Tag: injection

  • ರೋಗಿಗೆ ಇಂಜೆಕ್ಷನ್ ನೀಡಿದ ಸೆಕ್ಯೂರಿಟಿ ಗಾರ್ಡ್

    ರೋಗಿಗೆ ಇಂಜೆಕ್ಷನ್ ನೀಡಿದ ಸೆಕ್ಯೂರಿಟಿ ಗಾರ್ಡ್

    ಭುವನೇಶ್ವರ: ಒಡಿಶಾದ ಅಂಗುಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ರೋಗಿಗಳಿಗೆ ಇಂಜೆಕ್ಷನ್ ನೀಡುತ್ತಿರುವ ವಿಚಾರ ಬಹಿರಂಗಗೊಂಡಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಈ ವೀಡಿಯೋವನ್ನು ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಯ ಸಂಬಂಧಿಯೊಬ್ಬರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸಣ್ಣ ಅಪಘಾತದಿಂದಾಗಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರ ಬದಲಾಗಿ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ನೀಡಿದ್ದಾರೆ. ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್

    ಇನ್ನೂ ವೈದ್ಯರು ಮತ್ತು ನರ್ಸ್ ಏಕೆ ರೋಗಿಗೆ ಇಂಜೆಕ್ಷನ್ ನೀಡಲಿಲ್ಲ ಎಂಬ ಪ್ರಶ್ನೆಗೆ, ಸಹಾಯಕ ಮುಖ್ಯ ವೈದ್ಯಕೀಯ ಅಧೀಕ್ಷಕ ಮಾನಸ್ ರಂಜನ್ ಬಿಸ್ವಾಲ್ ನಾವು ಈ ಬಗ್ಗೆ ವಿಚಾರಣೆ ಆರಂಭಿಸಿದ್ದೇವೆ ಮತ್ತು ತನಿಖೆಯ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಅರವಿಂದ್ ವೀಡಿಯೋ ಮಾಡಿ ಅದನ್ನು ಟ್ರೋಲಿಗನಿಗೆ ಸಂಬರ್ಗಿ ಕೊಟ್ಟ: ಚಂದ್ರಚೂಡ್

    ಈ ಮುನ್ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರದೀಪ್ತ ಕುಮಾರ್ ಮೊಹಾಪಾತ್ರ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ಸಹಾಯ ಮಾಡಲು ಆರೋಗ್ಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗುವುದಿಲ್ಲ ಎಂದು ನಿರ್ದೇಶಿಸಿದ್ದರು.

  • ಬ್ಲ್ಯಾಕ್ ಫಂಗಸ್ ಔಷಧಿಯಿಂದ ಅಡ್ಡಪರಿಣಾಮ – ಇಂಜೆಕ್ಷನ್ ಪಡೆಯಲು ಸೋಂಕಿತರ ನಿರಾಕರಣೆ

    ಬ್ಲ್ಯಾಕ್ ಫಂಗಸ್ ಔಷಧಿಯಿಂದ ಅಡ್ಡಪರಿಣಾಮ – ಇಂಜೆಕ್ಷನ್ ಪಡೆಯಲು ಸೋಂಕಿತರ ನಿರಾಕರಣೆ

    – ರಿಮ್ಸ್ ಆಸ್ಪತ್ರೆಯಲ್ಲಿನ ಸೋಂಕಿತರಿಗೆ ಕಾಣಿಸಿಕೊಂಡ ಅಡ್ಡಪರಿಣಾಮ
    – ಇಂಜೆಕ್ಷನ್ ಪಡೆದ ಬಳಿಕ ಜ್ವರ, ಮೈಕೈ ನೋವು, ವಾಂತಿ

    ರಾಯಚೂರು: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಅಡ್ಡಪರಿಣಾಮಗಳಿಗೆ ಹೆದರಿ ಔಷಧಿಯನ್ನೇ ನಿರಾಕರಿಸುತ್ತಿದ್ದಾರೆ.

    ಸರ್ಕಾರ ಸರಬರಾಜು ಮಾಡುತ್ತಿರುವ ಅಂಪೋಟೆರಿಸಿನ್ ಬಿ ಇಂಜೆಕ್ಷನ್ ತಗೆದುಕೊಳ್ಳಲು ಹೆದರಿದ್ದಾರೆ. ಮೊದಲೇ ಸೋಂಕಿನ ನೋವು ಇರುವಾಗ ಔಷಧಿಯೂ ನೋವು ಕೊಡುತ್ತಿರುವುದಕ್ಕೆ ಸೋಂಕಿತರು ಈ ಮೊದಲು ಕೊಡುತ್ತಿದ್ದ ಔಷಧಿಯನ್ನೇ ಕೊಡಿ ಅಂತ ಅಂಗಲಾಚುತ್ತಿದ್ದಾರೆ.

