Tag: Inscription

  • ಕದಂಬ ರವಿವರ್ಮನ ಕಾಲದ ಶಾಸನ ಪತ್ತೆ

    ಕದಂಬ ರವಿವರ್ಮನ ಕಾಲದ ಶಾಸನ ಪತ್ತೆ

    ಶಿವಮೊಗ್ಗ : ಕರ್ನಾಟಕವನ್ನಾಳಿದ ಪ್ರಥಮ ಕನ್ನಡ ರಾಜವಂಶಸ್ಥನಾದ ರವಿವರ್ಮನ ಕಾಲದ ಅಪರೂಪದ ಶಾಸನ ಜಿಲ್ಲೆಯ ಸೊರಬದಲ್ಲಿ ಪತ್ತೆಯಾಗಿದೆ.

    ಸೊರಬ ತಾಲೂಕು ತಲಗುಂದ ಗ್ರಾಮದ ರಾಮೇಶ್ವರ ದೇವಾಲಯದ ಬಳಿ ಕದಂಬ ರಾಜವಂಶಸ್ಥನಾದ ರಾಜ ರವಿವರ್ಮನ ಕಾಲದ ಕಲ್ಲಿನ ಶಾಸನ ಪತ್ತೆಯಾಗಿದೆ. ಈ ಶಾಸನವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಆರ್. ಶೇಜೇಶ್ವರ ಪತ್ತೆ ಮಾಡಿದ್ದಾರೆ. ಕಲ್ಲಿನ ಶಾಸನವು 143 ಸೆ.ಮೀ ಉದ್ದ ಹಾಗೂ 49 ಸೆ.ಮೀ ಅಗಲವಿದೆ. ಇದು ಬ್ರಾಹ್ಮಿ ಲಿಪಿ ಹಾಗೂ ಸಂಸ್ಕೃತ ಭಾಷೆಯ ಏಳು ಸಾಲಿನಿಂದ ಕೊಡಿದೆ. ಶಾಸನವು ಅಲ್ಲಲ್ಲಿ ಸ್ವಲ್ಪ ಒಡೆದು ಹೋಗಿದೆ. ಇದನ್ನೂ ಓದಿ: ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್

    ಶಾಸನದ ಸಾರಾಂಶ ಹೀಗಿದೆ: ಕದಂಬ ರವಿವರ್ಮನಿಗೆ ಸಂಬಂಧಿಸಿದಂತೆ ಇದುವರೆಗೂ 10 ಶಾಸನಗಳು ಮಾತ್ರ ದೂರೆತಿದೆ. ಈಗ ದೂರೆತಿರುವ ಶಾಸನವು ಸೇರಿ 11 ಶಾಸನಗಳು ಕಂಡು ಬಂದಿದೆ. ರವಿವರ್ಮ ಬನವಾಸಿಯನ್ನು ರಾಜಧಾನಿಯಾಗಿ ಮಾಡಿಕೊಂಡು ಕ್ರಿ.ಶ 485 ರಿಂದ ಕ್ರಿ.ಶ 519ರ ವರೆಗೂ 34 ವರ್ಷಗಳ ಕಾಲ ಆಡಳಿತ ನಡೆಸಿದ್ದಾನೆ. ಈ ಶಾಸನದಲ್ಲಿ ರವಿವರ್ಮನು ದೇವತೆಗಳಿಂದ ಪೂಜಿಸಲ್ಪಟ್ಟ ಮುಚ್ಚುಂಡಿಯ ಗ್ರಾಮದ ಆರನೇ ಒಂದು ಭಾಗವನ್ನು ದಾನವನ್ನಾಗಿ ನೀಡಿದ್ದಾರೆ ಎಂದು ತಿಳಿಸಲಾಗಿದೆ. ಜೊತೆಗೆ ಇದು ಶಿಕಾರಿಪುರ ಕ್ರಿ.ಶ 5-6ನೇ ಶತಮಾನದ್ದಾಗಿದೆ.

