Tag: indian

  • ಭಾರತದ ಸೇನೆ ಸೇರಿದ ಐಎನ್‍ಎಸ್ ವಿಶಾಖಪಟ್ಟಣ ನೌಕೆ – ಚೀನಾ, ಪಾಕಿಸ್ತಾನಕ್ಕೆ ನಡುಕ

    ಭಾರತದ ಸೇನೆ ಸೇರಿದ ಐಎನ್‍ಎಸ್ ವಿಶಾಖಪಟ್ಟಣ ನೌಕೆ – ಚೀನಾ, ಪಾಕಿಸ್ತಾನಕ್ಕೆ ನಡುಕ

    ನವದೆಹಲಿ: ಕರಾವಳಿ ರಕ್ಷಣೆಗಾಗಿ ಐಎನ್‍ಎಸ್ ವಿಶಾಖಪಟ್ಟಣ ನೌಕೆ ಮುಂಬೈನಲ್ಲಿ ಕರ್ತವ್ಯಕ್ಕೆ ಮರಳಿದೆ. ಇದು ಭಾರತ ರಕ್ಷಣಾ ಪಡೆಗಳ ಮೊದಲ ಸ್ಟೆಲ್ತ್ ಗೈಡೆಡ್ ಮಿಸೈಡ್ ಡೆಸ್ಟ್ರಾಯರ್ ಆಗಿರೋದು ವಿಶೇಷವಾಗಿದೆ.

    ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಐಎನ್‍ಎಸ್ ವಿಶಾಖಪಟ್ಟಣವನ್ನು ಲೋಕಾರ್ಪಣೆ ಮಾಡಿದರು. ಮುಂಬೈನ ಮಜಂಗಾವ್ ಡಾಕ್ ಯಾರ್ಡ್‍ನಲ್ಲಿ ನಿರ್ಮಿಸಿದ ಐಎನ್‍ಎಸ್ ವಿಶಾಖಪಟ್ಟಣ ನೌಕೆಯಿಂದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ಸೇರಿ ಹಲವು ಮಾದರಿಯ ಕ್ಷಿಪಣಿಗಳನ್ನು ಪ್ರಯೋಗಿಸಬಹುದಾಗಿದೆ. ಈ ನೌಕೆಯ ಚಲನವನಗಳನ್ನು ಶತ್ರುದೇಶಗಳ ರಾಡಾರ್‌ಗಳು ಗುರುತಿಸದೇ ಇರುವ ರೀತಿಯ ತಂತ್ರಜ್ಞಾನವನ್ನು ಬಳಕೆ ಮಾಡಿದ್ದಾರೆ. ಜಲಂತಾರ್ಗಾಮಿಗಳನ್ನು ಕೂಡ ಗುರುತಿಸಿ ದಾಳಿ ನಡೆಸಲು ಅಗತ್ಯವಾದ ಪ್ರಬಲ ಟೋರ್ಪೆಡೋಗಳನ್ನು ಇದಕ್ಕೆ ಅಳವಡಿಸಲಾಗಿದೆ. ಇದನ್ನೂ ಓದಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮೈತ್ರಿ : ಓವೈಸಿ

    ಎಡರು ಮಲ್ಟಿ ರೋಲ್ ಹೆಲಿಕಾಪ್ಟರ್‌ಗಳು ಕೂಡ ಇದರಲ್ಲಿ ಸದಾ ಸನ್ನದ್ಧವಾಗಿರುತ್ತವೆ. ಐಎನ್‍ಎಸ್ ವಿಶಾಖಪಟ್ಟಣ ಲೋಕಾರ್ಪಣೆ ಮಾಡಿ ಮಾತನಾಡಿದ ರಕ್ಷಣಾ ಸಚಿವರು, ಭಾರತವು ತನ್ನ ಸಾಮರ್ಥ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ರಾಷ್ಟ್ರ ಸ್ವದೇಶಿ ಹಡಗು ನಿರ್ಮಾಣದತ್ತ ಸಾಗಲು ಸಂಪೂರ್ಣ ಅವಕಾಶ ಹೊಂದಿದೆ. ನಮ್ಮ ಶತ್ರು ರಾಷ್ಟ್ರಗಳ ಕುತಂತ್ರಕ್ಕೆ ನಾವು ಹೆದರಬೇಕಾಗಿಲ್ಲ ಎಂದು ಚೀನಾ ವಿರುದ್ಧ ಹರಿಹಾಯ್ದಿದ್ದಾರೆ. ಚೀನಾ ಒಂದು ಬೇಜವಾಬ್ದಾರಿ ದೇಶ. ಸ್ವಾರ್ಥ ಮತ್ತು ಸಂಕುಚಿತ ಮನೋಭಾವದ ಚೀನಾ ಅಧಿಪತ್ಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ: ನವಜೋತ್ ಸಿಧುರನ್ನು ತರಾಟೆಗೆ ತೆಗೆದುಕೊಂಡ ಗೌತಮ್ ಗಂಭೀರ್

  • ಏಕತೆಯೇ ಭಾರತೀಯ ಸಂಸ್ಕೃತಿಯ ದೊಡ್ಡ ಶಕ್ತಿ: ನಿತಿನ್ ಗಡ್ಕರಿ

    ಏಕತೆಯೇ ಭಾರತೀಯ ಸಂಸ್ಕೃತಿಯ ದೊಡ್ಡ ಶಕ್ತಿ: ನಿತಿನ್ ಗಡ್ಕರಿ

    – ಎಲ್ಲಾ ಮತ, ಧರ್ಮ, ಸಮುದಾಯ ಗೌರವಿಸುವುದು ಭಾರತೀಯ ಸಂಸ್ಕೃತಿಯ ವೈಶಿಷ್ಟ್ಯ

    ನವದೆಹಲಿ: ಏಕತೆ ಎಂಬುದು ಭಾರತೀಯ ಸಂಸ್ಕೃತಿಯ ಬಹುದೊಡ್ಡ ಶಕ್ತಿಯಾಗಿದೆ. ಈ ಶಕ್ತಿ ದೇಶವನ್ನು ವಿಶ್ವ ಗುರುವನ್ನಾಗುವಂತೆ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ರಾಷ್ಟ್ರೀಯ ಅಂತರ್ ಧರ್ಮೀಯ ಸಮ್ಮೇಳದಲ್ಲಿ ಕೋಮು ಸೌಹಾರ್ದತೆಗೆ ಜಾಗತಿಕ ಸವಾಲುಗಳು ಮತ್ತು ಭಾರತದ ಪಾತ್ರ ಕುರಿತು ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ ನೈಜ ಜಾತ್ಯತೀತವಾಗಿದೆ. ಎಲ್ಲಾ ಮತ, ಧರ್ಮಗಳು, ಸಮುದಾಯ, ಸಿದ್ಧಾಂತಗಳನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯ ವೈಶಿಷ್ಟ್ಯ ವಾಗಿದ್ದು, ಈ ಸಂಸ್ಕೃತಿ ಯಾವುದೋ ಒಂದು ಧರ್ಮದೊಂದಿಗೆ ಸಂಬಂಧವನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

    ಏಕತೆ ಎನ್ನುವುದು ಭಾರತೀಯ ಸಂಸ್ಕೃತಿಯ ಬಹುದೊಡ್ಡ ಶಕ್ತಿಯಾಗಿದೆ. ನಮ್ಮ ದೇಶವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಸ್ವಾಮಿ ವಿವೇಕಾನಂದರು ಆ ಕಾಲದಲ್ಲೇ ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಇಂಡೋನೇಷ್ಯಾ ಸಂಸ್ಥಾಪಕನ ಪುತ್ರಿ ಮತಾಂತರ

     

    ಆರ್ಟ್ ಆಫ್ ಲಿವಿಂಗ್‍ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ ಮಾತನಾಡಿ, ಮನುಷ್ಯ ಜೀವನ ವೈವಿಧ್ಯವನ್ನು ಬಯಸುತ್ತದೆ. ಆದರೆ ನಮ್ಮಲ್ಲಿರುವ ತಿಳಿವಳಿಕೆಯ ಕೊರತೆ ಹಾಗೂ ಒತ್ತಡದಿಂದಾಗಿ ವೈವಿಧ್ಯವನ್ನು ದ್ವೇಷಿಸಲಾಗುತ್ತಿದೆ. ಇಲ್ಲಿ ಎಲ್ಲ ಸಮುದಾಯಗಳು ಪ್ರಮುಖವಾದವು ಎಂಬುದನ್ನು ಗಮನದಲ್ಲಿಟ್ಟುಕೊಂಡು, ಪರಸ್ಪರ ಗೌರವಿಸುತ್ತಾ, ಒಂದಾಗಿ ಬದುಕುವುದು ಅಗತ್ಯವಾಗಿದೆ ಎಂದು ಹೇಳಿದರು.

  • ಶೂಟಿಂಗ್‍ನಲ್ಲಿ ಕಂಚು – ಭಾರತದ ಪರ ದಾಖಲೆ ಬರೆದ ಅವನಿ

    ಶೂಟಿಂಗ್‍ನಲ್ಲಿ ಕಂಚು – ಭಾರತದ ಪರ ದಾಖಲೆ ಬರೆದ ಅವನಿ

    ಟೋಕಿಯೋ: ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 50 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಒಂದೇ ಪ್ಯಾರಾಲಂಪಿಕ್ಸ್ ಕ್ರೀಡಾಕೂಟದಲ್ಲಿ ಅವಳಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    ಈ ಮೊದಲು ಅವನಿ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದೀಗ 50 ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್‍ನಲ್ಲಿ ಒಟ್ಟು 445.9 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡು, ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್

    ಇಂದು ಬೆಳಗ್ಗೆ ಹೈಜಂಪ್ ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್‌ಗೆ ಮೋದಿ ವಿಶ್

    ಪ್ರಧಾನಿ ಅಭಿನಂದನೆ
    ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಮತ್ತು ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಪ್ರವೀಣ್ ಕುಮಾರ್ ಮತ್ತು ಅವನಿ ಲೇಖರಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಪ್ಯಾರಾಲಿಂಪಿಕ್ಸ್ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಪ್ರವೀಣ್ ಕುಮಾರ್ ಮತ್ತು ಅವನಿ ಲೇಖರಾ ಬಗ್ಗೆ ಹೆಮ್ಮೆ ಪಡುತ್ತೇನೆ. ಈ ಪದಕವು ಅವರ ಕಠಿಣ ಪರಿಶ್ರಮ ಮತ್ತು ಸಾಟಿಯಿಲ್ಲದ ಸಮರ್ಪಣೆಯ ಫಲವಾಗಿದೆ. ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದಿದ್ದಾರೆ. ಇದನ್ನೂ ಓದಿ: ಜಾವೆಲಿನ್ ಎಸೆತ ಭಾರತಕ್ಕೆ ಅವಳಿ ಪದಕ

  • ಭಾರತ ತಂಡದ ಶಕ್ತಿಯಾಗಿ ಬೆಳೆದ ವೇಗಿಗಳು

    ಭಾರತ ತಂಡದ ಶಕ್ತಿಯಾಗಿ ಬೆಳೆದ ವೇಗಿಗಳು

    ಮುಂಬೈ: ಭಾರತ ತಂಡ ವಿದೇಶದಲ್ಲಿ ಯಾವುದೇ ತಂಡದ ವಿರುದ್ಧ ಗೆಲುವು ಪಡೆಯಬೇಕಾದರೆ ಅದು ಬ್ಯಾಟಿಂಗ್‍ನಿಂದ ಮಾತ್ರ ಸಾಧ್ಯ ಎಂಬ ಕಾಲಘಟ್ಟದಿಂದ ಹೊರ ಬಂದಂತೆ ಕಾಣಿಸುತ್ತಿದೆ. ಭಾರತದ ವೇಗಿಗಳು ಕೂಡ ಪಂದ್ಯ ಗೆಲ್ಲಿಸಿಕೊಡಬಲ್ಲರು ಎಂಬುದು ಇದೀಗ ಸಾಧ್ಯವಾಗಿದೆ. ಪ್ರಸ್ತುತ ಭಾರತ ಶಕ್ತಿಯಾಗಿ ವೇಗಿಗಳ ಪಡೆ ಗುರುತಿಸಿಕೊಂಡಿದೆ.

