Tag: Indrajit Lankesh

  • ಇಂದು ಕಿಚ್ಚನ ಹುಟ್ಟುಹಬ್ಬ: ಸೆಲೆಬ್ರೆಷನ್‌ಗೆ ಜಯನಗರದಲ್ಲಿ ಭರ್ಜರಿ ತಯಾರಿ

    ಇಂದು ಕಿಚ್ಚನ ಹುಟ್ಟುಹಬ್ಬ: ಸೆಲೆಬ್ರೆಷನ್‌ಗೆ ಜಯನಗರದಲ್ಲಿ ಭರ್ಜರಿ ತಯಾರಿ

    ಬೆಂಗಳೂರು: ಇಂದು ಅಭಿನಯ ಚಕ್ರವರ್ತಿ ಸುದೀಪ್ (Sudeep) ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳಲ್ಲಿ ಸೆಲೆಬ್ರೆಷನ್ ಜೋರಾಗಿದೆ. ಜಯನಗರದ ಎಂಇಎಸ್ ಗ್ರೌಂಡ್‌ನಲ್ಲಿ (MES Ground Jayanagar) ಬರ್ತಡೇಗೆ ಭರ್ಜರಿ ತಯಾರಿ ನಡೆದಿದೆ.

    ಸ್ಯಾಂಡಲ್‌ವುಡ್ ಬಾದ್‌ಶಾ (Sandalwood Badshaah) ಕಿಚ್ಚ ಸುದೀಪ್ ಇಂದು (ಸೆ.2)ರಂದು ತಮ್ಮ 51ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಮೂಲಕ 50 ಮುಗಿದು 51ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.ಇದನ್ನೂ ಓದಿ: ಅಪರಾಧಿಗಳು ನಿರ್ಭೀತಿಯಿಂದ ಓಡಾಟ, ಸಂತ್ರಸ್ತರ ಪರದಾಟ: ದ್ರೌಪದಿ ಮುರ್ಮು ಕಳವಳ

    ಇತ್ತೀಚಿಗಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸುದೀಪ್ ಮನೆಯ ಬಳಿ ಯಾವುದೇ ಆಚರಣೆ ಇರುವುದಿಲ್ಲ ಎಂಬ ಮನವಿ ಮಾಡಿದ್ದರೂ, ಮಧ್ಯರಾತ್ರಿಯೇ ಮನೆಯ ಬಳಿ ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಅಲ್ಲಿ ಯಾವುದೇ ಸೆಲೆಬ್ರೇಷನ್‌ಗೂ ಕೂಡ ಅವಕಾಶ ಇರಲಿಲ್ಲ. ಪೊಲೀಸರು ಸುದೀಪ್ ಮನೆಯ ಬಳಿಯ ರಸ್ತೆಯನ್ನ ಬಂದ್ ಮಾಡಿದ್ದರು. ಸುದೀಪ್ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಬಾಸ್ ಬಾಸ್ ಕಿಚ್ಚ ಬಾಸ್ ಎಂದು ಘೋಷಣೆ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

    ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದು, ಜಯನಗರದ ಎಂಇಎಸ್ ಗ್ರೌಂಡ್‌ನಲ್ಲಿ ಸಕಲ ತಯಾರಿ ನಡೆದಿದೆ. ಇದೇ ವೇಳೆ ಸುದೀಪ್ ಫ್ಯಾನ್ಸ್‌ಗೆ ಸರ್‌ಪ್ರೈಸ್‌ ನೀಡಲಿದ್ದಾರೆ. ಬಿಲ್ಲಾರಂಗಾ ಬಾದ್‌ಶಾ ಸಿನಿಮಾ ಟೀಸರ್ ರಿಲೀಸ್ ಆಗಲಿದೆ. ಜೊತೆಗೆ ಮ್ಯಾಕ್ಸ್ ಸಿನಿಮಾದ ಸಾಂಗ್ ಕೂಡ ರಿಲೀಸ್ ಮಾಡಲಿದ್ದಾರೆ. ಕೆಆರ್‌ಜಿ ಸ್ಟುಡಿಯೋ ಪ್ರೊಡಕ್ಷನ್‌ನಲ್ಲಿ ಸುದೀಪ್ ನಿರ್ದೇಶನದ ಹೊಸ ಸಿನಿಮಾ ಕೂಡ ಇಂದು ಅನೌನ್ಸ್ ಆಗಲಿದೆ.ಇದನ್ನೂ ಓದಿ: ಸಿಎಂ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

    ಬರ್ತ್ಡೇಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದ್ದು, ಸ್ಯಾಂಡಲ್‌ವುಡ್ ಸ್ನೇಹಿತರು, ಆಪ್ತರು ಸಹ ಬಾದ್‌ಶಾ ಬರ್ತ್ಡೇಗೆ ಪ್ರೀತಿಯಿಂದ ಶುಭ ಕೋರಿದ್ದಾರೆ. ಸೃಜನ್ ಲೋಕೇಶ್ (Srujan Lokesh), ಇಂದ್ರಜಿತ್ ಲಂಕೇಶ್ ಸೇರಿ ಹಲವರು ಸುದೀಪ್ ನಿವಾಸಕ್ಕೆ ತೆರಳಿ ಶುಭ ಕೋರಿದ್ದಾರೆ.

  • ‘ಗೌರಿ’ ರಿಲೀಸ್ ಡೇಟ್ ಅನೌನ್ಸ್: ವಿಶೇಷ ದಿನದಂದು ತೆರೆಗೆ ಬರುತ್ತಿದೆ ಸಿನಿಮಾ

    ‘ಗೌರಿ’ ರಿಲೀಸ್ ಡೇಟ್ ಅನೌನ್ಸ್: ವಿಶೇಷ ದಿನದಂದು ತೆರೆಗೆ ಬರುತ್ತಿದೆ ಸಿನಿಮಾ

    ಕೊನೆಗೂ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ ಗೌರಿ.  ಸ್ವಾತಂತ್ರ್ಯಾ ದಿನಾಚರಣೆಗೆ ತೆರೆಗೆ ಬರುತ್ತಿದೆ ಸಮರ್ಜಿತ್ ಲಂಕೇಶ್ ಮೊದಲ ಸಿನಿಮಾ. ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ಇಂದಿ ಸಿನಿಮಾ ತಂಡ  ಮಾಧ್ಯಮದ ಮುಂದೆ ಹಾಜರಾಗುವ ಮೂಲಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಗೌರಿ ಸಿನಿಮಾ ವಿಶೇಷ ದಿನದಂದು ತೆರೆಗೆ ಬರಲಿದೆ ಎಂದು ಹೇಳಿದರು.

    ಹೌದು ‘ಗೌರಿ’ (Gowri) ಸಿನಿಮಾ ಆಗಸ್ಟ್ 15 ಸ್ವಾತಂತ್ರ್ಯಾ ದಿನಾಚರಣೆಗೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಗೌರಿ ತಂಡ ಇಂದು ಕಾಲೇಜಿನಲ್ಲಿ ಕಾರ್ಯಕ್ರಮ ಮಾಡುವ‌ ಮೂಲಕ ಅದ್ದೂರಿಯಾಗಿ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಬೆಂಗಳೂರಿನ MES ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾತಂಡ ‘ಗೌರಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿಗಳ ಜೊತೆ ಕುಣಿದು ಕುಪ್ಪಳಿಸಿದ್ದ ಸಿನಿಮಾ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ‘ಕನ್ನಡದ ಯುವ ಪ್ರತಿಭೆಗಳನ್ನು ಬೆಳಸಿ. ಆಗಸ್ಟ್ 15 ಒಳ್ಳೆಯ ದಿನ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಇದು. ಎಲ್ಲಾ ಸಿನಿಮಾಗಳು ಕನ್ನಡ ಸಿನಿಮಾಗಳೇ ಪ್ರೋತ್ಸಾಹಿಸಬೇಕು’ಎಂದರು. ಕನಸು ನನಸಾದ ಸಮಯಚಿದು. ನನ್ನ ಮೊದಲ ಸಿನಿಮಾವನ್ನು ಎಲ್ಲರೂ ನೋಡಿ ಎಂದರು.

    ಈಗಾಗಲೇ ಸಿನಿಮಾದಿಂದ ವೈರಲ್ ಆಗಿರುವ ‘ಟೈಮ್ ಬರುತ್ತೆ…’ ಮತ್ತು ಧೂಳ್ ಎಬ್ಬಿಸಾವ…ಹಾಡಿಗೆ ವಿದ್ಯಾರ್ಥಿಗಳ ಜೊತೆ ಸಮರ್ಥಿಜ್ ಲಂಕೇಶ್ ಮತ್ತು ನಾಯಕಿ ಸಾನ್ಯಾ ಅಯ್ಯರ್ ಡಾನ್ಸ್ ಮಾಡಿ ಸಂಭ್ರಮಿಸಿದರು.  ನಿಮ್ಮ ತಂಡದ ಖುಷಿಗೆ ಮತ್ತಷ್ಟು ಜೊಷ್ ತುಂಬಿದರು ವಿದ್ಯಾರ್ಥಿಗಳು.

  • ದಕ್ಷಿಣದ ಸಿನಿಮಾಗಳ ಮುಂದೆ ‘ಗೌರಿ’ ಸಾಂಗ್ ಸಖತ್ ಟ್ರೆಂಡಿಂಗ್

    ದಕ್ಷಿಣದ ಸಿನಿಮಾಗಳ ಮುಂದೆ ‘ಗೌರಿ’ ಸಾಂಗ್ ಸಖತ್ ಟ್ರೆಂಡಿಂಗ್

    ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶನದ ಸಮರ್ಜಿತ್ (Samarjit Lankesh), ಸಾನ್ಯಾ ಅಯ್ಯರ್ ಅಭಿನಯದ `ಗೌರಿ’ (Gowri) ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ..’ ಹಾಡು ಬಿಡುಗಡೆ ಆಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ…ಎಲ್ಲೆಲ್ಲೂ ಕೇಳಿ ಬರುತ್ತಿರೋ ಧೂಳ್ ಎಬ್ಬಿಸಾವ ಹಾಡು ಈಗ ಹೊಸ ಇತಿಹಾಸ ಬರೆದಿದೆ.

    ಧೂಳ್ ಎಬ್ಬಿಸಾವ ಸಾಂಗ್ ಆಲ್ ಇಂಡಿಯಾ ಲೆವೆಲ್ ನಲ್ಲಿ ಟ್ರೆಂಡ್ ಸೃಷ್ಟಿಸುವ ಮೂಲಕ ರೆಕಾರ್ಡ್ ಮಾಡಿದೆ.ಶಿವುಬೆರ್ಗಿ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರೀ  ಮತ್ತು ಅನನ್ಯಾ ಭಟ್ ಅವರ ಸುಂದರ ಕಂಠದಲ್ಲಿ ಮೂಡಿಬಂದಿದೆ. `ಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಮತ್ತು ಖ್ಯಾತ ನಟಿ ಸಂಜನಾ ಆನಂದ್ ಈ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ…

    ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ ನಲ್ಲಿ ಟಾಪ್ 5 ಟ್ರೆಂಡಿಂಗ್ ನಲ್ಲಿರುವ ಈ ಹಾಡಿಗೆ ನಾಡಿನ ಲಕ್ಷಾಂತರ ಮಂದಿ ರೀಲ್ಸ್ ಮಾಡುತ್ತಿದ್ದಾರೆ. ಒಂದೊಂದು  ರೀಲ್ಸ್ ಲಕ್ಷಾಂತರ ವ್ಯೂಸ್ ಮತ್ತು ಲೈಕ್ಸ್ ಪಡೆಯುತ್ತಿವೆ. ಕರ್ನಾಟಕ ಸೇರಿದಂತೆ ಇಡೀ ದೇಶದ ಜನರು ಈ ಹಾಡಿಗೆ ಫಿದಾ ಆಗಿದ್ದಾರೆ…