    ಈ ಶಾಸನದ ಹತ್ತಿರ ಕದಂಬ ಅರಸರ ಕಾಲದ ಸಿಂಹ ಶಿಲ್ಪವು ಸಹಾ ದೊರೆತಿದೆ. ಇದರ ಅಕ್ಕಪಕ್ಕದಲ್ಲಿಯೇ ಇತರೆ ಶಾಸನಗಳು, ಶಿವಲಿಂಗಗಳು, ಸಪ್ತಮಾತೃಕೆ ಶಿಲ್ಪಗಳು ಕಂಡು ಬಂದಿದೆ. ಇದು ಒಂದು ದಾನ ಶಾಸನವಾಗಿರುವುದು ವಿಶೇಷವಾಗಿದೆ.  ಇದನ್ನೂ ಓದಿ:  ದೆಹಲಿಯತ್ತ ತೆರಳುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ

  • ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ

    ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕುಂಬಾರಕೇರಿಯಲ್ಲಿ ಕದಂಬೇಶ್ವರ ದೇವಾಲಯದ ಮರುನಿರ್ಮಾಣ ಕಾರ್ಯಕ್ಕಾಗಿ ಭೂಮಿ ಅಗೆಯುವ ವೇಳೆ 5 ಸೆಂ.ಮೀ ಹಾಗೂ 20 ಸೆಂ.ಮೀ ಉದ್ದಳತೆಯ ಜೊತೆಗೆ 15 ಸೆಂ.ಮೀ ಮತ್ತು 10 ಸೆಂ.ಮೀ ಉದ್ದಳತೆಯ ಎರಡು ತಾಮ್ರ ಶಾಸನಗಳು ಪತ್ತೆಯಾಗಿದೆ.

    ಈ ಸಂಬಂಧ ದೇವಸ್ಥಾನದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ವಿಠ್ಠಲರಾವ್ ವರ್ಣೇಕರ್ ಮಾಹಿತಿ ನೀಡಿದ್ದು, ಹೆಚ್ಚಿನ ಸಂಶೋಧನೆ ನಡೆಸಲು ಜಿಲ್ಲೆಯ ಇತಿಹಾಸ ತಜ್ಞ ಶ್ಯಾಮಸುಂದರ್ ಮುಂದಾಗಿದ್ದಾರೆ. ಈ ಶಾಸನವು ಕಲ್ಯಾಣ ಚಾಲುಕ್ಯರ ತ್ರೈಳೋಕ್ಯಮಲ್ಲನ ಆಡಳಿತ ಕಾಲದ್ದಾಗಿದ್ದು ಹತ್ತನೇ ಶತಮಾನದ್ದಾಗಿದೆ.

    ಶಾಸನದಲ್ಲೇನಿದೆ?
    ಸ್ವಸ್ತಿ ಸಮಸ್ತ ಭುವನಾಶ್ರಯ ಪ್ರತೂವೀವಲ್ಲಭ ಮಹಾರಾಜಾಧಿರಾಜ ಸತ್ಯಾಶ್ರಯ
    ಕುಳತಿಳಕ ಪರಮಭಟ್ಟಾರಕ ಚಾಳುಕ್ಯಾಭರಣ

    ಶ್ರೀಮತ್ರೈಲೋಕ್ಯಮಲ್ಲ ದೇವರ ರಾಜ್ಯದಲ್ಲಿ ಶಕವರ್ಷ 897ನೇಯ ಯುವ ಸಂವತ್ಸರದ ಭಾದ್ರಪದ ಮಾಸದ ಅಮವಾಸ್ಯೆ ಆದಿತ್ಯವಾರದಂದು ಸಂಭವಿಸಿದ ಸೂರ್ಯ ಗ್ರಹಣದ ಸಂದರ್ಭದಲ್ಲಿ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನು ಕದಂಬೇಶ್ವರ ದೇವಾಲಯ ನಿರ್ಮಾಣ ಮಾಡಿ, ಸಿವರಾಸಿ ಜೀಯರ ಪಾದಗಳಿಗೆ ನಮಿಸಿ, ಕಣ್ನಸೆ, ಬಡ್ಡಗಿವಾಳ್ಯ, ಸತ್ಯಾವಾಳು, ನಂದಾದೀವಿಗೆ, ಸೋಡಗ್ರ್ಗೆ ಇತ್ಯಾದಿ ನಿತ್ಯ ದೇವಸ್ವಂ ಕಾರ್ಯಗಳಿಗಾಗಿ ಹರದರಕೇರಿಯಿಂದ ಹತ್ತು ಗದ್ಯಾಣ ಮತ್ತು ತೆಂಕಣ ಕೇರಿಯಿಂದ ಐದು ಗದ್ಯಾಣ(ಹಣ)ವನ್ನು ದಾನವಾಗಿ ನೀಡಲಾಯಿತು.

    ಈ ಧರ್ಮವನ್ನು ಹಾಳು ಮಾಡಿದವರು ಕುರುಕ್ಷೇತ್ರದಲ್ಲಿ, ವಾರಣಾಸಿಯಲ್ಲಿ ಸಾವಿರ ಗೋವುಗಳನ್ನು ಕೊಂದಂತಹ ಪಾಪಕ್ಕೆ ಗುರಿಯಾಗುತ್ತಾರೆ ಎಂಬ ಶಾಪಾಶಯದ ನುಡಿಗಳಿವೆ.

    ಶಾಸನದ ಪ್ರಾಮುಖ್ಯತೆ:
    ಪ್ರಸ್ತುತ ಶಾಸನಗಳು 10ನೇ ಶತಮಾನದ ಕೊನೆಯಲ್ಲಿ ಅಂಕೋಲೆಯು ನೇರವಾಗಿ ಕಲ್ಯಾಣ ಚಾಲುಕ್ಯರ ಆಡಳಿತಕ್ಕೆ ಒಳಪಟ್ಟಿತ್ತು ಎಂಬ ವಿಷಯವನ್ನು ತಿಳಿಸುತ್ತದೆ. ಶಾಸನದಲ್ಲಿ ಯಾವುದೇ ಮಾಂಡಳೀಕ ಅರಸನ ಉಲ್ಲೇಖವಿಲ್ಲ. ದೇವಾಲಯವನ್ನು ಕಟ್ಟಿಸಿದ ಭೂತಯ್ಯಗಡಂಬ ತ್ರೈಲೋಕ್ಯಮಲ್ಲನ ಯಾವುದೋ ಒಬ್ಬ ಅಧಿಕಾರಿಯಾಗಿರಬೇಕು. ಈ ಶಾಸನವು ಶಕವರ್ಷ 897 ಅಂದರೆ ಕ್ರಿ.ಶ. 975ನೇ ಇಸವಿಯಲ್ಲಿ ನಿರ್ಮಾಣವಾಗಿರುವುದು ತಿಳಿಸುವುದರಿಂದ ಇಂದಿಗೆ ಸರಿಯಾಗಿ 1046 ವರ್ಷಗಳ ಹಿಂದೆ ಕದಂಬೇಶ್ವರ ದೇವಾಲಯ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನಿಂದ ನಿರ್ಮಾಣವಾಯಿತೆಂದು ಸ್ಪಷ್ಟವಾಗಿ ಹೇಳುತ್ತದೆ.

    ಅಂತೆಯೇ ತೆಂಕಣಕೇರಿಯನ್ನು ಉಲ್ಲೇಖಿಸಿರುವುದರಿಂದ ಅದರ ಪ್ರಾಚೀನತೆಯೂ 1046 ವರ್ಷಗಳಷ್ಟು ಹಿಂದಕ್ಕೆ ಒಯ್ಯುತ್ತದೆ. ಶಾಸನದಲ್ಲಿ ಉಲ್ಲೇಖಿತ ತ್ರೈಲೋಕ್ಯಮಲ್ಲನು ಕಲ್ಯಾಣ ಚಾಳುಕ್ಯರ ಎರಡನೇ ತೈಲಪನಾಗಿದ್ದು ಈತನು ಕ್ರಿ.ಶ.973 ರಿಂದ 979ರ ವರೆಗೆ ಆಳ್ವಿಕೆ ನಡೆಸಿದ್ದಾನೆ. ಈತನ ಅವಧಿಯಲ್ಲಿ ಅಧಿಕಾರಿಯಾಗಿದ್ದ ಭೂತಯ್ಯ ಗಡಂಬ ಕದಂಬ ವಂಶಸ್ಥನಾಗಿರಬೇಕು ಎಂದು ಊಹಿಸಲಾಗಿದೆ.