    ಕ್ರಿಕೆಟ್ ಇತಿಹಾಸವನ್ನು ಗಮನಿಸಿದರೆ ಮೂರು ವಿಭಾಗಗಳಲ್ಲೂ ಕೂಡ ಬಲಿಷ್ಠವಾಗಿ ಗೋಚರಿಸುತ್ತಿದ್ದ ಆಸ್ಟ್ರೇಲಿಯಾ ತಂಡ ಒಂದು ಕಡೆಯದರೆ, ಬೆಂಕಿ ಚೆಂಡುಗಳನ್ನು ಎಸೆಯುತ್ತಿದ್ದ ಪಾಕಿಸ್ತಾನದ ವೇಗಿಗಳು ಒಂದು ಕಡೆ. ಈ ನಡುವೆ ಭಾರತ ತಂಡ ಬ್ಯಾಟಿಂಗ್‍ನಲ್ಲಿ ಮಿಂಚಿದರೆ ಮಾತ್ರ ಗೆಲುವು ಎಂಬ ಒಂದು ಸ್ಥಿತಿಯಿತ್ತು. ಈ ಒಂದು ಮಾತನ್ನು 2018ರ ಬಳಿಕ ವೇಗಿಗಳು ಸುಳ್ಳಾಗಿಸುತ್ತಿದ್ದಾರೆ. ಇದನ್ನೂ ಓದಿ: ಟಿ20 ವರ್ಲ್ಡ್ ಕಪ್ – ಅಕ್ಟೋಬರ್ 24ರಂದು ಭಾರತ Vs ಪಾಕಿಸ್ತಾನ

    ಭಾರತ ತಂಡದ ವೇಗಿಗಳು 2018ರ ಬಳಿಕ ಕಠಿಣ ಅಭ್ಯಾಸ ಮತ್ತು ತಮ್ಮ ಬೌಲಿಂಗ್ ವೈವಿಧ್ಯತೆಯಿಂದ ವಿಶ್ವಕ್ರಿಕೆಟ್‍ನಲ್ಲಿ ಸದ್ದು ಮಾಡುತ್ತಿದ್ದಾರೆ. ಎದುರಾಳಿ ಯಾವುದೇ ತಂಡವಾಗಿದ್ದರು ಕೂಡ ತಮ್ಮ ವೇಗ ಮತ್ತು ಸ್ವಿಂಗ್ ಬೌಲಿಂಗ್ ಮೂಲಕ ಕೆಡ್ಡತೋಡುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ 2018ರ ಬಳಿಕ ವಿದೇಶದಲ್ಲಿ ನಡೆದ 22 ಟೆಸ್ಟ್ ಪಂದ್ಯಗಳಲ್ಲಿ ಬಹುಪಾಲು ವಿಕೆಟ್ ವೇಗಿಗಳು ಪಡೆದಿದ್ದಾರೆ. ಅದಲ್ಲದೆ 22 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಜಯ, 3 ಪಂದ್ಯಗಳಲ್ಲಿ ಡ್ರಾ ಮತ್ತು 10 ಪಂದ್ಯಗಳಲ್ಲಿ ಸೋಲು ಕಂಡಿದೆ. ಈ ಪಂದ್ಯಗಳಲ್ಲಿ ವೇಗಿಗಳ ಪಡೆ ಭಾರತದ ಗೆಲುವಿನ ಶಕ್ತಿಯಾಗಿ ಗುರುತಿಸಿಕೊಂಡಿದೆ. ಇದನ್ನೂ ಓದಿ: ಸಿರಾಜ್ ವಿಕೆಟ್ ಪಡೆದ ಬಳಿಕ ವಿಶೇಷ ಸಂಭ್ರಮಾಚರಣೆಯ ಕಹಾನಿ ರಿವೀಲ್

    ಭಾರತ ತಂಡದಲ್ಲಿ ಪ್ರಸ್ತುತ ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್ ಅವರಂತಹ ಟಾಪ್ ಕ್ಲಾಸ್ ವೇಗಿಗಳು ಇದ್ದಾರೆ ಹಾಗಾಗಿ ಕೆಲದಿನಗಳ ಹಿಂದೆ ಇಂಗ್ಲೆಂಡ್‍ನ ಲಾಡ್ರ್ಸ್ ನಲ್ಲಿ ಅವರದ್ದೇ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಗೆದ್ದು ಬೀಗಿತ್ತು. ಈ ಪಂದ್ಯದಲ್ಲೂ ಕೂಡ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದು ಮಾತ್ರ ವೇಗಿಗಳು. ಹಾಗಾಗಿ ಭಾರತ ಕ್ರಿಕೆಟ್ ಕಂಡ ಉತ್ತಮ ವೇಗದ ಬೌಲಿಂಗ್ ವಿಭಾಗವಾಗಿ ಇತ್ತೀಚಿನ ದಿನಗಳಲ್ಲಿ ಗುರುತಿಸಿಕೊಂಡಿದೆ ಇದು ಉತ್ತಮ ಬೆಳವಣಿಯಾಗಿದೆ.

     

  • ಕಾಬೂಲ್‍ನಿಂದ ಭಾರತೀಯರ ಕರೆತರಲು ಕಸರತ್ತು

    ಕಾಬೂಲ್‍ನಿಂದ ಭಾರತೀಯರ ಕರೆತರಲು ಕಸರತ್ತು

    ಕಾಬೂಲ್: ಅಫ್ಘಾನಿಸ್ತಾನದ ಸ್ಥಿತಿ ಘನಘೋರವಾಗಿದೆ. ಕಾಬೂಲ್‍ನಲ್ಲಿರೋ ಭಾರತೀಯರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಕಾಬೂಲ್‍ನಲ್ಲಿ ಸುಮಾರು 500ಕ್ಕೂ ಹೆಚ್ಚು ಭಾರತೀಯರಿದ್ದು, ಅವರನ್ನು ಕರೆತರಲು ಕಸರತ್ತು ನಡೆಸಲಾಗುತ್ತಿದೆ. ವಾಯುಸೇನೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ ಮುಂದಾಗಿದೆ. ಆದರೆ ಅಲ್ಲಿ ಏರ್ ಪೋರ್ಟ್  ಬಂದ್ ಆಗಿರುವ ಕಾರಣ ಏರ್ ಲಿಫ್ಟ್  ವಿಳಂಬಾಗಿದೆ.

