Tag: international airport

  • ಇಂಡಿಗೊ ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ತಂದೊಡ್ಡಿದ ಯುವತಿ

    ಇಂಡಿಗೊ ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ತಂದೊಡ್ಡಿದ ಯುವತಿ

    ಬೆಂಗಳೂರು: ಕೋಲ್ಕತ್ತಾದಿಂದ (Kolkata) ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ (IndiGo) ವಿಮಾನದಲ್ಲಿ ಯುವತಿಯೊಬ್ಬಳು ಸಿಗರೇಟ್ (Cigarette) ಸೇದಿ ಆತಂಕ ಮೂಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಮಾ. 5ರಂದು 6ಇ716 ವಿಮಾನ ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟು ಬೆಂಗಳೂರಿನಲ್ಲಿ (Bengaluru) ಲ್ಯಾಂಡ್ ಆಗಲು ಅರ್ಧ ಗಂಟೆ ಬಾಕಿ ಇತ್ತು. ಆಗ ಪಶ್ಚಿಮ ಬಂಗಾಳದ ಯುವತಿ ಪ್ರಿಯಾಂಕ ಚಕ್ರವರ್ತಿ (24) ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಹಚ್ಚಿದ್ದಾಳೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಶೌಚಾಲಯದ ಬಾಗಿಲು ತೆಗಿಸಿದ್ದಾರೆ. ಸಿಗರೇಟನ್ನು ಡಸ್ಟ್‌ಬಿನ್‌ಗೆ ಹಾಕಿ ನೀರು ಸುರಿದಿದ್ದಾರೆ. ಇದನ್ನೂ ಓದಿ: ಸಿಂಗಾಪುರದಲ್ಲಿ ಮಹಿಳೆಯರಿಗೆ ಕಿರುಕುಳ ಆರೋಪ- ಭಾರತ ಮೂಲದ ಯೋಗಾ ಶಿಕ್ಷಕನ ವಿಚಾರಣೆ

    ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಪ್ರಿಯಾಂಕರನ್ನು ಭದ್ರತಾ ವಿಭಾಗಕ್ಕೆ ಒಪ್ಪಿಸಲಾಗಿದೆ. ಪ್ರಯಾಣಿಕರ ಜೀವ ಮತ್ತು ವಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡಿದ ಆರೋಪದಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (International Airport) ಪೊಲೀಸರು ಪ್ರಿಯಾಂಕ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ, ತನಿಖೆಗೆ ಇಳಿದ ಅರಣ್ಯ ಇಲಾಖೆ

  • ಚಿನ್ನ ಕಳ್ಳಸಾಗಣೆ – ಇಂಡಿಗೋ ಏರ್‌ಲೈನ್ಸ್‌ನ ಇಬ್ಬರು ಉದ್ಯೋಗಿಗಳು ಅರೆಸ್ಟ್

    ಚಿನ್ನ ಕಳ್ಳಸಾಗಣೆ – ಇಂಡಿಗೋ ಏರ್‌ಲೈನ್ಸ್‌ನ ಇಬ್ಬರು ಉದ್ಯೋಗಿಗಳು ಅರೆಸ್ಟ್

    ನವದೆಹಲಿ: ಚಿನ್ನ ಕಳ್ಳಸಾಗಣೆ (Gold Smuggling) ಮಾಡಲು ಸಹಕರಿಸುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ (IndiGo Airlines) ಇಬ್ಬರು ಉದ್ಯೋಗಿಗಳನ್ನು ಕಸ್ಟಮ್ಸ್ ಅಧಿಕಾರಿಗಳು (Customs Officials) ಬಂಧಿಸಿದ್ದಾರೆ.

