Tag: Indian government

  • 2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    ನ್ಯೂಯಾರ್ಕ್‌: ಭಾರತ ಮತ್ತು ಇಸ್ರೇಲ್‌ ನಡುವೆ 2017ರಲ್ಲಿ ನಡೆದ ರಕ್ಷಣಾ ಒಪ್ಪಂದದ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಖರೀದಿಸಲಾಗಿತ್ತು ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದೆ. ಆಗ ಭಾರತ 2 ಶತಕೋಟಿ ಡಾಲರ್‌ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಒಪ್ಪಂದ ಮಾಡಿಕೊಂಡಿತ್ತು.

    ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಅನ್ನು ಬಳಸುತ್ತಿವೆ ಎಂಬ ಸುದ್ದಿ ಕಳೆದ ವರ್ಷ ಭಾರಿ ಸದ್ದು ಮಾಡಿತ್ತು. ಇದನ್ನೂ ಓದಿ: ಇನ್ನು ಮುಂದೆ ಮಾಸ್ಕ್ ಹಾಕಿಕೊಂಡೇ ಐಫೋನ್ ಫೇಸ್ ಐಡಿ ಅನ್‍ಲಾಕ್ ಮಾಡ್ಬೋದು!

    ʼದಿ ಬ್ಯಾಟಲ್‌ ಫಾರ್‌ ದಿ ವರ್ಲ್ದ್ಸ್‌ ಮೋಸ್ಟ್‌ ಪವರ್‌ಫುಲ್‌ ಸೈಬರ್‌ವೆಪನ್‌ʼ ಶೀರ್ಷಿಕೆಯಡಿ ವರದಿ ಮಾಡಿರುವ ನ್ಯೂಯಾರ್ಕ್‌ ಟೈಮ್ಸ್‌, ಇಸ್ರೇಲಿ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ ಸುಮಾರು ಒಂದು ದಶಕದಿಂದ ತನ್ನ ಕಣ್ಗಾವಲು ಸಾಫ್ಟ್‌ವೇರ್‌ ಅನ್ನು ಚಂದಾದಾರಿಕೆಯ ಆಧಾರದ ಮೇಲೆ ಪ್ರಪಂಚದಾದ್ಯಂತ ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದೆ ಎಂದು ಹೇಳಿದೆ.

    ಖಾಸಗಿ ಕಂಪನಿಗಳು, ಗುಪ್ತಚರ ಸಂಸ್ಥೆಗಳೂ ಮಾಡಲಾಗದ ಕೆಲಸವನ್ನು ಅದು ಮಾಡಬಹುದೆಂದು ಭರವಸೆ ನೀಡಿದೆ. ಐಫೋನ್‌, ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನ ಎನ್‌ಕ್ರಿಪ್ಟ್‌ ಮಾಡಲಾದ ಸಂವಹನಗಳನ್ನು ಯಶಸ್ವಿಯಾಗಿ ಭೇದಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    2017ರಲ್ಲಿ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದನ್ನೂ ವರದಿ ಉಲ್ಲೇಖಿಸಿದೆ. ಅಲ್ಲದೇ ಇಸ್ರೇಲ್‌ಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂದು ಕೂಡ ಬರೆಯಲಾಗಿದೆ. ಮೋದಿ ಭೇಟಿಯ ತಿಂಗಳ ನಂತರ ನೆತನ್ಯಾಹು ಭಾರತಕ್ಕೆ ಅಪರೂಪದ ಭೇಟಿ ನೀಡಿದ್ದರು.

    ಪೆಗಾಸಸ್‌ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಆರೋಪಗಳನ್ನು ತಳ್ಳಿ ಹಾಕಿತ್ತು.

  • ಐಪಿಎಲ್‍ಗೆ ತಟ್ಟಿದ ಲಾಕ್‍ಡೌನ್ ವಿಸ್ತರಣೆ ಬಿಸಿ- ಬಿಸಿಸಿಐ ಮುಂದಿನ ಹೆಜ್ಜೆ ಏನು?

    ಐಪಿಎಲ್‍ಗೆ ತಟ್ಟಿದ ಲಾಕ್‍ಡೌನ್ ವಿಸ್ತರಣೆ ಬಿಸಿ- ಬಿಸಿಸಿಐ ಮುಂದಿನ ಹೆಜ್ಜೆ ಏನು?

    ನವದೆಹಲಿ: ಲಾಕ್‍ಡೌನ್ ಅನ್ನು ದೇಶದಲ್ಲಿ ಮೇ 3ರವರೆಗೆ ವಿಸ್ತರಿಸಿದ್ದರಿಂದ ಐಪಿಎಲ್ ಮುಂದೂಡಲಾಗಿದೆ. ಮಂಗಳವಾರ ಮಧ್ಯಾಹ್ನ ಬಿಸಿಸಿಐ ಮೂಲಗಳು ಈ ಮಾಹಿತಿಯನ್ನು ನೀಡಿವೆ.

