ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿದ್ದ ಬೀದರ್ನಿಂದ (Bidar) ಚಾಮರಾಜನಗರದವರೆಗೆ (Chamarajanagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwar) ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಈಗ ಸೇವೆಗಳಲ್ಲಿ ಸ್ವಾರ್ಥ ಬಂದಿದೆ: ಹೆಚ್.ಆರ್.ರಂಗನಾಥ್ ಬೇಸರ
ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.
ತಕ್ಷಣವೇ ಇಬ್ಬರು ಶಿಕ್ಷಕಿಯರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪೆಟ್ಟಾ’ ಚಿತ್ರದ ನಟಿ ಮೇಘಾ
ಚಾಮರಾಜನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿರುವ ಬೀದರ್ನಿಂದ (Bidar) ಚಾಮರಾಜನಗರದವರೆಗೆ (Chamarajnagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧ್ವಜವನ್ನು ಹಿಡಿದು ಏಕತೆಯ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದಾರೆ.
ಚಾಮರಾಜನಗರ ಮತ್ತು ಮೈಸೂರು (Mysuru) ಗಡಿ ಭಾಗವಾದ ಮೂಗೂರು ಕ್ರಾಸ್ನಲ್ಲಿ ಆರಂಭಗೊಂಡ ಮಾನವ ಸರಪಳಿ ಚಾಮರಾಜನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ಒಂದೊಂದು ರಾಜ್ಯದ ಸಾಂಸ್ಕೃತಿಕ ಧಿರಿಸು ಧರಿಸಿ ವಿವಿಧೆತೆಯಲ್ಲಿ ಏಕತೆಯನ್ನು ಮೆರೆದಿದ್ದಾರೆ.ಇದನ್ನೂ ಓದಿ: ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಾರಿಯಲ್ಲಿ ಸಾಗುತ್ತಿದೆ: ಸಿಎಂ
ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು. ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್, ಶಲ್ಯ ಧರಿಸಿ ಮಿಂಚಿದರು. ರೈತರು ಹಸಿರು ಟವೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ರಾಮಸಮುದ್ರದಲ್ಲಿ 1 ಕಿಮೀ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಎಲ್ಲರ ಮನ ಗೆದ್ದಿತು. ಗಡಿ ಜಿಲ್ಲೆ ಚಾಮರಾಜನಗರಲ್ಲಿ 25 ಕಿಮೀ ಉದ್ದದ ಮಾನವ ಸರಪಳಿ 19,700 ಮಂದಿ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಜಿಲ್ಲಾಡಳಿತದ ನಿರೀಕ್ಷೆ ಹುಸಿಯಾಗಿ ಮಾನವ ಸರಪಳಿ ಅಲ್ಲಲ್ಲಿ ನಿರೀಕ್ಷಿತ ಪ್ರಮಾಣದ ಜನರು ಸೇರದೇ ಇದ್ದದ್ದು ಕಂಡುಬಂದಿತು.ಇದನ್ನೂ ಓದಿ: ‘ಗಿಚ್ಚಿ ಗಿಲಿಗಿಲಿ’ ಫಿನಾಲೆಯಲ್ಲಿ ರಿವೀಲ್ ಆಗ್ತಿದೆ Bigg Boss ಬಿಗ್ ಅಪ್ಡೇಟ್- ಏನದು?
– ಬೀದರ್ನಿಂದ ಚಾಮರಾಜನಗರದವರೆಗೆ ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಇಂದು (ಸೆ.15) ಬೀದರ್ನಿಂದ (Bidar) ಚಾಮರಾಜನಗರದವರೆಗೆ (Chamarajnagar) ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚಾಲನೆ ನೀಡಿದರು.
ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಪರಿಷತ್ ಸಭಾಪತಿ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಪರಿಷತ್ ಸದಸ್ಯ ಸಲೀಂ ಅಹಮದ್, ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಪ್ಪ ಮತ್ತಿತರರು ಸಾಥ್ ನೀಡಿದರು.
ಏಕಕಾಲಕ್ಕೆ 2500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಬಹುತೇಕ ವಿವಿಧ ಸಮಾಜದ 3 ಕೋಟಿ ಜನರು ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿಲಿದ್ದಾರೆ.
ರಾಜ್ಯಾದ್ಯಂತ ಮಾನವ ಸರಪಳಿಗೆ ಚಾಲನೆ: ಬೀದರ್:
ಸಂವಿಧಾನದ ಆಶಯ ಜಾಗೃತಿಗೊಳಿಸುವ ಮಹಾದಾಶಯದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ನಿಮಿತ್ತ ಬಸವಾದಿ ಶರಣರ ಕಾಯಕ ಭೂಮಿ ಬಸವಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದವರೆಗೆ ರಾಜ್ಯ ಸರ್ಕಾರದಿಂದ ಹಮ್ಮಿಕೊಳ್ಳಲಾದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಮಾಡಿಕೊಳ್ಳಲಾಗಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಅನುಭವ ಮಂಟಪದಿಂದ ಮಾನವ ಸರಪಳಿಗೆ ಚಾಲನೆ ನೀಡುವಂತೆ ಕಾಂಗ್ರೆಸ್ ಸರ್ಕಾರ ಯೋಜನೆ ಹಾಕಿದೆ. ಬೃಹತ್ ಮಾನವ ಸರಪಳಿ ಅಭಿಯಾನಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಚಾಲನೆ ನೀಡಿದರು. ಜಿಲ್ಲೆಯಾದ್ಯಂತ 40 ಕಿ.ಮೀ.ವರೆಗೆ 35 ಸಾವಿರ ಜನರು ಭಾಗಿಯಾಗಿ ಮಾನವ ಸರಪಳಿ ರಚನೆಯಾಗಲಿದೆ. ಬಸವಕಲ್ಯಾಣದಿಂದ ಹುಮ್ನಾಬಾದ್ಗೆ ತಲುಪಿ ಬಳಿಕ ಕಲಬುರಗಿಯ ಕಿಣ್ಣಿ ಸಡಕ ತಲುಪಲಿದೆ.
ಕಲಬುರಗಿ :
ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ನಿಂದ ಚಿತ್ತಾಪುರ ತಾಲೂಕಿನ ದೇವಲಾಪುರದವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದೆ. ಈ ಕಾರ್ಯಕ್ರಮಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ವೀರಶೈವ ಕಲ್ಯಾಣ ಮಂಟಪದ ಬಳಿ ಚಾಲನೆ ನೀಡಿದರು. ಜಿಲ್ಲೆಯಾದ್ಯಂತ 113ಕಿ.ಮಿ. ಹಾದು ಹೋಗಲಿದೆ.
ಉತ್ತರಕನ್ನಡ:
ಹೊನ್ನಾವರದಲ್ಲಿ ಸಚಿವ ಮಂಕಾಳು ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ 143 ಕಿ.ಮೀ. ಉದ್ದದ ಮಾನವ ಸರಪಳಿ ಹಳಿಯಾಳದ ಮಾವಿನಕೊಪ್ಪದಿಂದ ಭಟ್ಕಳದ ಶಿರೂರುವರೆಗೆ ರಚನೆಯಾಗಲಿದ್ದು, 80 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.
ದಕ್ಷಿಣ ಕನ್ನಡ:
ಜಿಲ್ಲೆಯಲ್ಲಿ ಒಟ್ಟು 132 ಕಿ.ಮೀ. ಮಾನವ ಸರಪಳಿ ನಿರ್ಮಾಣವಾಗಲಿದ್ದು, ಉಡುಪಿ ಜಿಲ್ಲಾ ಗಡಿ ಹೆಜಮಾಡಿಯಿಂದ ಕೊಡಗು ಜಿಲ್ಲಾ ಗಡಿ ಸಂಪಾಜೆಯವರೆಗೆ ಮಾನವ ಸರಪಳಿ ರಚನೆಯಾಗಲಿದೆ.
ಬಾಗಲಕೋಟೆ:
ಜಿಲ್ಲೆಯಲ್ಲಿ 105 ಕಿ.ಮೀ. ಮಾನವಸರಪಳಿ ಆಲಮಟ್ಟಿಯಿಂದ ಸಾಲಹಳ್ಳಿವರೆಗೆ ರಚನೆಯಾಗಲಿದೆ. ಈಗಾಗಲೇ ವಿದ್ಯಾರ್ಥಿಗಳು ರಸ್ತೆ ಬದಿ ಬಂದು ಉತ್ಸುಕತಟಯಿಂದ ಕಾಯುತ್ತಿದ್ದಾರೆ.
ಚಾಮರಾಜನಗರ:
ಜಿಲ್ಲೆಯಲ್ಲಿ 24 ಕಿ.ಮೀ ಉದ್ದ ಮಾನವ ಸರಪಳಿ ರಚನೆಗೆ ಸಿದ್ದತೆ ನಡೆದಿದ್ದು, ಗಡಿಭಾಗ ಮೂಗೂರು ಕ್ರಾಸ್ನಿಂದ ಚಾಮರಾಜನಗರದವರೆಗೆ 24 ಕಿ.ಮೀ ಮಾನವ ಸರಪಳಿ 19,200 ಜನರಿಂದ ರಚನೆಯಾಗಲಿದೆ. ಬೆಳಿಗ್ಗೆ 9.30 ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಬೆಳಿಗ್ಗೆ 9.57 ರಿಂದ 9.59ರವರೆಗೆ ಮಾನವ ಸರಪಳಿ ರಚನೆಯಾಗಲಿದೆ.
ದಾವಣಗೆರೆ:
ನ್ಯಾಮತಿ ಗಡಿಭಾಗದಿಂದ ರಾಣೆಬೆನ್ನೂರು ತಾಲ್ಲೂಕಿನ ಕೊಡಿಯಾಲ್ ಹೊಸಪೇಟೆವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದೆ. 80 ಕಿ.ಮೀ.ನಲ್ಲಿ 90 ಸಾವಿರ ಜನ ಮಾನವ ಸರಪಳಿಯಲ್ಲಿ ಭಾಗಿಯಾಗಲಿದ್ದಾರೆ. ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಮಂಡ್ಯ:
ಜಿಲ್ಲೆಯ ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದ್ದು, 62 ಕಿ.ಮೀ. ಮಾನವ ಸರಪಳಿ ನಿರ್ಮಾಣವಾಗಲಿದೆ.
ಚಿತ್ರದುರ್ಗ:
145ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದ್ದು, 1.50ಲಕ್ಷ ಜನ ಭಾಗಿ ನಿರೀಕ್ಷೆಯಿದೆ. ಮೊಳಕಾಲ್ಮೂರು ತಾಲೂಕಿನ ಮೇಗಲಕಣಿವೆ ಗ್ರಾಮದಿಂದ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿವರೆಗೆ ಮಾನವ ಸರಪಳಿ ರಚನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಚಾಲನೆ ನೀಡಿದರು.
ಧಾರವಾಡ:
ಜಿಲ್ಲೆಯಲ್ಲಿ 55 ಕಿ.ಮೀ. ಮಾನವ ಸರಪಳಿ ನಿರ್ಮಾಣವಾಗಲಿದ್ದು, ಕೆಸಿಡಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.
ಬೆಳಗಾವಿ:
ಸುವರ್ಣ ವಿಧಾನಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.
ಹಾಸನ:
ಜಿಲ್ಲೆಯ, ಕೊಡಗು ಗಡಿ ಕಡುವಿನಹೊಸಹಳ್ಳಿಯಿಂದ ಚಿಕ್ಕಮಗಳೂರು ಜಿಲ್ಲೆಯ ಗಡಿವರೆಗೆ 114 ಕಿಲೋಮೀಟರ್ ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದೆ.
ಶಿವಮೊಗ್ಗ:
ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ 60 ಕಿ.ಮೀ ಮಾನವ ಸರಪಳಿ ನಿರ್ಮಾಣವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಕೊಡಗು:
ಜಿಲ್ಲೆಯ ಸಂಪಾಜೆಯಿಂದ ಶಿರಂಗಾಲದವರೆಗೆ 72.7 ಕಿ.ಮೀ ಮಾನವ ಸರಪಳಿ ನಿರ್ಮಾಣವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಚಾಲನೆ ನೀಡಿದರು.
ಕೋಲಾರ:
ಜಿಲ್ಲೆಯ ಚೊಕ್ಕನಹಳ್ಳಿ ಗ್ರಾಮದಿಂದ ವೆಂಕಟಾಪುರ ಗ್ರಾಮದವರೆಗೆ 55 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದೆ.
ತುಮಕೂರು:
ಜಿಲ್ಲೆಯಲ್ಲಿ 25 ಲಕ್ಷ ಜನರಿಂದ ಮಾನವ ಸರಪಳಿ ನಿರ್ಮಾಣವಾಗಲಿದ್ದು, ಮಾನವ ಸರಪಳಿಗೆ ಸಚಿವ ಪರಮೇಶ್ವರ್ ಚಾಲನೆ ನೀಡಿದರು.
ಉಡುಪಿ:
ಜಿಲ್ಲೆಯ ಗಡಿ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ನಿಂದ, ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ 106 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದೆ.
ರಾಮನಗರ:
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಮೈಸೂರು-ಬೆಂಗಳೂರು ಹಳೇ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಾಣವಾಗಲಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ (International Constitution Day) ದಿನ ಆಚರಿಸಲಾಯಿತು. ಪ್ರಜಾಪ್ರಭುತ್ವ ದಿನದ ಅಂಗವಾಗಿ ಏಕಕಾಲದಲ್ಲಿ ವಿಶ್ವಾದ್ಯಂತ ಭಾರತದ ಸಂವಿಧಾನ ಪೀಠಿಕೆ (Constitution Preamble) ವಾಚನ ಮಾಡಲಾಯಿತು.
ಸಂವಿಧಾನ ಪೀಠಿಕೆ ವಾಚನ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಾರ್ಯಕ್ರಮ ಉದ್ಘಾಟಿಸಲಾಯಿತು. ಬೃಹತ್ ಎಲ್ಇಡಿ ಪರದೆಯಲ್ಲಿ ಪೀಠಿಕೆ ವಾಚನವನ್ನು ಪ್ರಸಾರ ಮಾಡಲಾಯಿತು. ಇದಕ್ಕೂ ಮುನ್ನ ಗಿಡಕ್ಕೆ ನೀರು ಹಾಕುವ ಮೂಲಕ ಸಮಾರಂಭಕ್ಕೆ ಸಾಂಪ್ರದಾಯಿಕ ಚಾಲನೆ ನೀಡಲಾಯಿತು. ನಂತರ ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಹಾಗೂ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್
ಸಚಿವ ಸಂಪುಟ ಕೊಠಡಿಗೆ ಸಂವಿಧಾನ ಪೀಠಿಕೆಯನ್ನು ಸಚಿವ ಹೆಚ್.ಸಿ.ಮಹದೇವಪ್ಪ ಹಸ್ತಾಂತರ ಮಾಡಿದರು. ನಂತರ ಸಮತೆಗೆ ಸಮಾನತೆ ತಂತ್ರಾಂಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿದರು. ಕರ್ನಾಟಕ ವಸತಿ ಶಾಲೆಗಳಲ್ಲಿ ಮಕ್ಕಳ ಸಂವಿಧಾನ ಕ್ಲಬ್ನ್ನು ಸಚಿವ ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಪೀಠಿಕೆ ವಾಚನವಾಗಿದೆ. ಸಂವಿಧಾನ ಪೀಠಿಕೆ ಬೋಧನೆ ಮಾಡುವ ಮೂಲಕ ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಣೆ ಮಾಡಿದ್ದಾರೆ ಎಂದು ಸಚಿವರು ಬಣ್ಣಿಸಿದರು. ಇದನ್ನೂ ಓದಿ: ನಾನು ಹಣವನ್ನ ಲೋನ್ ಪಡೆದು ಕೊಟ್ಟಿದ್ದೇನೆ: ಗೋವಿಂದ ಬಾಬು ಪೂಜಾರಿ
ಕರ್ನಾಟಕ ರಾಜ್ಯ ಇವತ್ತು ಹೊಸ ಇತಿಹಾಸ ಬರೆದಿದೆ. ಪ್ರಜಾಸತ್ತಾತ್ಮಕ ಒಕ್ಕೂಟಗಳು ಸೇರಿ ಪ್ರಜಾಪ್ರಭುತ್ವ ದಿನ ಮಾಡುವ ನಿರ್ಣಯ ಆಯ್ತು. 2007 ರಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆ ಅಂಗೀಕಾರ ಮಾಡಿತ್ತು. 2008 ರಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ಸಮಾನತೆ, ಒಕ್ಕೂಟವನ್ನ ವಿಶ್ವ ಬಯಸುತ್ತಿದೆ. ಭಾರತವು ಪ್ರಜಾಪ್ರಭುತ್ವದ ಹಿರಿಯ ಅಣ್ಣನಾಗಿ ಕೆಲಸ ಮಾಡುತ್ತಿದೆ. ಈ ಮೂಲಕ ವಿಶ್ವಸಂಸ್ಥೆಯ ನಿರ್ಣಯವನ್ನ ಭಾರತ ಪಾಲಿಸುತ್ತಿದೆ. ಅಸಮಾನತೆ ನಿರ್ನಾಮ ಮಾಡಿ ಸಮಾನತೆ ಜಾರಿ ಮಾಡುವ ಆಶಯ ಇದಾಗಿದೆ. ನ್ಯಾಯ, ಹಕ್ಕು, ಸ್ತ್ರೀ ಸ್ವಾತಂತ್ರ್ಯ, ಸಮಾನತೆ, ಪತ್ರಿಕಾ ಸ್ವಾತಂತ್ರ್ಯ, ಕೋಮು ಸೌಹಾರ್ದಗಳನ್ನ ಉಳಿಸಿಕೊಳ್ಳುವ ಆಶಯ ಆಗಿದೆ ಎಂದು ತಿಳಿಸಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾಡಿನ ಜನರಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಶುಭಾಶಯ. ಇವತ್ತು ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಲಾಗ್ತಿದೆ. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಜಾಪ್ರಭುತ್ವ ಒಪ್ಪಿವೆ. ಪ್ರಜಾಪ್ರಭುತ್ವ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ಭಾರತದಲ್ಲಿ ಪ್ರಾಚೀನ ಕಾಲದಲ್ಲೂ ಅಸ್ತಿತ್ವದಲ್ಲಿ ಇತ್ತು ಎಂದು ಹೇಳಿದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಟ್ವಿಸ್ಟ್ – ಸಲೂನ್ ಮಾಲೀಕನಿಗೆ ಬೆದರಿಕೆ ಕರೆ
ಸಿಂಧು ನಾಗರಿಕತೆ, ಬಸವಣ್ಣ ಕಾಲದಲ್ಲಿ ಪ್ರಜಾಪ್ರಭುತ್ವ ಇತ್ತು ಅಂತ ತಿಳಿಯುತ್ತದೆ. ಬಸವಣ್ಣ ಕಾಲದಲ್ಲಿ ಅನುಭವ ಮಂಟಪ ರಚನೆ ಮಾಡಿ, ಅದರ ಅಧ್ಯಕ್ಷತೆಯನ್ನ ಅಲ್ಲಮಪ್ರಭುಗೆ ವಹಿಸಿದ್ದರು. ಬಸವಾದಿ ಶರಣರು ಅದರಲ್ಲಿ ಭಾಗವಹಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಬೌದ್ದರ ಕಾಲದಲ್ಲಿ ಸಂಘದ ಚುನಾವಣೆ ನಡೆಯುತ್ತಿತ್ತು. ಸಿಂಧು ನಾಗರಿಕತೆಯಲ್ಲಿ ಪ್ರಜಾಪ್ರಭುತ್ವ ಇತ್ತು. ಸಂವಿಧಾನ ಬರುವ ಮುಂಚೆಯೂ ಗಣತಂತ್ರ ವ್ಯವಸ್ಥೆ ಅಂತ ಪ್ರಜಾಪ್ರಭುತ್ವವನ್ನ ಕರೆಯಲಾಗುತ್ತಿತ್ತು. ಸಂವಿಧಾನ ರಚನೆ ಆದ ಮೇಲೆ ಅಧಿಕೃತವಾಗಿ ಪ್ರಜಾಪ್ರಭುತ್ವ ಶುರುವಾಯಿತು ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಶಿವರಾಜ್ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರು, ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.