Tag: Indian Fishermen

  • ಪಾಕ್‌ ಜೈಲುಗಳಲ್ಲಿದ್ದಾರೆ 654 ಭಾರತೀಯ ಮೀನುಗಾರರು; ಶುಕ್ರವಾರ 199 ಮಂದಿ ರಿಲೀಸ್‌

    ಪಾಕ್‌ ಜೈಲುಗಳಲ್ಲಿದ್ದಾರೆ 654 ಭಾರತೀಯ ಮೀನುಗಾರರು; ಶುಕ್ರವಾರ 199 ಮಂದಿ ರಿಲೀಸ್‌

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದ 199 ಮಂದಿ ಭಾರತೀಯರನ್ನು (Indian Fishermen)  ಇದೇ ಶುಕ್ರವಾರದಂದು ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ.

    ಶುಕ್ರವಾರದಂದು 199 ಮೀನುಗಾರರ ಬಿಡುಗಡೆ ಮಾಡಿ ಭಾರತಕ್ಕೆ (India) ವಾಪಸ್‌ ಕಳುಹಿಸಿ ಎಂದು ಸರ್ಕಾರಿ ಸಚಿವಾಲಯ ಹೇಳಿದೆ ಎಂದು ಸಿಂಧ್‌ನ ಜೈಲು ಮತ್ತು ತಿದ್ದುಪಡಿ ವಿಭಾಗದ ಉನ್ನತ ಪೊಲೀಸ್ ಅಧಿಕಾರಿ ಕಾಜಿ ನಜೀರ್ ತಿಳಿಸಿದ್ದಾರೆ. ಈ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಲಾಗುವುದು. ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಸದ್ಯ ಈ ಮೀನುಗಾರರನ್ನು ಪಾಕಿಸ್ತಾನದ ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಭಾರತ – ಪಾಕಿಸ್ತಾನ ಕಾಶ್ಮೀರದ ವಿವಾದವನ್ನು ವಿಶ್ವಸಂಸ್ಥೆ ನಿರ್ಣಯದಂತೆ ಬಗೆಹರಿಸಬೇಕು: ಚೀನಾ

    ಮೀನುಗಾರರೊಂದಿಗೆ ವಾಪಸಾಗಬೇಕಿದ್ದ ಭಾರತೀಯ ನಾಗರಿಕ ಖೈದಿ ಜುಲ್ಫಿಕರ್ ಅನಾರೋಗ್ಯದ ಕಾರಣ ಶನಿವಾರ ಕರಾಚಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ಸಹ ಮೀನುಗಾರರೊಂದಿಗೆ ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ.

    ಭಾರತೀಯ ಖೈದಿ ತೀವ್ರ ಜ್ವರ ಮತ್ತು ಎದೆನೋವಿನ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದರು. ಕಳೆದ ವಾರ ಅವರ ಸ್ಥಿತಿ ಹದಗೆಟ್ಟಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಶ್ವಾಸಕೋಶದ ಸೋಂಕಿನಿಂದ ನಿಧನರಾದರು ಎಂದು ಲಾಂಧಿ ಜೈಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್‌ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್‌

    654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರ ಪೈಕಿ 631 ಮಂದಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.

  • ಅಕ್ರಮ ಮೀನುಗಾರಿಕೆ – 15 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

    ಅಕ್ರಮ ಮೀನುಗಾರಿಕೆ – 15 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

    ಕೊಲಂಬೊ: ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು (Sri Lanka Navy) ಕನಿಷ್ಠ 15 ಭಾರತೀಯ ಮೀನುಗಾರರನ್ನು (Indian Fishermen) ಬಂಧಿಸಿದೆ. ಜೊತೆಗೆ ಮೀನುಗಾರರ 2 ಬೋಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

    ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈಮನ್ನಾರ್‌ನಲ್ಲಿ ಶನಿವಾರ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ತಲೈಮನ್ನಾರ್‌ನಲ್ಲಿ ನೌಕಾಪಡೆಯ ವಶದಲ್ಲಿರುವ ಮೀನುಗಾರರನ್ನು ಮೀನುಗಾರಿಕೆ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಖಾನ್ ಹತ್ಯೆಗೆ ಸಂಚು ಮಾಡಿರುವುದು ಸಾಬೀತಾದರೆ ಒಂದು ನಿಮಿಷವೂ ಪ್ರಧಾನಿಯಾಗಿರಲ್ಲ: ಶೆಹಬಾಜ್ ಷರೀಫ್

    ಉಭಯ ದೇಶಗಳ ನಡುವೆ ಹಲವು ಉನ್ನತ ಮಟ್ಟದ ಮಾತುಕತೆಗಳು ನಡೆದಿದ್ದರೂ ಭಾರತೀಯ ಮೀನುಗಾರರು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮ ಮೀನುಗಾರಿಕೆ ಪುನರಾವರ್ತಿತ ಸಮಸ್ಯೆಯಾಗಿದೆ ಎಂದು ಶ್ರೀಲಂಕಾ ಆರೋಪಿಸಿತ್ತು. ಶ್ರೀಲಂಕಾ ನೇವಲ್ ಕ್ರಾಫ್ಟ್‌ನಲ್ಲಿ ಎರಡೂ ರಾಷ್ಟ್ರಗಳ ನಡುವೆ ಅಂತರರಾಷ್ಟ್ರೀಯ ಸಮುದ್ರ ಗಡಿ ಸವಾಲುಗಳ ಕುರಿತು ಮಾತುಕತೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಭಾರತೀಯ ಮೀನುಗಾರರ ಬಂಧನವಾಗಿದೆ.

    ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದಲ್ಲಿ ಮೀನುಗಾರರ ಸಮಸ್ಯೆ ವಿವಾದಾಸ್ಪದವಾಗಿದೆ. ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಧಿಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಾರೆ. ಶ್ರೀಲಂಕಾದ ಪ್ರಾದೇಶಿಕ ಜಲವನ್ನು ಅಕ್ರಮವಾಗಿ ಪ್ರವೇಶಿಸಿದ ಹಲವಾರು ಘಟನೆಗಳಲ್ಲಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪ – ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಸಿಡ್ನಿಯಲ್ಲಿ ಬಂಧನ

    ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಶ್ರೀಲಂಕಾ ಅಧಿಕಾರಿಗಳು ಬಂಧಿಸುವ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಿರುತ್ತವೆ.

    Live Tv
    [brid partner=56869869 player=32851 video=960834 autoplay=true]