Tag: instagram

  • ಗುಂಡಿಕ್ಕಿ ಈಕ್ವೆಡರ್‌ ಬ್ಯೂಟಿ ಹತ್ಯೆ – ಇನ್‌ಸ್ಟಾಗ್ರಾಮ್‌ ಫಾಲೋ ಮಾಡಿ ಸ್ಕೆಚ್‌ ಹಾಕಿದ್ದ ಹಂತಕರು!

    ಗುಂಡಿಕ್ಕಿ ಈಕ್ವೆಡರ್‌ ಬ್ಯೂಟಿ ಹತ್ಯೆ – ಇನ್‌ಸ್ಟಾಗ್ರಾಮ್‌ ಫಾಲೋ ಮಾಡಿ ಸ್ಕೆಚ್‌ ಹಾಕಿದ್ದ ಹಂತಕರು!

    ಈಕ್ವೆಡಾರ್‌: ಸೋಷಿಯಲ್‌ ಮೀಡಿಯಾಗಳಲ್ಲಿ (Social Media) ಸ್ಟೇಸ್‌ ಹಾಕೋದು ತಮ್ಮ ದಿನದ ಬೆಳವಣಿಗೆಯನ್ನು ಫಾಲೋವರ್ಸ್‌ಗಳಿಗೆ ಹಂಚಿಕೊಳ್ಳಬೇಕೆಂಬುದು ಖಯಾಲಿ. ಇಂದು ಎಲ್ಲಿದ್ದೇವೆ? ಎಲ್ಲಿಗೆ ಹೋಗ್ತಿದ್ದೀವಿ? ಯಾರನ್ನ ಭೇಟಿ ಮಾಡ್ತೀವಿ? ಯಾವ ಹೋಟೆಲ್‌ನಲ್ಲಿ ಊಟ ಮಾಡಿದ್ರು? ಎಲ್ಲಿ ಶಾಪಿಂಗ್‌? ಹೀಗೆ ಪ್ರತಿ ಮಾಹಿತಿಯನ್ನು ಹಂಚಿಕೊಳ್ಳುತ್ತಾರೆ. ಹೀಗೆ ಮಾಡದಿದ್ದರೆ ನಿದ್ರೆಯೇ ಬರೋದಿಲ್ಲ. ಇದು ಕ್ರಿಮಿನಲ್‌ಗಳಿಗೆ ನೆರವಾಗುತ್ತದೆ ಎಂಬುದಕ್ಕೆ ಈಕ್ವೆಡರ್‌ ದೇಶದ ಬ್ಯೂಟಿ (Ecuador Beauty) ಹತ್ಯೆಯೇ ಸ್ಪಷ್ಟ ಉದಾಹರಣೆಯಾಗಿದೆ.

    ಹೌದು. 2022ರಲ್ಲಿ ʻಮಿಸ್ ಈಕ್ವೆಡರ್‌ʼ ಕಿರೀಟ ಧರಿಸಿದ್ದ ಬ್ಯೂಟಿ ಲ್ಯಾಂಡಿ ಪರಾಗ ಗೊಯ್ಬುರೊ (23) (Landy Parraga Goyburo) ಅವರು ಕಳೆದ ಏಪ್ರಿಲ್‌ 28ರಂದು ಭೀಕರ ಗುಂಡಿನ ದಾಳಿಗೆ ತುತ್ತಾಗಿದ್ದರು. ಈಕ್ವೆಡರ್‌ ದೇಶದ ಕ್ವೆವೆಡೊ ನಗರದಲ್ಲಿ ಇರುವ ಜನಪ್ರಿಯ ರೆಸ್ಟೋರೆಂಟ್ ಒಂದರಲ್ಲಿ ಕುಳಿತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದರು. ಈ ಘಟನೆ ಈಕ್ವೆಡರ್‌ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದನ್ನೂ ಓದಿ: ನಿಜ್ಜರ್‌ ಹತ್ಯೆ ಕೇಸ್‌ – ಬಂಧಿತ ಮೂವರು ಆರೋಪಿಗಳು ಭಾರತ ಮೂಲದವರು; ಫೋಟೋ ರಿಲೀಸ್‌

    23 ವರ್ಷ ವಯಸ್ಸಿನ ಈಕೆಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹೆಚ್ಚಿನ ಅಭಿಮಾನಿಗಳನ್ನು ಹೊಂದಿದ್ದರು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಮಾಹಿತಿಯೇ ಹಂತಕರಿಗೆ ಸುಳಿವು ಸಿಗುವಂತೆ ಮಾಡಿದೆ ಎಂಬುದು ಗೊತ್ತಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ವೇಳೆ ಇಬ್ಬರು ಬಂದೂಕುಧಾರಿ ಯುವಕರು ಹೋಟೆಲ್‌ಗೆ ನುಗ್ಗಿ ಆಕೆಯ ಮೇಲೆ ಗುಂಡಿನ ಮಳೆಗರೆಯುತ್ತಾರೆ. ಇದೇ ವೇಳೆ ಲ್ಯಾಂಡಿ ಜೊತೆಗೆ ಇದ್ದ ಮತ್ತೊಬ್ಬನಿಗೂ ಗುಂಡೇಟು ತಗುಲಿದೆ. ದಾಳಿ ಬಳಿಕ ಬಂದೂಕುಧಾರಿಗಳು ಪರಾರಿಯಾಗುತ್ತಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಅಲ್‌ ಜಜೀರಾ ಬಂದ್‌ – ಕಚೇರಿ ಮೇಲೆ ದಾಳಿ

    ಇನ್‌ಸ್ಟಾ ಫಾಲೋ ಮಾಡಿ ಸ್ಕೆಚ್‌ ಹಾಕಿದ್ದೇಗೆ?
    ಸೋಷಿಯಲ್‌ ಮೀಡಿಯಾ ಪ್ರಭಾವಿಯಾಗಿದ್ದ (Ecuadorian influencer) ಲ್ಯಾಂಡಿ ಪರಾಗ, ತಾನು ಎಲ್ಲೇ ಹೋದರೂ ಇನ್‌ಸ್ಟಾ ಖಾತೆಯಲ್ಲಿ ಅಪ್‌ಡೇಟ್ ಮಾಡುತ್ತಿದ್ದರು. ಏಪ್ರಿಲ್ 28 ರಂದು ಸಹ ಆಕೆ ರೆಸ್ಟೋರೆಂಟ್ ಒಂದಕ್ಕೆ ಹೋಗಿ ತಾವು ಈ ರೆಸ್ಟೋರೆಂಟ್‌ನಲ್ಲಿ ಇರೋದಾಗಿ ಫೋಟೋ ಸಮೇತ ಇನ್‌ಸ್ಟಾಗ್ರಾಂನಲ್ಲಿ ಅಪ್‌ಡೇಟ್ ಮಾಡಿದ್ದರು. ಜೊತೆಗೆ ಆಕ್ಟೋಪಸ್‌ (ಸಮುದ್ರ ಜೀವಿ) ಆಹಾರವೊಂದನ್ನು ಸೇವಿಸುತ್ತಿರೋದಾಗಿಯೂ ಫೋಟೋ ಹಂಚಿಕೊಂಡಿದ್ದರು ಇದನ್ನು ನೋಡಿದ್ದೇ ತಡ, ಆಕೆಯ ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು, ರೆಸ್ಟೋರೆಂಟ್‌ಗೆ ದಾಂಗುಡಿ ಇಟ್ಟಿದ್ದರು. ಅಲ್ಲಿಯೇ ಗುಂಡಿನ ದಾಳಿ ನಡೆಸಿ ಆಕೆಯನ್ನ ಹತ್ಯೆಗೈದರು.