    ಅಫ್ಘನ್‍ನಲ್ಲಿರುವ ಭಾರತೀಯರ ನ್ನು ಸುರಕ್ಷಿತವಾಗಿ ಕರೆತರಲು ಅಗತ್ಯವಾದ ಎಲ್ಲಾ ಕ್ರಮ ತೆಗೆದುಕೊಳ್ಳುವುದಾಗಿ ವಿದೇಶಾಂಗ ಇಲಾಖೆ ತಿಳಿಸಿದೆ. ಕಾಬೂಲ್‍ನಲ್ಲಿರೋ ರತನ್ ನಾಥ್ ದೇವಸ್ಥಾನದ ಅರ್ಚಕ ಪಂಡಿತ್ ರಾಜೇಶ್ ಕುಮಾರ್, ಭಾರತಕ್ಕೆ ಬರಲು ನಿರಾಕರಿಸಿದ್ದಾರೆ. ನೂರಾರು ವರ್ಷಗಳಿಂದ ನಮ್ಮ ಪೂರ್ವಜರು ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ದೇವಸ್ಥಾನ ತೊರೆಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ತಾಲಿಬಾನಿಗಳು ಬೇಕಿದ್ರೆ ತಮ್ಮನ್ನು ಕೊಲ್ಲಲ್ಲಿ ಅಂದಿದ್ದಾರೆ. ಕಾಬೂಲ್‍ನ ಗುರುದ್ವಾರದಲ್ಲಿ 200 ಸಿಖ್ಖರು ಇದ್ದು, ಅವರನ್ನು ರಕ್ಷಿಸಿ ಎಂದು ಪಂಜಾಬ್ ಸಿಎಂ ಮನವಿ ಮಾಡಿದ್ದಾರೆ. ನಾವಂದುಕೊಂಡಿದ್ದನ್ನು ಸಾಧಿಸಿದ್ದೇವೆ. ನಮ್ಮ ದೇಶಕ್ಕೆ, ನಮ್ಮ ಪ್ರಜೆಗಳಿಗೆ ಮತ್ತೆ ಸ್ವಾತಂತ್ರ್ಯ ಬಂದಿದೆ ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ಅಫ್ಘಾನಿಸ್ತಾನದಲ್ಲಿ ವಿಫಲ ಅನುಭವದ ರುಚಿಯನ್ನು ಮತ್ತೆ ನೋಡಲು ವಿದೇಶಿ ಶಕ್ತಿಗಳು ಬಯಸುವುದಿಲ್ಲ ಎಂದುಕೊಳ್ಳುತ್ತೇವೆ ಅಂತಾ ಅಮೆರಿಕಾಗೆ ತಾಲಿಬಾನ್ ಗುದ್ದು ನೀಡಿದ್ದಾರೆ. ಇದೀಗ ಎಲ್ಲರ ಕೋಪ ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಂಡ ಅಮೆರಿಕ ಅಧ್ಯಕ್ಷ ಜೋ ಬಿಡೆನ್‍ರತ್ತ ತಿರುಗಿದೆ. ಶ್ವೇತಭವನದ ಮುಂದೆ ಆಫ್ಘನ್ನರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ತಾಲಿಬಾನ್ ಆಡಳಿತಕ್ಕೆ ಯಾವ ದೇಶವೂ ಮನ್ನಣೆ ಕೊಡಬಾರದು ಎಂದು ಬ್ರಿಟನ್ ಕೇಳಿಕೊಂಡಿದೆ. ಆದರೆ ಪಾಕಿಸ್ತಾನ ಮತ್ತು ಚೀನಾ ಮಾತ್ರ ತಾಲಿಬಾನ್ ಆಡಳಿತಕ್ಕೆ ಮಾನ್ಯತೆ ನೀಡುವುದಾಗಿ ಘೋಷಿಸಿ ಉದ್ಧಟತನ ಮೆರೆದಿವೆ. ಇಮ್ರಾನ್ ಖಾನ್ ಅಂತೂ ಅಫ್ಘನ್‍ಗೆ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವ ಅರ್ಥದ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    https://www.youtube.com/watch?v=ckd3p_Ra2VI

  • ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡಿ ಜೀವನ ಸಾಗಿಸ್ತಿದ್ದಾರೆ 28 ಬಾರಿ ಚಿನ್ನ ಗೆದ್ದ ಪ್ಯಾರಾಶೂಟರ್..!

    ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡಿ ಜೀವನ ಸಾಗಿಸ್ತಿದ್ದಾರೆ 28 ಬಾರಿ ಚಿನ್ನ ಗೆದ್ದ ಪ್ಯಾರಾಶೂಟರ್..!

    ಡೆಹ್ರಾಡೂನ್: ಭಾರತ ಪರ 28 ಬಾರಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ದೇಶದ ಮೊದಲ ಪ್ಯಾರಾಶೂಟರ್ ದಿಲ್ರಾಜ್ ಕೌರ್ ಇದೀಗ ತನ್ನ ಜೀವನ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಬಿಸ್ಕತ್, ಚಿಪ್ಸ್ ಮಾರಾಟ ಮಾಡುವಂತಹ ಪರಿಸ್ಥಿತಿ ಬಂದಿದೆ.

    ದಿಲ್ರಾಚ್ ಕೌರ್ 2005ರಲ್ಲಿ ಪ್ರಾರಂಭಿಸಿದ ತನ್ನ ಕ್ರೀಡಾ ಜೀವನದಲ್ಲಿ 15 ವರ್ಷಗಳ ಕಾಲ ಭಾರತವನ್ನು ಪ್ರತಿನಿಧಿಸಿ ಹಲವು ರಾಷ್ಟ್ರೀಯ, ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿದ್ದರು. ಬಳಿಕ ಇದೀಗ ಜೀವನ ನಿರ್ವಹಣೆಗಾಗಿ ಉತ್ತರಾಖಂಡದ ಡೆಹ್ರಾಡೂನ್, ಗಾಂಧಿ ಪಾರ್ಕ್ ಬಳಿ ಬಿಸ್ಕತ್ ಮತ್ತು ಚಿಪ್ಸ್ ಮಾರಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ

    ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ದಿಲ್ರಾಜ್ ಕೌರ್, ನಾನು ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಪ್ಯಾರಾಶೂಟರ್ ಆಗಿ ದೇಶಕ್ಕಾಗಿ ಈವರೆಗೆ 28 ಚಿನ್ನದ ಪದಕ, 8 ಬೆಳ್ಳಿ ಪದಕ, ಮತ್ತು 3 ಕಂಚಿನ ಪದಕ ಪಡೆದಿದ್ದೇನೆ. ಆದರೂ ನನಗೆ ಇದೀಗ ಜೀವನ ನಿರ್ವಹಣೆಗೆ ಕಷ್ಟಪಡುವಂತಹ ಪರಿಸ್ಥಿತಿ ಇದೆ. ಹಾಗಾಗಿ ಇಲ್ಲಿ ಬಿಸ್ಕತ್ ಚಿಪ್ಸ್ ಮಾರಾಟ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

    https://twitter.com/shubham_jain999/status/1407302791429705728

    ಈ ಬಗ್ಗೆ ರಾಜ್ಯದ ಪ್ಯಾರಾಶೂಟಿಂಗ್ ಕ್ರೀಡಾ ಇಲಾಖೆಯೊಂದಿಗೆ ತಿಳಿಸಿದಾಗ ನನಗೆ ಯಾವುದೇ ನೆರವು ಸಿಕ್ಕಿಲ್ಲ. ನಾನು ನನ್ನ ಕ್ರೀಡಾ ಸಾಧನೆಯನ್ನು ಪರಿಗಣಿಸಿ ನನಗೆ ಸರ್ಕಾರಿ ಉದ್ಯೋಗ ಕೊಡಿ ಎಂದು ಮನವಿ ಮಾಡಿಕೊಂಡಿದ್ದೆ ಈವರೆಗೆ ಯಾವುದೇ ಕೆಲಸ ಸಿಕ್ಕಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

  • ಹಸುವಿನ ಸೆಗಣಿಯನ್ನು ಯುಎಸ್‍ಗೆ ತೆಗೆದುಕೊಂಡು ಹೋದ ಭಾರತೀಯ

    ಹಸುವಿನ ಸೆಗಣಿಯನ್ನು ಯುಎಸ್‍ಗೆ ತೆಗೆದುಕೊಂಡು ಹೋದ ಭಾರತೀಯ

    ವಾಷಿಂಗ್ಟನ್: ಭಾರತದಿಂದ ಯೆಸ್‍ಗೆ ಪ್ರಯಾಣಿಸಿದ ಪ್ರಯಾಣಿಕನ ಲಗೇಜ್ ಬ್ಯಾಗ್‍ನಲ್ಲಿ ಹಸುವಿನ ಸೆಗಣಿ ಪತ್ತೆಯಾಗಿದೆ ಎಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

    ಹಸುವಿನ ಸಗಣಿಯನ್ನು ಯುಎಸ್‍ನಲ್ಲಿ ನಿಷೇಧಿಸಲಾಗಿದೆ ಏಕೆಂದರೆ ಅವುಗಳು ಹೆಚ್ಚು ಸಾಂಕ್ರಾಮಿಕ ರೋಗ ಅಥವಾ ಕಾಲುಬಾಯಿರೋಗದ ಸಂಭಾವ್ಯ ವಾಹಕಗಳಾಗಿವೆ ಎನ್ನಲಾಗುತ್ತದೆ . ಆದರೆ ಏರ್ ಇಂಡಿಯಾ ವಿಮಾನದ ಪ್ರಯಾಣಿಕ ಸಿಬಿಪಿಯ ತಪಾಸಣೆ ಕೇಂದ್ರಕ್ಕೆ ತಲುಪಿದ ನಂತರ ಸಿಬಿಪಿ ಕೃಷಿ ತಜ್ಞರು ಸೂಟ್ ಕೇಸ್‍ನಲ್ಲಿ ಎರಡು ಹಸುವಿನ ಸಗಣಿ ಉಂಡೆಯನ್ನು ಕಂಡುಕೊಂಡಿದ್ದಾರೆ ಎಂದು ಮಾಧ್ಯಮ ಪ್ರಕಟಣೆ ಸೋಮವಾರ ತಿಳಿಸಿದೆ.

    ಕಾಲುಬಾಯಿ ರೋಗವು ಜಾನುವಾರು ಮಾಲೀಕರು ಹೆಚ್ಚು ಭಯಪಡುವ, ಗಂಭೀರ ಕಾಯಿಲೆಗಳಲ್ಲಿ ಒಂದಾಗಿದೆ. ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆಯ ಕೃಷಿ ಸಂರಕ್ಷಣಾ ಕಾರ್ಯಾಚರಣೆಯ ಮಹತ್ವದ ಕಾರ್ಯಾಚರಣೆಯಾಗಿದೆ ಎಂದು ಬಾಲ್ಟಿಮೋರ್ ಫೀಲ್ಡ್ ಆಫೀಸ್ ಸಿಬಿಪಿಯ ಕ್ಷೇತ್ರ ಕಾರ್ಯಾಚರಣೆಗಳ ನಿರ್ದೇಶಕ ಕೀತ್ ಫ್ಲೆಮಿಂಗ್ ಹೇಳಿದರು.

    ಹಸುವಿನ ಸಗಣಿ ವಿಶ್ವದ ಕೆಲವು ಭಾಗಗಳಲ್ಲಿ ಪ್ರಮುಖ ಶಕ್ತಿ ಮತ್ತು ಅಡುಗೆ ಮೂಲವಾಗಿದೆ ಎಂದು ತಿಳಿದಿದ್ದರೂ ಹಸುವಿನ ಚರ್ಮವನ್ನು ಡಿಟಾಕ್ಸಿಫೈಯರ್, ಆಂಟಿಮೈಕ್ರೊಬಿಯಲ್ ಮತ್ತು ರಸಗೊಬ್ಬರವಾಗಿ ಬಳಸಲಾಗುತ್ತದೆ ಎಂದು ವರದಿಯಾಗಿದೆ. ಈ ಪ್ರಯೋಜನಗಳ ಹೊರತಾಗಿಯೂ, ಕಾಲುಬಾಯಿ ರೋಗದ ಸಂಭಾವ್ಯ ಕಾರಣಗಳಿಂದಾಗಿ ಗೋವಿನ ಸಗಣಿ ನಿಷೇಧಿಸಲಾಗಿದೆ ಎಂದು ಸಿಬಿಪಿ ಹೇಳಿದೆ.

    ಯು.ಎಸ್. ಕೃಷಿ ಇಲಾಖೆಯ ಪ್ರಕಾರ, ಕಾಲುಬಾಯಿ ರೋಗವು ವಿಶ್ವಾದ್ಯಂತದ ಜಾನುವಾರುಗಳಿಗೆ ತೊಂದರೆ ತರುವ ರೋಗವಾಗಿದ್ದು ಇದು ವ್ಯಾಪಕವಾಗಿ ಮತ್ತು ವೇಗವಾಗಿ ಹರಡಬಹುದು ಮತ್ತು ಜಾನುವಾರುಗಳ ಸಂಖ್ಯೆಗೆ ಗಮನಾರ್ಹ ನಷ್ಟವನ್ನು ತರಬಲ್ಲದು. 1929ರಿಂದ ಯುಎಸ್ ಕಾಲುಬಾಯಿ ರೋಗದಿಂದ ಮುಕ್ತವಾಗಿದೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿದೆ.

  • ಭಾರತದ ಸೈನ್ಯ ಸೇರಿದ 5ನೇ ಬ್ಯಾಚ್ ರಫೇಲ್ ಯುದ್ಧ ವಿಮಾನ

    ಭಾರತದ ಸೈನ್ಯ ಸೇರಿದ 5ನೇ ಬ್ಯಾಚ್ ರಫೇಲ್ ಯುದ್ಧ ವಿಮಾನ

    ನವದೆಹಲಿ: ಭಾರತದ ವಾಯು ಸೇನೆಗೆ ಫ್ರಾನ್ಸ್ ನಿಂದ 5ನೇ ಬ್ಯಾಚ್‍ನ ರಫೇಲ್ ಯುದ್ಧ ವಿಮಾನ ಬಂದು ತಲುಪಿದೆ. ಈ ಮೂಲಕ ಭಾರತೀಯ ವಾಯು ಸೇನೆ ಮತ್ತಷ್ಟು ಬಲಿಷ್ಠಗೊಂಡಿದೆ.

    5ನೇ ಬ್ಯಾಚ್‍ನ ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ಸುಮಾರು 8000 ಕಿಲೋ ಮೀಟರ್ ಹಾರಿ ಬಂದು ಭಾರತಕ್ಕೆ ತಲುಪಿದೆ. ಆದರೆ ಎಷ್ಟು ವಿಮಾನಗಳು ಬಂದಿದೆ ಎಂದು ಸ್ಪಷ್ಟಪಡಿಸಿಲ್ಲ. ಕೆಲ ಮೂಲಗಳ ಮಾಹಿತಿ ಪ್ರಕಾರ 4 ರಫೇಲ್ ವಿಮಾನಗಳು ಬಂದಿದೆ ಎಂದು ವರದಿಯಾಗಿದೆ.

    ಭಾರತದ ವಾಯುಸೇನೆಯ ಸಿಬ್ಬಂದಿ ಮುಖ್ಯಸ್ಥ ಏರ್‍ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಅವರು ಫ್ರಾನ್ಸ್ ಪ್ರವಾಸದಲ್ಲಿದ್ದು, ಅವರು ಫ್ರಾನ್ಸ್ ನ ಮೆರಿಗ್ಯ್ನಾಕ್ ವಾಯುನೆಲೆಯಿಂದ ರಫೇಲ್ ಯುದ್ಧ ವಿಮಾನಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟರು ಎಂದು ವರದಿಯಾಗಿದೆ.

    ಏರ್‍ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಅವರು ಫ್ರಾನ್ಸ್ ಪ್ರವಾಸದಲ್ಲಿದ್ದು, ಅವರು ಫ್ರಾನ್ಸ್ ನ ಮೆರಿಗ್ಯ್ನಾಕ್ ವಾಯುನೆಲೆಯಿಂದ ರಫೇಲ್ ಯುದ್ಧ ವಿಮಾನಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮಾರ್ಗ ಮಧ್ಯದಲ್ಲಿ ಫ್ರಾನ್ಸ್ ಮತ್ತು ಯುಎಇ ವಾಯು ಪಡೆ ರೀಫ್ಯೂಲಿಂಗ್ ಮಾಡಿ ವಿಮಾನವನ್ನು ಸರಿಯಾದ ಸಮಯಕ್ಕೆ ಕಳುಹಿಸಿ ಕೊಟ್ಟಿದ್ದೀರಿ, ಇದಕ್ಕೆ ಧನ್ಯವಾದಗಳು ಎಂದು ಭಾರತದ ರಾಯಭಾರಿ ಕಚೇರಿ ಟ್ವಿಟ್ಟರ್‍ ನಲ್ಲಿ ಹಾಕಿಕೊಂಡಿದೆ.

    ಭಾರತ 2016ರ ಸೆಪ್ಟೆಂಬರ್ ತಿಂಗಳಲ್ಲಿ ಫ್ರಾನ್ಸ್ ನೊಂದಿಗೆ 58 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಫೈಟರ್ ಜೆಟ್‍ಗಳನ್ನು ಖರೀದಿಸಲು ಭಾರತ ಅಂತರ್-ಸರ್ಕಾರಿ ಒಪ್ಪಂದ ಮಾಡಿಕೊಂಡಿತ್ತು, ಇದರಂತೆ ಈಗಾಗಲೇ ಭಾರತದಲ್ಲಿ 14 ರಫೇಲ್ ಯುದ್ಧ ವಿಮಾನಗಳು ಕಾರ್ಯಾಚರಿಸುತ್ತಿದೆ. ಇದೀಗ ಮತ್ತೆ ನಾಲ್ಕು ವಿಮಾನಗಳು ಸೇರ್ಪಡೆಯೊಂದಿಗೆ ಇದರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ.

