Tag: Indias Defence

  • ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

    ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

    – ಹೊಸ ಶಸ್ತ್ರಾಸ್ತ್ರ ಮದ್ದುಗುಂಡು, ತಂತ್ರಜ್ಞಾನ ಸಂಶೋಧನೆಗೆ ಹಂಚಿಕೆ

    ನವದೆಹಲಿ: ‘ಆಪರೇಷನ್‌ ಸಿಂಧೂರ’ (Operation Sindoor) ಸಕ್ಸಸ್‌ ಹಿನ್ನೆಲೆ ಭಾರತ ರಕ್ಷಣಾ (India’s Defence) ವಲಯಕ್ಕೆ ಮತ್ತಷ್ಟು ಬೂಸ್ಟ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶದ ರಕ್ಷಣಾ ಬಜೆಟ್‌ 50,000 ಕೋಟಿ ರೂ.ಗೆ ಹೆಚ್ಚಳವಾಗಬಹುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

    ಪೂರಕ ಬಜೆಟ್ ಮೂಲಕ ಒದಗಿಸಲಾಗುವ ಈ ಹೆಚ್ಚಳವು ಒಟ್ಟಾರೆ ರಕ್ಷಣಾ ಹಂಚಿಕೆಯನ್ನು 7 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗುವಂತೆ ಮಾಡಲಿದೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025/26 ರ ಬಜೆಟ್‌ನಲ್ಲಿ ಸಶಸ್ತ್ರ ಪಡೆಗಳಿಗೆ ದಾಖಲೆಯ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಈ ವರ್ಷದ ಹಂಚಿಕೆಯು 2024/25 ರಲ್ಲಿನ 6.22 ಲಕ್ಷ ಕೋಟಿ ರೂ.ನಿಂದ ಶೇಕಡಾ 9.2 ರಷ್ಟು ಗಮನಾರ್ಹ ಹೆಚ್ಚಳವಾಗಿದೆ.

    ಹೆಚ್ಚಿದ ಬಜೆಟ್ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು. ಅನುದಾನವನ್ನು ಸಂಶೋಧನೆ, ಅಭಿವೃದ್ಧಿ ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಅಗತ್ಯ ಉಪಕರಣಗಳ ಖರೀದಿಗೆ ಬಳಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

    2014 ರಿಂದ ನರೇಂದ್ರ ಮೋದಿ ಆಡಳಿತದ ಕೇಂದ್ರಬಿಂದು ರಕ್ಷಣೆಯಾಗಿದೆ. ಬಿಜೆಪಿ ಸರ್ಕಾರದ ಮೊದಲ ವರ್ಷವಾದ 2014/15 ರಲ್ಲಿ ರಕ್ಷಣಾ ಸಚಿವಾಲಯಕ್ಕೆ 2.29 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿತ್ತು. ಪ್ರಸ್ತುತ ಹಂಚಿಕೆಯು ಎಲ್ಲಾ ಸಚಿವಾಲಯಗಳಿಗಿಂತ ಅತ್ಯಧಿಕವಾಗಿದ್ದು, ಒಟ್ಟು ಬಜೆಟ್‌ನ ಶೇ. 13 ರಷ್ಟಿದೆ.

    ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ, ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆ, ಆಪರೇಷನ್ ಸಿಂಧೂರ, ಪಾಕ್ ಜೊತೆಗಿನ ಉದ್ವಿಗ್ನತೆ ಮೊದಲಾದ ಬೆಳವಣಿಗೆಗಳ ಮಧ್ಯೆ ಭಾರತದ ರಕ್ಷಣಾ ಸನ್ನದ್ಧತೆ ಮತ್ತು ಬಜೆಟ್ ಹಂಚಿಕೆ ಹೆಚ್ಚಾಗಿದೆ. ಇದನ್ನೂ ಓದಿ: ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

    ಇಸ್ರೇಲ್‌ನ ಪ್ರಸಿದ್ಧ ‘ಐರನ್ ಡೋಮ್’ಗೆ ಹೋಲಿಸಬಹುದಾದ ಮುಂದುವರಿದ ವಾಯು ರಕ್ಷಣಾ ವ್ಯವಸ್ಥೆಗಳೊಂದಿಗೆ ಭಾರತೀಯ ಸೇನೆಯ ಪ್ರಬಲ ಸಿನರ್ಜಿ – ಯುದ್ಧತಂತ್ರದ ಚಾತುರ್ಯವನ್ನು ಆಪರೇಷನ್ ಸಿಂಧೂರ ಹೈಲೈಟ್ ಮಾಡಿದೆ. ಆಕಾಶ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಸೇರಿದಂತೆ ಆ ಜಾಲದಲ್ಲಿನ ಸ್ವದೇಶಿ ಉಪಕರಣಗಳ ಮೇಲೆಯೂ ಕೇಂದ್ರೀಕರಿಸಿದೆ.

  • ಮೇ 11ರಂದು ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ – ಪಾಕ್‌ಗೆ ಶುರುವಾಯ್ತು ನಡುಕ

    ಮೇ 11ರಂದು ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ – ಪಾಕ್‌ಗೆ ಶುರುವಾಯ್ತು ನಡುಕ

    ನವದೆಹಲಿ: ಭಾರತದ ʻಆಪರೇಷನ್‌ ಸಿಂಧೂರʼಕ್ಕೆ (Operation Sindoor) ತತ್ತರಿಸಿರುವ ಪಾಕ್‌ ಪ್ರತಿದಾಳಿಗೆ ಹೊಂಚು ಹಾಕಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ದೇಶದ ಕಾರ್ಯತಂತ್ರ ಸಾಮರ್ಥ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತ ಬಹುದೊಡ್ಡ ಹೆಜ್ಜೆಯನ್ನಿಟ್ಟಿದೆ. ಶಕ್ತಿಶಾಲಿ ಅಸ್ತ್ರವಾದ ಬ್ರಹ್ಮೋಸ್‌ ಕ್ಷಿಪಣಿ ಉತ್ಪಾದನಾ ಘಟಕ (BrahMos Missile Manufacturing Unit) ಲಕ್ನೋದಲ್ಲಿ ತಲೆಎತ್ತಿದ್ದು, ಮೇ 11ರಂದು ಉದ್ಘಾಟಿಲಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

    ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ʻಬ್ರಹ್ಮೋಸ್ʼ ವಿಶ್ವದ ಅತ್ಯಂತ ವೇಗದ ಮತ್ತು ವಿನಾಶಕಾರಿ ಕ್ಷಿಪಣಿಗಳಲ್ಲಿ ಒಂದಾಗಿದೆ ಎಂಬುದೇ ವಿಶೇಷ. ಹಾಗಾಗಿ ಕ್ಷಿಪಣಿ ಉತ್ಪಾದನಾ ಘಟಕವು ಉತ್ತರ ಪ್ರದೇಶದ ರಕ್ಷಣಾ ವಲಯಕ್ಕೆ ಮಾತ್ರವಲ್ಲದೇ, ಇಡೀ ಭಾರತದ ರಕ್ಷಣಾ ವಲಯಕ್ಕೆ ಬಲ ತುಂಬಲಿದೆ. ಇದನ್ನೂ ಓದಿ: ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

    ಇದು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ ಸರ್ಕಾರಿ ಸಂಸ್ಥೆ NPO ಮಶಿನೋಸ್ಟ್ರೋನಿನ್ಯಾ ನಡುವಿನ ಜಂಟಿ ಉದ್ಯಮವಾಗಿದೆ. ಇದರಲ್ಲಿ ಭಾರತದ ಪಾಲು ಶೇ.50.5 ಮತ್ತು ರಷ್ಯಾದ ಪಾಲು ಶೇ.49.5 ರಷ್ಟಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬದ 10 ಜನ ಸೇರಿ 14 ಮಂದಿ ಹತ್ಯೆ

    ಈ ಕುರಿತು ಮಾಹಿತಿ ನೀಡಿರುವ UPEIDAನ ಹೆಚ್ಚುವರಿ ಸಿಇಓ ಹರಿ ಪ್ರತಾಪ್ ಶಾಹಿ (Shrihari Pratap Shahi), ಈ ಘಟಕವನ್ನು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದಕ್ಕಾಗಿ ಯುಪಿ ರಾಜ್ಯ ಸರ್ಕಾರವು ಲಕ್ನೋದಲ್ಲಿ 80 ಹೆಕ್ಟೇರ್‌ ಭೂಮಿಯನ್ನು ಉಚಿತವಾಗಿ ನೀಡಿದೆ. ಸುಮಾರು ಮೂರು ವರ್ಷಗಳ ದಾಖಲೆ ಸಮಯದ ಬಳಿಕ ಘಟಕ ನಿರ್ಮಾಣ ಪೂರ್ಣಗೊಂಡಿದ್ದು, ರಾಜ್ಯದ ಮೊದಲ ಹೈಟೆಕ್ ರಕ್ಷಣಾ ಉತ್ಪಾದನಾ ಕೇಂದ್ರ ಇದಾಗಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: Operation Sindoor – ಪಾಕ್‌ ಉಗ್ರರ 9 ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

    ಮುಂದುವರಿದು… ಈ ಘಟಕದಲ್ಲಿ ಬ್ರಹ್ಮೋಸ್‌ ಕ್ಷಿಪಣಿ ಜೊತೆಗೆ ಇತರ ರಕ್ಷಣಾ ಉತ್ಪನ್ನಗಳು ಹಾಗೂ ಏರೋಸ್ಪೇಸ್ ತಂತ್ರಜ್ಞಾನಕ್ಕೆ ಸಂಬಂಧಿಸಿದ ಉಪಕರಣಗಳನ್ನೂ ತಯಾರಿಸಲಾಗುತ್ತದೆ. ಸುಮಾರು 500 ಮುಖ್ಯ ಇಂಜಿನಿಯರ್‌ಗಳು ಮತ್ತು ತಾಂತ್ರಿಕ ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದು, ಸಾವಿರಾರು ಮಂದಿ ಸಹ ಸಿಬ್ಬಂದಿಗಳೂ ಸಹ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ʼಆಪರೇಷನ್‌ ಸಿಂಧೂರ್‌ʼ ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಸೇರಿ ಹಲವರಿಂದ ಅರ್ಜಿ 

    ಪಾಕ್‌ಗೆ ಏಕೆ ನಡುಕ?
    2022ರ ಮಾರ್ಚ್‌ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್‌ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್‌ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸದೇ ಇದ್ದರೂ ಈ ಕ್ಷಿಪಣಿಯನ್ನು ತಡೆಯಲು ಪಾಕಿಸ್ತಾನದಿಂದ ಸಾಧ್ಯವಾಗಿರಲಿಲ್ಲ. ಇದೀಗ ಯುದ್ಧದ ಛಾಯೆ ಕವಿದಿರುವ ಹೊತ್ತಿನಲ್ಲೇ ಭಾರತ ಬ್ರಹ್ಮೋಸ್‌ ಕ್ಷಿಪಣಿ ಘಟಕ ಉದ್ಘಾಟಿಸುತ್ತಿರುವುದು ಪಾಕ್‌ಗೆ ನಡುಕ ಉಂಟಾಗುವಂತೆ ಮಾಡಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?