    ಮತ್ತೊಂದು ವಿಶೇಷ ಅಂದ್ರೆ ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಸೌತ್ ಸಾಂಗ್ ಗಳು ಸದ್ದು ಮಾಡುತ್ತಿರುವ ಲಿಸ್ಟ್ ನಲ್ಲಿ ಮೊದಲನೇ ಸ್ಥಾನ ಕಲ್ಕಿ ಚಿತ್ರದ ಹಾಡು ಪಡೆದುಕೊಂಡಿದ್ರೆ ಎರಡನೇ ಸ್ಥಾನ ಪುಷ್ಪ2 ಚಿತ್ರದ ಹಾಡು ಪಡೆದುಕೊಂಡಿದೆ. ಇನ್ನು ಮೂರನೇ ಸ್ಥಾನದಲ್ಲಿ ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾದ ಧೂಳ್ ಎಬ್ಬಿಸುವ ಸಾಂಗ್ ಇದೆ ಅನ್ನೋದೆ ಖುಷಿಯ ವಿಚಾರ…ಒಟ್ನಲ್ಲಿ ಸದ್ಯ ಆಲ್ ಇಂಡಿಯಾ ಮ್ಯೂಸಿಕ್ ಟ್ರೆಂಡಿಂಗ್ ಲೀಸ್ಟ್ ನಲ್ಲಿ ಬರೀ ಸೌತ್ ಚಿತ್ರಗಳೇ ಇದೆ ಎನ್ನುವುದು ಸೌತ್ ಸಿನಿಮಾ ಅಭಿಮಾನಿಗಳಿಗೆ ಹೆಮ್ಮೆಯ ವಿಚಾರವಾಗಿದೆ.

     

    ಇನ್ನು ಕಮಲ್ ಹಾಸನ್ ಅವರ ಇಂಡಿಯನ್ 2 ಚಿತ್ರದ ಹಾಡನ್ನು ಹಿಂದಿಕ್ಕಿದೆ ಗೌರಿ ಸಿನಿಮಾದ ಹಾಡು..ಅದರ ಜೊತೆಗೆ ಉತ್ತರ ಕರ್ನಾಟಕದ ಮಂದಿಯಂತು ಈ ಹಾಡಿಗೆ ಕುಣಿದು ಕುಪ್ಪಳಿಸುತ್ತಿದ್ದಾರೆ. ದೇಶದೆಲ್ಲೆಡೆ `ಗೌರಿ’ ಚಿತ್ರದ ಈ ಹಾಡು ಸಖತ್ ಧೂಳ್ ಎಬ್ಬಿಸ್ತಿದೆ. ಈಗಾಗಲೇ ಸಖತ್ ಪ್ರಮೋಷನ್ ಮೂಲಕ ಸದ್ದು ಮಾಡ್ತಿರೋ ಗೌರಿ ಸಿನಿಮಾ ಆದಷ್ಟು ಬೇಗ ದೊಡ್ಡ ಸ್ಕ್ರೀನ್ ಮೇಲೆ ಬರಲಿದೆ

  • ದರ್ಶನ್ ಗೆ ನಾನ್ಯಾಕೆ ಟಾಂಗ್ ಕೊಡಲಿ: ಇಂದ್ರಜಿತ್ ಲಂಕೇಶ್

    ದರ್ಶನ್ ಗೆ ನಾನ್ಯಾಕೆ ಟಾಂಗ್ ಕೊಡಲಿ: ಇಂದ್ರಜಿತ್ ಲಂಕೇಶ್

    ಯುವ ನಟ ಸಮರ್ಜಿತ್ ಲಂಕೇಶ್ (Samarjit Lankesh) ಹಾಗೂ ನಾಯಕಿ ಸಾನ್ಯ ಅಯ್ಯರ್ ಅಭಿನಯದ ಗೌರಿ ಸಿನಿಮಾ ರಾಜ್ಯದಾದ್ಯಂತ ಜುಲೈ ನಲ್ಲಿ ತೆರೆ ಕಾಣುತ್ತಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಇದೀಗ ಸಿನಿಮಾತಂಡ ಹುಬ್ಬಳ್ಳಿಯಲ್ಲಿ ಚಿತ್ರದ ಹಾಡನ್ನು ರಿಲೀಸ್ ಮಾಡಿ ಸಂಭ್ರಮಿಸಿದೆ. ಹಾಡನ್ನು ರಿಲೀಸ್ ಮಾಡಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ (Indrajit Lankesh) , ‘ನನ್ನ ಪುತ್ರ ಸಮರ್ಜಿತ್ ಹಾಗೂ ಸಾನ್ಯ ಅಯ್ಯರ್ ಗೆ ಇದು ಚೊಚ್ಚಲ ಸಿನಿಮಾವಾಗಿದ್ದು, ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ.  ಬೆಂಗಳೂರು ಸೇರಿದಂತೆ ರಾಜ್ಯದ ವಿವಿದ ಕಡೆ ಚಿತ್ರೀಕರಣ ಮಾಡಲಾಗಿದೆ. ಅಕ್ಕ ಗೌರಿಯ ಸಿದ್ದಾಂತ ಇದರಲ್ಲಿಯಿಲ್ಲ. ಇದು ಅಕ್ಕ ಗೌರಿಯ ಕಥೆಯೂ ಅಲ್ಲ. ಅಕ್ಕನ ಮೇಲಿನ ಅಭಿಮಾನದಿಂದ ಸಿನಿಮಾಗೆ ಆಕೆಯ ಹೆಸರು ಇಟ್ಟಿದ್ದೇನೆ’ ಎಂದರು.