    ಮೂಲಗಳ ಪ್ರಕಾರ ಲ್ಯಾಂಡಿ ಪರಾಗ ಅವರಿಗೆ ಲಿಯಾಂಡ್ರೊ ನೊರೆರೊ ಎಂಬಾತನ ಜೊತೆಗೆ ಗೆಳೆತನ ಇತ್ತು. ಆತ ಓರ್ವ ಮಾದಕ ದ್ರವ್ಯ ಸಾಗಾಟಗಾರನಾಗಿದ್ದ. ಕಳೆದ ವರ್ಷ ಜೈಲಿನಲ್ಲಿ ಇದ್ದ ವೇಳೆ ಜೈಲಿನಲ್ಲಿ ನಡೆದ ಬಡಿದಾಟದಲ್ಲಿ ಆತ ಕೊನೆಯುಸಿರೆಳೆದಿದ್ದ. ಲಿಯಾಂಡ್ರೊ ಪತ್ನಿಯೇ ಲ್ಯಾಂಡಿ ಅವರ ಹತ್ಯೆಗೆ ಸುಪಾರಿ ಕೊಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಏಕೆಂದರೆ ಲ್ಯಾಂಡಿ ವಿರುದ್ಧ ಅನೇಕ ಪೊಲೀಸ್‌ ಪ್ರಕರಣಗಳೂ ಸಹ ದಾಖಲಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.

  • ಇನ್‌ಸ್ಟಾದಲ್ಲಿ ಚಾಟಿಂಗ್-‌ ಡೇಟಿಂಗ್‌ ಕರೆದಾಗ ಸತ್ಯ ಗೊತ್ತಾಗಿ ರೊಚ್ಚಿಗೆದ್ದ ಯುವಕ!

    ಇನ್‌ಸ್ಟಾದಲ್ಲಿ ಚಾಟಿಂಗ್-‌ ಡೇಟಿಂಗ್‌ ಕರೆದಾಗ ಸತ್ಯ ಗೊತ್ತಾಗಿ ರೊಚ್ಚಿಗೆದ್ದ ಯುವಕ!

    ಲಕ್ನೋ: ಸಾಮಾಜಿಕ ಜಾಲತಾಣ ಇನ್‌ ಸ್ಟಾದಲ್ಲಿ ಪರಿಚಯವಾಗಿ, ಈ ಪರಿಚಯವು ಪ್ರೀತಿಗೆ ತಿರುಗಿ ಡೇಟಿಂಗ್‌ಗೂ ಕರೆದಿದ್ದಾನೆ. ಈ ವೇಳೆ ಸತ್ಯ ಗೊತ್ತಾಗಿ ಯುವಕ ರೊಚ್ಚಿಗೆದ್ದ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ (Uttarpradesh Kanpur) ನಡೆದಿದೆ.

    ಘಟನೆ ವಿವರ: 20 ವರ್ಷದ ದೀಪೇಂದ್ರ ಸಿಂಗ್ Instagram ನಲ್ಲಿ ಯುವತಿ ಎಂದು ಚಾಟ್ ಮಾಡಲು ಪ್ರಾರಂಭಿಸಿದ್ದಾನೆ. ಕ್ರಮೇಣ ಇಬ್ಬರಲ್ಲಿಯೂ ಪ್ರೀತಿ ಆರಂಭವಾಗಿದೆ. ಕೆಲ ದಿನಗಳ ಬಳಿಕ ಒಂದು ದಿನ ಆತ ಪರಸ್ಪರ ಭೇಟಿಯಾಗಲು ನಿರ್ಧರಿಸಿದ್ದಾನೆ. ಅಂತೆಯೇ ಭೇಟಿಗೆ ದಿನ ಕೂಡ ನಿಗದಿ ಮಾಡಿದ್ದಾನೆ. ಅದರಂತೆ ದೀಪೇಂದ್ರ ಸಿಂಗ್ ಹೇಳಿದ ಸ್ಥಳಕ್ಕೆ ಆಕೆ ಬಂದಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಯುವತಿಯಾಗಿ ಕಾಣಿಸಿಕೊಂಡಿದ್ದಾಕೆಗೆ ಹೆಚ್ಚು ವಯಸ್ಸಾದುದನ್ನು ನೋಡಿ ದೀಪೇಂದ್ರ ಆಘಾತಕ್ಕೊಳಗಾಗಿದ್ದಾನೆ. ಮೊದಲು ಆಕೆಯನ್ನು ನೋಡಿ ಕನ್ಫ್ಯೂಸ್ ಆದ ಯುವಕ, ನಂತರ ಆಕೆಯನ್ನು ವಿಚಾರಿಸಿದ್ದಾನೆ. ಈ ವೇಳೆ ಆಕೆ ತನಗೆ 45 ವರ್ಷ ಎಂದು ಬಹಿರಂಗಪಡಿಸಿದ್ದಾಳೆ.‌

    ಪ್ರಿಯತಮೆಯ ವಯಸ್ಸು ಕೇಳಿ ಕೋಪಗೊಂಡ ದೀಪೇಂದ್ರ, ಆಕೆಯೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೇ ಆಕೆಯ ತಲೆಗೂದಲನ್ನು ಹಿಡಿದು ನೆಲಕ್ಕೆ ಹೊಡೆದಿದ್ದಾನೆ. ಹಲ್ಲೆಗೈದ ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ತನಗೆ ಥಳಿಸಿದ್ದಾರೆ. ನಂತರ ನನ್ನ ಮೊಬೈಲ್ ಫೋನ್ ಕದ್ದಿದ್ದಾರೆ ಎಂದು ದೂರಿದ್ದಾಳೆ.

    ಘಟನೆಗೆ ಸಂಬಂಧಿಸಿದಂತೆ 20 ವರ್ಷದ ಯುವಕನನ್ನು ಪೊಲೀಸರು ಕಾನ್ಪುರದಲ್ಲಿ ಬಂಧಿಸಿದ್ದಾರೆ. ತನಿಖೆಯ ವೇಳೆ, ಮಹಿಳೆಗೆ 45 ವರ್ಷ ವಯಸ್ಸಾಗಿದೆ ಎಂದು ತಿಳಿದು ಥಳಿಸಿದ್ದಾಗಿ ಪೊಲೀಸರಿಗೆ ದೀಪೇಂದ್ರ ತಿಳಿಸಿದ್ದಾನೆ.

