Tag: injection

  • ಪಾರ್ಶ್ವವಾಯು ಬಾರದಂತೆ 150 ರೂ. ಇಂಜೆಕ್ಷನ್ ಪಡೆದ CA – ಕೆಲವೇ ನಿಮಿಷಗಳಲ್ಲಿ ಆರೋಗ್ಯವಂತ ಮಹಿಳೆ ಸಾವು

    ಪಾರ್ಶ್ವವಾಯು ಬಾರದಂತೆ 150 ರೂ. ಇಂಜೆಕ್ಷನ್ ಪಡೆದ CA – ಕೆಲವೇ ನಿಮಿಷಗಳಲ್ಲಿ ಆರೋಗ್ಯವಂತ ಮಹಿಳೆ ಸಾವು

    ಕಾರವಾರ: ಪಾರ್ಶ್ವವಾಯುವಿಗೆ (Paralysis) ಚಿಕಿತ್ಸೆ ನೀಡುವ ಆಸ್ಪತ್ರೆಯ ವೈದರು ಆರೋಗ್ಯವಾಗಿದ್ದ ಮಹಿಳೆಗೆ ಪಾರ್ಶ್ವವಾಯು ಬಾರದಂತೆ ಇಂಜೆಕ್ಷನ್ (Injection) ನೀಡಿ ಆಕೆಯ ಸಾವಿಗೆ ಕಾರಣವಾದ ಆಘಾತಕಾರಿ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ (Karwar) ತಾಲೂಕಿನ ಹಳಗ ಗ್ರಾಮದ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಕೊಪ್ಪಳ ಮೂಲದ ಚಾರ್ಟೆಡ್ ಅಕೌಂಟೆಂಟ್ ಸ್ವಪ್ನ ರಾಯ್ಕರ್ (32) ಮೃತ ಮಹಿಳೆ. ಈಕೆಯ ತಂದೆ ಕೇಶವ್ ಪಾಶ್ವವಾಯುವಿಗೆ ಇಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ತಮ್ಮ ಕುಟುಂಬದವರಿಗೆ ಮೈ-ಕೈ ನೋವು ಇರಿವುದರಿಂದ ಸ್ವಪ್ನ ಸೇರಿ 4 ಜನ ಆಸ್ಪತ್ರೆ ವೈದ್ಯರ ಸಲಹೆ ಪಡೆದು ಪಾರ್ಶ್ವವಾಯು ಬಾರದಂತೆ ಇಂಜೆಕ್ಷನ್ ಪಡೆದಿದ್ದಾರೆ. ಚುಚ್ಚುಮದ್ದು ಪಡೆದ 3 ಜನರಿಗೆ ಏನೂ ಆಗದೆ ಸ್ವಪ್ನ ಮಾತ್ರ ಇಂಜೆಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಮೃತರಾಗಿದ್ದಾರೆ.

    ಪಾರ್ಶ್ವವಾಯುವಿಗೆ ಮಾತ್ರ ಈ ಆಸ್ಪತ್ರೆಯಲ್ಲಿ ಚುಚ್ಚುಮದ್ದು ನೀಡಲಾಗುತ್ತಿದ್ದು, ಪ್ರತಿ ಇಂಜೆಕ್ಷನ್‌ಗೆ ಕೇವಲ 150 ರೂ. ತೆಗೆದುಕೊಳ್ಳಲಾಗುತ್ತಿದೆ. ರಾಜ್ಯ, ಹೊರ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಇಂಜೆಕ್ಷನ್ ತೆಗೆದುಕೊಳ್ಳಲು ಜನರು ಬರುತ್ತಾರೆ. ಈ ಹಿಂದೆ ಈ ಆಸ್ಪತ್ರೆ ವಿರುದ್ಧ ಸಾಕಷ್ಟು ದೂರುಗಳಿದ್ದರೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮಾತ್ರ ಕ್ರಮ ಕೈಗೊಂಡಿರಲಿಲ್ಲ. ಇದನ್ನೂ ಓದಿ: ಎಮ್ಮೆಗಳ ಜೊತೆ ಸೇರಲು ಬಿಡದಿದ್ದಕ್ಕೆ ಮಾಲೀಕನನ್ನೇ ಇರಿದು ಕೊಂದ ಕೋಣ

    ವಿದ್ಯಾವಂತರಾಗಿದ್ದರೂ ಮುಂದೆ ತಂದೆಗೆ ಆದ ಪಾರ್ಶ್ವವಾಯು ತನಗೂ ಬರಬಹುದು ಎಂಬ ಭಯ ಹಾಗೂ ವೈದ್ಯರ ನಿರ್ಲಕ್ಷ ಸ್ವಪ್ನ ಅವರ ಸಾವಿಗೆ ಕಾರಣವಾದರೆ 3 ವರ್ಷದ ಅವರ ಮಗು ಅನಾಥವಾಗಿದೆ. ಘಟನೆ ಸಂಬಂಧ ಕಾರವಾರದ ಚಿತ್ತಾಕುಲ ಠಾಣೆಯಲ್ಲಿ ಮೃತ ಮಹಿಳೆ ಸಂಬಂಧಿಕರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬೀದರ್ ಪೊಲೀಸರ ಕಾರ್ಯಾಚರಣೆ – 7 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

