Tag: indian

  • ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ಸಾಂತ್ವಾನ

    ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ಸಾಂತ್ವಾನ

    ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಸಮೀಪದ ಗುಡಿಕೆರೆ ಕಾಲೋನಿಯ ಯೋಧ ಗುರು ಎಚ್(33) ಹುತಾತ್ಮರಾಗಿದ್ದು, ಜಿಲ್ಲಾಧಿಕಾರಿ ಎನ್ ಮಂಜುಶ್ರೀ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರು ಕುಟುಂಬಕ್ಕೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ನೆರವಿಗೆ ಸಿದ್ಧವಿದೆ. ಕುಟುಂಬಸ್ಥರು ಧೈರ್ಯವಾಗಿರಬೇಕು ಹಾಗೆಯೇ ಹೆಚಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡರು.

    ಮೃತರ ಶರೀರ ಇಂದು ಅಥವಾ ನಾಳೆ ಸ್ವ-ಗ್ರಾಮಕ್ಕೆ ವಾಪಸ್ಸಾಗಲಿದೆ. ಆದ್ರೆ ಇನ್ನೂ ನಾವು ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದೇವೆ. ಅದು ಬಂದ ನಂತರ ಇದೇ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಅವರು ಹೇಳಿದರು.

    ಈಗಾಗಲೇ ನಾನು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂತ್ಯಕ್ರಿಯೆಗಾಗಿ ತಾಲೂಕು ಆಡಳಿತದಿಂದ ಎರಡು ಜಾಗವನ್ನು ಗುರುತಿಸಿದ್ದೇವೆ. ಎರಡರಲ್ಲಿ ಯಾವುದು ಸೂಕ್ತ ಎನ್ನುವುದನ್ನು ನೋಡಿ ಅಂತಿಮ ಮಾಡುತ್ತೇವೆ. ಗುರು ಹುತಾತ್ಮರಾದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದ್ರೆ ದೆಹಲಿಯಲ್ಲಿರುವ ಸಿಆರ್ ಪಿ ಎಫ್ ಕಚೇರಿಗೆ ಕರೆ ಮಾಡಿ ಕೇಳಿದಾಗ ಸಾವಾಗಿರುವುದು ನಿಶ್ಚಿತ ಎಂಬ ಮಾಹಿತಿ ಲಭಿಸಿದೆ ಎಂದು ಅವರು ತಿಳಿಸಿದ್ರು.

    ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ ಇದೂವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

    https://www.youtube.com/watch?v=Cagqto-A9E0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಲ್ವಾಮಾದಲ್ಲಿ ದಾಳಿ ನಡೆಯೋ ಬಗ್ಗೆ ಮೊದ್ಲೇ ಸಿಕ್ಕಿತ್ತಾ ಸುಳಿವು..?

    ಪುಲ್ವಾಮಾದಲ್ಲಿ ದಾಳಿ ನಡೆಯೋ ಬಗ್ಗೆ ಮೊದ್ಲೇ ಸಿಕ್ಕಿತ್ತಾ ಸುಳಿವು..?

    ಪುಲ್ವಾಮಾ: ಜಮ್ಮು ಕಾಶ್ಮೀರದ ಆವಂತಿಪುರದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿದೆಯಾ ಎನ್ನುವ ಚರ್ಚೆಯೊಂದು ಇದೀಗ ಎದ್ದಿದೆ.

    ಪುಲ್ವಾಮಾದಲ್ಲಿ ನಡೆದ ದಾಳಿ ಕಳೆದ 20 ವರ್ಷಗಳಲ್ಲಿಯೇ ನಡೆದ ಅತೀ ದೊಡ್ಡ ದಾಳಿಯಾಗಿದೆ. 2001ರಲ್ಲಿ ಶ್ರೀನಗರದಲ್ಲಿರುವ ಸಚಿವಾಲಯದ ಮುಂಭಾಗ ನಡೆಸಿದ ಬಾಂಬ್ ದಾಳಿಯಲ್ಲಿ 38 ಮಂದಿ ಮೃತಪಟ್ಟು, 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗುರುವಾರ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿತ್ತು ಅನ್ನೋ ಚರ್ಚೆ ನಡೀತಿದೆ. ಇದನ್ನೂ ಓದಿ: ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

    ಭಾರತಕ್ಕಿತ್ತಾ ದಾಳಿಯ ಸುಳಿವು..?
    ಫೆ. 5ರಂದು ಪಾಕಿಸ್ತಾನದ ಕರಾಚಿಯಲ್ಲಿ ಜೈಶ್ ಎ ಮೊಹ್ಮದ್ ಸಂಘಟನೆಯ ಜಾಥಾ ನಡೆದಿತ್ತು. ಇದರಲ್ಲಿ ಉಗ್ರ ಮಸೂದ್ ಅಜರ್ ಸಹೋದರ ಅಬ್ದುಲ್ ರವೂಫ್ ಅಜರ್ ಕೂಡಾ ಭಾಗಿಯಾಗಿದ್ದನು. ಈ ವೇಳೆ ಭಾರತದಲ್ಲಿ ದಾಳಿ ನಡೆಸಲು 7 ಉಗ್ರರ ತಂಡಗಳನ್ನು ಕಳುಹಿಸೋದಾಗಿ ಘೋಷಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು

    ರವೂಫ್ ಘೋಷಣೆಯ ಬೆನ್ನಲ್ಲೇ ಅಲರ್ಟ್ ಆಗಿದ್ದ ಭಾರತದ ಗುಪ್ತಚರ ಇಲಾಖೆ ಭಾರತದಲ್ಲಿ ಜೈಷ್ ಎ ಮೊಹಮ್ಮದ್, ಲಷ್ಕರ್ ಎ ತಯ್ಬಾ ದಾಳಿ ಬಗ್ಗೆ ಸುಳಿವು ನೀಡಿತ್ತು. ವಾಹನಗಳ ಮೂಲಕವೇ ದಾಳಿ ನಡೆಸೋದಾಗಿ ಉಗ್ರ ಸಂಘಟನೆಯ ದೂರವಾಣಿ ಕರೆಗಳ ಮೂಲಕ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು


    ಇತ್ತೀಚಿನ ದಿನಗಳಲ್ಲಿ 2 ಸಂಘಟನೆಗಳು ಒಟ್ಟಾಗಿ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಆತ್ಮಾಹುತಿ ದಾಳಿಯ ಪ್ಲಾನ್ ಮಾಡಿ 44 ಮಂದಿ ಭಾರತದ ಅಮಾಯಕ ಯೋಧರನ್ನು ಬಲಿತೆಗೆದುಕೊಂಡಿದೆ.

    https://www.youtube.com/watch?v=5JqTWRx0JWA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಡೋನೇಷ್ಯಾ ವಿಮಾನ ದುರಂತ: ಭಾರತೀಯ ಕ್ಯಾಪ್ಟನ್ ಪೈಲಟ್ ಸಾವು

    ಇಂಡೋನೇಷ್ಯಾ ವಿಮಾನ ದುರಂತ: ಭಾರತೀಯ ಕ್ಯಾಪ್ಟನ್ ಪೈಲಟ್ ಸಾವು

    ಜಕಾರ್ತ: ಇಂಡೋನೇಷ್ಯಾದ ಲಯನ್ಸ್ ಏರ್‌‌ಲೈನ್ಸ್‌ ದುರಂತದಲ್ಲಿ ವಿಮಾನದ ಮುಖ್ಯ ಕ್ಯಾಪ್ಟನ್ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಭಾವ್ಯೆ ಸುನೆಜಾ ಮೃತಪಟ್ಟಿದ್ದಾರೆ.

    ದುರಂತ ಸಂಭವಿಸಿದ ಲಯನ್ ಏರ್‌‌ಲೈನ್ಸ್‌ ಸಂಸ್ಥೆಯ ಜಿಟಿ610 ವಿಮಾನದ ಮುಖ್ಯ ಕ್ಯಾಪ್ಟನ್ ಪೈಲಟ್ ಆಗಿದ್ದ ಭಾರತದ ಭಾವ್ಯೆ ಸುನೆಜಾ ಅವರು ಮೃತಪಟ್ಟಿರುವುದಾಗಿ ಜಕಾರ್ತದ ಭಾರತೀಯ ರಾಯಭಾರಿ ಕಚೇರಿ ಅಧಿಕೃತವಾಗಿ ತಿಳಿಸಿದೆ.

    ಮಾಹಿತಿಗಳ ಪ್ರಕಾರ ಸುನೆಜಾ 2011 ರಿಂದ ಲಯನ್ ಏರ್‌‌ಲೈನ್ಸ್‌ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುಂಚೆ ಅವರು ಎಮಿರೇಟ್ಸ್ ವಿಮಾನ ಸಂಸ್ಥೆಯಲ್ಲಿ ತರಬೇತಿ ಪೈಲೆಟ್ ಆಗಿಯೂ ಸೇವೆ ಸಲ್ಲಿಸಿದ್ದರು. ಸುನೆಜಾರವರು ದೆಹಲಿ ಮೂಲದವರಾಗಿದ್ದು, ಪೂರ್ವ ದೆಹಲಿಯ ಮಯೂರ್ ವಿಹಾರ್ ದಲ್ಲಿನ ಅಹಲ್ಕಾನ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಮುಗಿಸಿದ್ದರು.

    ಮುಖ್ಯ ಪೈಲಟ್ ಆಗಿದ್ದ ಸುನೆಜಾ ಅವರಿಗೆ 6 ಸಾವಿರ ಗಂಟೆಯ ವಿಮಾನ ಹಾರಾಟ ನಡೆಸಿದ ಅನುಭವವಿತ್ತು. ಇದಲ್ಲದೇ ಇಂಡೋನೇಷ್ಯಾದ ಹಾರ್ವಿನೋದಲ್ಲಿ ಸಹ ಪೈಲಟರ್ ಆಗಿ 5,000 ಕ್ಕೂ ಅಧಿಕ ಗಂಟೆಯ ಅನುಭವವನ್ನು ಸಹ ಹೊಂದಿದ್ದರು ಎನ್ನುವ ಮಾಹಿತಿಯನ್ನು ಲಯನ್ ಏರ್‌‌ಲೈನ್ಸ್‌ ಸಂಸ್ಥೆ ತಿಳಿಸಿದೆ.

