Tag: Indian Medical Association

  • ಶನಿವಾರ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ – ದಿನೇಶ್ ಗುಂಡೂರಾವ್ ಪರೋಕ್ಷ ಬೆಂಬಲ

    ಶನಿವಾರ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ – ದಿನೇಶ್ ಗುಂಡೂರಾವ್ ಪರೋಕ್ಷ ಬೆಂಬಲ

    ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ (Kolkata Doctor Rape and Murder) ಖಂಡಿಸಿ ಶನಿವಾರ (ಆ.17) ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು (OPD Service) ಸ್ಥಗಿತಗೊಳ್ಳಲಿದೆ.

    ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಿಂದ (Indian Medical Association) ಬಂದ್‌ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯ ಘಟಕ ಬಂದ್‌ಗೆ ಬೆಂಬಲ ನೀಡಿದ್ದು, ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಸೇವೆ ಇರೋದಿಲ್ಲ. 24 ಗಂಟೆಗಳ ಕಾಲ ಹೊರ ರೋಗಿಗಳ ವಿಭಾಗ ಬಂದ್ ಆಗಲಿದೆ. ಎಮರ್ಜೆನ್ಸಿ ಪೇಷೆಂಟ್‌ಗಳಿಗೆ ಮಾತ್ರ ಟ್ರೀಟ್‌ಮೆಂಟ್ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಬಿಜೆಪಿ ಸೇರ್ಪಡೆ ಸಾಧ್ಯತೆ

    ಪ್ರತಿಭಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಭಾನುವಾರ ಬೆಳಗ್ಗೆ ಆರು ಗಂಟೆಯವರೆಗೂ ಪ್ರತಿಭಟನೆ ಮಾಡುತ್ತಿದ್ದೇವೆ. ಎಮರ್ಜೆನ್ಸಿ ರೋಗಿಗಳಿಗೆ ಯಾವುದೇ ತೊಂದರೆ ಆಗಲ್ಲ. ಓಪಿಡಿ ಸೇವೆ ಮಾತ್ರ ಬಂದ್ ಮಾಡುತ್ತಿದ್ದೇವೆ. ಒಬ್ಬ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ. ರಾತ್ರಿ ಡ್ಯುಟಿ ವೇಳೆ ಈ ಥರ ಆಗುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಲ್ಲಿ 30 ಸಾವಿರ ಮಂದಿ ಇದ್ದಾರೆ. ಒಂದೂವರೆ ಲಕ್ಷ ವೈದ್ಯರು ಇದ್ದಾರೆ. ಎಲ್ಲರಿಗೂ ರಿಕ್ವೆಸ್ಟ್ ಮಾಡಿಕೊಂಡಿದ್ದೇವೆ. ಫನಾ, ಪೀಡಿಯಾಟ್ರಿಕ್ ಅಸೋಸಿಯೇಶನ್ ಕೂಡ ಸೇರುತ್ತಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಚೇರಿ ಬಳಿ ಎಲ್ಲಾ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ

    ಇನ್ನು ನಾಳಿನ ವೈದ್ಯರ ಪ್ರತಿಭಟನೆಗೆ ಸಚಿವ ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಪ್ರತಿಭಟನೆ ಉದ್ದೇಶ ಒಳ್ಳೆದಿದೆ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಗಳ ಮುಷ್ಕರ ಹಿನ್ನೆಲೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಳೆ ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮೊನ್ನೆ ಪ್ರಿನ್ಸಿಪಲ್ ಸೆಕ್ರೆಟರಿಯ ಬಳಿ ಮಾತನಾಡಿದ್ದೇನೆ. ಏನೆಲ್ಲಾ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದು ಚರ್ಚಿಸಲು ಹೇಳಿದ್ದೇನೆ. ಪ್ರತಿಭಟನೆ ಆಗಲಿ, ಅವರ ಅಭಿಪ್ರಾಯ ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ತೊಂದರೆಯಾಗದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಎಲ್ಲಾ ಅಸೋಸಿಯೇಶನ್ ಜೊತೆ ನಾನು ಸಭೆ ಕರೆದಿದ್ದೇನೆ. ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತವರು ಮನೆಗೆ ಹಣ ಕಳಿಸಿ ರಾಬರಿ ನಾಟಕವಾಡಿದ್ದ ಪಿಎಸ್‌ಐ ಪತ್ನಿಯ ಮೇಲೆ ಕೇಸ್

