Tag: Indian Economy

  • ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ (Russian Oil) ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ (Denis Alipov) ಹೇಳಿದ್ದಾರೆ.

    ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ ಅಂತ ಮೋದಿ (Narendra Modi) ನನಗೆ ಭರವಸೆ ನೀಡಿದ್ದಾರೆ ಎಂಬ ಟ್ರಂಪ್‌ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರವು ಭಾರತದ ಹಿತಾಸಕ್ತಿಗೆ ಅನುಗುಣವಾಗಿದೆ. ಏಕೆಂದ್ರೆ ರಷ್ಯಾ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ (Indian Economy) ಪ್ರಯೋಜನಕಾರಿಯಾಗಿದೆ. ನಮ್ಮ ನಡುವಿನ ಕಾರ್ಯತಂತ್ರ ಹಾಗೂ ಪಾಲುದಾರಿಕೆಯು ಜಾಗತಿಕ ವ್ಯವಹಾರ ಸ್ಥಿರಗೊಳಿಸುವ ಶಕ್ತಿಯಾಗಿ ಪರಿಣಮಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಭಾರತ ಹೇಳಿದ್ದೇನು?
    ಇನ್ನೂ ಟ್ರಂಪ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ, ದೇಶದ ಗ್ರಾಹಕರ ಹಿತಾಸಕ್ತಿ ಕಾಪಾಡುವುದು ಭಾರತ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದೆ.

    ಟ್ರಂಪ್‌ ಹೇಳಿದ್ದೇನು?
    ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್ ಯುದ್ಧ ತಡೆಯುವ ನಮ್ಮ ಪ್ರಯತ್ನಗಳ ಭಾಗವೂ ಆಗಿದೆ. ಚೀನಾಗೂ ಸಹ ಅದೇ ರೀತಿ ಮಾಡುವಂತೆ ನಾವು ಹೇಳಬೇಕಾಗಿದೆ ಎಂದು ಹೇಳಿದ್ದರು.

    ಅಮೆರಿಕದ ಆರೋಪ ಏನಿದೆ?
    ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಅವರ ಬಲವಾದ ನಂಬಿಕೆ. ಅಮೆರಿಕದ ಕೆಲ ಅಧಿಕಾರಿಗಳೂ ಟ್ರಂಪ್ ಹೇಳಿಕೆಯನ್ನ ಉಲ್ಲೇಖಿಸಿ ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು. ಆದ್ರೆ ರಷ್ಯಾದ ಸಂಬಂಧ ಬಿಟ್ಟುಕೊಡದ ಭಾರತ ತೈಲ ಖರೀದಿ ಮುಂದುವರಿಸಿದೆ.

  • ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಬೆಂಗಳೂರು: ಇರಾನ್ (Iran) ಹಾರ್ಮುಝ್ ಜಲಸಂಧಿ (Hormuz Strait) ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟವಾಗಲಿದೆ, ಆರ್ಥಿಕತೆಗೂ ಹೊಡೆತ ಬೀಳಲಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್ (SR Keshav) ಹೇಳಿದ್ದಾರೆ.

    ಇರಾನ್‌-ಇಸ್ರೇಲ್‌ ನಡುವೆ ಸಂಘರ್ಷ (Israel Iran Conflict) ತೀವ್ರಗೊಂಡಿದ್ದು, ಭಾರತದ ಆರ್ಥಿಕತೆ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಂಘರ್ಷ ಮುಂದುವರಿದ್ರೆ ಅಥವಾ ಇರಾನ್‌ ಮುಂದಿನ ಕ್ರಮ ಭಾರತದ (India) ಮೇಲೆ ಏನು ಪರಿಣಾಮಗಳು ಬೀರಬಹುದು ಅನ್ನೋ ಕುರಿತು ಎಸ್. ಆರ್ ಕೇಶವ್ ಮಾತನಾಡಿದ್ದಾರೆ.

    ಆಮದು-ರಫ್ತಿನ ಪ್ರಮುಖ ಮಾರ್ಗ
    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಕಷ್ಟವಾಗುತ್ತದೆ. ಸಹಜವಾಗಿಯೇ ವಿಶ್ವದಲ್ಲಿ ಯಾವುದೇ ಯುದ್ಧವಾದ್ರೂ ವಿಶ್ವದ ಎಲ್ಲಾ ದೇಶಗಳಿಗೂ ಪರಿಣಾಮ ಬೀರುತ್ತೆ. ಅದೇ ರೀತಿ ಇಸ್ರೇಲ್-ಇರಾನ್ ಯುದ್ಧ ಸುದೀರ್ಘವಾದಷ್ಟು ಭಾರತಕ್ಕೆ ಲಾಸ್. ಏಕೆಂದ್ರೆ ಭಾರತದ 80% ರಷ್ಟು ಕಚ್ಚಾ ತೈಲವನ್ನ (Crude oil) ಆಮದು ಮಾಡಿಕೊಳ್ಳುತ್ತೆ. ಹಾರ್ಮೂಝ್ ಜಲಸಂಧಿ ಮಾರ್ಗದಿಂದಲೇ ಭಾರತಕ್ಕೆ ಆಮದು ಆಗಬೇಕು. ಭಾರತದಿಂದ ರಫ್ತಾಗುವ ಎಲ್ಲ ವಸ್ತುಗಳು ಸಹ ಈ ಜಲಸಂಧಿಯಿಂದಲೇ ಹೋಗಬೇಕು ಎಂದು ವಿವರಿಸಿದ್ರು.