    ಸುನೆಜಾ ಸಾವಿನ ಕುರಿತು ಜಕಾರ್ತ ಭಾರತೀಯ ರಾಯಭಾರಿ ಕಚೇರಿಯು ತನ್ನ ಟ್ವಿಟ್ಟರಿನಲ್ಲಿ, ಜಕಾರ್ತ ಬಳಿ ಲಯನ್ ಏರ್‌‌ಲೈನ್ಸ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ಸಂತಾಪವಿದೆ. ಆದರೆ ಘಟನೆಯಲ್ಲಿ ದುರದಷ್ಟಕರ ವಿಚಾರವೆಂದರೆ, ವಿಮಾನ ಚಲಾಯಿಸುತ್ತಿದ್ದ ಭಾರತೀಯ ಪೈಲಟ್ ಭವ್ಯೆ ಸುನೆಜಾ ಸಹ ದುರಂತದಲ್ಲಿ ಮೃತಪಟ್ಟಿದ್ದಾರೆ. ರಾಯಭಾರ ಕಚೇರಿಯು ರಕ್ಷಣಾ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದು, ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಿದೆ ಎಂದು ಬರೆದುಕೊಂಡಿದೆ.

    ಏನಿದು ವಿಮಾನ ದುರಂತ?
    ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್‍ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್ ಏರ್‌‌ಲೈನ್ಸ್‌ ಸಂಸ್ಥೆಗೆ ಸೇರಿದ್ದ ಜಿಟಿ 610 ವಿಮಾನ ಎಂದಿನಂತೆ 6.20ರ ಸುಮಾರಿಗೆ ಟೇಕ್ ಆಫ್ ಆಗಿ ಹೊರಟಿತ್ತು. ಸುಮಾರು 7.30ರ ಹೊತ್ತಿಗೆ ಪಾಂಗ್‍ಕಲ್ ಪಿನಾಂಗ್ ತಲುಪಬೇಕಿತ್ತು. ಆದರೆ ಟೇಕಾಫ್ ಆದ 13 ನಿಮಿಷಗಳ ಬಳಿಕ ಏಕಾಏಕಿ ರೇಡಾರ್ ಸಂಪರ್ಕದಿಂದ ವಿಮಾನ ನಾಪತ್ತೆಯಾಗಿತ್ತು. ಅಲ್ಲದೇ ಕೊನೆಯ ಬಾರಿಗೆ ಜಿಟಿ610 ವಿಮಾನವು ಬೋಯಿಂಗ್ 737 ಮ್ಯಾಕ್ಸ್ 8 ಲಯನ್ ವಿಮಾನದ ಸಂಪರ್ಕಕ್ಕೆ 6.33ರಲ್ಲಿ ಯತ್ನಿಸಿತ್ತು. ಇದಾದ ಬಳಿಕ ಪಾಂಗ್‍ಕಲ್ ದ್ವೀಪದ ಬಳಿ ಸಮುದ್ರದಲ್ಲಿ ವಿಮಾನ ಪತನಗೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯನನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ!

    ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯನನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ!

    ಕೆನ್ಸಾಸ್: ಭಾರತೀಯ ಮೂಲದ ವೈದ್ಯರೊಬ್ಬರನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯೊಂದು ಅಮೆರಿಕದಲ್ಲಿ ನಡೆದಿದೆ.

    ಮೃತ ದುರ್ದೈವಿ ವೈದ್ಯರನ್ನು 57 ವರ್ಷದ ಅಚ್ಚುತ್ ರೆಡ್ಡಿ ಎಂಬುವುದಾಗಿ ಗುರುತಿಸಲಾಗಿದ್ದು, ಇವರು ತೆಲಂಗಾಣದವರು ಎನ್ನಲಾಗಿದೆ. ಅಮೆರಿಕದ ಕೆನ್ಸಾಸ್ ನಗರದಲ್ಲಿರೋ ತನ್ನ ಕ್ಲಿನಿಕ್ ನಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ.

    ಹತ್ಯೆ ಮಾಡಿದ ವ್ಯಕ್ತಿಯನ್ನು ಉಮರ್ ರಷೀದ್ ದತ್ ಎಂದು ಗುರುತಿಸಲಾಗಿದೆ ಅಂತ ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.