    ಇಂಡಿಗೋ ಏರ್‌ಲೈನ್ಸ್‌ನ ಸಾಜಿದ್ ರೆಹಮಾನ್ ಮತ್ತು ಮೊಹಮ್ಮದ್ ಸಾಮಿಲ್‌ನನ್ನು ಅಂತಾರಾಷ್ಟ್ರೀಯ ವಿಮಾನ (International Airport) ನಿಲ್ದಾಣದಲ್ಲಿಂದು ಬಂಧಿಸಿದ್ದಾರೆ. ಇದನ್ನೂ ಓದಿ: ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    ಈ ಇಬ್ಬರು ಅಧಿಕಾರಿಗಳು ಸುಮಾರು 4.9 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯಾಣಿಕರಿಗೆ ಸಹಕರಿಸಲು ಪ್ರಯತ್ನಿಸುತ್ತಿದ್ದರು. ತಪಾಸಣೆ ವೇಳೆ ವಿಮಾನ ನಿಲ್ದಾಣದಲ್ಲಿ ಲಗೇಜ್ ಬಿಟ್ಟು ಪರಾರಿಯಾದ ಪ್ರಯಾಣಿಕನ ಲಗೇಜ್‌ನಲ್ಲಿ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 2.5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಸಿದ್ಧಾರ್ಥ್‌ ಜೊತೆ ಡ್ಯುಯೆಟ್‌ ಹಾಡಲು ಕಾಲಿವುಡ್‌ಗೆ ಹೊರಟ ಆಶಿಕಾ ರಂಗನಾಥ್

    ಇತ್ತೀಚೆಗೆ ದೇಶದ ಹಲವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಳ್ಳಸಾಗಣೆಯ ಪ್ರಕರಣಗಳು ವರದಿಯಾಗಿದ್ದು, ನಿರಂತರವಾಗಿ ಅವುಗಳನ್ನು ಭೇದಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ನಿರಾಣಿ

    ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ನಿರಾಣಿ

    ಬೆಳಗಾವಿ: ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ರೂಪರೇಷಗಳನ್ನು ಹಾಕಿಕೊಳ್ಳಲಾಗಿದ್ದು, ಈ ಯೋಜನೆಯಿಂದ ಈ ಭಾಗದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿ ಡೋಮ್ಯಾಸ್ಟಿಕ್ ಏರ್ ಪೋರ್ಟ್ ಮಾಡಿಕೊಂಡು ಕಿತ್ತೂರಿನಲ್ಲಿಯೂ ಒಂದು ಏರ್ ಪೋರ್ಟ್ ಅನ್ನು ನಿರ್ಮಿಸುವುದಾಗಿ ಮುಂಬರುವ ದಿನಗಳಲ್ಲಿ ಕಾರ್ಯ ನಡೆಯಲಿದೆ. ಈಗಾಗಲೇ ಖಾಸಗಿ ಬಂಡವಾಳ ಹೂಡಿಕೆದಾರರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ವಿಮಾನ ನಿಲ್ದಾಣವಾಗಲಿದೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

    ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಹೊಂದಲು ಮೂಲಭೂತ ಸೌಕರ್ಯ ಬೇಕು. ಕಾರವಾರ ವಿಮಾನ ನಿಲ್ದಾಣ ಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುತ್ತದೆ. ಅದರಂತೆ, ಕಿತ್ತೂರಿನಲ್ಲಿಯೂ ಒಂದು ವಿಮಾನ ನಿಲ್ದಾಣ ಮಾಡುವ ಖಾಸಗಿ ಕಂಪನಿಯವರು ಅವರು ಸಹ ಸಹಮತ ನೀಡಿದ್ದಾರೆ. ಶೀಘ್ರದಲ್ಲಿಯೇ ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

  • ಮತ್ತೊಂದು ಐತಿಹಾಸಿಕ ಯೋಜನೆಗೆ ಪ್ರಧಾನಿ ಮೋದಿ ಅಡಿಗಲ್ಲು

    ಮತ್ತೊಂದು ಐತಿಹಾಸಿಕ ಯೋಜನೆಗೆ ಪ್ರಧಾನಿ ಮೋದಿ ಅಡಿಗಲ್ಲು

    ನವದೆಹಲಿ: ಸದಾ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಐತಿಹಾಸಿಕ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ. ನವೆಂಬರ್ 25 ರಂದು ನೊಯ್ಡಾದ ಬಳಿ ಇರುವ ಜೇವಾರ್‌ನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

    ದೆಹಲಿಯ ಹೊರ ವಲಯ ನೊಯ್ಡಾದಲ್ಲಿ ನಿರ್ಮಾಣವಾಗುತ್ತಿರುವ ಈ ಅಂತರಾಷ್ಟ್ರೀಯ ವಿಮಾನ ದೇಶದಲ್ಲಿ ಅತಿದೊಡ್ಡ ವಿಮಾನ ನಿಲ್ದಾಣವಾಗಲಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ನಿರ್ಮಿಸಲಾಗುತ್ತಿದೆ. ಮುಂಬರುವ ಉತ್ತರ ಪ್ರದೇಶ ಚುನಾವಣೆ ಮತ್ತು ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಯೋಜನೆಗೆ ಈಗ ಚಾಲನೆ ನೀಡಲಾಗಿತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಸ್ವಾಮೀಜಿಗಳಿಗೆ ಮಣಿದು ರಾಮಾಯಣ ಎಕ್ಸ್‌ಪ್ರೆಸ್‌ನಲ್ಲಿ ಸಿಬ್ಬಂದಿ ಸಮವಸ್ತ್ರ ಬದಲು

    ಮಾಹಿಗಳ ಪ್ರಕಾರ, ಏಳು ಕೋಟಿ ಪ್ರಯಾಣಿಕರ ಸಾಮರ್ಥ್ಯ ಈ ಬೃಹತ್ ವಿಮಾನ ನಿಲ್ದಾಣ ಹೊಂದಿರಲಿದ್ದು, ಏಕಕಾಲದಲ್ಲಿ 186 ವಿಮಾನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 10 ಲಕ್ಷ ಟನ್ ಕಾರ್ಗೋ ಟರ್ಮಿನಲ್ ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಿಂದ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ, ವಾರಣಾಸಿಯಿಂದ ಹೈಸ್ಪೀಡ್ ರೈಲಿನ ವ್ಯವಸ್ಥೆ ಮಾಡಲಾಗಿದೆ. ಇದು 10,000 ಕೋಟಿ ವೆಚ್ಚದ ಕಾಮಗಾರಿಯಾಗಿದ್ದು 2024 ರ ವೇಳೆಗೆ ಜನರ ಬಳಕೆಗೆ ಮುಕ್ತಗೊಳಿಸಲಾಗಿದೆ.

    ವಿಮಾನ ನಿಲ್ದಾಣದಲ್ಲಿ ಹೈಟೆಕ್ ಹೋಟೆಲ್, ವಿವಿಐಪಿ ಟರ್ಮಿನಲ್, ತೆರೆದ ಪ್ರವೇಶ ಇಂಧನ ಫಾರ್ಮ್, ವಿಮಾನ ನಿಲ್ದಾಣದ ಪಾರುಗಾಣಿಕಾ ಮತ್ತು ಅಗ್ನಿಶಾಮಕ ಕಟ್ಟಡ ಮತ್ತು ದೊಡ್ಡ ಮಳೆ ಕೊಯ್ಲು ಕೊಳವನ್ನು ಸಹ ಯೋಜಿಸಲಾಗಿದೆ. ಅಲ್ಲದೇ ಏರ್ ಪೋರ್ಟ್ ಕಾಂಪ್ಲೆಕ್ಸ್‍ನಲ್ಲಿ 167 ಎಕರೆ ಪ್ರದೇಶವನ್ನು ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಇದನ್ನೂ ಓದಿ: 100 ರೂ. ನೋಟ್ ಒಳಗೆ ವೈಟ್ ಪೇಪರ್ ಇಟ್ಟು ವಂಚನೆ- ಐವರು ಅರೆಸ್ಟ್

    ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಯಮುನಾ ಇಂಟರ್‌ನ್ಯಾಷನಲ್‌ ಏರ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ (YIAPL) ಅಭಿವೃದ್ಧಿಪಡಿಸುತ್ತಿದೆ, ಇದು ಜ್ಯೂರಿಚ್ ಏರ್ ಪೋರ್ಟ್ ಇಂಟರ್‌ನ್ಯಾಷನಲ್‍ನ ಅಂಗಸಂಸ್ಥೆಯಾಗಿದೆ. ಉತ್ತರ ಪ್ರದೇಶ ಸರ್ಕಾರವು ಅಕ್ಟೋಬರ್ 7, 2020 ರಂದು YIAPL ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.

  • ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ವಿಸ್ತರಣೆ

    ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ವಿಸ್ತರಣೆ

    ನವದೆಹಲಿ: ಅಂತರಾಷ್ಟ್ರೀಯ ವಿಮಾನ ಹಾರಾಟದ ಮೇಲೆ ಹೇರಿದ್ದ ನಿರ್ಬಂಧವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಏವಿಯೇಷನ್ ವಾಚ್‍ಡಾಗ್ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್(ಡಿಜಿಸಿಎ) ಶುಕ್ರವಾರ ತಿಳಿಸಿದೆ.

    ಭಾರತಕ್ಕೆ ಹೊರಗಿನಿಂದ ಬರುವ ಪ್ರಯಾಣಿಕರ ಸೇವೆಗಳಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಸುತ್ತೋಲೆಯನ್ನು 2021ರ ಮಾರ್ಚ್ 31ರವರೆಗೂ 2359 ಗಂಟೆಗಳ ಕಾಲ ವಿಸ್ತರಿಸಲಾಗಿದೆ ಹಾಗೂ ಈ ಸುತ್ತೋಲೆಗಳು ಕಾರ್ಗೋ ಕಾರ್ಯಚರಣೆ ನಡೆಸುತ್ತಿರುವ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ವಾಯುಯಾನ ಸಂಸ್ಥೆ ತಿಳಿಸಿದೆ. ಆದರೆ ಕೆಲವು ಆಯ್ದ ಮಾರ್ಗಗಳಿಗೆ ಅಂತರಾಷ್ಟ್ರೀಯ ವಿಮಾನಗಳಿಗೆ ಸಂಚಾರಿಸಲು ನಿಧಾನವಾಗಿ ಅನುಮತಿ ನೀಡಬಹುದು.

    2020ರ ಮಾರ್ಚ್‍ನಲ್ಲಿ ಕೊರೊನಾ ಸಾಂಕ್ರಮಿಕ ರೋಗದಿಂದ ಅಂತರಾಷ್ಟ್ರೀಯ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಕೆಲವು ತಿಂಗಳ ಬಳಿಕ ಕೆಲವು ನಿರ್ಬಂಧಗಳ ಆಧಾರದ ಮೇಲೆ ವಿಮಾನ ಸಂಚಾರ ಆರಂಭಗೊಂಡಿದ್ದು, ಆರ್ಥಿಕ ಬಿಕ್ಕಟ್ಟು ಇದೀಗ ಕೊಂಚ ಸುಧಾರಿಸಿದೆ.

    ಕಳೆದ ವರ್ಷ ಡಿಸೆಂಬರ್‍ನಲ್ಲಿ ಯುರೋಪಿನಲ್ಲಿ ಕೊರೊನಾ ವೈರಸ್ ಹೊಸ ತಳಿ ಪತ್ತೆಯಾಗಿದ್ದರಿಂದ ಅಂತರಾಷ್ಟ್ರೀಯ ವಿಮಾನಗಳ ಮೇಲೆ ನಿಷೇಧ ಹೇರಲಾಗಿತ್ತು. ಬಳಿಕ ನಿಷೇಧವನ್ನು ರದ್ದುಗೊಳಿಸಲಾಗಿತ್ತು.

  • ಫೇಮಸ್ ಆಗಲು ಮಂಗ್ಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟೆನೆಂದ ಭೂಪ!

    ಫೇಮಸ್ ಆಗಲು ಮಂಗ್ಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟೆನೆಂದ ಭೂಪ!

    – ಬಾಂಬರ್ ಆದಿತ್ಯ ರಾವ್ ಈತನಿಗೆ ರೋಲ್ ಮಾಡೆಲ್

    ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ತನ್ನ ಪ್ರಚಾರದ ಹುಚ್ಚಿಗೆ ಈತ ಇದೀಗ ಜೈಲಿನ ಕಂಬಿ ಎಣಿಸಲು ಆರಂಭಿಸಿದ್ದಾನೆ.

    ಆಗಸ್ಟ್ 19 ರಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ್ ರಾವ್ ಅವರಿಗೆ ಒಂದು ಮೊಬೈಲು ಕರೆ ಬಂದಿದ್ದು, ಕರೆ ಮಾಡಿದ್ದ ವ್ಯಕ್ತಿ ತಾನು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ತಕ್ಷಣವೇ ಪ್ರಕರಣದ ಗಂಭೀರತೆಯನ್ನು ಮನವರಿಕೆ ಮಾಡಿಕೊಂಡ ಮಾಜಿ ನಿರ್ದೇಶಕರು ಈ ವಿಚಾರವನ್ನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರ ಗಮನಕ್ಕೆ ತಂದಿದ್ದರು.

    ವಿಮಾನ ನಿಲ್ದಾಣದಿಂದ ಮಂಗಳೂರು ಪೋಲೀಸರಿಗೆ ಮಾಹಿತಿ ನೀಡಲಾಯಿತು. ತಕ್ಷಣ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಿ, ಬಾಂಬ್ ಕರೆಯ ಜಾಡನ್ನು ಪತ್ತೆ ಹಚ್ಚಲು ಪೊಲೀಸರು ಆರಂಭಿಸಿದ್ದರು. ಮೊಬೈಲ್ ಸಂಖ್ಯೆಯನ್ನು ಬೆನ್ನತ್ತಿ ಹೋದ ಮಂಗಳೂರು ಪೊಲೀಸರಿಗೆ ಈ ಕರೆ ಉಡುಪಿ ಜಿಲ್ಲೆಯ ಮುದ್ರಾಡಿ ಪರಿಸರದಿಂದ ಬಂದಿರುವುದು ತಿಳಿದು ಬಂದಿತ್ತು. ಮುದ್ರಾಡಿಯ ಪೊಯ್ಯುದಲ್ ಬಲ್ಲಾಡಿ ನಿವಾಸಿ ವಸಂತ ಕೃಷ್ಣ ಶೇರಿಗಾರ (33) ನಿಗೆ ಸೇರಿದ ಮೊಬೈಲ್ ಸಂಖ್ಯೆ ಆಗಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಆತನನ್ನು ಬಂಧಿಸಿ ಮಂಗಳೂರಿಗೆ ತಂದು ವಿಚಾರಣೆ ನಡೆಸಿದ್ದರು. ವಿಚಾರಣೆಯ ವೇಳೆ ಮಂಗಳೂರು ಪೊಲೀಸರೇ ಆರೋಪಿಯ ಹೇಳಿಕೆ ಕೇಳಿ ಬಿಚ್ಚಿ ಬಿದ್ದಿದ್ದಾರೆ. ಪೋಲೀಸ್ ತನಿಖೆಯ ವೇಳೆ ಈತ ತನ್ನ ಮೇಲಿನ ಆರೋಪವನ್ನು ಒಪ್ಪಿಕೊಂಡಿದ್ದು, ಪ್ರಚಾರಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಾನೆ.

    ಜನವರಿ ತಿಂಗಳಿನಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಸ್ಫೋಟಕವೊಂದನ್ನು ಇರಿಸಿ ದೇಶ ಹಾಗೂ ವಿದೇಶಗಳಲ್ಲಿ ಒಂದೇ ದಿನದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ. ಇದನ್ನೇ ರೋಲ್ ಮಾಡಲ್ ಆಗಿ ತೆಗೆದುಕೊಂಡ ಆರೋಪಿ ವಸಂತ್ ಗೂಗಲ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂಬರ್ ಹುಡುಕಿದ್ದಾನೆ. ಕೇವಲ 8ನೇ ತರಗತಿ ಕಲಿತಿರುವ ಈತನಿಗೆ ಗೂಗಲ್ ನಲ್ಲಿ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ್ ರಾವ್ ನಂಬರ್ ಸಿಕ್ಕಿದೆ. ಅವರನ್ನೇ ನಿಲ್ದಾಣದ ನಿರ್ದೇಶಕರು ಎಂದು ತಿಳಿದು ಆತ ಬೆದರಿಕೆಯ ಕರೆ ಮಾಡಿದ್ದಾನೆ. ಇದನ್ನೂ ಓದಿ: ಮಂಗಳೂರು ಏರ್‌ಪೋರ್ಟಿಗೆ ಹುಸಿಬಾಂಬ್ ಕರೆ- ಕಾರ್ಕಳ ಯುವಕನ ಬಂಧನ

    ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ, ಹಾಗೂ ಇತರ ಸೆಕ್ಷನ್ ಮೂಲಕ ಆರೋಪಿಯನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ. ಜಾಮೀನು ರಹಿತ ಸೆಕ್ಷನ್ ಮೇಲೆ ಆರೋಪಿಯನ್ನು ಬಂಧಿಸಿರುವ ಪೋಲೀಸರು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.

  • 5.48 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಸಾಗಾಟ- ಮಂಗ್ಳೂರಿನಲ್ಲಿ ಓರ್ವ ವಶಕ್ಕೆ

    5.48 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಸಾಗಾಟ- ಮಂಗ್ಳೂರಿನಲ್ಲಿ ಓರ್ವ ವಶಕ್ಕೆ

    ಮಂಗಳೂರು: 5.48 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಸಾಗಿಸುತ್ತಿದ್ದ ಪ್ರಯಾಣಿಕನೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಕೇರಳ ಮೂಲದ ಸಾಹುಲ್ ಹಮೀದ್ ವಿದೇಶಿ ಕರೆನ್ಸಿ ಸಾಗಿಸುತ್ತಿದ್ದ ವ್ಯಕ್ತಿ. ದುಬೈಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಾಹುಲ್ ಹಮೀದ್‍ನನ್ನು ಸಿಐಎಸ್‍ಎಫ್ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ 5.48 ಲಕ್ಷ ರೂ. ಮೌಲ್ಯದ ಬೇರೆ ಬೇರೆ ದೇಶಗಳ ಕರೆನ್ಸಿ ಸಿಕ್ಕಿವೆ.

    ಸಾಹುಲ್ ಹಮೀದ್ ಹ್ಯಾಂಡ್ ಬ್ಯಾಗ್‍ನಲ್ಲಿದ್ದ ಅಮೆರಿಕನ್ ಡಾಲರ್, ಚೀನಾ, ಮಲೇಷ್ಯಾ, ಟರ್ಕಿ ದೇಶಗಳ ಒಟ್ಟು 5.48 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ಸಿಐಎಸ್‍ಎಫ್ ಸಿಬ್ಬಂದಿ ಆತನನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸಾಹುಲ್ ಹಮೀದ್ ವಿದೇಶಿ ಕರೆನ್ಸಿ ಸಾಗಾಟ ಜಾಲದಲ್ಲಿ ಭಾಗಿಯಾಗಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

  • ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಹಳೇ ನೋಟು ಎಕ್ಸ್‌ಚೇಂಜ್ !

    ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಹಳೇ ನೋಟು ಎಕ್ಸ್‌ಚೇಂಜ್ !

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರ ಹೋಗುವ ಗೇಟ್ ಬಳಿಯ ಮನಿ ಎಕ್ಸ್‌ಚೇಂಜ್ ಸೆಂಟರ್ ನಲ್ಲಿ ಬ್ಯಾನ್ ಆಗಿರುವ ನೋಟುಗಳನ್ನು ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

    ನಗರದ ಜಿಗಣಿಯ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯಕ್ಕೆ ಯೋಗ ತರಬೇತಿಗಾಗಿ ಪ್ರತಿ ತಿಂಗಳು ವಿವಿಧ ದೇಶಗಳಿಂದ ಪತ್ರಿ ತಿಂಗಳು 20ರಿಂದ 30 ಜನರು ಬರುತ್ತಾರೆ. ಇವರಲ್ಲಿ ಕೆಲವರಿಗೆ ಹಣ ವಿನಿಮಯ ಸಂದರ್ಭದಲ್ಲಿ ಬ್ಯಾನ್ ಆಗಿರುವ 500 ರೂ. ಮುಖ ಬೆಲೆಯ ಒಂದು ಅಥವಾ ಎರಡು ನೋಟುಗಳನ್ನು ಕೊಡುತ್ತಿದ್ದಾರೆ. ಈ ಕುರಿತು ಈಗಾಗಲೇ ಅನೇಕರು ಕುರಿತು ಪ್ರಧಾನಿ ಸಚಿವಾಲಯ, ವಿಮಾನಯಾನ ಸಚಿವಾಲಯ ಹಾಗೂ ಏರ್‌ಪೋರ್ಟ್‌ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

    ಗ್ವಾಟಮಾಲಾ ದೇಶದ ಪ್ರಜೆ ರೋಮನ್ ಹಸಾರ್ಡ್ ಸಾರಾ ಮರ್ಸಿಡಿಸ್ ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯದಲ್ಲಿ ಪುಸ್ತಕ ಖರೀದಿಸಿ, ತಮ್ಮ ಬಳಿಯಿದ್ದ ಬ್ಯಾನ್ ಆಗಿರುವ 500 ರೂ. ಮುಖಬೆಲೆಯ ನೋಟು ನೀಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು, ಈ ನೋಟು ನಿಮ್ಮ ಬಳಿ ಹೇಗೆ ಬಂತು ಎಂದು ಸಾರಾ ಅವರನ್ನು ವಿಚಾರಿಸಿದ್ದಾರೆ. ಆಗ ಮರ್ಸಿಡಿಸ್ ಏರ್‌ಪೋರ್ಟ್‌ ಬಳಿಯ ಮನಿ ಎಕ್ಸ್‌ಚೇಂಜ್ ಸೆಂಟರ್‍ನಲ್ಲಿ ನೀಡಿರುವುದಾಗಿ ಹೇಳಿದ್ದಾರೆ.

    ಕಳೆದ ನಾಲ್ಕು ತಿಂಗಳಿನಿಂದ ಇದೇ ರೀತಿ ಬ್ಯಾನ್ ಆಗಿರುವ ನೋಟುಗಳನ್ನು ವಿದೇಶಿಗರಿಗೆ ನೀಡಲಾಗುತ್ತಿದೆ. ದೇಶಕ್ಕೆ ಕೆಟ್ಟ ಹೆಸರು ತರುವ ಇದಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತ್ತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕ ಮೋಹನ್ ಕಿಶೋರ್ ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದ ಸ್ವಚ್ಛ ವಿಮಾನ ನಿಲ್ದಾಣ –  ಮಂಗಳೂರಿಗೆ ಪ್ರಶಸ್ತಿ

    ದೇಶದ ಸ್ವಚ್ಛ ವಿಮಾನ ನಿಲ್ದಾಣ – ಮಂಗಳೂರಿಗೆ ಪ್ರಶಸ್ತಿ

    ಮಂಗಳೂರು: ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ನೀಡುವ ದೇಶದ ಸ್ವಚ್ಛ ವಿಮಾನ ನಿಲ್ದಾಣ ಪ್ರಶಸ್ತಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

    ನವದೆಹಲಿಯಲ್ಲಿ ನಡೆದ 23ನೇ ವಾರ್ಷಿಕ ಸಮಾರಂಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದರು. ದೇಶದ 53 ವಿಮಾನ ನಿಲ್ದಾಣಗಳಲ್ಲಿ ಸಮೀಕ್ಷೆ ನಡೆಸಿ ಎಎಐ ಮಂಗಳೂರು ವಿಮಾನ ನಿಲ್ದಾಣವನ್ನು ದೇಶದ ಅತ್ಯಂತ ಸ್ವಚ್ಛ ನಿಲ್ದಾಣ ಎಂದು ತೀರ್ಮಾನಿಸಿ ಪ್ರಶಸ್ತಿ ನೀಡಿದೆ.

     

    ಮಂಗಳೂರು ವಿಮಾನ ನಿಲ್ದಾಣ ಶುಚಿತ್ವದ ಜವಾಬ್ದಾರಿಯನ್ನು ದುರ್ಗಾ ಫೆಸಿಲಿಟಿ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇವಾ ಸಂಸ್ಥೆಗೆ ವಹಿಸಲಾಗಿದೆ.

    ದೇಶದ್ಯಾಂತ ಸಮೀಕ್ಷೆ ನಡೆಸಿದ ಎಎಐ ಮಂಡಳಿಯ ಅಧಿಕಾರಿಗಳು ವಿಮಾನ ನಿಲ್ದಾಣದ ಟರ್ಮಿನಲ್, ಪಾರ್ಕಿಂಗ್ ಪ್ರದೇಶ, ಶೌಚಾಲಯ, ವಾಣಿಜ್ಯ ಮಳಿಗೆಗಳು ಹಾಗೂ ನಿಲ್ದಾಣದ ರಸ್ತೆ ಸೇರಿದಂತೆ ಪ್ರಯಾಣಿಕರ ಕೊಠಡಿಗಳ ಸ್ವಚ್ಛತೆಯ ಬಗ್ಗೆ ಸಮೀಕ್ಷೆ ನಡೆಸಿದ್ದರು.

  • ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ

    ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ

    ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಟೇಕ್ ಆಫ್ ವೇಳೆ ಸಂಭವಿಸಬಹುದಾಗಿದ್ದ ಭಾರೀ ಅನುಹುತ ಸ್ವಲ್ಪದರಲ್ಲಿಯೇ ತಪ್ಪಿದೆ.

    ಗುರುವಾರ ಮಧ್ಯಾಹ್ನ ಮಂಗಳೂರಿನಿಂದ ಮುಂಬೈಗೆ ಜೆಟ್ ಏರ್‍ವೇಸ್ ವಿಮಾನ ಟೇಕ್ ಆಫ್ ಆಗಲು ಸಿದ್ಧತೆ ನಡೆಸುತಿತ್ತು. ಈ ವೇಳೆ ಏರ್ ಟ್ರಾಫಿಕ್ ಕಂಟ್ರೋಲ್ ಕೊಠಡಿಗೆ ರನ್ ವೇ ತುದಿಯಲ್ಲಿ ಟ್ರಾಕ್ಟರ್ ನಿಂತಿರುವುದು ಕಾಣಿಸಿದೆ. ಇದನ್ನು ಗಮನಿಸಿದ ಕೂಡಲೇ ಪೈಲಟ್ ಗೆ ಸೂಚನೆ ನೀಡಿ ಟೇಕ್ ಆಫ್ ರದ್ದು ಮಾಡಲಾಯಿತು.

    ಹುಲ್ಲು ಕತ್ತರಿಸಲು ಬಂದಿದ್ದ ಟ್ರಾಕ್ಟರ್ ರನ್ ವೇ ಬಳಿ ನಿಂತಿತ್ತು. ನಂತರ ಟ್ರಾಕ್ಟರ್ ತೆರವುಗೊಳಿಸಿದ ಬಳಿಕ ವಿಮಾನ ಟೇಕ್ ಆಫ್ ಆಯ್ತು.

    ಮಂಗಳೂರು ವಿಮಾನ ನಿಲ್ದಾಣ ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿರುವ ಕಾರಣ ಲ್ಯಾಂಡಿಂಗ್ ಮತ್ತು ಟೇಕಫ್ ವೇಳೆ ಸ್ವಲ್ಪ ಅಪಾಯ ಜಾಸ್ತಿ. 2010ರಲ್ಲಿ ಏರ್ ಇಂಡಿಯ ಎಕ್ಸ್ ಪ್ರೆಸ್  ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇ ಬಿಟ್ಟು ಮುಂದುಗಡೆ ಲ್ಯಾಂಡ್ ಆಗಿ ಮುಂದಕ್ಕೆ ಚಲಿಸಿ ಪ್ರಪಾತಕ್ಕೆ ಬಿದ್ದ ಪರಿಣಾಮ 158 ಪ್ರಯಾಣಿಕರು ಮೃತಪಟ್ಟಿದ್ದರು.

    ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
    ಸುತ್ತಲು ಆಳ ಕಣಿವೆ ಇದ್ದು ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳಿಗೆ ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಕರೆಯಲಾಗುತ್ತದೆ. ಮಂಗಳೂರು ಹೊರತು ಪಡಿಸಿ ದೇಶದಲ್ಲಿ ಕೋಝಿಕ್ಕೋಡು ಮತ್ತು ಲೆಂಗ್‍ಪುಯಿ ನಲ್ಲಿ ಟೇಬಲ್ ಟಾಪ್ ವಿಮಾನ ನಿಲ್ದಾಣ ನಿರ್ಮಾಣವಾಗಿದೆ.