Tag: Indira Canteen

  • BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    ಬೆಂಗಳೂರು: ಬಡವರ ಹಸಿವು ನೀಗಿಸಲು, ಕೈಗೆಟಕುವ ದರದಲ್ಲಿ ಆಹಾರ ಸಿಗುವಂತಾಗಲು ಮತ್ತೆ ಹೊಸ 50 ಇಂದಿರಾ ಕ್ಯಾಂಟೀನ್‌ಗಳು‌ (Indira Canteen) ಬೆಂಗಳೂರಿನಲ್ಲಿ (Bengaluru) ತಲೆ ಎತ್ತಲಿವೆ.

    ಬಿಬಿಎಂಪಿ ಬಜೆಟ್‌ನಲ್ಲಿ (BBMP Budget) ಘೋಷಿಸಿದ ಈ ಹೊಸ ಇಂದಿರಾ ಕ್ಯಾಂಟೀನ್‌ಗಳು ಸ್ಥಿರ ಅಥವಾ ಮೊಬೈಲ್ ಮೋಡ್‌ನಲ್ಲಿ ಸ್ಥಾಪನೆಯಾಗಲಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ವರ್ಷ ಹೊಸದಾಗಿ ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ. ಇಂದಿರಾ ಕ್ಯಾಂಟೀನ್‌ಗಳಿಗಾಗಿ ಈ ವರ್ಷದ ಬಜೆಟ್‌ನಲ್ಲಿ ಒಟ್ಟು 70 ಕೋಟಿ ರೂ.ಗಳನ್ನು ನೀಡಲಾಗಿದೆ. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಬ್ರ‍್ಯಾಂಡ್ ಬೆಂಗಳೂರು- ಆರೋಗ್ಯಕರ ಬೆಂಗಳೂರು – ಆರೋಗ್ಯ ಕ್ಷೇತ್ರಕ್ಕೇನು ಸಿಕ್ತು?
    – ಬೆಂಗಳೂರಿನಲ್ಲಿ ಆರೋಗ್ಯ ಸೇವೆ ಉನ್ನತೀಕರಣಕ್ಕೆ ಮುಂದಿನ 2 ವರ್ಷದಲ್ಲಿ 200 ಕೋಟಿ ರೂ. ವೆಚ್ಚ. ಇದರಲ್ಲಿ ಈ ವರ್ಷ 100 ಕೋಟಿ ರೂ.ಗಳ ಯೋಜನೆ ಶುರು.
    – ಬೆಂಗಳೂರು ಆರೋಗ್ಯ ಆಯುಕ್ತ ಹೊಸ ಹುದ್ದೆ ಸೃಷ್ಟಿ.
    – 144 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 225 ನಮ್ಮ ಕ್ಲಿನಿಕ್, 27 ಹೆರಿಗೆ ಆಸ್ಪತ್ರೆ, 7 ಫಸ್ಟ್ ರೆಫರಲ್ ಯೂನಿಟ್ ನಿರ್ವಹಣೆಗೆ 20 ಕೋಟಿ ರೂ.
    – ಸಮಗ್ರ ಸದೃಢ ಆರೋಗ್ಯ ಯೋಜನೆಯಡಿ ಮುಂದಿನ 3 ವರ್ಷಕ್ಕೆ ಸಮಗ್ರ ಯೋಜನೆ
    – ಇದರ ಅಡಿಯಲ್ಲಿ 40 ಹೊಸ ನಗರ ಪ್ರಾಥಮಿಕ ಕೇಂದ್ರ ನಿರ್ಮಾಣ ಮತ್ತು 81 ಪ್ರಾಥಮಿಕ ಆರೋಗ್ಯ ಕೇಂದ್ರ ನವೀಕರಣಕ್ಕೆ ಒಟ್ಟು 64 ಕೋಟಿ ರೂ.
    – 24 ಹೆರಿಗೆ ಆಸ್ಪತ್ರೆಗಳು ಮತ್ತು ರೆಫರಲ್ ಘಟಕಗಳಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ 24 ಕೋಟಿ ರೂ.
    – ಈ ವರ್ಷ 27 ಉಚಿತ ಫಿಸಿಯೋಥೆರಪಿ ಕೇಂದ್ರಗಳ ಸ್ಥಾಪನೆ.
    – ಎಲೆಕ್ಟ್ರಿಕ್ ವಾಹನದಲ್ಲಿ ಮನೆ ಬಾಗಿಲಿನಲ್ಲೇ ಚುಚ್ಚುಮದ್ದು ಹಾಕಿಸುವ ಆರೋಗ್ಯ ಸಾರಥಿ ಯೋಜನೆ.
    – ನಮ್ಮ ಕ್ಲಿನಿಕ್‌ಗಳ 100 ಪ್ರಯೋಗಾಲಯಗಳಲ್ಲಿ ಇನ್ನೂ ಹೆಚ್ಚಿನ 20 ವಿವಿಧ ಚಿಕಿತ್ಸಾ ಸಂಬಂಧಿತ ಪರೀಕ್ಷೆ.
    – 14 ಅತ್ಯಾಧುನಿಕ ಜೀವ ರಕ್ಷಕ ಅಂಬುಲೆನ್ಸ್ ಖರೀದಿ.
    – ಈ ಎಲ್ಲಾ ಕಾರ್ಯಗಳಿಗೆ ಈ ವರ್ಷ 25 ಕೋಟಿ ರೂ. ಅನುದಾನ.
    – ವಿಶೇಷ ಚೇತನ ಮಕ್ಕಳಿಗೆ ದಿನದ ಆರೈಕೆ ಕೇಂದ್ರ ಸ್ಥಾಪನೆಗೆ 1 ಕೋಟಿ ರೂ.
    – ಪಾಲಿಕೆಯ ಆಂತರಿಕ ವೈದ್ಯರ ತಂಡ ಹಾಗೂ ಕ್ಷೇತ್ರ ತಜ್ಞರ ಸಹಾಯದಿಂದ ಮನೋಬಿಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಸಂವಾದ.
    – ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ರುದ್ರಭೂಮಿ, ಚಿತಾಗಾರ ನಿರ್ಮಾಣ. ರುದ್ರಭೂಮಿ ಹಾಗೂ ಚಿತಾಗಾರ ಉನ್ನತೀಕರಿಸಲು 15 ಕೋಟಿ ರೂ.
    – ಶುಚಿಯಾದ ಮಾಂಸದ ಬೇಡಿಕೆ ಈಡೇರಿಕೆ ಹಾಗೂ ಪೂರೈಕೆಗೆ 2 ವಲಯಗಳಲ್ಲಿ ಆಧುನಿಕ ಕಸಾಯಿಖಾನೆ ನಿರ್ಮಾಣ. ಪ್ರಾಣಿಗಳ ತ್ಯಾಜ್ಯ ವಿಲೇವಾರಿಗಾಗಿ 4 ಘಟಕ ನಿರ್ಮಾಣಕ್ಕೆ ಒಟ್ಟು 10 ಕೋಟಿ ರೂ. ನೀಡಲಾಗಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

  • ಇಂದಿರಾ ಕ್ಯಾಂಟೀನ್‍ಗೆ ಕೋಟಿ ಕೋಟಿ ಅನುದಾನ ಬಾಕಿ – ಬಳ್ಳಾರಿಯಲ್ಲಿ ಸಿಎಂ ಕನಸಿನ ಯೋಜನೆ ಬಂದ್

    ಇಂದಿರಾ ಕ್ಯಾಂಟೀನ್‍ಗೆ ಕೋಟಿ ಕೋಟಿ ಅನುದಾನ ಬಾಕಿ – ಬಳ್ಳಾರಿಯಲ್ಲಿ ಸಿಎಂ ಕನಸಿನ ಯೋಜನೆ ಬಂದ್

    ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ಗ್ಯಾರಂಟಿ ಎಫೆಕ್ಟ್‌ನಿಂದ ಹಳ್ಳ ಹಿಡಿಯುತ್ತಿರುವ ಬಗ್ಗೆ ಅನುಮಾನ ಮೂಡುತ್ತಿದೆ. ಬಡವರಿಗೆ, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿ ಎಂದು ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ತೆರೆದಿತ್ತು. ಇದೀಗ ಸರ್ಕಾರ ಬಾಕಿ ಬಿಲ್ ಪಾವತಿಸದ ಹಿನ್ನೆಲೆ ಬಳ್ಳಾರಿ (Ballari) ನಗರದಲ್ಲಿ 5 ಇಂದಿರಾ ಕ್ಯಾಂಟೀನ್‍ಗಳು (Indira Canteen) ಬಂದ್ ಆಗಿದೆ.

    ಬಡವರಿಗೆ ಕಡಿಮೆ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಈಗ ಅದೇ ಸರ್ಕಾರದ ಆಡಳಿತಾವಧಿಯಲ್ಲಿ ಅನುದಾನ ಕೊರತೆಯಿಂದ ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳ ಹಿಡಿದಂತಾಗಿದೆ. ನಿರ್ವಾಹಣೆ ಪಡೆದ ಏಜೆನ್ಸಿಗಳಿಗೆ ಕಳೆದ ಮೂರು ವರ್ಷಗಳಿಂದಲೂ ಅನುದಾನವೇ ಬಿಡುಗಡೆಯಾಗಿಲ್ಲ. 2019 ಅಕ್ಟೋಬರ್‍ನಿಂದ ಈ ವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಸುಮಾರು 3.38 ಕೋಟಿ ರೂ. ಬಾಕಿ ಮೊತ್ತವನ್ನ ಸರ್ಕಾರ ಇರಿಸಿಕೊಂಡಿದೆ. ಈ ಕುರಿತು ಸಾಕಷ್ಟು ಬಾರಿ ಏಜೆನ್ಸಿಗಳು ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: ‘ಭಾರತ್ ರೈಸ್’ಗೆ ಮುಗಿಬಿದ್ದ ಜನ- ಅರ್ಧಗಂಟೆಯಲ್ಲಿ 1 ಟನ್ ಅಕ್ಕಿ ಸೋಲ್ಡ್ ಔಟ್

    ಒಟ್ಟು ಎಂಟು ಕ್ಯಾಂಟೀನ್‍ಗಳು ಸೇರಿದಂತೆ 4.5 ಕೋಟಿ ರೂ. ಬಿಲ್ ಬಾಕಿ ಇದೆ. ಪ್ರತಿ ತಿಂಗಳ ಕ್ಯಾಂಟಿನ್ ನಿರ್ವಹಣೆಗೆ ಸುಮಾರು 10 ಲಕ್ಷ ರೂ.ಗಳಿಗೂ ಅಧಿಕ ಹಣ ವ್ಯಯಿಸಬೇಕಿದೆ. ಇದೇ ಕಾರಣಕ್ಕೆ, ಇಂದಿರಾ ಕ್ಯಾಂಟಿನ್ ನಿರ್ವಹಣೆ ವಹಿಸಿಕೊಂಡಿದ್ದ ಎಜೆನ್ಸಿಗಳು ತರಕಾರಿ, ಗ್ಯಾಸ್, ಸಿಬ್ಬಂದಿಗೂ ಕೊಡಲು ಹಣವಿಲ್ಲದೆ ಈಗ ಬಂದ್ ಮಾಡಿದ್ದಾರೆ. ನಗರದ ಮೋತಿ ಸರ್ಕಲ್, ಜಿಲ್ಲಾ ಆಸ್ಪತ್ರೆ, ಎಪಿಎಂಸಿ, ವಿಮ್ಸ್‌ನಲ್ಲಿರುವ ಐದು ಕ್ಯಾಂಟೀನ್‍ಗಳನ್ನು ಬಂದ್ ಮಾಡಲಾಗಿದೆ.

    ಬಂದ್ ಆಗಿರುವ ಬಳ್ಳಾರಿ ನಗರದ ಐದು ಕ್ಯಾಂಟಿನ್‍ಗಳಲ್ಲಿ ಪ್ರತಿನಿತ್ಯ ಸಾವಿರಾರು ಜನ ಮುಂಜಾನೆ ಉಪಹಾರ, ಮಧ್ಯಾಹ್ನ ಊಟ ಮಾಡುತ್ತಿದ್ದರು. ಆದಷ್ಟು ಬೇಗ ಕ್ಯಾಂಟೀನ್ ತೆರೆಯಬೇಕು ಎಂಬುದು ಜನರ ಒತ್ತಾಯ. ಇದನ್ನೂ ಓದಿ: ಬೆಳಗಾವಿಯ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ ವಿರುದ್ಧ FIR

  • ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

    ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

    – ಕ್ಯಾಂಟಿನ್ ಓಪನ್ ಮಾಡದಿದ್ರೂ ಪುಸ್ತಕದಲ್ಲಿದೆ ಊಟ-ತಿಂಡಿ ಲೆಕ್ಕ

    ಮೈಸೂರು: ಸಿಎಂ ಕನಸಿನ ಯೋಜನೆ ಇಂದಿರಾ ಕ್ಯಾಂಟಿನ್‌ಗೆ (Indira Canteen) ಸಿಎಂ ತವರಲ್ಲೇ ಬ್ರೇಕ್ ಬಿದ್ದಿದೆ. ಅದು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ (Tanveer Sait) ಪ್ರತಿನಿಧಿಸಿರುವ ನರಸಿಂಹರಾಜ ಕ್ಷೇತ್ರದಲ್ಲೇ ಕ್ಯಾಂಟೀನ್‌ಗಳಿಗೆ ಬ್ರೇಕ್‌ ಹಾಕಿರುವುದು ಅಚ್ಚರಿಯ ಸಂಗತಿ.

    ಮೈಸೂರಿನ (Mysuru) ನರಸಿಂಹರಾಜ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟಿನ್ ಗಳು ನಿಷ್ಕ್ರಿಯಗೊಂಡಿವೆ. ಬನ್ನಿಮಂಟಪದ ಜೋಡಿ ತೆಂಗಿನಮರ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಮುಚ್ಚಿ ಹೋಗಿದೆ. ಲಕ್ಷಾಂತರ ರೂಪಾಯಿ ವ್ಯಯಿಸಿ ಕ್ಯಾಂಟಿನ್ ನಿರ್ಮಾಣ ಮಾಡಿದ್ರೂ ಜನರಿಗೆ ಪ್ರಯೋಜನವಾಗುತ್ತಿಲ್ಲ. ಕ್ಯಾಂಟೀನ್ ಸುತ್ತಲು ಗಿಡಗಂಟಿಗಳು ಬೆಳೆದುಕೊಂಡಿವೆ. ಕ್ಯಾಂಟೀನ್‌ನ ಕಿಟಕಿ, ಬಾಗಿಲುಗಳು ಮುರಿದ ಸ್ಥಿತಿಯಲ್ಲಿವೆ. ಬಡವರು ವಾಸಿಸುವ ಸ್ಥಳದಲ್ಲೇ ಕ್ಯಾಂಟೀನ್ ನಿರ್ಮಾಣಗೊಂಡಿದ್ದರೂ ಉಪಯೋಗಕ್ಕೆ ಬಾರದಂತಾಗಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

    ʻಪಬ್ಲಿಕ್ ಟಿವಿʼ ಬಿಗ್ ಇಂಪ್ಯಾಕ್ಟ್: ನರಸಿಂಹರಾಜ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್‌ ಆವರಣದಲ್ಲಿ ಅಶುಚಿತ್ವ ತಾಂಡವವಾಡುತ್ತಿರುವ ಬಗ್ಗೆ ಪಬ್ಲಿಕ್‌ ಟಿವಿ ವರದಿ ಬಿತ್ತರಿಸಿತ್ತು. ವರದಿ ಬಿತ್ತರಿಸಿದ ಕೆಲವೇ ಕ್ಷಣಗಳಲ್ಲಿ ಎಚ್ಚೆತ್ತ ಪಾಲಿಕೆ ಅಧಿಕಾರಿಗೂ (Mysore City Corporation Officers) ಇಂದಿರಾ ಕ್ಯಾಂಟಿನ್ ಹೊರ ಆವರಣ ಮತ್ತು ಒಳ ಆವರಣದ ಸ್ವಚ್ಚತೆ ಮಾಡಿಸಲು ಮುಂದಾಗಿದ್ದಾರೆ. ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳೇ ಈ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬಯಲಾಯ್ತು ಕಳ್ಳ ಲೆಕ್ಕ: ಮೈಸೂರಿನ ಎನ್.ಆರ್. ಕ್ಷೇತ್ರದ ಜೋಡಿ ತೆಂಗಿನ ಮರ ರಸ್ತೆಯಲ್ಲಿರೋ ಇಂದಿರಾ ಕ್ಯಾಂಟಿನ್ ಮುಚ್ಚಿ 6 ತಿಂಗಳಾಗಿದೆ. ಆದ್ರೆ ಇಂದಿರಾ ಕ್ಯಾಂಟಿನ್‌ನ ಫುಡ್‌ ರಿಜಿಸ್ಟರ್ ಪುಸ್ತಕದಲ್ಲಿ ಮಾತ್ರ ಇಂದಿನವರೆಗೂ ಊಟ-ತಿಂಡಿ ಕೊಟ್ಟಿದ್ದೇವೆ ಎಂಬ ಲೆಕ್ಕ ಬರೆಯಲಾಗಿದೆ. ಅಲ್ಲಿಗೆ ಕಳ್ಳ ಲೆಕ್ಕ ಇದು ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.

  • ಬೆಂಗ್ಳೂರಿನ ಅರ್ಧದಷ್ಟು ಇಂದಿರಾ ಕ್ಯಾಂಟೀನ್‍ಗಳಲ್ಲಿ ಸಿಗ್ತಿಲ್ಲ ಇಡ್ಲಿ!

    ಬೆಂಗ್ಳೂರಿನ ಅರ್ಧದಷ್ಟು ಇಂದಿರಾ ಕ್ಯಾಂಟೀನ್‍ಗಳಲ್ಲಿ ಸಿಗ್ತಿಲ್ಲ ಇಡ್ಲಿ!

    ಬೆಂಗಳೂರು: ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಗಳ ಮತ್ತೊಂದು ಅವ್ಯವಸ್ಥೆಯಿದು. ಅರ್ಧ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ (Indira Canteen) ಇಡ್ಲಿ ಸೇರಿ ಕೆಲ ಉಪಹಾರವನ್ನ ನಿಲ್ಲಿಸಲಾಗಿದೆ.

    ಕೆ.ಆರ್ ಸಮೀಪದ ಎಸ್ ಪಿ ರಸ್ತೆಯಲ್ಲಿರೋ ಇಂದಿರಾ ಕಿಚನ್ ನಲ್ಲಿ ಇಡ್ಲಿ (Idli) ಸೇರಿ ಕೆಲ ಉಪಹಾವನ್ನ ತಯಾರಿಸುವ ಯಂತ್ರೋಪಕರಣಗಳು ಹಳೆಯದಾಗಿ, ಹಾಳಾಗಿವೆ. ಹೀಗಾಗಿ ಇಂದಿರಾ ಕ್ಯಾಂಟೀನ್ ಗಳಿಗೆ ಇಡ್ಲಿ ಸಪ್ಲೈ ಆಗ್ತಿಲ್ಲ. ಇನ್ನೂ ಕೆಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಊಟ ಸಪ್ಲೈ ಆಗ್ತಿದೆ. ಇತ್ತ ವಿಶ್ವೇಶ್ವಪುರಂ ವಾರ್ಡ್ 174 ರ ಇಂದಿರಾ ಕ್ಯಾಂಟೀನ್ ನಲ್ಲಿ ಇಡ್ಲಿ ಕೇಳಿದ ಗ್ರಾಹಕರ ಮೇಲೆ ಅಲ್ಲಿನ ಸಿಬ್ಬಂದಿಯೊಬ್ಬರು ದರ್ಪ ಮೆರೆದಿದ್ದಾರೆ. ಇಡ್ಲಿ ಸಿಗಲ್ಲ, ನಾವು ಕೊಟ್ಟಾಗಷ್ಟೆ ತಿನ್ನಬೇಕು. ಬೇಕಿದ್ರೆ ಪಕ್ಕದಲ್ಲೇ ಖಾಸಗಿ ಹೊಟೇಲ್ ಇದೆ. ಅಲ್ಲಿಗೆ ಹೋಗ್ರಿ ಅಂತ ಧಿಮಾಕು ತೋರಿಸ್ತಿದ್ದ ಅಸಾಮಿಯ ನಿಜ ಬಣ್ಣ ಪಬ್ಲಿಕ್ ಕ್ಯಾಮರಾದಲ್ಲಿ ಲಾಕ್ ಆಗಿದೆ.

    ಎರಡ್ಮೂರು ತಿಂಗಳಿನಿಂದ ಇಂದಿರಾ ಕ್ಯಾಂಟೀನ್ ಗಳಲ್ಲಿ ಬೆಳಗ್ಗಿನ ಸಮಯದಲ್ಲಿ ತಿಂಡಿ, ರಾತ್ರಿ ಹೊತ್ತಲ್ಲಿ ಊಟ ಸಿಗ್ತಿಲ್ಲ. ಇಂದಿರಾ ಕ್ಯಾಂಟೀನ್ ಗಳಿಗೆ ಊಟ ಸಪ್ಲೈ ಮಾಡೋಕೆ ಟೆಂಡರ್ ಪಡೆದಿದ್ದ ಮೂರು ಕಂಪನಿಗಳಿಗೆ ಬಿಬಿಎಂಪಿ ಹಣ ನೀಡಿಲ್ಲ. ಅಡ್ವಾನ್ಸ್ ಆಗಿ ಶೇ. 50% ರಷ್ಟು ಹಣವನ್ನ ನೀಡಬೇಕಿತ್ತು. ಈ ಹಣವನ್ನ ನೀಡದ ಕಾರಣ ಕ್ವಾಲಿಟಿ ಊಟ ಹಾಗೂ ಟೈಂ ಟು ಟೈಂ ಊಟ ತಲುಪಿಸೋಕೆ ಟೆಂಡರ್ ಪಡೆದ ಕಂಪನಿಗಳಿಗೂ ಆಗ್ತಿಲ್ಲ. ಇದನ್ನೂ ಓದಿ: ಶಕ್ತಿ-ನಿಶ್ಯಕ್ತಿ, ಅನ್ನಭಾಗ್ಯ-ಕನ್ನಭಾಗ್ಯ, ಗೃಹ ಜ್ಯೋತಿ-ಪ್ರತಿ ಮನೆಗಳಲ್ಲೂ ಕಗ್ಗತ್ತಲು – ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಬಿಜೆಪಿ ಲೇವಡಿ

    ಈ ಬಗ್ಗೆ ಕೇಳಿದ್ರೆ ಇಂದಿರಾ ಕ್ಯಾಂಟೀನ್ ಉಸ್ತುವಾರಿ ತ್ರಿಲೋಕ್ ಚಂದ್ರ, ಲೋಗೋ ತಳ್ಳಿ ನಾವೇನು ಮಾಡೋಕೆ ಆಗುತ್ತೆ ಎಂದು ಜಾರಿಕೊಳ್ಳಲು ನೋಡಿದ್ದಾರೆ.. ಇನ್ನು, ನ್ಯೂನ್ಯತೆ ಸರಿಪಡಿಸೋದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದ್ದಾರೆ.

  • ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್

    ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್

    – ಸಿಸಿಟಿವಿ ಫೂಟೇಜ್, ಫೋನ್ ಕಾಲ್ ಆಡಿಯೋ ರೆಕಾರ್ಡ್ ಎಲ್ಲಾ ಸಾಕ್ಷಿ ಇದೆ

    ಬೆಂಗಳೂರು: ಚೈತ್ರಾ (Chaitra Kundapur) ವಿರುದ್ಧ ಸಿಸಿಟಿವಿ ಪೂಟೇಜ್, ಫೋನ್ ಸಂಭಾಷಣೆ ಆಡಿಯೋ ರೆಕಾರ್ಡ್ ಎಲ್ಲಾ ಸಾಕ್ಷಿಗಳೂ ಇದೆ. ಪ್ರಕರಣ ಹೊರಗೆ ಬಂದರೆ ಸರಿಯಿರಲ್ಲ, ನನಗೆ ಅಂಡರ್ ವರ್ಲ್ಡ್ ಪರಿಚಯವಿದೆ ಎಂದು ಬೆದರಿಕೆ ಹಾಕಿದ್ದು ಮಾತ್ರವಲ್ಲದೇ ಕಚೇರಿಗೆ ಬಂದು ಸೂಸೈಡ್ ಮಾಡಿಕೊಳ್ಳೋ ಬೆದರಿಕೆ ಕೂಡಾ ಹಾಕಿದ್ರು ಎಂದು ದೂರುದಾರ ಗೋವಿಂದ ಬಾಬು ಪೂಜಾರಿ (Govinda Babu Poojari) ಆಪ್ತ ರಕ್ಷಿತ್ ಶೆಟ್ಟಿ (Rakshit Shetty) ತಿಳಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ಅವರು, ಚೈತ್ರಾ ಬೆದರಿಕೆ ಹಾಕಿರೋದು, ಬ್ಲಾಕ್ ಮೇಲ್ ಮಾಡಿರೋದು, ತಪ್ಪೊಪ್ಪಿಗೆ ಮಾಡಿಕೊಂಡಿದ್ದು ಎಲ್ಲವೂ ಆಡಿಯೋ ರೆಕಾರ್ಡ್ ಹಾಗೂ ಸಿಸಿಟಿವಿ ದಾಖಲೆಗಳು ಇವೆ. ಚೈತ್ರಾ ಈ ವಿಚಾರದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಪ್ರಕರಣ ಏನಾದ್ರೂ ಹೊರಗೆ ಬಂದರೆ ಸರಿಯಿರಲ್ಲ, ನಂಗೆ ಅಂಡರ್ ವರ್ಲ್ಡ್ ನಲ್ಲಿಯೂ ಪರಿಚಯ ಇದ್ದಾರೆ ಎಂದು ಆರಂಭದಲ್ಲಿ ಗೋವಿಂದ ಬಾಬು ಪೂಜಾರಿಗೆ ಬೆದರಿಕೆ ಹಾಕಿದ್ದರು. ಅದಾದ ಬಳಿಕ ಕಚೇರಿಗೆ ಬಂದು ಸೂಸೈಡ್ ಮಾಡ್ತೀನಿ ಅಂತ ಕಣ್ಣೀರು ಹಾಕಿದ್ರು ಎಂದು ತಿಳಿಸಿದ್ದಾರೆ.

    ಚೈತ್ರಾ ಹಾಗೂ ಗೋವಿಂದ ಬಾಬು ಪೂಜಾರಿ ಅವರ ನಡುವಿನ ಮಾತುಕತೆ, ಚೈತ್ರಾ ಆತ್ಮಹತ್ಯೆ ಬೆದರಿಕೆ ಎಲ್ಲವನ್ನು ನಾನು ಖುದ್ದು ಆಡಿಯೋ ಕೇಳಿಸಿಕೊಂಡಿದ್ದೇನೆ. ಅರ್ಧ ದುಡ್ಡು ಅಂದ್ರೆ 1 ಕೋಟಿ 70 ಲಕ್ಷ ರೂ. ವಾಪಸ್ ಕೊಡ್ತೀನಿ ಅಂತ ಹೇಳಿ ಮೋಸ ಮಾಡಿದ್ದು ನಿಜ ಅಂತ ಕಚೇರಿಗೆ ಬಂದು ಕಣ್ಣೀರು ಹಾಕಿದ್ದರು. ಇದೆಲ್ಲದರ ಸಿಸಿ ಟಿವಿ ಫೂಟೇಜ್ ಆಡಿಯೋ ರೆಕಾರ್ಡ್ ಇದೆ. ಚೈತ್ರಾ ಬೇರೆಯವರಲ್ಲ. ಅದರೆ ಹಿಂದುತ್ವ, ಹಿಂದೂ ಎಂದು ಹೀಗೆಲ್ಲಾ ಯಾಮಾರಿಸ್ತಾರೆ ಎಂದರೆ ಖಂಡಿತಾ ತಪ್ಪು ಎಂದು ಹೇಳಿಕೆ ನೀಡಿದರು. ಈ ಬಗ್ಗೆ ರಕ್ಷಿತ್ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಬೈಂದೂರು ರಾಜಕೀಯದಲ್ಲಿ ನಾವೊಂದಿಷ್ಟು ಜನ ಸಕ್ರಿಯರಾಗಿರುವುದರಿಂದ ನನಗೆ ಟಿಕೆಟ್‌ಗಾಗಿ ಹಣ ಪಡೆದ ಕೇಸ್‌ನ ಬಗ್ಗೆ ಒಂದಿಷ್ಟು ನಿಖರವಾದ ಮಾಹಿತಿ ಗೊತ್ತಿದೆ. ಇಷ್ಟೆಲ್ಲಾ ಮುಗಿದು ಪೋಲಿಸರ ಕಸ್ಟಡಿಯಲ್ಲಿರುವ ತಂಡ ಇನ್ನು ನಮ್ಮದೇನು ತಪ್ಪಿಲ್ಲ. ಇಂದಿರಾ ಕ್ಯಾಂಟೀನ್ ಹಣ ಬಾಕಿಯಿರುವುದರಿಂದ ಇದೆಲ್ಲಾ, ಸ್ವಾಮೀಜಿ ಸಿಗಲಿ ಗೊತ್ತಾಗುತ್ತೆ ಎಂದಿದ್ದಾರೆ.

    ಅಸಲಿಗೆ ಮೂರುವರೆ ಕೋಟಿ ನೀಡಿದ್ದು ಚೈತ್ರಾ ಆ್ಯಂಡ್ ಕಂಪನಿಗೆ. ಒಂದೂವರೆ ಕೋಟಿ ನೀಡಿದ್ದು ಸ್ವಾಮಿಗಳಿಗೆ, ಒಟ್ಟು 5 ಕೋಟಿಗಳು. ದುಡ್ಡಿನ ವಿಚಾರದಲ್ಲಿ ಸ್ವಾಮೀಜಿ ಸಿಕ್ಕಿಯೇ ಗೊತ್ತಾಗಬೇಕಾದ ವಿಚಾರಗಳಿಲ್ಲ. ಎಲ್ಲಾ ನಡೆದು ಟಿಕೆಟ್ ಸಿಗದೆ ಇದ್ದಾಗ ಸ್ವತಃ ತನಿಖೆ ಇಳಿದ ಗೋವಿಂದ ಬಾಬು ಪೂಜಾರಿಯವರಿಗೆ ಎಲ್ಲರೂ ಸಿಗುತ್ತಾರೆ. ಆಗ ಆಫೀಸಿನಲ್ಲಿ ಕೂರಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಮಾತು ನಾವು ಹಣವನ್ನೆಲ್ಲಾ ವಿಶ್ವನಾಥ ಜೀಗೆ ಕೊಟ್ಟಿದ್ದೇವೆ. ಅವರು ತೀರಿಕೊಂಡರು ಎಂದು. ಇದನ್ನೂ ಓದಿ: ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಸಂಬಂಧ ಇಲ್ಲ: ಗೋವಿಂದ ಬಾಬು

    ಕೊನೆಗೆ ವಿಶ್ವನಾಥ್ ಜೀ ಪಾತ್ರ ಮಾಡಿದವನನ್ನು ಎಳೆದು ತಂದಾಗ ಇದೇ ತಂಡ ಗೋವಿಂದ ಬಾಬು ಪೂಜಾರಿಯವರ ಆಫೀಸ್‌ನಲ್ಲಿ ವಿಷ ಕುಡಿಯುವ ಪ್ರಹಸನ ಬೇರೆ ಮಾಡಿತ್ತು. ಕೊನೆಗೆ ಸ್ವಲ್ಪ ದಿನದ ನಂತರ ಹಣ ವಾಪಸ್ ಕೊಡುವುದಾಗಿ ಹೇಳಿ ಅಲ್ಲಿಂದ ಕಾಲ್ಕಿತ್ತಿತ್ತು. ಇದೆಲ್ಲದರ ಬಗ್ಗೆ ಸಿಸಿಟಿವಿ ಫೂಟೇಜ್‌ಗಳಿವೆ, ಪೋನ್ ಸಂಭಾಷಣೆಗಳ ರೆಕಾರ್ಡ್‌ಗಳಿವೆ. ಇಷ್ಟೆಲ್ಲಾ ಇದ್ದರೂ ಆಟ ಆಡುವ ಈಕೆ ಮತ್ತು ತಂಡ, ಜೊತೆಗೆ ಆಕೆಯದೆ ಸರಿ ಎನ್ನುವ ಕೆಲವರು. ಡಿಫೆಂಡ್ ಮಾಡಿಕೊಳ್ಳೋಣ ಎಂದು ರಕ್ಷಿತ್ ಬರೆದಿದ್ದಾರೆ. ಇದನ್ನೂ ಓದಿ: ಎಲ್ಲಾ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ: ಚೈತ್ರಾ ಕುಂದಾಪುರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಸಂಬಂಧ ಇಲ್ಲ: ಗೋವಿಂದ ಬಾಬು

    ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಸಂಬಂಧ ಇಲ್ಲ: ಗೋವಿಂದ ಬಾಬು

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapur) ವಂಚನೆ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್‌ಗೂ (Indira Canteen) ಯಾವುದೇ ಸಂಬಂಧ ಇಲ್ಲ. ನನ್ನ ಉದ್ಯಮದಲ್ಲಿ ಇಂದಿರಾ ಕ್ಯಾಂಟೀನ್ ಕೇವಲ 10%. ಉಳಿದ 90% ಖಾಸಗಿ ಉದ್ಯಮದ್ದಾಗಿದೆ. ಇಂದಿರಾ ಕ್ಯಾಂಟೀನ್ ಬಿಲ್ ಬಗ್ಗೆ ನಾವು ಎಂದಿಗೂ ಅವರೊಂದಿಗೆ ಮಾತಾಡಿರಲಿಲ್ಲ ಎಂದು ಪ್ರಕರಣದ ದೂರುದಾರರಾದ ಉದ್ಯಮಿ, ಚೆಫ್ ಟ್ಯಾಕ್ ಕಂಪನಿಯ ಮಾಲೀಕ ಗೋವಿಂದ ಬಾಬು ಪೂಜಾರಿ (Govinda Babu Poojari) ಹೇಳಿಕೆ ನೀಡಿದ್ದಾರೆ.

    ದೂರವಾಣಿ ಕರೆ ಮೂಲಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ವಿಚಾರ ಇಲ್ಲಿ ಬರಲ್ಲ. ಅವರು ಮೋಸ ಮಾಡಿರುವುದು ರಾಜಕೀಯ ವಿಚಾರವಾಗಿ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತ್ಯಾಸತ್ಯತೆ ಹೊರಗೆ ಬರಲಿ. ನನ್ನ ಬಳಿಯಿರೋ ಎಲ್ಲಾ ದಾಖಲೆಗಳನ್ನೂ ಕೊಡುತ್ತಿದ್ದೇನೆ. ಅವರು ನಮಗೆ ಪ್ಲ್ಯಾನ್ ಮಾಡಿ ಮೋಸ ಮಾಡಿದ್ದಾರೆ. ಅವರು ಯಾವ ಪಕ್ಷದವರೇ ಆಗಿರಲಿ, ಇನ್ನೊಂದು ಬಾರಿ ಇಂತಹ ಮೋಸ ಆಗಬಾರದು. ಇಂತಹವರಿಗೆ ಶಿಕ್ಷೆ ಆಗಲೇ ಬೇಕು ಎಂದಿದ್ದಾರೆ. ಇದನ್ನೂ ಓದಿ: ಎಲ್ಲಾ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ: ಚೈತ್ರಾ ಕುಂದಾಪುರ

    ಸಿಸಿಬಿಗೆ ಎಲ್ಲಾ ರೀತಿಯ ದಾಖಲೆಗಳನ್ನು ನೀಡಿದ್ದೇನೆ. ಸಿಸಿ ಕ್ಯಾಮೆರಾ, ವೀಡಿಯೋ, ಆಡಿಯೋ ಎಲ್ಲಾ ನೀಡಿದ್ದೇನೆ. ನನ್ನ ಬಳಿ ಇನ್ನೂ ಸಾಕ್ಷಿಗಳಿವೆ, ಅವುಗಳನ್ನೂ ನೀಡಲಿದ್ದೇನೆ. ನಾನು ಬೆಳಗ್ಗಿನಿಂದ ರಾತ್ರಿವರೆಗೂ ದುಡಿದ ಹಣ, ಲಾಭವನ್ನೆಲ್ಲಾ ಒಟ್ಟುಗೂಡಿಸಿ 10 ಕೋಟಿ ರೂ. ನೀಡಿದ್ದೇನೆ. ಹೀಗಾಗಿ ಈ ಪ್ರಕರಣದಲ್ಲಿ ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಹೆಚ್.ಕೆ ಪಾಟೀಲ್ ಸ್ಪಷ್ಟನೆ

    ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಹೆಚ್.ಕೆ ಪಾಟೀಲ್ ಸ್ಪಷ್ಟನೆ

    ಬೆಂಗಳೂರು: ಇಂದಿರಾ ಕ್ಯಾಂಟೀನ್ (Indira Canteen) ಊಟದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ಸ್ಪಷ್ಟನೆ ನೀಡಿದ್ದಾರೆ.

    ಇಂದಿರಾ ಕ್ಯಾಂಟೀನ್ ಊಟದ ಬೆಲೆ 62 ರೂಪಾಯಿ ಎಂಬುದು ಪ್ರತಿ ದಿನದ ವೆಚ್ಚ ಹೊರತು ಒಂದು ಊಟದ್ದಲ್ಲ. ಸಾರ್ವಜನಿಕರಿಂದ ಸಂಗ್ರಹಿಸುವ 25 ರೂಪಾಯಿ ಉಪಹಾರ ಮತ್ತು ಎರಡು ಊಟದ ವೆಚ್ಚವಾಗಿರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಧಾಕರ್ ಮತ್ತೆ ಕಾಂಗ್ರೆಸ್‌ಗೆ ಬರಲು ನಾನು ಬಿಡಲ್ಲ: ಶಿವಶಂಕರ ರೆಡ್ಡಿ

    ಇಂದಿರಾ ಕ್ಯಾಂಟೀನ್ ಎಲ್ಲ ಕಡೆಯೂ ತಿಂಡಿ 5 ರೂಪಾಯಿ, ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ ಆಗಿರುತ್ತದೆ. ದಿನಕ್ಕೆ 25 ರೂಪಾಯಿನಂತೆ ಒಟ್ಟು ವೆಚ್ಚ 62 ರೂಪಾಯಿ ಆಗುತ್ತದೆ. 25 ರೂಪಾಯಿ ಗ್ರಾಹಕರು ಕೊಡ್ತಾರೆ, ಉಳಿದ 37 ರೂಪಾಯಿ ಸರ್ಕಾರ ಕೊಡುತ್ತೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಸಿಎಂ ಕಚೇರಿಯಿಂದಲೂ ಸ್ಪಷ್ಟನೆ ನೀಡಿದ್ದು, ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5 ರೂ. ಹೆಚ್ಚಳವಾಗಿದೆ ಅಷ್ಟೆ. ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗ್ಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ. ನೀಡಲಾಗುತ್ತಿತ್ತು. ಈಗ ಅದನ್ನು 62 ರೂ. ಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆದ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾವ್ಯಾವ ತೆರಿಗೆ ಹೆಚ್ಚಿಸಬೇಕು ಅನ್ನೋದನ್ನ ಪರಿಶೀಲನೆ ಮಾಡ್ತೀವಿ – ಡಿಸಿಎಂ ಡಿಕೆಶಿ

    ಯಾವ್ಯಾವ ತೆರಿಗೆ ಹೆಚ್ಚಿಸಬೇಕು ಅನ್ನೋದನ್ನ ಪರಿಶೀಲನೆ ಮಾಡ್ತೀವಿ – ಡಿಸಿಎಂ ಡಿಕೆಶಿ

    ಬೆಂಗಳೂರು: ನಗರದಲ್ಲಿ ಎಲ್ಲೆಲ್ಲಿ ಸಂಪನ್ಮೂಲ ಸೋರಿಕೆಯಾಗುತ್ತಿದೆ? ಎಲ್ಲೆಲ್ಲಿ ತೆರಿಗೆ ವಂಚನೆಯಾಗುತ್ತಿದೆ? ಯಾವ-ಯಾವ ತೆರಿಗೆಗಳನ್ನ (Tax) ಹೆಚ್ಚಿಸಬೇಕು? ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಡಿಸಿಎಂ ಆಗಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳು (Bengaluru Waste Disposal Unit) ಹಾಗೂ ಇಂದಿರಾ ಕ್ಯಾಂಟಿನ್ ಗಳ ಕಾರ್ಯವೈಖರಿ ಪರಿಶೀಲನೆಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನಲು 500 ರೂ. ಕಂತೆಯನ್ನೇ ಹೊರತೆಗೆದ ಡಿಕೆಶಿ

    ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೇ ಇಂದಿರಾ ಕ್ಯಾಂಟೀನ್ (Indira Canteen), ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಇಂದಿರಾ ಕ್ಯಾಂಟೀನ್ ನಲ್ಲಿ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಜೊತೆಗೆ ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಎಲ್ಲ ಸಂಸ್ಥೆಗಳ ಕಾರ್ಯವೈಖರಿ ಸರಿಯಾದ ರೀತಿಗೆ ತರುವ ಕೆಲಸವನ್ನು ಮೊದಲು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಅಂಗಡಿ ಮಾಲೀಕ

    ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಈ ಘಟಕಗಳ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳೂ ಪರಿಶೀಲನೆ ಮಾಡ್ತಿಲ್ಲ. ಬೆಂಗಳೂರು ನಗರ ಸ್ವಚ್ಛವಾಗಿಡಬೇಕು. ಆದ್ರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ ಬಗ್ಗೆ ಪರಿಶೀಲನೆ ಮಾಡಿ ಅಧಿಕಾರಿಗಳನ್ನ ಪ್ರಶ್ನಿಸಿದ್ದೇನೆ. ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

    ಕಸ ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿದ್ದು, ಅದೆಲ್ಲವನ್ನೂ ಸರಿಪಡಿಸುತ್ತೇವೆ. ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಿದ್ದೇನೆ. ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆಯಾಗುತ್ತದೆಯೇ ಎಂಬುದನ್ನು ನೋಡಬೇಕು. ಇದಕ್ಕೂ ಮುನ್ನ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ್ದೆ. ಒಂದು ಕಡೆ 9 ಗಂಟೆಗೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ 5 ರೂ. ಬದಲು 10 ರೂ. ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ತಿಯಲ್ಲಿತ್ತು. ಆದಷ್ಟು ಬೇಗ ಈ ಲೋಪದೋಷ ಸರಿಪಡಿಸಲಾಗುವುದು, ಎಲ್ಲಾ ಹಂತದಲ್ಲೂ ರಿಪೇರಿ ಮಾಡಲಾಗುವುದು ಎಂದು ಎಚ್ಚರಿಸಿದರು.

    ಈ ಮಧ್ಯೆ ದಾರಿ ಮಧ್ಯದಲ್ಲಿ ಸೀಗೆಹಳ್ಳಿ ರಸ್ತೆಯಲ್ಲಿ ಸಾಗುವಾಗ ಮಾಗಡಿ ರಸ್ತೆ ಬದಿಯಲ್ಲಿ ಕಸದ ರಾಶಿ ಕಂಡ ಡಿಸಿಎಂ ಪರಿಶೀಲನೆಗೆ ಮುಂದಾದರು. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಪ್ರಮಾಣದ ಕಸದ ರಾಶಿ ಕಂಡು, ಬೆಂಗಳೂರು ನಗರದ ರಸ್ತೆಯಲ್ಲೇ ಈ ರೀತಿ ಕಸ ಎಸೆದು ಹೋದ್ರೆ ಅದಕ್ಕೆ ಹೊಣೆ ಯಾರು? ಎಂದು ಪಾಲಿಕೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನಲು 500 ರೂ. ಕಂತೆಯನ್ನೇ ಹೊರತೆಗೆದ ಡಿಕೆಶಿ

    ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನಲು 500 ರೂ. ಕಂತೆಯನ್ನೇ ಹೊರತೆಗೆದ ಡಿಕೆಶಿ

    ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಂದು ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ್ದಾರೆ. ಯಶವಂತಪುರ ಕ್ಷೇತ್ರದ 3 ತ್ಯಾಜ್ಯ ವಿಲೇವಾರಿ ಘಟಕಗಳಿಗೆ (Waste Disposal Unit) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಸದಾಶಿವನಗರದಿಂದ ಹೊರಟ ಡಿಸಿಎಂ, ಮೊದಲು ಯಶವಂತಪುರ ಕ್ಷೇತ್ರದಲ್ಲಿರುವ ಕನ್ನಳ್ಳಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಚೊಕ್ಕಸಂದ್ರ ಇಂದಿರಾ ಕ್ಯಾಂಟಿನ್‌ಗೆ (Indira Canteen) ತಿಂಡಿ ತಿನ್ನಲು ತೆರಳಿದ್ದಾರೆ. ಸಿಬ್ಬಂದಿ ತಿಂಡಿ ಖಾಲಿಯಾಗಿದೆ ಎಂದೊಡನೆ ಅಲ್ಲಿಂದ ವಾಪಸ್ ಹೊರಟಿದ್ದಾರೆ. ಇದನ್ನೂ ಓದಿ: ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮದುವೆ – ಖತರ್ನಾಕ್‌ ಕಿಲಾಡಿ ಅರೆಸ್ಟ್‌

    ಬಳಿಕ ದಾಸರಹಳ್ಳಿ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಅವರು, ಉಪ್ಪಿಟ್ಟು-ಕೇಸರಿ ಬಾತ್ ಸೇವನೆ ಮಾಡಿದ್ದಾರೆ. ಈ ವೇಳೆ ಉಪ್ಪಿಟ್ಟು-ಕೇಸರಿ ಬಾತ್‌ಗೆ ಹಣ ಕೊಡಲು 500 ರೂ. ನೋಟಿನ ಕಂತೆಯನ್ನೇ ಹೊರತೆಗಿದ್ದಾರೆ. ಉಪ್ಪಿಟ್ಟು ಕೇಸರಿಬಾತ್ ಸವಿದ ನಂತರ, ಕ್ಯಾಂಟಿನ್‌ನಲ್ಲಿ ಮೆನು ಏನಿದೆ? ಬೆಳಗ್ಗೆ, ಮಧ್ಯಾಹ್ನ, ಸಂಜೆ ಏನ್ ಅಡುಗೆ ಮಾಡ್ತೀರಾ? ಎಂದು ವಿಚಾರಿಸಿದ್ದಾರೆ. ಇದೇ ವೇಳೆ ಗ್ರಾಹಕರೊಬ್ಬರಿಂದ 10 ರೂ. ಪಡೆದಿದ್ದನ್ನು ನೋಡಿ 5 ರೂಪಾಯಿ ಬೆಲೆಗೆ 10 ರೂಪಾಯಿ ಪಡೆಯುತ್ತಿದ್ದೀಯಾ? ಎಂದು ಪ್ರಶ್ನೆ ಮಾಡಿದಾಗ ಸಿಬ್ಬಂದಿ, ಇಲ್ಲ ಸರ್.. ಅವರು ಎರಡು ಪ್ಲೇಟ್ ತಿಂಡಿ ತೆಗೆದುಕೊಂಡರು ಅಂತಾ ಹೇಳಿದ ಮೇಲೆ ಸುಮ್ಮನಾಗಿದ್ದಾರೆ.

    ನಂತರ ಸೀಗೆಹಳ್ಳಿ ಕಸ ಸಂಸ್ಕರಣ ಘಟಕ ಹಾಗೂ ಕನ್ನಹಳ್ಳಿ ಬಳಿಕ ತಿಪ್ಪೆಹಳ್ಳಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

    ನಂತರ ಮಾತನಾಡಿದ ಡಿಸಿಎಂ ಡಿಕೆಶಿ, ನಾನು ಯಾವ ಅಧಿಕಾರಿಗಳಿಗೂ ತಿಳಿಸದೇ ನಗರ ಪ್ರದಕ್ಷಿಣೆ ಮಾಡಿದ್ದೀನಿ. ಕಸ ಸಂಸ್ಕರಣಾ ಕೇಂದ್ರಕ್ಕೆ ಭೇಟಿ ಮಾಡಿದ್ದಿನಿ. ಬಿಬಿಎಂಪಿ ಅಧಿಕಾರಿಗಳು ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡ್ತಿಲ್ಲ. ಕೆಲವರು ಫುಟ್‌ಪಾತ್‌ನಲ್ಲೇ ಕಸ ಸುರಿದು ಹೋಗ್ತಿದ್ದಾರೆ. ಅದೆಲ್ಲವನ್ನ ಆಯುಕ್ತರಿಗೆ ತೋರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

    ರಿಪೇರಿ ಮಾಡ್ತೀನಿ:
    ತ್ಯಾಜ್ಯ ಘಟಕ ಪರಿಶೀಲನೆ ಮಾಡಿದ ಮೇಲೆ ಇಂದಿರಾ ಕ್ಯಾಂಟಿನ್‌ಗೆ ಹೋಗಿದ್ದೆ ಅಲ್ಲಿ ತಿಂಡಿ ಖಾಲಿ ಆಗಿತ್ತು. ಕೆಲವರು 5 ರೂ. ತಿಂಡಿಗೆ 10 ರೂ. ತೆಗೆದುಕೊಳ್ಳುತ್ತಿದ್ದಾರೆ. ಬಹಳ ವರ್ಷಗಳಿಂದ ಹೀಗೆ ನಡೆಯುತ್ತಿದೆ. ಎಲ್ಲವನ್ನೂ ರಿಪೇರಿ ಮಾಡ್ತಿನಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಬೆಂಗ್ಳೂರು ಅಭಿವೃದ್ಧಿ ಖಚಿತ:
    ಬಜೆಟ್‌ನಲ್ಲಿ ಬೆಂಗಳೂರಿಗೆ ನಿರೀಕ್ಷಿತ ಅನುದಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಜೆಟ್‌ನಲ್ಲಿ ಎಷ್ಟಾದರೂ ಅನುದಾನ ನೀಡಲಿ. ನಾವು ರವಿನ್ಯೂ ಜೆನರೇಟ್ ಮಾಡ್ತೀವಿ. ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ ಹಾಕ್ತೀವಿ. ಬೆಂಗಳೂರು ಅಭಿವೃದ್ಧಿ ಮಾಡೇ ಮಾಡ್ತೀವಿ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ಮೇಲೆ ಇಂದಿರಾ ಕ್ಯಾಂಟೀನ್‍ನಲ್ಲಿ ಸಿಗುತ್ತೆ ಮಂಗಳೂರು ಬನ್ಸ್- ದರದಲ್ಲೂ ಬದಲಾವಣೆ

    ಇನ್ಮೇಲೆ ಇಂದಿರಾ ಕ್ಯಾಂಟೀನ್‍ನಲ್ಲಿ ಸಿಗುತ್ತೆ ಮಂಗಳೂರು ಬನ್ಸ್- ದರದಲ್ಲೂ ಬದಲಾವಣೆ

    ಬೆಂಗಳೂರು: ಇಂದಿರಾ ಕ್ಯಾಂಟೀನ್‍ನನ್ನು ಹೊಸ ರೂಪದಲ್ಲಿ ತರೋಕೆ ಕಾಂಗ್ರೆಸ್ ಸರ್ಕಾರ (Congress Government) ಹೊರಟಿದೆ. ಈಗಾಗ್ಲೇ ಮೆನು, ದರದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

    ಇದೀಗ ಇಂದಿರಾ ಕ್ಯಾಂಟೀನ್‍ (Indira Canteen) ನಲ್ಲಿ ಹೊಸ ಐಟಂಗಳ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಬೆಳಗ್ಗೆ ತಿಂಡಿ ಮೆನುಗೆ ಬ್ರೆಡ್ ಜಾಮ್ (Bread Jam) ಮತ್ತು ಮಂಗಳೂರು ಬನ್ಸ್ (Mangaluru Buns) ಸೇರ್ಪಡೆಯಾಗಲಿದೆ. ಮಧ್ಯಾಹ್ನದ ಊಟಕ್ಕೆ ಮುದ್ದೆ, ಸೊಪ್ಪು ಸಾರು ನೀಡಲು ತಿರ್ಮಾನ ಮಾಡಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ ಊಟಕ್ಕೆ ಸಿಹಿ ಅಂದ್ರೆ ಪಾಯಸ ನೀಡಲು ಬಿಬಿಎಂಪಿ ಚಿಂತನೆ ಮಾಡಿದೆ. ಇದನ್ನೂ ಓದಿ: ಸಿಎಂ ಅವ್ರೇ ಒಮ್ಮೆ ಆತ್ಮವಿಮರ್ಶೆ ಮಾಡಿಕೊಳ್ಳಿ- 2018ರ ಪಬ್ಲಿಕ್ ಟಿವಿ ವರದಿ ತೆಗೆದು ಸರ್ಕಾರಕ್ಕೆ ತಿವಿದ ಯತ್ನಾಳ್

    ದಿನ ಬಿಟ್ಟು ದಿನ ಮುದ್ದೆ ಊಟ ಒದಗಿಸುವ ಕುರಿತು ನಿರ್ಧಾರ ಮಾಡಲಾಗಿದೆ. ಮುದ್ದೆ ಇಲ್ಲದ ದಿನ ಚಪಾತಿ ಸಾಗು ಊಟ ನೀಡಲು ರೆಡಿಯಾಗಿದೆ. ಊಟ ಒದಗಿಸುವ ಏಜೆನ್ಸಿಗಳು ಫೈನಲ್ ಆಗುತ್ತಿದ್ದಂತೆ ಹೊಸ ಮೆನು ಜಾರಿಗೆ ಬರಲಿದೆ. ಬೆಳಗಿನ ತಿಂಡಿ 5 ರೂಪಾಯಿ ಇತ್ತು 10 ರೂಗೆ ಏರಿಕೆ ಆಗಲಿದೆ. ಮಧ್ಯಾಹ್ನ ಊಟಕ್ಕೆ 10 ರೂಪಾಯಿ ಬೆಲೆ ನಿಗದಿ ಮಾಡಲಾಗಿದೆ.