Tag: Insta Post

  • ನಾವು ಈಗ ಮೂವರು – ಸಿಹಿ ಸುದ್ದಿ ಕೊಟ್ಟ ವಿರುಷ್ಕಾ

    ನಾವು ಈಗ ಮೂವರು – ಸಿಹಿ ಸುದ್ದಿ ಕೊಟ್ಟ ವಿರುಷ್ಕಾ

    ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

    ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹ ಆಗಿದ್ದರು. ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ  ಹಂಚಿಕೊಂಡಿರುವ, ಕೊಹ್ಲಿ ನಾವೂ ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದಾರೆ.

    https://www.instagram.com/p/CEYZIPllBzF/?utm_source=ig_web_button_share_sheet

    2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ರು.

    ಸದ್ಯ ವಿರಾಟ್ ಕೊಹ್ಲಿಯವರು ಐಪಿಎಲ್‍ನಲ್ಲಿ ಭಾಗವಹಿಸಲು ಯುಎಇಗೆ ತೆರಳಿದ್ದಾರೆ. ಸದ್ಯ ಅಲ್ಲಿ ಆರು ದಿನಗಳ ಕಾಲ ಕೆಹ್ಲಿ ಕ್ವಾರಂಟೈನ್ ಆಗಿದ್ದಾರೆ. ಆದನಂತರ ಐಪಿಎಲ್ ಸಿದ್ಧತೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದಿನಂತೆ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನೆಡೆಸಲಿದ್ದಾರೆ. ಐಪಿಎಲ್‍ನಲ್ಲಿ ಸ್ಟಾರ್ ತಂಡ ಎಂದು ಗುರುತಿಸಿಕೊಂಡಿರುವ ಆರ್‌ಸಿಬಿತಂಡ ಈವರೆಗೂ ಒಂದು ಬಾರಿಯೂ ಕಪ್ ಗೆದ್ದಿಲ್ಲ.

  • ನಾವು ಪಾತ್ರಧಾರಿಗಳಷ್ಟೇ, ನಿಜವಾದ ಹೀರೋಗಳು ನೀವು: ಸೈನಿಕರಿಗೆ ಶ್ವೇತಾ ನಮನ

    ನಾವು ಪಾತ್ರಧಾರಿಗಳಷ್ಟೇ, ನಿಜವಾದ ಹೀರೋಗಳು ನೀವು: ಸೈನಿಕರಿಗೆ ಶ್ವೇತಾ ನಮನ

    ಬೆಂಗಳೂರು: ಪ್ರಾಣಕ್ಕೆ ಅಂಜದೇ ನಮ್ಮೆಲ್ಲರಿಗೋಸ್ಕರ ಹೋರಾಡುತ್ತಿರುವ ಯೋಧರೇ ನಿಜವಾದ ಹೀರೋಗಳು ಎಂದು ನಟಿ ಮತ್ತು ನಿರೂಪಕಿ ಶ್ವೇತಾ ಚಂಗಪ್ಪ ಅವರು ಹೇಳಿದ್ದಾರೆ.

    ಭಾರತ ಮತ್ತು ಚೀನಾ ಗಡಿ ಭಾಗದಲ್ಲಿ ಕುತಂತ್ರಿ ಚೀನಾ ತನ್ನ ನರಿ ಬುದ್ಧಿಯನ್ನು ತೋರುತ್ತಿದೆ. ಕಳೆದ ಸೋಮವಾರ ರಾತ್ರಿ ಚೀನಾ ಹಾಗೂ ಭಾರತೀಯ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಚೀನಾದ ಸೈನಿಕರ ಜೊತೆ ಕೆಚ್ಚೆದೆಯಿಂದ ಹೋರಾಡಿದ ನಮ್ಮ ಭಾರತೀಯ ಸೇನೆಯ 20 ಜನರ ಯೋಧರು ಹುತಾತ್ಮರಾಗಿದ್ದಾರೆ. ಯೋಧರು ಹುತಾತ್ಮರಾಗಿದ್ದಕ್ಕೆ ಇಡೀ ದೇಶವವೇ ಕಂಬನಿ ಮಿಡಿದಿದೆ.

    https://www.instagram.com/p/CBkRRKEjoUU/

    ಈಗ ಈ ವಿಚಾರವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಶ್ವೇತಾ ಚಂಗಪ್ಪ. ದೇಶ ಕಾಯುವ ಯೋಧರೇ, ನೀವು ನಮ್ಮೆಲ್ಲರ ಜೀವನದ ನಿಜವಾದ ಹೀರೋಗಳು. ನಿಮ್ಮನ್ನು ಬಣ್ಣಿಸಲು ಪದಗಳು ಸಿಗುವುದಿಲ್ಲ. ಪರದೆಯ ಮೇಲೆ ಪಾತ್ರ ಮಾಡುವ ನಾವು ನಟ ನಟಿಯರು ಹಾಗೂ ಕೇವಲ ಪಾತ್ರಧಾರಿಗಳು ಅಷ್ಟೇ. ಆದರೆ ನೀವು ನಿಜವಾದ ಹೀರೋಗಳು ಎಂದು ಯೋಧರನ್ನು ಹಾಡಿಹೊಗಳಿದ್ದಾರೆ.

    ಜೊತೆಗೆ ನಿಮ್ಮ ಪ್ರಾಣಕ್ಕೆ ಅಂಜದೆ ನಮ್ಮ ದೇಶಕ್ಕಾಗಿ, ನಮ್ಮೆಲ್ಲರಿಗೋಸ್ಕರ ಹೋರಾಟ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಪ್ರತಿಯೊಬ್ಬ ಭಾರತೀಯ ಸೈನಿಕನಿಗೂ ನನ್ನ ಕೋಟಿ ಕೋಟಿ ನಮನ. ನಿಮ್ಮ ಬಲಿದಾನಕ್ಕೆ ನಾನು ಚಿರಋಣಿ. ಯುದ್ಧದಲ್ಲಿ ಅಮರರಾಗಿರುವ ಎಲ್ಲಾ ಯೋಧರ ಕುಟುಬದವರಿಗೆ ಆ ಭಗವಂತ ಹೆಚ್ಚಿನ ಶಕ್ತಿಯನ್ನೂ ಕೊಡಲಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಡಿರುವ ಶ್ವೇತಾ ಭಾರತೀಯ ಸೇನೆಯ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

    ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ 17 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 40ಕ್ಕೂ ಹೆಚ್ಚು ಮಂದಿ ಯೋಧರನ್ನು ಸೆದೆಬಡಿದಿದೆ. ಇದರಲ್ಲಿ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್‍ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿತ್ತು.