Tag: Indian cricketer

  • ಪತ್ನಿಗೆ ತಿಂಗಳಿಗೆ 4 ಲಕ್ಷ ಕೊಡಿ: ಮೊಹಮ್ಮದ್‌ ಶಮಿಗೆ ಹೈಕೋರ್ಟ್‌ ಸೂಚನೆ

    ಪತ್ನಿಗೆ ತಿಂಗಳಿಗೆ 4 ಲಕ್ಷ ಕೊಡಿ: ಮೊಹಮ್ಮದ್‌ ಶಮಿಗೆ ಹೈಕೋರ್ಟ್‌ ಸೂಚನೆ

    ಕೋಲ್ಕತ್ತಾ: ಭಾರತದ ಕ್ರಿಕೆಟಿಗ ಮೊಹಮ್ಮದ್‌ ಶಮಿ (Mohammed Shami) ತನ್ನಿಂದ ದೂರವಾಗಿರುವ ಪತ್ನಿಗೆ ತಿಂಗಳಿಗೆ ನಾಲ್ಕು ಲಕ್ಷ ಜೀವನಾಂಶ ಕೊಡುವಂತೆ ಕೋಲ್ಕತ್ತಾ ಹೈಕೋರ್ಟ್‌ (Calcutta High Court) ಆದೇಶ ಹೊರಡಿಸಿದೆ.

    ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರಿದ್ದ ಪೀಠವು ಆದೇಶ ಹೊರಡಿಸಿದೆ. ಶಮಿ ಪತ್ನಿ ಜಹಾನ್ ವೈಯಕ್ತಿಕ ಜೀವನಾಂಶಕ್ಕಾಗಿ ತಿಂಗಳಿಗೆ 1.5 ಲಕ್ಷ ರೂಪಾಯಿ ಮತ್ತು ಅಪ್ರಾಪ್ತ ಮಗಳ ಆರೈಕೆ, ವೆಚ್ಚಗಳಿಗಾಗಿ 2.5 ಲಕ್ಷ ರೂಪಾಯಿಗಳನ್ನು ಪಾವತಿಸಬೇಕೆಂದು ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಶಮಿ ಮಗಳ ಹೋಳಿ ಆಚರಣೆ ಸರಿಯಲ್ಲ – ಇದು ಷರಿಯಾ ವಿರುದ್ಧ ಎಂದ ಜಮಾತ್ ಅಧ್ಯಕ್ಷ

    ಶಮಿ ತಿಂಗಳಿಗೆ 50,000 ರೂ. ಮತ್ತು ತಮ್ಮ ಮಗಳ ಖರ್ಚಿಗಾಗಿ ಹೆಚ್ಚುವರಿಯಾಗಿ 80,000 ರೂ.ಗಳನ್ನು ಪಾವತಿಸುವಂತೆ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯವು 2018 ರಲ್ಲಿ ನೀಡಿದ್ದ ಆದೇಶದ ವಿರುದ್ಧ ಜಹಾನ್ ಮೇಲ್ಮನವಿ ಸಲ್ಲಿಸಿದ್ದರು. ಆ ಸಮಯದಲ್ಲಿ, ಜಹಾನ್ ತನಗೆ 7 ಲಕ್ಷ ರೂ. ಮತ್ತು ತನ್ನ ಮಗಳಿಗೆ 3 ಲಕ್ಷ ರೂ.ನಂತೆ ಒಟ್ಟು 10 ಲಕ್ಷ ರೂ. ಕೇಳಿದ್ದರು. ಆದರೆ, ಕೆಳಹಂತದ ನ್ಯಾಯಾಲಯವು ಅವರ ವಿನಂತಿಯನ್ನು ವಜಾಗೊಳಿಸಿತ್ತು.

    ಶಮಿ ಆರ್ಥಿಕ ಪರಿಸ್ಥಿತಿಯು ಹೆಚ್ಚಿನ ಜೀವನಾಂಶವನ್ನು ನೀಡಲು ಸಹಾಯ ಮಾಡುತ್ತದೆ ಎಂದು ಜಹಾನ್ ಕಾನೂನು ಸಲಹೆಗಾರರು ತಮ್ಮ ಮೇಲ್ಮನವಿಯಲ್ಲಿ ವಾದಿಸಿದ್ದರು. 2021 ರ ಹಣಕಾಸು ವರ್ಷದ ಅವರ ಆದಾಯ ತೆರಿಗೆ ರಿಟರ್ನ್ ಪ್ರಕಾರ, ಶಮಿ ಅವರ ವಾರ್ಷಿಕ ಆದಾಯ ಸುಮಾರು 7.19 ಕೋಟಿ ರೂ. ಅಂದರೆ, ತಿಂಗಳಿಗೆ ಸುಮಾರು 60 ಲಕ್ಷ ರೂ. ಆಗಿತ್ತು. ಜಹಾನ್ ತನ್ನ ಮಗಳ ಖರ್ಚು ಸೇರಿದಂತೆ ತನ್ನ ಒಟ್ಟು ಮಾಸಿಕ ಖರ್ಚು 6 ಲಕ್ಷ ರೂ. ಮೀರಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ರಂಜಾನ್ ವೇಳೆ ಎನರ್ಜಿ ಡ್ರಿಂಕ್ ಕುಡಿದಿದ್ದಕ್ಕೆ ಆಕ್ರೋಶ – ಶಮಿಯನ್ನು ಕ್ರಿಮಿನಲ್ ಎಂದ ಮುಸ್ಲಿಂ ಧರ್ಮಗುರು

    ಈ ವಿವರಗಳನ್ನು ಗಣನೆಗೆ ತೆಗೆದುಕೊಂಡು, ಹೈಕೋರ್ಟ್ ಜಹಾನ್ ಪರವಾಗಿ ತೀರ್ಪು ನೀಡಿದೆ. ನ್ಯಾಯಮೂರ್ತಿ ಮುಖರ್ಜಿ ಆದೇಶದಲ್ಲಿ, ನನ್ನ ಅಭಿಪ್ರಾಯದಲ್ಲಿ ಅರ್ಜಿದಾರರ ಸಂಖ್ಯೆ 1 (ಪತ್ನಿ) ಗೆ ತಿಂಗಳಿಗೆ 1,50,000 ರೂ. ಮತ್ತು ಅವರ ಮಗಳಿಗೆ 2,50,000 ರೂ. ಮೊತ್ತವನ್ನು ನೀಡುವುದು ನ್ಯಾಯಯುತ. ಇದು ಎರಡೂ ಅರ್ಜಿದಾರರಿಗೆ ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸುತ್ತದೆ ಎಂದು ತಿಳಿಸಿದ್ದಾರೆ.

    ಹಿಂದಿನ ತೀರ್ಪಿನ ಆಧಾರವನ್ನು ಹೈಕೋರ್ಟ್ ಪ್ರಶ್ನಿಸಿದ್ದು, ಅಲಿಪೋರ್ ನ್ಯಾಯಾಲಯವು ಯಾವ ಆಧಾರದ ಮೇಲೆ ಕಡಿಮೆ ಜೀವನಾಂಶ ಕೊಡುವಂತೆ ತೀರ್ಪು ನೀಡಿದೆ ಎಂಬುದು ಸ್ಪಷ್ಟವಾಗಿಲ್ಲ. ಶಮಿ ಗಳಿಕೆ ಚೆನ್ನಾಗಿಯೇ ಇದೆ. ಅವರ ಪತ್ನಿ ಜಹಾನ್ ಮರುಮದುವೆಯಾಗಿಲ್ಲ. ತನ್ನ ಮಗಳೊಂದಿಗೆ ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಹೀಗಾಗಿ, ಹಿಂದಿನ ತೀರ್ಪಿನಲ್ಲಿ ತಿದ್ದುಪಡಿ ಅಗತ್ಯವಿದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

  • ವಿರಾಟ್ ಕೊಹ್ಲಿ ಭೇಟಿಯಾದ ತಮಿಳು ನಟಿ ರಾಧಿಕಾ ಶರತ್ ಕುಮಾರ್

    ವಿರಾಟ್ ಕೊಹ್ಲಿ ಭೇಟಿಯಾದ ತಮಿಳು ನಟಿ ರಾಧಿಕಾ ಶರತ್ ಕುಮಾರ್

    ನವದೆಹಲಿ: ತಮಿಳು ನಟಿ ರಾಧಿಕಾ ಶರತ್‌ಕುಮಾರ್ (Radhika Sarathkumar) ಅವರು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯವರನ್ನು (Virat Kohli) ಭೇಟಿಯಾಗಿದ್ದು, ಅವರೊಂದಿಗಿನ ಸೆಲ್ಫಿಯನ್ನು ತಮ್ಮ ಇನ್‌ಸ್ಟಾಗ್ರಾಂ (Instagram) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಗುರುವಾರ (ಸೆ.12) ಲಂಡನ್‌ನಿಂದ (London) ಚೆನ್ನೈಗೆ (Chennai) ತೆರಳುವಾಗ ವಿಮಾನದಲ್ಲಿ ಭೇಟಿಯಾಗಿದ್ದಾರೆ. ವಿರಾಟ್ ಕೊಹ್ಲಿಯನ್ನು ಭೇಟಿಯಾದ ಕ್ಷಣವನ್ನು ರಾಧಿಕಾ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಪ್ರಜ್ವಲ್ ವಿರುದ್ಧ 3ನೇ ಕೇಸ್- ಎಸ್‌ಐಟಿಯಿಂದ 1,691 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

    ಸೆ.19ರಿಂದ ನಡೆಯಲಿರುವ ಬಾಂಗ್ಲಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಗಾಗಿ ವಿರಾಟ್ ಕೊಹ್ಲಿ ಲಂಡನ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದ್ದರು. ಆ ಸಂದರ್ಭದಲ್ಲಿ ಇಬ್ಬರು ಭೇಟಿಯಾಗಿದ್ದಾರೆ.

    ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ ರಾಧಿಕಾ ಶರತ್‌ಕುಮಾರ್, ಹೃದಯ ಶ್ರೀಮಂತಿಕೆಯುಳ್ಳ ವ್ಯಕ್ತಿಯನ್ನು ನಾನು ಭೇಟಿಯಾಗಿರುವುದು ರೋಮಾಂಚನವನ್ನುಂಟು ಮಾಡಿದೆ. ಅವರೊಂದಿಗೆ ಪ್ರಯಾಣಿಸುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.

    ತಮಿಳು ಚಿತ್ರರಂಗದಲ್ಲಿ ನಟಿ ರಾಧಿಕಾ ಶರತ್‌ಕುಮಾರ್ ತೇರಿ, ಚಂದ್ರಮುಖಿ, ಪೊಕ್ಕಿರಿ ರಾಜ, ಚಿತ್ತಿ ಮತ್ತು ನಲ್ಲವನುಕ್ಕು ನಲ್ಲವನ್‌ನಲ್ಲಿ ತಮ್ಮ ಪಾತ್ರಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಜೊತೆಗೆ ಅವರು ಹಿಮ್ಮತ್ವಾಲಾ, ಲಾಲ್ ಬಾದ್ಶಾ, ನಸೀಬ್ ಅಪ್ನಾ ಅಪ್ನಾ, ಮತ್ತು ಮೇರಾ ಪತಿ ಸಿರ್ಫ್ ಮೇರಾ ಹೈ ಸೇರಿದಂತೆ ಹಿಂದಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಇದನ್ನೂ ಓದಿ: ರೈತರಿಗೆ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂತಾರೆ: ಹೆಚ್‌ಡಿಕೆ ವಿರುದ್ಧ ಸಿಎಂ ವಾಗ್ದಾಳಿ

  • ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚಿದ್ದ ಶಮಿ ಕಾಲಿಗೆ ಶಸ್ತ್ರಚಿಕಿತ್ಸೆ – ಐಪಿಎಲ್‌ನಿಂದ ಹೊರಗೆ?

    ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚಿದ್ದ ಶಮಿ ಕಾಲಿಗೆ ಶಸ್ತ್ರಚಿಕಿತ್ಸೆ – ಐಪಿಎಲ್‌ನಿಂದ ಹೊರಗೆ?

    ಬ್ರಿಟನ್‌: ಭಾರತ ಕ್ರಿಕೆಟ್‌ ತಂಡದ ವೇಗಿ ಮೊಹಮ್ಮದ್ ಶಮಿ (Mohammed Shami) 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

    ಎಡ ಪಾದದ ಗಾಯದಿಂದ ಹೊರಗುಳಿದಿರುವ ಟೀಂ ಇಂಡಿಯಾ ಬೌಲರ್‌ ಸೋಮವಾರ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದನ್ನೂ ಓದಿ: ಧ್ರುವ್ ಜುರೆಲ್, ಗಿಲ್ ತಾಳ್ಮೆಯ ಜೊತೆಯಾಟ – ಹ್ಯಾಟ್ರಿಕ್ ಗೆಲುವಿನೊಂದಿಗೆ ಭಾರತಕ್ಕೆ ಸರಣಿ ಜಯ

    ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಶಮಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಆಸ್ಪತ್ರೆಯ ಬೆಡ್‌ನಲ್ಲಿರುವ ಶಮಿ, ನನ್ನ ಅಕಿಲ್ಸ್ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಭಾರತದಲ್ಲಿ ನಡೆದ 2023 ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಶಮಿ ಮಿಂಚಿದ್ದರು. ಮುಂದಿನ ತಿಂಗಳಿಂದ ಐಪಿಎಲ್‌ ಪ್ರಾರಂಭವಾಗಲಿದ್ದು, ಗುಜರಾತ್ ಟೈಟಾನ್ಸ್ ವೇಗಿ ಆಟದಿಂದ ಹೊರಗುಳಿಯಬಹುದು ಎನ್ನಲಾಗಿದೆ. ಇದನ್ನೂ ಓದಿ: ಸಿಸಿಎಲ್ 2024: ಮುಂಬೈ ವಿರುದ್ಧ ಗೆದ್ದ ಸುದೀಪ್ ಟೀಮ್

    ಡಿಸೆಂಬರ್-ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡದಲ್ಲಿ ಶಮಿ ಆಯ್ಕೆಯಾಗಿದ್ದರು. ಪಾದದ ಗಾಯದ ಸಮಸ್ಯೆಯಿಂದ ಅವರು ಆಟದಿಂದ ಹೊರಗುಳಿಯಬೇಕಾಯಿತು. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಅವರು ಭಾರತ ತಂಡದ ಭಾಗವಾಗಿಲ್ಲ. ಶಮಿ ಈಗ ಜೂನ್‌ನಲ್ಲಿ ನಡೆಯಲಿರುವ ಐಪಿಎಲ್ ಮತ್ತು 2024ರ ಐಸಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ.

  • ಭಾರತೀಯ ಸ್ಟಾರ್‌ ಕ್ರಿಕೆಟಿಗನ ತಂದೆ ನಾಪತ್ತೆ – ಪುಣೆ ಪೊಲೀಸರಿಂದ ಶೋಧ

    ಭಾರತೀಯ ಸ್ಟಾರ್‌ ಕ್ರಿಕೆಟಿಗನ ತಂದೆ ನಾಪತ್ತೆ – ಪುಣೆ ಪೊಲೀಸರಿಂದ ಶೋಧ

    ಮುಂಬೈ: ಭಾರತೀಯ ಕ್ರಿಕೆಟಿಗ (Indian Cricketer) ಕೇದಾರ್‌ ಜಾಧವ್‌ (Kedar Jadhav) ಅವರ ತಂದೆ ನಾಪತ್ತೆಯಾಗಿದ್ದಾರೆ ಎಂದು ಜಾಧವ್‌ ಸೋಮವಾರ ಪುಣೆಯ (Pune) ಅಲಂಕಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 75 ವರ್ಷದ ಮಹದೇವ್ ಸೋಪಾನ್ ಜಾಧವ್‌ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

    ಮೂಲಗಳ ಪ್ರಕಾರ, ಕೇದಾರ್ ಜಾಧವ್‌ ಮತ್ತು ಮಹದೇವ್ ಜಾಧವ್ ಪುಣೆ ನಗರದ ಕೊತ್ರುಡ್ ಪ್ರದೇಶದ ನಿವಾಸಿಗಳು. ಮಹದೇವ್‌ ಸೋಮವಾರ ಮನೆಯವರಿಗೆ ತಿಳಿಸದೇ ಹೊರಗಡೆ ಹೋಗಿದ್ದಾರೆ. ಬಹಳ ಹೊತ್ತಾದರೂ ಮನೆಗೆ ಹಿಂದಿರುಗಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸಂಜೆವರೆಗೂ ಹುಡುಕಾಡಿದರೂ ಸಿಗದಿದ್ದಾಗ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌

    ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೋಧ ಆರಂಭಿಸಿದ್ದು, ಇತರ ಪೊಲೀಸ್‌ ಠಾಣೆಗೂ ಜಾಧವ್‌ ಅವರ ತಂದೆ ಫೋಟೋವನ್ನು ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: WPLನಲ್ಲಿ ನೋಬಾಲ್‌ ವಿವಾದ – ಚಾಂಪಿಯನ್‌ ಪಟ್ಟ ಕೈತಪ್ಪಿಸಿದ ಆ ಒಂದು ಔಟ್‌

  • ನಾನು ಈಗ ‘ಅತ್ಯುತ್ತಮ ಕಂಪನಿಯ ಜೊತೆಯಲ್ಲಿದ್ದೇನೆ’ ಎಂದ ರಾಹುಲ್

    ನಾನು ಈಗ ‘ಅತ್ಯುತ್ತಮ ಕಂಪನಿಯ ಜೊತೆಯಲ್ಲಿದ್ದೇನೆ’ ಎಂದ ರಾಹುಲ್

    ವೆಲ್ಲಿಂಗ್ಟನ್: ಟೀಂ ಇಂಡಿಯಾ ಕ್ರಿಕೆಟರ್ ಕೆ.ಎಲ್.ರಾಹುಲ್ ಉತ್ತಮ ಬ್ಯಾಟಿಂಗ್, ಕೀಪಿಂಗ್ ಮೂಲಕ ತಮ್ಮ ಖ್ಯಾತಿಯನ್ನು ಬೆಳೆಸಿಕೊಂಡಿದ್ದಾರೆ. 2019ರ ಆರಂಭಿಕ ಹಂತದಲ್ಲಿ ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿದ್ದ ರಾಹುಲ್ ಈಗ ಸೀಮಿತ ಓವರ್‌ಗಳ ಭಾರತ ತಂಡದಲ್ಲಿ ಅನಿವಾರ್ಯ ಸದಸ್ಯರಾಗಿದ್ದಾರೆ. ಓಪನರ್, ಫಿನಿಶರ್ ಮತ್ತು ವಿಕೆಟ್ ಕೀಪರ್ ಹೀಗೆ ಭಾರತೀಯ ತಂಡದಲ್ಲಿ ಅನೇಕ ಪಾತ್ರಗಳನ್ನು ವಹಿಸಿಕೊಂಡ ರಾಹುಲ್ ಅವರು ಕ್ರೀಡಾ ನಿರೂಪಕ ಮತ್ತು ಪ್ರೆಸೆಂಟರ್ ಜತಿನ್ ಸಪ್ರು ಅವರ ಮಗಳೊಂದಿಗೆ ಕಾಣಿಸಿಕೊಂಡು ಮೈದಾನದಿಂದ ಹೊಸ ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ.

    ಇದಕ್ಕೂ ಮೊದಲು, ಆಸ್ಟ್ರೇಲಿಯಾದ ಟೆಸ್ಟ್ ನಾಯಕ ಟಿಮ್ ಪೈನ್ ಅವರ ಮಕ್ಕಳೊಂದಿಗೆ ಗುರುತಿಸಿಕೊಂಡಿದ್ದ ರಿಷಬ್ ಪಂತ್ ಅವರು ‘ಬೇಬಿಸಿಟ್ಟರ್’ ಎಂದು ಖ್ಯಾತಿ ಗಳಿಸಿದ್ದರು. ಈಗ ಭಾರತದ ಏಕದಿನ ಮತ್ತು ಟಿ20 ತಂಡಗಳಲ್ಲಿ ವಿಕೆಟ್ ಕೀಪರ್ ಆಗಿ ಪಂತ್ ಸ್ಥಾನವನ್ನು ರಾಹುಲ್ ವಹಿಸಿಕೊಂಡಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಅವರಂತೆ ಬೇಬಿ ಸಿಟ್ಟರ್ ಆಗಿ ರಾಹುಲ್ ಕಾಣಿಸಿಕೊಂಡಿದ್ದಾರೆ.

    ಕೆ.ಎಲ್.ರಾಹುಲ್ ಅವರು ಸಪ್ರು ಅವರ ಮಗಳ ಜೊತೆ ಇರುವ ಫೋಟೋವನ್ನು ಟ್ವಿಟ್ ಮಾಡಿ, ‘ಅತ್ಯುತ್ತಮ ಕಂಪನಿಯಲ್ಲಿ’ ಎಂದು ಬರೆದುಕೊಂಡಿದ್ದಾರೆ.

    ಸಪ್ರು ಕೂಡ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಮತ್ತೊಂದು ಪಾತ್ರ’ ಎಂದು ಬರೆದುಕೊಂಡಿದ್ದಾರೆ. ಕೆ.ಎಲ್.ರಾಹುಲ್ ಕಳೆದ ಕೆಲವು ಪಂದ್ಯಗಳಲ್ಲಿ ಓವರ್ ಬ್ಯಾಟ್ಸ್‌ಮನ್, ಕೀಪಿಂಗ್, ತಂಡದ ನಾಯಕ, 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಸೇರಿದಂತೆ ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಹೀಗಾಗಿ ಮತ್ತೊಂದು ಪಾತ್ರವನ್ನು ರಾಹುಲ್ ನಿರ್ವಹಿಸುತ್ತಿದ್ದಾರೆ ಎಂದು ಸಪ್ರು ಹೇಳಿದ್ದಾರೆ.

    ಕಿವೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಲ್ಲಿ ಫಾರ್ಮ್ ಮತ್ತು ಸಾಕಷ್ಟು ಭರವಸೆಯನ್ನು ತೋರಿಸಿದ್ದರೂ ರಾಹುಲ್ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿಲ್ಲ. 27 ವರ್ಷದ ರಾಹುಲ್ 5 ಪಂದ್ಯಗಳ ಟಿ20 ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಅಗ್ರ ಸ್ಕೋರಿಂಗ್ ಬ್ಯಾಟ್ಸ್‍ಮನ್‍ಗಳಲ್ಲಿ ಒಬ್ಬರಾಗಿದ್ದರು.

    ಟೆಸ್ಟ್ ಸರಣಿಗೆ ಸ್ಥಾನ ಪಡೆಯದಿದ್ದರೂ ರಾಹುಲ್ ಅವರನ್ನು ನ್ಯೂಜಿಲೆಂಡ್‍ನಲ್ಲೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಅವರು ಸ್ಥಾನ ಪಡೆಯುತ್ತಾರೆ ಎಂಬ ವಿಶ್ವಾಸವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅವರು ಕಿವೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಡದಿದ್ದರೆ ಮಾರ್ಚ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ನೀಲಿ ಜರ್ಸಿ ತೊಟ್ಟು ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ತಮ್ಮೊಳಗಿನ ಛಾಯಾಗ್ರಾಹಕನಿಗೆ ಕೆಲಸ ನೀಡಿ ಅಭಿಮಾನಿಗಳ ಮನ ಗೆದ್ದ ಧೋನಿ

    ತಮ್ಮೊಳಗಿನ ಛಾಯಾಗ್ರಾಹಕನಿಗೆ ಕೆಲಸ ನೀಡಿ ಅಭಿಮಾನಿಗಳ ಮನ ಗೆದ್ದ ಧೋನಿ

    ನವದೆಹಲಿ: ಮುಂದಿನ ತಿಂಗಳು ಐಪಿಎಲ್ ಟೂರ್ನಿ ಮೂಲಕ ಕ್ರಿಕೆಟ್‍ಗೆ ಮರಳಲಿರುವ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಇತ್ತೀಚೆಗೆ ಮಧ್ಯಪ್ರದೇಶದ ಕನ್ಹಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಧೋನಿ ತಮ್ಮೊಳಗಿನ ಛಾಯಾಗ್ರಾಹಕನಿಗೆ ಕೆಲಸ ನೀಡಿ, ಅಭಿಮಾನಿಗಳ ಮನ ಗೆದ್ದಿದ್ದಾರೆ.

    ಎಂ.ಎಸ್.ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಕಳೆದ ತಿಂಗಳು ಮಧ್ಯಪ್ರದೇಶದ ಕನ್ಹಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ್ದರು. ಎಂಎಸ್ ಧೋನಿ ಅವರು ರಾಷ್ಟ್ರೀಯ ಉದ್ಯಾನವನದ ಭೇಟಿ ಅತ್ಯುತ್ತಮವಾಗಿತ್ತು ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ವಿವರಿಸಿದ್ದಾರೆ. ಜೊತೆಗೆ ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ರಾಷ್ಟ್ರೀಯ ಪ್ರಾಣಿ ಹುಲಿಯ ಫೋಟೋವನ್ನು ಧೋನಿ ಹಂಚಿಕೊಂಡಿದ್ದಾರೆ.

    https://www.instagram.com/p/B8i2DhXlwW0/

    ‘ಹುಲಿಯೊಂದನ್ನು ಕಣ್ಣೆದುರು ಕಂಡಾಗ, ಅದು ಕೆಲ ಫೋಟೋ ತೆಗೆದುಕೊಳ್ಳುವವರೆಗೂ ಸಮಯ ನೀಡಿದಾಗ ಖುಷಿಯಾಗುತ್ತದೆ. ಕಾನ್ಹಾ ಭೇಟಿ ಅತ್ಯುತ್ತಮವಾಗಿತ್ತು ಎಂದು ಧೋನಿ ಇನ್‍ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳೊಬ್ಬರು ಎಂ.ಎಸ್.ಧೋನಿ ಅವರನ್ನು ಹುಲಿ ಎಂದು ಕರೆದಿದ್ದಾರೆ.

    ಎಂ.ಎಸ್.ಧೋನಿ, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹೆಚ್ಚು ಫೋಟೋಗಳನ್ನು ಶೇರ್ ಮಾಡುವುದಿಲ್ಲ. ಆದರೆ ಅವರು ಪೋಸ್ಟ್ ಮಾಡಿದ ಫೋಟೋ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿಗುತ್ತವೆ. ಎಂ.ಎಸ್.ಧೋನಿ ಅವರು ಕೊನೆಯದಾಗಿ ಟೀಂ ಇಂಡಿಯಾ ಮಾಜಿ ವೇಗದ ಬೌಲರ್ ಆರ್.ಪಿ.ಸಿಂಗ್ ಹಾಗೂ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರೊಂದಿಗೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದ ವಿಡಿಯೋ ಹಾಗೂ ಫೋಟೋ ಹಂಚಿಕೊಂಡಿದ್ದರು.

    https://www.instagram.com/p/B7EVRdDlPDl/

    2019ರ ವಿಶ್ವಕಪ್ ಟೂರ್ನಿ ಬಳಿಕ ಕ್ರಿಕೆಟ್‍ನಿಂದ ವಿರಾಮ ತೆಗೆದುಕೊಂಡ ಎಂ.ಎಸ್.ಧೋನಿ, ಐಪಿಎಲ್ ಮೂಲಕ ಕ್ರಿಕೆಟ್‍ಗೆ ಎಂಟ್ರಿ ಕೊಡಲಿದ್ದಾರೆ. ಮಾರ್ಚ್ 29ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್‍ನ 13ನೇ ಆವೃತ್ತಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲು ಎಂಎಸ್ ಧೋನಿ ಮುಂದಿನ ತಿಂಗಳು ಮತ್ತೆ ಮೈದಾನಕ್ಕೆ ಬರಲಿದ್ದಾರೆ.

    ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವ ಧೋನಿ, ತಂಡಕ್ಕೆ ಮೂರು ಬಾರಿ ಪ್ರಶಸ್ತಿ ಗೆದ್ದುಕೊಟ್ಟಿದ್ದಾರೆ. ಕಳೆದ ಬಾರಿಯೂ ಸೂಪರ್ ಕಿಂಗ್ಸ್ ಫೈನಲ್ ತಲುಪಿತ್ತಾದರೂ ನಾಲ್ಕು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಎದುರು ನಿರಾಸೆ ಅನುಭವಿಸಿತ್ತು.

  • ಡೈಲಾಗ್ ಹೇಳಲು ತಡವರಿಸಿದ ಪತ್ನಿಯ ಕಾಲೆಳೆದ ಧೋನಿ- ವಿಡಿಯೋ

    ಡೈಲಾಗ್ ಹೇಳಲು ತಡವರಿಸಿದ ಪತ್ನಿಯ ಕಾಲೆಳೆದ ಧೋನಿ- ವಿಡಿಯೋ

    ರಾಂಚಿ: ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಡೈಲಾಗ್ ಹೇಳಲು ತಡವರಿಸಿದ ಪತ್ನಿ ಸಾಕ್ಷಿ ಅವರ ಕಾಲೆಳೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಖಾಸಗಿ ಕಂಪನಿಯೊಂದರ ಜಾಹೀರಾತಿನಲ್ಲಿ ಎಂ.ಎಸ್.ಧೋನಿ ದಂಪತಿ ನಟಿಸುತ್ತಿದ್ದಾರೆ. ಹೀಗಾಗಿ ಚಿತ್ರೀಕರಣಕ್ಕೆ ಹೋಗಿದ್ದ ಸಾಕ್ಷಿ ಅವರು ಸ್ಕ್ರಿಪ್ಟ್ ಹಿಡಿದು ಡೈಲಾಗ್ ಓದುತ್ತಿದ್ದರು. ಈ ವೇಳೆ ಎರಡ್ಮೂರು ಪ್ರಯತ್ನಗಳ ನಂತರವೂ ಡೈಲಾಗ್ ಹೇಳ ಕಷ್ಟಪಟ್ಟರು. ಆಗ ಮಧ್ಯ ಪ್ರವೇಶಿಸಿದ ಧೋನಿ, ಸ್ಕ್ರಿಪ್ಟ್ ನೋಡಿಕೊಂಡು ನಿನಗೆ ಡೈಲಾಗ್ ಹೇಳಲು ಆಗುತ್ತಿಲ್ಲ. ಇನ್ನು ನಟನೆ ಮಾಡುತ್ತ ಹೇಗೆ ಹೇಳುತ್ತಿಯಾ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ‘ನೀವು ಯಾವಾಗಲೂ ನನ್ನ ಕ್ಯಾಪ್ಟನ್’ – ನಂಬರ್ ಒನ್ ಪಟ್ಟ ಅಲಂಕರಿಸಿತು ಕೊಹ್ಲಿಯ ಮಾತು

    https://www.instagram.com/p/B6IeZOAl5CG/

    ಈ ವಿಡಿಯೋವನ್ನು ಧೋನಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ನಟನೆ ಸುಲಭದ ಕೆಲಸವಲ್ಲ ಎಂದು ಬರೆದುಕೊಂಡಿದ್ದಾರೆ. ಸಾಕ್ಷಿ ಅವರ ಈ ವಿಡಿಯೋಗೆ ಇದುವರೆಗೆ 43 ಲಕ್ಷಕ್ಕೂ ಹೆಚ್ಚು ಲೈಕ್‍ಗಳು ಬಂದಿವೆ. ಇದನ್ನೂ ಓದಿ: ಸೈನಿಕರ ರೋಚಕ ಕಥೆ ಹೇಳಲಿದ್ದಾರೆ ಧೋನಿ

    2019ರ ವಿಶ್ವಕಪ್ ಟೂರ್ನಿ ಬಳಿಕ ಕ್ರಿಕೆಟ್‍ನಿಂದ ಎಂ.ಎಸ್.ಧೋನಿ ವಿರಾಮ ತೆಗೆದುಕೊಂಡಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಧೋನಿ ಅವರು ಜುಲೈ 30ರಿಂದ ಆಗಸ್ಟ್ 15 ರವರೆಗೆ ಕಾಶ್ಮೀರದಲ್ಲಿ ಪ್ಯಾರಾ ಕಮಾಂಡೋಗಳ ಬೆಟಾಲಿಯನ್‍ನಲ್ಲಿ 15 ದಿನಗಳ ಕಾಲ ಸೇವೆ ಸಲ್ಲಿಸಿದ್ದರು. ವೆಸ್ಟ್ ಇಂಡೀಸ್ ಪ್ರವಾಸ, ಭಾರತದಲ್ಲಿ ನಡೆದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಸರಣಿ ವೇಳೆ ತಂಡಕ್ಕೆ ಅಲಭ್ಯವಾಗಿದ್ದ ಧೋನಿ ಈ ನಡೆಯುತ್ತಿರುವ ವಿಂಡೀಸ್ ಸರಣಿಯ ಸಮಯದಲ್ಲೂ ವಿಶ್ರಾಂತಿಯಲ್ಲಿದ್ದಾರೆ.

  • ಯಶ್ ಭೇಟಿ ಮಾಡಿದ ಭಾರತೀಯ ಕ್ರಿಕೆಟ್ ಆಟಗಾರ

    ಯಶ್ ಭೇಟಿ ಮಾಡಿದ ಭಾರತೀಯ ಕ್ರಿಕೆಟ್ ಆಟಗಾರ

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರರೊಬ್ಬರು ಭೇಟಿ ಮಾಡಿ ಅವರ ಜೊತೆ ಮಾತನಾಡಿದ್ದಾರೆ.

    ಕ್ರಿಕೆಟ್ ಆಟಗಾರ ಪೃಥ್ವಿ ಶಾ ನಟ ಯಶ್ ಅವರನ್ನು ಭೇಟಿ ಮಾಡಿದ್ದಾರೆ. ಪೃಥ್ವಿ ಶಾ ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದಿದ್ದರು. ಇತ್ತ ನಟ ಯಶ್ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿದ್ದರು. ಹೀಗಾಗಿ ಇಂದು ನಟ ಯಶ್ ಅವರನ್ನ ಭೇಟಿ ಮಾಡಿದ್ದು, ಕೆಲ ಸಮಯ ಅವರ ಜೊತೆ ಮಾತನಾಡಿ ಪೃಥ್ವಿ ಶಾ ಕಾಲ ಕಳೆದಿದ್ದಾರೆ.

    ಕ್ರಿಕೆಟ್ ಆಟಗಾರ ನಟ ಯಶ್ ಅವರನ್ನು ಭೇಟಿ ಮಾಡಿದ್ದ ಫೋಟೋವನ್ನು ಯಶ್ ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೋಟೋ ಜೊತೆಗೆ “ಭಾರತದ ಕ್ರಿಕೆಟ್ ತಂಡದ ಆಟಗಾರರು ಮತ್ತು 19 ವರ್ಷದೊಳಗಿನ ವಿಶ್ವಕಪ್ ಪಂದ್ಯವನ್ನು ಭಾರತಕ್ಕೆ ಗೆದ್ದು ಕೊಟ್ಟ ನಾಯಕ “ಪೃಥ್ವಿ ಶಾ” ಅವರು ಇಂದು ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿಯಾಗಿ ಕೆಲಸಮಯ ಕಳೆದರು” ಎಂದು ಬರೆದುಕೊಂಡಿದ್ದಾರೆ.

    ಪೃಥ್ವಿ ಶಾ ಯಾರು?
    ಟೆಸ್ಟ್ ಕ್ಯಾಪ್ ಧರಿಸಿದ ಮೊದಲ ಪಂದ್ಯದಲ್ಲೇ ಪೃಥ್ವಿ ಶಾ ಶತಕ ಸಿಡಿಸಿ ಮಿಂಚಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲೇ ವೇಗವಾಗಿ ಶತಕ ಸಿಡಿಸಿದ ಭಾರತದ ಎರಡನೇ, ವಿಶ್ವದ ಮೂರನೇ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊದಲ ಎಸೆತವನ್ನು ಎದುರಿಸುವ ಮೂಲಕ ಪಾದರ್ಪಣೆಯ ಪಂದ್ಯದಲ್ಲೇ ಇನ್ನಿಂಗ್ಸ್ ಮೊದಲ ಎಸೆತವನ್ನು ಎದುರಿಸಿದ ಪ್ರಥಮ ಭಾರತೀಯ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈ ಮೊದಲು ಜಿಂಬಾಬ್ವೆಯ ಹ್ಯಾಮಿಲ್ಟನ್ ಮಸಕಜ, ಬಾಂಗ್ಲಾದೇಶ ತಮಿಮ್ ಇಕ್ಬಾಲ್, ಪಾಕಿಸ್ತಾನ ಇಮ್ರಾನ್ ಫರ್ಹಾತ್ ತಮ್ಮ ಮೊದಲ ಪಂದ್ಯದಲ್ಲೇ ಇನ್ನಿಂಗ್ಸ್ ನ ಮೊದಲ ಎಸೆತವನ್ನು ಎದುರಿಸಿದ್ದರು.

    https://twitter.com/YashFC/status/1084014069491761159

    ರಾಜ್‍ಕೋಟ್‍ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿದ್ದ ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರ ಕೈಯಿಂದ ಟೆಸ್ಟ್ ಕ್ಯಾಪ್ ಧರಿಸಿದ ಪೃಥ್ವಿ ಶಾ ಟೆಸ್ಟ್ ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ಪ್ರತಿನಿಧಿಸಿದ 293ನೇ ಆಟಗಾರನೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

    ಸದ್ಯಕ್ಕೆ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಕಂಡಿದ್ದು, ಬಾಕ್ಸ್ ಅಫೀಸ್ ನಲ್ಲಿ 200 ಕೋಟಿ ಗಳಿಸಿ ಮುನ್ನುಗ್ಗುತ್ತಿದೆ. 25 ದಿನಗಳನ್ನ ಪೂರೈಸಿರುವ ಕೆಜಿಎಫ್ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv