Tag: infiltrators

  • ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

    ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

    – ಪ.ಬಂಗಾಳ ಅಸ್ಥಿರಗೊಳಿಸಲು ಕೇಂದ್ರದಿಂದ ತಂತ್ರ

    ಕೊಲ್ಕತ್ತಾ: ಪಶ್ಚಿಮ ಬಂಗಾಳ (West Bengal) ರಾಜ್ಯವನ್ನು ಅಸ್ಥಿರಗೊಳಿಸಲು ಕೇಂದ್ರ ಭದ್ರತಾ ಪಡೆಗಳು (BSF) ಬಾಂಗ್ಲಾದೇಶದ (Bangladesh) ಭಯೋತ್ಪಾದಕರನ್ನು ಒಳ ನುಸುಳಲು ಅವಕಾಶ ಮಾಡಿಕೊಡುತ್ತಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಒಳನುಸುಳುವಿಕೆಯಿಂದ ಪಶ್ಚಿಮ ಬಂಗಾಳದಲ್ಲಿ ಶಾಂತಿ ಹಾಳಾಗುತ್ತಿದೆ ಎನ್ನುವ ಅಮಿತ್ ಶಾ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.

    ಆಡಳಿತಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದೊಳಗೆ ನುಸುಳಲು ಅವಕಾಶ ನೀಡುವುದು ಕೇಂದ್ರ ಸರ್ಕಾರದ ಯೋಚಿತ ಪ್ರಯತ್ನವಾಗಿದೆ. ಇದರ ಭಾಗವಾಗಿ ಬಾಂಗ್ಲಾದೇಶದ ಗಡಿಯನ್ನು ಕಾಪಾಡುವ ಬಿಎಸ್‌ಎಫ್ ಬಂಗಾಳದೊಳಗೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿರುವ ಎಲ್ಲಾ ಡಿಸಿಪಿಗಳಿಗೆ ಮೊಬೈಲ್‌ ಗಿಫ್ಟ್‌

    ಬಿಎಸ್‌ಎಫ್ ವಿವಿಧ ಪ್ರದೇಶಗಳಿಂದ ಬಂಗಾಳಕ್ಕೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರಿಗೆ ಚಿತ್ರಹಿಂಸೆ ನೀಡುತ್ತಿದೆ. ಟಿಎಂಸಿ ಗಡಿಯನ್ನು ಕಾಪಾಡುತ್ತಿಲ್ಲ, ಗಡಿ ನಮ್ಮ ಕೈಯಲ್ಲಿಲ್ಲ, ಆದ್ದರಿಂದ ಯಾರಾದರೂ ಟಿಎಂಸಿ ಒಳನುಸುಳುವಿಕೆಗೆ ಅನುಮತಿ ನೀಡಿದೆ ಎಂದು ಆರೋಪಿಸಿದರೆ, ಅದು ಬಿಎಸ್‌ಎಫ್‌ನದು ಎಂದು ನಾನು ಎತ್ತಿ ತೋರಿಸುತ್ತೇನೆ, ಅದು ನನ್ನ ಜವಾಬ್ದಾರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

    ಬಿಎಸ್‌ಎಫ್ ಒಳನುಸುಳುವಿಕೆಗೆ ಅವಕಾಶ ನೀಡುವ ಸ್ಥಳಗಳನ್ನು ತನಿಖೆ ಮಾಡಲು ಮತ್ತು ಗುರುತಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡುತ್ತೇನೆ. ಪೊಲೀಸರ ಬಳಿ ಎಲ್ಲಾ ಮಾಹಿತಿ ಇದೆ. ಕೇಂದ್ರದ ಬಳಿಯೂ ಇದೆ. ರಾಜೀವ್ ಕುಮಾರ್ (ಡಿಜಿಪಿ) ಮತ್ತು ಸ್ಥಳೀಯ ಮೂಲಗಳಿಂದ ನನಗೆ ಈ ಮಾಹಿತಿ ಬಂದಿದೆ. ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದರು. ಇದನ್ನೂ ಓದಿ: ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ!

    ಬಂಗಾಳ ಮತ್ತು ನೆರೆಯ ಬಾಂಗ್ಲಾದೇಶದ ನಡುವೆ ಯಾವುದೇ ದ್ವೇಷವಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ಗೂಂಡಾಗಳನ್ನು ಇಲ್ಲಿ ಅನುಮತಿಸಲಾಗುತ್ತಿದೆ. ಅವರು ಅಪರಾಧಗಳನ್ನು ಮಾಡುತ್ತಾರೆ. ಬಳಿಕ ಗಡಿಗೆ ಹಿಂತಿರುಗುತ್ತಾರೆ. ಬಿಎಸ್‌ಎಫ್ ಇದನ್ನು ಸಕ್ರಿಯಗೊಳಿಸುತ್ತಿದೆ. ಇದರಲ್ಲಿ ಕೇಂದ್ರದ ಪಾತ್ರವಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

    ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಬಾಂಗ್ಲಾದೇಶದ ಒಳನುಸುಳುವಿಕೆಗೆ ಬಂಗಾಳ ನರ್ಸರಿಯಾಗಿದೆ ಎಂದು ಹೇಳಿದರು. ಅಪರಾಧ ಚಟುವಟಿಕೆಯಲ್ಲಿ ಯಾರು ಸಿಕ್ಕಿಬೀಳುತ್ತಾರೋ ಅವರು ಬಾಂಗ್ಲಾದೇಶೀಯರು ಮತ್ತು ಅವರ ಹೆಚ್ಚಿನ ವಿಳಾಸಗಳು ಬಂಗಾಳದವು. ಮಮತಾ ದೀದಿ ಮತದ ದುರಾಸೆಯಿಂದ ಇದೆಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಬಂಗಾಳವನ್ನು ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳ ಹೆಬ್ಬಾಗಿಲು ಮಾಡುತ್ತಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಮತ್ತು ಇಡೀ ಜಗತ್ತು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಕಾನೂನು ರದ್ದಾಗೋವರೆಗೂ ಹೋರಾಟ: ಯತ್ನಾಳ್

  • ಚಿತ್ರದುರ್ಗದಲ್ಲಿ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆ

    ಚಿತ್ರದುರ್ಗದಲ್ಲಿ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆ

    ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್‌ (Private Garments) ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಚಿತ್ರದುರ್ಗ (Chitradurga) ಡಿವೈಎಸ್ಪಿ ದಿನಕರ್, ಸಿಪಿಐ ಗುಡ್ಡಪ್ಪ, ವೆಂಕಟೇಶ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳಿಕ ಪೊಲೀಸರು ಪರಿಶೀಲನೆ ಮುಂದುವರಿಸಿ, 15 ಜನ ಶಂಕಿತ ಬಾಂಗ್ಲಾ ನುಸುಳುಕೋರರನ್ನು (Infiltrators) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏಕಾಏಕಿ 60,000ಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್ ಎಪಿಎಲ್‌ಗೆ ಶಿಫ್ಟ್‌ – ಅರ್ಹ ಫಲಾನುಭವಿಗಳು ಕಣ್ಣೀರು

    ವಶಕ್ಕೆ ಪಡೆದವರ ಪೈಕಿ ಹೆಚ್ಚಿನವರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ ಪತ್ತೆಯಾಗಿದೆ. ಸದ್ಯ ಕೋಟೆ ಪೊಲೀಸ್ ಠಾಣೆಯಲ್ಲಿ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಬಾಂಗ್ಲಾ ನುಸುಳುಕೋರರ ಪತ್ತೆಗೆ ಮಂಗಳವಾರವೂ (ನವೆಂಬರ್‌ 19) ಪೊಲೀಸರ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಣದಂಡನೆಗೆ ಗುರಿಯಾದ ರಾಜೋನಾ ಕ್ಷಮಾದಾನ ಅರ್ಜಿ 2 ವಾರದಲ್ಲೇ ಇತ್ಯರ್ಥಗೊಳಿಸಿ: ಸುಪ್ರೀಂ

  • ಪಂಜಾಬ್ ಗಡಿಯಲ್ಲಿ ಐವರು ನುಸುಳುಕೋರರನ್ನು ಹೊಡೆದುರುಳಿಸಿದ ಸೇನೆ

    ಪಂಜಾಬ್ ಗಡಿಯಲ್ಲಿ ಐವರು ನುಸುಳುಕೋರರನ್ನು ಹೊಡೆದುರುಳಿಸಿದ ಸೇನೆ

    ಚಂಡೀಗಢ: ಪಾಕಿಸ್ತಾನ ಪಂಜಾಬ್ ಗಡಿಯಲ್ಲಿ ಭಾರತಕ್ಕೆ ಅಕ್ರಮವಾಗಿ ಒಳನುಸುಳುತ್ತಿದ್ದ ಐವರು ನುಸುಳುಕೋರರನ್ನು ಭಾರತೀಯ ಸೈನಿಕರು ಹೊಡೆದು ಹಾಕಿದ್ದಾರೆ.

    ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಐದು ಜನ ನುಸುಳುಕೋರರು ಪಂಜಾಬ್ ಗಡಿಯಿಂದ ಭಾರತಕ್ಕೆ ಅಕ್ರಮವಾಗಿ ಬರುತ್ತಿರುವುದನ್ನು ಸೈನಿಕರು ನೋಡಿದ್ದಾರೆ. ಈ ವೇಳೆ ಅವರನ್ನು ತಡೆಯಲು ಹೋದಾಗ ಅವರು ಸೈನಿಕರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಆಗ ಭಾರತೀಯ ಸೈನಿಕರು ಕೂಡ ದಾಳಿ ಮಾಡಿದ್ದು, ಐದು ಜನ ನುಸುಳುಕೋರರನ್ನು ಹೊಡೆದು ಹಾಕಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಭಾರತೀಯ ಸೇನೆಯ ಹಿರಿಯ ಅಧಿಕಾರಿ, ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಐದು ಮಂದಿ ನುಸುಳುಕೋರರನ್ನು ಒಂದೇ ಪ್ರಯತ್ನದಲ್ಲಿ ಭಾರತೀಯ ಸೇನೆ ಹೊಡೆದು ಹಾಕಿದೆ. ಪಾಕಿಸ್ತಾನ ಮತ್ತು ಭಾರತದ ಗಡಿ ಪ್ರದೇಶ ಸುಮಾರು 3,300 ಕಿಮೀ ವಿಸ್ತೀರ್ಣದಲ್ಲಿ ಇದೆ. ಇದರಲ್ಲಿ 553 ಕಿಮೀ ಗಡಿ ಪ್ರದೇಶ ಪಂಜಾಬ್‍ನಲ್ಲಿ ಇದೆ ಎಂದು ಹೇಳಿದ್ದಾರೆ.

    ಇಂದು ಮುಂಜಾನೆ 4.45ರ ಸುಮಾರಿಗೆ ಭಿಖಿವಿಂದ್ ಪಟ್ಟಣ ತರಣ್ ತರಣ್ ಹತ್ತಿರವಿರುವ `ದಾಲ್’ ಗಡಿ ಪೋಸ್ಟ್ ಬಳಿ ನುಸುಳುಕೋರರ ಅನುಮಾನಾಸ್ಪದ ಚಲನೆಯನ್ನು ಭಾರತೀಯ ಸೇನೆಯ 103ನೇ ಬೆಟಾಲಿಯನ್‍ನ ಸೈನಿಕರು ಗಮನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಹೋದ ಸೈನಿಕರು ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ನುಸುಳುಕೋರರು ಸೇನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಐವರು ನುಸುಳುಕೋರರು ಹತರಾಗಿದ್ದಾರೆ.

    ಶುಕ್ರವಾರ ಮಧ್ಯೆರಾತ್ರಿಯಿಂದಲೇ ಗಡಿ ಪ್ರದೇಶದಲ್ಲಿ ಕೆಲವರು ಅನುಮಾನಸ್ಪದವಾಗಿ ಓಡಾಡುತ್ತಿದ್ದರು. ಇದರಿಂದ ಸೇನೆ ಗಡಿ ಪ್ರದೇಶದ ಮೇಲೆ ಕಣ್ಣಿಟ್ಟಿತ್ತು. ಹೀಗಿರುವಾಗ ಮುಂಜಾನೆ ಬಂದೂಕುಗಳನ್ನು ಹಿಡಿದುಕೊಂಡು ಹುಲ್ಲಿನ ನಡುವೆ ಅವಿತುಕೊಂಡು ನುಸುಳುಕೋರರು ಬರುವುದನ್ನು ಸೇನೆ ಗಮನಿಸಿದೆ. ಈ ವೇಳೆ ಗುಂಡಿನ ದಾಳಿ ಮಾಡಿ ನುಸುಳುಕೋರರನ್ನು ಹೊಡೆದು ಹಾಕಿದೆ. ನುಸುಳುಕೋರರು ತಂದಿರುವ ಮದ್ದುಗುಂಡುಗಳಿಗಾಗಿ ಸೇನೆ ಹುಡುಕಾಟ ಮುಂದುವರಿಸಿದೆ.