Tag: International Tiger Day

  • ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?

    ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?

    ಚಾಮರಾಜನಗರ: ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಚಾಮರಾಜನಗರ (Chamarajanagar) ಜಿಲ್ಲೆಯಲ್ಲೂ ಕೂಡ ಕಳೆದ 15 ವರ್ಷದಲ್ಲಿ 150ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಅತಿಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

    ಪ್ರತಿ ವರ್ಷ ಜುಲೈ 29ರಂದು ‘ವಿಶ್ವ ಹುಲಿ ದಿನ’ವನ್ನಾಗಿ (International Tiger Day) ಆಚರಿಸಲಾಗುತ್ತದೆ. ಹಿಂದೆ ಹುಲಿಗಳ ಸಂರಕ್ಷಣೆ ದೊಡ್ಡ ಸವಾಲಾಗಿತ್ತು. ಆದರೀಗ ಸಂರಕ್ಷಣೆ ಉತ್ತಮವಾಗಿದ್ದು, ಹುಲಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಗಡಿಜಿಲ್ಲೆ ಚಾಮರಾಜನಗರ ‘ಹುಲಿಗಳ ನಾಡು’ ಎಂದೇ ಹೆಸರು ಗಳಿಸಿದೆ. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

    ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಎರಡೂ ಹುಲಿ ಸಂರಕ್ಷಿತ ಪ್ರದೇಶಗಳಾಗಿವೆ. ಮಲೆ ಮಹದೇಶ್ವರ ವನ್ಯಜೀವಿಧಾಮವೂ ಕೂಡ ಹುಲಿ ಸಂರಕ್ಷಿತ ಪ್ರದೇಶ ಆಗುವ ನಿರೀಕ್ಷೆಯಿದೆ. ಅದರ ಜೊತೆಗೆ ಕಾವೇರಿ ವನ್ಯಧಾಮ ಕೂಡ ಚಾಮರಾಜನಗರ ಜಿಲ್ಲೆಯಲ್ಲಿದೆ. ಎರಡು ಹುಲಿ ಸಂರಕ್ಷಿತ ಅರಣ್ಯ, ಎರಡು ವನ್ಯಧಾಮ ಹೊಂದಿರುವ ಜಿಲ್ಲೆ ಅಂದ್ರೆ ಅದು ಚಾಮರಾಜನಗರ. ಬಂಡೀಪುರ ಅರಣ್ಯ ಪ್ರದೇಶವು 1973ರಲ್ಲಿ ಮೊದಲಿಗೆ ಹುಲಿ ಸಂರಕ್ಷಿತ ಅರಣ್ಯಪ್ರದೇಶವಾಗಿ ಘೋಷಣೆಯಾಯಿತು. ಆ ಸಂದರ್ಭದಲ್ಲಿ 12 ಹುಲಿಗಳಷ್ಟೇ ಇತ್ತು ಎಂದು ಅಂದಾಜು ಮಾಡಲಾಗಿತ್ತು. ಕ್ರಮೇಣ ಹುಲಿಗಳ ಸಂರಕ್ಷಣೆ ಹೆಚ್ಚಾಗಿದೆ. ಇದನ್ನೂ ಓದಿ: 7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

    ಇದಿಗ 2024ರ ಕರ್ನಾಟಕ ಅರಣ್ಯ ಇಲಾಖೆ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 393 ಹುಲಿಗಳಿವೆ. ಅದರಲ್ಲಿ ಬಂಡೀಪುರದಲ್ಲಿ ಸುಮಾರು 154ಕ್ಕೂ ಹೆಚ್ಚು ಹುಲಿಗಳಿರೋದು ಗೊತ್ತಾಗಿದೆ. ನಾಗರಹೊಳೆ 149, ಭದ್ರಾ 29, ಅದೇ ರೀತಿ ಬಿಳಿಗಿರಿ ರಕ್ಷಿತಾರಣ್ಯದಲ್ಲೂ ಅಂದಾಜು 39 ಹುಲಿಗಳಿರೋದು ಕಂಡು ಬಂದಿದೆ. ಕಾಳಿ (ಅಣಶಿ ದಾಂಡೇಲಿ) 22, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 15 ರಿಂದ 20ಕ್ಕೂ ಹೆಚ್ಚು ಹುಲಿಗಳಿದ್ದು, ಇದೀಗ ಅದರ ಸಂಖ್ಯೆ 25ರಿಂದ 30ಕ್ಕೆ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 15 ವರ್ಷದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರೆ, ಅರಣ್ಯ ಇಲಾಖೆಯ ಸರಂಕ್ಷಣಾ ಕ್ರಮಗಳು ಹುಲಿಗಳ ಸಂಖ್ಯೆ ಹೆಚ್ಚಾಗಲೂ ಕಾರಣವಾಗಿದೆ. ಇದನ್ನೂ ಓದಿ: ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

    ಈ ಹಿಂದೆ ಹುಲಿಗಳ ಹಾಗೂ ವನ್ಯಜೀವಿ ಕಳ್ಳ ಬೇಟೆಗಾರರ ಮೇಲೆ ಇಲಾಖೆ ಸಾಕಷ್ಟು ನಿಗಾ ಇಟ್ಟಿತು. ಇದರಿಂದ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರವಾಸೋದ್ಯಮ ಚಟುವಟಿಕೆ ಕೂಡ ಹೆಚ್ಚಾಗಿದೆ. ದೇಶ ವಿದೇಶದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಅದೇ ರೀತಿ ಕಾಡಿನ ಸಂರಕ್ಷಣೆಯಲ್ಲೂ ಹುಲಿಗಳು ಮಹತ್ವದ ಪಾತ್ರ ವಹಿಸಿದೆ. ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

    ಹುಲಿಗಳ ಸಂಖ್ಯೆ ಚಾಮರಾಜನಗರ ಜಿಲ್ಲೆಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ಪ್ರವಾಸಿಗರೂ ಕೂಡ ಸಂತೋಷಗೊಂಡಿದ್ದಾರೆ. ಹುಲಿಗಳ ದರ್ಶನದಿಂದ ಪುಳಕಿತರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಪೋಷಣೆ ಆಗುತ್ತಿರುವುದರಿಂದ ‘ಹುಲಿಗಳ ನಾಡು’ ಎಂಬ ಪ್ರಖ್ಯಾತಿ ಗಳಿಸಿದೆ. ಇದನ್ನೂ ಓದಿ: ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

  • ಹುಲಿಗಳ ಸಂಖ್ಯೆ ಹೆಚ್ಚಳ – ಚೆಲುವ ಚಾಮರಾಜನಗರ ಈಗ ಹುಲಿಗಳ ನಾಡು

    ಹುಲಿಗಳ ಸಂಖ್ಯೆ ಹೆಚ್ಚಳ – ಚೆಲುವ ಚಾಮರಾಜನಗರ ಈಗ ಹುಲಿಗಳ ನಾಡು

    ಚಾಮರಾಜನಗರ: ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲೇ ಕಳೆದ 10 ವರ್ಷದಲ್ಲಿ 100ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಅತಿಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

    ಪ್ರತಿ ವರ್ಷವೂ ಜುಲೈ 29ರ ದಿನವನ್ನು `ವಿಶ್ವಹುಲಿ’ ದಿನವನ್ನಾಗಿ ಆಚರಿಸಲಾಗುತ್ತದೆ. ಹಿಂದೆ ಹುಲಿಗಳ ಸಂರಕ್ಷಣೆ ದೊಡ್ಡ ಸವಾಲಾಗಿತ್ತು. ಆದರೀಗ ಸಂರಕ್ಷಣೆ ಉತ್ತಮವಾಗಿದ್ದು, ಹುಲಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಗಡಿಜಿಲ್ಲೆ ಚಾಮರಾಜನಗರ ಹುಲಿಗಳ ನಾಡು ಎಂದೇ ಹೆಸರು ಗಳಿಸಿದೆ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ NIA ಹೆಗಲಿಗೆ

    ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶಗಳಾಗಿವೆ. ಮಲೈ ಮಹದೇಶ್ವರ ವನ್ಯಜೀವಿಧಾಮವೂ ಕೆಲವೇ ದಿನಗಳಲ್ಲಿ ಹುಲಿ ಸಂರಕ್ಷಿತ ಪ್ರದೇಶ ಆಗುವ ನಿರೀಕ್ಷೆಯಿದೆ. ಬಂಡೀಪುರ ಅರಣ್ಯ ಪ್ರದೇಶವು 1973ರಲ್ಲಿ ಮೊದಲಿಗೆ ಹುಲಿ ಸಂರಕ್ಷಿತ ಅರಣ್ಯಪ್ರದೇಶವಾಗಿ ಘೋಷಣೆಯಾಯ್ತು. ಆಗ ಸಂದರ್ಭದಲ್ಲಿ 12 ಹುಲಿಗಳಷ್ಟೇ ಇತ್ತು ಎಂದು ಅಂದಾಜು ಮಾಡಲಾಗಿತ್ತು. ಕ್ರಮೇಣ ಹುಲಿಗಳ ಸಂರಕ್ಷಣೆ ಹೆಚ್ಚಾಯ್ತು.

    ಇದಿಗ ಕಳೆದ ಹುಲಿ ಗಣತಿಯ ಪ್ರಕಾರ ಸುಮಾರು 150ಕ್ಕೂ ಹೆಚ್ಚು ಹುಲಿಗಳಿರೋದು ಗೊತ್ತಾಗಿದೆ. ಅದೇ ರೀತಿ ಬಿಳಿಗಿರಿ ರಕ್ಷಿತಾರಣ್ಯದಲ್ಲೂ ಕಳೆದ ಗಣತಿಯಲ್ಲಿ 86 ಹುಲಿಗಳಿರೋದು ಕಂಡು ಬಂದಿದೆ. ಮಲೈ ಮಹದೇಶ್ವರ ವನ್ಯಜೀವಿಧಾಮದಲ್ಲಿ 15ಕ್ಕೂ ಹೆಚ್ಚು ಹುಲಿಗಳಿದ್ದು, ಇದೀಗ ಅದರ ಸಂಖ್ಯೆ 25 ರಿಂದ 30ಕ್ಕೆ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 10 ವರ್ಷದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರೆ, ಗಡಿ ಅರಣ್ಯದಲ್ಲಿ 250ಕ್ಕೂ ಹುಲಿಗಳಿವೆ ಎಂದು ಪ್ರಸ್ತುತ ಗಣತಿಯು ಮಾಹಿತಿ ನೀಡಿದೆ. ಅರಣ್ಯ ಇಲಾಖೆಯ ಸರಂಕ್ಷಣಾ ಕ್ರಮಗಳೂ ಹುಲಿಗಳ ಸಂಖ್ಯೆ ಹೆಚ್ಚಾಗಲೂ ಕಾರಣವಾಗಿದೆ.

    ಈ ಹಿಂದೆ ಹುಲಿಗಳ ಹಾಗೂ ವನ್ಯಜೀವಿ ಕಳ್ಳಭೇಟೆಗಾರರ ಮೇಲೆ ಇಲಾಖೆ ಸಾಕಷ್ಟು ನಿಗಾ ಇಟ್ಟಿತು. ಇದರಿಂದ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರವಾಸೋದ್ಯಮ ಚಟುವಟಿಕೆ ಕೂಡ ಹೆಚ್ಚಾಗಿದೆ. ದೇಶ ವಿದೇಶದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಅದೇ ರೀತಿ ಕಾಡಿನ ಸಂರಕ್ಷಣೆಯಲ್ಲೂ ಹುಲಿಗಳು ಮಹತ್ವದ ಪಾತ್ರ ವಹಿಸಿದೆ. ಇದನ್ನೂ ಓದಿ: ಇಡೀ ಬಿಜೆಪಿ ಪಕ್ಷ ಹಾಳಾಗಿ ಹೋಗುತ್ತೆ, ಅಣ್ಣಪ್ಪನ ಶಾಪ ಇದೆ: ಮಹೇಶ್ ಶೆಟ್ಟಿ ತಿಮರೋಡಿ ಕಿಡಿ

    ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ಪ್ರವಾಸಿಗರೂ ಫುಲ್‌ಖುಷ್ ಆಗಿದ್ದಾರೆ. ಹುಲಿಗಳ ದರ್ಶನದಿಂದ ಪುಳಕಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಪೋಷಣೆ ಆಗುತ್ತಿರುವುದರಿಂದ `ಹುಲಿಗಳ ನಾಡು’ ಎಂದೇ ಕರೆಸಿಕೊಳ್ಳುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    – 2 ಹುಲಿಗಳ ಅಂತರದಲ್ಲಿ ಮೊದಲ ಸ್ಥಾನ ತಪ್ಪಿಸಿಕೊಂಡ ಕರ್ನಾಟಕ
    – ಮಧ್ಯಪ್ರದೇಶದಲ್ಲಿವೆ ಹೆಚ್ಚು ಹುಲಿಗಳು

    ನವದೆಹಲಿ: ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕೆಲವೇ ಸಂಖ್ಯೆಗಳ ಅಂತರದಲ್ಲಿ ಕರ್ನಾಟಕ ನಂ.1 ಪಟ್ಟ ಕೈತಪ್ಪುತ್ತಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡನೇ ಸ್ಥಾನದಲ್ಲಿಯೇ ಮುಂದುವರಿದಿದೆ.

    ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಮಧ್ಯ ಪ್ರದೇಶ 526 ಹುಲಿಗಳನ್ನು ಹೊಂದುವ ಮೂಲಕ ಮೊದಲ ಸ್ಥಾನ ಪಡೆದಿದೆ. ಕರ್ನಾಟಕ 524 ಹುಲಿಗಳನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಇನ್ನು 442 ಹುಲಿಗಳನ್ನು ಹೊಂದಿರುವ ಉತ್ತರಾಖಂಡ್ ಮೂರನೇ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

    ಉತ್ತರಾಖಂಡ್‍ನ ಜಿಮ್ ಕಾರ್ಬೆಟ್‍ನಲ್ಲಿ 231 ಹುಲಿಗಳಿಗಳಿದ್ದು, ನಾಗರಹೊಳೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 127 ಹಾಗೂ 126 ಹುಲಿಗಳಿವೆ. ದೇಶದಲ್ಲಿ ಒಟ್ಟು 50 ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ ಎಂದು ಜಾವಡೇಕರ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.

    ರಾಜ್ಯದಲ್ಲಿ ಪ್ರಸ್ತುತ ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನ ಬೆಟ್ಟ ಸಂರಕ್ಷಿತ ಧಾಮಗಳಿವೆ. ರಾಜ್ಯದಲ್ಲಿ ಒಟ್ಟು 524 ಹುಲಿಗಳಿವೆ. ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿ ಬಿಡುಗಡೆ ಮಾಡಿದರೆ, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ವಿಶೇಷ ಕಲೆ ಮೂಲಕ ಜಾಗೃತಿ ಮೂಡಿಸಿದ್ದಾರೆ.

    ಪೂರಿ ಬೀಚ್‍ನಲ್ಲಿ ಮರಳಿನಲ್ಲಿ ಹುಲಿಯ ಚಿತ್ರ ಬಿಡುಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಕುರಿತು ಚಿತ್ರವನ್ನು ಟ್ವೀಟ್ ಮಾಡಿ ಸಾಲುಗಳನ್ನು ಬರೆದಿರುವ ಅವರು, ಹುಲಿಗಳ ಆವಾಸಸ್ಥಾನಗಳನ್ನು ರಕ್ಷಿಸುವ ಮೂಲಕ ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಟ್ಟಾಗೋಣ. ಪೂರಿ ಬೀಚ್‍ನಲ್ಲಿ ಬಿಡಿಸಿದಿ ಚಿತ್ರವೊಂದನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ರಾಜ್ಯದ ಹುಲಿ ಸಂಖ್ಯೆಯಲ್ಲಿ ಚಾಮರಾಜನಗರ ನಂಬರ್ 1

    ರಾಜ್ಯದ ಹುಲಿ ಸಂಖ್ಯೆಯಲ್ಲಿ ಚಾಮರಾಜನಗರ ನಂಬರ್ 1

    ಚಾಮರಾಜನಗರ: ಅಳಿವಿನಂಚಿಗೆ ತಲುಪಿದ ಹುಲಿ ಸಂತತಿ ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಚೇತರಿಕೆ ಕಂಡು ಬಂದಿದೆ. ರಾಜ್ಯದ ಅರಣ್ಯ ಇಲಾಖೆಗಳು ಹಮ್ಮಿಕೊಂಡ ಯೋಜನೆಗಳ ಫಲವಾಗಿ ಹುಲಿ ಸಂರಕ್ಷಣೆಯಲ್ಲಿ ವಿಶ್ವದಲ್ಲೇ ಭಾರತ ಮುಂಚೂಣಿಯಲ್ಲಿದ್ದು, ಕರ್ನಾಟಕ ದೇಶದಲ್ಲೇ 2ನೇ ಸ್ಥಾನವನ್ನ ಪಡೆದಿದೆ. ಹಳೇ ಮೈಸೂರು ಭಾಗದಲ್ಲಿ 363ಕ್ಕೂ ಹೆಚ್ಚು ಹುಲಿಗಳು ನೆಲೆ ಕಂಡುಕೊಂಡಿವೆ. ಇಂದು ರಾಷ್ಟ್ರೀಯ ಹುಲಿ ದಿನಾಚರಣೆಯ ಪ್ರಯುಕ್ತ ವಿಶೇಷ ವರದಿ .

    ರಾಜ್ಯದ ದಕ್ಷಿಣ ಭಾಗದಲ್ಲಿ ಹುಲಿಗಳಿಗೆ ಹಿತಕರ ಹವಾಗುಣವಿದ್ದು, ಸದ್ಯ ಹಳೇ ಮೈಸೂರು ಭಾಗದಲ್ಲಿ 363ಕ್ಕೂ ಹೆಚ್ಚು ಹುಲಿಗಳು ನೆಲೆ ಕಂಡಿದೆ. ಹಳೇ ಮೈಸೂರು ಪ್ರಾಂತ್ಯದಲ್ಲಿ ಒಟ್ಟು 4 ಹುಲಿ ಸಂರಕ್ಷಿತ ಪ್ರದೇಶಗಳಿವೆ. ಅದರಲ್ಲೂ ಚಾಮರಾಜ ಜಿಲ್ಲೆಯೊಂದರಲ್ಲೇ 3 ಹುಲಿ ಸಂರಕ್ಷಿತ ಪ್ರದೇಶಗಳಿವೆ. ಹುಲಿಗಳ ಸುರಕ್ಷಿತ ನೆಲೆ, ಸಂತಾನವೃದ್ದಿಗೆ ಸೂಕ್ತ ವಾತಾವರಣವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಹುಲಿಗಳು ಹಳೇ ಮೈಸೂರು ಪ್ರಾಂತ್ಯದಲ್ಲಿ ಸುರಕ್ಷಿತ ನೆಲೆ ಕಂಡುಕೊಂಡಿದೆ. 2018ರ ಹುಲಿ ಗಣತಿಯಲ್ಲಿ ವಿಶ್ವದಲ್ಲಿ 3,900 ಹುಲಿಗಳೀರುವುದನ್ನ ಖಾತರಿಪಡಿಸಿದೆ. ಆದರಲ್ಲಿ ಭಾರತದಲ್ಲೇ 2,967 ಹುಲಿಗಳಿವೆ. ಭಾರತದ 20 ರಾಜ್ಯಗಳಲ್ಲಿ ಹುಲಿಗಳ ನೆಲೆಗಳಿವೆ. 2018ರಲ್ಲಿ ದೇಶದಲ್ಲಿದ್ದ 2,967 ಹುಲಿಗಳಲ್ಲಿ ಮಧ್ಯಪ್ರದೇಶದಲ್ಲಿ 526 ಹುಲಿಗಳಿದ್ದು, ಆ ರಾಜ್ಯ ಮೊದಲ ಸ್ಥಾನದಲ್ಲಿದೆ. ಕರ್ನಾಟಕ 524 ಹುಲಿಗಳೊಂದಿಗೆ 2ನೇ ಹಾಗೂ 442 ಹುಲಿಗಳಿರುವ ಉತ್ತರಾಖಂಡ್ 3ನೇ ಸ್ಥಾನದಲ್ಲಿದೆ.

    ಗಂಧದ ಗುಡಿ ಎಂದೇ ಕರೆಯಲ್ಪಡುವ ರಾಜ್ಯ, ಅರಣ್ಯ ಸಂಪತ್ತಿನ ನೆಲೆಬೀಡಾಗಿದೆ. ಬೆಟ್ಟ-ಗುಟ್ಟ, ನದಿ ತೊರೆ, ಕಾಡಾನ್ನು ಮಡಿಲಲ್ಲಿಟ್ಟುಕೊಂಡಿದೆ. ಆನೆ, ಹುಲಿ ಸೇರಿದಂತೆ ನಾನಾ ಬಗೆಯ ವನ್ಯಜೀವಿಗಳ ಆವಾಸ ಸ್ಥಾನವೂ ಆಗಿದೆ. ಹಳೇ ಮೈಸೂರು ಪ್ರಾಂತ್ಯ 4 ಹುಲಿ ಸಂರಕ್ಷಿತ ಪ್ರದೇಶಗಳನ್ನು ಹೊಂದಿದ್ದು, 326 ಹುಲಿಗಳು ಇಲ್ಲಿ ವಾಸ ಮಾಡುತ್ತಿದೆ.

    ಇನ್ನೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಬರುವ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 2018ರ ಹುಲಿ ಗಣತಿ ಪ್ರಕಾರ 127 ಹುಲಿಗಳಿವೆ. 1,020 ಚ.ಕಿ.ಮೀ ವಿಸ್ತಾರದ ಮೂಲ ಅರಣ್ಯ ಪ್ರದೇಶದಲ್ಲಿ 380 ಕ್ಯಾಮೆರಾಗಳಲ್ಲಿ 3 ಹಂತ ಬಳಸಿ ಗಣತಿ ಮಾಡಲಾಗಿತ್ತು. ಅದರೆ ಸದ್ಯ ಬಂಡೀಪುರದಲ್ಲಿ 150ಕ್ಕೂ ಹೆಚ್ಚು ಹುಲಿಗಳಿವೆ. ಮರಿಗಳು ಇದ್ದು ಇದರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎನ್ನುತ್ತಾರೆ ಬಂಡೀಪುರ ಅರಣ್ಯದ ನಿರ್ದೇಶಕ ಬಾಲಚಂದ್ರ.

    ಬಿಳಿಗಿರಿರಂಗನಬೆಟ್ಟದ ಹುಲಿ ಸಂರಕ್ಷಿತ ಪ್ರದೇಶ 572 ಚದರ ಕಿ.ಮೀ ವಿಸ್ತಾರವಿದೆ. 6 ವಲಯ, 2 ಉಪವಿಭಾಗಗಳಿವೆ. ಗಣತಿಯಲ್ಲಿ 55-65 ಹುಲಿಗಳು ಪತ್ತೆಯಾಗಿದೆ. 1200 ಪಾಯಿಂಟ್ ಗುರುತಿಸಿ ಕ್ಯಾಮೆರಾ ಟ್ಯಾಪ್ ಮೂಲಕ ಗಣತಿ ಮಾಡಲಾಗಿತ್ತು. ಮಲೆ ಮಹದೇಶ್ವರ ಬೆಟ್ಟ ರಾಜ್ಯದ ನೂತನ ಹುಲಿ ಸಂರಕ್ಷಿತ ಪ್ರದೇಶವೆನಿಸಿದೆ. 920 ಚ.ಕಿ.ಮೀ ವಿಸ್ತಾರದಲ್ಲಿ ಬೆಟ್ಟ ಗುಡ್ಡಗಳಿಂದ ಕೂಡಿದ ಅರಣ್ಯ ಪ್ರದೇಶವಿದೆ. 7 ರೇಂಜ್, 3 ಉಪವಿಭಾಗಗಳಲ್ಲಿ ಅಂದಾಜು 30 ಹುಲಿಗಳಿವೆ. ಹುಲಿ ಗಣತಿ ವೇಳೆ 20 ಹುಲಿಗಳು ಕಂಡು ಬಂದಿವೆ. ನಾಗರಾಹೊಳೆಗಿಂತ ಶೇ.20 ರಷ್ಟು ಹೆಚ್ಚಿನ ಕಾಡು ಕಂಡು ಬಂದಿದೆ. ಹುಲಿ ಕಂಡು ಬಂದ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಗಿದೆ. ಸತ್ಯಮಂಗಲ, ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಮಲೆ ಮಹದೇಶ್ವರ ಬೆಟ್ಟದ ಕಾಡು ಇದೆ.

    ಮೈಸೂರು, ಕೊಡಗು ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ 125ಕ್ಕೂ ಹೆಚ್ಚು ಹುಲಿಗಳಿವೆ. 200ಚ.ಕಿ.ಮೀ ಬಫರ್ ಝೋನ್ ನೊಂದಿದೆ 834 ಚ.ಕಿ.ಮೀ ವಿಸ್ತಾರದ ಈ ಅಭಯಾರಣ್ಯವನ್ನ ಹೊಂದಿದೆ.

    ಒಟ್ಟಾರೆ ಹಳೇ ಮೈಸೂರು ಪ್ರಾಂತ್ಯ ಹುಲಿಗಳನ್ನ ಫೋಷಣೆ ಮಾಡುವುದರಲ್ಲಿ ಎಲ್ಲ ರಾಜ್ಯಗಳಿಗೆ ಮಾದರಿಯಾಗಿದೆ. ಇಲ್ಲಿನ ವಾತಾವರಣ ಹುಲಿಗಳಿಗಷ್ಟೇ ಅಲ್ಲ ಎಲ್ಲಾ ಪ್ರಾಣಿಗಳಿಗೆ ಹೇಳಿ ಮಾಡಿಸಿದ ಅರಣ್ಯ ಪ್ರದೇಶವಾಗಿದೆ.

  • ಬನ್ನೇರುಘಟ್ಟದಲ್ಲಿದೆ ಆರು ತಿಂಗಳ ‘ಹಿಮಾದಾಸ್’ ಹುಲಿಮರಿ

    ಬನ್ನೇರುಘಟ್ಟದಲ್ಲಿದೆ ಆರು ತಿಂಗಳ ‘ಹಿಮಾದಾಸ್’ ಹುಲಿಮರಿ

    ಬೆಂಗಳೂರು: ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಅವರ ಹೆಸರನ್ನು ಹುಲಿಮರಿಗೆ ಇಡುವ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನ ಗೌರವ ಸಲ್ಲಿಸಿದೆ.

    ಹಿಮಾ ದಾಸ್ ಒಂದು ತಿಂಗಳ ಕಡಿಮೆ ಅವಧಿಯಲ್ಲಿ ಬ್ಯಾಕ್ ಟು ಬ್ಯಾಕ್ ಚಿನ್ನದ ಪದಕ ಗೆದ್ದಿದ್ದಾರೆ. ಹಾಗಾಗಿ ಅವರಿಗೆ ಗೌರವ ನೀಸಲು ವಿಶ್ವ ಹುಲಿ ದಿನಾಚರಣೆಯ ದಿನದಂದು ಬನ್ನೇರುಘಟ್ಟ ಪಾರ್ಕಿನಲ್ಲಿ 6 ತಿಂಗಳ ರಾಯಲ್ ಬೆಂಗಾಲ್ ಹುಲಿಮರಿಗೆ ಹಿಮಾ ದಾಸ್ ಎಂದು ಹೆಸರಿಟ್ಟಿದ್ದಾರೆ.

    ವಿಶ್ವ ಹುಲಿ ದಿನಾಚರಣೆ ಆಚರಿಸುವ ವೇಳೆ ಮೃಗಾಲಯದ ಯೋಜನೆಗಳನ್ನು ಮತ್ತು ಉಪಕ್ರಮವನ್ನು ಹೇಳುವಾಗ ಸರ್ಕಾರಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ನವಶ್ರೀ ವಿಪಿನ್ ಸಿಂಗ್ ಇದನ್ನು ಘೋಷಿಸಿದ್ದಾರೆ. ಅಲ್ಲದೆ ವಿಶ್ವ ಹುಲಿ ದಿನಾಚರಣೆಯಂದು ಸಾರ್ವಜನಿಕರು ವೀಕ್ಷಿಸಲು ಎಂದು 8 ಹುಲಿಗಳನ್ನು ಸಫಾರಿಗೆ ಬಿಟ್ಟಿದ್ದೇವು. ಒಟ್ಟು 8 ಹುಲಿಯಲ್ಲಿ ತಾಯಿ ಸೇರಿ 7 ಮಕ್ಕಳಿದ್ದು, ಒಂದಕ್ಕೆ ಹಿಮಾ ದಾಸ್ ಅವರ ಹೆಸರನ್ನು ಇಡಲಾಗಿದೆ. ಕಳೆದ 20 ದಿನದಲ್ಲಿ ಹಿಮಾ ದಾಸ್ 5 ಚಿನ್ನದ ಪದಕ ಗೆದ್ದಿದ್ದು, ಹಾಗಾಗಿ ನಾವು ಈ ರೀತಿ ಅವರಿಗೆ ಗೌರವ ಸೂಚಿಸುತ್ತಿದ್ದೇವೆ ಎಂದು ನವಶ್ರೀ ವಿಪಿನ್ ಸಿಂಗ್ ತಿಳಿಸಿದ್ದಾರೆ.

    ಹಿಮಾ ಅವರ ಐದು ಚಿನ್ನದ ಪದಕದ ಪಟ್ಟಿ:
    1. ಜುಲೈ 2ರಂದು ಪೊಲೆಂಡ್‍ನಲ್ಲಿ ನಡೆದಿದ್ದ ಪೊಜ್ನಾನ್ ಅಥ್ಲೆಟಿಕ್ಸ್ ಪ್ರಿಕ್ಸ್ ನಲ್ಲಿ ಹಿಮಾದಾಸ್ ಅವರು 200 ಮೀಟರ್ ಓಟವನ್ನು 23.65 ಸೆಕೆಂಡ್‍ಗಳಲ್ಲಿ ಮುಗಿಸಿ ಮೊದಲ ಚಿನ್ನದ ಪದಕ ಗೆದ್ದಿದ್ದರು.

    2. ನಂತರ ಜುಲೈ 8 ರಂದು ಕುಟ್ನೊ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ದೂರವನ್ನು 23.97 ಸೆಕೆಂಡ್‍ಗಳಲ್ಲಿ ಕ್ರಮಿಸಿ ಎರಡನೇ ಚಿನ್ನ ಪದಕವನ್ನು ಪಡೆದರು.

    3. ಜುಲೈ 13 ರಂದು ಜೆಕ್ ಗಣರಾಜ್ಯದಲ್ಲಿ ನಡೆದ ಕ್ಲಾಡ್ನೊ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ಸ್ಪರ್ಧೆಯನ್ನು 23.43 ಸೆಕೆಂಡ್‍ಗಳಲ್ಲಿ ಪೂರ್ಣಗೊಳಿಸಿ ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದ್ದರು.

    4. ಜುಲೈ 18ರಂದು ಜೆಕ್ ರಿಪಬ್ಲಿಕ್‍ನಲ್ಲಿ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ಓಟವನ್ನು 23.25 ಸೆಕೆಂಡ್‍ನಲ್ಲಿ ಪೂರ್ಣಗೊಳಿಸುವ ಮೂಲಕ ನಾಲ್ಕನೇ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು.

    5. ಈಗ ಜುಲೈ 20ರಂದು 400 ಮೀಟರ್ ಓಟವನ್ನು 52.09 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ತಮ್ಮ ಐದನೇ ಚಿನ್ನದ ಪದಕವನ್ನು ಗಳಿಸಿದ್ದಾರೆ.