    ಆರೋಪಿ ಸಿಕ್ಕಿದ್ದು ಹೇಗೆ?: ಕಾರ್ ಪಾರ್ಕಿಂಗ್ ಮಾಡೋ ಜಾಗದಲ್ಲಿ ರಕ್ತದ ಕಲೆಗಳಿರುವ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಕಾರಿನೊಳಗೆ ಕುಳಿತಿರುವುದನ್ನು ಗಮನಿಸಿದ ಸೆಕ್ಯೂರಿಟಿ ಗಾರ್ಡ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

    ಅಚ್ಯುತ್ ವಿಚಿಟಾದಲ್ಲಿ ಕ್ಲಿನಿಕ್ ನಡೆಸುತ್ತಿದ್ದು, ಇದೇ ಕ್ಲಿನಿಕ್ ನಲ್ಲಿ ಆರೋಪಿ ರಷೀದ್ ಮತ್ತು ವೈದ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆರೋಪಿ ರಷೀದ್ ವೈದ್ಯರನ್ನು ಹಿಂಬಾಲಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಹತ್ಯೆ ಮಾಡಿದ್ದ ವ್ಯಕ್ತಿ ಅಚ್ಯುತ್ ಅವರ ರೋಗಿಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

    ಅಚ್ಯುತ್ ಅವರು ನಲಗೊಂಡ ಜಿಲ್ಲೆಯವರಾಗಿದ್ದು, 1986ರಲ್ಲಿ ಉಸ್ಮಾನಿಯಾ ಮೆಡಿಕಲ್ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದಾರೆ. ಇದಾದ ಬಳಿಕ ಅಮೆರಿಕಾಗೆ ತೆರಳಿ ಅಲ್ಲಿಯೇ ನೆಲೆಯೂರಿದ್ದರು. ವಿಚಿಟಾದಲ್ಲಿನ ಕಾನ್ಸಾಸ್ ಮೆಡಿಕಲ್ ಸ್ಕೂಲ್ ವಿಶ್ವವಿದ್ಯಾಲಯದಲ್ಲಿ ಮನೋವೈದ್ಯ ಶಾಸ್ತ್ರವನ್ನು ಅಚ್ಯುತ್ ಪೂರ್ಣಗೊಳಿಸಿದ್ದರು. ಇವರ ತಂದೆ ಬೆಂಗಳೂರಿನವರಾಗಿದ್ದು, ತಾಯಿ ಹೈದರಾಬಾದ್ ಮೂಲದವರಾಗಿದ್ದಾರೆ. ಅಚ್ಚುತ್ ಪತ್ನಿ ಬೀನಾ ರೆಡ್ಡಿ ಕೂಡ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ.

    ಇದೇ ರೀತಿ ಕೆಲ ತಿಂಗಳ ಹಿಂದೆ ಕೂಡ ಹೈದರಾಬಾದ್ ಮೂಲಕ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರನ್ನು ಕಾನ್ಸಾಸ್ ನಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

  • ಸ್ವಾತಂತ್ರೋತ್ಸವದ ದಿನವೇ ಪಾಕಿಸ್ತಾನದ ಸರ್ಕಾರಿ ವೆಬ್‍ಸೈಟ್‍ಗಳನ್ನ ಹ್ಯಾಕ್ ಮಾಡಿದ ಭಾರತೀಯ ಹ್ಯಾಕರ್ಸ್

    ಸ್ವಾತಂತ್ರೋತ್ಸವದ ದಿನವೇ ಪಾಕಿಸ್ತಾನದ ಸರ್ಕಾರಿ ವೆಬ್‍ಸೈಟ್‍ಗಳನ್ನ ಹ್ಯಾಕ್ ಮಾಡಿದ ಭಾರತೀಯ ಹ್ಯಾಕರ್ಸ್

     

    ನವದೆಹಲಿ: ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14ರಂದು ಅಂದ್ರೆ ನಿನ್ನೆ ಭಾರತೀಯ ಹ್ಯಾಕರ್‍ಗಳು ಪಾಕಿಸ್ತಾನದ ವೆಬ್‍ಸೈಟ್‍ಗಳನ್ನ ಹ್ಯಾಕ್ ಮಾಡಿದ್ದಾರೆ. ಪ್ರಮುಖ ಸರ್ಕಾರಿ ತಾಣಗಳನ್ನೂ ಸೇರಿದಂತೆ ಸುಮಾರು 500 ವೆಬ್‍ಸೈಟ್‍ಗಳನ್ನ ಹ್ಯಾಕ್ ಮಾಡಲಾಗಿದ್ದು, ಭಾರತದ ಪರವಾದ ಸಾಲುಗಳನ್ನ ಹಾಕಿದ್ದಾರೆ.

    ಪಾಕಿಸ್ತಾನದ ಕೆಲವು ಪ್ರಮುಖ ಸಚಿವಾಲಯದ ವೆಬ್‍ಸೈಟ್‍ಗಳನ್ನ ಹ್ಯಾಕ್ ಮಾಡಲಾಗಿದೆ. ರಕ್ಷಣಾ ಸಚಿವಾಲಯ, ಹವಾಮಾನ ಬದಲಾವಣೆ ಸಚಿವಾಲಯ, ಜಲ ಮತ್ತು ವಿದ್ಯುತ್ ಸಚಿವಾಲಯ, ಮಾಹಿತಿ ತಂತ್ರಜ್ಞಾನ ಸಚಿವಾಲಯ ಸರಿದಂತೆ ಇತರೆ ಸಚಿವಾಲಯಗಳ ವೆಬ್‍ಸೈಟ್‍ಗಳು ಹ್ಯಾಕ್ ಆಗಿವೆ.

    ಇನ್ನೂ ಕಾರ್ಯನಿರತವಾಗದ ಕೆಲವು ವೆಬ್‍ಸೈಟ್‍ಗಳಲ್ಲಿ “ವೆಬ್‍ಸೈಟ್ ಅಂಡರ್ ಮೇಂಟೆನೆನ್ಸ್” ಎಂಬ ಸಂದೇಶವಿದೆ. ಲುಲು ಸೆಕ್ ಇಂಡಿಯಾ ಎಂಬ ಗುಂಪು ಈ ಹ್ಯಾಕಿಂಗ್ ಮಾಡಿರುವುದಾಗಿ ಇಲ್ಲಿನ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಪಾಕಿಸ್ತಾನದ ಸರ್ಕಾರಿ ವೆಬ್‍ಸೈಟ್‍ಗಳ ಮೇಲೆ ಭಾರತೀಯ ಹ್ಯಾಕರ್‍ಗಳು ಸೈಬರ್ ದಾಳಿ ಮಾಡಿರುವುದು ಇದೇ ಮೊದಲೇನಲ್ಲ. 2016ರ ಅಕ್ಟೋಬರ್‍ನಲ್ಲಿ ಪ್ರಮುಖ ಸರ್ಕಾರಿ ನೆಟ್‍ವರ್ಕ್‍ಗಳ ಮೇಲೆ ಭಾರತೀಯ ಹ್ಯಾಕರ್‍ಗಳು ದಾಳಿ ಮಾಡಿ ಅವರ ಕಂಪ್ಯೂಟರ್ ಮತ್ತು ಮಾಹಿತಿಗಳನ್ನ ಲಾಕ್ ಮಾಡಿದ್ದರು. ಪಾಕಿಸ್ತಾನಿ ಹ್ಯಾಕರ್‍ಗಳೂ ಕೂಡ ಭಾರತೀಯ ಶೈಕ್ಷಣಿಕ ಸಂಸ್ಥೆಗಳ ಹಲವಾರು ವೆಬ್‍ಸೈಟ್‍ಗಳನ್ನ ಇದೇ ವರ್ಷ ಹ್ಯಾಕ್ ಮಾಡಿದ್ದರು.

    https://twitter.com/dhunnaaditya/status/897106349602910208

  • IQ ಟೆಸ್ಟ್ ನಲ್ಲಿ ಐನ್‍ಸ್ಟೈನ್‍ರನ್ನೂ ಮೀರಿಸಿದ ಭಾರತೀಯ ಮೂಲದ ಬಾಲಕಿ

    IQ ಟೆಸ್ಟ್ ನಲ್ಲಿ ಐನ್‍ಸ್ಟೈನ್‍ರನ್ನೂ ಮೀರಿಸಿದ ಭಾರತೀಯ ಮೂಲದ ಬಾಲಕಿ

    ಲಂಡನ್: ಭಾರತೀಯ ಮೂಲದ 12 ವರ್ಷದ ಬಾಲಕಿಯೊಬ್ಬಳು ಬ್ರಿಟಿಷ್ ಮೆನ್ಸಾ ಐಕ್ಯೂ ಪರೀಕ್ಷೆಯಲ್ಲಿ 162 ಪಾಯಿಂಟ್ ಗಳಿಸುವ ಮೂಲಕ ವಿಜ್ಞಾನಿ ಐನ್‍ಸ್ಟೈನ್‍ರನ್ನೂ ಮೀರಿಸಿದ್ದಾಳೆ.

    ಇಂಗ್ಲೆಂಡ್‍ನ ಚೆಶೈರ್ ನಿವಾಸಿಯಾಗಿರೋ ಭಾರತೀಯ ಮೂಲದ ರಾಜಗೌರಿ ಪವಾರ್ ಈ ಕೀರ್ತಿಗೆ ಪಾತ್ರವಾಗಿದ್ದಾಳೆ. ಬ್ರಿಟಿಷ್ ಮೆನ್ಸಾ ಐಕ್ಯೂ ಪರೀಕ್ಷೆಯಲ್ಲಿ ಯಾರು ಬೇಕಾದ್ರೂ ಭಾಗವಹಿಸಿ ತಮ್ಮ ಬುದ್ಧಿವಂತಿಕೆಯನ್ನ ಪ್ರದರ್ಶಿಸಬಹುದು. ಐಕ್ಯೂ ಪರೀಕ್ಷೆ ಪ್ರಕ್ರಿಯೆಯ ಪ್ರಕಾರ ಒಬ್ಬರ ಬುದ್ಧಿವಂತಿಕೆಯನ್ನ ಅಳೆಯಲಾಗುತ್ತದೆ.

    ರಾಜಗೌರಿ ಪವಾರ್ ಈ ಪರೀಕ್ಷೆಯಲ್ಲಿ ವಿಜ್ಞಾನಿಗಳಾದ ಆಲ್ಬರ್ಟ್ ಐನ್‍ಸ್ಟೈನ್ ಹಾಗೂ ಸ್ಟೀಫನ್ ಹಾಕಿಂಗ್‍ಗಿಂತಲೂ ಎರಡು ಪಾಯಿಂಟ್ಸ್ ಹೆಚ್ಚು ಗಳಿಸಿದ್ದಾಳೆ. ಇದೀಗ ರಾಜಗೌರಿಯನ್ನ ಹೈ-ಐಕ್ಯೂ ಸೊಸೈಟಿಯ ಸದಸ್ಯೆಯಾಗಲು ಆಹ್ವಾನಿಸಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರೋ ರಾಜಗೌರಿ, ನನಗಾಗ್ತಿರೋ ಸಂತೋಷವನ್ನ ಪದಗಳಲ್ಲಿ ಹೇಳೋಕೆ ಆಗ್ತಿಲ್ಲ. ವಿದೇಶಿ ನೆಲದಲ್ಲಿ ಭಾರತವನ್ನ ಪ್ರತಿನಿಧಿಸಿ ಇಂತಹ ಸಾಧನೆ ಮಾಡಿರುವುದು ನನಗೆ ಹೆಮ್ಮೆ ಎನಿಸುತ್ತಿದೆ ಎಂದಿದ್ದಾಳೆ.

    ರಾಜಗೌರಿ ಕಳೆದ ತಿಂಗಳು ಮ್ಯಾಂಚೆಸ್ಟರ್‍ನಲ್ಲಿ ಬ್ರಿಟಿಷ್ ಮೆನ್ಸಾ ಐಕ್ಯೂ ಪರೀಕ್ಷೆಗೆ ಹಾಜರಾಗಿದ್ದಳು. 18 ವರ್ಷಕ್ಕಿಂತ ಕೆಳಗಿನ ವಯೋಮಾನದವರಿಗೆ ಇದು ಅತ್ಯಂತ ದೊಡ್ಡ ಐಕ್ಯೂ ಪರೀಕ್ಷೆಯಾಗಿದೆ. ಪತ್ರಿಕೆಯೊಂದರ ವರದಿಯ ಪ್ರಕಾರ ಈ ಪರೀಕ್ಷೆ ತೆಗೆದುಕೊಂಡು ಹೆಚ್ಚಿನ ಅಂಕ ಗಳಿಸುವ ಶೇ. 1ರಷ್ಟು ಜನರಲ್ಲಿ ರಾಜಗೌರಿ ಒಬ್ಬಳಾಗಿದ್ದಾಳೆ. ಈ ಪರೀಕ್ಷೆಯಲ್ಲಿ 140 ಅಂಕ ಪಡೆದರೆ ಅವರನ್ನ ಜೀನಿಯಸ್(ಅತ್ಯಂತ ಬುದ್ಧಿಶಾಲಿಗಳು) ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾಗಿ ರಾಜಗೌರಿ ಬರೋಬ್ಬರಿ 162 ಅಂಕ ಪಡೆದಿದ್ದಾಳೆ. ಇಡೀ ವಿಶ್ವದಲ್ಲಿ ಹೆಚ್ಚಿನ ಅಂಕ ಪಡೆದ 20 ಸಾವಿರ ಜನರಲ್ಲಿ ಈಗ ರಾಜಗೌರಿಯೂ ಒಬ್ಬಳಾಗಿದ್ದಾಳೆ.

    ರಾಜಗೌರಿಯ ತಂದೆ ಡಾ. ಸೂರಜ್‍ಕುಮಾರ್ ಪವಾರ್ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿಜ್ಞಾನಿಯಾಗಿದ್ದಾರೆ. ಇವರು ಪುಣೆಯ ಬಾರಾಮತಿ ಮೂಲದವರಾಗಿದ್ದು, ಮಗಳ ಸಾಧನೆಯ ಬಗ್ಗೆ ಕೇಳಿ ಸಂತಸಪಟ್ಟಿದ್ದಾರೆ. ಟಾಪ್ ಒಂದು ಪರ್ಸೆಂಟ್ ಅಂಕಗಳೊಂದಿಗೆ ನನ್ನ ಮಗಳು ಮುಂಚೂಣಿಯಲ್ಲಿದ್ದು, ಅತ್ಯಂತ ಕಿರಿಯ ವಯಸ್ಸಿನಲ್ಲೇ ಈ ಸಾಧನೆ ಮಾಡಿದವರಲ್ಲಿ ಒಬ್ಬಳಾಗಿದ್ದಾಳೆ ಎಂದು ಸೂರಜ್ ಕುಮಾರ್ ಹೇಳಿದ್ದಾರೆ.

    ನನಗೆ ಭೌತಶಾಸ್ತ್ರ, ಪರಿಸರ ಮತ್ತು ಖಗೋಳಶಾಸ್ತ್ರದಲ್ಲಿ ಆಸಕ್ತಿ ಇದೆ. ಮುಂದೆ ವೈದ್ಯಕೀಯ ಕ್ಷೇತ್ರದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸಿದ್ದೇನೆ ಅಂತ ರಾಜಗೌರಿ ಹೇಳಿದ್ದಾಳೆ. ಇಂಗ್ಲೆಂಡ್‍ನ ಪ್ರತಿಷ್ಠಿತ ಸಂಸ್ಥೆಯಾದ ಆಲ್ಟ್ರಿಂಚಾಮ್ ಗಲ್ರ್ಸ್ ಗ್ರಾಮರ್ ಸ್ಕೂಲ್‍ನಲ್ಲಿ ಪ್ರವೇಶಾತಿ ಪಡೆಯಲು ನಾನು ಪ್ರವೇಶ ಪರೀಕ್ಷೆಗೆ ತಯಾರಾಗುತ್ತಿದ್ದೆ. ನನ್ನ ಪೋಷಕರು ಬ್ರಿಟಿಷ್ ಮೆನ್ಸಾ ಐಕ್ಯೂ ಪರೀಕ್ಷೆ ತೆಗೆದುಕೊಳ್ಳುವಂತೆ ಸೂಚಿಸಿದ್ರು. 10.2 ವರ್ಷ ವಯಸ್ಸು ಮೀರಿದ ಯಾರಾದ್ರೂ ಈ ಪರೀಕ್ಷೆ ತೆಗೆದುಕೊಳ್ಳಬಹುದು. ಪರೀಕ್ಷೆ ತುಂಬಾ ಸವಾಲಿನದ್ದಾಗಿತ್ತು. ಆರಂಭದಲ್ಲಿ ಸುಲಭ ಎನಿಸಿತು. ಆದ್ರೆ ಕೊನೆಯಲ್ಲಿ ಕಠಿಣವಾಯಿತು. ನಿಗದಿತ ಸಮಯದಲ್ಲಿ ಪರೀಕ್ಷೆ ಮುಗಿಸುವುದೇ ದೊಡ್ಡ ಸವಾಲಾಗಿತ್ತು. ಸಮಯವನ್ನ ಮ್ಯಾನೇಜ್ ಮಾಡುವ ಕೌಶಲ್ಯ ಹಾಗೂ ಸರಿಯಾದ ಉತ್ತರ ನೀಡುವುದರ ಆಧಾರದ ಮೇಲೆಯೇ ಮೌಲ್ಯಮಾಪನ ಮಾಡಲಾಗುತ್ತದೆ ಅಂತ ರಾಜಗೌರಿ ಹೇಳಿದ್ದಾಳೆ.

  • ಲಂಡನ್‍ನಲ್ಲಿ 1 ವರ್ಷದ ಮಗುವನ್ನು ಕೊಲೆ ಮಾಡಿದ ಭಾರತೀಯ ಅರೆಸ್ಟ್

    ಲಂಡನ್‍ನಲ್ಲಿ 1 ವರ್ಷದ ಮಗುವನ್ನು ಕೊಲೆ ಮಾಡಿದ ಭಾರತೀಯ ಅರೆಸ್ಟ್

    ಲಂಡನ್: ಒಂದು ವರ್ಷದ ಪುಟ್ಟ ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ಲಂಡನ್‍ನಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತ ಇವನದ್ದೇ ಎನ್ನಲಾದ 1 ವರ್ಷದ ಮಗುವನ್ನ ಕೊಲೆ ಮಾಡಿದ್ದು, ಅವಳಿ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆಂದು ಪತ್ರಿಕೆಗಳು ವರದಿ ಮಾಡಿವೆ.

    ಬಂಧಿತನನ್ನು 33 ವರ್ಷದ ಬಿದ್ಯಾ ಸಾಗರ್ ಎಂದು ಗುರುತಿಸಲಾಗಿದೆ. ಈತ ಉತ್ತರ ಲಂಡನ್ನಿನ ಫಿನ್ಸ್‍ಬರಿ ಪಾರ್ಕ್ ಪ್ರದೇಶದಲ್ಲಿ ನೆಲೆಸಿದ್ದು, ಇದೇ ಸ್ಥಳದಲ್ಲಿ ಮಕ್ಕಳ ಮೇಲೆ ದಾಳಿ ನಡೆದಿದೆ. ಆರೋಪಿಯನ್ನ ಇಲ್ಲಿಂದ 6 ಕಿ.ಮೀ ದೂರದ ಲಂಡನ್ ಬರೋ ಆಫ್ ಹ್ಯಾಕ್ನೀನಲ್ಲಿ ಬಂಧಿಸಲಾಗಿದೆ. ಈತ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೆ ಕೆಲಸ ಬಿಟ್ಟಿದ್ದ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಇದೊಂದು ಕೌಟುಂಬಿಕ ಕಲಹ ಎಂದು ಇಲ್ಲಿನ ಪೊಲೀಸರು ಹೇಳಿದ್ದಾರೆ.

    ನಡೆದಿದ್ದೇನು?: ಶನಿವಾರ ರಾತ್ರಿ ಸುಮಾರು 11 ಗಂಟೆ ವೇಳೆಯಲ್ಲಿ ಫ್ಲಾಟ್‍ನಿಂದ ಮಹಿಳೆಯೊಬ್ಬರು ಗಾಬರಿಯಿಂದ ಓಡಿಬಂದರು. ನನ್ನ ಮಕ್ಕಳು ನನ್ನ ಮಕ್ಕಳು ಎಂದು ಕಿರುಚಾಡುತ್ತಿದ್ದರು ಎಂದು ಅಕ್ಕಪಕ್ಕದ ಮನೆಯವರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ನಾವು ಶಬ್ದ ಕೇಳಿ ರೂಮಿಗೆ ಹೋದೆವು. ಗಂಡು ಮಗು ಆಗಲೇ ಸಾವನ್ನಪ್ಪಿದ್ದ. ನಮಗೆ ಗಾಬರಿಯಾಯಿತು. ಈ ರೀತಿಯ ಘಟನೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

    ಬಾಲಕನ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಲಾಗಿದೆ ಎಂದು ವರದಿಯಾಗಿದೆ.

     

  • ಅಮೆರಿಕದಲ್ಲಿ ಸಿಖ್ ಪ್ರಜೆಯ ಮೇಲೆ ಗುಂಡಿನ ದಾಳಿ

    ಅಮೆರಿಕದಲ್ಲಿ ಸಿಖ್ ಪ್ರಜೆಯ ಮೇಲೆ ಗುಂಡಿನ ದಾಳಿ

    – ದೇಶ ಬಿಟ್ಟು ಹೋಗುವಂತೆ ಘೋಷಣೆ

    ನ್ಯೂಯಾರ್ಕ್: ಅಮೆರಿಕದ ಕಾನ್ಸಾಸ್ ಹಾಗೂ ಲ್ಯಾಂಕ್ಯಾಸ್ಟರ್‍ನಲ್ಲಿ ಭಾರತೀಯ ಮೂಲದ ಇಬ್ಬರು ವ್ಯಕ್ತಿಗಳ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಇದೀಗ ಕೆಂಟ್ ನಗರದಲ್ಲಿ ಭಾರತೀಯ ಮೂಲದ ಸಿಖ್ ಪ್ರಜೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ.

    39 ವರ್ಷದ ದೀಪ್ ರೈ ಅವರ ಮನೆಯ ಹೊರಗೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಕೂಗಾಡಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

    ಇದನ್ನೂ ಓದಿ: ದುಷ್ಕರ್ಮಿಯಿಂದ ಅಮೆರಿಕ ಬಿಟ್ಟು ತೊಲಗಿ ಘೋಷಣೆ- ಗುಂಡಿಟ್ಟು ಭಾರತೀಯ ಟೆಕ್ಕಿಯ ಹತ್ಯೆ

    ಘಟನೆಯಲ್ಲಿ ದೀಪ್ ರೈ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರೋ ದೀಪ್ ರೈ, ಗುಂಡಿನ ದಾಳಿ ನಡೆಸಿದ ವ್ಯಕ್ತಿ 6 ಅಡಿ ಉದ್ದವಿದ್ದ. ಅರ್ಧ ಮುಖ ಮುಚ್ಚುವಂತೆ ಮಾಸ್ಕ್ ಧರಿಸಿದ್ದ ಎಂದು ತಿಳಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಕೆಂಟ್ ಪೊಲೀಸರು ಹೇಳಿದ್ದಾರೆ.

    ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತೀಯ ಮೂಲದ ಅಮೆರಿಕ ಪ್ರಜೆ ದೀಪ್ ರೈ ಮೇಲೆ ದಾಳಿ ನಡೆದಿರುವುದು ಕೇಳಿ ನೋವಾಯಿತು. ಅವರ ತಂದೆ ಸರ್ದಾರ್ ಹರ್ಪಲ್ ಜೊತೆ ಮಾತನಾಡಿದ್ದೇನೆ. ಅವರು ತಮ್ಮ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿಸಿದ್ದಾಗಿ ಹೇಳಿದ್ದಾರೆ.

    ಕಳೆದ ತಿಂಗಳು ಕಾನ್ಸಾಸ್‍ನಲ್ಲಿ 32 ವರ್ಷದ ಹೈದರಾಬಾದ್ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಬೊತ್ಲಾ ಅವರು ಗುಂಡಿನ ದಾಳಿಗೆ ಬಲಿಯಾಗಿದ್ದರು. ಅಲ್ಲದೆ ಗುರುವಾರದಂದು ಸೌತ್ ಕ್ಯಾರೊಲಿನಾದ ಲ್ಯಾಂಕ್ಯಾಸ್ಟರ್‍ನಲ್ಲಿ 43 ವರ್ಷದ ಹರ್ನಿಶ್ ಪಟೇಲ್ ಅವರ ಮೇಲೆ ಗುಂಡಿನ ದಾಳಿ ನಡೆದು ಸಾವನ್ನಪ್ಪಿದ್ರು.

    ಇದನ್ನೂ ಓದಿ: ಟೆಕ್ಕಿ ಆಯ್ತ, ಈಗ ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿ ಹತ್ಯೆ