    ಭೂತಯ್ಯ+ಕದಂಬ=ಭೂತಯ್ಯಗಡಂಬ. ಆದ್ದರಿಂದಲೇ ಆತ ಕಟ್ಟಿಸಿದ ದೇವಾಲಯ ಕದಂಬೇಶ್ವರ ದೇವಾಲಯವೆಂದು ಖ್ಯಾತಿಯಾಗಿದೆ. ಅಲ್ಲದೆ ಶಾಸನವು ಸಿವರಾಸಿ ಜೀಯನನ್ನು ಉಲ್ಲೇಖಿಸುವುದರಿಂದ ಆ ಸಮಯದಲ್ಲಿ ಈ ಪ್ರದೇಶದಲ್ಲಿ ಕಾಳಾಮುಖ ಯತಿಗಳ ಪ್ರಾಬಲ್ಯವಿರುವುದರ ಕುರಿತು ಬೆಳಕು ಚೆಲ್ಲುತ್ತದೆ. ಶಾಸನದಲ್ಲಿ ಬರುವ ತೆಂಕಣಕೇರಿಯು ಇಂದಿನ ತೆಂಕಣ ಕೇರಿಯೆಂದು ಗುರುತಿಸಿದರೆ ಶಾಸನ ಹೇಳುವ ‘ತಳವಟ್ಟೆ ಧಮ್ಮಗೇರಿ ಹರದರಕೇರಿ’ಯನ್ನು ತಳವೃತ್ತಿಯಾ ಧಾರಿತ ವ್ಯಾಪಾರಿಗಳ ಕೇರಿ ಎಂದು ಭಾವಿಸಿದಾಗ ಅದನ್ನು ಇಂದಿನ ಕುಂಬಾರಕೇರಿ ಎಂದು ಗುರುತಿಸಬಹುದು ಎಂದು ಶ್ಯಾಮಸುಂದರ ಗೌಡ ವಿವರಿಸಿದ್ದಾರೆ.

  • ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ – ಪ್ರಧಾನಿ ಮೋದಿ ಉಪಸ್ಥಿತಿ

    ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ – ಪ್ರಧಾನಿ ಮೋದಿ ಉಪಸ್ಥಿತಿ

    ನವದೆಹಲಿ: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದು ರಾಮ ಮಂದಿರ ನಿರ್ಮಿಸುವ ದಶಕಗಳ ಕನಸು ಈಡೇರಿದಂತಾಗಲಿದೆ.

    ಬೆಳಗ್ಗೆ ಎಂಟು ಗಂಟೆಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಮಧ್ಯಾಹ್ನ ಮೂರು ಗಂಟೆಗೆ ಶಿಲನ್ಯಾಸ ಕಾರ್ಯಕ್ರಮ ನೆರೆವೇರಲಿದೆ ಎಂದು ಮೂಲಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ನಡುವಿನ ಅವಧಿಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

    ಕಳೆದ ನಾಲ್ಕು ತಿಂಗಳಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಉದ್ಘಾಟನ ಕಾರ್ಯಕ್ರಮವನ್ನು ಮತ್ತು ವಿವಿಧ ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಲಾಕ್‍ಡೌನ್ ಬಳಿಕ ಮೊದಲ ಬಾರಿಗೆ ಕಾರ್ಯಕ್ರಮವೊಂದರಲ್ಲಿ ದೈಹಿಕವಾಗಿ ಉಪಸ್ಥಿತರಿಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಪ್ರಮುಖ 300 ಮಂದಿ ಹೋರಾಟಗಾರಿಗೆ ಆಹ್ವಾನಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ.

  • ರಾಷ್ಟ್ರಕೂಟರ, ಹೊಯ್ಸಳರ ಕಾಲದ ಶಾಸನ ಪತ್ತೆ

    ರಾಷ್ಟ್ರಕೂಟರ, ಹೊಯ್ಸಳರ ಕಾಲದ ಶಾಸನ ಪತ್ತೆ

    ಶಿವಮೊಗ್ಗ: ಜಿಲ್ಲೆಯ ತೇವರಚಟ್ನಳ್ಳಿಯಲ್ಲಿ ರಾಷ್ಟ್ರಕೂಟರ ಹಾಗೂ ಹೊಯ್ಸಳರ ಕಾಲದ ಶಾಸನಗಳು ಪತ್ತೆಯಾಗಿವೆ.

    ರಾಷ್ಟ್ರಕೂಟರ ಕಾಲದ ಸಿಡಿತಲೆ, (ಆತ್ಮಬಲಿದಾನ) ವೀರಗಲ್ಲು, ಗ್ರಾನೈಟ್ ಕಲ್ಲಿನಿಂದ ಕೂಡಿವೆ. 1 ಮೀ. 60 ಸೆ.ಮೀ. ಉದ್ದ, 86 ಸೆ.ಮೀ. ಅಗಲದ ಹಳೆಗನ್ನಡ ಶಾಸನ ಇದಾಗಿದೆ. ಸಿಡಿತಲೆ ಕೊಡಬೇಕಾದ ವ್ಯಕ್ತಿಯು ಧ್ಯಾನ ಭಂಗಿಯಲ್ಲಿ ಕುಳಿತುಕೊಳ್ಳುತ್ತಾನೆ. ಅವನ ಜುಟ್ಟಿಗೆ ನೆಲದಲ್ಲಿ ಹೂಳಿದ ಗಳುವೊಂದನ್ನು ಬಾಗಿಸಿ ಕಟ್ಟುತ್ತಾರೆ. ಅವನ ತಲೆಯನ್ನು ಮತ್ತೊಬ್ಬನು ಕತ್ತಿಯಿಂದ ಹಾರಿಸಿದಾಗ ತಲೆ ಮೇಲಕ್ಕೆ ಸಿಡಿಯುತ್ತದೆ. ಇದು ಸಿಡಿತಲೆ ಕೊಡುವ ವಿಧಾನವಾಗಿದೆ.

    ರಾಜ್ಯದಲ್ಲಿ ವಿವಿಧ ಕಡೆಗಳಲ್ಲಿ ಇಂತಹ ಶಾಸನ ಆಧಾರಿತ ವೀರಗಲ್ಲುಗಳು ಪತ್ತೆಯಾಗಿವೆ. ಅವುಗಳಲ್ಲಿ ಮುಖ್ಯವಾಗಿ ಒಡೆಯನಿಗೆ ಶುಭಕೋರಿ ಪ್ರಾಣಾರ್ಪಣೆ ಮಾಡಿದ ಸಿಡಿತಲೆ, ವೀರಗಲ್ಲುಗಳು ಶಾಸನ ಸಹಿತ ಹಾಗೂ ರಹಿತ ಕಂಡು ಬಂದಿವೆ. ಕ್ರಿ.ಶ. 12-13ನೇ ಶತಮಾನದ ಹೊಯ್ಸಳರ ಕಾಲದ ಶಾಸನಭರಿತ ಮೂರು ವೀರಗಲ್ಲುಗಳು ದೊರೆತಿವೆ. ಶಾಸನ ಪತ್ತೆಗೆ ಸಹಕರಿಸಿದ ಮೋಹನ್ ಕುಮಾರ್ ಅವರಿಗೆ ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಶೇಜೇಶ್ವರ್ ಅಭಿನಂದಿಸಿದ್ದಾರೆ.

  • ಬೆಂಗಳೂರನ್ನ ಕಟ್ಟಿದ್ದು ಕೆಂಪೇಗೌಡರಲ್ವಾ?- ಇತಿಹಾಸವನ್ನೇ ಬದಲಿಸೋ ಶಿಲಾಶಾಸನದ ಬೆನ್ನು ಬಿದ್ದಿದ್ದಾರೆ ಪುರಾತತ್ವ ತಜ್ಞರು

    ಬೆಂಗಳೂರನ್ನ ಕಟ್ಟಿದ್ದು ಕೆಂಪೇಗೌಡರಲ್ವಾ?- ಇತಿಹಾಸವನ್ನೇ ಬದಲಿಸೋ ಶಿಲಾಶಾಸನದ ಬೆನ್ನು ಬಿದ್ದಿದ್ದಾರೆ ಪುರಾತತ್ವ ತಜ್ಞರು

    ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ನಗರಿಯನ್ನು ಕಟ್ಟಿದ್ದು, ಹೆಸರು ಕೊಟ್ಟಿದ್ದು ನಿಜವಾಗಲೂ ಕೆಂಪೇಗೌಡರಲ್ವಾ? ಹಾಗಿದ್ರೆ ಬೆಂಗಳೂರನ್ನ ನಿಜವಾಗ್ಲೂ ನಿರ್ಮಿಸಿದ್ದು ಯಾರು? ಯಾವಾಗ? ಈ ಎಲ್ಲಾ ಪ್ರಶ್ನೆಗಳನ್ನಿಟ್ಟುಕೊಂಡು ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ ಬೆಂಗಳೂರಲ್ಲಿ ಸಿಕ್ಕ ಮೊದಲ ಶಿಲಾಶಾಸನ.

    900ನೇ ಇಸವಿಯಲ್ಲೇ ಬೆಂಗಳೂರು ಪ್ರಾಂತ್ಯ ಇತ್ತು ಅನ್ನೋದಕ್ಕೆ ಸಾಕ್ಷಿ ಸಿಕ್ಕಿದೆಯಂತೆ. ಹೌದು. ಇಂತಹದ್ದೊಂದು ಇತಿಹಾಸವನ್ನೇ ಬದಲಾಯಿಸುವಂತ, ಕೆಂಪೇಗೌಡರನ್ನೇ ಪ್ರಶ್ನೆ ಮಾಡುವಂತಹ ಶಿಲಾಸನ ಬೆಂಗಳೂರಿನ ಬೇಗೂರು ರಸ್ತೆಯಲ್ಲಿರೋ ನಗರೇಶ್ವರ ದೇಗುಲದಲ್ಲಿ ಈಗ ಇತಿಹಾಸ ತಜ್ಞರ ಕಣ್ಣಿಗೆ ಬಿದ್ದಿದೆ. ಇದರ ಜೊತೆಗೆ ಗಂಗರ ಕಾಲದ ಹಲವು ಕಲ್ಲಿನ ಕೆತ್ತನೆಗಳ ತುಂಡುಗಳು ಈ ದೇಗುಲದಲ್ಲಿದೆ.

    900 ಇಸವಿಯಲ್ಲಿ ಬೆಂಗಳೂರು ಪ್ರಾಂತ್ಯ ಇತ್ತು. ನಗಾತಾರ ರಾಜನ ಮಗ ಬೆಂಗಳೂರು ಕಾಳಗದಲ್ಲಿ ಸತ್ತ ಎನ್ನುವ ಪ್ರಸ್ತಾಪ ಈ ಕಲ್ಲಿನ ಶಾಸನದಲ್ಲಿ ಅಡಕವಾಗಿದೆ. ನಗಾತಾರ ರಾಜ ಇದ್ದಿದ್ದು ಗಂಗರ ಕಾಲದಲ್ಲಿ ಅಂದರೆ ಸುಮಾರು 900 ನೇ ಇಸವಿಯಲ್ಲಿ. ಆಗಲೇ ಬೆಂಗಳೂರು ಹೆಸರು ಪ್ರಚಲಿತದಲ್ಲಿತ್ತು ಎನ್ನುವುದಕ್ಕೆ ಹಳೆಗನ್ನಡದ ಈ ಶಿಲಾಶಾಸನದಲ್ಲಿ ಪುರಾವೆಗಳಿವೆ. ಆದರೆ ಈ ಶಿಲಾ ಶಾಸನವನ್ನು ಇದುವರೆಗೂ ಇಲ್ಲಿನ ಜನ ಪುರಾತತ್ವ ಇಲಾಖೆಗೆ ನೀಡಿರಲಿಲ್ಲ.

    ಈಗ ದೇಗುಲದ ಅಂಗಳದಲ್ಲಿರುವ ಅಪರೂಪದ ಶಾಸನದ ಬೆನ್ನುಬಿದ್ದಿರುವ ಪುರಾತತ್ವ ತಜ್ಞರ ತಂಡ 900ನೇ ವರ್ಷದಲ್ಲೇ ಬೆಂಗಳೂರು ಹೆಸರು ಕೆತ್ತಿರುವ ಕೆತ್ತನೆಯನ್ನು ಪತ್ತೆ ಹಚ್ಚಿದೆ. ಆದರೆ ಇದು ನಿಜನಾ? ಕೆಂಪೇಗೌಡರು ಬೆಂಗಳೂರನ್ನು ಕಟ್ಟಲಿಲ್ವಾ ಎಂಬುದರ ಬಗ್ಗೆ ಆಳವಾದ ಅಧ್ಯಯನವೂ ಸದ್ದಿಲ್ಲದೇ ಶುರುವಾಗಿದೆ.