  • ಗಂಡು ಮಗುವಿಗೆ ಜನ್ಮ ನೀಡಿದ ಗಾಯಕ ಸಿಧು ಮೂಸೆವಾಲಾ ತಾಯಿ

    ಗಂಡು ಮಗುವಿಗೆ ಜನ್ಮ ನೀಡಿದ ಗಾಯಕ ಸಿಧು ಮೂಸೆವಾಲಾ ತಾಯಿ

    ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲ (Sidhu Moosewala) ಅವರ ಮರಣದ ಎರಡು ವರ್ಷಗಳ ನಂತರ ಅವರ ತಾಯಿ ಚರಣ್ ಕೌರ್ (Charan Kaur) ಗಂಡು ಮಗುವಿಗೆ (Boy Baby) ಜನ್ಮ ನೀಡಿದ್ದಾರೆ.

    ಖ್ಯಾತ ಗಾಯಕ ಸಿಧು ಮೂಸೆವಾಲ ಅವರನ್ನು ದುಷ್ಕರ್ಮಿಗಳ ಹತ್ಯೆಗೈದ ಬಳಿಕ ಚರಣ್ ಕೌರ್ ಮತ್ತೊಮ್ಮೆ ಗಂಡು ಮಗುವಿನ ತಾಯಿಯಾಗಿದ್ದಾರೆ. ಈ ಕುರಿತು ಸಿಧು ಅವರ ತಂದೆ ಬಲ್ಕೌರ್ ಸಿಂಗ್ (Balkaur Singh) ಇನ್ಸ್ಟಾಗ್ರಾಂನಲ್ಲಿ (Instagram) ಪೋಸ್ಟ್ ಮಾಡಿದ್ದು, ಮಗುವಿನೊಂದಿಗಿರುವ ಫೋಟೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗುಜರಾತ್‌ನ ಹಾಸ್ಟೆಲ್‌ನಲ್ಲಿ ನಮಾಜ್‌ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ

     

    View this post on Instagram

     

    A post shared by Balkaur Singh (@sardarbalkaursidhu)

    ಶುಭದೀಪ್‌ನನ್ನು ಪ್ರೀತಿಸುವ ಲಕ್ಷಾಂತರ ಜನರ ಆಶೀರ್ವಾದದಿಂದ ದೇವರು ಶುಭದೀಪ್ ಅವರ ಕಿರಿಯ ಸಹೋದರರನ್ನು ನಮ್ಮ ತೋಳಿಗೆ ಹಾಕಿದ್ದಾನೆ. ವಾಹೆಗುರುಗಳ ಆಶೀರ್ವಾದದಿಂದ ಕುಟುಂಬವು ಆರೋಗ್ಯವಾಗಿದೆ ಎಂದು ಪೋಸ್ಟ್ ಹಾಕುವ ಮೂಲಕ ಮಗುವಿನ ಆಗಮನವನ್ನು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ನೇಣಿಗೆ ಶರಣು – ಕಳ್ಳತನ ಆರೋಪ ಹೊರಿಸಿ ಸಮವಸ್ತ್ರ ಬಿಚ್ಚಿಸಿ ಪರಿಶೀಲಿಸಿದ್ದಕ್ಕೆ ಆತ್ಮಹತ್ಯೆ?

    ಈ ಹಿಂದೆ ಸಿಧು ಅವರ ತಾಯಿ 58ನೇ ವಯಸ್ಸಿನಲ್ಲಿ ಮತ್ತೆ ಗರ್ಭಿಣಿಯಾಗಿದ್ದಾರೆ ಎಂಬ ವಿಷಯ ಎಲ್ಲೆಡೆ ಹರಿದಾಡಿತ್ತು. ಕೆಲವರು ಇದು ಸುಳ್ಳುಸುದ್ದಿ ಎಂದು ಹೇಳಿದ್ದರು. ಇದೀಗ ಚರಣ್ ಕೌರ್ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಸಿಧು ಮೂಸೆವಾಲ ಅವರು ತನ್ನ ತಂದೆ ತಾಯಿಗೆ ಒಬ್ಬನೇ ಮಗ ಆಗಿದ್ದರು. ಅಂತಹ ಪರಿಸ್ಥಿತಿಯಲ್ಲಿ, ತನ್ನ ಮಗನನ್ನು ಕಳೆದುಕೊಂಡು ಅಕ್ಷರಶಃ ದುಖಸಾಗರದಲ್ಲಿ ಮುಳುಗಿದ್ದ ಅವರ ಪೋಷಕರು ಕುಟುಂಬದ ಉತ್ತರಾಧಿಕಾರಿಯ ಸಲುವಾಗಿ ಐವಿಎಫ್ (IVF) ತಂತ್ರಜ್ಞಾನದ ಮೂಲಕ ಗರ್ಭಧರಿಸಲು ನಿರ್ಧರಿಸಿದರು. ಇದನ್ನೂ ಓದಿ: ಚಿನ್ನದ ಅಂಗಡಿ ಮಾಲೀಕನ ಮೇಲೆ ಶೂಟೌಟ್ – ನಾಲ್ವರು ದರೋಡೆಕೋರರು ಅರೆಸ್ಟ್

    2022 ರ ಮೇ 29 ರಂದು ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ಖ್ಯಾತ ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದನ್ನೂ ಓದಿ: ನನಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವ ಬೇಡ: ಹೆಸರು ಕೈಬಿಡುವಂತೆ ಸಿಎಂಗೆ ಅಕ್ಕಯ್‌ ಪದ್ಮಶಾಲಿ ಪತ್ರ

  • ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಡೌನ್‌; ಜಗತ್ತಿನಾದ್ಯಂತ ಬಳಕೆದಾರರಿಗೆ ಲಾಗಿನ್‌ ಸಮಸ್ಯೆ

    ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಡೌನ್‌; ಜಗತ್ತಿನಾದ್ಯಂತ ಬಳಕೆದಾರರಿಗೆ ಲಾಗಿನ್‌ ಸಮಸ್ಯೆ

    ನವದೆಹಲಿ: ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸ್ಥಗಿತಗೊಂಡಿದೆ.

    ಫೇಸ್‌ಬುಕ್ (Facebook), ಇನ್‌ಸ್ಟಾಗ್ರಾಮ್, ಥ್ರೆಡ್‌ಗಳು ಮತ್ತು ಮೆಸೆಂಜರ್, ಮೆಟಾ ನಿರ್ವಹಿಸುವ ಪ್ಲಾಟ್‌ಫಾರ್ಮ್‌ಗಳು ಜಾಗತಿಕವಾಗಿ ಸ್ಥಗಿತಗೊಂಡಿದೆ. ಡೌನ್ ಡಿಟೆಕ್ಟರ್ ಟ್ರ್ಯಾಕಿಂಗ್ ವೆಬ್‌ಸೈಟ್‌ಗಳನ್ನು ಸ್ಥಗಿತಗೊಳಿಸಿದೆ. ಇದನ್ನೂ ಓದಿ: ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ

    ಈ ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಲಾಗ್ ಇನ್ ಸಮಸ್ಯೆಗಳ ಬಗ್ಗೆ ದೂರು ಕೇಳಿಬಂದಿದೆ. ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಎರಡೂ ಲಾಗ್ ಔಟ್ ಆಗಿದೆ. ಕೆಲವರಿಗೆ Instagram ಪುಟಗಳನ್ನು ರಿಫ್ರೆಶ್ ಮಾಡಲು ಸಾಧ್ಯವಾಗಲಿಲ್ಲ. ಅನೇಕ ಬಳಕೆದಾರರಿಗೆ ಪಾಸ್‌ವರ್ಡ್‌ಗಳನ್ನು ಬದಲಾಯಿಸಲು ಸಹ ಕೇಳಲಾಯಿತು. ಸ್ವಲ್ಪ ಸಮಯದ ನಂತರ, ಯೂಟ್ಯೂಬ್ ಬಳಕೆದಾರರು ಸಹ ಇದೇ ರೀತಿಯ ಸಮಸ್ಯೆ ಎದುರಿಸಿದ್ದಾರೆ.

    ಔಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com ಮಂಗಳವಾರ ಬಳಕೆದಾರರಿಗೆ ಮೆಟಾ ಪ್ಲಾಟ್‌ಫಾರ್ಮ್‌ಗಳ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಡೌನ್ ಆಗಿದೆ ಎಂದು ಬಹಿರಂಗಪಡಿಸಿದೆ. ಫೇಸ್‌ಬುಕ್‌ಗೆ ಸಮಸ್ಯೆ ಕುರಿತು 3,00,000 ಕ್ಕೂ ಹೆಚ್ಚು ದೂರುಗಳು ವರದಿಯಾಗಿವೆ. Instagramಗೆ 20,000 ಕ್ಕೂ ಹೆಚ್ಚು ವರದಿಗಳಿವೆ. ಇದನ್ನೂ ಓದಿ: ಆಪಲ್‌ ಐಫೋನ್‌ಗೆ ಭರ್ಜರಿ 16,584 ಕೋಟಿ ರೂ. ದಂಡ

    ನೂರಾರು ಬಳಕೆದಾರರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಸಮಸ್ಯೆ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ವರದಿ ಮಾಡುತ್ತಿದ್ದಾರೆ. ಒಬ್ಬ ಬಳಕೆದಾರ, ʼಮೆಟಾ ಡೌನ್ ಆಗಿದೆಯೇ ಅಥವಾ ನನ್ನ ಖಾತೆಯೇ ಹ್ಯಾಕ್ ಆಗುತ್ತಿದ್ದೇನೆಯೇ? ಎಂದು ಬರೆದುಕೊಂಡಿದ್ದಾರೆ. ನನ್ನ ಇನ್‌ಸ್ಟಾಗ್ರಾಂ ಲೋಡ್ ಆಗುತ್ತಿಲ್ಲ. ನನ್ನ ಫೇಸ್‌ಬುಕ್ ಕೂಡ ʼಸೆಷನ್ ಲಾಗ್ ಔಟ್ ಆಗಿದೆʼ ಎಂದು ಎಕ್ಸ್‌ ಖಾತೆಯಲ್ಲಿ ಮತ್ತೊಬ್ಬರು ಸಮಸ್ಯೆ ಹೇಳಿಕೊಂಡಿದ್ದಾರೆ.

  • ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಸಿಗಲಿದೆ ಪ್ರಶಸ್ತಿ

    ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಸಿಗಲಿದೆ ಪ್ರಶಸ್ತಿ

    ನವದೆಹಲಿ: ಸಾಮಾಜಿಕ ಜಾಲತಾಣ ವಿಡಿಯೋ ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೆಟರ್ಸ್‌ಗೆ (Content Creators) ಗುಡ್‌ನ್ಯೂಸ್. ಕೇಂದ್ರ ಸರ್ಕಾರ  ( Central Government) ಈಗ ಕಂಟೆಂಟ್ ಕ್ರಿಯೆಟರ್ಸ್‌ಗೆ ಪ್ರಶಸ್ತಿ ನೀಡಲು ಮುಂದಾಗಿದೆ.

    ಇತ್ತಿಚಿನ ದಿನಗಳಲ್ಲಿ ಎಲ್ಲಿ ನೋಡಿದರು ಸಾಮಾಜಿಕ ಜಾಲತಾಣಗಳದೆ ಹವಾ. ಸಣ್ಣ ಮಕ್ಕಳಿಂದ ಹಿಡಿದು ಎಲ್ಲರು ಸೋಷಿಯಲ್ ಮೀಡಿಯಾದಲ್ಲಿ (Social Media) ತೊಡಗಿಕೊಂಡಿರುತ್ತಾರೆ. ಅದರಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಂದ ಇನ್ನೂ ಹೆಚ್ಚಾಗಿದೆ. ಅಂತಹ ಪ್ರಭಾವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಪ್ರಧಾನಿ ಮೋದಿಗೆ HDD ಧನ್ಯವಾದ

    ದೇಶದ ವಿವಿಧ ಭಾಷೆ ಮತ್ತು ವರ್ಗಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವ ಮಾದರಿಯಲ್ಲಿ ಸುಮಾರು 20 ವಿಭಾಗಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪೂಜೆ- ಯೋಗಿ ಆದಿತ್ಯನಾಥ್‌ಗೆ ಟಿಎಂಸಿ ನಾಯಕ ಎಚ್ಚರಿಕೆ

    ಯೂಟ್ಯೂಬ್, ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣದಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. 20 ವರ್ಗಗಳಲ್ಲಿ ದೇಶದ ಶಕ್ತಿ ಮತ್ತು ಸಂಸ್ಕೃತಿಯನ್ನು ತೋರಿಸಿದವರಿಗೆ ಒಂದು ಪ್ರಶಸ್ತಿಯನ್ನು ನೀಡಲಾಗುತ್ತೆ. ಜೊತೆಗೆ ಗ್ರೀನ್ ಚಾಂಪಿಯನ್ಸ್, ಸ್ವಚ್ಛತಾ ರಾಯಭಾರಿಗಳು ಮತ್ತು ಟೆಕ್ ಕ್ರಿಯೇಟರ್ಸ್ ಎಂಬ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳು ಇರಲಿವೆ. ಇದನ್ನೂ ಓದಿ: ಸಂಸತ್ತಿನಲ್ಲಿ ಇಂದು ರಾಮ ಮಂದಿರ ಗೊತ್ತುವಳಿ: ಬಿಜೆಪಿ ಸಂಸದರಿಗೆ ವಿಪ್‌ ಜಾರಿ

  • ರೀಲ್ಸ್ ಮಾಡುವುದನ್ನು ವಿರೋಧಿಸಿದ ಗಂಡನನ್ನೇ ಮುಗಿಸಿದ ಹೆಂಡತಿ

    ರೀಲ್ಸ್ ಮಾಡುವುದನ್ನು ವಿರೋಧಿಸಿದ ಗಂಡನನ್ನೇ ಮುಗಿಸಿದ ಹೆಂಡತಿ

    ಪಾಟ್ನಾ: ಇನ್ಸ್ಟಾಗ್ರಾಂನಲ್ಲಿ (Instagram) ರೀಲ್ಸ್ (Reels) ಮಾಡುವುದನ್ನು ವಿರೋಧಿಸಿದ ಗಂಡನನ್ನು (Husband) ಪತ್ನಿ (Wife) ತನ್ನ ಅಪ್ಪ-ಅಮ್ಮನೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಬಿಹಾರದ (Bihar) ಬೇಗುಸರಾಯ್‌ನಲ್ಲಿ (Begusarai) ನಡೆದಿದೆ.

    ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಮಹೇಶ್ವರ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೋಲ್ಕತ್ತಾದಲ್ಲಿ (Kolkata) ಕೂಲಿ ಕೆಲಸ ಮಾಡುತ್ತಿದ್ದು, ಸಮಸ್ತಿಪುರ ಜಿಲ್ಲೆಯ ನರ್ಹಾನ್ ಗ್ರಾಮದ ನಿವಾಸಿಯಾಗಿದ್ದರು. ಪತ್ನಿ ರಾಣಿ ಕುಮಾರಿಗೆ ಇನ್ಸ್ಟಾದಲ್ಲಿ ರೀಲ್ಸ್ ಮಾಡುವ ಗೀಳಿತ್ತು. ಆದರೆ ಪತಿಗೆ ಅದು ಇಷ್ಟವಿಲ್ಲದಿದ್ದರಿಂದ ಅದನ್ನು ವಿರೋಧಿಸಿದ್ದರು. ಇದರಿಂದ ಗಂಡನ ಮೇಲೆ ಕೋಪಗೊಂಡ ಹೆಂಡತಿ ತನ್ನ ಅಪ್ಪ-ಅಮ್ಮನ ಜೊತೆಗೂಡಿ ಆತನನ್ನು ಹತ್ಯೆ ಮಾಡಿದ್ದಾಳೆ. ಇದನ್ನೂ ಓದಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

    ಮಹೇಶ್ವರ್ ಕೆಲ ದಿನಗಳ ಹಿಂದೆ ಕೋಲ್ಕತ್ತಾದಿಂದ ತನ್ನ ಗ್ರಾಮಕ್ಕೆ ತೆರಳಿದ್ದರು. ಫಫೌತ್ ಗ್ರಾಮದವರಾದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ಅವರನ್ನು ವಿವಾಹವಾಗಿದ್ದರು. ಮಹೇಶ್ವರ್ ಕೆಲಸಕ್ಕೆ ತೆರಳುವ ಮೊದಲು ಫಫೌತ್ ಗ್ರಾಮದಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿದ್ದು, ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಪತ್ನಿ ತನ್ನ ಅಪ್ಪ-ಅಮ್ಮನ ಸಹಾಯದಿಂದ ಗಂಡನ ಕತ್ತು ಹಿಸುಕಿ ಸಾಯಿಸಿದ್ದಾಳೆ. ರಾತ್ರಿಯ ವೇಳೆ ಮೃತನ ಸಹೋದರ ಕೋಲ್ಕತ್ತಾದಿಂದ ಕರೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಕರೆ ಮಾಡಿದ ವೇಳೆ ಬೇರೊಬ್ಬರು ಫೋನ್ ಸ್ವೀಕರಿಸಿದ್ದರಿಂದ ಅನುಮಾನಗೊಂಡ ಸಹೋದರ ತನ್ನ ತಂದೆಗೆ ಕರೆ ಮಾಡಿ ಅಲ್ಲಿ ಹೋಗಿ ನೋಡುವಂತೆ ಕೇಳಿಕೊಂಡಿದ್ದಾನೆ. ಇದನ್ನೂ ಓದಿ:ಐವರ ಅಸ್ಥಿಪಂಜರ ಪತ್ತೆ ಕೇಸ್‌ – ಮರಣೋತ್ತರ ಪರೀಕ್ಷಾ ವರದಿಯಲ್ಲೂ ಪತ್ತೆಯಾಗದ ಸತ್ಯಾಂಶ

    ತಂದೆ ಹೋಗಿ ನೋಡಿದಾಗ ಮಗ ಸತ್ತು ಬಿದ್ದಿರುವುದು ಕಂಡುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಹೇಶ್ವರ್ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪೊಲೀಸರು ಮೃತರ ಪತ್ನಿಯನ್ನು ಬಂಧಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯಶ್ ಬರ್ತ್‍ಡೇಗೆ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶ – ಮೂವರ ದುರ್ಮರಣ


  • ಉರ್ಫಿ ಜಾವೇದ್ ಇನ್ಸ್ಟಾ ಸಸ್ಪೆಂಡ್: ಕಂಗಾಲಾಗಿದ್ದ ನಟಿ

    ಉರ್ಫಿ ಜಾವೇದ್ ಇನ್ಸ್ಟಾ ಸಸ್ಪೆಂಡ್: ಕಂಗಾಲಾಗಿದ್ದ ನಟಿ

    ಮಾದಕ ಉಡುಗೆ ಮೂಲಕ ಫೇಮಸ್ ಆಗಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಅವರ ಇನ್ಸ್ಟಾ (Instagram) ಸಸ್ಪೆಂಡ್ ಆಗಿದೆ. ಅದನ್ನು ಕಂಡು ಉರ್ಫಿ ಕಣ್ಣೀರಿಟ್ಟಿದ್ದಾರೆ. ಈ ಮೂಲಕವೇ ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದ ಉರ್ಫಿ, ಇನ್ಸ್ಟಾ ಪೇಜ್ ಕಾಣದೇ ಇರುವುದಕ್ಕೆ ಆತಂಕಗೊಂಡಿದ್ದಾರೆ. ಸಸ್ಪೆಂಡ್ ಮಾಡಿರೋದಕ್ಕೆ ಕಾರಣವನ್ನೂ ಅವರು ಕೇಳಿದ್ದಾರೆ. ಅರೆಬರೆ ಬಟ್ಟೆ ಹಾಕಿಕೊಂಡು ಬೀದಿಗೆ ಇಳಿಯುವ ಉರ್ಫಿ ಬಗ್ಗೆ ಅನೇಕರು ರೊಚ್ಚಿಗೆದ್ದಿದ್ದಾರೆ. ಹಾಗಾಗಿ ಅದು ಸಸ್ಪೆಂಡ್ ಆಗಿದ್ಯಾ? ಗೊತ್ತಿಲ್ಲ. ಮತ್ತೆ ಅವರ ಪೇಜ್ ಅನ್ನು ಹಿಂದಿರುಗಿಸಿದ್ದಾರೆ. ನಟಿ ನಿಟ್ಟುಸಿರಿಟ್ಟಿದ್ದಾರೆ.