    ಕೋವಿಡ್ ಬಳಿಕ ಅತೀಯಾದ ಸ್ಟೆರೈಡ್ ಬಳಕೆ ಸೇರಿ ಬೇರೆ, ಬೇರೆ ಕಾರಣಕ್ಕೆ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕು ಈಗ ಸರ್ಕಾರಕ್ಕೂ ದೊಡ್ಡ ತಲೆನೋವಾಗಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಸರ್ಕಾರ ಜಿಲ್ಲೆಗಳಿಗೆ ಸರಬರಾಜು ಮಾಡುತ್ತಿರುವ ಅಂಪೋಟೆರಿಸಿನ್ ಬಿ ಇಂಜೆಕ್ಷನ್ ಸೋಂಕಿತರ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಇಂಜೆಕ್ಷನ್ ಪಡೆದ ಬಳಿಕ ತೀವ್ರ ಜ್ವರ, ವಾಂತಿ, ಮೈಕೈ ನೋವಿನ ಸಮಸ್ಯೆಗೆ ಒಳಗಾಗುತ್ತಿದ್ದು, ಇಂಜೆಕ್ಷನ್ ಬದಲಿಸುವಂತೆ ಒತ್ತಾಯಿಸಿದ್ದಾರೆ.

    ಜಿಲ್ಲೆಗೆ ಇತ್ತೀಚಿಗೆ ಬಂದಿರುವ 2,000 ಅಂಪೋಟೆರಿಸಿನ್ ಬಿ ಔಷಧಿ ಅಡ್ಡ ಪರಿಣಾಮಕ್ಕೆ ಕಾರಣವಾಗಿದೆ. ಹೀಗಾಗಿ ಮೊದಲು ನೀಡುತ್ತಿದ್ದ, ಔಷಧಿಯನ್ನೇ ನೀಡುವಂತೆ ಸೋಂಕಿತರು ಕೇಳಿಕೊಳ್ಳುತ್ತಿದ್ದಾರೆ. ಸದ್ಯ ನೀಡುತ್ತಿರುವ ಇಂಜೆಕ್ಷನ್ ಬೇಡ ಎಂದು ಪಟ್ಟು ಹಿಡಿದಿದ್ದಾರೆ. ಅಂಪೋಟೆರಿಸಿನ್ ಬಿ, ಸ್ಟ್ರಾಂಗ್ ಔಷಧಿ ಆಗಿದ್ದು ನೋವು ಕಾಣಿಸಿಕೊಳ್ಳುತ್ತಿದೆ. ಜೊತೆಗೆ ಸೋಂಕಿತರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ವತಃ ವೈದ್ಯರಾಗಿರುವ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದಾರೆ.

    ಜಿಲ್ಲೆಯಲ್ಲಿ 100 ಜನಕ್ಕೆ ಸೋಂಕು ತಗುಲಿದ್ದು 16 ಜನ ಗುಣಮುಖರಾಗಿದ್ದಾರೆ. 70ಕ್ಕೂ ಹೆಚ್ಚು ಜನರಿಗೆ ಮೊದಲ ಹಂತದ ಶಸ್ತ್ರಚಿಕಿತ್ಸೆಯಾಗಿದೆ. 20 ಜನರಿಗೆ ಎರಡನೇ ಬಾರಿ ಶಸ್ತ್ರಚಿಕಿತ್ಸೆಯಾಗಿದೆ. ಆದರೆ ಶಸ್ತ್ರಚಿಕಿತ್ಸೆ ಬಳಿಕವೂ ಇಂಜೆಕ್ಷನ್ ಪಡೆಯಬೇಕಿದ್ದು, ಔಷಧಿ ಅಡ್ಡಪರಿಣಾಮ ಬೀರುತ್ತಿರುವುದರಿಂದ ಸೋಂಕಿತರು ನೋವಿನ ಜೊತೆ ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಒಬ್ಬೊಬ್ಬರನ್ನ ಮನವೊಲಿಸಿ ಇಂಜೆಕ್ಷನ್ ನೀಡಬೇಕಾದ ಅನಿವಾರ್ಯತೆ ವೈದ್ಯರಿಗೆ ಎದುರಾಗಿದೆ. ಆದರೆ ಅತಿಯಾದ ನೋವು, ಜ್ವರಕ್ಕೆ ಹೆದರಿರುವ ಸೋಂಕಿತರು ಇಂಜೆಕ್ಷನ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೋಂಕಿತರ ಸಮಸ್ಯೆ ನಮ್ಮ ಗಮನಕ್ಕೆ ಬಂದಿಲ್ಲ. ಸಮಸ್ಯೆಗೆ ಕಾರಣ ತಿಳಿದುಕೊಳ್ಳುವುದಾಗಿ ಹೇಳಿದ್ದಾರೆ.