    ಕಳೆದ ವರ್ಷ ಜುಲೈ 28 ರಂದು ಐದು ಯುದ್ಧ ವಿಮಾನಗಳು ಬಂದಿಳಿದ್ದವು. ಆ ಬಳಿಕ 4 ಹಂತಗಳಲ್ಲಿ ಭಾರತಕ್ಕೆ ರಫೇಲ್ ಯುದ್ಧ ವಿಮಾನ ಬಂದಿಳಿದ್ದಿತ್ತು. ಇದೀಗ 5ನೇ ಹಂತದಲ್ಲಿ ಮತ್ತೆ ರಫೇಲ್ ಬಲ ಹೆಚ್ಚಿದೆ. 2023ರ ವೇಳೆಗೆ ಒಪ್ಪಂದದಂತೆ ಎಲ್ಲಾ 36 ರಫೇಲ್ ವಿಮಾನಗಳು ಭಾರತದಲ್ಲಿರಲಿದೆ.

  • ಅಮೆರಿಕದಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದ ಭಾರತೀಯನ ಚಾಕುವಿನಿಂದ ಇರಿದು ಕೊಂದ್ರು!

    ಅಮೆರಿಕದಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದ ಭಾರತೀಯನ ಚಾಕುವಿನಿಂದ ಇರಿದು ಕೊಂದ್ರು!

    – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
    – ಸಹಾಯಕ್ಕಾಗಿ ಸರ್ಕಾರದ ಮೊರೆ ಹೋದ ಪತ್ನಿ

    ಹೈದರಾಬಾದ್: ಕೆಲಸಕ್ಕೆಂದು ಅಮೆರಕಕ್ಕೆ ತೆರಳಿ ಅಲ್ಲಿ ಪಾಲುದಾರಿಕೆಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿದ್ದ ಭಾರತೀಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

    ಈ ಘಟನೆ ಅಮೆರಿಕದ ಜಾರ್ಜಿಯಾ ಎಂಬಲ್ಲಿ ಭಾನುವಾರ ನಡೆದಿದೆ. ಮೃತ ದುರ್ದೈವಿಯನ್ನು ಮೊಹಮ್ಮದ್ ಆರಿಫ್ ಮೊಹಿಯುದ್ದೀನ್(37) ಎಂದು ಗುರುತಿಸಲಾಗಿದೆ. ಈತ ಮೂಲತಃ ಹೈದರಾಬಾದ್ ನವನಾಗಿದ್ದು, ಕಳೆದ 10 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದನು.

    ಜಾರ್ಜಿಯಾದಲ್ಲಿ ಪಾಲುದಾರಿಕೆಯಲ್ಲಿ ಆರಿಫ್ ಕಿರಾಣಿ ಅಂಗಡಿಯೊಂದನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಇದೀಗ ಮನೆಯ ಆವರಣದಲ್ಲಿಯೇ ದುಷ್ಕರ್ಮಿಗಳು ಚಾಕುವಿನಿಂದ ಹಲವು ಬಾರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಅಂಗಡಿಯ ಉದ್ಯೋಗಿ ಕೂಡ ಕೃತ್ಯದಲ್ಲಿ ಪಾಲುದಾರರಾಗಿರುವುದಾಗಿ ಆರಿಫ್ ಕುಟುಂಬ ಆರೋಪಿಸಿದೆ.

    ನನಗೆ ಮತ್ತು ನನ್ನ ತಂದೆಗೆ ತುರ್ತು ವೀಸಾದ ಮೂಲಕ ಅಮೆರಿಕ್ಕೆ ಪ್ರಯಾಣಿಸಲು ವ್ಯವಸ್ಥೆ ಕಲ್ಪಿಸಿಕೊಡಿ. ಈ ಅವಕಾಶ ಕೊಟ್ಟರೆ ಪತಿಯ ಅಂತ್ಯಸಂಸ್ಕಾರವನ್ನು ಅಲ್ಲಿಯೇ ನಡೆಸುತ್ತೇವೆ ಎಂದು ಆರಿಫ್ ಪತ್ನಿ ಮೆಹ್ನಾಜ್ ಫಾತಿಮಾ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ಭಾನುವಾರ 9 ಗಂಟೆಯ ಸುಮಾರಿಗೆ ನಾನು ಪತಿ ಜೊತೆ ಮಾತನಾಡಿದ್ದೇನೆ. ಆಗ ಆತ ಅರ್ಧ ಗಂಟೆ ಬಿಟ್ಟು ಮನೆಗೆ ಹೋಗಿ ನಂತರ ಕರೆ ಮಾಡುವುದಾಗಿ ತಿಳಿಸಿದ್ದ. ಆದರೆ ಅರ್ಧ ಗಂಟೆಯ ಬಳಿಕ ಆತನಿಂದ ನನಗೆ ಯಾವುದೇ ಕರೆ ಬಂದಿರಲಿಲ್ಲ. ಕೆಲ ಹೊತ್ತಿನ ಬಳಿಕ ನಾದಿನಿಯಿಂದಾಗಿ ನನಗೆ ವಿಚಾರ ತಿಳಿಯಿತು. ಆಕೆ ನನ್ನ ಪತಿಯನ್ನು ದುಷ್ಕರ್ಮಿಗಳು ಕೊಲೆಗೈದಿರುವುದಾಗಿ ತಿಳಿಸಿದಳು. ಸದ್ಯ ಪತಿ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದ್ದು, ಅಲ್ಲಿ ನಮ್ಮ ಕುಟುಂಬಸ್ಥರು ಯಾರೂ ಇಲ್ಲ ಎಂದು ಫಾತಿಮಾ ಬೇಸರ ವ್ಯಕ್ತಪಡಿಸಿದರು.

    ತೆಲಂಗಾಣದ ಎಂಬಿಟಿ ಪಕ್ಷದ ವಕ್ತಾರ ಉಲ್ಲಾ ಖಾನ್ ಅವರಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಅಮೆರಿಕದ ಭಾರತೀಯ ರಾಯಭಾರಿ ಕಚೇರಿಗೆ ಆರಿಫ್ ಕುಟುಂಬದ ಪರವಾಗಿ ಪತ್ರ ಬರೆದಿದ್ದಾರೆ.

  • ಕ್ಯಾನ್ಸ್‌ರ್‌ನಿಂದ ಗುಣವಾದ 4ರ ಬಾಲಕಿಗೆ ತಗುಲಿದ ಕೊರೊನಾ

    ಕ್ಯಾನ್ಸ್‌ರ್‌ನಿಂದ ಗುಣವಾದ 4ರ ಬಾಲಕಿಗೆ ತಗುಲಿದ ಕೊರೊನಾ

    – ಎರಡು ಮಾರಣಾಂತಿಕ ಕಾಯಿಲೆ ಗೆದ್ದು ಬಂದ ಪುಟಾಣಿ

    ದುಬೈ: ದುಬೈನಲ್ಲಿ ನೆಲೆಸಿರುವ ಭಾರತ ಮೂಲದ 4 ವರ್ಷದ ಬಾಲಕಿ ಕ್ಯಾನ್ಸ್‌ರ್‌ನಿಂದ ಬಳಲುತ್ತಿದ್ದಳು. ಇತ್ತ ಕ್ಯಾನ್ಸ್‌ರ್ ಗೆ ಚಿಕಿತ್ಸೆ ಪಡೆದು ಕೆಲ ತಿಂಗಳ ಹಿಂದೆಯಷ್ಟೇ ಗುಣಮುಖಳಾಗಿದ್ದಳು. ಇದೇ ವೇಳೆ ಮಹಾಮಾರಿ ಕೊರೊನಾ ಬಾಲಕಿಗೆ ತಗುಲಿದ್ದು, ಈಗ ಈ ಎರಡೂ ಮಾರಣಾಂತಿಕ ಕಾಯಿಲೆಯನ್ನು ಬಾಲಕಿ ಗೆದ್ದು ವೈದ್ಯರನ್ನೇ ಅಚ್ಚರಿಗೊಳಿಸಿದ್ದಾಳೆ.

    ಯುಎಇನಲ್ಲಿ ಕೊರೊನಾ ವೈರಸ್‍ನಿಂದ ಗುಣಮುಖರಾದ ಕಿರಿಯ ರೋಗಿಗಳಲ್ಲಿ ಈ ಪುಟಾಣಿ ಬಾಲಕಿಯೂ ಒಬ್ಬಳಾಗಿದ್ದಾಳೆ. ಭಾರತ ಮೂಲದ ಶಿವಾನಿ ಕ್ಯಾನ್ಸ್‌ರ್‌ ಹಾಗೂ ಕೊರೊನಾ ಎರಡರಿಂದಲೂ ಗುಣವಾಗಿದ್ದಾಳೆ. ಆರೋಗ್ಯ ಕಾರ್ಯಕರ್ತೆಯಾಗಿ ಶಿವಾನಿ ತಾಯಿ ಸೇವೆ ಸಲ್ಲಿಸುತ್ತಿದ್ದರು. ಅವರು ಏಪ್ರಿಲ್ 1ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

    ಈ ಬಗ್ಗೆ ತಿಳಿದ ಬಳಿಕ ಶಿವಾನಿ ಹಾಗೂ ಆಕೆಯ ತಂದೆಯನ್ನು ಕೂಡ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಯಾವುದೇ ರೋಗ ಲಕ್ಷಣಗಳು ಕಂಡುಬಾರದಿದ್ದರೂ ಬಾಲಕಿಯ ವರದಿ ಮಾತ್ರ ಪಾಸಿಟಿವ್ ಬಂದಿತ್ತು. ಆಸ್ಪತ್ರೆಯಲ್ಲಿ ಶಿವಾನಿ ಹಾಗೂ ಆಕೆಯ ತಾಯಿಗೆ ಒಂದೇ ರೀತಿಯ ಸೌಲಭ್ಯ ನೀಡಲಾಗುತಿತ್ತು. ಆದರೆ ಕೊರೊನಾ ಸೋಂಕಿಗೆ ತುತ್ತಾಗುವ ಮೊದಲು ಶಿವಾನಿಗೆ ಕಿಡ್ನಿ ಕ್ಯಾನ್ಸರ್ ಇತ್ತು. ಆದರೆ ಅದರಿಂದ ಆಕೆ ಚೇತರಿಸಿಕೊಂಡಿದ್ದಳು. ಅಷ್ಟರಲ್ಲಿ ಕೊರೊನಾಗೆ ತುತ್ತಾದ ಕಾರಣಕ್ಕೆ ಶಿವಾನಿ ಮೇಲೆ ಹೆಚ್ಚು ನಿಗಾ ವಹಿಸಲಾಗಿತ್ತು. ಶಿವಾನಿ ಗುಣಮುಖಳಾದ ಬಳಿಕ ಏಪ್ರಿಲ್ 20ರಂದು ಆಕೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

    ಕ್ಯಾನ್ಸ್‌ರ್‌ ಯಿದ್ದ ಹಿನ್ನೆಲೆ ಕಳೆದ ವರ್ಷ ಶಿವಾನಿಗೆ ಕೆಮೊ ಥೆರಪಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಹೀಗಾಗಿ ಈಗಲೂ ಆಕೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದೆ. ಕೊರೊನಾ ಸೋಂಕಿನಿಂದ ಉಸಿರಾಟದ ತೊಂದರೆಯಿಂದ ಶಿವಾನಿ ಬಳಲುತ್ತಿದ್ದಳು. ಆಕೆ ಮೇಲೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದರು.

    ಶಿವಾನಿಗೆ ಸ್ವಾಬ್ ಪರೀಕ್ಷೆಯಲ್ಲಿ ಸತತ ಎರಡು ಬಾರಿ ನೆಗೆಟಿವ್ ಬಂದ ನಂತರ 20 ದಿನಗಳ ಕಾಲ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಇದೀಗ 14 ದಿನಗಳ ಕಾಲ ಆಕೆಯನ್ನು ಹೋಮ್ ಕ್ವಾರಂಟೈನಲ್ಲಿ ಇರಿಸುವಂತೆ ಸೂಚಿಸಲಾಗಿದ್ದು, ಆಕೆಯ ತಾಯಿ ಕೂಡ ಕೊರೊನಾದಿಂದ ಚೇತರಿಕೊಳ್ಳುತ್ತಿದ್ದು, ಸದ್ಯದಲ್ಲೇ ಅವರನ್ನೂ ಡಿಸ್ಚಾರ್ಜ್ ಮಾಡಲಾಗುತ್ತೆ ಎನ್ನಲಾಗಿದೆ.