Tag: Indian Couple

  • 75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ – RSS ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

    75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ – RSS ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

    ನವದೆಹಲಿ: ಮುಂಬರುವ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 75ನೇ ವಸಂತಕ್ಕೆ ಕಾಲಿಡಲಿದ್ದಾರೆ. ಅಲ್ಲದೇ 75ನೇ ವಯಸ್ಸಿನಲ್ಲೇ ನಿವೃತ್ತಿ ಆಗಲಿದ್ದಾರೆ ಅನ್ನೋ ಚರ್ಚೆ ಹುಟ್ಟುಹಾಕಿತ್ತು. ಇದೀಗ ಎಲ್ಲ ಊಹಾಪೋಹಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ.

    ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ 75ನೇ ವಯಸ್ಸಿಗೆ ಕಾಲಿಡುತ್ತಿರುವುದು ಇಲ್ಲಿ ಗಮನಾರ್ಹ.

    ಆರ್‌ಎಸ್‌ಎಸ್‌ 100ನೇ ವರ್ಷದ‌ ಹಿನ್ನೆಲೆ ನಡೆಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಗವತ್‌ ಅವರು, 75 ವರ್ಷವಾದಾಗ ನಾನು ನಿವೃತ್ತಿಯಾಗುತ್ತೇನೆ ಅಥವಾ ಬೇರೆಯವರು ನಿವೃತ್ತಿಯಾಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ, ಎಂದು ಸ್ಪಷ್ಟಪಡಿಸಿದರು.

    ಸಂಘ ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ನಾವೆಲ್ಲರೂ ಸಂಘದ ಸ್ವಯಂಸೇವಕರು. ನಮಗೆ ಇಷ್ಟವಿರಲಿ, ಇಲ್ಲದಿರಲಿ, ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ. ನಾನು 80 ವರ್ಷವಾದರೂ ಸಂಘವನ್ನು ಮುನ್ನಡೆಸುತ್ತೇನೆ ಎಂದು ಸಹ ತಿಳಿಸಿದರು. ಇದನ್ನೂ ಓದಿ: ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್

  • ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್

    ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್

    – ಸರಿಯಾದ ವಯಸ್ಸಿನಲ್ಲಿ ಮದ್ವೆಯಾದ್ರೆ ಪೋಷಕರು, ಮಕ್ಕಳು ಆರೋಗ್ಯವಾಗಿರ್ತಾರೆ
    – ಹಿಂದೂಗಳು ಎಲ್ಲವನ್ನೂ ಕಿತ್ತುಕೊಳ್ತಾರೆ ಅಂತ ಭಾವಿಸುವಂತೆ ಮಾಡಲಾಗಿದೆ; ಕಳವಳ

    ನವದೆಹಲಿ: ಭಾರತದ ಪ್ರತೀ ಕುಟುಂಬವು ಮೂರು ಮಕ್ಕಳನ್ನು ಹೊಂದಬೇಕು, ಇದು ದೇಶಕ್ಕೂ ಒಳ್ಳೆಯದು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ (Mohan Bhagwat) ಹೇಳಿದರು.

    ಆರ್‌ಎಸ್‌ಎಸ್‌ (RSS) 100 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಪ್ರತೀ ಕುಟುಂಬವು ಮೂರು ಮಕ್ಕಳನ್ನು ಹೊಂದಬೇಕು, ಇದು ದೇಶಕ್ಕೂ ಒಳ್ಳೆಯದು. ಮೂರಕ್ಕಿಂತ ಕಡಿಮೆ ಜನನದರ (Birth Rate) ಹೊಂದಿರುವ ಸಮುದಾಯಗಳು ನಿಧಾನವಾಗಿ ನಶಿಸಿಹೋಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಎಲ್ಲಾ ದೇಶಗಳಲ್ಲೂ ಈ ಪ್ರಕ್ರಿಯೆ ಸಹಜ. ಆದ್ದರಿಂದ ಮೂರಕ್ಕಿಂತ ಹೆಚ್ಚಿನ ಜನನ ಪ್ರಮಾಣವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕೇಂದ್ರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಗಣೇಶ ಹಬ್ಬದ ಬಂಪರ್‌ ಗಿಫ್ಟ್‌ – ಪಿಎಂ ಸ್ವನಿಧಿ ಯೋಜನೆ 5 ವರ್ಷ ವಿಸ್ತರಣೆ

    ಸರಿಯಾದ ವಯಸ್ಸಿನಲ್ಲಿ ಮದ್ವೆಯಾಗೋದ್ರಿಂದ (Marriage) ಮೂವರು ಮಕ್ಕಳನ್ನು ಹೊಂದಬಹುದು. ಜೊತೆಗೆ ಪೋಷಕರು ಮತ್ತು ಮಕ್ಕಳು ಇಬ್ಬರು ಆರೋಗ್ಯವಾಗಿರ್ತಾರೆ ಅಂತ ವೈದ್ಯರೇ ಹೇಳಿದ್ದಾರೆ. ಮೂವರು ಒಡಹುಟ್ಟಿದವರು ಇರುವ ಮನೆಗಳಲ್ಲಿ ಅಹಂಕಾರ ನಿಯಂತ್ರಿಸೋದನ್ನ ಕಲಿಯುತ್ತಾರೆ. ಇದರಿಂದ ಭವಿಷ್ಯದಲ್ಲಿ ಅವರಿಗೆ ಯಾವುದೇ ತೊಂದರೆ ಇರೋದಿಲ್ಲ. ಇದಕ್ಕೂ ಕೂಡ ವೈದ್ಯರೇ ಹೇಳಿರುವುದಾಗಿ ತಿಳಿಸಿದರು.

    ಪ್ರಸ್ತುತ ದೇಶದ ಜನಸಂಖ್ಯೆಯು 2.1 ಜನನ ದರವನ್ನ ಶಿಫಾರಸು ಮಾಡುತ್ತೆ. ಇದು ಉತ್ತಮ ನೀತಿಯಾಗಿದೆ. ಯಾರೊಬ್ಬರು ಒಂದು ಮಗು ಹೊಂದಲು ಸಾಧ್ಯವಿಲ್ಲ. ಗಣಿತದಲ್ಲಿ 2.1 2 ಆಗುತ್ತದೆ. ಆದ್ದರಿಂದ ಮೂರು ಮಕ್ಕಳ ನೀತಿ ಉತ್ತಮ ಎಂದು ಮೋಹನ್‌ ಭಾಗವತ್‌ ಹೇಳಿದರು. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಜನಸಂಖ್ಯೆ ಮೇಲೆ ಮತಾಂತರದ ಪರಿಣಾಮವೇ?
    ಇನ್ನೂ ಜನಸಂಖ್ಯಾ ಮಾದರಿಗಳ ಮೇಲೆ ಪರಿಣಾಮ ಬೀರುವ ಕೆಲವೊಂದು ಅಂಶಗಳನ್ನು ಮೋಹನ್‌ ಭಾಗವತ್‌ ಗುರುತಿಸಿದ್ದು, ಮತಾಂತವೂ ಒಂದು ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಮತಾಂತರವು ಜನಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ರೆ ಕಾಥೊಲಿಕರು, ಉಲೇಮಾಗಳು ನಾವು ಮತಾಂತರದಲ್ಲಿ ತೊಡಗುವುದಿಲ್ಲ ಎನ್ನುತ್ತಾರೆ ಎಂದು ವಿವರಿಸಿದರು.

    ಹಿಂದೂ – ಮುಸ್ಲಿಂ ಒಂದೇ
    ಇದೇ ವೇಳೆ ಹಿಂದೂ ಮತ್ತು ಮುಸ್ಲಿಮರ ನಡುವಿನ ಸಂಬಂಧಗಳನ್ನುದ್ದೇಶಿಸಿ ಮಾತನಾಡಿದ ಭಾಗವತ್, ಹಿಂದೂ ಮುಸ್ಲಿಮರು ಮೂಲಭೂತವಾಗಿ ಒಬ್ಬರು, ನಮ್ಮ ನಡುವೆ ಏಕತೆಯಿದೆ. ಆದ್ರೆ ಒಂದು ಭಯವನ್ನು ಸೃಷ್ಟಿಸಲಾಗಿದೆ. ಹಿಂದೂಗಳು ಎಲ್ಲವನ್ನೂ ತೆಗೆದುಕೊಳ್ತಾರೆ ಅಂತ ಭಾವಿಸುವಂತೆ ಮಾಡಲಾಗಿದೆ. ಆದ್ರೆ ವಾಸ್ತವದಲ್ಲಿ ನಮ್ಮ ಗುರುತು ಏಕೀಕೃತವಾಗಿದೆ. ಸಾಂಸ್ಕೃತಿಕವಾಗಿ, ನಾವು ಹಿಂದೂಗಳು ಎಂದು ಬಣ್ಣಿಸಿದರು. ಇದನ್ನೂ ಓದಿ: ಟ್ರಂಪ್‌ ಸೂಚಿಸಿದ 5 ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಹುಲ್‌ ಗಾಂಧಿ ಕಿಡಿ

    ಮುಂದುವರಿದು.. ಅನೇಕ ಹಿಂದೂಗಳು ತಾವು ದುರ್ಬಲರೆಂದು ಭಾವಿಸಿ ಅಸುರಕ್ಷಿತವಾಗಿದ್ದೇವೆ. ಅವರಿಗೊಂದು ಸಲಹೆ ನೀಡುತ್ತೇನೆ. ಇತರರೊಂದಿಗೆ ಸಹಬಾಳ್ವೆ ನಡೆಸುವುದರಿಂದ ಸ್ವಂತ ನಂಬಿಕೆಗೆ ಹಾನಿಯಾಗಲ್ಲ. ಈ ವಿಶ್ವಾಸ ಬೇರೂರಿದರೆ, ಸಂಘರ್ಷ ಕೊನೆಗೊಳ್ಳುತ್ತದೆ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಗುಜರಾತ್‌ನಲ್ಲಿ ಹೆಸರೇ ಕೇಳದ ಪಕ್ಷಗಳಿಗೆ 4,300 ಕೋಟಿ ದೇಣಿಗೆ – ರಾಗಾ ಮತ್ತೊಂದು ಬಾಂಬ್‌

  • ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ ಬೇಡಿಕೆ

    ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ ಬೇಡಿಕೆ

    ವಾಷಿಂಗ್ಟನ್: ಹುಟ್ಟಿನಿಂದ ಸಿಗುವ ಪೌರತ್ವ ಹಕ್ಕು ರದ್ದುಗೊಂಡ ಭೀತಿ ಅಮೆರಿಕದಲ್ಲಿರುವ ವಲಸಿಗರಲ್ಲಿ ಹುಟ್ಟಿಕೊಂಡಿದೆ. ಕಾಯ್ದೆ ಜಾರಿಗೆ ಬರುವ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿಯರು ಆಸ್ಪತ್ರೆಗಳಿಗೆ ದಾಂಗುಡಿ ಇಟ್ಟಿದ್ದಾರೆ. ಇವರ ಪೈಕಿ ಅನೇಕ ಭಾರತೀಯರು ಇದ್ದಾರೆಂದು ವೈದ್ಯರು ತಿಳಿಸಿದ್ದಾರೆ.

    ಫೆ.20 ರ ಒಳಗೆ ಸಿಸೇರಿಯನ್‌ ಮೂಲಕ ಹೆರಿಗೆಗಾಗಿ ಅಮೆರಿಕದ ಹೆರಿಗೆ ಆಸ್ಪತ್ರೆಗಳಿಗೆ (ಮೆಟರ್ನಿಟಿ ಕ್ಲಿನಿಕ್‌) ಗರ್ಭಿಣಿಯರು ಧಾವಿಸುತ್ತಿದ್ದಾರೆ. ಸುಮಾರು 20 ಭಾರತೀಯ ದಂಪತಿಗಳು ಸಿಸೇರಿಯನ್‌ಗೆ ಫೋನ್‌ ಕರೆ ಮಾಡಿದ್ದಾರೆಂದು ಭಾರತೀಯ ಮೂಲದ ಸ್ತ್ರೀರೋಗ ತಜ್ಞರೊಬ್ಬರು ತಿಳಿಸಿದ್ದಾರೆ.

    ಫೆಬ್ರವರಿ 20 ಏಕೆ?
    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯನಿರ್ವಾಹಕ ಆದೇಶದ ಅಡಿಯಲ್ಲಿ ಜನ್ಮದತ್ತ ಪೌರತ್ವ ಫೆ.20 ರಂದು ರದ್ದುಗೊಳ್ಳಲಿದೆ. ಅಲ್ಲಿಂದಾಚೆಗೆ ಹೊಸ ಕಾಯ್ದೆ ಜಾರಿಗೆ ಬರುವ ಸಾಧ್ಯತೆ ಇದೆ.

    ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಟ್ರಂಪ್ ಸಹಿ ಮಾಡಿದ ಕಾರ್ಯಕಾರಿ ಆದೇಶಗಳಲ್ಲಿ ಒಂದು ಅಮೆರಿಕದಲ್ಲಿ ಜನ್ಮದತ್ತ ಪೌರತ್ವ ಕೊನೆಗೊಳಿಸುವುದು. ಆದ್ದರಿಂದ, ಫೆ.19 ರವರೆಗೆ ಅಮೆರಿಕದ ನಾಗರಿಕರಲ್ಲದ ದಂಪತಿಗೆ ಜನಿಸಿದ ಮಕ್ಕಳು ಅಮೆರಿಕದ ಪ್ರಜೆಗಳಾಗುತ್ತಾರೆ. ನಂತರದ ದಿನಗಳಲ್ಲಿ ಜನಿಸುವ ಮಕ್ಕಳು ಅಮೆರಿಕದ ಪ್ರಜೆಯಾಗುವುದಿಲ್ಲ.

    ಅಮೆರಿಕದಲ್ಲಿ ತಾತ್ಕಾಲಿಕ H-1B ಮತ್ತು L1 ವೀಸಾಗಳ ಮೇಲೆ ಕೆಲಸ ಮಾಡುತ್ತಿರುವ ಭಾರತೀಯರಿದ್ದಾರೆ. ಅವರು ಅಮೆರಿಕದಲ್ಲಿ ಶಾಶ್ವತ ನಿವಾಸವನ್ನು ನೀಡುವ ಗ್ರೀನ್ ಕಾರ್ಡ್‌ಗಳಿಗೂ ಕಾಯುತ್ತಿದ್ದಾರೆ. ಅಮೆರಿಕದ ನಾಗರಿಕರು ಅಥವಾ ಗ್ರೀನ್ ಕಾರ್ಡ್ ಹೊಂದದ ದಂಪತಿಗೆ ಜನಿಸಿದ ಮಕ್ಕಳು ಹುಟ್ಟಿನಿಂದಲೇ ಅಮೆರಿಕದ ನಾಗರಿಕರಾಗುವುದಿಲ್ಲ ಎಂಬುದು ಹೊಸ ಕಾಯ್ದೆಯಲ್ಲಿ ಅಡಕವಾಗಿದೆ.

    ಹುಟ್ಟಿನಿಂದ ಸಿಗುವ ಪೌರತ್ವ ಎಂದರೇನು?
    ಯಾರಾದರೂ ಅಮೆರಿಕದಲ್ಲಿ ಜನಿಸಿದರೆ ಅವರು ಅಮೆರಿಕದ ಪ್ರಜೆ. ಇಲ್ಲಿ ಪೋಷಕರ ವಲಸೆ ಸ್ಥಿತಿಗತಿಯನ್ನು ಪರಿಗಣಿಸಲಾಗುವುದಿಲ್ಲ. ಉದಾಹರಣೆಗೆ, ಪ್ರವಾಸಿ ವೀಸಾ ಅಥವಾ ಇನ್ಯಾವುದೇ ರೀತಿಯ ವೀಸಾ ಇರುವ ಭಾರತೀಯ ದಂಪತಿ ಅಮೆರಿಕದಲ್ಲಿ ಮಗುವಿಗೆ ಜನ್ಮ ನೀಡಿದರೆ, ಆ ಮಗು ಅಧಿಕೃತವಾಗಿ ಅಮೆರಿಕದ ಪ್ರಜೆ.

  • ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ.!

    ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5 ಲಕ್ಷ ರೂ.!

    -ತಮ್ಮ ಅನುಭವ ಹಂಚಿಕೊಂಡ ಭಾರತೀಯ ದಂಪತಿ

    ನೈರೋಬಿ: ಕೀನ್ಯಾದ ಮಸಾಯಿ ಮಾರಾದಲ್ಲಿರುವ (Maasai Mara) ರೆಸಾರ್ಟ್‌ನಲ್ಲಿ ಒಂದು ರಾತ್ರಿ ತಂಗಲು 5.5ಲಕ್ಷ ರೂ.ಯಂತೆ. ಹೌದು ಈ ಕುರಿತು ಭಾರತೀಯ ಮೂಲದ ದಂಪತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

    ಕೀನ್ಯಾದ (Kenya) ಮಸಾಯಿ ಮಾರಾದಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ತಂಗಿದ್ದ ಭಾರತೀಯ ದಂಪತಿ ಅನಿರ್ಬನ್ ಚೌಧರಿ ಹಾಗೂ ಅವರ ಪತ್ನಿ ಎಕ್ಸ್ ಖಾತೆಯಲ್ಲಿ ತಮ್ಮ ಅದ್ಭುತ ಅನುಭವಗಳನ್ನು ಹಂಚಿಕೊಂಡಿದ್ದು, ಲಕ್ಷಾಂತರ ಮೆಚ್ಚುಗೆ, ವೀಕ್ಷಣೆ ಹಾಗೂ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.ಇದನ್ನೂ ಓದಿ: ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ, ನಿಯಂತ್ರಣಕ್ಕೆ ಕ್ರಮ: ಪರಮೇಶ್ವರ್

    ಅನಿರ್ಬನ್ ಚೌಧರಿ ಹಾಗೂ ಅವರ ಪತ್ನಿ ಮಸಾಯಿ ಮಾರಾದ ಮ್ಯಾರಿಯೋಟ್‌ನ ಅತ್ಯಂತ ವಿಶೇಷವಾದ ಮತ್ತು ದುಬಾರಿ ರೆಸಾರ್ಟ್ಗಳಲ್ಲಿ ಒಂದಾದ ‘ಜೆಡಬ್ಲ್ಯೂ  ಮ್ಯಾರಿಯೋಟ್ ಮಸಾಯಿ ಮಾರಾ’ (JW Marriott Masai Mara) ರೆಸಾರ್ಟ್‌ನಲ್ಲಿನ ತಮ್ಮ ಅನುಭವದ ಖಜಾನೆಯನ್ನು ಬಿಚ್ಚಿಟ್ಟಿದ್ದಾರೆ.

    ಅನಿರ್ಬನ್ ಚೌಧರಿ ಅವರು ತಮ್ಮ ಪ್ರವಾಸದ ಕುರಿತು ಸಂಪೂರ್ಣ ಡಾಕ್ಯುಮೆಂಟ್ ಮಾಡಿದ್ದಾರೆ. ಆ ರೆಸಾರ್ಟ್‌ನಲ್ಲಿ ಒಂದು ರಾತ್ರಿಗೆ 5.5 ಲಕ್ಷ ರೂ. ಪಾವತಿಸಬೇಕು. ರೆಸಾರ್ಟ್‌ನ ಒಳನೋಟ, ವಸತಿ, ಊಟ, ಆಟಗಳು ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಹಂಚಿಕೊಂಡಿದ್ದಾರೆ ಹಾಗೂ ಆ ರೆಸಾರ್ಟ್ ಒಳಗೊಂಡಿರುವ ಸಂಪೂರ್ಣ ಪ್ಯಾಕೆಜ್‌ನ ಬಗ್ಗೆ ಮಾಹಿತಿ ನೀಡಿದ್ದಾರೆ. ಕುದುರೆ ಸವಾರಿ, ಬಿಸಿ ಗಾಳಿಯ ಬಲೂನ್ ಸವಾರಿಗಳು ಮತ್ತು ಮಸಾಯಿ ಗ್ರಾಮ ಪ್ರವಾಸಗಳು ಸೇರಿದಂತೆ ಇತರ ಪಾವತಿಸಿದ ಚಟುವಟಿಕೆಗಳನ್ನು ವಿವರಿಸಿದ್ದಾರೆ.

    ನೀವು ಐಷಾರಾಮಿ ಸಫಾರಿಯ ಬಗ್ಗೆ ಕಾಣುತ್ತಿದ್ದರೆ ಇದು ಒಂದು ಒಳ್ಳೆಯ ಅನುಭವವನ್ನು ನೀಡುತ್ತದೆ. ಪ್ರತಿ ಹಂತದಲ್ಲಿಯೂ ಅಲ್ಲಿಯ ಅನುಭವವು ದ್ವಿಗುಣಗೊಳ್ಳುತ್ತದೆ. ನಾನು ಈ ಹಿಂದೆ ಈ ರೀತಿಯ ರೆಸಾರ್ಟ್‌ಗೆ ಭೇಟಿ ನೀಡಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ 5 ವರ್ಷ ಪೂರ್ಣ ಮಾಡಲ್ಲ: ಸಿದ್ದರಾಮಯ್ಯ

    ಕೆಲವು ದಿನಗಳ ಹಿಂದೆ ಪೋಸ್ಟ್ ಅನ್ನು ಹಂಚಿಕೊಂಡಿದ್ದು, 15 ಲಕ್ಷ ವೀಕ್ಷಣೆಗಳು ಮತ್ತು ಹಲವಾರು ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.