    ಸೋಂಕಿತರ ಸಮಸ್ಯೆ ಅರ್ಥವಾದರೂ ಏನೂ ಮಾಡದ ಸ್ಥಿತಿಯಲ್ಲಿ ವೈದ್ಯರಿದ್ದಾರೆ. ಸರ್ಕಾರ ಸರಬರಾಜು ಮಾಡುತ್ತಿರುವ ಔಷಧಿಯನ್ನ ನೀಡಲೇಬೇಕಾದ ಪರಿಸ್ಥಿತಿಯಿದೆ. ಒಂದು ರೋಗ ಗುಣಪಡಿಸಲು ಇನ್ನೊಂದು ನೋವಿನಿಂದ ಸೋಂಕಿತರು ಬಳಲುವಂತಾಗಿದೆ. ಈಗಲಾದರೂ ಸರ್ಕಾರ ಸೋಂಕಿತರಿಗಾಗುತ್ತಿರುವ ಅಡ್ಡಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಿದೆ. ಇದನ್ನೂ ಓದಿ: ಕಸಾಯಿಖಾನೆಗೆ ಕಳ್ಳಸಾಗಣೆಯಾಗುತ್ತಿದ್ದ 18 ಗೋವುಗಳ ರಕ್ಷಣೆ

  • ಅಕ್ರಮವಾಗಿ  ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

    ಅಕ್ರಮವಾಗಿ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

    ಹುಬ್ಬಳ್ಳಿ: ಕೊರೊನಾದಿಂದ ನಿತ್ಯ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಜೀವ ರಕ್ಷಕ ಔಷಧಿಯನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

    ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಬಂಧಿತ ಆರೋಪಿಗಳಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶ್ವಸಿಯಾಗಿದ್ದಾರೆ. ಇದನ್ನೂ ಓದಿ: ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿ

     

    ಬ್ಲ್ಯಾಕ್ ಫಂಗಸ್‍ಗೆ ಚಿಕಿತ್ಸೆ ನೀಡುವ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರನ್ನ ಸಿಸಿಬಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 4 ವಯಲ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:  ಇಂದು, ನಾಳೆ ರಾಜ್ಯಕ್ಕೆ ಭಾರೀ ಮಳೆ- ಹಲವೆಡೆ ಆರೆಂಜ್ ಅಲರ್ಟ್

    ನಾಸೀರ್ ಹುಸೇನ್ 7 ಸಾವಿರಕ್ಕೆ ಇಂಜೆಕ್ಷನ್ ತಂದು ಹೆಚ್ಚಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೊರೊನಾ ಲಸಿಕೆ ಪಡೆದಂತೆ ನಟಿಸಿದ್ರಾ ನಟಿ ನಯನತಾರಾ..?

    ಕೊರೊನಾ ಲಸಿಕೆ ಪಡೆದಂತೆ ನಟಿಸಿದ್ರಾ ನಟಿ ನಯನತಾರಾ..?

    – ಅಭಿಮಾನಿಗಳು ಹೇಳೋದೇನು..?

    ಚೆನ್ನೈ: ಕಾಲಿವುಡ್ ನಟಿ ನಯನತಾರಾ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಪಡೆದಕೊಂಡಿದ್ದರು. ಆದರೆ ಈ ವಿಚಾರ ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ನಟಿ ನಯನತಾರಾ ಲಸಿಕೆ ನೀಡುತ್ತಿದ್ದ ನರ್ಸ್ ಕೈಯಲ್ಲಿ ಸಿರಿಂಜ್ ಇಲ್ಲ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

    ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಾರ್ವಜನಿಕರು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೆಲೆಬ್ರಿಟಿಗಳು ಕೂಡ ಲಸಿಕೆ ಪಡೆಯುವ ಮೂಲಕ ಇನ್ನೂ ಲಸಿಕೆ ಸ್ವೀಕರಿಸದವರಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಪಡೆಯುವಂತೆ ಎಚ್ಚರಿಕೆಯ ಸಂದೇಶ ನೀಡುತ್ತಿದ್ದಾರೆ.

    ಸದ್ಯ ಇತ್ತೀಚೆಗಷ್ಟೇ ಕಾಲಿವುಡ್ ನಟಿ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಹಾಗೂ ಅವರ ಬಾಯ್ ಫ್ರೆಂಡ್ ವಿಘ್ನೇಶ್ ಶಿವನ್ ಕೂಡ ಕೊರೊನಾ ಲಸಿಕೆ ಪಡೆದುಕೊಂಡಿದ್ದರು. ಈ ಕುರಿತ ಕೆಲವು ಫೋಟೋವನ್ನು ವಿಘ್ನೇಶ್ ಶಿವನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಫೋಟೋ ವೈರಲ್ ಆಗುತ್ತಿದ್ದಂತೆಯೇ ವಿಘ್ನೇಶ್ ಶಿವನ್ ಫೋಟೋದಲ್ಲಿ ಕಾಣಿಸುತ್ತಿರುವ ಸಿರಿಂಜ್, ನಯನತಾರಾ ಫೋಟೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎಂದು ಅನೇಕ ಮಂದಿ ಕಾಮೆಂಟ್ ಮಾಡುತ್ತಿದ್ದಾರೆ. ಹೀಗಾಗಿ ಈ ವಿಚಾರ ಇದೀಗ ಎಲ್ಲರಿಗೂ ಅನುಮಾನ ಮೂಡಿಸಿದೆ.

    ಆದರೆ ಈ ಎಲ್ಲದರ ಮಧ್ಯೆ ನಯನತಾರಾ ಅಭಿಮಾನಿಗಳು ಮಾತ್ರ, ಆ ಫೋಟೋವನ್ನು ಝೂಮ್ ಮಾಡಿ ನೋಡಿದಾಗ ಅದರಲ್ಲಿ ಚಿಕ್ಕ ಸೂಜಿ ಕಾಣಿಸುತ್ತಿದ್ದು, ಅದು ನರ್ಸ್ ಕೈಯಲ್ಲಿ ಅವಿತುಕೊಂಡಿದೆ. ಅಲ್ಲದೆ ವಿಘ್ನೇಶ್ ಶಿವನ್ ಫೋಟೋವನ್ನು ಮತ್ತೊಂದು ಬದಿಯಿಂದ ಕ್ಲಿಕ್ಕಿಸಿರುವ ಕಾರಣ ಸಿರಿಂಜ್ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ನಟಿ ಪರವಾಗಿ ವಾದ ಮಂಡಸಿದ್ದಾರೆ.

     

    View this post on Instagram

     

    A post shared by Vignesh Shivan (@wikkiofficial)

  • ನೀವಾದ್ರೂ ರೆಮ್‍ಡಿಸಿವರ್ ಇಂಜೆಕ್ಷನ್ ಕೊಡಿಸಿ- ಸಚಿವರ ಮುಂದೆ ರೋಗಿ ಸಂಬಂಧಿಯ ಅಳಲು

    ನೀವಾದ್ರೂ ರೆಮ್‍ಡಿಸಿವರ್ ಇಂಜೆಕ್ಷನ್ ಕೊಡಿಸಿ- ಸಚಿವರ ಮುಂದೆ ರೋಗಿ ಸಂಬಂಧಿಯ ಅಳಲು

    – 30 ಸಾವಿರ ಹಣ ಕೊಡ್ತೀನಿ, ಇಂಜೆಕ್ಷನ್ ನೀಡಿ

    ಬೀದರ್: ಜಿಲ್ಲೆಯಲ್ಲಿ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬರಿಗೆ ರೆಮ್‍ಡಿಸಿವರ್ ಇಂಜೆಕ್ಷನ್ ಸಿಗದೆ ಕಷ್ಟಪಡುತ್ತಿರುವುದರ ಕುರಿತು ರೋಗಿಯ ಸಂಬಂಧಿಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಮುಂದೆ ಕೈಮುಗಿದು ಅಳಲು ತೋಡಿಕೊಂಡಿದ್ದಾರೆ.

    ತೀವ್ರವಾಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಕಾರಕಾರಪಳ್ಳಿಯ ಪ್ರದೀಪ್ ಎಂಬ ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರದೀಪ್ ಅವರ ಕೊರೊನಾ ವರದಿ ನೆಗೆಟಿವ್ ಇದ್ದರು ಉಸಿರಾಟದ ಸಮಸ್ಯೆ ದಿನೇ ದಿನೇ ತೀವ್ರವಾಗುತ್ತಿದೆ. ಹೀಗಾಗಿ ಇಂದು ರೆಮ್‍ಡಿಸಿವರ್ ಇಂಜೆಕ್ಷನ್ ಸಿಗುತ್ತಿಲ್ಲಾ. ನಾನು ರೆಮ್‍ಡಿಸಿವರ್ ಇಂಜೆಕ್ಷನ್ ಗಾಗಿ 30 ಸಾವಿರ ಹಣ ಇಟ್ಟುಕೊಂಡು ಓಡಾಡುತ್ತಿದ್ದೇನೆ ಆದರೂ ಸಿಗುತ್ತಿಲ್ಲಾ. ನೀವಾದ್ರೂ ಇಂಜೆಕ್ಷನ್ ಕೊಡಿಸಿ ಎಂದು ಪ್ರಭು ಚವ್ಹಾಣ್ ಗೆ ಕೈಮುಗಿದು 30 ಸಾವಿರ ರೂಪಾಯಿಯ ಹಣದ ಕಂತೆಯನ್ನು ರೋಗಿಯ ಸಂಬಂಧಿ ತೋರಿಸಿದ್ದಾರೆ.