    ಈಗಾಗಲೇ ಆಮದು, ರಫ್ತು ಎರಡಲ್ಲೂ ಭಾರತಕ್ಕೆ ನಷ್ಟ ಶುರುವಾಗಿದೆ. ಇಸ್ರೇಲ್‌ ಜೊತೆಗಿನ ಸಂಘರ್ಷ ತೀವ್ರವಾದ ಬೆನ್ನಲ್ಲೇ ಇರಾನ್ ಜೊತೆಗೆ ವಹಿವಾಟು ಕಡಿಮೆ ಆಗಿದೆ. ಜೊತೆಗೆ ಸೌದಿ ಅರೇಬಿಯಾ, ಯುಎಇ, ಅರಬ್ ದೇಶಗಳಿಂದ ಸಾಗಣಿಕೆಗೆ ಈ ಜಲಸಂಧಿಯಲ್ಲೇ ಬರಬೇಕು. ಎಲ್ಲಾ ಆಮದು ಬರೋದಕ್ಕೆ ಈ ಜಲಸಂಧಿ ಮಾರ್ಗವೇ ಹತ್ತಿರವಾಗುತ್ತೆ. ಯೂರೋಪ್ ದೇಶಗಳಿಗೆ ಭಾರತ ರಪ್ತು ಮಾಡೋದಕ್ಕೂ ಈ ಮಾರ್ಗವೇ ಮುಖ್ಯ. ಹಾಗಾಗಿ ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೇ ಭಾರತಕ್ಕೆ ಭಾರೀ ನಷ್ಟವಾಗುತ್ತದೆ ಎಂದು ತಿಳಿಸಿದರು.

    ಜೊತೆಗೆ ಏಷ್ಯಾ ದೇಶಗಳ ಸಂಪರ್ಕಕ್ಕೂ ನೇರ ಹೊಡೆತ ಬೀಳುತ್ತೆ. ಭಾರತ ಮಾತ್ರವಲ್ಲ ಬಹುತೇಕ ಎಲ್ಲ ಏಷ್ಯಾ ರಾಷ್ಟ್ರಗಳಿಗೆ ಹೊಡೆತ ಬೀಳುತ್ತೆ. ಸದ್ಯದ ಪರಿಸ್ಥಿಯಲ್ಲಿ ಇರಾನ್‌ಗೆ ಚೀನಾ ಬೇಕಿದೆ, ಇಸ್ರೇಲ್‌ಗೆ ಅಮೆರಿಕ ಬೇಕಿದೆ ಎಂದು ಮಾಹಿತಿ ನೀಡಿದರು.

  • 2023ರ ಆರ್ಥಿಕ ವರ್ಷದಲ್ಲಿ GDP ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗಲಿದೆ – RBI ಗವರ್ನರ್‌

    2023ರ ಆರ್ಥಿಕ ವರ್ಷದಲ್ಲಿ GDP ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗಲಿದೆ – RBI ಗವರ್ನರ್‌

    ನವದೆಹಲಿ: 2023ರ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ (GDP) ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ (RBI) ಗವರ್ನರ್‌ ಶಕ್ತಿಕಾಂತ ದಾಸ್ (Shaktikanta Das) ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಕಳೆದ ಹಣಕಾಸು ವರ್ಷದ 3 ಮತ್ತು 4ನೇ ತ್ರೈಮಾಸಿಕದಲ್ಲಿ ಆರ್ಥಿಕ ವೇಗ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ 2022-23ರ ಬೆಳವಣಿಗೆಯು 7 ಶೇಕಡಕ್ಕಿಂತ ಹೆಚ್ಚಾಗಿರುತ್ತದೆ. ಇದರಿಂದ ಅಚ್ಚರಿ ಪಡಬೇಕಾದುದ್ದಿಲ್ಲ. 2022-23 ರ ತಾತ್ಕಾಲಿಕ ವಾರ್ಷಿಕ ಅಂದಾಜುಗಳನ್ನು ಪ್ರಸಕ್ತ ವರ್ಷದ ಮೇ 31ರಂದು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.

    ವಾಸ್ತವವಾಗಿ ಆರ್‌ಬಿಐ ಮೇಲ್ವಿಚಾರಣೆ ಮಾಡಿದಾಗ ಎಲ್ಲಾ ಹೆಚ್ಚಿನ ಆವರ್ತನ ಸೂಚಕಗಳಲ್ಲಿ, 4ನೇ ತ್ರೈಮಾಸಿಕದಲ್ಲಿ ಆರ್ಥಿಕ ವೇಗ ಕಾಯ್ದುಕೊಂಡಿರುವುದು ಗಮನಕ್ಕೆ ಬಂದಿದೆ. ಪ್ರಸಕ್ತ ವರ್ಷದಲ್ಲೇ ಆರ್‌ಬಿಐ ಶೇ.6.5ರಷ್ಟು ಪ್ರಗತಿ ದರ ನಿರೀಕ್ಷಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

    ಹಣದುಬ್ಬರ, ಬ್ಯಾಂಕಿಂಗ್‌ ಒತ್ತಡಗಳು ಹಾಗೂ ಜಾಗತಿಕ ಅನಿಶ್ಚಿತತೆಯ ನಡುವೆ ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯು ಸ್ಥಿರವಾಗಿದೆ. ಉತ್ತಮವಾದ ಬಂಡವಾಳ ಹೂಡಿಕೆ, ಆಸ್ತಿಯ ಗುಣಮಟ್ಟ ಹಾಗೂ‌ ಸುಧಾರಿತ ಲಾಭದಾಯಕತೆ ಇವೆಲ್ಲವೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದಿದ್ದಾರೆ.

    ಆರ್‌ಬಿಐ ಮೇ 2022ರಿಂದ ರೆಪೊ ದರವನ್ನ 250 ಬೇಸಿಸ್‌ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ವಿರಾಮ ನೀಡುವ ಸಾಧ್ಯತೆಗಳಿವೆ. ಆದ್ರೆ ಇದು ನನ್ನ ಕೈಯಲ್ಲಿ ಇಲ್ಲ. ಆರ್ಥಿಕ ಸ್ಥಿತಿಯನ್ನು ಅವಲಂಭಿಸಿರುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

  • 2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಭಾರತಕ್ಕೆ ಈಗಿಂದಲೇ ತಯಾರಿ ಅಗತ್ಯ – ಪ್ರಹ್ಲಾದ್ ಜೋಶಿ

    2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಭಾರತಕ್ಕೆ ಈಗಿಂದಲೇ ತಯಾರಿ ಅಗತ್ಯ – ಪ್ರಹ್ಲಾದ್ ಜೋಶಿ

    ಬೆಂಗಳೂರು: ಮೂರು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ಭಾರತ 2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಷ್ಟ್ರವನ್ನಾಗಿಸುವುದೇ ವಿಷನ್ ಇಂಡಿಯಾ@2047 (Vision India @ 2047) ಗುರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ವಿಷನ್ ಇಂಡಿಯಾ@2047 ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

    ಭಾರತ 2047ಕ್ಕೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದೆ ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಈಗಿನಿಂದಲೇ ಎಲ್ಲ ಕ್ಷೇತ್ರಗಳಲ್ಲೂ ತಯಾರಿ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.‌ 30 ಟ್ರಿಲಿಯನ್ ಡಾಲರ್ ಆರ್ಥಿಕತೆ ದೇಶವಾದಾಗ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಿ ಭಾರತ ಬದಲಾಗಿರುತ್ತೆ. ದೇಶಕ್ಕೆ ಹೇರಳವಾದ ವಿದ್ಯುತ್ ಅವಶ್ಯಕತೆ ಇದ್ದು, ಅದಕ್ಕಾಗಿ ಕಲ್ಲಿದ್ದಲು ಉತ್ಪಾದನೆಯನ್ನೂ ಹೆಚ್ಚಿಸುವತ್ತ ಕೇಂದ್ರ ಕಲ್ಲಿದ್ದಲು ಸಚಿವಾಲಯ ಗಮನ ಹರಿಸಿದೆ ಎಂದು ಹೇಳಿದರು‌. ಇದನ್ನೂ ಓದಿ: ರಾಯಚೂರಿನಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಭರ್ಜರಿ ಫೈಟ್ – ಒಂದೇ ಕ್ಷೇತ್ರಕ್ಕೆ 17 ಅರ್ಜಿ

    ಕೇಂದ್ರ ಸಚಿವ ಪೀಯೂಷ್ ಗೋಯಲ್ (Piyush Goyal) ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಗಾರವು ಮುಂಬರುವ 25 ವರ್ಷಗಳಲ್ಲಿ ಭಾರತವನ್ನು ಹೇಗೆ ಪ್ರಗತಿಯ ಪಥದಲ್ಲಿ ಮುನ್ನಡೆಸಬಹುದು ಎಂಬ ಬಗ್ಗೆ ಸ್ಟಾರ್ಟಪ್‌ಗಳು ಮತ್ತು ಉದ್ಯಮಶೀಲತೆ ಕೇಂದ್ರೀಕರಿಸಲಿದೆ ಎಂದು ವಿವರಿಸಿದರು.

    “ಅಮೃತ್ ಕಾಲ” ಎಂದು ಕರೆಯಲ್ಪಡುವ ಮುಂದಿನ ಎರಡೂವರೆ ದಶಕಗಳು ಭಾರತದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಲಿವೆ. ಈ ಅವಧಿಯಲ್ಲಿ ಭಾರತವನ್ನು ಅಭೂತಪೂರ್ವ ರೀತಿಯಲ್ಲಿ ಪರಿವರ್ತಿಸುವುದು ಪ್ರಧಾನಿ ಮೋದಿಯವರ ದೃಷ್ಟಿಯಾಗಿದೆ ಎಂದು ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

    ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪೀಯೂಷ್ ಗೋಯಲ್, ದೇಶದ ತಂತ್ರಜ್ಞಾನದ ರಾಜಧಾನಿಯಾಗಿರುವ ಬೆಂಗಳೂರು ಸಹಭಾಗಿತ್ವ ಸಹಕಾರ ಮತ್ತು ಸ್ಪರ್ಧೆಗಳಿಂದ ಜಾಗತಿಕ ಮಟ್ಟದಲ್ಲಿ ವಿರಾಜಮಾನವಾಗಿದೆ ಎಂದು ಬಣ್ಣಿಸಿದರು. ಭಾರತವು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದ್ದು, 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಹೊರಹೊಮ್ಮಲಿದೆ. ಕೇಂದ್ರ ಸರ್ಕಾರವು ದೊಡ್ಡ ಉದ್ಯಮಿಗಳಂತೆಯೇ ಸಣ್ಣಪುಟ್ಟ ವ್ಯಾಪಾರಿಗಳಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಓಪನ್ ಡೇಟಾ ಇ-ಕಾಮರ್ಸ್‌ ವ್ಯವಸ್ಥೆಗೆ ಚಾಲನೆ ನೀಡಿದ್ದು, ಇದೂ ಸಹ ಬೆಂಗಳೂರಿನಿಂದಲೇ ಆರಂಭವಾಗಬೇಕು ಎಂದು ಗೋಯಲ್‌ ಆಶಯ ವ್ಯಕ್ತಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕ ಕೊಡುಗೆ ಗುರಿ – ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ

    ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕ ಕೊಡುಗೆ ಗುರಿ – ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ

    ಬೆಂಗಳೂರು: ದೇಶದ 5 ಟ್ರಿಲಿಯನ್ ಡಾಲರ್ (US Dollar) ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

    ಯೋಜನಾ ಇಲಾಖೆಯ ((Karnataka Planning Commission) ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್ ದಾಸ್ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ ʻKarnataka: A $1 Trillion GDP Visionʼ ಎಂಬ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದನ್ನೂ ಓದಿ: ಪ್ರೆಗ್ನೆಂಟ್ ಅಂತ ತಿಳಿದ 48 ಗಂಟೆಯಲ್ಲೇ ಮಗುವನ್ನು ಹೆತ್ತ ತಾಯಿ

    ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡಲು ಸರ್ಕಾರದ ಮುಖ್ಯಕಾರ್ಯದರ್ಶಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮೋಹನ್ ದಾಸ್ ಪೈ, ಎಫ್‌ಐಸಿಸಿಐ ಹಾಗೂ ಮೆಕೆನ್ಸಿಯ ಪ್ರತಿನಿಧಿಗಳನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

    2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ (Trillion US Dollar) ಆರ್ಥಿಕತೆಯನ್ನು ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವ ಕೆಲಸವನ್ನು ಈ ತಂಡ ಮಾಡಲಿದೆ. ಈ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆಯನ್ನು ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

    ಫಲಿತಾಂಶ ಆಧಾರಿತ ಉದ್ದೇಶಿತ ಬಜೆಟ್‌ಗೆ ಅನುಕೂಲವಾಗುವಂತೆ ಡಿಸೆಂಬರ್ 2022ರ ಒಳಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ. ಕರ್ನಾಟಕದಿಂದ ಒಂದು ಟ್ರಿಲಿಯನ್ ಯುಎಸ್ ಡಾಲರ್ ಕೊಡುಗೆಯೊಂದಿಗೆ 5 ಟ್ರಿಲಿಯನ್ ಭಾರತದ ಗುರಿಯೊಂದಿಗೆ ನಾವು ಹೊಂದಿಕೊಳ್ಳಬೇಕು. ಬೆಳವಣಿಗೆಯ ದರಗಳನ್ನು ಹೆಚ್ಚಿಸಲು ಯೋಜನೆ ರೂಪಿಸಬೇಕು. ಕರಾವಳಿ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಮೂಲಕ ರಫ್ತನ್ನು ಹೆಚ್ಚಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

    ಮೂಲಸೌಕರ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಮೂಲಸೌಕರ್ಯ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಜೊತೆಗೆ ಅಭಿವೃದ್ಧಿ ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯಗಳನ್ನು ಹೆಚ್ಚಿಸಬೇಕಾಗಿದೆ. ಕೈಗಾರಿಕಾ, ಕೃಷಿ (Agriculture) ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ (Employment) ಮತ್ತು ಬೆಳವಣಿಗೆ ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯ ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆ ಕಾಣಬಹುದಾಗಿದೆ. ಹಾಗಾಗಿ ಕೈಗಾರಿಕೆ ಮತ್ತು ಖಾಸಗಿ ವಲಯಗಳೆರಡೂ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಸಲಹೆ ನೀಡಿದ್ದಾರೆ.

    ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಟಿ.ವಿ. ಮೋಹನ್ ದಾಸ್ ಪೈ, ನಿಶಾ ಹೊಳ್ಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಇನ್ನಿತರರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • 2026ಕ್ಕೆ ಭಾರತದಲ್ಲಿ ಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚಳ!

    2026ಕ್ಕೆ ಭಾರತದಲ್ಲಿ ಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚಳ!

    ನವದೆಹಲಿ: ಭಾರತದಲ್ಲಿ (India) ಕೋಟ್ಯಧಿಪತಿಗಳ (Billionaire) ಸಂಖ್ಯೆ 2026ರ ವೇಳೆಗೆ ಹೆಚ್ಚಾಗಲಿದೆ ಎಂದು ಕ್ರೆಡಿಟ್ ಸ್ಯೂಸ್ಸೆ (Credit Suisse Report)  ವಾರ್ಷಿಕ ಜಾಗತಿಕ ಸಂಪತ್ತು ವರದಿ-2022 ಅಂದಾಜಿಸಿದೆ.

    ವರದಿ ಪ್ರಕಾರ, 2021ರಲ್ಲಿ ಭಾರತದಲ್ಲಿ 7.96 ಲಕ್ಷ ಕೋಟ್ಯಧಿಪತಿ (Billionaire) ಗಳಿದ್ದಾರೆ. ಈ ಸಂಖ್ಯೆ 2026ರ ವೇಳೆಗೆ ಶೇ.10 ರಷ್ಟು ಏರಿಕೆಯಾಗಲಿದೆ. 16.32 ಲಕ್ಷ ಮಂದಿ ಕೋಟ್ಯಧಿಪತಿಗಳಾಗಲಿದ್ದಾರೆ. ಆಫ್ರಿಕಾ (Africa) ಶೇ.173, ಬ್ರೆಜಿಲ್ (Brezil) ಶೇ.115 ಇದ್ದು, ನಂತರದ ಸಾಲಿನಲ್ಲಿ ಭಾರತ ಇದೆ ಎಂದು ವರದಿ ಹೇಳಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಕಾನೂನು ಜಾರಿಯಾಗಿದೆ – ಲಂಚ ತಿಂದರೆ ಅಪರಾಧವಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ: ಸಿದ್ದು

    ಪ್ರಸ್ತುತ ವಿಶ್ವದಲ್ಲೇ ಅತಿಹೆಚ್ಚಿನ ಸಂಖ್ಯೆಯ ಕೋಟ್ಯಧಿಪತಿಗಳು ಅಮೆರಿಕದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಚೀನಾ ಇದೆ. ವಿಶ್ವದ ಒಟ್ಟು ಕೋಟ್ಯಧಿಪತಿಗಳ ಪೈಕಿ ಭಾರತದಲ್ಲಿ ಶೇ.1ರಷ್ಟು ಮಂದಿ ಇದ್ದಾರೆ. ಇದನ್ನೂ ಓದಿ: ರವೀಂದರ್ ಗೆ ಮಹಿಳಾ ಅಭಿಮಾನಿಗಳ ಕಾಟ, ಪತಿಯ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಮಹಾಲಕ್ಷ್ಮಿ

    ಜಾಗತಿಕ ಸಂಪತ್ತು ಅಂದಾಜು 463.6 ಟ್ರಿಲಿಯನ್ (Trillion Economy) ಅಮೆರಿಕನ್ ಡಾಲರ್ (US Dollers) ಇದೆ. 2020ಕ್ಕೆ ಹೋಲಿಸಿದರೆ ಜಾಗತಿಕ ಸಂಪತ್ತು ಶೇ.9.8ರಷ್ಟು ಏರಿಕೆಯಾಗಿದೆ. ಕಳೆದ 21 ವರ್ಷಗಳಲ್ಲಿ ಇದು ದಾಖಲೆಯ ಏರಿಕೆ ಕಂಡಿದೆ. ಅಲ್ಲದೇ 2020ಕ್ಕೆ ಹೋಲಿಸಿದರೆ ಸರಾಸರಿ ಜಾಗತಿಕ ಸಂಪತ್ತಿನ ಬೆಳವಣಿಗೆ 2021ರಲ್ಲಿ ಶೇ.12.7ರಷ್ಟಾಗಿದೆ. ಇದು ಈವರೆಗೂ ದಾಖಲಾದ ಅತಿ ವೇಗದ ಬೆಳವಣಿಗೆಯಾಗಿದೆ. ದೇಶದಲ್ಲಿ 2026ರ ವೇಳೆಗೆ ಇನ್ನೂ 163 ಟ್ರೆಲಿಯನ್‌ಗಳಷ್ಟು ಸಂಪತ್ತು ಹೆಚ್ಚಾಗಲಿದ್ದು, ಇದರಿಂದ ದೇಶದಲ್ಲಿ ಕೋಟ್ಯಧಿಪತಿಗಳ ಸಂಖ್ಯೆ ದುಪ್ಪಟ್ಟಾಗಲಿದೆ ಎಂದು ಹೇಳಲಾಗಿದೆ.

    ಇನ್ನೊಂದೆಡೆ, ಸರಾಸರಿ ಸಂಪತ್ತಿನಲ್ಲಿ ಆಸ್ಟ್ರೇಲಿಯನ್ನರು ವಿಶ್ವದ ಶ್ರೀಮಂತ ವ್ಯಕ್ತಿಗಳಾಗಿ ಹೊರಹೊಮ್ಮಿದ್ದಾರೆ. ನಂತರದ ಸ್ಥಾನದಲ್ಲಿ ಕ್ರಮವಾಗಿ ಬೆಲ್ಜಿಯಂ ಮತ್ತು ನ್ಯೂಜಿಲೆಂಡ್ ಇರುವುದಾಗಿ ವರದಿ ಅಂದಾಜಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕ ಚೇತರಿಕೆಗೆ ಕೇಂದ್ರಕ್ಕೆ ಮೂರು ಟಿಪ್ಸ್ ನೀಡಿದ ಮಾಜಿ ಪಿಎಂ ಮನಮೋಹನ್ ಸಿಂಗ್

    ಆರ್ಥಿಕ ಚೇತರಿಕೆಗೆ ಕೇಂದ್ರಕ್ಕೆ ಮೂರು ಟಿಪ್ಸ್ ನೀಡಿದ ಮಾಜಿ ಪಿಎಂ ಮನಮೋಹನ್ ಸಿಂಗ್

    ನವದೆಹಲಿ: ದೇಶದ ಅರ್ಥವ್ಯವಸ್ಥೆಯ ಚೇತರಿಕೆಗಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮೂರು ಸಲಹೆಗಳನ್ನು ನೀಡಿದ್ದಾರೆ.

    ಮಾಹಾಮಾರಿ ಕೊರೊನಾ ವೈರಸ್ ದಾಳಿಯಿಂದ ದೇಶದ ಅರ್ಥವ್ಯವಸ್ಥೆ ಕುಸಿಯುತ್ತಿದೆ. ಕೊರೊನಾ ಆಗಮನಕ್ಕೂ ಮುನ್ನವೇ ದೇಶದದ ಆಟೋ ತಂತ್ರಜ್ಞಾನ, ಟೆಲಿಕಾಮ್, ಎನ್‍ಬಿಎಫ್‍ಸಿ ಅಂತಹ ವಲಯಗಳು ಆರ್ಥಿಕ ಸಂಕಷ್ಟದಲ್ಲಿದ್ದವು. ಗಾಯದ ಮೇಲೆ ಬರೆ ಎಂಬಂತೆ ಕೊರೊನಾ ವಕ್ಕರಿಸಿತು. ಮಹಾಮಾರಿಯಿಂದಾಗಿ ಅನೇಕ ಆರ್ಥಿಕ ವಲಯಗಳ ನಷ್ಟ ಅನುಭವಿಸುತ್ತಿದ್ರೆ, ಎಷ್ಟೋ ಜನ ನಿರುದ್ಯೋಗಿಗಳಾಗಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ಸುಧಾರಣೆಗಾಗಿ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದು, ಜನರ ಆರ್ಥಿಕ ಮಟ್ಟ ಸುಧಾರಣೆಗೆ ಹಲವು ಯೋಜನೆಗಳನ್ನು ಪ್ರಕಟಿಸಿದೆ. ಆದ್ರೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಆರ್ಥಿಕ ಸುಧಾರಣೆಗಾಗಿ ಮೂರು ಮಹತ್ವದ ನಿರ್ಧಾರ ಕೈಗೊಳ್ಳಬೇಕಿದ ಎಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ನೀತಿಗಳು 14 ಕೋಟಿ ಜನರಿಗೆ ನಿರುದ್ಯೋಗ ನೀಡಿವೆ: ರಾಹುಲ್ ಗಾಂಧಿ

    ಆರ್ಥಿಕ ಚೇತರಿಕೆಗೆ ತ್ರಿ ಸೂತ್ರ:
    1. ಸರ್ಕಾರ ಮೊದಲು ದೇಶದ ಜನರಿಗೆ ಆರ್ಥಿಕ ಭದ್ರತೆ ನೀಡಬೇಕು. ಅವರ ಜೀವನೋಪಯಕ್ಕಾಗಿ ನೇರ ನಗದು ವರ್ಗಾವಣೆ ಮಾಡಬೇಕು. ಹಾಗೆ ಜನರ ಖರ್ಚು ಮಾಡುವ ಸಾಮಾಥ್ರ್ಯವನ್ನು ಹೆಚ್ಚಿಸಲು ಸರ್ಕಾರ ಮುಂದಾಗಬೇಕು.

    2. ಕ್ರೆಡಿಟ್ ಗ್ಯಾರೆಂಟಿ ಕಾರ್ಯಕ್ರಮಗಳ ಮೂಲಕ ಹೊಸ ವ್ಯವಹಾರಗಳಿಗೆ ಸರ್ಕಾರ ನೆರವಾಗಬೇಕು. ಹೊಸ ವ್ಯವಹಾರಗಳಿಂದ ಉದ್ಯೋಗ ಸೃಷ್ಟಿಯಾಗುತ್ತದೆ.

    3. ಸಾಂಸ್ಥಿಕ ಸ್ವಾಯತತ್ತೆಯ ಸಹಾಯದ ಮೂಲಕ ಹಣಕಾಸಿನ ವಲಯವನ್ನು ಸುಧಾರಿಸಬೇಕಿದೆ. ಸದ್ಯದ ಪರಿಸ್ಥಿತಿಯನ್ನು ಆರ್ಥಿಕ ಬಿಕ್ಕಟ್ಟು ಎಂದು ಹೇಳಲಾರೆ, ಆದ್ರೆ ಇದೊಂದು ದೇಶದಲ್ಲಿ ದೀರ್ಘ ಸಮಯದವರೆಗೆ ದೇಶದಲ್ಲಿರುವ ಆರ್ಥಿಕ ಸಮಸ್ಯೆ ಎಂದು ಮನಮೋಹನ್ ಸಿಂಗ್ ವ್ಯಾಖ್ಯಾನಿಸಿದ್ದಾರೆ.

  • 3 ತಿಂಗಳು ಎಟಿಎಂನಿಂದ ತೆಗೆಯೋ ಹಣಕ್ಕೆ ಸೇವಾ ಶುಲ್ಕ ಇಲ್ಲ

    3 ತಿಂಗಳು ಎಟಿಎಂನಿಂದ ತೆಗೆಯೋ ಹಣಕ್ಕೆ ಸೇವಾ ಶುಲ್ಕ ಇಲ್ಲ

    – ಜನ ಸಾಮಾನ್ಯರಿಗಾಗಿ ಸರ್ಕಾರದ ನಾಲ್ಕು ಹೆಜ್ಜೆ
    – ಉದ್ಯೋಗಿ, ಉದ್ಯಮಿಗಳಿಗೆ ಕೊಂಚ ರಿಲೀಫ್

    ನವದೆಹಲಿ: ಕೊರೊನಾ ವೈರಸ್ ಭಾರತದ ಅರ್ಥ ವ್ಯವಸ್ಥೆಗೆ ಭಾರೀ ಹೊಡೆತವನ್ನು ನೀಡಿದೆ. ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾದ ಹಿನ್ನೆಲೆಯಲ್ಲಿ ಸಾಮಾನ್ಯ ಜನರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಇಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಜನಹಿತಕ್ಕಾಗಿ ಹಲವು ಪ್ಯಾಕೇಜ್ ಘೋಷಿಸಿದ್ದಾರೆ. ಈ ಎಲ್ಲ ಘೋಷಣೆಗಳು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

    ಜನ ಸಾಮಾನ್ಯರಿಗಾಗಿ ಸರ್ಕಾರದ ನಾಲ್ಕು ಹೆಜ್ಜೆ
    1. ಮುಂದಿನ ಮೂರು ತಿಂಗಳು ಯಾವುದೇ ಎಟಿಎಂನಿಂದ ಹಣ ಡ್ರಾ ಮೇಲೆ ಸೇವಾ ಶುಲ್ಕ ಇರುವುದಿಲ್ಲ.
    2. ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಉಳಿಸಿಕೊಳ್ಳುವ ಅವಶ್ಯಕತೆ ಇಲ್ಲ.
    3. ಐಟಿಆರ್ ರಿಟರ್ನ್ ಫೈಲ್ ಮಾಡುವ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಣೆ
    4. ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳುವ ಅವಧಿ ಜೂನ್ 30ರವರೆಗೆ ವಿಸ್ತರಣೆ.

    ಉದ್ಯೋಗಿ, ಉದ್ಯಮಿಗಳಿಗೆ ಕೊಂಚ ರಿಲೀಫ್
    1. ಟಿಡಿಎಸ್ ಪಾವತಿ ವಿಳಂಬ ಮೇಲಿನ ಬಡ್ಡಿಯನ್ನು ಶೇ.12ರಿಂದ ಶೇ.9ಕ್ಕೆ ಇಳಿಕೆ.
    2. 2018-19 ಆರ್ಥಿಕ ವರ್ಷದ ಇನ್‍ಕಮ್ ಟ್ಯಾಕ್ಸ್ ಫೈಲ್ ಮಾಡಲು ಜೂನ್ 30ರವರೆಗೆ ಅವಕಾಶ.
    3. ವಿವಾದ್ ಸೇ ವಿಶ್ವಾಸ್ ಯೋಜನೆ ಮತ್ತು ಆಧಾರ್-ಪ್ಯಾನ್ ಲಿಂಕ್ ಮಾಡುವ ದಿನಾಂಕ ಜೂನ್ 30ರವರೆಗೆ ವಿಸ್ತರಣೆ.
    4. 5 ಕೋಟಿ ರೂ.ಗೂ ಕಡಿಮೆ ಟರ್ನ್ ಓವರ್ ಹೊಂದಿರುವ ಕಂಪನಿಗಳಿಗೆ ತಡವಾಗಿ ಮಾಡುವ ಜಿಎಸ್‍ಟಿ ಫೈಲಿಂಗ್ ಮೇಲೆ ವಿಧಿಸಲಾಗುವ ಬಡ್ಡಿ, ದಂಡ ಮತ್ತ ಲೇಟ್ ಫೀಸ್ ಗಳಿಂದ ವಿನಾಯ್ತಿ. ಮಾರ್ಚ್-ಏಪ್ರಿಲ್-ಮೇ ಫೈಲಿಂಗ್ ಮಾಡಲು ಜೂನ್ 30ರವರೆಗೆ ಅವಕಾಶ.
    5. ರಫ್ತು ಮತ್ತು ಆಮದು ವ್ಯವಹಾರಗಳಲ್ಲಿ ಸರಳೀಕರಣ ಮತ್ತು ಪರಿಹಾರ. ಕಸ್ಟಮ್ ಕ್ಲಿಯರೆನ್ಸ್ ಸೇರಿದಂತೆ ಹಲವು ಸೇವೆಗಳು ಜೂನ್ 30ರವರೆಗೆ ಲಭ್ಯ. ಈ ಸಂಬಂಧ 24 ಗಂಟೆಗೂ ಕಾರ್ಯ ನಿರ್ವಹಣೆ
    6. ಕಂಪನಿಯ ನಿರ್ದೇಶಕರು 182 ದಿನ ದೇಶದಲ್ಲಿ ಇರಬೇಕಾದ ಅನಿವಾರ್ಯತೆಯಿಂದ ಮುಕ್ತ.
    7. ಒಂದು ಕೋಟಿ ರೂ.ಗಿಂತಲೂ ಕಡಿಮೆ ವ್ಯವಹಾರ ನಡೆಸುವ ಕಂಪನಿಗಳ ವಿರದ್ಧ ದಿವಾಳಿ ಪ್ರಕಿಯೆ ಆರಂಭಿಸಲ್ಲ.

    ಕೊರೊನಾ ವೈರಸ್ ಹರಡುವ ಮೊದಲೇ ಭಾರತದ ಆರ್ಥಿಕ ವ್ಯವಸ್ಥೆ ನಿಧಾನಗತಿಯಲ್ಲಿ ಸಾಗುತ್ತಿತ್ತು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳು ಸ್ತಬ್ಧಗೊಂಡಿದ್ದರಿಂದ ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ.

  • ಆರ್ಥಿಕತೆ ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವ ಕಾಲ ಸನ್ನಿಹಿತ – ಸುಬ್ರಮಣಿಯನ್ ಸ್ವಾಮಿ

    ಆರ್ಥಿಕತೆ ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವ ಕಾಲ ಸನ್ನಿಹಿತ – ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: ಆರ್ಥಿಕತೆಯನ್ನು ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತದ ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತವಾಗುವುದು ವಾಸ್ತವವಾಗಬಹುದು. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಆರ್ಥಿಕತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕತ್ತಲ ಕೋಣೆಯಲ್ಲಿಡಲಾಗಿದೆ ಎಂದು ಕಿಡಿಕಾರಿದ್ದಾರೆ.

    ಇದೇ ಪರಿಸ್ಥಿತಿ ಮುಂದುವರಿದರೆ ಬಿಜೆಪಿ ಮುಕ್ತ ಭಾರತ ವಾಸ್ತವವಾಗುವ ಕಾಲ ಸನ್ನಿಹಿತವಾಗಲಿದೆ. ಆರ್ಥಿಕತೆಯನ್ನು ಶೀಘ್ರದಲ್ಲೇ ಸರಿ ದಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರು ಯಾರೆಂದು ನನಗೆ ತಿಳಿದಿಲ್ಲ. ಆದರೆ ಅವರು ಆರ್ಥಿಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸತ್ಯ ಹೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

    ಜಾರ್ಖಂಡ್ ವಿಧಾನಸಭೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸುಬ್ರಮಣಿಯನ್ ಸ್ವಾಮಿ ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಹತ್ವ ಪಡೆದುಕೊಂಡಿದೆ.

    ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದು, ಸಿಎಎ ಹಾಗೂ ಎನ್‍ಆರ್‍ಸಿಯನ್ನು ಕಾಂಗ್ರೆಸ್ ಮೊದಲು ಪರಿಚಯಿಸಿತ್ತು. ಕೇಂದ್ರ ಸರ್ಕಾರ ಈ ಕುರಿತು ಕಾನೂನು ರೂಪಿಸಿದರೆ ಎಲ್ಲ ರಾಜ್ಯಗಳು ಅದನ್ನು ಜಾರಿಗೆ ತರಬೇಕು. ಸಿಎಎ ಹಾಗೂ ಎನ್‍ಆರ್‍ಸಿ ಬಗ್ಗೆ ಕಾಂಗ್ರೆಸ್ ಹಿಂದಿನಿಂದಲೂ ಮಾತನಾಡುತ್ತಿದೆ. ಈ ಕುರಿತು ಸ್ವತಃ ಮನಮೋಹನ್ ಸಿಂಗ್ ಅವರೇ ಸದನದಲ್ಲಿ ಹೇಳಿದ್ದಾರೆ. ಆದರೆ ಇದೀಗ ಅದರ ವಿರುದ್ಧವೇ ಹೋರಾಡುತ್ತಿದ್ದಾರೆ ಎಂದು ಸ್ವಾಮಿ ಟೀಕಿಸಿದರು.

    ಸೋಮವಾರವಷ್ಟೇ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರ ಬಳಿಕ ಆಡಳಿತ ನಡೆಸುತ್ತಿದ್ದ ಬಿಜೆಪಿಗೆ ಜಾರ್ಖಂಡ್‍ನಲ್ಲೂ ಮುಖಭಂಗವಾಗಿದೆ. 47 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಏರಲಿದೆ.

    ಮಹಾರಾಷ್ಟ್ರದಲ್ಲಿ ಹಲವು ರಾಜಕೀಯ ಬೆಳವಣಿಗೆಗಳ ನಡುವೆಯೂ ಅಧಿಕಾರ ಪಡೆಯಲು ವಿಫಲವಾದ ಬಿಜೆಪಿ, ಜಾರ್ಖಂಡ್‍ನಲ್ಲೂ ನಿರಾಸೆ ಅನುಭವಿಸಿದೆ. ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) 31, ಕಾಂಗ್ರೆಸ್ 15, ಆರ್ ಜೆಡಿ 1 ಮೈತ್ರಿಕೂಟ 47 ಸ್ಥಾನಗಳನ್ನು ಪಡೆದು ಭಾರೀ ವಿಜಯವನ್ನು ಸಾಧಿಸಿದೆ. ಇತ್ತ ಬಿಜೆಪಿ 25 ಸ್ಥಾನ ಪಡೆದು 2ನೇ ಸ್ಥಾನದಲ್ಲಿದ್ದರೆ, ಜೆವಿಎಂ (ಜಾರ್ಖಂಡ್ ವಿಕಾಸ್ ಮೋರ್ಚಾ) 3, ಇತರರು 6 ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಒಟ್ಟು 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಬೇಕಾದ 41 ಸ್ಥಾನಗಳು ಕಾಂಗ್ರೆಸ್ ಮೈತ್ರಿಕೂಟಕ್ಕೆ ಲಭಿಸಿದೆ. ಹೀಗಾಗಿ ಕಾಂಗ್ರೆಸ್‍ನ ಮೈತ್ರಿ ಸರ್ಕಾರ ರಚನೆಯಾಗುಲಿದೆ.

  • ನಿರ್ಮಲಾ ಸೀತಾರಾಮನ್, ನಿರ್ಬಲ ಆಗಿದ್ದಾರೆ- ಕಾಂಗ್ರೆಸ್ ವಾಗ್ದಾಳಿ

    ನಿರ್ಮಲಾ ಸೀತಾರಾಮನ್, ನಿರ್ಬಲ ಆಗಿದ್ದಾರೆ- ಕಾಂಗ್ರೆಸ್ ವಾಗ್ದಾಳಿ

    ನವದೆಹಲಿ: ಜಿಡಿಪಿ ಕಡಿಮೆಯಾದ ಹಿನ್ನೆಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನಿರ್ಮಲಾ ಸೀತಾರಾಮನ್ ವಿರುದ್ಧ ಹರಿಹಾಯ್ದಿದ್ದು, ನಿರ್ಬಲ(ಬಲಹೀನ) ಸೀತಾರಾಮನ್ ಎಂದು ಕರೆಯುವ ಮೂಲಕ ಲೇವಡಿ ಮಾಡಿದ್ದಾರೆ.

    ಸೋಮವಾರ ಮಧ್ಯಾಹ್ನ ಲೋಕಸಭೆಯಲ್ಲಿ 2019ರ ತೆರಿಗೆ ಕಾನೂನು(ತಿದ್ದುಪಡಿ) ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಅಧಿರ್ ರಂಜನ್ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಹಲವು ದೂರದರ್ಶಿ ಯೋಜನೆಗಳು ಆರ್ಥಿಕತೆಯ ನಿಧಾನಗತಿಗೆ ಕಾರಣವಾಗಿವೆ. ಹೀಗಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಿರ್ಬಲ ಸೀತಾರಾಮನ್ ಎಂದು ಕರೆಯದೇ ಬೇರೆ ದಾರಿಯಿಲ್ಲ ಎಂದು ಹರಿಹಾಯ್ದಿದ್ದಾರೆ.

    ಭಾರತದ ಆರ್ಥಿಕತೆ ವಿಚಾರದಲ್ಲಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸ್ವಂತ ನಿರ್ಧಾರ ಕೈಗೊಳ್ಳಲು ಬಿಜೆಪಿಯವರು ಬಿಡುತ್ತಿಲ್ಲ. ನಾವು ನಿಮಗೆ ಅತೀವ ಗೌರವವನ್ನು ನೀಡುತ್ತೇವೆ. ಆಶ್ಚರ್ಯವೆಂಬಂತೆ ಕೆಲವು ಬಾರಿ ನಿಮ್ಮನ್ನು ನಿರ್ಬಲ ಸೀತಾರಾಮನ್ ಎಂದು ಕರೆಯಬೇಕಾಗುತ್ತದೆ ಎಂದರು.

    ನೀವು ಹಣಕಾಸು ಸಚಿವಾಲಯದ ಮುಖ್ಯಸ್ಥರಾಗಿದ್ದೀರಿ. ಆದರೆ ಯಾವಾಗ ನಿಮ್ಮ ಸ್ವಂತ ವಿಚಾರಗಳನ್ನಿಟ್ಟುಕೊಂಡು ನೀವು ದೇಶದ ಆರ್ಥಿಕತೆ ಬಗ್ಗೆ ಮಾತನಾಡುತ್ತೀರೋ ತಿಳಿಯುತ್ತಿಲ್ಲ ಎಂದು ಅಧಿರ್ ರಂಜನ್ ಹರಿಹಾಯ್ದಿದ್ದಾರೆ.

    ಜುಲೈ-ಸೆಪ್ಟೆಂಬರ್ ತ್ರೈಮಾಸಿಕದ (ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಟ್)ಜಿಡಿಪಿಯ ಅಂಕಿ ಸಂಖ್ಯೆಯ ಅಧಿಕೃತ ವರದಿ ಕಳೆದ ತಿಂಗಳು ಬಿಡುಗಡೆಯಾಗಿದೆ. ಇದರಲ್ಲಿ ಜಿಡಿಪಿ ಶೇ.4.5ರಷ್ಟು ಕುಸಿತ ಕಂಡಿದೆ. ಕಳೆದ ಆರು ವರ್ಷಗಳಿಗೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಜಿಡಿಪಿಯಾಗಿದೆ. ಅಲ್ಲದೆ ಆರ್ಥಿಕ ಬೆಳವಣಿಗೆಯಲ್ಲಿಯೂ ಸಹ ದೇಶ ನಿಧಾನಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಅಧಿರ್ ರಂಜನ್ ಅವರು ವಾಗ್ದಾಳಿ ನಡೆಸಿ ನಿರ್ಬಲ ಸೀತಾರಾಮನ್ ಎಂದು ಕರೆದಿದ್ದಾರೆ.