Tag: Insult

  • ‘ಕಾಳಿ’ಗೆ ಅವಮಾನ ಮಾಡಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈಗೆ ದೆಹಲಿ ಕೋರ್ಟ್ ಸಮನ್ಸ್

    ‘ಕಾಳಿ’ಗೆ ಅವಮಾನ ಮಾಡಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈಗೆ ದೆಹಲಿ ಕೋರ್ಟ್ ಸಮನ್ಸ್

    ಜುಲೈ 4 ರಂದು ತಮ್ಮ ಡಾಕ್ಯುಮೆಂಟರಿ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು ತಮಿಳಿನ ನಿರ್ದೇಶಕಿ ಲೀನಾ ಮಣಿಮೇಕಲೈ. ತಮ್ಮ ನಿರ್ದೇಶನದಲ್ಲಿ ಮೂಡಿ ಬಂದ ಕಾಳಿ ಸಾಕ್ಷ್ಯಚಿತ್ರದ ಪೋಸ್ಟರ್ ನಲ್ಲಿ ಅವರು ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತರ ಧ್ವಜ ಹಿಡಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದ್ದರು. ಈ ಕಾರಣಕ್ಕಾ ಅವರ ಮೇಲೆ ಸಾಕಷ್ಟು ದೂರುಗಳನ್ನು ಸಲ್ಲಿಸಲಾಗಿತ್ತು.

    ತಮ್ಮ ಡಾಕ್ಯುಮೆಂಟರಿಯ ಪೋಸ್ಟರ್ ನಲ್ಲಿ ಲೀನಾ ಕಾಳಿಯನ್ನು ಅವಮಾನಿಸಲಾಗಿದೆ ಎನ್ನುವ ಕಾರಣಕ್ಕಾಗಿ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳನ್ನು ಆಧರಿಸಿ ದೆಹಲಿಯ ತೀಸ್ ಹಜಾರಿ ಕೋರ್ಟ್ ನಿಂದ ಸಮನ್ಸ್ ಜಾರಿ ಮಾಡಲಾಗಿದೆ. ನವೆಂಬರ್ 1 ರಂದು ಲೀನಾ ಮಣಿಮೇಕಲೈ  ವಿಚಾರಣೆ ಎದುರಿಸಬೇಕಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಸಾಕ್ಷ್ಯ ಚಿತ್ರದ ಪೋಸ್ಟರ್ ನಲ್ಲಿ ಕಾಳಿ ದೇವತೆಯನ್ನು ಆಕ್ಷೇಪಾರ್ಹ ರೀತಿಯಲ್ಲಿ ಚಿತ್ರಿಸಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ದೇಶಾದ್ಯಂತ ಹಲವು ಕಡೆ ಲೀನಾ ಮಣಿಮೇಕಲೈ ಅವರ ವಿರುದ್ಧ ದೂರುಗಳನ್ನು ಸಲ್ಲಿಸಲಾಗಿತ್ತು. ಪ್ರಕರಣ ಗಂಭೀರ ಸ್ವರೂಪವನ್ನೂ ಪಡೆದುಕೊಂಡಿತ್ತು. ಹೀಗಾಗಿ ಲೀನಾ ವಿರುದ್ಧ ಕ್ರಮಕ್ಕೆ ಸಾಕಷ್ಟು ಜನರು ಆಗ್ರಹ ಮಾಡಿದ್ದರು. ಅವರು ಈ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಕ್ರಮ ತಗೆದುಕೊಳ್ಳಲು ಪೊಲೀಸರಿಂದ ಸಾಧ್ಯವಾಗಿರಲಿಲ್ಲ. ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿ ಕೋರ್ಟಿಗೆ ಹಾಜರಾಗುವಂತೆ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಬಸವ ಜಯಂತಿ ಮೆರವಣಿಗೆಯಲ್ಲಿ ಕುಡುಕರ ಹಾಡು – ಸಾರ್ವಜನಿಕರಿಂದ ಟೀಕೆ

    ಬಸವ ಜಯಂತಿ ಮೆರವಣಿಗೆಯಲ್ಲಿ ಕುಡುಕರ ಹಾಡು – ಸಾರ್ವಜನಿಕರಿಂದ ಟೀಕೆ

    ದಾವಣಗೆರೆ: ಬಸವ ಜಯಂತಿಯಂದು ಕುಡುಕರ ಸಾಂಗ್ ಹಾಕಿ ಮೆರವಣಿಗೆಯಲ್ಲಿ ಬಸವಣ್ಣನವರಿಗೆ ಅವಮಾನ ಮಾಡಲಾಗಿದೆ.

    basavanna

    ಬಸವ ಜಯಂತಿ ಎಂದರೆ ಶ್ರದ್ಧಾ ಭಕ್ತಿಗಳಿಂದ ಬಸವಣ್ಣನವರ ವಚನಗಳನ್ನು ಅವರ ಅದರ್ಶಗಳನ್ನು ಜನರಿಗೆ ತಲುಪಿಸುವಂತಹ ಕೆಲಸ ಮಾಡಬೇಕು. ಆದರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಯ ಮಾಕುಂಟೆ ಗ್ರಾಮದಲ್ಲಿ ಬಸವಣ್ಣನವರಿಗೆ ಅವಮಾನ ಮಾಡುವ ರೀತಿ ಮೆರವಣೆಗೆ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

    ಪ್ರತಿ ವರ್ಷ ಬಸವ ಜಯಂತಿಯಂದು ಗ್ರಾಮದಲ್ಲಿ ಶ್ರೀ ಬಸವಣ್ಣನವರ ಭಾವಚಿತ್ರ ಹಿಡಿದು ಮೆರವಣೆಗೆ ಮಾಡುತ್ತಿರುವುದು ವಾಡಿಕೆ. ಆದರೆ ಮಾಕುಂಟೆ ಗ್ರಾಮದ ಮೆರವಣಿಗೆಯಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎನ್ನುವ ಸಾಂಗ್‍ಗೆ ಬಾಟಲಿ ಹಿಡಿದು ಡ್ಯಾನ್ಸ್ ಮಾಡಿದ್ದಾರೆ.

    ಗ್ರಾಮದ ಮುಖಂಡರು ಸ್ಥಳದಲ್ಲಿಯೇ ಇದ್ದರೂ ಅದನ್ನು ವಿರೋಧಿಸುವ ಬದಲು ಅವರು ಕೂಡ ಸಂಭ್ರಮಿಸಿದ್ದಾರೆ. ವೀಡಿಯೋಗೆ ಸಾರ್ವಜನಕರಿಂದ ಟೀಕೆ ವ್ಯಕ್ತವಾಗಿದೆ.

  • ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಪುನೀತ್ ರಾಜ್ ಕುಮಾರ್ ಫೋಟೋ ಮತ್ತು ನಾಡಧ್ವಜವನ್ನು ತೆರುವುಗೊಳಿಸಿರುವ ಟಿಟಿಡಿ ನಡೆಗೆ ಕರ್ನಾಟಕ ರಾಜ್ಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮತ್ತು ದೊಡ್ಮನೆ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸ್ಪಷ್ಟನೆಗಾಗಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ಕಾರಿನ ಮೇಲಿದ್ದ ಅಪ್ಪು ಫೋಟೋ ಮತ್ತು ನಾಡಧ್ವಜವನ್ನು ತೆಗೆಸುತ್ತಿರುವ ವಿಡಿಯೋ ಹಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲೇ ಅಕ್ಷರ ರೂಪದ ಪ್ರತಿಭಟನೆಯ ದಾಖಲಿಸಲಾಗುತ್ತಿತ್ತು. ಇದೀಗ ದೇವಸ್ಥಾನಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಮಾಡಲಾಗುತ್ತಿದೆ. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ರೀತಿಯಲ್ಲೇ ಆರಾಧಿಸುತ್ತಿದ್ದಾರೆ. ಅವರು ಮಾಡಿದ ಪುಣ್ಯದ ಕೆಲಸಗಳು ದೇವರಿಗೆ ಮಾಡಿದ ಸೇವೆಯಷ್ಟೇ ಪವಿತ್ರವಾಗಿವೆ. ಹೀಗಿದ್ದಾಗಲೂ ಅವರ ಫೋಟೋವನ್ನು ತಗೆದರೆ ಮಾತ್ರ ದೇವಸ್ಥಾನಕ್ಕೆ ಹೋಗಬಹುದು ಎನ್ನುವ ನಡೆ ಸರಿಯಾದದ್ದಲ್ಲ. ಇದನ್ನು ಪ್ರಶ್ನಿಸಿ, ಸ್ಪಷ್ಟನೆಗಾಗಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಾರೆ.

  • ಸಾಧಕಿ, ಸಮಾಜ ಸುಧಾರಕಿ ಸುಧಾಮೂರ್ತಿಗೆ ಅವಮಾನ

    ಸಾಧಕಿ, ಸಮಾಜ ಸುಧಾರಕಿ ಸುಧಾಮೂರ್ತಿಗೆ ಅವಮಾನ

    ಗದಗ: ಸಾಧಕಿ ಹಾಗೂ ಸಮಾಜ ಸುಧಾರಕಿ ಸುಧಾಮೂರ್ತಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಲಾಗಿದೆ.

    ಮಾಜಿ ಪುರಸಭೆ ಸದಸ್ಯ ಮಲ್ಲಿಕಾರ್ಜುನ ಹಡಪದ ತನ್ನ ಫೇಸ್‍ಬುಕ್ ಮೂಲಕ ಸುಧಾಮೂರ್ತಿ ಅವರನ್ನು ಅವಮಾನಿಸಿದ್ದಾರೆ. ಮಲ್ಲಿಕಾರ್ಜುನ ಹಡಪದ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನಿವಾಸಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ `ಸೋಗಲಾಡಿ ಸುಧಾರಕಿ’ ಎಂದು ಸುಧಾಮೂರ್ತಿ ಅವರನ್ನು ಅವಮಾನ ಮಾಡಿದ್ದಾರೆ.

    ಸಮಾಜ ಸೇವಕಿ ಸುಧಾಮೂರ್ತಿ ಬಗ್ಗೆ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಫೇಸ್‍ಬುಕ್‍ನಲ್ಲಿ ಮಲ್ಲಿಕಾರ್ಜುನ ಹಡಪದಗೆ ಜನರು ಹಿಗ್ಗಾಮುಗ್ಗಾ ಝಾಡಿಸಿದ್ದಾರೆ.

    ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

     

  • ರಾಹುಲ್ ಗಾಂಧಿ ಸಮಾವೇಶದಲ್ಲಿ ಮಾಜಿ ಸಚಿವರಿಗೆ ಅವಮಾನ!

    ರಾಹುಲ್ ಗಾಂಧಿ ಸಮಾವೇಶದಲ್ಲಿ ಮಾಜಿ ಸಚಿವರಿಗೆ ಅವಮಾನ!

    ಬಳ್ಳಾರಿ: ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಜೆಡಿಎಸ್ ಪರಿವರ್ತನಾ ಸಮಾವೇಶದಲ್ಲಿ ಮಾಜಿ ಸಚಿವ ಆಂಜನೇಯ ಅವರಿಗೆ ಅವಮಾನ ಮಾಡಲಾಯಿತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಷಣ ಮಾಡುವ ವೇಳೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವೇದಿಕೆಗೆ ಆಗಮಿಸಿದರು. ರಾಹುಲ್ ಗಾಂಧಿಯವರನ್ನು ತಬ್ಬಿಕೊಳ್ಳುವ ಭರದಲ್ಲಿ ಸಿಎಂ ಹಾಗೂ ಮಾಜಿ ಸಿಎಂ ಮಾಜಿ ಸಚಿವ ಆಂಜನೇಯರನ್ನು ಹಿಂದಕ್ಕೆ ತಳ್ಳಿದ ಘಟನೆ ನಡೆದಿದೆ.

    ವೇದಿಕೆಗೆ ಮಾಜಿ ಸಿಎಂ ಆಗಮಿಸುತ್ತಿದ್ದಂತೆ ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯರನ್ನು ತಬ್ಬಿಕೊಂಡರು. ಈ ವೇಳೆ ಕುಮಾರಸ್ವಾಮಿಯವರು ಸಹ ರಾಹುಲ್ ರ ಬಳಿ ಬಂದರು. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಮಾಜಿ ಸಚಿವ ಆಂಜನೇಯ ಅವರನ್ನು ತಳ್ಳಿ ವೇಣುಗೋಪಾಲ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕುಮಾರಸ್ವಾಮಿ ಹಾಗೂ ರಾಹುಲ್ ಗಾಂಧಿ ಎಲ್ಲರೂ ಒಂದಾಗಿ ಕೈ ಎತ್ತಿ ಬಲ ಪ್ರದರ್ಶನ ಮಾಡಿದರು. ಆಂಜನೇಯ ಅವರನ್ನು ತಳ್ಳುತ್ತಿದ್ದಂತೆ ಅವರು ಹಿಂದೆ ಸರಿದು ಹೋಗುವಂತಾಯಿತು.

  • ಕಸದ ರಾಶಿಯಲ್ಲಿ ಕೆಂಪೇಗೌಡ, ಕುವೆಂಪು, ವಿವೇಕಾನಂದರ ಭಾವಚಿತ್ರಗಳು

    ಕಸದ ರಾಶಿಯಲ್ಲಿ ಕೆಂಪೇಗೌಡ, ಕುವೆಂಪು, ವಿವೇಕಾನಂದರ ಭಾವಚಿತ್ರಗಳು

    -ಪುರಭವನ ಸಿಬ್ಬಂದಿಯಿಂದ ಎಡವಟ್ಟು

    ಬೆಂಗಳೂರು: ನಗರದ ಸರ್ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಮಹನೀಯ ವ್ಯಕ್ತಿಗಳಿಗೆ ಅಪಮಾನವಾಗಿದೆ. ಕಸದ ರಾಶಿಯಲ್ಲಿ ನಾಡಪ್ರಭು ಕೆಂಪೇಗೌಡ, ರಾಷ್ಟ್ರಕವಿ ಕುವೆಂಪು ಹಾಗೂ ಸ್ವಾಮಿ ವಿವೇಕಾನಂದರ ಭಾವಚಿತ್ರಗಳು ಕಂಡು ಬಂದಿದೆ.

    ಇತ್ತೀಚೆಗೆ ಪುರಭವನದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಕುವೆಂಪು, ವಿವೇಕಾನಂದ ಹಾಗೂ ಕೆಂಪೇಗೌಡರ ಭಾವಚಿತ್ರ ಫಲಕಗಳನ್ನು ತರಲಾಗಿತ್ತು. ಈ ಕಾರ್ಯಕ್ರಮ ಮುಗಿದ ಬಳಿಕ ಸಿಬ್ಬಂದಿ ಪುರಭವನ ಸ್ವಚ್ಛಗೊಳಿಸಿದ್ದರು. ಈ ವೇಳೆ ಸಿಬ್ಬಂದಿ ಮಹನೀಯರ ಭಾವಚಿತ್ರಗಳನ್ನು ಕಸದ ಜೊತೆ ಹಾಕಿದ್ದಾರೆ.

    ಕಾರ್ಯಕ್ರಮದ ಬಳಿಕ ಈ ಫಲಕಗಳನ್ನು ತೆಗೆದುಕೊಂಡು ಹೋಗದೇ ಆಯೋಜಕರು ಪುರಭವನದಲ್ಲೇ ಬಿಟ್ಟು ಹೋಗಿದ್ದರು. ಆಯೋಜಕರ ಎಡವಟ್ಟು ಹಾಗೂ ಪುರಭವನ ಸಿಬ್ಬಂದಿಯ ನಿರ್ಲಕ್ಷ್ಯದಿಂದ ನಾಡು ನುಡಿಗೆ ಶ್ರವಿಸಿದವರಿಗೆ ಅಗೌರವವಾಗಿದೆ.

    ಇತ್ತೀಚೆಗಷ್ಟೇ ಸರ್ಕಾರದಿಂದ ಕೆಂಪೇಗೌಡ ಜಯಂತಿಯ ಅದ್ಧೂರಿ ಆಚರಣೆ ನಡೆದಿತ್ತು. ಬಿಬಿಎಂಪಿಯ ಕೂಗಳತೆ ದೂರದಲ್ಲಿಯೇ ನಾಡಪ್ರಭುಗೆ ಅವಮಾನ ನಡೆದಿದೆ. ಡಿಸೆಂಬರ್ 29ರಂದು ಕುವೆಂಪು ಜನ್ಮದಿನದ ಆಚರಣೆ ನಡೆಸಲಾಯಿತು. ಇದೇ ತಿಂಗಳ 12ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿಗೆ ಘೋರ ಅವಮಾನ

    ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿಗೆ ಘೋರ ಅವಮಾನ

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಘೋರ ಅವಮಾನವಾಗಿದೆ.

    ವೈಕುಂಠ ಏಕಾದಶಿ ದಿನ ತಿಮ್ಮಪ್ಪನ ದರ್ಶನಕ್ಕೆ ತೆರಳಿದಾಗ ದೇವೇಗೌಡ್ರು ಹಾಗೂ ಕುಮಾರಸ್ವಾಮಿ ಅವರಿಗೆ ಟಿಟಿಡಿಯಿಂದ ಅವಮಾನವಾಗಿದೆ. ಪ್ರೊಟೋಕಾಲ್ ಪಾಲಿಸದೇ ಸಾಧಾರಣ ನೌಕರರಿಂದ ಆಹ್ವಾನಿಸಿ ಅವಮಾನ ಮಾಡಿದ್ದಾರೆ.

    ಟಿಟಿಡಿ ಜೆಇಓ ಶ್ರೀನಿವಾಸರಾಜು ಹೆಚ್‍ಡಿಡಿ ಮತ್ತು ಎಚ್‍ಡಿಕೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ವೈಕುಂಠಂ ಕ್ಯೂ ಕಾಂಪ್ಲೆಕ್ಸ್ ಬಳಿ ಟಿಟಿಡಿ ಸಿಬ್ಬಂದಿ ಇಬ್ಬರನ್ನು ಬಿಟ್ಟು ಹೋಗಿದ್ದಾರೆ. ಯಾವ ದಾರಿಯಲ್ಲಿ ತೆರಳುವುದು ಎಂದು ಗೊತ್ತಾಗದೇ ಹೆಚ್‍ಡಿಡಿ ಮತ್ತು ಹೆಚ್‍ಡಿಕೆ 20 ನಿಮಿಷ ಪರದಾಡಿದ್ದಾರೆ.

    ಈ ವೇಳೆ ಮುಖ್ಯಮಂತ್ರಿ ಎಲ್ಲಿದ್ದಾರೆ ಎಂದು ಗೊತ್ತಾಗದೇ ಭದ್ರತಾ ಸಿಬ್ಬಂದಿ ಕೂಡ ಆತಂಕಕ್ಕೆ ಒಳಾಗಿದ್ದರು. ಉದ್ಯಮಿಗಳನ್ನು ಮುಂದೆ ನಿಂತು ಆಹ್ವಾನಿಸುವುದಕ್ಕೆ ಆಗುತ್ತೆ. ಆದರೆ ಮಾಜಿ ಪ್ರಧಾನಿ, ಮುಖ್ಯಮಂತ್ರಿಯನ್ನು ಆಹ್ವಾನಿಸೋಕೆ ಆಗಲ್ವಾ..? ಎಂದು ಟಿಟಿಡಿ ಮಾಡಿದ ಅವಮಾನದ ಬಗ್ಗೆ ಮಾಜಿ ಸದಸ್ಯ ರಮಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭೆಯಲ್ಲಿ ದಿ.ಅಂಬರೀಶ್‍ಗೆ ಮತ್ತೆ ಅವಮಾನ!

    ಲೋಕಸಭೆಯಲ್ಲಿ ದಿ.ಅಂಬರೀಶ್‍ಗೆ ಮತ್ತೆ ಅವಮಾನ!

    ನವದೆಹಲಿ: ಲೋಕಸಭೆಯಲ್ಲಿ ಮಾಜಿ ಕೇಂದ್ರ ಸಚಿವ, ಸ್ಯಾಂಡಲ್‍ವುಡ್ ನಟ ದಿ.ಅಂಬರೀಶ್ ಅವರಿಗೆ ಮತ್ತೆ ಅವಮಾನವಾಗಿದೆ.

    ಕಲಾಪ ಆರಂಭದ ಮೊದಲ ದಿನ ನಿಧನ ಹೊಂದಿದ್ದ ಗಣ್ಯರಿಗೆ ಸಂತಾಪ ಸೂಚಿಸುವ ಸಂಪ್ರದಾಯವಿದೆ. ಮಂಗಳವಾರದಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ ಕಲಾಪ ಆರಂಭಗೊಂಡಾಗ ಮಾಜಿ ಸಚಿವ ಅನಂತ್ ಕುಮಾರ್ ಅವರಿಗೆ ಸಂತಾಪ ಸೂಚಿಸಲಾಗಿತ್ತು.

    ಸಂತಾಪದ ಬಳಿಕ ಕಲಾಪ ಆರಂಭಗೊಂಡಾಗ ಮಾಜಿ ಪ್ರಧಾನಿ ದೇವೇಗೌಡ ಅವರು ಪಟ್ಟಿಯಲ್ಲಿ ಜಾಫರ್ ಶರೀಫ್ ಮತ್ತು ಅಂಬರೀಶ್ ಹೆಸರು ಕೈ ಬಿಟ್ಟ ವಿಚಾರವನ್ನು ಪ್ರಸ್ತಾಪ ಮಾಡಿದರು. ಈ ವಿಚಾರ ಗಮನಕ್ಕೆ ಬಂದ ಕೂಡಲೇ ಸ್ಪೀಕರ್ ಸುಮಿತ್ರಾ ಮಹಾಜನ್ ಬುಧವಾರ ಸಂತಾಪ ಸೂಚಿಸುತ್ತೇನೆ ಎಂದು ತಿಳಿಸಿದ್ದರು. ಆದರೆ ಇಂದು ಮಾಜಿ ಕೇಂದ್ರ ರೈಲ್ವೇ ಸಚಿವ ಜಾಫರ್ ಶರೀಫ್ ಅವರಿಗೆ ಸಂತಾಪ ಸೂಚಿಸಿ ಅಂಬರೀಶ್ ಹೆಸರು ಕೈ ಬಿಡಲಾಯಿತು.

    ಈ ಸಂದರ್ಭದಲ್ಲಿ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಂಬರೀಶ್ ಅವರಿಗೆ ಸಂತಾಪ ಸೂಚಿಸುವಂತೆ ಮನವಿ ಮಾಡಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ಗುರುವಾರ ಸಂತಾಪ ಸೂಚಿಸಲಾಗುವುದು ಎಂದು ಹೇಳಿ ಕಲಾಪ ಆರಂಭಕ್ಕೆ ಅನುಮತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಲ್ಟಾ ಹಾರಾಡಿದ ಸಚಿವರ ವಾಹನದ ಮುಂಭಾಗದಲ್ಲಿ ಹಾಕಿದ್ದ ರಾಷ್ಟ್ರಧ್ವಜ!

    ಉಲ್ಟಾ ಹಾರಾಡಿದ ಸಚಿವರ ವಾಹನದ ಮುಂಭಾಗದಲ್ಲಿ ಹಾಕಿದ್ದ ರಾಷ್ಟ್ರಧ್ವಜ!

    ಹಾವೇರಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ ಅವರ ಸರ್ಕಾರಿ ವಾಹನದ ಧ್ವಜ ಉಲ್ಟಾ ಹಾರಿಡಿದ ಘಟನೆ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ನಡೆದಿದೆ.

    ಹಾವೇರಿ ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸಚಿವ ಎನ್.ಮಹೇಶ ಅವರ ವಾಹನ ನಿಂತಿತ್ತು. ಬೆಳಗ್ಗೆ ವಾಹನದ ಮೇಲೆ ಧ್ವಜ ಹಾಕಿದ್ದಾರೆ. ಈ ವೇಳೆ ಧ್ವಜ ಹಾಕುವಾಗ ಹಸಿರು ಬಣ್ಣ ಮೇಲೆ ಬರುವಂತೆ ಉಲ್ಟಾ ಹಾಕಿದ್ದಾರೆ. ಆದರೆ ಶಿಕ್ಷಣ ಇಲಾಖೆ ಸಿಬ್ಬಂದಿ ಸೇರಿದಂತೆ ಕಾರ್ಯಕರ್ತರು ಮತ್ತು ಪೊಲೀಸರು ವಾಹನ ಮುಂದೆ ಓಡಾಡಿದರು ಉಲ್ಟಾ ಹಾರಿದ ಧ್ವಜವನ್ನ ಗಮನಿಸಲಿಲ್ಲ. ಇದನ್ನೂ ಓದಿ: ವಿಜಯಪುರದ ಉಸ್ತುವಾರಿ ಸಚಿವರ ಎದುರಲ್ಲೇ ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ!

    ಕೇಸರಿ, ಬಿಳಿ, ಹಸಿರಿನ ಬದಲಾಗಿ ಹಸಿರು, ಬಿಳಿ ಕೇಸರಿಯಾಗಿ ಧ್ವಜ ಹಾರಾಡುತ್ತಿತ್ತು. ಇದು ಮಾಧ್ಯಮದವರ ಕಣ್ಣೀಗೆ ಬಿದ್ದಿದ್ದು, ಚಿತ್ರೀಕರಣ ಮಾಡಲು ಮುಂದಾಗಿದ್ರು. ಈ ವೇಳೆ ಇದು ಸಚಿವರ ಕಣ್ಣಿಗೆ ಬಿದ್ದಿದೆ. ಕೂಡಲೇ ಸಚಿವರ ಚಾಲಕ ಜಬಿ ಕಾರಿನಿಂದ ಇಳಿದು ರಾಷ್ಟ್ರಧ್ವಜವನ್ನ ಸರಿಪಡಿಸಿದ್ದಾರೆ.

    ಈ ಹಿಂದೆ ತೋಟಗಾರಿಕಾ ಬೆಳೆಗಳ ಅಧ್ಯಯನಕ್ಕಾಗಿ ಮನಗೂಳಿ ಅವರು ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ವಿದೇಶಿ ಅಧಿಕಾರಿಗಳ ಜೊತೆಗೆ ಚರ್ಚೆ ಸಂದರ್ಭದಲ್ಲಿ ಟೇಬಲ್ ಮೇಲೆ ತ್ರಿವರ್ಣ ಧ್ವಜವನ್ನು ತಲೆ ಕೆಳಗಾಗಿ ಇಡಲಾಗಿತ್ತು. ಚರ್ಚೆ ನಡೆಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಜಯಪುರದ ಉಸ್ತುವಾರಿ ಸಚಿವರ ಎದುರಲ್ಲೇ ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ!

    ವಿಜಯಪುರದ ಉಸ್ತುವಾರಿ ಸಚಿವರ ಎದುರಲ್ಲೇ ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ!

    ವಿಜಯಪುರ: ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರೂ ತೋಟಗಾರಿಕ ಸಚಿವ ಎಂ.ಸಿ ಮನಗೂಳಿ ಸುಮ್ಮನೆ ಕುಳಿತ್ತಿದ್ದಕ್ಕೆ ಟೀಕೆ ವ್ಯಕ್ತವಾಗಿದೆ.

    ತೋಟಗಾರಿಕಾ ಬೆಳೆಗಳ ಅಧ್ಯಯನಕ್ಕಾಗಿ ಮನಗೂಳಿ ಅವರು ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ವಿದೇಶಿ ಅಧಿಕಾರಿಗಳ ಜೊತೆಗೆ ಚರ್ಚೆ ಸಂದರ್ಭದಲ್ಲಿ ಟೇಬಲ್ ಮೇಲೆ ತ್ರಿವರ್ಣ ಧ್ವಜವನ್ನು ತಲೆ ಕೆಳಗಾಗಿ ಇಡಲಾಗಿತ್ತು.

    ಚರ್ಚೆ ನಡೆಸುತ್ತಿದ್ದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಡವಟ್ಟಾಗಿದ್ದರೆ ಧ್ವಜವನ್ನು ಸರಿಪಡಿಸಬಹುದಾಗಿತ್ತು. ಆದರೆ ಕರ್ನಾಟಕದ ಅಧಿಕಾರಿಗಳು ಮತ್ತು ಸಚಿವರು ಯಾಕೆ ಗಮನ ನೀಡಿಲ್ಲ ಎಂದು ಜನರು ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv