Tag: industrialist

  • ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

    ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

    ಮುಂಬೈ: ರಕ್ತದೊತ್ತಡ (BP) ಕುಸಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳನ್ನು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata)ಅವರು ತಳ್ಳಿಹಾಕಿದ್ದಾರೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಆರೋಗ್ಯವಾಗಿದ್ದೇನೆ ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ (Social Media) ಹೇಳಿಕೊಂಡಿದ್ದಾರೆ.

    ರತನ್ ಟಾಟಾ ಅವರ ಬಿಪಿ ತೀವ್ರ ಪ್ರಮಾಣದಲ್ಲಿ ಕುಸಿದ ಕಾರಣ ಆರೋಗ್ಯ ಪರಿಸ್ಥಿತಿ ಏರುಪೇರಾಗಿದ್ದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದೆ. ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿತ್ತು. ವರದಿ ಬೆನ್ನಲ್ಲೇ ತಮ್ಮ ಶೋಷಿಯಲ್ ಮಿಡಿಯಾಗಳಲ್ಲಿ ಸ್ಪಷ್ಟನೆ ನೀಡಿರುವ ಅವರು, ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಫೇಕ್ ಷೇರು ಮಾರ್ಕೆಟ್ ವೆಬ್‌ಸೈಟ್‌ ಮಾಡಿ ಕೊಟ್ಯಂತರ ರೂ. ವಂಚನೆ – 8 ಸೈಬರ್ ವಂಚಕರು ಅರೆಸ್ಟ್‌

    ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ, ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ ಆ ಬಗ್ಗೆ ನನಗೆ ಮಾಹಿತಿ ಇದೆ, ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಕ್ರೋRNA ಆವಿಷ್ಕಾರ – ವಿಕ್ಟರ್‌, ಗ್ಯಾರಿಗೆ ನೊಬೆಲ್‌ ಪುರಸ್ಕಾರ

  • ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

    ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

    ಗಾಂಧಿನಗರ: ಪ್ರತಿಷ್ಠಿತ ಉದ್ಯಮಿ ಗೌತಮ್ ಅದಾನಿ (Gautam Adani) ಅವರ ಪುತ್ರ ಜೀತ್ ಅದಾನಿ (Jeet Adani) ಅವರ ನಿಶ್ಚಿತಾರ್ಥ ಭಾನುವಾರ ನೆರವೇರಿದೆ.

    ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ವಜ್ರದ ವ್ಯಾಪಾರಿ ಜೈಮಿನ್ ಶಾ ಅವರ ಪುತ್ರಿ ದಿವಾ ಜೈಮಿನ್ ಶಾ ಅವರೊಂದಿಗೆ ನಿಶ್ಚಿತಾರ್ಥ ನೆರವೇರಿದೆ. ಆಪ್ತ ಬಳಗದವರು ಹಾಗೂ ಕೌಟುಂಬಿಕ ಸ್ನೇಹಿತರನ್ನಷ್ಟೇ ನಿಶ್ಚಿತಾರ್ಥಕ್ಕೆ ಆಹ್ವಾನಿಸಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲವೆಂದು ಪತ್ನಿಯ ಕೊಲೆಗೈದ ಪತಿ

    ಜೀತ್ ಅದಾನಿ ನಿಶ್ಚಿತಾರ್ಥದ ಫೋಟೋಗಳು ಇದೀಗ ಜಾಲತಾಣದಲ್ಲಿ ಸದ್ದು ಮಾಡ್ತಿವೆ. ಕಸೂತಿ ಲೆಹೆಂಗಾದಲ್ಲಿ ವಧು ದಿವಾ ಕಂಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಭಗವಾನ್ ಶ್ರೀಕೃಷ್ಣನನ್ನೇ ವರಿಸಿದ ಎಲ್‍ಎಲ್‍ಬಿ ಪದವೀಧರೆ!

    ಪೆನ್ಸಿಲ್ವೇನಿಯಾ ಸ್ಕೂಲ್ ಆಫ್ ಎಂಜಿನಿಯರಿಂಗ್ ವಿಶ್ವವಿದ್ಯಾನಿಲಯದಲ್ಲಿ ಅಪ್ಲೈಡ್‌ ಸೈನ್ಸಸ್ ಪದವಿ ಪೂರ್ಣಗೊಳಿಸಿದ ಜೀತ್ ಅದಾನಿ, 2019ರಲ್ಲಿ ಅದಾನಿ ಸಮೂಹ (Adani Group) ಸೇರಿಕೊಂಡರು. ಪ್ರಸ್ತುತ ಅದಾನಿ ಸಮೂಹದ ಫೈನಾನ್ಸ್ ಉಪಾಧ್ಯಕ್ಷರಾಗಿದ್ದಾರೆ. ಜೊತೆಗೆ ಅದಾನಿ ಏರ್‌ಪೋರ್ಟ್ ವ್ಯವಹಾರದೊಂದಿಗೆ ಅದಾನಿ ಲ್ಯಾಬ್‌ಗಳನ್ನ ಮುನ್ನಡೆಸುತ್ತಾರೆ ಎನ್ನಲಾಗಿದೆ.

  • ಭಾರತ್ ಬಜಾಜ್ ಆಟೋ ಅಧ್ಯಕ್ಷ ರಾಹುಲ್ ಬಜಾಜ್‌ ನಿಧನ

    ಭಾರತ್ ಬಜಾಜ್ ಆಟೋ ಅಧ್ಯಕ್ಷ ರಾಹುಲ್ ಬಜಾಜ್‌ ನಿಧನ

    ನವದೆಹಲಿ: ಉದ್ಯಮಿ, ಭಾರತ್ ಬಜಾಜ್ ಆಟೋದ ಮಾಜಿ ಅಧ್ಯಕ್ಷರು ಆಗಿರುವ 83 ವರ್ಷದ ರಾಹುಲ್ ಬಜಾಜ್ ನಿಧನರಾಗಿದ್ದಾರೆ.ಈ ಕುರಿತಾಗಿ ಸಂಸ್ಥೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.

    1972ರಲ್ಲಿ ಬಜಾಜ್ ಗ್ರೂಪ್‍ನ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಬಜಾಜ್ ಅವರು, ಸುಮಾರು 5 ದಶಕಗಳ ಕಾಲ ಬಾಜಜ್ ಗ್ರೂಪ್ ಆಫ್ ಕಂಪನಿಗಳೊಂದಿಗೆ ಅನುಬಂಧ ಹೊಂದಿದ್ದರು. ಇದನ್ನೂ ಓದಿ: ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ವಿತರಣೆ

    ದೇಶದಲ್ಲೇ ಅತ್ಯಂತ ಯಶಸ್ವಿ ಉದ್ಯಮಿಗಳಲ್ಲಿ ರಾಹುಲ್ ಬಜಾಜ್ ಅವರ ಕೂಡ ಒಬ್ಬರಾಗಿದ್ದು, ದ್ವಿಚಕ್ರ ವಾಹನ ಹಾಗೂ ತ್ರಿ ಚಕ್ರವಾಹನಗಳ ರಂಗದಲ್ಲಿ ಹಲವು ನೂತನ ಆವಿಷ್ಕಾರಗಳಿಗೆ ಕಾರಣರಾಗಿದ್ದರು, ಇವರ ಮುಂದಾಳತ್ವ ದಲ್ಲಿ ಬಜಾಜ್ ಆಟೋ ಸಂಸ್ಥೆ ದೇಶದಲ್ಲೇ ನಂಬರ್  ಒನ್ ಸ್ಥಾನ ಪಡೆದುಕೊಂಡಿತ್ತು. ಹಾರುಲ್ ಬಜಾಜ್ ಅವರು 2006 ರಿಂದ 2010ವರೆಗೂ ರಾಜ್ಯಸಭಾ ಸದಸ್ಯರಾಗಿದ್ದರು.

    1938ರ ಜೂನ್ 10 ರಂದು ಜನಿಸಿದ್ದು, ಅರ್ಥಶಾಸ್ತ್ರ ಹಾಗೂ ಕಾನೂನು ಪದವಿ ಪಡೆದುಕೊಂಡಿದ್ದರು. ಆ ಬಳಿಕೆ ಹಾರ್ವರ್ಡ್ ವಿವಿಯಿಂದ ಎಂಬಿಎ ಪದವಿ ಪಡೆದುಕೊಂಡಿದ್ದರು. ರಾಹುಲ್ ಬಜಾಜ್ ಅವರ ಸೇವೆಗಳನ್ನು ಗುರುತಿಸಿದ ಕೇಂದ್ರ ಸರ್ಖಾರ 2001ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಕಳೆದ ಚೇರ್ಮನ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.