    ಪ್ರತಿಭಟನೆಗೆ ಯಾರೆಲ್ಲ ಬೆಂಬಲ?
    *ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ
    *ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಶನ್
    *ಮಕ್ಕಳ ವೈದ್ಯರ ಅಸೋಸಿಯೇಶನ್
    *ಆರ್ಥೋಪಿಡಿಕ್ ಅಸೋಸಿಯೇಶನ್
    *ಮೆಡಿಕಲ್ ಕಾಲೇಜು ವೈದ್ಯರ ಅಸೋಸಿಯೇಶನ್

  • ಚಿಕಿತ್ಸೆಗೆ ಕರೆತಂದಿದ್ದ ಆರೋಪಿಯಿಂದ ಚಾಕು ಇರಿತ – ಯುವ ವೈದ್ಯೆ ಸಾವು

    ಚಿಕಿತ್ಸೆಗೆ ಕರೆತಂದಿದ್ದ ಆರೋಪಿಯಿಂದ ಚಾಕು ಇರಿತ – ಯುವ ವೈದ್ಯೆ ಸಾವು

    ತಿರುವನಂತಪುರಂ: ಪೊಲೀಸ್ ಕಸ್ಟಡಿಯಿಂದ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ (Doctor) ಚಾಕು ಇರಿದು ಹತ್ಯೆ ಮಾಡಿದ ಘಟನೆ ಕೇರಳದಲ್ಲಿ (Kerala) ಬುಧವಾರ ನಡೆದಿದೆ.

    ಮೃತ ವೈದ್ಯೆಯನ್ನು ವಂದನಾ ದಾಸ್ (23) ಎಂದು ಗುರುತಿಸಲಾಗಿದೆ. ಅವರು ಕೊಲ್ಲಮ್‍ನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ (MBBS) ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    ಆರೋಪಿಯನ್ನು ನೆಡುಂಬನಾದ ಶಾಲಾ ಶಿಕ್ಷಕ ಸಂದೀಪ್ (42) ಎಂದು ಗುರುತಿಸಲಾಗಿದೆ. ಆರೋಪಿ ವೈದ್ಯೆಗೆ ಆರು ಬಾರಿ ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ಅವರಿಗೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ ಮಾಡಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಮದ್ಯ ಸೇವನೆ ಮಾಡಿ ನೆರೆಹೊರೆಯವರೊಂದಿಗೆ ಹಾಗೂ ಕುಟುಂಬಸ್ಥರೊಂದಿಗೆ ಗಲಾಟೆ ಮಾಡುತ್ತಿದ್ದ ಮಾಹಿತಿ ಬಂದ ನಂತರ ಪೊಲೀಸರು ಆತನನ್ನು ಬಂಧಿಸಿದ್ದರು. ನಂತರ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ತೀವ್ರ ಹಿಂಸಾತ್ಮಕವಾಗಿ ವರ್ತಿಸುತ್ತಿದ್ದ. ಚಿಕಿತ್ಸೆ ವೇಳೆ ಪೊಲೀಸರಿಗೆ ಒಳಗೆ ಪ್ರವೇಶಿಸಲು ಅನುಮತಿ ನೀಡದ ಕಾರಣ ನಾವು ಹೊರಗೆ ಇರಬೇಕಾಯಿತು. ಈ ವೇಳೆ ಆರೋಪಿ ವೈದ್ಯೆಯನ್ನು ಅಟ್ಟಿಸಿಕೊಂಡು ಬಂದಿದ್ದಾನೆ. ಪೊಲೀಸರು ತಡೆಯಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ನಂತರ ಆತನನ್ನು ತೀವ್ರ ಹರಸಾಹಸ ಪಟ್ಟು ಬಂಧಿಸಲಾಯಿತು. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಗೆ ಭಾರತೀಯ ವೈದ್ಯರ ಸಂಘಟನೆ (Indian Medical Association) ತೀವ್ರ ಆಕ್ರೋಶ ಹೊರಹಾಕಿದೆ. ಆರೋಪಿಗಳು ಹಾಗೂ ಅಪರಾಧಿಗಳಿಗೆ ಚಿಕಿತ್ಸೆ ನೀಡುವ ವೇಳೆ ಕೋಳ ತೊಡಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶವಿದೆ. ಆದರೂ ಸಹ ಪೊಲೀಸರು ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ವೈದ್ಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಸೇನೆಯಿಂದ ಇಬ್ಬರು ಉಗ್ರರ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಜಪ್ತಿ