    ಐಪಿಎಲ್‍ನ ಮುಂದೇನು ವೇಳಾಪಟ್ಟಿ ಬಗ್ಗೆ ಮಂಡಳಿಯ ಮೂಲಗಳು ಏನನ್ನೂ ಹೇಳಿಲ್ಲ. ಆದಾಗ್ಯೂ ಪ್ರಸ್ತುತ ಪರಿಸ್ಥಿತಿ ಮತ್ತು ಅಂತರರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ, ಕಳೆದ ಡಿಸೆಂಬರ್ ನಲ್ಲಿ ಟೂರ್ನಿ ನಡೆಸುವುದು ಕಷ್ಟವಾಗಲಿದೆ. ಮಳೆಗಾಲ ಜೂನ್‍ನಿಂದ ಸೆಪ್ಟೆಂಬರ್ ವರೆಗೆ ಇರುತ್ತದೆ. ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 20ರಿಂದ ನವೆಂಬರ್ ಮಧ್ಯದವರೆಗೆ ಟಿ20 ವಿಶ್ವಕಪ್ ನಡೆಯಲಿದೆ. ಈ ವೇಳಾಪಟ್ಟಿಯ ಮಧ್ಯೆ ಬಿಸಿಸಿಐ ಐಪಿಎಲ್‍ಗಾಗಿ ಖಾಲಿ ದಿನಾಂಕಗಳನ್ನು ಗುರುತಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ಹಾಗೆ ಟೂರ್ನಿ ನಡೆಸಿದರೂ ಡಿಸೆಂಬರ್ ಗೂ ಮುನ್ನವೇ ಐಪಿಎಲ್ ಟುರ್ನಿ ಮುಗಿಸಲು ಸಾಧ್ಯವಿಲ್ಲ. ಹೀಗಾಗಿ ಟೂರ್ನಿಯ ಸ್ವರೂಪವು ಮೊದಲಿಗಿಂತ ಚಿಕ್ಕದಾಗಿರಬಹುದು ಎಂಬ ಮಾತುಗಳು ಕೇಳಿ ಬಂದಿವೆ.

    ಐಪಿಎಲ್ ಟೂರ್ನಿಯನ್ನು ಈ ಮೊದಲು ಮಾರ್ಚ್ 29ರಂದು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಮತ್ತು ವೀಸಾ ನಿರ್ಬಂಧದಿಂದಾಗಿ ಏಪ್ರಿಲ್ 15ರವರೆಗೆ ಮುಂದೂಡಲಾಯಿತ್ತು. ಈಗ ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

    ಈ ಬಾರಿ ಐಪಿಎಲ್ 50 ದಿನಗಳ ಬದಲು 44 ದಿನಗಳು ಮಾತ್ರ ನಡೆಯಬಹುದು. ಎಲ್ಲಾ 8 ತಂಡಗಳು 9 ನಗರಗಳಲ್ಲಿ ತಲಾ ಪಂದ್ಯಗಳನ್ನು ಆಡಬೇಕಾಗಿದೆ. ಇವುಗಳಲ್ಲದೆ ಮೇ 24ರಂದು ವಾಂಖೆಡೆನಲ್ಲಿ 2 ಸೆಮಿಫೈನಲ್, 1 ನಾಕೌಟ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ. ಆದರೆ ಬಿಸಿಸಿಐ ಈಗ 2009ರಂತೆ 37 ದಿನಗಳವರೆಗೆ ಸ್ವರೂಪವನ್ನು ಕಡಿಮೆ ಮಾಡಬಹುದು. 2009ರ ಲೋಕಸಭಾ ಚುನಾವಣೆಯಿಂದಾಗಿ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಆಡೆದಿತ್ತು. ಐದು ವಾರ ಮತ್ತು ಎರಡು ದಿನಗಳಲ್ಲಿ ಅದು ಮುಗಿದಿತ್ತು.