    ನಟಿ ಉರ್ಫಿ ಜಾವೇದ್ (Urfi Javed) ಅವರು ತಾವು ಧರಿಸುವ ಚಿತ್ರವಿಚಿತ್ರ ಬಟ್ಟೆಯಿಂದಲೇ ಗುರುತಿಸಿಕೊಂಡಿದ್ದಾರೆ. ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ಕೆಟ್ಟ ಕಾಮೆಂಟ್ಸ್ಗೆ ಡೊಂಟ್ ಕೇರ್ ಎನುತ್ತಾ ಸದಾ ಮೈ ಕಾಣುವ ಬಟ್ಟೆಗಳನ್ನೇ ಸದಾ ಧರಿಸುವ ಉರ್ಫಿ, ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದುಯಿದೆ. ಇದೀಗ ಅವರು ಯಾಕೆ ಹೀಗೆ ವಿಚಿತ್ರ ಬಟ್ಟೆಗಳನ್ನೇ ಆಯ್ಕೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಅವರೇ ಈ ಹಿಂದೆ ಉತ್ತರಿಸಿದ್ದಾರೆ.

    ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುವ ನಟಿ ಉರ್ಫಿ ಸಿನಿಮಾ ಮಾಡೋದ್ದಕ್ಕಿಂತ, ಟ್ರೋಲ್ ಮತ್ತು ಬಟ್ಟೆಯಿಂದಲೇ ಸಖತ್ ಸೌಂಡ್ ಮಾಡಿದ್ದಾರೆ. ಕೆಲದಿನಗಳ ಹಿಂದೆ ಮುಂಬೈ ಮನೆ ಬಾಡಿಗೆ ಕೊಡ್ತಿಲ್ಲ ನನಗೆ ಎಂದು ಉರ್ಫಿ ಗೋಗರೆದಿದ್ದರು. ಬಳಿಕ ತನಗೆ ಸಿನಿಮಾ ಆಫರ್ಸ್ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಸದಾ ಭಿನ್ನವಾಗಿರುವ ಧರಿಸಿನೊಂದಿಗೆ ಅಭಿಮಾನಿಗಳ ಮುಂದೆ ಬರುವ ಉರ್ಫಿ ಜಾವೇದ್ ಇಷ್ಟೊಂದು ಬೋಲ್ಡ್ ಆಗಿರೋದೇಕೆ ಎಂದು ಸಂದರ್ಶನವೊಂದರಲ್ಲಿ ನಟಿ ಮುಕ್ತವಾಗಿ ಮಾತನಾಡಿದ್ದಾರೆ.

    ಬಿಗ್ ಬಾಸ್ ಒಟಿಟಿಯಿಂದ (Bigg Boss Ott) ಉರ್ಫಿ ಜಾವೇದ್ ಜನಪ್ರಿಯತೆ ಗಳಿಸಿದರು. ‘ಹೌಸ್ ಅರೆಸ್ಟ್‘ (House Arrest) ಗೇಮ್ ರಿಯಾಲಿಟಿ ಶೋನ ಮೊದಲ ಸೀಸನ್ ನಲ್ಲಿಯೂ ಅವರು ಭಾಗವಹಿಸಿದ್ದರು. ಹಿಂದೆ ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದ ಉರ್ಫಿ, ಬಿಗ್ ಬಾಸ್ ಒಟಿಟಿ ಸೀಸನ್ 1 ರಲ್ಲಿ ಟಾಸ್ಕ್ ಗೆಲ್ಲಲು ಕಸದ ಚೀಲಗಳಿಂದ ಮಾಡಿದ ಉಡುಪನ್ನು ಧರಿಸಿ ಖ್ಯಾತಿ ಗಳಿಸಿದರು. ತಮ್ಮ ಸೃಜನಶೀಲತೆಗೆ ಮೆಚ್ಚುಗೆ ಪಡೆದರು. ಅಂದಿನಿದ ಉರ್ಫಿ ಸಾಮಾನ್ಯ ಉಡುಗೆಯನ್ನು ಧರಿಸಲೇ ಇಲ್ಲ. ಹಾಗಾಗಿ ನಟಿ ನಿರಂತರವಾಗಿ ಟ್ರೋಲ್ ಆಗ್ತಿರೋದರ ಬಗ್ಗೆ ಮಾತನಾಡಿದ್ದರು.

     

    ಉರ್ಫಿ, ಕೆಲವು ಜನರು ನನ್ನನ್ನು ಗೌರವಿಸುವುದಿಲ್ಲ. ನನ್ನೊಂದಿಗೆ ಕೆಲಸ ಮಾಡಲು ಯಾರೂ ಬಯಸುವುದಿಲ್ಲ. ನಾನು ಎಲ್ಲರ ಗಮನ ಸೆಳೆಯುವ ಸಲುವಾಗಿಯೇ ರೀತಿಯ ಬಟ್ಟೆಗಳನ್ನು ಧರಿಸುವುದು ಎಂದು ಉರ್ಫಿ ಒಪ್ಪಿಕೊಂಡಿದ್ದಾರೆ. ಆದರೆ ಕುರಿತು ಕಾಮೆಂಟ್ ಮಾಡಿದರೆ ನನಗೆ ಇಷ್ಟ ಆಗುವುದಿಲ್ಲ ಎಂದು ನಟಿ ಮಾತನಾಡಿದ್ದರು.

  • ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯರ ಫೋಟೋ ಬಳಸಿಕೊಂಡು ಲಕ್ಷ ಲಕ್ಷ ದೋಚಿದ ಖದೀಮ

    ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯರ ಫೋಟೋ ಬಳಸಿಕೊಂಡು ಲಕ್ಷ ಲಕ್ಷ ದೋಚಿದ ಖದೀಮ

    – ಕ್ರಮ ಕೈಗೊಳ್ಳದೇ ಪೊಲೀಸರ ನಿರ್ಲಕ್ಷ್ಯ

    ಬೆಂಗಳೂರು: ಇಷ್ಟು ದಿನ ಉತ್ತರ ಭಾರತದ ಕೆಲ ಸೈಬರ್ ಖದೀಮರು ಫೇಸ್‌ಬುಕ್, ಇನ್ಸ್ಟಾಗ್ರಾಂ ಅನ್ನು ಹ್ಯಾಕ್ ಮಾಡಿ, ರಾಜ್ಯದ ಯುವತಿಯರ ಬಳಿ ಹಣ ಪೀಕಿಸುತ್ತಿದ್ದರು. ಇದೀಗ ಬೆಂಗಳೂರಿನ (Bengaluru) ಯುವಕನೇ ನೂರಾರು ಯುವತಿಯರ ಜೊತೆ ಚಾಟಿಂಗ್ ಮಾಡಿ, ನಕಲಿ ಖಾತೆ (Fake Account) ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ. ದೂರು ಕೊಟ್ಟರೆ ಡೀಪ್‌ಫೇಕ್ ಮಾಡಿ ಮಾನ, ಮಾರ್ಯದೆ ತೆಗೆಯುತ್ತೇನೆ ಎಂದು ಅವಾಜ್ ಹಾಕ್ತಿದ್ದ ಖದೀಮನ ಮೇಲೆ ಪೊಲೀಸರು ಕ್ರಮ ಕೈಗೊಳ್ಳದೇ ಬೇಜವಾಬ್ದಾರಿ ತೋರಿದ್ದಾರೆ.