    ಇನ್ನೂ ಚಿತ್ರದಲ್ಲಿ ಲೂಸ್ ಮಾದ ಯೋಗಿ, ಪ್ರಿಯಾಂಕಾ ಉಪೇಂದ್ರ, ಅಕುಲ್ ಬಾಲಾಜಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ನಟ ಸಮರ್ಜಿತ ಮಾತನಾಡಿ,  ಸಿನಿಮಾವನ್ನು ಕಷ್ಟಪಟ್ಟು ಮಾಡಿದ್ದು, ಅದ್ಭುತವಾಗಿ ಮೂಡಿಬಂದಿದೆ. ಜುಲೈ ತಿಂಗಳಲ್ಲಿ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದ್ದು, ಎಲ್ಲರೂ ಸಿನಿಮಾ ಚಿತ್ರಮಂದಿರಕ್ಕೆ ಹೋಗಿ ನೋಡಬೇಕು ಎಂದರು‌. ಪತ್ರಿಕಾಗೋಷ್ಠಿಯಲ್ಲಿ ನಟಿ ಸಾನ್ಯ ಅಯ್ಯರ್ ಉಪಸ್ಥಿತರಿದ್ದರು.

    ಇದೇ ಸಮಯದಲ್ಲಿ ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಇಂದ್ರಜಿತ್, ಈ ಕೇಸ್ ಬಗ್ಗೆ ನಾನು ಈಗ ಏನು ಹೇಳಲ್ಲ, ತನಿಖೆ ನಾಡೆಯುತ್ತಿದೆ. ಶಿವಮೊಗ್ಗದಲ್ಲಿ ನಾನು ಏನು ಮಾತನಾಡಿಲ್ಲ. ನನ್ನ ತಂದೆ ಹುಟ್ಟಿದ ಸ್ಥಳ ಅದು ಎಂದರು. ದರ್ಶನ್ ಅವರಿಗೆ ನಾನು ಯಾಕೆ ಟಾಂಗ್ ಕೊಡಲಿ. ಬಸವಣ್ಣನ ವಚನ ಹೇಳಿದೆ ಅಷ್ಟೆ. ಅವರ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಪತ್ರಕರ್ತನಾಗಿ ನಾನು ಕೆಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದೆ ಅಷ್ಟೆ. ಅದು ಬಿಟ್ಟರೆ ನಮ್ಮ ನಡುವೆ ಏನು ಇಲ್ಲ.  ಅನ್ಯಾಯ ಆದಾಗ ಧ್ವನಿ ಎತ್ತುವ ಬಗ್ಗೆ ನನ್ನ ತಂದೆ ಲಂಕೇಶ್ ಅವರಿಂದ ಕಲಿತ್ತಿದ್ದು . ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ವಿಜಯಲಕ್ಷ್ಮಿ ಹಾಗೂ ಅವರ ಮಗನಿಗೆ ದೇವರು ಶಕ್ತಿ ಕೊಡಲಿ ಎಂದರು.

    ಸಾಮಾಜಿಕ ಜಾಲತಾಣ ಅದ್ಭುತವಾದ ಮಾದ್ಯಮ. ಅದು  ತುಂಬ ಕೆಟ್ಟದಾಗಿ ಬಳಕೆಯಾಗುತ್ತಿದೆ ಎಂದು ಸರ್ಕಾರ ಹಾಗೂ ಸೈಬರ್ ಕ್ರೈಮ್ ವಿರುದ್ದ ಇಂದ್ರಜಿತ್ ಆಕ್ರೋಶ ಹೊರಹಾಕಿದರು. ಇದೇ ಸಮಯದಲ್ಲಿ ಸರಿಯಾದ ಕ್ರಮ ಕೈಗೊಳುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದರಿಂದ ಇಂದಿನ ಯುವ ಜನತೆ  ಹಾಳಾಗುತ್ತಿದೆ. ಇತ್ತೀಚಿಗಷ್ಟೇ ಎಸ್ ಎಸ್ ಎಲ್‌ಸಿಯಲ್ಲಿ ರ್ಯಾಂಕ್ ಬಂದ ಹುಡುಗಿಯನ್ನು ಆಡಿಕೊಳ್ಳಲಾಯಿತು, ಅವರ ರೂಪದ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದರು. ನಾವು ಎಂಥ ದುರಂತದ ಸ್ಥಿತಿಯಲ್ಲಿ ಇದ್ದೀವಿ ಎಂದು ಕಳವಳ ವ್ಯಕ್ತಪಡಿಸಿದರು. .

    ಸೈಬರ್ ಕ್ರೈಮ್ ಯಾವತ್ತು ಯಾರಿಗೂ ಉಪಯೋಗ ಆಗಿಲ್ಲ. ಸಾಮಾಜಿಕ ಜಾಲತಾಣದಿಂದನೇ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ, ಮಂತ್ರಿಗಳ ಮನೆಯಲ್ಲಿ ಆದಾಗ ಗೊತ್ತಾಗುತ್ತೆ. ಅತೀ ಶೀಘ್ರದಲ್ಲೆ ಇದರ ಬಗ್ಗೆ ಆಕ್ಷನ್ ತೆಗೆದುಕೊಳ್ಳಬೇಕು. ನಾನು ಕೂಡ ಇದರ ವಿರುದ್ದ ಹೋರಾಟ ಮಾಡುತ್ತೇನೆ. ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಹುಬ್ಬಳ್ಳಿಯಲ್ಲಿ ಹೇಳಿದರು.

  • ‘ಗೌರಿ’ ಟೀಸರ್ ರಿಲೀಸ್ ಮಾಡಿದ ಸ್ಟಾರ್ ಕ್ರಿಕೆಟರ್ ಶ್ರೇಯಾಂಕ

    ‘ಗೌರಿ’ ಟೀಸರ್ ರಿಲೀಸ್ ಮಾಡಿದ ಸ್ಟಾರ್ ಕ್ರಿಕೆಟರ್ ಶ್ರೇಯಾಂಕ

    ಸಾಂಸ್ಕೃತಿಕ ನಗರಿ ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಅಲ್ಲಿ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. ಇದೇ ಮೊದಲ ಬಾರಿಗೆ `ಗೌರಿ’ (Gowri) ಚಿತ್ರ ತಂಡ ಕಾಲೇಜಿನ ಕ್ಲಾಸ್ ರೂಂನಲ್ಲಿ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು. ಭಾರತದ ಸ್ಟಾರ್ ಕ್ರಿಕೆಟರ್; ಆರ್‍ಸಿಬಿಯ ಆಲ್‍ರೌಂಡರ್; ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) `ಐ ಲವ್ ಯೂ ಸಮಂತ’ ಮ್ಯೂಸಿಕಲ್ ಟೀಸರನ್ನು ಬಿಡುಗಡೆಗೊಳಿಸಿದರು. ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣ ದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತಾ; `ಐ ಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ; ಸಂಭ್ರಮಿಸಿದರು.

    ಇದೇ ಸಂದರ್ಭದಲ್ಲಿ `ಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜೊತೆ `ಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಹೆಮ್ಮೆಯ ಕನ್ನಡತಿ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಶ್ರೇಯಾಂಕ- ಸಮರ್ ಡ್ಯಾನ್ಸ್‍ಗೆ ನೆರೆದಿದ್ದವರು ಫಿದಾ ಆಗಿ ಹೋದರು. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿ ಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಆಟೋಗ್ರಾಫ್, ಸೆಲ್ಫಿಗೆ ಮುಗಿಬಿದ್ದರು. ಕ್ಲಾಸ್ ರೂಂನಲ್ಲಿ ಒಂದು ರೀತಿ ಹಂಗಾಮವೇ ಸೃಷ್ಟಿಯಾಯಿತು.

    ಮ್ಯೂಸಿಕಲ್ ಟೀಸರ್ ಬಿಡುಗಡೆಯ ನಂತರ ಕ್ಲಾಸ್ ರೂಂನಲ್ಲಿಯೇ ಶ್ರೇಯಾಂಕ ಕ್ರಿಕೆಟ್ ಆಡಿದ್ದು ನೆರೆದಿದ್ದವರನ್ನು ರೋಮಾಂಚನಗೊಳಿಸಿತು. ಶ್ರೇಯಾಂಕ್ ವಿದ್ಯಾರ್ಥಿಗಳ ಬೌಲಿಂಗ್‍ಗೆ ಬ್ಯಾಟ್ ಬೀಸಿದರು. ಬಾಲ್ ಸಿಕ್ಕ ವಿದ್ಯಾರ್ಥಿಗಳಿಗೆ ಶ್ರೇಯಾಂಕರ ಆಟೋಗ್ರಾಫ್‍ನ ಬಾಲ್ ಅನ್ನು ಗಿಫ್ಟ್ ನೀಡಲಾಯಿತು. ಜೊತೆಗೆ `ಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿತು. `ಗೌರಿ’ ಚಿತ್ರ ತಂಡಕ್ಕೆ ಎಟಿಎಂಇ ಕಾಲೇಜಿನ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ; ಸ್ವಾಗತ ಕೋರಲಾಯಿತು. `ಗೌರಿ’ ಚಿತ್ರದ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ನಟ ಸಮರ್ಜಿತ್ ಲಂಕೇಶ್, ಖ್ಯಾತ ಕ್ರಿಕೆಟರ್ ಶ್ರೇಯಾಂಕ ಪಾಟೀಲ್.. ಇವರುಗಳು ಎಂಟ್ರಿಯಾಗುತ್ತಲೇ ವಿದ್ಯಾರ್ಥಿಗಳ ದಂಡೇ ಹರಿದುಬಂದು ಮುತ್ತಿಕೊಂಡಿತು. ಅವರ ಅಭಿಮಾನಕ್ಕೆ, ಪ್ರೀತಿಗೆ ಚಿತ್ರ ತಂಡ ಮೂಕ ವಿಸ್ಮಿತಗೊಂಡಿತು. `ಟೈಂ ಬರುತ್ತೆ..’ ಹಾಡಿನ ಮೂಲಕ ಸೌಂಡ್ ಮಾಡಿದ್ದ `ಗೌರಿ’ ಚಿತ್ರತಂಡ ಇದೀಗ `ಐ ಲವ್ ಯೂ ಸಮಂತಾ..’ ಹಾಡಿನ ಮೂಲಕ ರೋಮ್ಯಾಟಿಕ್ ಫೀಲ್ ನೀಡಿದೆ.

     

    ಮ್ಯಾಜಿಕ್ ಮಾಡಿ `ಐ ಲವ್ ಯೂ ಸಮಂತಾ’ ಐ ಲವ್ ಯೂ ಸಮಂತಾ.. ಹಾಡು ಸಖತ್ ಮೋಡಿ ಮಾಡಿದೆ. ಕವಿರಾಜ್ ಸಾಹಿತ್ಯದ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನದ ಈ ಹಾಡು ಇದೀಗ ಟ್ರೆಂಡ್ ಸೃಷ್ಟಿ ಮಾಡಿದೆ. ಯುವಕ-ಯುವತಿಯರಿಗೆ ಈ ಹಾಡು ಹಾಟ್ ಫೇವರಿಟ್ ಆಗಿದೆ. ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ಮಿಸ್ ಟೀನ್ ಯುನಿವರ್ಸ್ ಸ್ವೀಜಲ್ ಮುಂತಾದವರು ಹಾಜರಿದ್ದರು.

  • ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರದ ಸಾಂಗ್ ರಿಲೀಸ್

    ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರದ ಸಾಂಗ್ ರಿಲೀಸ್

    ತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ (Indrajit Lankesh) ಪುತ್ರ ಸಮರ್ಜಿತ್ (Samarjit) ಲಂಕೇಶ್ “ಗೌರಿ” (Gowri) ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ “ಗೌರಿ” ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.

    ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್ ಈಶ್ವರ್ ಬರೆದಿರುವ “ಟೈಮ್ ಬರತ್ತೆ” ಎಂಬ ಹಾಡು ಈ ಚಿತ್ರದ ಚೊಚ್ಚಲಗೀತೆಯಾಗಿ ಬಿಡುಗಡೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

    ಹಾಡು ಬಿಡುಗಡೆ ನಂತರ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು “ಗೌರಿ” ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಐದು ಜನ ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು “ಗೌರಿ” ಚಿತ್ರದ ಹಾಡುಗಳನ್ನು ಹಾಡಿದ್ದಾರೆ.

    ಚಂದನ್ ಶೆಟ್ಟಿ ಸಂಗೀತ ನೀಡಿ ಹಾಡಿರುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ‌. ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಈ ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಉಳಿದ ಹಾಡುಗಳು ಅನಾವರಣವಾಗಲಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌‌ ಎಂದರು.

    “ಗೌರಿ” ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ ಎಂದರು ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್.

  • ‘ಗೌರಿ’ ಸಿನಿಮಾದ ಪ್ರೀ ಟೀಸರ್ ರಿಲೀಸ್ ಮಾಡಿದ ಅನಿಲ್ ಕುಂಬ್ಳೆ

    ‘ಗೌರಿ’ ಸಿನಿಮಾದ ಪ್ರೀ ಟೀಸರ್ ರಿಲೀಸ್ ಮಾಡಿದ ಅನಿಲ್ ಕುಂಬ್ಳೆ

    ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ‘ಗೌರಿ’. ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.  ಸ್ಪಿನ್ ಮಾಂತ್ರಿಕ ಎಂದೆ ಖ್ಯಾತರಾಗಿರುವ ಅನಿಲ್ ಕುಂಬ್ಳೆ ಹಾಗೂ ಹೆಸರಾಂತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಗೌರಿ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ನಾನು ಹಾಗೂ ಅಜಿತ್(ಇಂದ್ರಜಿತ್) ಹಲವು ವರ್ಷಗಳ ಗೆಳೆಯರು. ಅವರ ಮಗ ಸಮರ್ಜಿತ್ ನನ್ನ ಜೊತೆ ಜಾಹೀರಾತೊಂದರಲ್ಲಿ ಅಭಿನಯಿಸಿದ್ದರು. ಈಗ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಇಬ್ಬರು ಯುವ ಪ್ರತಿಭೆಗಳ ಭವಿಷ್ಯ ಉಜ್ವಲವಾಗಲಿ ಎಂದು ಅನಿಲ್ ಕುಂಬ್ಳೆ ಹಾರೈಸಿದರು.

    ಅನಿಲ್ ಕುಂಬ್ಳೆ ಅವರ ಜೊತೆಗೆ ನನ್ನದು ಮೂವತ್ತು ವರ್ಷಕ್ಕೂ ಮೀರಿದ ಗೆಳೆತನ. ಹಾಗೆ ಪುನೀತ್ ರಾಜಕುಮಾರ್ ಸಹ ಬಹಳ ಆತ್ಮೀಯರು. ಇಂದು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅನಿಲ್ ಕುಂಬ್ಳೆ ಅವರು ನಮ್ಮ ಗೌರಿ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ. ನನ್ನ ಮಗ ಸಮರ್ಜಿತ್ ನಾಯಕನಾಗಲು ಬೇಕಾದ ಎಲ್ಲಾ ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ಅಭಿನಯಿಸಿದ್ದಾನೆ.‌ ಸಾನ್ಯಾ ಅವರ ಅಭಿನಯ ಕೂಡ ಉತ್ತಮವಾಗಿದೆ. ಗೌರಿ ಚಿತ್ರ ಯಾವುದಕ್ಕೂ ಕಡಿಮೆ ಇಲ್ಲದೆ ಅದ್ದೂರಿಯಾಗಿ ಮೂಡಿಬಂದಿದೆ. ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೆ.ಕೆ ಇಬ್ಬರು ಛಾಯಾಗ್ರಾಹಕರು, ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬೋರ್ಗಿ ಹಾಗೂ ಅನಿರುದ್ದ್ ಶಾಸ್ತ್ರಿ ನಾಲ್ವರು ಸಂಗೀತ ನಿರ್ದೇಶಕರು. ಮ್ಯಾಥ್ಯೂಸ್ ಮನು ರೀರೆಕಾರ್ಡಿಂಗ್ ಮಾಡಿದ್ದಾರೆ. ವಿ.ನಾಗೇಂದ್ರಪ್ರಸಾದ್, ಕವಿರಾಜ್, ಕೆ.ಕಲ್ಯಾಣ್, ವರದರಾಜ್ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಕೈಲಾಶ್ ಖೇರ್ ,ಚಂದನ್ ಶೆಟ್ಟಿ, ಅನಿರುದ್ಧ ಶಾಸ್ತ್ರಿ, ಜಾವೇದ್ ಅಲಿ, ಅನನ್ಯ ಭಟ್, ನಿಹಾಲ್ ತೌರೋ, ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ ಹಾಗೂ ಪ್ರಜ್ಞಾ ಮರಾಠೆ, ಸಮರ್ಜಿತ್ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.  ಗುಬ್ಬಿ, ಮಾಸ್ತಿ, ರಾಜಶೇಖರ್ ಹಾಗೂ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ರವಿವರ್ಮ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ.  ಹೀಗೆ ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗು ಕಲಾವಿದರ ಉತ್ತಮ ಅಭಿನಯದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.

    ನಮ್ಮ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿಕೊಟ್ಟ ಅನಿಲ್ ಕುಂಬ್ಳೆ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಸಮರ್ಜಿತ್ ಲಂಕೇಶ್. ಅವಕಾಶ ಕೊಟ್ಟ ನಿರ್ಮಾಪಕ,  ನಿರ್ದೇಶಕರಿಗೆ ಹಾಗೂ ಆಗಮಿಸಿದ್ದ ಗಣ್ಯರಿಗೆ ನಾಯಕಿ ಸಾನ್ಯಾ ಅಯ್ಯರ್ ವಿಶೇಷವಾಗಿ ಧನ್ಯವಾದ ಹೇಳಿದರು.

    ಸಂಭಾಷಣೆ ಬರೆದಿರುವ ಮಾಸ್ತಿ, ರಾಜಶೇಖರ್, ಸಂಗೀತ ನಿರ್ದೇಶನ ಮಾಡಿರುವ ಅನಿರುದ್ದ್ ಶಾಸ್ತ್ರಿ, ಹಿನ್ನೆಲೆ ಸಂಗೀತ ನೀಡಿರುವ ಮ್ಯಾಥ್ಯೂಸ್ ಮನು, ನಟ ನೀನಾಸಂ ಅಶ್ವಥ್ ಹಾಗೂ ಗಾಯಕರಾದ ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ ಹಾಗೂ ಪ್ರಜ್ಞಾ ಮರಾಠೆ ಮುಂತಾದವರು ಗೌರಿ ಚಿತ್ರದ ಕುರಿತು ಮಾತನಾಡಿದರು.

  • ಸಮರ್ಜಿತ್ ಲಂಕೇಶ್ ಜೊತೆ ತಾನ್ಯ ಡಾನ್ಸ್ : ಇದು ಪುನೀತ್ ಹುಟ್ಟುಹಬ್ಬಕ್ಕೆ ಗಿಫ್ಟ್

    ಸಮರ್ಜಿತ್ ಲಂಕೇಶ್ ಜೊತೆ ತಾನ್ಯ ಡಾನ್ಸ್ : ಇದು ಪುನೀತ್ ಹುಟ್ಟುಹಬ್ಬಕ್ಕೆ ಗಿಫ್ಟ್

    ತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ (Gauri) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17,  ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ (Dance) ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್ (Samarjit Lankesh), ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ಗೌರಿ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.

    ಇಂದ್ರಜಿತ್  ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ.  ನಾನು ಸಹ ಪುನೀತ್ ಅವರ ಅಭಿಮಾನಿ‌ ಎಂದು ತಾನ್ಯ ಹೋಪ್ ತಿಳಿಸಿದರು.

    ಈಗಾಗಲೇ ಗೌರಿ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ ಗೌರಿ ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ.

     

    ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.

  • ದರ್ಶನ್, ಉಮಾಪತಿ ವಿವಾದ: ಚಿತ್ರರಂಗಕ್ಕೆ ಒಳ್ಳೆಯದಲ್ಲ ಎಂದ ನಿರ್ದೇಶಕ ಇಂದ್ರಜಿತ್

    ದರ್ಶನ್, ಉಮಾಪತಿ ವಿವಾದ: ಚಿತ್ರರಂಗಕ್ಕೆ ಒಳ್ಳೆಯದಲ್ಲ ಎಂದ ನಿರ್ದೇಶಕ ಇಂದ್ರಜಿತ್

    ಟ ದರ್ಶನ್ (Darshan) ಮತ್ತು ಉಮಾಪತಿ (Umapati Srinivas Gowda) `ಕಾಟೇರ’ ಟೈಟಲ್ ಕದನ ಕಳೆದ 5 ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಈ ಬೆಳವಣಿಕೆಯ ಬಗ್ಗೆ ಇಂದ್ರಜಿತ್ (Indrajit Lankesh) ರಿಯಾಕ್ಟ್ ಮಾಡಿದ್ದಾರೆ. ಇಬ್ಬರ ಜಗಳ ಚಿತ್ರರಂಗದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ನಿರ್ದೇಶಕ ಇಂದ್ರಜಿತ್ ಮಾತನಾಡಿದ್ದಾರೆ.

    ಕಾಟೇರ ಸಿನಿಮಾ ಯಶಸ್ವಿಯಾಗಿದೆ. ಬಹಳಷ್ಟು ವರ್ಷಗಳ ಬಳಿಕ ದರ್ಶನ್‌ಗೆ ಒಂದು ಸಕ್ಸಸ್ ಸಿಕ್ಕಿದೆ. `ಕಾಟೇರ’ ಸಿನಿಮಾ ನೋಡಿ ಜನ ಮೆಚ್ಚಿಕೊಂಡಿದ್ದಾರೆ. ಈ ಟೈಮ್‌ನಲ್ಲಿ ಈ ರೀತಿ ಮಾಡಿಕೊಳ್ಳಬಾರದಿತ್ತು ಎಂದು ಇಂದ್ರಜಿತ್ ಹೇಳಿದ್ದಾರೆ.

    ನನ್ನ ಪ್ರೀತಿಯ ರಾಮು, `ಸಂಗೊಳ್ಳಿ ರಾಯಣ್ಣ’ ಬಳಿಕ ದರ್ಶನ್ ಕಾಟೇರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಸಿನಿಮಾ ಹಿಟ್ ಆಗಿದೆ. ಇಂತಹ ಸಮಯದಲ್ಲಿ ಅವರುಗಳೇ ಕುಳಿತು ಇದನ್ನು ಸರಿಮಾಡಿಕೊಳ್ಳಬೇಕು. ಇದು ಇಂಡ್ರಸ್ಟಿçಗೆ ಶೋಭೆ ತರುವಂತಹ ವಿಚಾರವಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಅದು ಕೆಟ್ಟ ಬೆಳವಣಿಗೆ ಆಗುತ್ತೆ.

    ಸೋಷಿಯಲ್ ಮೀಡಿಯಾ ಒಂದು ಅದ್ಬುತ ಜಗತ್ತು. ಆದರೆ ಕೆಲವು ಕಿಡಿಗೇಡಿಗಳು ದುರುಪಯೋಗ ಮಾಡಿಕೊಳ್ತಿದ್ದಾರೆ. ಒಬ್ಬರನ್ನು ತುಳಿಯೋದ್ದಕ್ಕೆ ಬಳಕೆ ಮಾಡ್ತಿದ್ದಾರೆ. ಇದು ಕನ್ನಡ ಇಂಡಸ್ಟಿçಯ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಮತ್ತೆ ಸಿನಿಮಾಗಳು ಗಡಿ ದಾಟಿ ರೀಚ್ ಆಗಿರೋದ್ದಕ್ಕೆ ಕಾರಣ ಸೋಷಿಯಲ್ ಮೀಡಿಯಾ ಅದನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳೋಣ ಎಂದು ಇಂದ್ರಜಿತ್ ಮಾತನಾಡಿದ್ದಾರೆ.

    ಸದ್ಯ ಇಂದ್ರಜಿತ್ ಲಂಕೇಶ್ ನಿರ್ದೇಶನದ `ಗೌರಿ’ ಸಿನಿಮಾದಲ್ಲಿ ಪುತ್ರ ಸಮರ್ಜಿತ್, ಸಾನ್ಯ ಅಯ್ಯರ್‌ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. 90%ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದೆ. ಸದುದಲ್ಲೇ ರಿಲೀಸ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

  • ಇಂದ್ರಜಿತ್ ಲಂಕೇಶ್ ಪುತ್ರನ ಜೊತೆ ಪ್ರೇಮಿಗಳ ದಿನಕ್ಕೂ ಮುನ್ನ ಸಾನ್ಯಾ ಫೋಟೋಶೂಟ್

    ಇಂದ್ರಜಿತ್ ಲಂಕೇಶ್ ಪುತ್ರನ ಜೊತೆ ಪ್ರೇಮಿಗಳ ದಿನಕ್ಕೂ ಮುನ್ನ ಸಾನ್ಯಾ ಫೋಟೋಶೂಟ್

    ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಬಹು ನಿರೀಕ್ಷಿತ `ಗೌರಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ, ಲಂಕೇಶ್ ಕುಟುಂಬದ ಮೂರನೇ ತಲೆಮಾರು ಸಮರ್ಜಿತ್ ಲಂಕೇಶ್ (Samarjit) ನಾಯಕ ನಟನಾಗಿದ್ದು, ಸಾನ್ಯಾ ಅಯ್ಯರ್ ನಾಯಕಿಯಾಗಿದ್ದಾರೆ. ಬಹುದೊಡ್ಡ ತಾರಾಗಣವಿರುವ `ಗೌರಿ’ ಚಿತ್ರದ ಅಪರೂಪದ, ವಿಭಿನ್ನ, ವಿಶಿಷ್ಠ ಶೈಲಿಯ ಫೋಟೋ ಶೂಟ್ ಬುಕ್ ಮೈ ಕ್ಯಾಪ್ಚರ್ ನಲ್ಲಿ ಯಶಸ್ವಿಯಾಗಿ ನಡೆದಿದೆ.

    ಪ್ರೇಮಿಗಳ ದಿನಕ್ಕೂ ಮುನ್ನ ಖ್ಯಾತ ಛಾಯಾಗ್ರಾಹಕ ಕೆನಡಾದ ರೋಹಿತ್ ಅವರ ಕ್ಯಾಮೆರಾದಲ್ಲಿ ಫೋಟೋಗಳು ಸೆರೆ ಆಗಿವೆ. ಅವರ ಕೈಚಳಕ, ದೀಪಿಕಾ ಪಡುಕೋಟೆ ಸೇರಿದಂತೆ ಅನೇಕ ಖ್ಯಾತ ಸೆಲಬ್ರೆಟಿಗಳ ಮೇಕಪ್ ಆರ್ಟಿಸ್ಟ್ ಗೌರಿ ಕಪೂರ್ ಅವರ ಮೇಕಪ್ ಮೋಡಿ ಮಾಡಿದೆ. ಪ್ರೇಮಿಗಳ ದಿನಕ್ಕೆ ಭಾವನೆಗಳ ಸಂಗಮದ ಫೋಟೋ ಶೂಟ್ ಅದಾಗಿದೆ.

    ಸಾನ್ಯ ಅಯ್ಯರ್ ತಮ್ಮ ಚೊಚ್ಚಲು ಸಿನಿಮಾ ‘ಗೌರಿ’ ಶೂಟಿಂಗ್ ಮುಗಿಸಿದ್ದಾರೆ. ಡಬ್ಬಿಂಗ್ (Dubbing) ಕೆಲಸವನ್ನೂ ಮುಗಿಸಿದ್ದಾರೆ. ಡಬ್ಬಿಂಗ್ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡಿದ್ದರು. ಜೊತೆಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ಇದ್ದರು. ಆ ಫೋಟೋ ವೈರಲ್ ಕೂಡ ಆಗಿತ್ತು.

    ‘ಗೌರಿ’ (Gauri) ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಈ ಚಿತ್ರಕ್ಕಾಗಿ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದರು.

    ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದವು.

    ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಗೌರಿ ಚಿತ್ರಕ್ಕಾಗಿ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.

     

    ಗೌರಿ ಸಿನಿಮಾ ಚಿಕ್ಕಮಗಳೂರು ಸೇರಿದಂತೆ ನಾನಾ ಸ್ಥಳಗಳಲ್ಲಿ ಶೂಟ್ ಆಗಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ. ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.