  • ಕೇಂದ್ರದ ಹಿಟ್ ಲಿಸ್ಟ್‌ನಲ್ಲಿ ಕರ್ನಾಟಕ ಡೇಂಜರಸ್ ಸ್ಪಾಟ್!

    ಕೇಂದ್ರದ ಹಿಟ್ ಲಿಸ್ಟ್‌ನಲ್ಲಿ ಕರ್ನಾಟಕ ಡೇಂಜರಸ್ ಸ್ಪಾಟ್!

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಶನಿವಾರ ಒಂದೇ ದಿನ 4,537 ಮಂದಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೇಂದ್ರದ ಹಿಟ್ ಲಿಸ್ಟ್‌ನಲ್ಲಿ ಕರ್ನಾಟಕ ಡೇಂಜರಸ್ ಸ್ಪಾಟ್ ಆಗಿದೆ.

    ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‍ನಿಂದ (ಐಎಂಐ) ಕರ್ನಾಟಕದ ರಿಪೋರ್ಟ್ ಹೊರಬಂದಿದೆ. ಇದು ಕರ್ನಾಟಕದ ಹಳ್ಳಿ ಹಳ್ಳಿಗೂ, ಸಮುದಾಯಕ್ಕೆ ಕೊರೊನಾ ಹಬ್ಬುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಮಹಾನಗರಿ ಬೆಂಗಳೂರಿಗೆ ಮಾತ್ರವಲ್ಲ ಈಗ ಕರ್ನಾಟಕದ ಹಳ್ಳಿ ಹಳ್ಳಿಗೂ ಕೊರೊನಾ ಗಂಡಾಂತರವಾಗಲಿದೆ ಎಂದು ಐಎಂಐ ಎಚ್ಚರಿಕೆ ನೀಡಿದೆ.

    ಮಹಾನಗರಿ ಬೆಂಗಳೂರನ್ನು ನಿಭಾಯಿಸಬಹುದು. ಆದರೆ ಕರ್ನಾಟಕ, ಮಹಾರಾಷ್ಟ್ರ, ಕೋಲ್ಕತ್ತಾ, ಗೋವಾದ ಭಾಗದಲ್ಲಿ ಕೆಲ ಹಳ್ಳಿ ಹಳ್ಳಿಯಲ್ಲಿ ಕೊರೊನಾ ಸಮುದಾಯಕ್ಕೆ ಹಬ್ಬುವ ಸಾಧ್ಯತೆ ಬಗ್ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‍ ಕೇಂದ್ರಕ್ಕೆ ಸೂಚ್ಯವಾಗಿ ತಿಳಿಸಿದೆ.

    ಕರ್ನಾಟಕದಲ್ಲಿ ಸಮುದಾಯಕ್ಕೆ ಕೊರೊನಾ ಸಾಧ್ಯತೆ ಹೇಗೆ?
    1. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬಿದ ಆತಂಕ ಎದುರಾದ ಸಂದರ್ಭದಲ್ಲಿಯೇ ಅನೇಕರು ಬೆಂಗಳೂರಿನಿಂದ ಹಳ್ಳಿಗೆ ಸೇರಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಕೊರೊನಾ ಸ್ಫೋಟ ಸಾಧ್ಯತೆ.
    2. ಕರ್ನಾಟಕದಲ್ಲಿ ಚೇತರಿಕೆಯಾಗುವಾಗಲೇ ಅನೇಕ ಜಿಲ್ಲೆಗಳಿಗೆ ಈಗ ನಿಗೂಢ ಕೇಸ್‍ಗಳದ್ದು ದೊಡ್ಡ ತಲೆನೋವಾಗಿದೆ.
    3. ಮೈಸೂರು, ದಕ್ಷಿಣ ಕನ್ನಡ, ಕಲಬುರ್ಗಿ, ಧಾರವಾಡ ಈಗ ಹೊಸ ಹಾಟ್‍ಸ್ಪಾಟ್ ಆಗಿ ಬದಲಾಗಿದೆ.
    4. ಬೆಂಗಳೂರು ಹೊರತು ಪಡಿಸಿ ಗ್ರಾಮೀಣ ಭಾಗದಲ್ಲಿಯೂ ಈಗ 500ರ ಗಡಿಯತ್ತ ಕೆಲ ಜಿಲ್ಲೆಯಲ್ಲಿ ಪ್ರಕರಣ ಕಂಡುಬರುತ್ತಿದೆ. ಕೇಸ್ ಹಿಸ್ಟರಿ ಇಲ್ಲದೇ ಕೊರೊನಾ ವ್ಯಾಪಿಸುತ್ತಿದೆ.

    ಕರ್ನಾಟಕದ ಯಾವ ಜಿಲ್ಲೆಯಲ್ಲಿ ಸಮುದಾಯಕ್ಕೆ ಹಬ್ಬುವ ಡೇಂಜರಸ್ ಹಂತದಲ್ಲಿದೆ. ಬೆಂಗಳೂರು ಹೊರತುಪಡಿಸಿ ಕೊರೊನಾಗೆ ಸಿಲುಕಿದ ಜಿಲ್ಲೆಗಳಿವು.

    ಜಿಲ್ಲೆ ಸಕ್ರಿಯ ಪ್ರಕರಣ
    1. ದಕ್ಷಿಣ ಕನ್ನಡ – 2183
    2. ಧಾರವಾಡ – 1216
    3. ಬಳ್ಳಾರಿ – 1095
    4. ಮೈಸೂರು – 880
    5. ಕಲುಬುರ್ಗಿ – 940
    6. ಉತ್ತರ ಕನ್ನಡ – 668

  • ಬಂದ್ ಆಗದ ಕೋಲಾರದ ಆಸ್ಪತ್ರೆಗಳು – ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ

    ಬಂದ್ ಆಗದ ಕೋಲಾರದ ಆಸ್ಪತ್ರೆಗಳು – ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ

    ಕೋಲಾರ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಮಸೂದೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿರುವ ದೇಶ ವ್ಯಾಪಿ ಬಂದ್‍ಗೆ ಕೋಲಾರದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

    ಎಂದಿನಂತೆ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಬೆಂಬಲ ಕೋಲಾರದಿಂದ ವ್ಯಕ್ತವಾಗಿಲ್ಲ. ಆದರೆ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಬೆಳಗ್ಗೆ 10 ಗಂಟೆಗೆ ಖಾಸಗಿ ಆಸ್ಪತ್ರೆ ವೈದ್ಯರು ಎನ್‍ಎಂಸಿ ಮಸೂದೆಯನ್ನ ಖಂಡಿಸಿ ಪ್ರತಿಭಟನೆ ಮಾಡಿದರು.

    ಮೊದಲಿನಿಂದಲೂ ಮಸೂದೆ ವಿರೋಧಿಸುತ್ತ ಬಂದಿದ್ದ ಭಾರತೀಯ ವೈದ್ಯಕೀಯ ಸಂಘ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‍ಗಳನ್ನು ಬಂದ್ ಮಾಡಿವೆ. ಆದರೆ ಕೋಲಾರದಲ್ಲಿ ಯಾವುದೇ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಬಂದ್ ಆಗದೆ ವೈದ್ಯರು ಎಂದಿನಂತೆ ರೋಗಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

    ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.