    ಉತ್ತರಹಳ್ಳಿಯ (Uttarahalli) ನಿವಾಸಿಯಾಗಿರುವ ರಾಘವೇಂದ್ರ ನೋಡಲು ಡೀಸೆಂಟ್ ಹುಡುಗನ ಥರ ಕಾಣಿಸಿದರೂ ಮಹಾನ್ ಕಿಲಾಡಿ. ಅಲ್ಲದೇ ಸೈಬರ್ ಕಳ್ಳ ಕೂಡ. ಇನ್ಸ್ಟಾಗ್ರಾಂನಲ್ಲಿ (Instagram) ಯುವತಿಯರ ಫೋಟೋ, ರೀಲ್ಸ್ ವೀಡಿಯೋಗಳನ್ನು ಕದ್ದು, ಫೇಸ್‌ಬುಕ್‌ನಲ್ಲಿ (Facebook) ನಕಲಿ ಖಾತೆ ಸೃಷ್ಟಿಸಿ ನೂರಾರು ಜನರಿಂದ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದ ಖತರ್ನಾಕ್ ಸೈಬರ್ ಕಳ್ಳ ಇದೀಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಹಣಕ್ಕಾಗಿ ಪಾಕ್‍ಗೆ ಸೇನಾ ಮಾಹಿತಿ – ಇಬ್ಬರು ಶಂಕಿತರು ಅರೆಸ್ಟ್

    ಕಮಲಾನಗರದ ತ್ರಿವೇಣಿ ಎಂಬ ಯುವತಿ ಸೈಬರ್ ಕಳ್ಳನ ಟಾರ್ಚರ್‌ಗೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ರಾಘವೇಂದ್ರ ಒಂದು ವರ್ಷದಿಂದ, ತ್ರಿವೇಣಿಯ ಫೋಟೋ, ವೀಡಿಯೋಗಳನ್ನು ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದ. ತ್ರಿವೇಣಿಯ, ಸ್ನೇಹಿತರಿಗೆ ಸಂಬಂಧಿಕರಿಗೆ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಚಾಟ್ ಮಾಡಿ ಈ ಖದೀಮ ಹಣವನ್ನು ಪಡೆಯುತ್ತಿದ್ದ. ಈ ವಿಚಾರ ತ್ರಿವೇಣಿ ಗಮನಕ್ಕೆ ಬಂದಾಗ, ಅವರ ಸ್ನೇಹಿತರ ಮೂಲಕ ಬೆಂಗಳೂರಿನಲ್ಲೇ ಕುಳಿತು ಯುವತಿಯ ಫೋಟೋ ದುರುಪಯೋಗಪಡಿಸಿಕೊಂಡು ಹಣ ಮಾಡುತ್ತಿದ್ದ ಈತನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು, ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಹೀಗೆ ಎಂಟತ್ತು ಹುಡುಗಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ಈವರೆಗೆ 80 ಲಕ್ಷಕ್ಕೂ ಅಧಿಕ ಹಣವನ್ನು ದೋಚಿದ್ದಾನೆ. ಸಂತ್ರಸ್ತೆಯ ದೂರು ಪಡೆದು ಐಪಿಸಿ ಸೆಕ್ಷನ್‌ಗಳನ್ನು ಹಾಕದೇ ಕೇವಲ ಎನ್‌ಸಿಆರ್ ಮಾಡಿಕೊಂಡು, ಕಾಂಪ್ರಮೈಸ್ ಆಗಿ ಎಂದು ಸಂತ್ರಸ್ತ ಯುವತಿಗೆ ಪೊಲೀಸರು ಮನವೊಲಿಸುತ್ತಿದ್ದಾರೆ. ಇದನ್ನೂ ಓದಿ: ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

    ಯುವತಿಯರ ಫೋಟೋಗಳನ್ನ ಬಳಸಿಕೊಂಡು ರಾಘವೇಂದ್ರ ಬ್ಲಾಕ್ ಮೇಲ್ ಮಾಡುತ್ತಿದ್ದ. ವೇಶ್ಯಾವಾಟಿಕೆ ದಂಧೆಗೂ ಈ ಫೋಟೋಗಳನ್ನು ಶೇರ್ ಮಾಡುತ್ತಿದ್ದ. ಇಂತಹ ಖದೀಮನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟರೇ ಸಂತ್ರಸ್ತ ಯುವತಿಗೆ ಕಾಂಪ್ರಮೈಸ್ ಮಾಡಿಕೊಳ್ಳಿ ಎಂದು ಒತ್ತಡ ಹಾಕುತ್ತಿದ್ದಾರೆ. ಕೃತ್ಯವೆಸಗಿದ ರಾಘವೇಂದ್ರನ ಮೊಬೈಲ್ ಫೋನ್ ಪೊಲೀಸರು ವಶ ಪಡಿಸಿಕೊಂಡು ಪರಿಶೀಲನೆ ಮಾಡಿದಾಗ ನೂರಾರು ಯುವತಿಯರಿಗೆ ಚಾಟಿಂಗ್ ಮಾಡಿದ್ದು, ಹಣ ಹಾಕಿಸಿಕೊಂಡಿರುವುದು, ನಕಲಿ ಖಾತೆಗಳನ್ನು ಸೃಷ್ಟಿಸಿರೋದು ಪತ್ತೆಯಾಗಿದೆ. ಆದರೆ ಪೊಲೀಸರು ಮಾತ್ರ ಇವುಗಳನ್ನ ಡಿಲೀಟ್ ಮಾಡಿಸದೇ ಬೇಜವಾಬ್ದಾರಿ ಮಾಡಿದ್ದಾರೆ. ಹೆಣ್ಣುಮಕ್ಕಳ ಸುರಕ್ಷತೆ, ಭದ್ರತೆಗೆ ನಿಲ್ಲಬೇಕಾದ ಪೊಲೀಸರೇ ಕಳ್ಳರ ಪರವಾಗಿ ನಿಂತಿದ್ದು ನಾಚಿಗೇಡಿನ ಸಂಗತಿ. ಇದನ್ನೂ ಓದಿ: ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ

  • 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು

    15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು

    ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ (Murder) ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುಷ್ಕೃತ್ಯವನ್ನು ವಿರೋಧಿಸುವುದನ್ನು ಬಿಟ್ಟು ಹಂತಕನ ಫೋಟೋಗೆ ಕಿರೀಟ ಇಟ್ಟು ಇನ್ಸಾಗ್ರಾಮ್‌ನಲ್ಲಿ ಸ್ಟೋರಿ ಹಾಕಿದ್ದ ವ್ಯಕ್ತಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

    ಹಿಂದೂ ಮಂತ್ರ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂತಕ ಪ್ರವೀಣ್ ಅರುಣ್ ಚೌಗುಲೆಯ ಫೋಟೋ ಹಾಕಿ, ಆತನಿಗೆ ಕಿರೀಟ ಇಟ್ಟು, 15 ನಿಮಿಷದಲ್ಲಿ 4 ಕೊಲೆ, ಇದು ವರ್ಲ್ಡ್ ರೆಕಾರ್ಡ್ ಎಂದು ಬರೆದು ವ್ಯಕ್ತಿಯೊಬ್ಬ ವಿಕೃತಿ ಮೆರೆದಿದ್ದಾನೆ. ಇದನ್ನೂ ಓದಿ: ನಾಲ್ವರ ಕೊಂದ ಆರೋಪಿ ಮೇಲೆ ಜನಾಕ್ರೋಶ; ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ, ಲಾಠಿ ಪ್ರಹಾರ – ಉಡುಪಿ ಉದ್ವಿಗ್ನ

    ಈ ವಿಚಾರ ಉಡುಪಿ ಪೊಲೀಸರ (Udupi Police) ಗಮನಕ್ಕೆ ಬಂದಿದ್ದು, ತಕ್ಷಣ ಅವರು ಕ್ರಮಕ್ಕೆ ಮುಂದಾಗಿದ್ದಾರೆ. ಪೋಸ್ಟ್ ಹಾಕಿದಾತನ ವಿರುದ್ಧ ಸೆನ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಹಿಂದೂ ಮಂತ್ರ ಖಾತೆಯಲ್ಲಿ ಹಾಕಲಾಗಿದ್ದ ಸ್ಟೋರಿ ಡಿಲೀಟ್ ಆಗಿದೆ. ಇದನ್ನೂ ಓದಿ: ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

  • ಜಸ್ಟ್ 1 ಪೋಸ್ಟ್‌ಗೆ 11.45 ಕೋಟಿ ರೂ. – ಕೊಹ್ಲಿ ಖಡಕ್‌ ರಿಯಾಕ್ಷನ್‌

    ಜಸ್ಟ್ 1 ಪೋಸ್ಟ್‌ಗೆ 11.45 ಕೋಟಿ ರೂ. – ಕೊಹ್ಲಿ ಖಡಕ್‌ ರಿಯಾಕ್ಷನ್‌

    ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಸೋಶಿಯಲ್ ಮೀಡಿಯಾದಲ್ಲಿ ಅತಿಹೆಚ್ಚು ಅಭಿಮಾನಿಗಳನ್ನ ಹೊಂದಿದ ನಂ.1 ಕ್ರಿಕೆಟಿಗನಾಗಿದ್ದಾರೆ. ಈ ನಡುವೆ ಕೊಹ್ಲಿ ಸೋಶಿಯಲ್ ಮೀಡಿಯಾದಿಂದ ಗಳಿಸುವ ಆದಾಯದ ಬಗ್ಗೆ ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ಫ್ಲಾಟ್‌ಪಾರ್ಮ್ ಸಂಸ್ಥೆ ಹಾಪರ್ ಎಚ್‌ಕ್ಯೂ ಬಿಡುಗಡೆ ಮಾಡಿದ ವರದಿಯೊಂದು ಚರ್ಚೆಯನ್ನ ಹುಟ್ಟುಹಾಕಿದೆ.

    ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಹಾಗೂ ಲಿಯೊನೆಲ್ ಮೆಸ್ಸಿ (Lionel Messi) ಬಳಿಕ ವಿಶ್ವದಲ್ಲಿಯೇ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ 3ನೇ ಕ್ರೀಡಾಪಟು ಹಾಗೂ ನಂ.1 ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಎಂದು ಸಂಸ್ಥೆ ತಿಳಿಸಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿತ್ತು. ಇದಕ್ಕೆ ಸ್ವತಃ ವಿರಾಟ್ ಕೊಹ್ಲಿ ಅವರೇ ಸ್ಪಷ್ಟನೆ ಕೊಟ್ಟಿದ್ದು, ತಾನು ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ (Instagram Post Earning) 11.45 ಕೋಟಿ ರೂ. ಪಡೆಯುತ್ತೇನೆಂಬುದು ಸುಳ್ಳು ಎಂದು ಹೇಳಿದ್ದಾರೆ.

    ನಾನು ನನ್ನ ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ, ನನ್ನ ಸೋಶಿಯಲ್ ಮೀಡಿಯಾ ಗಳಿಕೆಯ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

    ಕೊಹ್ಲಿ ಬಗ್ಗೆ ಬಂದ ಸುದ್ದಿ ಏನಿತ್ತು?
    ಕೊಹ್ಲಿ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ 11.45 ಕೋಟಿ ರೂ. ಪಡೆಯುತ್ತಾರೆ ಎಂದು ಹಾಪರ್ ಎಚ್‌ಕ್ಯೂ ವರದಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದು, ಮತ್ತೊಬ್ಬ ದಿಗ್ಗಜ ಲಿಯೊನೆಲ್ ಮೆಸ್ಸಿ 2ನೇ ಸ್ಥಾನ ಪಡೆದುಕೊಂಡಿರುವುದಾಗಿ ಹೇಳಿತ್ತು.

    ರೊನಾಲ್ಡೊ ಪೋಸ್ಟ್ ಮಾಡುವ ಪ್ರಾಯೋಜಿತ ಪೋಸ್ಟ್‌ಗೆ ಸುಮಾರು 3.23 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತವನ್ನು ಪಡೆಯುತ್ತಾರೆ. ಅಂದರೆ ಪ್ರತಿ ಪೋಸ್ಟ್‌ಗೆ ಸುಮಾರು 26.75 ಕೋಟಿ ರೂಗಳನ್ನು ಪಡೆಯುತ್ತಾರೆ. ಅಂತೆಯೇ ಮೆಸ್ಸಿ ಪ್ರತಿ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಸುಮಾರು 2.56 ಮಿಲಿಯನ್ (21.49 ಕೋಟಿ ರೂ.) ನಗದನ್ನು ಪಡೆಯುತ್ತಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೊಸ ಇನ್ನಿಂಗ್ಸ್ ಆರಂಭ – ಧಾರವಾಡದಲ್ಲಿ 900 ಕೋಟಿ ಹೂಡಿಕೆ

    ವಿರಾಟ್ ಕೊಹ್ಲಿ ಜಾಗತಿಕವಾಗಿ ಟಾಪ್-20 ಪಟ್ಟಿಯಲ್ಲಿ ಸ್ಥಾನವನ್ನು ಪಡೆದ ಏಕೈಕ ಭಾರತೀಯನಾಗಿದ್ದು, ಇನ್‌ಸ್ಟಾಗ್ರಾಮ್‌ ಪ್ಲಾಟ್‌ಫಾರ್ಮ್‌ನಲ್ಲಿ 25.6 ಕೋಟಿ ಅನುಯಾಯಿಗಳನ್ನು ಹೊಂದಿದ್ದಾರೆ. ಇವರನ್ನು ಹೊರತುಪಡಿಸಿ ಬಾಲಿವುಡ್ ಮತ್ತು ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಈ ಪಟ್ಟಿಯಲ್ಲಿ 29ನೇ ಸ್ಥಾನವನ್ನು ಪಡೆದುಕೊಂಡಿದ್ದು, ಪ್ರತಿ ಪೋಸ್ಟ್‌ಗೆ 532,000 ಅಮೆರಿಕನ್ ಡಾಲರ್ (4.40 ಕೋಟಿ ರೂ.) ಹಣವನ್ನು ಪಡೆಯುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]