Tag: Inheritance Tax

  • ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ನವದೆಹಲಿ: ಭಾರತವು ಪಿತ್ರಾರ್ಜಿತ ಆಸ್ತಿ ತೆರಿಗೆ (Inheritance Tax) ವಿಧಿಸಿದರೆ, ಅಂಬಾನಿ ಮತ್ತು ಅದಾನಿಯಂಥ ಶ್ರೀಮಂತರು ತೆರಿಗೆ ಪಾವತಿಸುವುದರಿಂದ ತಪ್ಪಿಸಿಕೊಳ್ಳಲು ದುಬೈನಂತರ ದೇಶಗಳಿಗೆ ವಲಸೆ ಹೋಗುತ್ತಾರೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಲೇಖಕ ಗೌತಮ್‌ ಸೇನ್‌ (Gautam Sen) ಹೇಳಿದ್ದಾರೆ.

    ಭಾರತದಲ್ಲಿ ಪಿತ್ರಾರ್ಜಿತ ಆಸ್ತಿಗೆ ತೆರಿಗೆ ವಿಧಿಸುವ ಕಾಂಗ್ರೆಸ್‌ನ ಪ್ರಸ್ತಾವನೆಯು ದೇಶದ ಅತಿ ಶ್ರೀಮಂತರು, ಅಂಬಾನಿ ಮತ್ತು ಅದಾನಿಯಂಥವರು ತೆರಿಗೆ ಪಾವತಿಸುವುದನ್ನು ತಪ್ಪಿಸಲು ದುಬೈನಂತಹ ದೇಶಗಳಿಗೆ ತಮ್ಮ ನೆಲೆಗಳನ್ನು ಸ್ಥಳಾಂತರಿಸಲು ಕಾರಣವಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಪೂರ್ವ ಭಾರತದ ಜನರು ಚೀನಿಯರಂತೆ, ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ: ಸ್ಯಾಮ್‌ ಪಿತ್ರೋಡಾ

    ಅಂಬಾನಿ, ಅದಾನಿ ಮತ್ತು ಟಾಟಾದಂತಹ ಭಾರತದ ಶ್ರೀಮಂತ ವ್ಯಕ್ತಿಗಳು ತೆರಿಗೆ ವಿಧಿಸದ ಸ್ವರ್ಗಗಳಿಗೆ ವಲಸೆ ಹೋಗುತ್ತಾರೆ. ಇದರಿಂದಾಗಿ ಭಾರತಕ್ಕೆ ಗಣನೀಯ ಪ್ರಮಾಣದ ಸಂಪತ್ತು ನಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

    ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಯಾದರೆ ಭಾರತೀಯ ಆರ್ಥಿಕತೆ ಮತ್ತು ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ದೇಶವನ್ನು ತೊರೆಯುತ್ತಿರುವ ಹೆಚ್ಚಿನ ಭಾರತೀಯ ಮಿಲಿಯನೇರ್‌ಗಳು ದುಬೈಗೆ ಹೋಗಿದ್ದಾರೆ. ಏಕೆಂದರೆ ದುಬೈಗೆ ಆದಾಯ ತೆರಿಗೆ ಇಲ್ಲ. ಅವರು ಯುಎಇಯಲ್ಲಿ ತಮ್ಮ ವ್ಯವಹಾರಗಳನ್ನು ಮರು-ನೋಂದಣಿ ಮಾಡಿಕೊಳ್ಳುತ್ತಾರೆ. ಇದರರ್ಥ ಭಾರತವು ಅವರಿಂದ ಕಾರ್ಪೊರೇಟ್ ತೆರಿಗೆಗಳನ್ನು ಮಾತ್ರ ಸಂಗ್ರಹಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಅನಾರೋಗ್ಯ ಕಾರಣ ನೀಡಿ ಸಿಬ್ಬಂದಿ ಸಾಮೂಹಿಕ ರಜೆ – ಏರ್ ಇಂಡಿಯಾದ 86 ವಿಮಾನ ಹಾರಾಟ ರದ್ದು

    ಇದರಿಂದ ಭಾರತಕ್ಕೆ ಅಪಾರ ಪ್ರಮಾಣದ ಸಂಪತ್ತು ನಷ್ಟವಾಗಲಿದೆ. ಈಗ ಬೇರೆ ದೇಶಗಳ ಬಗ್ಗೆ ಯೋಚಿಸಿದರೆ ಸ್ವೀಡನ್‌ಗೆ ಬಹಳ ಮಹತ್ವದ ಪಿತ್ರಾರ್ಜಿತ ತೆರಿಗೆ ಇತ್ತು. ಸ್ವೀಡನ್ ಇತಿಹಾಸದಲ್ಲಿ ವಿಶ್ವದ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಒಂದಾಗಿದೆ. ಆದರೆ ಸ್ವೀಡನ್ ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ತೆಗೆದುಹಾಕಿತು. ಏಕೆಂದರೆ ಅನೇಕ ಶ್ರೀಮಂತರು ಪಲಾಯನ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  • ಪಿತ್ರಾರ್ಜಿತ ಆಸ್ತಿಗೆ 55% ತೆರಿಗೆ – ಅಮೆರಿಕ ಉದಾಹರಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡ ಸ್ಯಾಮ್‌ ಪಿತ್ರೋಡಾ

    ಪಿತ್ರಾರ್ಜಿತ ಆಸ್ತಿಗೆ 55% ತೆರಿಗೆ – ಅಮೆರಿಕ ಉದಾಹರಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡ ಸ್ಯಾಮ್‌ ಪಿತ್ರೋಡಾ

    ನವದೆಹಲಿ:  ಭಾರತೀಯ ಸಾಗರೋತ್ತರ ಕಾಂಗ್ರೆಸ್ (Congress) ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ (Sam Pitroda) ಅವರು ಅಮೆರಿಕದ ಉತ್ತರಾಧಿಕಾರ ತೆರಿಗೆ (Inheritance Tax) ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಅಮೆರಿಕದ ಚಿಕಾಗೋದಲ್ಲಿ ಮಾತನಾಡಿದ ಅವರು, ಅಮೇರಿಕಾದ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ವ್ಯಕ್ತಿಯ ಸಂಪತ್ತಿನ ಮೇಲೆ 55% ತೆರಿಗೆ ಹಾಕಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬಕ್ಕೆ ಕೇವಲ 45 ಪ್ರತಿಶತ ಪಾಲನ್ನು ವರ್ಗಾಯಿಸಬಹುದು ಎಂದು ಹೇಳಿದ್ದಾರೆ.

    ವ್ಯಕ್ತಿಯೊಬ್ಬ 100 ಮಿಲಿಯನ್‌ ಡಾಲರ್‌ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಮಂಡ್ಯ ಪ್ರಚಾರ ರದ್ದು

    ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ. ಭಾರತದಲ್ಲಿ ಕನಿಷ್ಠ ವೇತನ ಇಲ್ಲ. ಬಡವರಿಗೆ ಇಷ್ಟು ಹಣವನ್ನು ನೀಡಬೇಕು ಎಂದು ಕಾನೂನು ತಂದರೆ ಅದು ಸಂಪತ್ತಿನ ಮರು ಹಂಚಿಕೆ ಎಂದರು.

    ಇಂದು ಶ್ರೀಮಂತರು ತಮ್ಮ ಮನೆಯ ಸಹಾಯಕರಿಗೆ ಹಣವನ್ನು ನೀಡುವುದಿಲ್ಲ. ಆದರೆ ಅವರು ದುಬೈ ಮತ್ತು ಲಂಡನ್‌ನಲ್ಲಿ ವಿಹಾರಕ್ಕೆ ಆ ಹಣವನ್ನು ಖರ್ಚು ಮಾಡುತ್ತಾರೆ. ನಮ್ಮ ಸಂಪತ್ತನ್ನು ಸಾರ್ವಜನಿಕರಿಗಾಗಿ ಬಿಟ್ಟುಬಿಡಬೇಕು ಎಂದು ಅವರು ಹೇಳಿದರು.