  • ಜ್ವರಕ್ಕೆ ಚುಚ್ಚು ಮದ್ದು ತೆಗೆದುಕೊಂಡ ಬಾಲಕ ಸಾವು – ನಕಲಿ ವೈದ್ಯ ಅರೆಸ್ಟ್

    ಜ್ವರಕ್ಕೆ ಚುಚ್ಚು ಮದ್ದು ತೆಗೆದುಕೊಂಡ ಬಾಲಕ ಸಾವು – ನಕಲಿ ವೈದ್ಯ ಅರೆಸ್ಟ್

    ಚೆನ್ನೈ: ನಕಲಿ ವೈದ್ಯನೊಬ್ಬ (Fake Doctor) ಚುಚ್ಚುಮದ್ದು (Injection) ನೀಡಿದ್ದರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕ (Boy) ಸಾವನ್ನಪ್ಪಿರುವ ಘಟನೆ ತಮಿಳುನಾಡಿನ (Tamilnadu) ವಿರುದುನಗರದಲ್ಲಿ ನಡೆದಿದೆ.

    ವರದಿಗಳ ಪ್ರಕಾರ ಬಾಲಕ ಕವಿ ದೇವನಾಥನ್‌ಗೆ ನವೆಂಬರ್ 4 ರಂದು ಅನಾರೋಗ್ಯ ಕಾಣಿಸಿಕೊಂಡಿತ್ತು. ಆತನನ್ನು ತಂದೆ ಮಹೇಶ್ವರನ್ ಸ್ಥಳೀಯವಾಗಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಕ್ಯಾಥರೀನ್ ಬಳಿಗೆ ಕರೆದುಕೊಂಡು ಬಂದಿದ್ದರು. ಬಾಲಕನಿಗೆ ನಕಲಿ ವೈದ್ಯ ಜ್ವರಕ್ಕಾಗಿ ಚುಚ್ಚುಮದ್ದನ್ನು ನೀಡಿದ್ದು, ಮನೆಗೆ ಹಿಂದಿರುಗಿದಾಗ ಬಾಲಕನ ಕಾಲುಗಳು ಊದಿಕೊಳ್ಳಲು ಪ್ರಾರಂಭಿಸಿತ್ತು.

    ಬಳಿಕ ಬಾಲಕನನ್ನು ಮಹೇಶ್ವರನ್ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ವೈದ್ಯರು ಮಹೇಶ್ವರನ್ ಅವರ ಮನವಿಯ ಮೇರೆಗೆ ಪ್ಯಾರಸಿಟಮಾಲ್ ಚುಚ್ಚುಮದ್ದನ್ನು ನೀಡಿದರು. ಆದರೆ ಬಾಲಕನನ್ನು ಮನೆಗೆ ವಾಪಸ್ ಕರೆದುಕೊಂಡು ಹೋದಾಗ ಆತ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಬಾಲಕಿಯ ಗುಪ್ತಾಂಗದ ಮೇಲೆ ಮೇಣದ ಬತ್ತಿ ಇಟ್ಟು ಅತ್ಯಾಚಾರ- ಬಂಧನ ಭೀತಿಗೆ ವಿಷ ಸೇವಿಸಿದ ವೃದ್ಧ

    ತಕ್ಷಣ ಬಾಲಕನನ್ನು ರಾಜಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ಮಹೇಶ್ವರನ್ ಅವರು ನೀಡಿರುವ ದೂರಿನ ಆಧಾರದ ಮೇಲೆ ಆರೋಗ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ತನಿಖಾ ತಂಡ ಕ್ಯಾಥರೀನ್‌ನ ಕ್ಲಿನಿಕ್ ಅನ್ನು ತಲುಪಿದಾಗ ಅಲ್ಲಿ ಆತ ನಕಲಿ ವೈದ್ಯ ಎಂಬುದು ತಿಳಿದುಬಂದಿದೆ. ಆತನ ಬಳಿ ವೈದ್ಯಕೀಯ ವೃತ್ತಿಗೆ ಸಂಬಂಧಿಸಿದಂತೆ ಅರ್ಹ ದಾಖಲೆಗಳು ಲಭ್ಯವಾಗಿಲ್ಲ ಎಂಬುದನ್ನು ತಿಳಿದ ಬಾಲಕನ ಕುಟುಂಬ ಆಘಾತಕ್ಕೊಳಗಾಗಿದೆ. ತನಿಖಾ ತಂಡ ಬಳಿಕ ನಕಲಿ ವೈದ್ಯನ ಕ್ಲಿನಿಕ್‌ನಲ್ಲಿದ್ದ ಹಲವಾರು ಔಷಧ ಹಾಗೂ ಚುಚ್ಚುಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಕ್ಯಾಥರೀನ್‌ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: 79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿಕೊಂಡ್ಲು – ಹನಿಟ್ರ್ಯಾಪ್‍ಗೆ ಯತ್ನಿಸಿದ ಖತರ್ನಾಕ್ ಆಂಟಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು – ನರ್ಸ್‌ ವಿರುದ್ಧ ಕುಟುಂಬಸ್ಥರ ಆಕ್ರೋಶ

    ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು – ನರ್ಸ್‌ ವಿರುದ್ಧ ಕುಟುಂಬಸ್ಥರ ಆಕ್ರೋಶ

    ತಿರುವನಂತಪುರಂ: ಜ್ವರದಿಂದ ಬಳಲುತ್ತಿದ್ದ 45 ವರ್ಷದ ಮಹಿಳೆಯೊಬ್ಬರಿಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಸಾವನ್ನಪ್ಪಿರುವ ಘಟನೆ ಕೇರಳದ (Kerala) ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ( Kozhikode Medical College) ನಡೆದಿದೆ.

    ಮೃತರನ್ನು ಕೋಯಿಕ್ಕೋಡ್‍ನ ಕೂಡರಂಜಿ ನಿವಾಸಿ ಸಿಂಧು ಎಂದು ಗುರುತಿಸಲಾಗಿದೆ. ನರ್ಸ್ ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಸಿಂಧು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗುರುವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಂಧು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ ಚೆನ್ನಾಗಿಯೇ ಇದ್ದರು, ಆದರೆ ನರ್ಸ್ ತಪ್ಪಾದ ಇಂಜೆಕ್ಷನ್ ನೀಡಿದ ಬಳಿಕ ಅವರ ಆರೋಗ್ಯ ಹದಗೆಡಲು ಪ್ರಾರಂಭವಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಮೃತ ಸಿಂಧು ಪತಿ ರಘು ಅವರು, ಇದು ನರ್ಸ್‍ನ ತಪ್ಪು, ಕೊನೆ ಕ್ಷಣದಲ್ಲಿ ನನ್ನ ಹೆಂಡತಿ ಬಹಳ ಬೆವರುತ್ತಿದ್ದಳು. ಇಂಜೆಕ್ಷನ್ ನೀಡಿದ ಬಳಿಕ ನಾನು ಆರೋಗ್ಯವಾಗಿಲ್ಲ ಎಂದು ಹೇಳುತ್ತಿದ್ದಳು. ಹೀಗಾಗಿ ನರ್ಸ್‍ಗೆ ಕರೆ ಮಾಡಿ ಕೇಳಿದಾಗ ಭಯ ಪಡುವ ಅಗತ್ಯವಿಲ್ಲ. ಅವರ ಆರೋಗ್ಯ ಸ್ಥಿರವಾಗಿಯೇ ಇದೆ ಎಂದು ಹೇಳಿದ್ದರು. ಆದರೆ ಇಂಜೆಕ್ಷನ್ ನೀಡಿದ ಬಳಿಕ ನನ್ನ ಪತ್ನಿ ಆರೋಗ್ಯ ಹದಗೆಡಲು ಆರಂಭವಾಯಿತು. ನನ್ನ ಮಡಿಲಿನಲ್ಲಿಯೇ ನನ್ನ ಪತ್ನಿ ಪ್ರಾಣಬಿಟ್ಟಿದ್ದಾಳೆ. ನಿನ್ನೆ ಬಳಸಿದ್ದ ಔಷಧವನ್ನೇ ಇಂದು ಕೂಡ ಆಸ್ಪತ್ರೆಯಲ್ಲಿ ಬಳಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿ ಕೈವಾಡ!

    ಆದರೆ ಆಸ್ಪತ್ರೆ ಮಾತ್ರ ಕುಟುಂಬಸ್ಥರ ಆರೋಪವನ್ನು ನಿರಾಕರಿಸಿದ್ದು, ಮಹಿಳೆ ಅಚಾನಕ್ ಆಗಿ ಸಾವನ್ನಪ್ಪಿರವ ಬಗ್ಗೆ ಸ್ಪಷ್ಟವಾದ ಮಾಹಿತಿ ತಿಳಿದುಬಂದಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಈ ಬಗ್ಗೆ ಮೃತ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಘಟನೆ ಸಂಬಂಧ ಸಂಪೂರ್ಣ ತನಿಖೆ ನಡೆಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಆದೇಶಿಸಿದ್ದಾರೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    Live Tv
    [brid partner=56869869 player=32851 video=960834 autoplay=true]

  • 16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ

    16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ

    – ಮಗುವನ್ನ ಉಳಿಸಲು ಸಹಾಯ ಬೇಡುತ್ತಿರುವ ಪೋಷಕರು

    ರಾಯಚೂರು: ಇಲ್ಲಿನ ವಿರೇಶ್- ಶ್ವೇತಾ ದಂಪತಿಯ ಒಂದು ವರ್ಷದ ಮಗು ಸಾತ್ವಿಕ್ ನಂದನ್ ಸ್ಪೈನಲ್‌ ಮಸ್ಕೂಲರ್ ಆಟ್ರೋಪಿ ಟೈಪ್-1 ಕಾಯಿಲೆಯಿಂದ ಬಳಲುತ್ತಿದ್ದು, ಸಹಾಯಕ್ಕಾಗಿ ಪೋಷಕರು ಅಂಗಲಾಚುತ್ತಿದ್ದಾರೆ.

    ಮಗು ಒಂದು ತಿಂಗಳು ಇದ್ದಾಗಲೇ ಸ್ಪೈನಲ್‌ ಮಸ್ಕೂಲರ್ ಆಟ್ರೋಪಿ ಟೈಪ್-1 ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದೆ. ಮೊದಲು ನ್ಯುಮೋನಿಯಾ ಅಂದುಕೊಂಡಿದ್ದ ಇವರು ಹತ್ತಾರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಇದೀಗ ಈ ಕಾಯಿಲೆಯಿಂದ ಗುಣಪಡಿಸಲು ವೈದ್ಯರು ಔಷಧ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಕಾಂಗ್ರೆಸ್‌ ಮುಖಂಡನ ಕೂದಲು ಹಿಡಿದು ಜೀಪಿನೊಳಗೆ ದಬ್ಬಿದ ಪೊಲೀಸರು

    16 ಕೋಟಿ ರೂ. ಮೌಲ್ಯದ ಜೋಲ್ಗಸ್ಮಾ ಎಂಬ ಇಂಜೆಕ್ಷನ್ ಕೊಡಿಸಬೇಕು. ಇದೊಂದೆ ಮಗುವಿನ ಕಾಯಿಲೆಗೆ ಚಿಕಿತ್ಸೆ. ಇಲ್ಲದಿದ್ದರೆ ಮಗು ಬದುಕುಳಿಯುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಚುಚ್ಚುಮದ್ದು ಭಾರತದಲ್ಲಿ ಸಿಗೋದಿಲ್ಲ, ಅಮೆರಿಕದಿಂದ ತರಿಸಬೇಕು. ಆದರೆ ತಿಂಗಳಿಗೆ 8 ಸಾವಿರ ವೇತನ ಪಡೆಯುವ ತಂದೆ ವಿರೇಶ್ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಿ, ಸಾಲ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈಗಾಗಲೇ ಸುಮಾರು 5 ಲಕ್ಷ ರೂ. ಖರ್ಚಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

    ಇದೇ ಜುಲೈ 26ಕ್ಕೆ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ ಬರುತ್ತಿದ್ದು, ಮಗುವನ್ನು ಉಳಿಸಿಕೊಡುವಂತೆ ಬೇಡಿಕೊಳ್ಳುತ್ತಿದ್ದಾರೆ. ಚುಚ್ಚುಮದ್ದಿನ ಬೆಲೆ 16 ಕೋಟಿ ರೂ. ಇದ್ದು, ಹೆಚ್ಚುವರಿ ತೆರಿಗೆ ಸೇರಿ 18 ಕೋಟಿ ರೂ. ಆಗಲಿದೆ. ಸಹೃದಯರಾದ ಕನ್ನಡಿಗರು ಹಾಗೂ ಸರ್ಕಾರ ಕೂಡಲೇ ನಮ್ಮ ನೆರವಿಗೆ ಬಂದು ಈ ಔಷಧ ಕೊಡಿಸಿ ಎಂದು ಪೋಷಕರು ಬೇಡಿಕೊಳ್ಳುತ್ತಿದ್ದಾರೆ ಎಂದು ಕೋರಿದ್ದಾರೆ.

    Name – Veeresh
    A/c- 18132200114731
    IFSC – CNRB0011813
    Canara Bank. Deosugur 584170. Dist Raichur. Tq Raichur
    PH no – 9036695059

    Live Tv
    [brid partner=56869869 player=32851 video=960834 autoplay=true]

  • ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

    ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

    ಶಿವಮೊಗ್ಗ: ಬೇರೆ-ಬೇರೆ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 14 ಮಕ್ಕಳು ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ ನಂತರ ಅಸ್ವಸ್ಥಗೊಂಡ ಘಟನೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ-ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ 4 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದ ಖ್ಯಾತ ನಿರ್ಮಾಪಕನ ಕಾರು ಅಪಘಾತ 

    ಘಟನೆ ನಂತರ ಮಕ್ಕಳ ಪೋಷಕರು, ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಪೋಷಕರು ಹಾಗೂ ವೈದ್ಯರಿಂದ ಮಾಹಿತಿ ಪಡೆದರು.

    ಅಲ್ಲದೇ ಘಟನೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಪೋಷಕರು ಭಯಪಡುವ ಅಗತ್ಯವಿಲ್ಲ. ಯಾವುದೇ ಮಕ್ಕಳಿಗೂ ಪ್ರಾಣಾಪಾಯ ಇಲ್ಲ. ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ಕೋವಿಡ್‌ ಕೇಸ್‌ ಕಡಿಮೆ ದಾಖಲು – ಇಂದು 133 ಮಂದಿಗೆ ಸೋಂಕು

    Live Tv

  • 16 ಕೋಟಿ ಬೆಲೆಯ ಇಂಜೆಕ್ಷನ್‍ಗೆ ಬಡದಂಪತಿಯ ಪರದಾಟ

    16 ಕೋಟಿ ಬೆಲೆಯ ಇಂಜೆಕ್ಷನ್‍ಗೆ ಬಡದಂಪತಿಯ ಪರದಾಟ

    ಚಿಕ್ಕಬಳ್ಳಾಪುರ: ಹೆತ್ತ ಮಗನನ್ನು ಉಳಿಸಿಕೊಳ್ಳೋಕೆ 16 ಕೋಟಿ ದುಬಾರಿ ಬೆಲೆಯ ಇಂಜೆಕ್ಷನ್‍ಗೆ ಬಡದಂಪತಿ ಪರದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಬಳಿ ಧನಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಲ್ಲಸಂದ್ರ ಗ್ರಾಮದ ದಂಪತಿ ನಂದೀಶ್ ಹಾಗೂ ಸೌಮ್ಯಲತಾ ದಂಪತಿಯ ಮಗ ಯಶ್ವಿಕ್‍ಗೆ ಎಸ್‍ಎಂಎ ಖಾಯಿಲೆ ಆವರಿಸಿದೆ. ಎಸ್‍ಎಂಎ ಅಂದರೆ ಸ್ಪೈನಲ್ ಮಸ್ಕುಲರ್ ಅಟ್ರೋಫಿ ಇದು ದೇಹದ ಸ್ನಾಯುಗಳನ್ನ ದುರ್ಬಲಗೊಳಿಸುವ ನರಸಂಬಂಧಿತ ಕಾಯಿಲೆಯಾಗಿದೆ. ಇದನ್ನೂ ಓದಿ: ಕಿರಿಕ್ ಪ್ರಶ್ನೆಯನ್ನು ಕೇಳಿದ ಅಭಿಮಾನಿಯ ಬಾಯಿ ಮುಚ್ಚಿಸಿದ ಸಮಂತಾ

    1000 ಮಕ್ಕಳಲ್ಲಿ ಒಬ್ಬರಿಗೆ ಈ ಖಾಯಿಲೆ ತಗಲುವ ಸಾಧ್ಯತೆಯಿದ್ದು, ಈ ಕಾಯಿಲೆಗೆ ಗುರಿಯಾದ ಮಗು 2 ವರ್ಷಕ್ಕಿಂತ ಹೆಚ್ಚು ಬದುಕುವುದಿಲ್ಲ ಅಂತ ಹೇಳಲಾಗುತ್ತೆ. ಇನ್ನೂ ಈ ಖಾಯಿಲೆ ಗುಣಪಡಿಸಲು ಇರುವ ಏಕೈಕ ಔಷಧಿ ಝೊಲ್ಗೆನ್ಸಾ ಇಂಜೆಕ್ಷನ್. ಇದು ಅಮೇರಿಕಾದಲ್ಲಿ ಮಾತ್ರ ಲಭ್ಯವಿದ್ದು, ಒಂದು ಇಂಜೆಕ್ಷನ್‍ನ ಬೆಲೆ 16 ಕೋಟಿ ರೂಪಾಯಿ ಇದೆ. ಇದನ್ನೂ ಓದಿ: ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

    ಗ್ರಾಮ ಪಂಚಾಯತಿ ಕರ ವಸೂಲಿಗಾರನಾಗಿರುವ ಯಶ್ವಿಕ್ ತಂದೆ ತಾಯಿಗೆ ಈ ಹಣ ಭರಿಸಲು ಶಕ್ತರಾಗಿಲ್ಲ. ಹೀಗಾಗಿ ಸಾರ್ವಜನಿಕರು ಸಹಾಯ ಮಾಡುವಂತೆ ಬಡ ದಂಪತಿ ಅಂಗಲಾಚುತ್ತಿದ್ದಾರೆ. ಅವರ ಮೊಬೈಲ್ ಸಂಖ್ಯೆ 9148495959 ಆಗಿದ್ದು ಯುಪಿಐ ಮೂಲಕ ವರ್ಗಾವಣೆ ಮಾಡಬಹುದಾಗಿದೆ.

  • 21 ಲಕ್ಷ ರೂ. ಮೌಲ್ಯದ ಆಕ್ಸಿಟೋಸಿನ್ ಚುಚ್ಚುಮದ್ದು ವಶ

    ನವದೆಹಲಿ: ರೈಲು ನಿಲ್ದಾಣದಲ್ಲಿ ಸುಮಾರು 21 ಲಕ್ಷ ರೂ. ಮೌಲ್ಯದ ಜಾನುವಾರುಗಳಿಗೆ ನೀಡಲಾಗುವ ಆಕ್ಸಿಟೋಸಿನ್ ಚುಚ್ಚು ಮದ್ದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಔಷಧ ನಿಯಂತ್ರಣ ಇಲಾಖೆ ತಿಳಿಸಿದೆ.

    ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು ಜಾನುವಾರುಗಳಿಗೆ ಆಕ್ಸಿಟೋಸಿನ್ ಚುಚ್ಚುಮದ್ದು ನೀಡಲಾಗುತ್ತದೆ. ಈ ಔಷಧ ದನಕರುಗಳು ಹಾಗೂ ಅವುಗಳ ಹಾಲು ಕುಡಿಯುವವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

    ಬಿಹಾರದ ಗಯಾದಿಂದ ಪಶುವೈದ್ಯಕೀಯ ಆಕ್ಸಿಟೋಸಿನ್ ಚುಚ್ಚುಮದ್ದನ್ನು ನವದೆಹಲಿ ರೈಲು ನಿಲ್ದಾಣಕ್ಕೆ ತಲುಪಿಸಿರುವ ಬಗ್ಗೆ ದೆಹಲಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಬಳಿಕ ರೈಲು ನಿಲ್ದಾಣದ ಪಾರ್ಸೆಲ್ ಗೋಡೌನ್‌ನಲ್ಲಿ ಅದನ್ನು ವಶಪಡಿಸಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ: ಮೋದಿ

    ಜನವರಿ 31 ರಂದು ರೈಲು ನಿಲ್ದಾಣದ ಆವರಣದಲ್ಲಿ ಪರಿಶೀಲನೆಗೆ ಡ್ರಗ್ಸ್ ಇನ್‌ಸ್ಪೆಕ್ಟರ್‌ಗಳ ತಂಡವನ್ನು ನಿಯೋಜಿಸಲಾಗಿತ್ತು. ಸಿಟಿ ಸ್ಟೇಷನ್‌ನ ಅಜ್ಮೇರಿ ಗೇಟ್ ಬದಿಯಲ್ಲಿರುವ ಪಾರ್ಸೆಲ್ ಗೋಡೌನ್‌ನ ಆವರಣವನ್ನು ಪರಿಶೀಲಿಸಿದಾಗ ಆಕ್ಸಿಟೋಸಿನ್ ಚುಚ್ಚುಮದ್ದಿನ ದಾಸ್ತಾನು ಮಾಡಿರುವುದು ಕಂಡುಬಂದಿದೆ. ಅದರಲ್ಲಿ ಸುಮಾರು 2 ಲಕ್ಷ ಚುಚ್ಚುಮದ್ದಿನ ವಯಲ್ ಇದ್ದವು ಎಂದು ತಿಳಿಸಿದ್ದಾರೆ.

    ಇಷ್ಟು ದೊಡ್ಡ ಮಟ್ಟದ ದಾಸ್ತಾನಿನ ಬಗ್ಗೆ ಪಾರ್ಸೆಲ್ ಮೇಲ್ವಿಚಾರಕನನ್ನು ಪ್ರಶ್ನಿಸಿದಾಗ ಅದನ್ನು ಇಬ್ಬರಿಗೆ ತಲುಪಿಸುವ ಆದೇಶ ಬಂದಿರುವುದಾಗಿ ತಿಳಿಸಿದ್ದಾರೆ. ಈ ಔಷಧಗಳು ಅನುಮಾನಾಸ್ಪದ ಗುಣಮಟ್ಟದ್ದು ಎಂದು ಶಂಕಿಸಿದ್ದು, ಅವುಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ:  ಅಶ್ಲೀಲ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನ ಕೊಂದು ಬ್ಯಾಗ್‍ನಲ್ಲಿ ತುಂಬಿದ್ರು

    ಔಷಧವನ್ನು ವಶಪಡಿಸಿಕೊಂಡ ಬಗ್ಗೆ ಸಂಬಂಧಪಟ್ಟ ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಈ ಔಷಧದ ಪೂರೈಕೆಯ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

  • ಸ್ವಚ್ಛತಾ ಸಿಬ್ಬಂದಿ ಕೊಟ್ಟ ಬದಲಿ ಚುಚ್ಚುಮದ್ದಿನಿಂದ ಮಗುವಿನ ಪ್ರಾಣವೇ ಹೋಯ್ತು!

    ಸ್ವಚ್ಛತಾ ಸಿಬ್ಬಂದಿ ಕೊಟ್ಟ ಬದಲಿ ಚುಚ್ಚುಮದ್ದಿನಿಂದ ಮಗುವಿನ ಪ್ರಾಣವೇ ಹೋಯ್ತು!

    ಮುಂಬೈ: ಬದಲಿ ಚುಚ್ಚು ಮದ್ದು ನೀಡಿದುದರ ಪರಿಣಾಮ 2 ವರ್ಷದ ಮಗು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಗೋವಂಡಿಯ ನೂರ್ ಆಸ್ಪತ್ರೆಯಲ್ಲಿ ನಡೆದಿದೆ. ಚುಚ್ಚು ಮದ್ದನ್ನು ಆಸ್ಪತ್ರೆಯಲ್ಲಿ ಕೆಲಸಕ್ಕಿದ್ದ 18 ವರ್ಷದ ಸ್ವಚ್ಛತಾ ಸಿಬ್ಬಂದಿ ನೀಡಿರುವ ವಿಷಯ ಆಘಾತ ತಂದಿದೆ.

    ಲೂಸ್ ಮೋಶನ್ ಸಮಸ್ಯೆಯಿಂದ ಬಳಲುತ್ತಿದ್ದ 2 ವರ್ಷದ ಮಗುವನ್ನು ಜನವರಿ 8 ರಂದು ನೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ದಾಖಲಾಗಿದ್ದ ವಾರ್ಡ್ನಲ್ಲಿಯೇ ಮತ್ತೊಬ್ಬ ಮಲೇರಿಯಾ ರೋಗಿ ದಾಖಲಾಗಿದ್ದ. ಆತನಿಗೆ ನೀಡಬೇಕಿದ್ದ ಚುಚ್ಚು ಮದ್ದನ್ನು ತಪ್ಪಾಗಿ ಮಗುವಿಗೆ ನೀಡಲಾಗಿದೆ. ಇದರಿಂದ ಮಗು ಮೃತಪಟ್ಟಿದೆ ಎನ್ನಲಾಗಿದೆ. ಇದನ್ನೂ ಓದಿ: ಡಾನ್ಸ್ ಮಾಡಿದ ವಧುವಿನ ಕೆನ್ನೆಗೆ ಹೊಡೆದ ವರ- ಮದುವೆ ಮುರಿದು ಬಿತ್ತು

    ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ವಚ್ಚತಾ ಸಿಬ್ಬಂದಿ ಚುಚ್ಚು ಮದ್ದನ್ನು ನೀಡಿರುವ ವಿಷಯ ತಿಳಿದು ಬಂದಿದೆ. ಇದರಿಂದ ಜನವರಿ 13ರಂದು ಮಗು ಸಾವನ್ನಪ್ಪಿದೆ. ವಿಷಯ ತಿಳಿದ ಪೋಷಕರು ಆಸ್ಪತ್ರೆಯಲ್ಲಿ ಗಲಾಟೆ ನಡೆಸಲು ಪ್ರಾರಂಭಿಸಿದ್ದಾರೆ. ಈ ನಡುವೆ ಮಗುವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದನ್ನೂ ಓದಿ: ಬೀದಿ ನಾಯಿಗಳ ಅಟ್ಟಹಾಸಕ್ಕೆ 3 ವರ್ಷದ ಬಾಲಕಿ ಬಲಿ

    POLICE JEEP

    ಮಗುವನ್ನು ಕಳೆದುಕೊಂಡ ಕುಟುಂಬ ಬುಧವಾರ ಆಸ್ಪತ್ರೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆಸ್ಪತ್ರೆ ಮಾಲೀಕ ನಾಸಿರುದ್ದೀನ್ ಸೈಯದ್(63), ಡಾ. ಅಲ್ತಫ್ ಖಾನ್, ನರ್ಸ್ ಸಲೀಮುನ್ನಿಸಾ ಖಾನ್(21) ಹಾಗೂ ಸ್ವಚ್ಛತಾ ಸಿಬ್ಬಂದಿ ನರ್ಗೀಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

  • ನರ್ಸ್ ಎಡವಟ್ಟು – ತಪ್ಪಾದ ಚುಚ್ಚು ಮದ್ದು ನೀಡಿದ್ದರಿಂದ ರೋಗಿ ಸಾವು

    ನರ್ಸ್ ಎಡವಟ್ಟು – ತಪ್ಪಾದ ಚುಚ್ಚು ಮದ್ದು ನೀಡಿದ್ದರಿಂದ ರೋಗಿ ಸಾವು

    ಮುಂಬೈ: ನರ್ಸ್ ಒಬ್ಬರು ತಪ್ಪಾದ ಚುಚ್ಚು ಮದ್ದನ್ನು ನೀಡಿದ್ದರಿಂದ ರೋಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ನರ್ಸ್ ಅನ್ನು ಬಂಧಿಸಿದ್ದಾರೆ. ಘಟನೆ ಮುಂಬೈಯ ಶಿವಾಜಿನಗರದಲ್ಲಿರುವ ಮನ್ನತ್ ಆಸ್ಪತ್ರೆಯಲ್ಲಿ ನಡೆಸಿದೆ.

    ಮೃತ ರೋಗಿ ಶಬಾನಾ ಅನ್ಸಾರಿ ಎಂದು ಗುರುತಿಸಲಾಗಿದೆ. ಶಬಾನಾ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದು, ಮನ್ನತ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ನರ್ಸ್ ಆಕೆಗೆ ಚುಚ್ಚು ಮದ್ದು ಹಾಗೂ ಕೆಲವು ಔಷಧಿಯನ್ನು ನೀಡಿದ್ದರು. ಎರಡು ದಿನಗಳ ಬಳಿಕ ಶಬಾನಾಗೆ ಚುಚ್ಚು ಮದ್ದು ನೀಡಿದ ಸ್ಥಳದಲ್ಲಿ ಊತ ಕಂಡುಬಂದಿತ್ತು. ಇದನ್ನೂ ಓದಿ: ವಯಸ್ಕರಿಗಿಂತ 2 ರಿಂದ 18 ವರ್ಷದ ಮಕ್ಕಳಲ್ಲಿ ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ: ಭಾರತ್ ಬಯೋಟೆಕ್

    ಕುಟುಂಬಸ್ಥರು ಶಬಾನಾರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಿ ಡಿಸ್ಚಾರ್ಜ್ ಮಾಡಿಸಿದ್ದರು. ಆಕೆಯ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಕೆಇಎಮ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ನಂತರ ಮೃತ ಶಬಾನಾರ ಕುಟುಂಬದವರು ಶಿವಾಜಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆಕೆಯ ವೈದ್ಯಕೀಯ ವರದಿಗಳನ್ನು ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: 700ರ ಗಡಿದಾಟಿದ ಕೊರೊನಾ – ಓಮಿಕ್ರಾನ್ 43ಕ್ಕೆ ಏರಿಕೆ

    ಈ ಸಂದರ್ಭದಲ್ಲಿ ಚುಚ್ಚುಮದ್ದು ನೀಡಿದ್ದ ನರ್ಸ್ ಅನ್ನು ಬಂಧಿಸಿದ್ದು, ಆಸ್ಪತ್ರೆಯ ಮಾಲೀಕ ರೆಹಾನ್ ಖಾನ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿಗೆ ಸಹಾಯ ಕೋರಿದ ಮಂಜು

    ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿಗೆ ಸಹಾಯ ಕೋರಿದ ಮಂಜು

    ಬೆಂಗಳೂರು: ಬಿಗ್‍ಬಾಸ್ ಸೀಸನ್-8ರ ವಿಜೇತ ಮಂಜುಪಾವಗಡ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಜೀವ ಉಳಿಸಲು ಸೋಶಿಯಲ್ ಮೀಡಿಯಾದ ಮೂಲಕ ಸಹಾಯ ಮಾಡಲು ಕೋರಿದ್ದಾರೆ. ಇದನ್ನೂ ಓದಿ: ಆಪಲ್ ಉದ್ಯೋಗಿಗಳ ವಿರುದ್ಧ ಗರಂ – ಖಾರವಾದ ಪತ್ರ ಬರೆದು ಎಚ್ಚರಿಕೆ ನೀಡಿದ ಟಿಮ್ ಕುಕ್

    manju

    ಈ ಕುರಿತಂತೆ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ವೀಡಿಯೋ ಶೇರ್ ಮಾಡಿರುವ ಮಂಜು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನವೀನ್ ಹಾಗೂ ಜ್ಯೋತಿ ದಂಪತಿಯ ಮಗು ಜನೀಶ್, ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ. ಮಗುವನ್ನು ಗುಣಪಡಿಸಲು ನಮ್ಮ ದೇಶದಲ್ಲಿ ಯಾವುದೇ ಚಿಕಿತ್ಸೆಗಳಿಲ್ಲ. ಚಿಕಿತ್ಸೆ ಕೊಡಿಸಲು ಬೇರೆ ದೇಶದಿಂದ ಒಂದು ಇಂಜೆಕ್ಷನ್ ತರಿಸಲು 16 ಕೋಟಿಯಾಗುತ್ತದೆ. ಈಗಾಗಲೇ 8 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಇನ್ನೂ 3 ತಿಂಗಳ ಒಳಗೆ ಮತ್ತೆ 8 ಕೋಟಿ ಬೇಕಾಗಿದೆ. ಹಾಗಾಗಿ ಆದಷ್ಟು ಬೇಗ ನಿಮ್ಮ ಕೈಯಲ್ಲಿ ಆದಷ್ಟು ಹಣ ಸಹಾಯ ಮಾಡಿ ಹಾಗೂ ನಮ್ಮ ಕೈಯಲ್ಲಿ ಕೂಡ ಆದಷ್ಟು ಸಹಾಯ ಮಾಡಿ ಆ ಮಗುವನ್ನು ಉಳಿಸಿಕೊಳ್ಳೋಣ ಎಂದು ಕೈಮುಗಿದು ಬೇಡಿಕೊಂಡಿದ್ದಾರೆ. ಮಗು ತುಂಬಾ ಕಷ್ಟದಲ್ಲಿದ್ದು, ಅದನ್ನು ನೋಡಲು ಸಹ ಸಾಧ್ಯವಾಗುತ್ತಿಲ್ಲ. ಆ ಮಗುವನ್ನು ಉಳಿಸಿ, ಮಗುವಿನ ಮುಖದಲ್ಲಿ ನಗುವನ್ನು ತರಿಸಿ ಎಂದಿದ್ದಾರೆ.

    manju

    ಮಗುವಿನ ಪೋಷಕರು ಮಗುವಿಗೆ 17 ತಿಂಗಳಾಗಿದ್ದರೂ ಕತ್ತು ನಿಂತಿಲ್ಲ, ಪೈಪ್ ಮೂಲಕವೇ ಊಟ ನೀಡುತ್ತಿದ್ದೇವೆ. ಈ ಕಾಯಿಲೆ ಬಂದರೆ ಮಗು ಉಳಿಯುವುದು ಬಹಳ ಕಷ್ಟ. ಕನಿಷ್ಠ 2 ವರ್ಷ ಬದುಕಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಇದು ನಿಮ್ಮ ಮನೆಯ ಮಗು ಅಂದುಕೊಂಡು ಮರು ಜನ್ಮ ನೀಡಿ. ಕಾಲಾವಕಾಶ ಬಹಳ ಕಡಿಮೆ ಇದೆ. ದಯವಿಟ್ಟು ಮಗುವನ್ನು ಉಳಿಸಿಕೊಡಿ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾ ಇಳಿಮುಖ – ಉಡುಪಿ ಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನಪ್ರಸಾದ ಸೇವೆ ಆರಂಭ

    ಮಗುವಿನ ತಂದೆ ನವೀನ್‍ರನ್ನು ಪರಿಚಯ ಮಾಡಿಕೊಟ್ಟ ಮಂಜು 8 ಲಕ್ಷ ಜನ 100ರೂ. ಎಂದು ಸಹಾಯ ಮಾಡಿದರೂ 8 ಕೋಟಿಯಾಗುತ್ತದೆ. 8 ಕೋಟಿ ಈಗಾಗಲೇ ದೊರೆತಿದ್ದು, ಇನ್ನೂ 8 ಕೋಟಿ ಬೇಕಾಗಿದೆ ದಯವಿಟ್ಟು ಎಲ್ಲರೂ ಸಪೋರ್ಟ್ ಮಾಡಿ ಎಂದು ಕೇಳಿ ಕೊಂಡಿದ್ದಾರೆ.