Tag: International flights

  • ಓಮಿಕ್ರಾನ್‌ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ

    ಓಮಿಕ್ರಾನ್‌ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ

    ನವದೆಹಲಿ: ಕೊರೊನಾ ವೈರಸ್‌ ರೂಪಾಂತರ ತಳಿ “ಓಮಿಕ್ರಾನ್”‌ ಬಗ್ಗೆ ಜಾಗತಿಕ ಮಟ್ಟದಲ್ಲಿ ಕಳವಳ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.

    ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧಗಳನ್ನು ಸಡಿಲಗೊಳಿಸುವ ಯೋಜನೆಗಳ ಬಗ್ಗೆ ಪರಾಮರ್ಶಿಸಿ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?

    ಹೊಸ ತಳಿಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ಪ್ರಧಾನಿ ಸಂಕ್ಷಿಪ್ತವಾಗಿ ತಿಳಿಸಿದರು. ಹೊರದೇಶಗಳಿಂದ ಆಗಮಿಸುವವರ ಬಗ್ಗೆ ಮೇಲ್ವಿಚಾರಣೆಯ ಅಗತ್ಯತೆ ಕುರಿತು ಹೇಳಿದರು. ಹೊಸ ತಳಿ ಹರಡುವಿಕೆ ಅಪಾಯದಲ್ಲಿರುವ ದೇಶಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಿ ಕೋವಿಡ್‌ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.

    ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು, ಆಗಾಗ ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವಂತಹ ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಕ್ರಮಕೈಗೊಳ್ಳಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿನ ಭೀತಿ – ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟ ಪುನಾರಂಭ ಅನುಮಾನ

    ಹೊಸ ತಳಿ ಪತ್ತೆಯಾಗಿರುವ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸುವ ವಿಮಾನ ಸಂಚಾರಕ್ಕೆ ಈಗಾಗಲೇ ನಿರ್ಬಂಧ ವಿಧಿಸಲಾಗಿದೆ. “ಓಮಿಕ್ರಾನ್‌” ಹೊಸ ತಳಿಯು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದೆ. ನಂತರ ಬೋಸ್ಟ್‌ವಾನಾ, ಇಸ್ರೇಲ್‌, ಹಾಂಗ್‌ಕಾಂಗ್‌ನಲ್ಲೂ ಪ್ರಕರಣಗಳು ಪತ್ತೆಯಾಗಿವೆ.

  • ಜೂನ್-ಜುಲೈನಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಶುರು?

    ಜೂನ್-ಜುಲೈನಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಶುರು?

    ನವದೆಹಲಿ: ಆಗಸ್ಟ್‌ಗೂ ಮುನ್ನವೇ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪುನಾರಂಭಿಸಲು ಪ್ರಯತ್ನಿಸುವುದಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

    ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು ಮೇ 25ರಿಂದ ದೇಶಿಯ ವಿಮಾನ ಹಾರಾಟ ಪುನಾರಂಭಗೊಂಡ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಸುಳಿವು ನೀಡಿದ್ದಾರೆ. “ಸಾಧ್ಯವಾದಷ್ಟು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದೇವೆ. ಮತ್ತಷ್ಟು ವಿಮಾನಗಳನ್ನು ಹೆಚ್ಚಿಸಲಿದ್ದೇವೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭಿಸಲು ಪ್ರಯತ್ನಿಸಲಿದ್ದೇವೆ” ಎಂದು ತಿಳಿಸಿದರು.

    ಆಗಸ್ಟ್-ಸೆಪ್ಟೆಂಬರ್‌ವರೆಗೆ ಏಕೆ ಕಾಯಬೇಕು? ಪರಿಸ್ಥಿತಿ ಸುಧಾರಿಸಿದರೆ ಅಥವಾ ಕೊರೊನಾ ನಿಯಂತ್ರಣಕ್ಕೆ ಬರದೆ ಇದ್ದರೆ ಮುಂಜಾಗ್ರತಾ ಕ್ರಮಕೈಗೊಂಡು ಜೂನ್ ಮಧ್ಯದಲ್ಲಿ ಅಥವಾ ಜುಲೈ ಅಂತ್ಯದ ವೇಳೆಗೆ ನಾವೇಕೆ ಅಂತಾರಾಷ್ಟ್ರೀಯ ವಿಮಾನ ಹಾರಟ ಪ್ರಾರಂಭಿಸಬಾರದು?

    ದೇಶಿಯ ವಿಮಾನಗಳ ಹಾರಾಟದ ಮಾರ್ಗಸೂಚಿ ಸಂಬಂಧ ಮಾತನಾಡಿ, ಆರೋಗ್ಯ ಸೇತು ಅತ್ಯುತ್ತಮ ಆ್ಯಪ್. ಸೋಂಕಿತರ ಸಂಪರ್ಕ ಪತ್ತೆಹಚ್ಚಲು ಇದಕ್ಕಿಂತ ಉತ್ತಮ ಮಾರ್ಗ ಮತ್ತೊಂದಿಲ್ಲ. ಹೀಗಾಗಿ ಎಲ್ಲರೂ ಇದನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಆರೋಗ್ಯ ಸೇತುವಿನಲ್ಲಿ ಗ್ರೀನ್ ಸ್ಟೇಟಸ್ ಬಂದ ಬಳಿಕ ಕ್ವಾರಂಟೈನ್ ಅವಶ್ಯಕತೆ ಇಲ್ಲ ಎಂದು ಭಾವಿಸಬಾರದು. ಪ್ರಯಾಣದ ಬಳಿಕ ಸಂಪರ್ಕ ತಡೆ ಕಡ್ಡಾಯ. ಕೊರೊನಾ ಟೆಸ್ಟ್ ಬಳಿಕ ನಿಮ್ಮ ವರದಿ ನೆಗೆಟಿವ್ ಬಂದರೆ ಆಗ ಮಾತ್ರ ಕ್ವಾರಂಟೈನ್ ಅವಶ್ಯಕತೆ ಇರುವುದಿಲ್ಲ. ಸದ್ಯ ವಿಮಾನ ಸಂಚಾರಕ್ಕೆ ಆರೋಗ್ಯ ಸೇತು ಆ್ಯಪ್. ಪಾಸ್‍ಪೋರ್ಟ್ ಇದ್ದಂತೆ ಎಂದು ಸ್ಪಷ್ಟನೆ ನೀಡಿದರು.