    ಸೆಪ್ಟೆಂಬರ್‌ನಲ್ಲಿ ಏಷ್ಯಾ ಕಪ್:
    ಏಷ್ಯಾ ಕಪ್ ಟಿ20 ಸೆಪ್ಟೆಂಬರ್‌ನಲ್ಲಿ ಯುಎಇಯಲ್ಲಿ ನಡೆಯಲಿದೆ. ಇದರ ನಂತರ ಆಟಗಾರರು ಐಸಿಸಿ ಟಿ20 ವಿಶ್ವಕಪ್ ಅನ್ನು ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ಆಸ್ಟ್ರೇಲಿಯಾದಲ್ಲಿ ಆಡಲಿದ್ದಾರೆ. ಆದರೆ ಏಷ್ಯಾ ಕಪ್ ಮತ್ತು ವಿಶ್ವಕಪ್ ಬಗ್ಗೆ ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಏಷ್ಯಾ ಕಪ್ ಮುಂದೂಡುವ ಸಾಧ್ಯತೆ ಇದೆ. ಈ ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಐಪಿಎಲ್ ವೇಳಾಪಟ್ಟಿಯನ್ನು ರೂಪಿಸಬಹುದು. ಮಂಡಳಿಯ ಮೂಲಗಳ ಪ್ರಕಾರ, ಏಷ್ಯಾ ಕಪ್ ಮತ್ತು ವಿಶ್ವಕಪ್ ಮುಂದೂಡಿದಲ್ಲಿ ಐಪಿಎಲ್ ನವೆಂಬರ್ ಅಂತ್ಯದಿಂದ ಡಿಸೆಂಬರ್ ವರೆಗೆ ಸಾಧ್ಯತೆ ಇದೆ.

    ದಾದಾ ಅಭಿಪ್ರಾಯ:
    ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿ ಶೀಘ್ರದಲ್ಲೇ ಪ್ರಾರಂಭವಾಗುವ ಸಾಧ್ಯತೆಗಳಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾರ್ಚ್ 13ರಂದು ಹೇಳಿದ್ದರು.

    ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, ಬಿಸಿಸಿಐ ಪದಾಧಿಕಾರಿಗಳೊಂದಿಗೆ ಮಾತನಾಡಿದ ನಂತರ ಐಪಿಎಲ್ ಅನ್ನು ಮತ್ತಷ್ಟು ಮುಂದೂಡಲಾಗುತ್ತದೆಯೇ ಎಂಬ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಾಗುತ್ತದೆ. ಆದರೆ ಪ್ರಾಯೋಗಿಕವಾಗಿ ಹೇಳುವುದಾದರೆ, ಕೊರೊನಾ ವೈರಸ್‍ನಿಂದಾಗಿ ಪ್ರಪಂಚದ ಎಲ್ಲೆಡೆ ಜೀವನವು ಸ್ಥಗಿತಗೊಂಡಾಗ ಕ್ರೀಡೆಯಲ್ಲಿ ಭವಿಷ್ಯ ಎಲ್ಲಿದೆ ಎಂದು ಪ್ರಶ್ನಿಸಿದ್ದರು.

    ಕೊರೊನಾ ವೈರಸ್‍ನಿಂದ ಉಂಟಾಗಿರುವ ಸದ್ಯದ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಪ್ರಸ್ತುತ ಕ್ಷಣದಲ್ಲಿ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನ ನಿಲ್ದಾಣಗಳು ಮುಚ್ಚಲ್ಪಟ್ಟಿವೆ, ಜನರು ಮನೆಯಲ್ಲಿ ಲಾಕ್‍ಡೌನ್ ಆಗಿದ್ದಾರೆ. ಕಚೇರಿಗಳು ಲಾಕ್ ಆಗಿವೆ. ಯಾರೂ ಎಲ್ಲಿಯೂ ಹೋಗಲು ಸಾಧ್ಯವಿಲ್ಲ. ಮೇ ಮಧ್ಯದವರೆಗೆ ಇದೇ ವಾತಾವರಣ ಇರುತ್ತದೆ ಎಂಬ ಮಾತುಗಳು ಕೇಳಿ ಬಂದಿವೆ ಎಂದು ಗಂಗೂಲಿ ಹೇಳಿದ್ದರು.

    ಇಂತಹ ಪರಿಸ್ಥಿತಿಯಲ್ಲಿ ಆಟಗಾರರನ್ನು ನೀವು ಎಲ್ಲಿಂದ ಕರೆದುಕೊಂಡು ಬರಲು ಸಾಧ್ಯ. ಹೋಗಲಿ ಆಟಗಾರರು ಪ್ರಯಾಣಿಸುವ ಅವಕಾಶ ಎಲ್ಲಿದೆ? ಈ ಸಮಯದಲ್ಲಿ ಪ್ರಪಂಚದ ಯಾವುದೇ ದೇಶದಲ್ಲೂ ಕ್ರೀಡೆಯ ಪರವಾದ ವಾತಾವರಣವಿಲ್ಲ. ಹೀಗಾಗಿ ಐಪಿಎಲ್ ಅನ್ನು ಮರೆತುಬಿಡಿ ಅಂತ ಹೇಳುವುದು ಸರಳ, ಸಾಮಾನ್ಯ ಜ್ಞಾನವಾಗಿದೆ ಎಂದು ದಾದಾ ತಿಳಿಸಿದ್ದರು.