Tag: Information Technology Act

  • ವಾಟ್ಸಪ್ ಸ್ಟೇಟಸ್ ಜವಾಬ್ದಾರಿಯುತವಾಗಿ ಹಾಕಿ – ಬಾಂಬೆ ಹೈಕೋರ್ಟ್

    ವಾಟ್ಸಪ್ ಸ್ಟೇಟಸ್ ಜವಾಬ್ದಾರಿಯುತವಾಗಿ ಹಾಕಿ – ಬಾಂಬೆ ಹೈಕೋರ್ಟ್

    ಮುಂಬೈ: ವಾಟ್ಸಪ್ ಸ್ಟೇಟಸ್ (WhatsApp) ಮೂಲಕ ಇತರರಿಗೆ ಏನನ್ನಾದರೂ ತಿಳಿಸುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಬಾಂಬೆ ಹೈಕೋರ್ಟ್‍ನ (Bombay High Court) ನಾಗ್ಪುರ ಪೀಠ ಹೇಳಿದೆ.

    ಧಾರ್ಮಿಕ ಗುಂಪಿನ ವಿರುದ್ಧ ದ್ವೇಷವನ್ನು ಹರಡಿದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ಹೇಳಿಕೆ ನೀಡಿದೆ. ಅಲ್ಲದೇ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಕೋರ್ಟ್ ನಿರಾಕರಿಸಿದೆ. ಇದನ್ನೂ ಓದಿ: ಜ್ಞಾನವ್ಯಾಪಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

    ಧಾರ್ಮಿಕ ಭಾವನೆ ಹಾಗೂ ನಂಬಿಕೆಯನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ ಬಗ್ಗೆ ದಾಖಲಾಗಿರುವ ಎಫ್‍ಐಆರ್‍ನ್ನು ರದ್ದುಗೊಳಿಸುವಂತೆ 27 ವರ್ಷದ ಕಿಶೋರ್ ಲ್ಯಾಂಡ್ಕರ್ ಎಂಬ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಪೀಠವು ವಜಾಗೊಳಿಸಿದೆ. ನೀವು ಏನು ಮಾಡುತ್ತಿದ್ದೀರಿ, ಆಲೋಚಿಸುತ್ತೀರಿ ಅಥವಾ ನೀವು ನೋಡಿದ ಯಾವುದೋ ಚಿತ್ರ, ವೀಡಿಯೊ ಆಗಿರಬಹುದು, ಅದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ. ಇದು ವ್ಯಕ್ತಿಯ ಸಂಪರ್ಕದಲ್ಲಿರುವವರಿಗೆ ಏನನ್ನಾದರೂ ತಿಳಿಸುವ ಉದ್ದೇಶವಾಗಿದೆ. ಇದು ತಿಳಿದಿರುವ ವ್ಯಕ್ತಿಗಳೊಂದಿಗೆ ಸಂವಹನದ ವಿಧಾನವಲ್ಲದೆ ಬೇರೇನೂ ಅಲ್ಲ. ಇತರರೊಂದಿಗೆ ಸಂವಹನ ಮಾಡುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.

    ಆರೋಪಿ ಧಾರ್ಮಿಕ ಭಾವನೆ ಕೆರಳಿಸುವ ವಿಚಾರವನ್ನು ಸ್ಟೇಟಸ್‍ಗೆ ಹಾಕಿದ್ದು, ಈ ಬಗ್ಗೆ ಇಂಟರ್‌ನೆಟ್ ಹುಡುಕುವಂತೆ ಸೂಚಿಸಿದ್ದಾನೆ. ಇದನ್ನು ಹುಡುಕಾಟ ಮಾಡಿದವರ ಧಾರ್ಮಿಕ ಭಾವನೆಗೆ ತೊಂದರೆಯಾಗುವಂತಹ ವಿಷಯಗಳು ಸಿಕ್ಕಿತ್ತು. ಆದರೆ ಆರೋಪಿ ತನ್ನ ಉದ್ದೇಶ ಬೇರೆಯವರಿಗೆ ನೋವು ಕೊಡುವುದಾಗಿರಲಿಲ್ಲ ಎಂದು ವಾದಿಸಿದ್ದಾನೆ. ಇದನ್ನೂ ಓದಿ: 21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ- ಜಾಮೀನು ನೀಡಿದ್ದಕ್ಕೆ ಹೈಕೋರ್ಟ್ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಇನ್ನೂ ಕೇಸ್ ದಾಖಲಿಸುತ್ತಿರುವುದು ಆಘಾತಕಾರಿ – ಸುಪ್ರೀಂಕೋರ್ಟ್

    ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಇನ್ನೂ ಕೇಸ್ ದಾಖಲಿಸುತ್ತಿರುವುದು ಆಘಾತಕಾರಿ – ಸುಪ್ರೀಂಕೋರ್ಟ್

    – ಕೇಂದ್ರಕ್ಕೆ ನೋಟಿಸ್ ನೀಡಿದ ಸುಪ್ರೀಂ

    ನವದೆಹಲಿ: ಅಸಿಂಧುಗೊಳಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಪೊಲೀಸರು ಇನ್ನೂ ಪ್ರಕರಣಗಳನ್ನು ದಾಖಲಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಆಘಾತ ವ್ಯಕ್ತಪಡಿಸಿದೆ.

    2015 ಮಾರ್ಚ್ ನಲ್ಲಿ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿದ ಕಾನೂನು ಅಡಿ ಪೊಲೀಸರು ದಾಖಲಿಸುತ್ತಿದ್ದ ದೂರುಗಳನ್ನು ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಆತಂಕ ವ್ಯಕ್ತಪಡಿಸಿತು.

    ಈ ಕಾನೂನು ರದ್ದುಪಡಿಸುವ ಮುನ್ನ ದೇಶದ್ಯಾಂತ 687 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ ಈ ಕಾನೂನು ರದ್ದಾದ ಬಳಿಕ ಪೊಲೀಸರು 1,307 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಎನ್‍ಜಿಓ ಪರವಾಗಿ ಸಂಜಯ್ ಪಾರಿಖ್ ವಾದ ಮಂಡಿಸಿದರು.

    ವಿಚಾರಣೆ ವೇಳೆ ಮಾಹಿತಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಎ ಅಡಿಯಲ್ಲಿ ದೇಶಾದ್ಯಂತ ಪೊಲೀಸರು ಇನ್ನೂ ಪ್ರಕರಣಗಳನ್ನು ದಾಖಲಿಸುತ್ತಿರುವುದು ಆಘಾತಕಾರಿ, ದುಃಖಕರ ಮತ್ತು ಆಶ್ಚರ್ಯಕರವಾಗಿದೆ ಎಂದು ಹೇಳಿದೆ.

    ಇದೇ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಈ ಕಾನೂನು ಬಳಕೆಯ ಕೆಳಗೆ ಸುಪ್ರೀಂಕೋರ್ಟ್ ಈ ಕಾನೂನು ಅಸಿಂಧುಗೊಳಿಸಿರುವ ಬಗ್ಗೆ ಚಿಕ್ಕದಾದ ಅಡಿ ಟಿಪ್ಪಣಿ ಬರೆದಿರಲಾಗಿರುತ್ತದೆ. ಆದರೆ ಅದನ್ನು ಪೊಲೀಸರು ಗಮನಿಸುವುದಿಲ್ಲ ಎಂದು ಹೇಳಿದ್ದಾರೆ.

    ವಾದ ಆಲಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ನಾವು ಈ ಬಗ್ಗೆ ಏನಾದರೂ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟರೆ ಪರಿಹಾರ ನೀಡಿ – ಸುಪ್ರೀಂ ಮಹತ್ವದ ಆದೇಶ

    ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೊಸ್ಟ್ ಹಾಕುವ ವ್ಯಕ್ತಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ಬಗ್ಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಎ ಕಾನೂನು ಸೂಚಿಸುತ್ತದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ತಾವೇ ಆಯ್ಕೆ ಮಾಡಲು ಅರ್ಹರು: ಸುಪ್ರೀಂ ಕೋರ್ಟ್

  • ಐಟಿ ಕಾಯ್ದೆಯ ಸೆಕ್ಷನ್ 66(ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳೇ ಜೈಲಿಗೆ- ಸುಪ್ರೀಂ

    ಐಟಿ ಕಾಯ್ದೆಯ ಸೆಕ್ಷನ್ 66(ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳೇ ಜೈಲಿಗೆ- ಸುಪ್ರೀಂ

    ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ 66 (ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳು ಜೈಲಿಗೆ ಹೋಗಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

    ಪ್ರಕರಣವೊಂದರ ವಿಚಾರಣೆ ವೇಳೆ ಈ ಕುರಿತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್, 2015ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (ಎ) ತೆಗೆದು ಹಾಕಲಾಗಿದೆ. ಆದರೆ ಅಧಿಕಾರಿಗಳು ಈ ಸೆಕ್ಷನ್ ಅನ್ವಯವೇ ದೂರು ದಾಖಲಿಸುತ್ತಾರೆ. ಇದು ಅಸಂವಿಧಾನಿಕವಾಗಿದ್ದು, 22 ಮಂದಿ ಮೇಲೆ ಈ ಪ್ರಕರಣದ ಅಡಿ ದೂರು ದಾಖಲಿಸಲಾಗಿದೆ ಎಂದು ಹೇ

    ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಜಸ್ಟಿಸ್ ರೋಹಿಂಟನ್ ನಾರಿಮನ್ ಮತ್ತು ವಿನೀತ್ ಸರನ್ ಅವರ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೆಕ್ಷನ್ 66 (ಎ) ಅಡಿ ಬಂಧನ ಆಗುತ್ತಿರುವುದು ಶಾಕಿಂಗ್ ಸಂಗತಿಯಾಗಿದ್ದು, ಈ ನಿಯಮದ ಅಡಿ ಬಂಧನ ಮಾಡಲು ಸೂಚಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಅಲ್ಲದೇ ಅವರನ್ನು ಜೈಲಿಗೆ ಕೂಡ ಕಳುಹಿಸಲಾಗುವುದು ಎಂದು ನ್ಯಾಯ ಪೀಠ ಹೇಳಿದೆ.

    ಸೆಕ್ಷನ್ 66 (ಎ) ಅಡಿ ಬಂಧನವಾಗುತ್ತಿರುವ ಕುರಿತು ಸಿವಿಲ್ ಲಿಬರ್ಟಿಸ್ ಫರ್ ಪೀಪಲ್ಸ್ ಯೂನಿಯನ್ (ಪಿಯುಸಿಎಲ್) ಎಂಬ ಸಂಸ್ಥೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಅಲ್ಲದೇ ಕೇಂದ್ರ ಅಪರಾಧ ದಳ ನೀಡಿರುವ ಮಾಹಿತಿ ಆಧಾರಿಸಿ ಕ್ರಮಕೈಗೊಳ್ಳುವಂತೆ ಕೋರಿತ್ತು.

    ಏನಿದು ಸೆಕ್ಷನ್ 66 (ಎ): ಪರರನ್ನು ನಿಂದಿಸುವುದು, ಸುಳ್ಳು ಸುದ್ದಿ ಹರಡುವುದು, 3ನೇ ವ್ಯಕ್ತಿಯ ವಯಕ್ತಿಕ ಮಾಹಿತಿಗೆ ಧಕ್ಕೆ ಉಂಟು ಮಾಡುವ ಹಾಗೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕ್ರಮಕೈಗೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಈ ಹಿಂದೆ ಮುಂಬೈನಲ್ಲಿ ಬಾಳ ಠಾಕ್ರೆ ನಿಧನರಾದ ಸಮಯದಲ್ಲಿ ಬಂದ್ ಘೋಷಣೆ ಮಾಡಲಾಗಿತ್ತು. ಬಂದ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಯುವತಿ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹಾಕಿದ್ದರು. ಇದನ್ನು ಮತ್ತೊಬ್ಬ ಯುವತಿ ಲೈಕ್ ಮಾಡಿ ಬಂದ್ ಮಾಡುವುದನ್ನ ಪ್ರಶ್ನಿಸಿದ್ದರು. ಪರಿಣಾಮ ಇಬ್ಬರ ಮೇಲೂ ದೂರು ದಾಖಲಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಈ ಘಟನೆ ನಡೆದ ಬಳಿಕ 66 (ಎ) ನಿಯಮದ ಬಗ್ಗೆ ಭಾರೀ ಮಟ್ಟದಲ್ಲಿ ಚರ್ಚೆ ನಡೆದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಬಳಿಕ ಕೇಂದ್ರ ಸರಕಾರ ಈ ಕಾನೂನಿಗೆ ತಿದ್ದುಪಡಿ ತಂದಿತ್ತು. ಆದರೆ ಕಾನೂನು ತಿದ್ದುಪಡಿಯಾದ ಮೇಲೂ ಇದೇ ನಿಯಮದ ಅಡಿ ಹಲವರ ಬಂಧನವಾಗಿತ್ತು.

    ವ್ಯಂಗ್ಯ ಚಿತ್ರಕಾರ ಅಸೀಮ್ ತ್ರಿವೇದಿ ಬಂಧನ ಕೂಡ ಇದೇ ಸೆಕ್ಷನ್ ಅಡಿಯಲ್ಲಿ ಮಾಡಲಾಗಿತ್ತು. ಈ ವೇಳೆ ಅವರ ಬಂಧನ ವಿರೋಧಿಸಿ ದೇಶಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ಬಳಿಕ ಮಹಾರಾಷ್ಟ್ರ ಸರ್ಕಾರ ಅವರ ಮೇಲಿನ ಪ್ರಕರಣವನ್ನು ಕೈ ಬಿಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv