೆ ಡಿಸ್ಟರ್ಬ್ ಮಾಡ್ತೀರ? ನ್ಯಾಷನಲ್ ಸೆಕ್ಯೂರಿಟಿ ವಿಚಾರದಲ್ಲಿ ಹುಡುಗಾಟ ಆಡಬೇಡಿ ಎಂದು ಕೊಡಗಿನ ನಿವೃತ್ತ ಸೇನಾಧಿಕಾರಿ ಕರ್ನಲ್ ಮುತ್ತಣ್ಣ ಎಚ್ಚರಿಕೆಯ ಮಾತನ್ನಾಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್

    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಮಾತಾನಾಡಿದ ಅವರು, ತಾನು 24 ವರ್ಷ ದೇಶಕ್ಕಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿದ್ದೇನೆ. ಇಡೀ ವಿಶ್ವದಲ್ಲೇ ಅತ್ಯುತ್ತಮ ಸೇನೆ ಎಂಬ ಹೆಗ್ಗಳಿಕೆ ನಮ್ಮ ಇಂಡಿಯನ್ ಆರ್ಮಿಗಿದೆ. ಎಲ್ಲವೂ ಚೆನ್ನಾಗಿರುವಾಗ ಅದಕ್ಕೆ ತೊಂದರೆ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ತಿಳಿಸಿದರು.

    ಸರ್ಕಾರದ ಯೋಚನೆ ಸರಿ ಇರಬಹುದು. ಆದರೆ ಸರಿಯಾಗಿ ಆಲೋಚನೆ ಮಾಡಿದಂತಿಲ್ಲ. ಸೇನೆಯಲ್ಲಿ ಲೋಪ ದೋಶಗಳಿಲ್ಲದೆ ಇರುವಾಗ ಯಾಕೆ ಈ ಹೊಸ ಯೋಜನೆ? ಹಣ ಉಳಿಸಬೇಕಾದರೆ ಎಂಎಲ್‌ಎ, ಎಂಪಿ ಪೆನ್ಷನ್ ಕಡಿತಗೊಳಿಸಿ, ರಕ್ಷಣಾ ಇಲಾಖೆ ಕಛೇರಿಯ ಸಿಬ್ಬಂದಿಯನ್ನು ಕಡಿತ ಮಾಡಿ. ಅದು ಬಿಟ್ಟು ಜಗತ್ತಿನ ಶ್ರೇಷ್ಠ ಆರ್ಮಿಗೆ ಡಿಸ್ಟರ್ಬ್ ಮಾಡಬೇಡಿ ಎಂದರು. ಇದನ್ನೂ ಓದಿ: ತೆಲಂಗಾಣ, ಬಿಹಾರದಲ್ಲಿ ಪರಿಸ್ಥಿತಿ ಉದ್ವಿಗ್ನ- ಗುಂಡಿನ ದಾಳಿಗೆ ವ್ಯಕ್ತಿ ಬಲಿ

    ಸೇನೆಯಲ್ಲಿ ಟೂರ್ ಆಫ್ ಡ್ಯೂಟಿ ಮಾಡಿದರೆ ದೊಡ್ಡ ಆಪತ್ತು. ಹಾಗಾದರೆ ಡಾಕ್ಟರ್‌ಗಳನ್ನು ಟೂರ್ ಆಫ್ ಡ್ಯೂಟಿ ಮಾಡಿಸಿಬಿಡಿ. ಅಂತಹ ಡಾಕ್ಟರ್‌ಗಳಿಂದ ಆಪರೇಷನ್ ಮಾಡಿಸಿಕೊಳ್ಳುತ್ತೀರಾ? ರಷ್ಯಾ-ಉಕ್ರೇನ್ ಯುದ್ಧದಲ್ಲಿ ರಷ್ಯಾ ನಷ್ಟಕ್ಕೆ ಇದೇ ನೀತಿ ಕಾರಣ. ಅಗ್ನಿಪಥ್ ಯೋಜನೆಯಿಂದ ಸೈನಿಕರ ಆತ್ಮಸ್ಥೈರ್ಯ ಕುಗ್ಗುತ್ತದೆ. ಆರ್ಮಿ ಚೆನ್ನಾಗಿದೆ, ದಯವಿಟ್ಟು ಅದಕ್ಕೆ ಡಿಸ್ಟರ್ಬ್ ಮಾಡಬೇಡಿ ಎಂದು ನಿವೃತ್ತ ಸೇನಾಧಿಕಾರಿ ಕರ್ನಲ್ ಮುತ್ತಣ್ಣ ಮನವಿ ಮಾಡಿದ್ದಾರೆ.

    Live Tv

  • ‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್

    ‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್

    ಶ್ರೀನಗರ: ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ದೇಶದ ಮಿಲಿಟರಿಯಲ್ಲಿ ಸೇವೆ ಮಾಡಲು ಯುವ ಜನರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಅಗ್ನಿಪಥ್ ಯೋಜನೆ ಆರಂಭಿಸಲಾಗಿದೆ. ಅಗ್ನಿಪಥ್ ದೇಶದ ಯುವಕರಿಗೆ ದೇಶ ಸೇವೆ ಮಾಡಲು ಒದಗಿ ಬಂದಿರುವ ಸುವರ್ಣ ಅವಕಾಶವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

    ಅಗ್ನಿಪಥ್ ಯೋಜನೆ ಬಗ್ಗೆ ಜಮ್ಮು ಕಾಶ್ಮೀರದಲ್ಲಿ ಮಾತನಾಡಿರುವ ಅವರು, ಅಗ್ನಿಪಥ್ ಯೋಜನೆ ಆರಂಭಿಸಿರುವ ಕೇಂದ್ರ ಸರ್ಕಾರ ದೇಶದ ಯುವಕರಿಗೆ ದೇಶ ಸೇವೆ ಮಾಡಲು ನೀಡಿರುವ ಸುವರ್ಣ ಅವಕಾಶವಾಗಿದೆ. ಅಗ್ನಿವೀರರಾಗಿ 4 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿಕೊಡಲಾಗಿದೆ. ಅಗ್ನಿವೀರರ ಮೂಲಕ ದೇಶದ ಸೇನೆಯನ್ನು ಮತ್ತಷ್ಟು ಬಲಗೊಳಿಸುವ ಮತ್ತು ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಕ್ರಮ ವಹಿಸಿದ್ದೇವೆ ಎಂದರು. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

    ಕಳೆದ 2 ವರ್ಷಗಳಲ್ಲಿ ಹಲವು ಯುವಕರಿಗೆ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಗದೆ ಇರುವುದನ್ನು ಗಮನಿಸಿ ಅಗ್ನಿಪಥ್ ಯೋಜನೆಯನ್ನು ಆರಂಭಿಸಿದ್ದೇವೆ. ದೇಶ ಸೇವೆ ಮಾಡಲು ಯುವಕರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಗ್ನಿವೀರರ ನೇಮಕದ ವಯೋಮಿತಿಯನ್ನು 21 ರಿಂದ 23ಕ್ಕೆ ಏರಿಸಲಾಗಿದೆ. ಈ ಮೂಲಕ ಯುವಜನರಿಗೆ ಸೇನೆ ಸೇರಲು ಉತ್ತಮವಾದ ಅವಕಾಶ ನೀಡಿದ್ದೇವೆ. ಕೂಡಲೇ ಈ ಬಗ್ಗೆ ಯುವಕರು ಗಮನ ಹರಿಸಿ ತಯಾರಿ ನಡೆಸಿ. ಕೆಲದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ – ಅಗ್ನಿಪಥ್ ನೇಮಕಾತಿ ಯೋಜನೆ ಪ್ರಾರಂಭ

    ಇದೀಗ ಕೇಂದ್ರ ಅಗ್ನಿವೀರರ ಆಯ್ಕೆಗೆ ನಿಗದಿಪಡಿಸಿರುವ ವಯೋಮಿತಿ ಕುರಿತಾಗಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಕೂಡಲೇ ಚರ್ಚಿಸಿ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

    Live Tv

  • ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

    ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೀಡಿದ ಹೇಳಿಕೆಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರ ಕೇಂದ್ರ ಪಡೆಗಳನ್ನು ಕರೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಸೂಚನೆ ನೀಡಿದೆ.

    ದುಷ್ಕರ್ಮಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುವಂತೆ ಹಿಂಸಾಚಾರದ ಘಟನೆಗಳ ವೀಡಿಯೋ ತುಣುಕನ್ನು ಸಂಗ್ರಹಿಸಲು ರಾಜ್ಯ ಅಧಿಕಾರಿಗಳಿಗೆ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರಿದ್ದ ಪೀಠ ಸೂಚಿಸಿದೆ. ಇದನ್ನೂ ಓದಿ: ಪ್ರವಾದಿ ಅವಹೇಳನ – ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 400ಕ್ಕೂ ಹೆಚ್ಚು ಮಂದಿ ಬಂಧನ

    ನ್ಯಾಯಾಲಯದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವಂತೆ ಹಲವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಹಿಂಸಾಚಾರದ ವೇಳೆ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. `ಹೌರಾ ಅಂಕುರ್‌ಹಾಟಿ ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಯೊಬ್ಬರನ್ನೂ ಬಂಧಿಸಬೇಕು’ ಎಂಬಿತ್ಯಾದಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ನಡುವೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ಮಾಡಿಕೊಡುವಂತೆಯೂ ಕೆಲ ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ರಾಜ್ಯದ ಪ್ರಸ್ತುತ ಪರಿಸ್ಥಿತಿ ಮತ್ತು ಅಧಿಕಾರಿಗಳು ಕೈಗೊಂಡ ಕ್ರಮ ವಿವರಿಸುವ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಅಗತ್ಯವಿರುವುದರಿಂದ ವಿಚಾರಣೆ ಮುಂದೂಡಬೇಕೆಂದು ಅಡ್ವೋಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿದ ನ್ಯಾಯಾಲಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಕಾಪಾಡಲು ಸಾಧ್ಯವಾಗುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ಹಿಂಸಾಚಾರ ಪ್ರತಿಭಟನೆ ನಿಯಂತ್ರಿಸಲು ಸಾಧ್ಯವಾಗದೇ ಇದ್ದಲ್ಲಿ, ಕೇಂದ್ರದ ಪಡೆಗಳನ್ನು ಕರೆಸಬೇಕು ಎಂದು ನಿರ್ದೇಶನ ನೀಡಿದೆ.

    ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ಜೂನ್ 10 ರಂದು ಪಶ್ಚಿಮ ಬಂಗಾಳದ ಹೌರಾ, ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚರ‍್ಕೆ ತಿರುಗಿತ್ತು. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಈ ಘಟನೆಗೆ ಸಂಬಂಧಿಸಿದಂತೆ 26 ಎಫ್‌ಐಆರ್ ದಾಖಲಾಗಿದ್ದು, 240 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಉತ್ತರ ಪ್ರದೇಶದಲ್ಲೂ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಈವರೆಗೆ ದೇಶಾದ್ಯಂತ 400ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು 40ಕ್ಕೂ ಹೆಚ್ಚು FIRಗಳು ದಾಖಲಾಗಿವೆ.

  • ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರು ಅರೆಸ್ಟ್

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಸಕ್ರಿಯ ಭಯೋತ್ಪಾದಕರನ್ನು ಬಂಧಿಸಿದೆ.

    ಉಗ್ರರ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ತಕ್ಷಣ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರು ಉಗ್ರರನ್ನು ಬಾರಾಮುಲ್ಲಾದ ನೆಹಲ್ಪೋರಾ ಪಟ್ಟಣ ಪ್ರದೇಶದ ನಿವಾಸಿಗಳಾದ ಅಬ್ದುಲ್ ರೆಹಮಾನ್ ಮೀರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರೇ ಖತರ್ನಾಕ್ ಕಳ್ಳನ ಟಾರ್ಗೆಟ್ – ಆನ್‍ಲೈನ್ ಮೂಲಕ ಹಣ ಲೂಟಿ

    ಇದೇ ವೇಳೆ ಬಂಧಿತ ಭಯೋತ್ಪಾದಕರ ಬಳಿ ಇದ್ದ 2 ಚೈನೀಸ್ ಪಿಸ್ತೂಲ್‍ಗಳು, 18 ಲೈವ್ ಸುತ್ತಿನ ಕಾಟ್ರ್ರಿಡ್ಜ್‍ಗಳು ಮತ್ತು 2 ಮ್ಯಾಗಜೀನ್‍ಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಮದ್ದುಗುಂಡುಗಳ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ

  • ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕನ ಎನ್‍ಕೌಂಟರ್

    ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕನ ಎನ್‍ಕೌಂಟರ್

    ಶ್ರೀನಗರ: ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಶ್ಚಿಮ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಪೊಲೀಸರು ಹಾಗೂ ಭಾರತೀಯ ಸೇನೆ ಎನ್‍ಕೌಂಟರ್ ಮಾಡಿ ಹತ್ಯೆ ಮಾಡಿದೆ.

    ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದ ಕೆಲವೇ ಗಂಟೆಗಳಲ್ಲಿ ಜಲೂರಾ ಪ್ರದೇಶದ ಪಾನಿಪೋರಾ ಅರಣ್ಯದಲ್ಲಿ ಈ ಎನ್‍ಕೌಂಟರ್ ನಡೆದಿದ್ದು, ಸೋಪೋರ್‌ನಲ್ಲಿ ಮೃತಪಟ್ಟ ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಕೇಂದ್ರಾಡಳಿತ ಪ್ರದೇಶದಿಂದ ಪರಾರಿಯಾಗಿರುವ ಇನ್ನೂ ಮೂವರು ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್‌ ವಾರ್ನಿಂಗ್‌

    ಹತ್ಯೆಗೀಡಾದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಾಕಿಸ್ತಾನದ ಲಾಹೋರ್‌ನ ಹಂಝಲ್ಲಾ ಎಂದು ಗುರುತಿಸಲಾಗಿದ್ದು, ಆತನ ಬಳಿ ಅವ್ಟೋಮಟ್ ಕಲಾಶ್ನಿಕೋವಾ (ಎಕೆ) ರೈಫಲ್‍ವೊಂದು, ಐದು ಮ್ಯಾಗಜೀನ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ

  • ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    ನವದೆಹಲಿ: ಭಾರತೀಯ ಸೇನೆ ಸೇರುವ ಮಂದಿಗೆ ಗುಡ್‌ನ್ಯೂಸ್‌. ಸೇನೆಯಲ್ಲಿ 4 ವರ್ಷಗಳ ಕಾಲ ಸೇವೆ ಸಲ್ಲಿಸುವ ವಿನೂತನ ʼಅಗ್ನಿಪಥ್‌ʼ ಯೋಜನೆಗೆ ಶೀಘ್ರವೇ ಕೇಂದ್ರ ಕ್ಯಾಬಿನೆಟ್‌ ಒಪ್ಪಿಗೆ ನೀಡುವ ಸಾಧ್ಯತೆಯಿದೆ.

    ಟೂರ್ ಆಫ್ ಡ್ಯೂಟಿ ಪ್ರವೇಶ ಯೋಜನೆಯ ಅಡಿ ಮೂರು ಸೇನೆಗೆ ಯುವ ಜನತೆ ಸೇರಬಹುದಾಗಿದೆ. ಈ ಯೋಜನೆಯ ಅಡಿ ಸೈನಿಕರನ್ನು ಅಲ್ಪಾವಧಿಯ ಒಪ್ಪಂದದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ತರಬೇತಿ ನೀಡಿದ ಬಳಿಕ ವಿವಿಧ ಕ್ಷೇತ್ರಗಳಲ್ಲಿ ನಿಯೋಜಿಸಲಾಗುತ್ತದೆ.  ಇದನ್ನೂ ಓದಿ: ಭಾರತೀಯ ಸೇನೆ ಹೊಸ ಸಮವಸ್ತ್ರ ಅನಾವರಣ – ಏನಿದರ ವಿಶೇಷತೆ?

    ಹೇಗಿರಲಿದೆ ಈ ಯೋಜನೆ?
    ಆಯ್ಕೆಗೊಂಡ ಅಭ್ಯರ್ಥಿಗಳಿಗೆ 6 ತಿಂಗಳು ತರಬೇತಿ ನೀಡಲಾಗುತ್ತದೆ. ಸೈನ್ಯಕ್ಕೆ ಸೇರ್ಪಡೆಯಾದವರ ಪೈಕಿ ಶೇ. 20-25ರಷ್ಟು ಅಭ್ಯರ್ಥಿಗಳನ್ನು ಮುಂದುವರಿಸಲಾಗುತ್ತದೆ. 4 ವರ್ಷ ಪೂರ್ಣಗೊಂಡ ಬಳಿಕ ಬಿಡುಗಡೆಯಾಗುತ್ತಿರುವ ಸೈನಿಕರಿಗೆ 10 -12 ಲಕ್ಷ ರೂ. ಪ್ಯಾಕೇಜ್‌ ನೀಡಲಾಗುತ್ತದೆ.

    ಈಗಾಗಲೇ ಸಿದ್ಧಪಡಿಸಿದ ಪ್ಲ್ಯಾನ್‌ ನಿಗದಿಯಂತೆ ನಡೆದರೆ ಮುಂದಿನ ಮೂರು ತಿಂಗಳಿನಲ್ಲಿ ನೇಮಕಾತಿ ಪ್ರಕ್ರಿಯೆ  ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

    ಕೋವಿಡ್‌ 19 ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಎರಡು ವರ್ಷಗಳಿಂದ ಭಾರತೀಯ ಸೈನ್ಯ ಸ್ಥಗಿತಗೊಳಿಸಿದೆ.

  • ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಯೋಧರು ಹೊಡೆದುರುಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಶ್ಮೀರ ಪೊಲೀಸರು, ಅನಂತನಾಗ್‍ನ ಬಿಜ್‍ಬೆಹರಾ ಪ್ರದೇಶದ ಶಾದಿಪೋರಾದಲ್ಲಿ ಉಗ್ರರು ನೆಲೆಸಿರುವ ಖಚಿತ ಮಾಹಿತಿ ಮೇರೆಗೆ ಜಂಟಿ ದಾಳಿ ನಡೆಸಿದ ಭದ್ರತಾ ಪಡೆ ಮತ್ತು ಸ್ಥಳೀಯ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಇದನ್ನೂ ಓದಿ: ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಆಡಿಯೋ ಹೊಂದಿರಬೇಕು: ದೆಹಲಿ ಹೈಕೋರ್ಟ್

    ಇಬ್ಬರು ಉಗ್ರರರೊಂದಿಗೆ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಕ್ಕೆ ಪಡೆಯಲಾಗಿದೆ. ಪ್ರಸ್ತುತ ಅಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಹತ್ಯೆ ಮಾಡಲಾದ ಇಬ್ಬರು ಉಗ್ರರನ್ನು ಇಶ್ಫಾಕ್ ಅಹ್ ಗನಿ, ಮತ್ತು ಯಾರ್ ಅಯೂಬ್ ದಾರ್ ಎಂದು ಗುರುತು ಪತ್ತೆ ಹಚ್ಚಲಾಗಿದೆ. ಇವರಿಬ್ಬರೂ ಈ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ಜಮ್ಮು-ಕಾಶ್ಮೀರದ ಐಜಿಪಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ

     

  • ಜಮ್ಮು-ಕಾಶ್ಮೀರ ಗಡಿಯಲ್ಲಿ 200 ಭಯೋತ್ಪಾದಕರು ದಾಳಿಗೆ ಹೊಂಚುಹಾಕುತ್ತಿದ್ದಾರೆ: ಭಾರತ ಸೇನೆ ಎಚ್ಚರಿಕೆ

    ಜಮ್ಮು-ಕಾಶ್ಮೀರ ಗಡಿಯಲ್ಲಿ 200 ಭಯೋತ್ಪಾದಕರು ದಾಳಿಗೆ ಹೊಂಚುಹಾಕುತ್ತಿದ್ದಾರೆ: ಭಾರತ ಸೇನೆ ಎಚ್ಚರಿಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯುದ್ಧಕ್ಕೂ ಒಳನುಸುಳಲು ಸುಮಾರು 200 ಭಯೋತ್ಪಾದಕರು ಕಾಯುತ್ತಿದ್ದಾರೆ ಎಂದು ಉತ್ತರ ಸೇನಾ ಕಮಾಂಡರ್‌ ಜನರಲ್‌ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ.

    ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ತೀವ್ರವಾಗಿ ಕಡಿಮೆಯಾಗಿದೆ. 2021ರ ಒಪ್ಪಂದದ ನಂತರ ಇಂಡೋ-ಪಾಕ್ ಗಡಿಯಲ್ಲಿ ಕದನ ವಿರಾಮವು ಉತ್ತಮವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

    ಈ ವರ್ಷ ಇಲ್ಲಿಯವರೆಗೆ 21 ವಿದೇಶಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತರಬೇತಿ ಪಡೆದ ಭಯೋತ್ಪಾದಕರ ಸಂಖ್ಯೆ ಪ್ರತಿ ವರ್ಷವೂ ಕ್ಷೀಣಿಸುತ್ತಿದೆ. ಇಂಡೋ-ಪಾಕ್ ಗಡಿಯಲ್ಲಿ ಸುಮಾರು 200 ಭಯೋತ್ಪಾದಕರ ಸಂಖ್ಯೆ ಇದೆ. ಅವರು ದಾಳಿ ನಡೆಸಲು ಕಾಯುತ್ತಿದ್ದಾರೆ ಎಂದು ದ್ವಿವೇದಿ ಅವರು ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಿಯೋಜಿಸಿರುವ ಭದ್ರತಾ ಪರಿಸ್ಥಿತಿಯ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಯಾವುದೇ ಒಳನುಸುಳುವಿಕೆ ನಡೆಯದಂತೆ ಎಲ್ಲಾ ಮೀಸಲು ಪಡೆಗಳನ್ನು ಎರಡನೇ ಹಂತದ ರಕ್ಷಣೆಯಲ್ಲಿ ಇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿದ್ದೇವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಕದನ ವಿರಾಮ ಉಲ್ಲಂಘನೆಗಳ ಸಂಖ್ಯೆಯು ತುಂಬಾ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಶ್ ರೂಂನಲ್ಲಿ ಬ್ರಿಟನ್ ಮಹಿಳೆಗೆ ಕಿರುಕುಳ – ಕಾಮುಕ ಅರೆಸ್ಟ್

    ಅಮರನಾಥ ಯಾತ್ರೆ ಕುರಿತು ಮಾತನಾಡಿದ ಅವರು, 2019ಕ್ಕೆ ಹೋಲಿಸಿದರೆ ಈ ವರ್ಷ ಯಾತ್ರಾರ್ಥಿಗಳ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ. ಯಾತ್ರೆಯ ಸಮಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯಗಳು ನಡೆಯದಂತೆ ಕ್ರಮವಹಿಸಲಾಗುವುದು. ಇದಕ್ಕಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.