    ಕೂಡಲೇ ಪ್ರಭು ಚವ್ಹಾಣ್ ಅವರು ಜಿಲ್ಲಾಡಳಿತಕ್ಕೆ ತಿಳಿಸಿ ಇಂಜೆಕ್ಷನ್ ಕೊಡಿಸುತ್ತೇನೆ ಎಂದು ಸಮಾಧಾನ ಪಡಿಸಿದರು. ಎಲ್ಲರೂ ಕೂಡ ಹೀಗೆ ಹೇಳುತ್ತಿದ್ದಾರೆ. ನೀವಾದರೂ ಸಮಸ್ಯೆ ಬಗೆಹರಿಸಿ ಎಂದು ಸಚಿವರೊಂದಿಗೆ ರೋಗಿಯ ಸಂಬಂಧಿ ಮನವಿ ಮಾಡಿಕೊಂಡಿದ್ದಾರೆ.

    ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರತೀಶ್ ಕುಮಾರ್, ಇದನ್ನೆಲ್ಲಾ ಗಮನಿಸುತ್ತಿದ್ದಂತೆ ಗಡಿ ಜಿಲ್ಲೆ ಬೀದರ್ ನಲ್ಲಿ ರೆಮಿಡಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆಯಾ? ಎಂಬ ಅನುಮಾನ ಕೂಡ ಕಾಡತೊಡಗುತ್ತಿದೆ. 25 ರಿಂದ 30 ಸಾವಿರಕ್ಕೆ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟವಾಗುತ್ತಿದ್ದು, ಇದೊಂದು ದೊಡ್ಡ ಮೆಡಿಕಲ್ ಮಾಫಿಯಾ ಆಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರತಿಯೊಂದು ರೋಗಿಗಳು ಹಣ ಹಿಡಿದು ಕೊಂಡು ಇಂಜೆಕ್ಷನ್ ಗಾಗಿ ಓಡಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

  • ವೈದ್ಯರ ಒಂದು ಇಂಜೆಕ್ಷನ್‍ಗೆ ಯುವಕ ಬಲಿ: ಪೋಷಕರ ಆರೋಪ

    ವೈದ್ಯರ ಒಂದು ಇಂಜೆಕ್ಷನ್‍ಗೆ ಯುವಕ ಬಲಿ: ಪೋಷಕರ ಆರೋಪ

    ದಾವಣಗೆರೆ: ನಾಲ್ಕು ದಿನದ ಹಿಂದೆ ಜ್ವರ ಬಂದಿದೆ ಎಂಬ ಕಾರಣಕ್ಕೆ ವೈದ್ಯರ ಬಳಿ ಇಂಜೆಕ್ಷನ್‍ ಮಾಡಿಸಿಕೊಂಡಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆ ತಾಲೂಕು ಹಳೇ ಕುಂದುವಾಡ ಗ್ರಾಮ ಪ್ರವೀಣ್ ಮೃತ ಯುವಕ. ಪ್ರವೀಣ್‍ಗೆ ಕಳೆದ ಮೂರು ದಿನದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಗ್ರಾಮದಲ್ಲಿದ್ದ ಆಯುಷ್ ಆಯುರ್ವೇದ ವೈದ್ಯಾಧಿಕಾರಿ ಡಾ.ಶಿವಲಿಂಗ ರುದ್ರಪ್ಪ ಜವಳಿ ಅವರ ಕ್ಲಿನಿಕ್‍ಗೆ ಹೋಗಿ ಇಂಜೆಕ್ಷನ್‍ ಮಾಡಿಸಿಕೊಂಡು ಬಂದಿದ್ದ.

    ಇಂಜೆಕ್ಷನ್‍ ಮಾಡಿಸಿಕೊಂಡ ಕೇವಲ ಎರಡು ಗಂಟೆಗೆ ಪ್ರವೀಣ್ ಕೈ ಕಾಲು, ದೇಹ ಊದಿಕೊಳ್ಳಲು ಆರಂಭಿಸಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಪ್ರವೀಣ್‍ನನ್ನು ಡಾ. ಶಿವಲಿಂಗ ಅವರ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ವೈದ್ಯ ಶಿವಲಿಂಗ ಅವರು ಇದನ್ನು ಯಾರಿಗೂ ಹೇಳಬೇಡಿ ಎಂದು ಹೇಳಿ, ಪ್ರವೀಣ್‍ನನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಮೃತಪಟ್ಟಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಾವಿಗೆ ವೈದ್ಯ ಶಿವಲಿಂಗ ಅವರೇ ನೇರ ಕಾರಣ ಎಂದು ಪ್ರವೀಣ್ ಪೋಷಕರು ಆರೋಪಿಸಿದ್ದಾರೆ.

    ವೈದ್ಯ ಶಿವಲಿಂಗ ಜವಳಿ ಮೂರು ವರ್ಷದ ಹಿಂದೆ ಹಳೇ ಕುಂದುವಾಡ ಗ್ರಾಮದಲ್ಲಿ ಕ್ಲಿನಿಕ್ ಪ್ರಾರಂಭಿಸಿದ್ದರು. ಇಲ್ಲಿ ಚಿಕಿತ್ಸೆ ಪಡೆದ ಅನೇಕರು ಹಲವಾರು ಸಮಸ್ಯೆಗಳಿಗೆ ಗುರಿಯಾಗಿದ್ದಾರೆ. ಈ ಬಗ್ಗೆ ಯಾರೊಬ್ಬರೂ ವೈದ್ಯರ ಬಳಿ ಯಾವುದೇ ಪ್ರಶ್ನೆ ಮಾಡದೆ ಸುಮ್ಮನಿದ್ದರು. ಆದರೆ ಪ್ರವೀಣ್ ಸಾವಿನ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಈ ಸಂಬಂಧ ಪ್ರವೀಣ್ ಪೋಷಕರು ವೈದ್ಯ ಶಿವಲಿಂಗ ಜವಳಿ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ತನಿಖೆ ಆರಂಭಿಸಿದ್ದಾರೆ.

  • ಎಂಜೆಕ್ಷನ್ ಚುಚ್ಚಿ ಆಟೋದಲ್ಲಿ ಹೋಗುತ್ತಿದ್ದಾಗ ಮಗು ಸಾವು

    ಎಂಜೆಕ್ಷನ್ ಚುಚ್ಚಿ ಆಟೋದಲ್ಲಿ ಹೋಗುತ್ತಿದ್ದಾಗ ಮಗು ಸಾವು

    ಮಡಿಕೇರಿ: ಇಂಜೆಕ್ಷನ್ ರಿಯಾಕ್ಷನ್ ಆಗಿ ಎರಡು ತಿಂಗಳ ಮಗು ಸಾವನ್ನಪಿದೆ ಎಂಬ ಆರೋಪ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಕೇಳಿ ಬಂದಿದೆ.

    ಹಾಕತ್ತೂರಿನ ನಿವಾಸಿ ಅಶೋಕ್ ಪತ್ನಿ ತೇಜಸ್ವಿನಿ ಬಾಣಂತಿತನಕ್ಕಾಗಿ ಭಾಗಮಂಡಲದ ತವರು ಮನೆಯಲ್ಲಿದ್ದರು. ಈ ವೇಳೆ ತನ್ನ ಎರಡು ತಿಂಗಳ ಮಗುವಿಗೆ ಚುಚ್ಚುಮದ್ದು ಕೊಡಿಸಿದ್ದಾರೆ. ಚುಚ್ಚುಮದ್ದು ರಿಯಾಕ್ಷನ್ ಆಗಿ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

    ಚುಚ್ಚುಮದ್ದು ಕೊಡಿಸಿ ಆಟೋದಲ್ಲಿ ಮನೆಗೆ ಹೋಗುವಷ್ಟಲ್ಲಿ ಮಗು ಸಂಪೂರ್ಣ ನಿತ್ರಾಣಗೊಂಡಿತ್ತು. ತಕ್ಷಣವೇ ಭಾಗಮಂಡಲದ ಆಸ್ಪತ್ರೆಗೆ ವಾಪಸ್ ಕರೆದುಕೊಂಡು ಬರುವಷ್ಟರಲ್ಲಿ ಮಗು ಸಾವನ್ನಪ್ಪಿದೆ. ಆದರೂ ಭಾಗಮಂಡಲದ ವೈದ್ಯರು ಮಗುವನ್ನು ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.

    ದಂಪತಿ ಮಗುವನ್ನು ಮಡಿಕೇರಿ ಆಸ್ಪತ್ರೆಗೆ ಕರೆತಂದಿದ್ದು, ವೈದ್ಯರು ಪರಿಶೀಲಿಸಿ ಒಂದು ಗಂಟೆಯ ಹಿಂದೆಯೇ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವೈದ್ಯರು ನಿರ್ಲಕ್ಷ್ಯ ವಹಿಸಿ ಚುಚ್ಚುಮದ್ದು ನೀಡಿದ್ದೇ ಮಗು ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೆಡಿಕಲ್ ಶಾಪ್ ಮಾಲೀಕನಿಂದ ಇಂಜೆಕ್ಷನ್ – ರಕ್ತಕಾರಿ ಸತ್ತ 2ರ ಬಾಲಕಿ

    ಮೆಡಿಕಲ್ ಶಾಪ್ ಮಾಲೀಕನಿಂದ ಇಂಜೆಕ್ಷನ್ – ರಕ್ತಕಾರಿ ಸತ್ತ 2ರ ಬಾಲಕಿ

    ನವದೆಹಲಿ: ಮೆಡಿಕಲ್ ಶಾಪ್ ಮಾಲೀಕ ನೀಡಿದ ಇಂಜೆಕ್ಷನ್‍ಯಿಂದ 2 ವರ್ಷದ ಬಾಲಕಿ ರಕ್ತಕಾರಿ ಸಾವನ್ನಪ್ಪಿರುವ ಘಟನೆ ದೆಹಲಿಯ ಶಹದಾರಾ ಜಿಟಿವಿ ಎನ್‍ಕ್ಲೇವ್ ಪ್ರದೇಶದಲ್ಲಿ ನಡೆದಿದೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಬುಧವಾರ ಮಗುವಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದೆ. ಅದಕ್ಕೆ ತಾಯಿ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ಮೆಡಿಕಲ್ ಶಾಪ್‍ಗೆ ತೆರಳಿ ಮಾತ್ರ ತಂದು ನೀಡಿದ್ದಾಳೆ. ಆದರೆ ಮಾತ್ರೆ ಸೇವಿಸಿದರೂ ಮಗುವಿನ ಕಾಯಿಲೆ ವಾಸಿ ಆಗಿರಲಿಲ್ಲ.

    ಮಾತ್ರೆ ನೀಡಿದರೂ ಜ್ವರ ಮತ್ತು ಕೆಮ್ಮು ಹೋಗಿಲ್ಲ ಎಂದು ಮಗುವನ್ನು ಆಕೆ ಗುರುವಾರ ಮೆಡಿಕಲ್ ಶಾಪ್‍ಗೆ ಮತ್ತೆ ಕರೆದುಕೊಂಡು ಹೋಗಿದ್ದಾಳೆ. ಆಗ ಅಲ್ಲಿ ಮೆಡಿಕಲ್ ಶಾಪ್ ಮಾಲೀಕ ಮಗುವಿಗೆ ಇಂಜೆಕ್ಷನ್ ಮಾಡಿದ್ದಾನೆ. ನಂತರ ಮನೆಗೆ ಬಂದಾಗ ಮಗು ತೀವ್ರ ಅಸ್ವಸ್ಥವಾಗಿ ರಕ್ತದ ವಾಂತಿ ಮಾಡಲು ಶುರು ಮಾಡಿದೆ. ಆಗ ಹೆದರಿದ ತಾಯಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ ಅಲ್ಲಿ ಮಗು ಮೃತಪಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ

  • ಇಂಜೆಕ್ಷನ್ ನೀಡಿ ಸೂಜಿ ದೇಹದೊಳಗೆ ಬಿಟ್ಟ ನರ್ಸ್

    ಇಂಜೆಕ್ಷನ್ ನೀಡಿ ಸೂಜಿ ದೇಹದೊಳಗೆ ಬಿಟ್ಟ ನರ್ಸ್

    ಕೋಲಾರ: ಇಂಜೆಕ್ಷನ್ ನೀಡಿ ಸೂಜಿ ದೇಹದೊಳಗೆ ಬಿಟ್ಟು ಸರ್ಕಾರಿ ಆಸ್ಪತ್ರೆಯ ನರ್ಸ್ ಎಡವಟ್ಟು ಮಾಡಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    5 ವರ್ಷದ ಅಭಿಲಾಷ್ ಎನ್ನುವ ಬಾಲಕನ ಸೊಂಟಕ್ಕೆ ನರ್ಸ್ ಇಂಜೆಕ್ಷನ್ ನೀಡಿದ್ದಾರೆ. ಅಭಿಲಾಷ್ ಜ್ವರದಿಂದ ಬಳಲುತ್ತಿದ್ದನು. ಹೀಗಾಗಿ ಆತನ ಪೋಷಕರು ಚಿಕಿತ್ಸೆಗೆಂದು ಶನಿವಾರ ಸಂಜೆ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

    ವೈದ್ಯರು, ಅಭಿಲಾಷ್‍ನನ್ನು ತಪಾಸಣೆ ಮಾಡಿದ ನಂತರ ನರ್ಸ್ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಇಂಜೆಕ್ಷನ್‍ನ ಸೂಜಿ ಮುರಿದು ನರ್ಸ್ ಬಾಲಕನ ದೇಹದೊಳಗೆ ಬಿಟ್ಟಿದ್ದಾಳೆ. ಆದರೆ ನೀಡಲ್ ಕಟ್ ಆದ ಮಾಹಿತಿಯನ್ನೂ ನೀಡದೆ ಸಿಬ್ಬಂದಿ ಹಾಗೂ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ.

    ಅಭಿಲಾಷ್ ಸೊಂಟ ನೋವಿನಿಂದ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನು. ಈ ವೇಳೆ ಅಲ್ಲಿ ಸ್ಕ್ಯಾನಿಂಗ್ ಮಾಡಿದಾಗ ಸತ್ಯ ಬಯಲಾಗಿದೆ. ಬಳಿಕ ಪೋಷಕರು ಕೆಜಿಎಫ್ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

    ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಭಿಲಾಷ್‍ಗೆ ಚಿಕಿತ್ಸೆ ನೀಡಲಾಗುತ್ತಿದೆ.

  • ಕಸ ಗುಡಿಸುವ ಮಹಿಳೆಯಿಂದ ರೋಗಿಗೆ ಇಂಜೆಕ್ಷನ್

    ಕಸ ಗುಡಿಸುವ ಮಹಿಳೆಯಿಂದ ರೋಗಿಗೆ ಇಂಜೆಕ್ಷನ್

    ನವದೆಹಲಿ: ಕಸ ಗುಡಿಸುವ ಮಹಿಳೆಯೊಬ್ಬಳು ರೋಗಿಗೆ ಇಂಜೆಕ್ಷನ್ ನೀಡಲು ಮುಂದಾದ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯ ಹರಿನಗರದ ದೀನದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ನಡೆದಿದೆ.

    ಮಹಿಳೆ ರೋಗಿಗೆ ಇಂಜೆಕ್ಷನ್ ನೀಡಲು ಮುಂದಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಮಹಿಳೆ ರೋಗಿಯ ಕೈಹಿಡಿದುಕೊಂಡು ಇಂಜೆಕ್ಷನ್ ನೀಡಲು ಮುಂದಾಗುತ್ತಾಳೆ. ಈ ವೇಳೆ ವ್ಯಕ್ತಿಯೊಬ್ಬರು ವಿಡಿಯೋ ಮಾಡುತ್ತಿರುವುದನ್ನು ನೋಡಿದ ಮಹಿಳೆ ಇಂಜೆಕ್ಷನ್ ನೀಡದೇ ಸುಮ್ಮನಾಗುತ್ತಾಳೆ.

    ಈ ವಿಡಿಯೋ ನೋಡಿದವರು ಆಘಾತಗೊಂಡಿದ್ದಾರೆ. ಅಲ್ಲದೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯ ಮುಖ್ಯಸ್ಥ ತನಿಖೆ ಶುರು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಆಸ್ಪತ್ರೆ ಮ್ಯಾನೇಜಿಂಗ್ ಡೈರೆಕ್ಟರ್, ನಾನು ಕೂಡ ಈ ವಿಡಿಯೋವನ್ನು ನೋಡಿದ್ದೇನೆ. ಅಲ್ಲದೆ ತನಿಖೆ ನಡೆಸಲು ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್ ಡ್ಯೂಟಿ ನರ್ಸ್ ಅನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ರೋಗಿಯ ಕಡೆಯಿಂದ ಯಾವುದೇ ದೂರು ದಾಖಲಾಗಿಲ್ಲ. ಆದರೆ ಘಟನೆ ಬಗ್ಗೆ ಮಾಹಿತಿ ಪಡೆಯಲು ತನಿಖೆ ಶುರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ವಿಡಿಯೋವನ್ನು ವಾರ್ಡ್ ನಂಬರ್ 4ರಲ್ಲಿ ಸೆರೆ ಹಿಡಿಯಲಾಗಿದ್ದು, ಈ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಅಲ್ಲದೆ ಈ ಘಟನೆಗೆ ಕಾರಣ ಆಗಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ.