Tag: indresh kumar

  • ದುರಹಂಕಾರಿಗಳಾಗಿ ಬದಲಾಗಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ಮುಖಂಡ ವಾಗ್ದಾಳಿ

    ದುರಹಂಕಾರಿಗಳಾಗಿ ಬದಲಾಗಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ಮುಖಂಡ ವಾಗ್ದಾಳಿ

    ಜೈಪುರ್‌: ಶ್ರೀರಾಮನ ಬಗ್ಗೆ ಭಕ್ತಿ ತೋರಿಸಿದ ಬಿಜೆಪಿಗರು ಕ್ರಮೇಣ ದುರಹಂಕಾರಿಗಳಾಗಿ ಬದಲಾದರು. ಇದಕ್ಕೆ ಶ್ರೀರಾಮ ಅವರನ್ನು 241 ಸ್ಥಾನಕ್ಕೆ ನಿಲ್ಲಿಸಿದ ಎಂದು ಬಿಜೆಪಿ (BJP) ವಿರುದ್ಧ ಆರ್‍ಎಸ್‍ಎಸ್ (RSS) ನಾಯಕ ಇಂದ್ರೇಶ್ ಕುಮಾರ್ (Indresh Kumar) ವಾಗ್ದಾಳಿ ನಡೆಸಿದ್ದಾರೆ. ಜೈಪುರ್ (Jaipur) ಸಮೀಪದ ಕನೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಬಹುಮತ ಸಿಗದ ವಿಚಾರವಾಗಿ ಅವರು ಪ್ರತಿಕ್ರಿಸಿದ್ದಾರೆ.

    ಇದೇ ವೇಳೆ ಐ.ಎನ್.ಡಿ.ಐ.ಎ ಮೈತ್ರಿಕೂಟದ ವಿರುದ್ಧ ಸಹ ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳ ಮೈತ್ರಿಕೂಟದ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ರಾಮ ವಿರೋಧಿ ಎಂದು ಕರೆದ ಅವರು, ರಾಮನ ಮೇಲೆ ನಂಬಿಕೆಯಿಲ್ಲದವರನ್ನು 234 ಸ್ಥಾನಗಳಿಗೆ ನಿಲ್ಲಿಸಲಾಯಿತು. ದೇವರ ಈ ನ್ಯಾಯ ಸಂತೋಷ ತಂದಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಏರ್ಪೋರ್ಟ್ ಬಳಿ ಅದ್ದೂರಿ ಸ್ವಾಗತ

    ಇತ್ತೀಚೆಗೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾರ್ವಜನಿಕ ಸೇವೆಯಲ್ಲಿ ಘನತೆ ಹಾಗೂ ಮಾನವೀಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ಕೊಟ್ಟಿದ್ದರು. ಇದಾದ ಕೆಲವು ದಿನಗಳ ನಂತರ ಇಂದ್ರೇಶ್ ಕುಮಾರ್ ಅವರು ಈ ಮಾತುಗಳನ್ನ ಆಡಿದ್ದಾರೆ.‌

    ಭಾಗವತ್ ಅವರು, ನಿಜವಾದ ಸೇವಕನು ಘನತೆಯನ್ನು ಕಾಯ್ದುಕೊಳ್ಳುತ್ತಾನೆ. ನಾನು ಈ ಕೆಲಸ ಮಾಡಿದ್ದೇನೆ ಎಂದು ಹೇಳುವ ಅಹಂಕಾರವನ್ನು ಹೊಂದಿರುವುದಿಲ್ಲ. ಅಂತಹ ವ್ಯಕ್ತಿಯನ್ನು ಮಾತ್ರ ನಿಜವಾದ ಸೇವಕ ಎಂದು ಕರೆಯಬಹುದು. ಅಲ್ಲದೇ ಸಾರ್ವಜನಿಕ ಜೀವನದಲ್ಲಿ ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಜನರ ಬಗ್ಗೆ ನಮ್ರತೆ ಮತ್ತು ಸದ್ಭಾವನೆ ಅಗತ್ಯವಾಗಿ ಇರಬೇಕು ಎಂದಿದ್ದರು.‌

    ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದಿದ್ದರೂ, ಮಿತ್ರಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದೆ. ಈ ಮೂಲಕ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಸಿಲುಕಿರುವ ಶಂಕೆ

  • ನಮಗೆ ಶಾಂತಿ, ಸಹೋದರತ್ವ ಬೇಕು – ನಿಜಾಮುದ್ದೀನ್‌ ದರ್ಗಾಕ್ಕೆ ಆರ್‌ಎಸ್‌ಎಸ್‌ ನಾಯಕ ಭೇಟಿ

    ನಮಗೆ ಶಾಂತಿ, ಸಹೋದರತ್ವ ಬೇಕು – ನಿಜಾಮುದ್ದೀನ್‌ ದರ್ಗಾಕ್ಕೆ ಆರ್‌ಎಸ್‌ಎಸ್‌ ನಾಯಕ ಭೇಟಿ

    ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಮತ್ತು ಮುಸ್ಲಿಂ ರಾಷ್ಟ್ರೀಯ ಮಂಚ್‌ನ ಇಂದ್ರೇಶ್ ಕುಮಾರ್ ಅವರು ಶನಿವಾರ ನವದೆಹಲಿಯ ಹಜರತ್ ನಿಜಾಮುದ್ದೀನ್ ದರ್ಗಾಕ್ಕೆ (Nizamuddin Dargah) ಭೇಟಿ ನೀಡಿ, ದೀಪಾವಳಿಯ ಪೂರ್ವಭಾವಿಯಾಗಿ ದೇಗುಲದ ಆವರಣದಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸಿದರು.

    ಆರ್‌ಎಸ್‌ಎಸ್‌ನ ಮುಸ್ಲಿಂ ವಿಭಾಗ, ಮುಸ್ಲಿಂ ರಾಷ್ಟ್ರೀಯ ಮಂಚ್ ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕರೆ ನೀಡಿತು. ಮುಸ್ಲಿಂ ರಾಷ್ಟ್ರೀಯ ಮಂಚ್ ಪೋಷಕ ಮತ್ತು ಹಿರಿಯ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್ ಮಾತನಾಡಿ, ನಿಜಾಮುದ್ದೀನ್ ದರ್ಗಾ ಸಂಕೀರ್ಣದೊಳಗೆ ಮಣ್ಣಿನ ದೀಪಗಳನ್ನು ಬೆಳಗಿಸುವ ಕ್ರಮವು ಶಾಂತಿ, ಸಮೃದ್ಧಿ ಮತ್ತು ಕೋಮು ಸೌಹಾರ್ದತೆಯ ಸಂದೇಶವನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಂತಿದ್ದ ರೈಲಿನೊಳಗೆ ನಮಾಜ್ – ಮತ್ತೆ ವಿವಾದ

    ಆರ್‌ಎಸ್‌ಎಸ್‌ ಮುಖಂಡ ಇಂದ್ರೇಶ್ ಕುಮಾರ್ ನಿನ್ನೆ ದೆಹಲಿಯ ಹಜರತ್ ನಿಜಾಮುದ್ದೀನ್ ದರ್ಗಾ ತಲುಪಿದ್ದರು. ಸೂಫಿ ಸಂತರ ದರ್ಗಾಕ್ಕೆ ಪುಷ್ಪ ಹಾಗೂ ಚಾದರ್ ಅರ್ಪಿಸಿದರು.

    ದೀಪಾವಳಿ ಹಬ್ಬವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ಪ್ರತಿ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಭಾರತವು ತೀರ್ಥಯಾತ್ರೆಗಳು, ಉತ್ಸವಗಳು ಮತ್ತು ಜಾತ್ರೆಗಳ ನಾಡು. ಎಲ್ಲರೂ ಬಡವರಿಗೆ ರೊಟ್ಟಿಯನ್ನು ನೀಡಿ ತಮ್ಮಲ್ಲಿ ಸಹೋದರತ್ವವನ್ನು ಹೆಚ್ಚಿಸುತ್ತಾರೆ. ಧರ್ಮಾಂಧತೆ, ದುಶ್ಚಟ, ದ್ವೇಷ, ಗಲಭೆ, ಯುದ್ಧ ಬೇಡ ಎಂಬುದನ್ನು ಪ್ರತಿ ಹಬ್ಬವೂ ಕಲಿಸುತ್ತದೆ. ನಾವು ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವವನ್ನು ಬಯಸುತ್ತೇವೆ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: 5 ವರ್ಷದಲ್ಲಿ 166 ಕ್ರಿಮಿನಲ್‌ಗಳ ಎನ್‌ಕೌಂಟರ್‌, 4453 ಮಂದಿಗೆ ಗಾಯ: ಯೋಗಿ ಆದಿತ್ಯನಾಥ್‌

    ಯಾರನ್ನೂ ಬಲವಂತವಾಗಿ ಮತಾಂತರ ಮಾಡಿ ಹಿಂಸಾಚಾರ ಮಾಡಬಾರದು. ಪ್ರತಿಯೊಬ್ಬರೂ ಅವರವರ ಧರ್ಮ, ಜಾತಿಯನ್ನು ಅನುಸರಿಸಬೇಕು. ಅನ್ಯ ಧರ್ಮವನ್ನು ಟೀಕಿಸಿ ಅವಮಾನಿಸಬೇಡಿ. ದೇಶದಲ್ಲಿ ಎಲ್ಲ ಧರ್ಮಗಳನ್ನು ಗೌರವಿಸಿದಾಗ, ಕಲ್ಲು ಹೊಡೆಯುವ ಮೂಲಭೂತವಾದಿಗಳಿಂದ ದೇಶ ಮುಕ್ತವಾಗುತ್ತದೆ. ಎಲ್ಲಾ ಧರ್ಮಗಳನ್ನು ಗೌರವಿಸುವ ಮತ್ತು ಸ್ವೀಕರಿಸುವ ಏಕೈಕ ದೇಶ ಭಾರತ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಇದಕ್ಕೂ ಮೊದಲು ಸೆಪ್ಟೆಂಬರ್‌ನಲ್ಲಿ ಇಂದ್ರೇಶ್ ಕುಮಾರ್ ಆರ್‌ಎಸ್‌ಎಸ್ ನಾಯಕ ಮೋಹನ್ ಭಾಗವತ್ ಅವರೊಂದಿಗೆ ಆಲ್ ಇಂಡಿಯಾ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ಡಾ. ಉಮರ್ ಅಹ್ಮದ್ ಇಲ್ಯಾಸಿ ಅವರನ್ನು ಭೇಟಿಯಾಗಿದ್ದರು. ಆರ್‌ಎಸ್‌ಎಸ್ ಮುಖ್ಯಸ್ಥರು ಆ ದಿನದ ಹಿಂದೆ ರಾಷ್ಟ್ರ ರಾಜಧಾನಿಯ ಮಸೀದಿ ಮತ್ತು ಮದರಸಾಗೆ ಭೇಟಿ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]