ಬೆಂಗಳೂರು: ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು. ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಪಾತ್ರಗಳನ್ನು ನಿಭಾಯಿಸುತ್ತಾರೆ. ಆ ಎಲ್ಲಾ ಪಾತ್ರಗಳನ್ನು ಅವರು ಅಚ್ಚುಕಟ್ಟಾಗಿ ನಿರ್ವಸುತ್ತಾರೆ ಎಂದು ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ವಿಶ್ವ ಮಹಿಳಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದರು.
ಈ ಒಂದು ದಿನಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನು ಮೀಸಲಿಡಬಾರದು. ಪ್ರತಿನಿತ್ಯ ಅವರ ದಿನವನ್ನ ಸಂಭ್ರಮಿಸಬೇಕು. ನಾನು ಕೂಡ ಈ ಮಟ್ಟಕ್ಕೆ ಬೆಳೆಯಲು ನನ್ನ ಜೀವನದಲ್ಲಿರುವ ನನ್ನ ತಾಯಿ, ನನ್ನ ಮಡದಿ ಹಾಗೂ ನನ್ನ ಮಗಳು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದರು.
ಬನಶಂಕರಿಯ ಫಿಡಿಲಿಟಿಸ್ ಸಂಸ್ಥೆಯ ಪುರುಷರು ಮಹಿಳೆಯರನ್ನು ಕಛೇರಿಯೊಳಗೆ ವಿಭಿನ್ನವಾಗಿ ಸ್ವಾಗತಿಸಲಾಯಿತು. ಪ್ರತಿಯೊಬ್ಬ ಮಹಿಳಾ ಉದ್ಯೋಗಿಗಳನ್ನು ಕುದುರೆ ಸಾರೋಟಿನ ಮೂಲಕ ಸ್ವಾಗತಿಸಿದ್ದು, ಮಹಿಳೆಯರು ಪಲ್ಲಕ್ಕಿಯ ಮೇಲೆ ಕುಳಿತು ಆಗಮಿಸುತ್ತಿದ್ದಂತೆ ಪುರುಷರು ಡೋಲು ಬಾರಿಸಿ, ಕುಣಿದು ಕುಪ್ಪಳಿಸಿ ಮಹಿಳೆಯರನ್ನು ಕಛೇರಿಗೆ ಬರ ಮಾಡಿಕೊಂಡರು. ಇದನ್ನೂ ಓದಿ: ಮತ್ತೆ 4 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಿದ್ದಾರಾ ವಿಶಾಲ್ ಗಾರ್ಗ್?
ಸಂಸ್ಥೆಯ ಮಹಿಳೆಯರು ಶ್ವೇತ ವರ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದು, ಅವರಿಗಾಗಿಯೇ ರ್ಯಾಂಪ್ ವಾಕ್ ಆಯೋಜಿಸಲಾಗಿತ್ತು. ರ್ಯಾಂಪ್ ಮೇಲೆ ಮಹಿಳೆಯರು ಹೆಜ್ಜೆ ಹಾಕಿ, ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಿದರು. ಇದನ್ನೂ ಓದಿ: ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ
ಮಹಿಳೆಯ ಹೋರಾಟ ಇಂದು-ನಿನ್ನೆಯದಲ್ಲ. ಸದಾ ತನ್ನ ಹಕ್ಕಿಗಾಗಿ ಮಹಿಳೆ ಕಾದಾಡುತ್ತಿದ್ದಾಳೆ. ಪ್ರಪಂಚ ಇಷ್ಟು ಮುಂದುವರೆದಿದ್ದರೂ ಮಹಿಳೆಗೆ ಸಿಗಬೇಕಾದ ಸ್ಥಾನ ಇನ್ನೂ ಸಂಪೂರ್ಣವಾಗಿ ಸಿಕ್ಕಿಲ್ಲ. ಇಷ್ಟರ ಮಧ್ಯೆಯೂ ತುಳಿತಕ್ಕೊಳಗಾಗುತ್ತಿರುವ, ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗುತ್ತಿರುವ ಅನೇಕ ಮಹಿಳೆಯರು ನಮ್ಮಲ್ಲಿದ್ದಾರೆ. ಅವರಿಗೆ ಧೈರ್ಯ ನೀಡಿ, ಮಹಿಳೆಗೆ ತನ್ನ ಹಕ್ಕಿನ ಪರಿಚಯ ಮಾಡಿಸಿ, ಆಕೆಯನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ, ಆಕೆಯ ಜೀವನವನ್ನು ಸುಂದರ ಸಶಕ್ತಗೊಳಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.
ಬೆಂಗಳೂರು: ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ. ನಿಮಗೆ ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ ಎಂಬುದಕ್ಕೆ ನಿಮ್ಮ ಬಜೆಟ್ ಸಾಕ್ಷಿ. ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಕೆಪಿಸಿಸಿಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನದಂದು ಎಲ್ಲ ಮಹಿಳೆಯರಿಗೆ ಶುಭಾಶಯ ಕೋರುತ್ತೇನೆ. ಜೊತೆಗೆ ಈ ದಿನ ನಿಮಗೆ ಹೊಸ ಆಲೋಚನೆಗಳು ಶುರುವಾಗಲಿ ಎಂದು ಇಚ್ಛಿಸುತ್ತೇನೆ. ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ. ನಾವು ಹೆಣ್ಣು ಕುಟುಂಬದ ಕಣ್ಣು ಎಂದು ಬೇಕಾದಷ್ಟು ಕಾರ್ಯಕ್ರಮ ಆರಂಭಿಸಿದ್ದೆವು. ಇಡೀ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೆವು. ಆದರೆ ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಮಹಿಳೆಯರ ಅಭಿವೃದ್ಧಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದರು. ಮಹಿಳೆಯರಿಗೆ 2 ಲಕ್ಷದವರೆಗೂ ಸಾಲ, ಬಡ ಮಹಿಳೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಎಂಬ ಭರವಸೆಗಳನ್ನು ನೀಡಿದ್ದರು. 3 ಗ್ರಾಂ ತಾಳಿ, 25 ಸಾವಿರ ಹಣ ನೀಡುವುದಾಗಿ ಹೇಳಿದ್ದರು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ
ಮುಖ್ಯಮಂತ್ರಿಗಳೇ ನಿಮ್ಮ ಬಜೆಟ್ ಬಂದಾಯ್ತು, ನೀವು ವಿಫಲವಾಗಿಯಾಯ್ತು. ನೀವು ಕ್ಷಮಾಪಣೆ ಕೇಳುವುದು ಬೇಡ. ನಿಮಗೆ ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ ಎಂಬುದಕ್ಕೆ ನಿಮ್ಮ ಬಜೆಟ್ ಸಾಕ್ಷಿ. ಬಿಜೆಪಿ ಸರ್ಕಾರ ಈಗಾಗಲೇ 3 ಬಜೆಟ್ ಮಂಡಿಸಿದ್ದು, ಈ ಬಜೆಟ್ ಚುನಾವಣೆ ಬಜೆಟ್ ಆಗಿದೆ. ಈ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ. ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಹೊಸ ಹೆಜ್ಜೆ ಇಟ್ಟಿದ್ದು, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದೇಶದಲ್ಲೇ ದೊಡ್ಡ ಪರಿವರ್ತನಾ ಹೆಜ್ಜೆ ಇಟ್ಟಿದ್ದಾರೆ. ಅವರ ತಂದೆ ರಾಜೀವ್ ಗಾಂಧಿ ಅವರು ಮಹಿಳೆಯರಿಗೆ ಮೀಸಲಾತಿಯಂತಹ ಕ್ರಾಂತಿಕಾರಿ ಬದಲಾವಣೆಗೆ ಪ್ರಯತ್ನ ಮಾಡಿದ್ದರು. ನಾವು ನಮ್ಮ ಪ್ರಣಾಳಿಕೆಯಲ್ಲಿ ಶೇ.33 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಹೇಳಿದ್ದು, ರಾಜ್ಯಸಭೆಯಲ್ಲಿ ಪಾಸ್ ಆಗಿ ಲೋಕಸಭೆಯಲ್ಲಿ ಬಿಜೆಪಿ ಇನ್ನು ಕಾರ್ಯರೂಪಕ್ಕೆ ತಂದಿಲ್ಲ. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ
ಮಹಿಳೆಯರಿಗೆ ಪುರುಷರಿಗೆ ಸಮಾನವಾಗಿ ಅವಕಾಶ ನೀಡಬೇಕು ಎಂದು ಧ್ವನಿ ಎತ್ತಿರುವ ಈ ಸಂದರ್ಭದಲ್ಲಿ ಪಕ್ಷ ಹಾಗೂ ರಾಜ್ಯದ ಪರವಾಗಿ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ನಮ್ಮ ಪಕ್ಷದ ವತಿಯಿಂದ ಪಕ್ಷದ ಕಾರ್ಯಕರ್ತರಲ್ಲದವರಿಗೆ ಒಂದು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ 3 ನಿಮಿಷ ವೀಡಿಯೋ ಹಾಕಿ, ಮಹಿಳೆ ಯಾವ ರೀತಿ ಹೋರಾಟ ಮಾಡಬಲ್ಲಳು ಎಂಬ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದು ಮುಕ್ತ ಸ್ಪರ್ಧೆಯಾಗಿದ್ದು, ನಾನು ಕೂಡ ಈ ವಿಚಾರವಾಗಿ ವೀಡಿಯೋ ಮಾಡಿಸಿ, ಬೇರೆಯವರು ಮಾಡುವಂತೆ ಮನವಿ ಮಾಡುತ್ತೇನೆ. ಅತ್ಯುತ್ತಮ ವೀಡಿಯೋಗಳಿಗೆ ಬಹುಮಾನ ಘೋಷಣೆ ಬಗ್ಗೆಯೂ ಚಿಂತನೆ ನಡೆಸುತ್ತೇನೆ.
ಮುಂದಿನ ದಿನಗಳಲ್ಲಿ ನಮಗೆ ಒಂದು ಅವಕಾಶ ಮಾಡಿಕೊಡಿ ಎಂದು ರಾಜ್ಯದ ಎಲ್ಲ ತಾಯಂದಿರು, ಸೋದರಿಯರಿಗೆ ಮನವಿ ಮಾಡುತ್ತೇನೆ. ನಿಮ್ಮ ವಿಚಾರಗಳನ್ನು ನಮಗೆ ಕೊಡಿ, ನಾವು ಅವುಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಿಕೊಂಡು ಜನರ ಮುಂದೆ ಹೋಗಲು ಇಚ್ಛಿಸುತ್ತೇವೆ. ನಾವು “ನಾ ನಾಯಕಿ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಆದಷ್ಟು ಬೇಗ ನಾವು ಈ ಕಾರ್ಯಕ್ರಮ ಉದ್ಘಾಟನೆ ಮಾಡುತ್ತೇವೆ. ಸದಸ್ಯತ್ವ ಅಭಿಯಾನದ ನಂತರ ನಾವು ಇದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೆ ಕಡ್ಡಾಯವಾಗಿ ನೀಡಬೇಕು: ಮುರುಗೇಶ್ ನಿರಾಣಿ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಪಬ್ಲಿಕ್ ಟಿವಿ 10 ಮಂದಿ ಸಾಧಕಿಯರಿಗೆ ನಾರಿ ನಾರಾಯಣಿ ಪಬ್ಲಿಕ್ ಹೀರೋ ವಿಶೇಷ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಿದೆ.
ಯವನಿಕಾ ಸಭಾಂಗಣದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ ಹಾಗೂ ಜಿಜೆಎಂ ಪ್ರೊಜೆಕ್ಟ್ ಮುಖ್ಯಸ್ಥ ಗುರುಜಲ ಜಗನ್ಮೋಹನ್ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ ಮಾತನಾಡಿ, ಈ ವರ್ಷದಿಂದ ಪಬ್ಲಿಕ್ ಟಿವಿಯಿಂದ ಮೊದಲ ಬಾರಿಗೆ ಪ್ರಶಸ್ತಿ ನೀಡಲಾಗುತ್ತದೆ. ಸಾರ್ವಜನಿಕ ಸೇವೆಯಲ್ಲಿ ತೊಡಗಿರುವವರ ಜೊತೆ ನಾವು ಎಂದಿಗೂ ಇರುತ್ತೇವೆ. ಜನರಿಗೆ ಒಳ್ಳೆಯದನ್ನು ಮಾಡಲು ನೀವು ನಮ್ಮನ್ನು ಬಳಸಿಕೊಳ್ಳಿ ಎಂದು ಹೇಳಿದರು. ಇದನ್ನೂ ಓದಿ: ಜನಮನ ಸೆಳೆದ ಡರ್ಟ್ ಟ್ರ್ಯಾಕ್ ಮೋಟಾರ್ ಸೈಕಲ್ ರೇಸ್
ಜಿಜೆಎಂ ಪೊಜೆಕ್ಟ್ ಮುಖ್ಯಸ್ಥ ಗುರುಜಲ ಜಗನ್ಮೋಹನ್ ಮಾತನಾಡಿ, ಮಹಿಳೆಯರು ನಮ್ಮ ಜೀವನದಲ್ಲಿ ತಾಯಿ, ಮಡದಿ, ಮಗಳಾಗಿ ಮುಖ್ಯಪಾತ್ರವನ್ನು ವಹಿಸುತ್ತಾರೆ. ಇಂದಿನ ದಿನಗಳಲ್ಲಿ ಮಹಿಳೆಯರು ಪುರುಷರಿಗೆ ಸಮಾನರಾಗಿದ್ದಾರೆ ಎಂದರು.
ತೇಜಸ್ವಿನಿ ಅನಂತ್ಕುಮಾರ್:
ಹಸಿರಿನ ಪ್ರೀತಿ ಜೊತೆಗೆ ಹಸಿದವರಿಗೆ ಅನ್ನ ನೀಡುವುದನ್ನೇ ಬದುಕಿಡೀ ಕಾಯಕ ಮಾಡಿಕೊಂಡು, ಅರೇ ಹೀಗೂ ನಿಸ್ವಾರ್ಥವಾಗಿ ಜನಸೇವೆ ಮಾಡಬಹುದಾ ಎಂಬ ಅಚ್ಚರಿಯ ವ್ಯಕ್ತಿತ್ವದವರು ತೇಜಸ್ವಿನಿ ಅನಂತ್ಕುಮಾರ್. ಕೇಂದ್ರ ಮಾಜಿ ಸಚಿವ ದಿವಂಗತ ಅನಂತ್ಕುಮಾರ್ ಅವರ ಪ್ರೀತಿಯ ಅದಮ್ಯ ಚೇತನ ಕನಸಿಗೆ ಜೀವ ತುಂಬಿ ಕರುನಾಡಿನ ಹೆಮ್ಮೆಯ ಮಗಳಾಗಿದ್ದಾರೆ. ತೇಜಸ್ವಿನಿ ಅವರದ್ದು ಬಹುಮಖ ವ್ಯಕ್ತಿತ್ವ. ಶಿಕ್ಷಣದಿಂದ ಇಂಜಿನಿಯರ್. ಕೆಲಕಾಲ ವಿಜ್ಞಾನಿಯಾಗಿದ್ದವರು. 1993 – 1997ರ ನಡುವೆ ತೇಜಸ್ ಲಘು ಯುದ್ಧ ವಿಮಾನದ ಯೋಜನೆಯಲ್ಲಿ ಡಾ ಎಪಿಜಿ ಅಬ್ದುಲ್ ಕಲಾಂ ಅವರ ನೇತೃತ್ವದ ತಂಡದಲ್ಲಿ ತೇಜಸ್ವಿನಿಯವರು ವಿಜ್ಞಾನಿಯಾಗಿ ಸೇವೆಸಲ್ಲಿದ್ದರು. ಆನಂತರ ಸೇವೆಯೇ ಪರಮ ಧರ್ಮ ಎಂಬ ತತ್ವಾದರ್ಶದತ್ತ ವಾಲಿದ ಇವರು, 1998ರಲ್ಲಿ ಅನಂತ ಕುಮಾರ್ ಅವರ ತಾಯಿಯ ಸ್ಮರಣಾರ್ಥ ಅದಮ್ಯ ಚೇತನ ಸಂಸ್ಥೆ ಪ್ರಾರಂಭಿಸಿದರು.
ಲಕ್ಷಾಂತರ ಹಸಿದ ಮಕ್ಕಳ ಹೊಟ್ಟೆ ತುಂಬಿಸಿ ನಿತ್ಯವೂ ಪೌಷ್ಟಿಕ ಭೋಜನ ಉಣಬಡಿಸುತ್ತಿದ್ದಾರೆ. ಅನ್ನ, ಅಕ್ಷರ, ಆರೋಗ್ಯದ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪರಿಸರ ಸಮಸ್ಯೆಗಳ ಕುರಿತು ತೇಜಸ್ವಿನಿ ಒಂದಿಲ್ಲೊಂದು ಕಾರ್ಯಕ್ರಮ ಹಮ್ಮಿಕೊಳ್ಳುತ್ತಲೇ ಇರುತ್ತಾರೆ. ಇನ್ನು ಸಸಿ ನೆಟ್ಟು, ಅದರ ಲಾಲನೆ ಪಾಲನೆ ವಿಚಾರದಲ್ಲಿ ತೇಜಸ್ವಿನಿ ಹಸಿರ ಕ್ರಾಂತಿಯನ್ನೇ ಮಾಡಿದ್ದಾರೆ. ಪ್ರತಿ ವಾರಾಂತ್ಯ ಹಸಿರು ಭಾರತದಡಿಯಲ್ಲಿ ಒಂದಿಷ್ಟು ಯುವಪಡೆಗಳ ಸಹಾಯದೊಂದಿಗೆ ಇದುವರೆಗೆ ಮೂರರಿಂದ ನಾಲ್ಕು ಲಕ್ಷ ಗಿಡಿ ನೆಟ್ಟಿದ್ದಾರೆ. ಬೆಂಗಳೂರಿನ ಜೊತೆಗೆ ಹುಬ್ಬಳ್ಳಿ, ರಾಯಚೂರು, ಬಳ್ಳಾರಿ, ಗುಲ್ಬರ್ಗದಲ್ಲೂ ಹಸಿರ ಕ್ರಾಂತಿ ಮುಂದುವರೆದಿದೆ. ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಬೆಳಗಾವಿಗೆ ಭೇಟಿ ನೀಡಿದ ರಾಜ್ಯಪಾಲರು
ಡಾ. ಸಬಿತಾ ರಾಮಮೂರ್ತಿ:
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಅಂತಾರೆ. ಈ ಹೆಣ್ಮಗಳು ಶೈಕ್ಷಣಿಕ ಜಗತ್ತಿನಲ್ಲಿ ಮೂಡಿಸಿರುವ ಛಾಪು ಎಲ್ಲರೂ ತಲೆದೂಗುವಂಥದ್ದು. ಸಿಎಂಆರ್ ಯುನಿವರ್ಸಿಟಿ ಇಂದು ಬೆಂಗಳೂರಿನಲ್ಲಿ ಇಷ್ಟು ಪ್ರಸಿದ್ಧಿ ಗಳಿಸುವುದರ ಹಿಂದಿರುವ ಅಗಾಧ ಶಕ್ತಿಯೇ ಸಿಎಂಆರ್ ವಿವಿಯ ಕುಲಪತಿ ಮತ್ತು ಸಿಎಂಆರ್ ಜ್ಞಾನಧಾರ ಟ್ರಸ್ಟಿನ ಅಧ್ಯಕ್ಷೆಯಾದ ಡಾ.ಸಬಿತಾ ರಾಮಮೂರ್ತಿ.
ಐಪಿಎಸ್ ಅಧಿಕಾರಿಯ ಮಡದಿಯಾಗಿ, ಸೊಗಸಾದ ಆರಾಮದ ಜೀವನ ನಡೆಸುವ ಅವಕಾಶವಿದ್ದರೂ, ಶಿಕ್ಷಣ ಜಗತ್ತಿನತ್ತ ಇದ್ದ ಸೆಳೆತ ಸಬಿತಾರನ್ನು ಸೆಳೆಯದೆ ಬಿಡಲಿಲ್ಲ. 1990ರಲ್ಲಿ ಸಿಬಿಎಸ್ಸಿಗೆ ಸಂಯೋಜಿತವಾದ ಶಾಲೆಯಿಂದ ಶಿಕ್ಷಣ ಕ್ಷೇತ್ರದ ಮಹಾಸಾಗರಕ್ಕೆ ಧುಮುಕಿದ ಡಾ.ಸಬಿತಾ ರಾಮಮೂರ್ತಿ ಅವರು, ಇವತ್ತಿಗೆ ಸಿಎಂಆರ್ ಎಂಬ ಬೃಹತ್ ವಿದ್ಯಾನೌಕೆಯನ್ನು ಅದ್ಭುತವಾಗಿ ಸಾಗಿಸುತ್ತಿರುವ ಚತುರ ನಾವಿಕರೆನಿಸಿದ್ದಾರೆ.
ಸಿಎಂಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್ನ ರಚನೆಯಿಂದ ಶುರುವಾಗಿ ಒಟ್ಟು ಬರೋಬ್ಬರಿ 18 ಶಿಕ್ಷಣ ಸಂಸ್ಥೆಗಳು ಸಬಿತಾ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ. ಸಿಎಂಆರ್ ವಿವಿ ಬಗ್ಗೆ ಅಸಂಖ್ಯ ಪೋಷಕರು ಹಾಗೂ ವಿದ್ಯಾರ್ಥಿಗಳ ಹೊಂದಿರುವ ಮೆಚ್ಚುಗೆ ಭಾವವೇ ಇದಕ್ಕೆ ಸಾಕ್ಷಿ.
ಉನ್ನತ ವ್ಯಾಸಂಗದ ಜೊತೆಗೆ ಅತ್ಯುನ್ನತ ತರಬೇತಿ, ಸಂಶೋಧನೆ ಮತ್ತು ಸಲಹಾ ಕೇಂದ್ರಗಳ ಮೂಲಕ ಅಗಣಿತ ವಿದ್ಯಾರ್ಥಿಗಳ ಮನ ಗೆದ್ದ ಸಂಸ್ಥೆಯಿದು. ಸಿಎಂಆರ್ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕಲಿಯುತ್ತಿರುವ 20 ಸಾವಿರ ವಿದ್ಯಾರ್ಥಿಗಳಲ್ಲಿ ಬರೀ ಭಾರತೀಯರಷ್ಟೇ ಅಲ್ಲದೆ, ವಿಶ್ವದ ಸುಮಾರು 60 ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳೂ ಇದ್ದಾರೆ.
ಸಫಲ ನಾಗರತ್ನ:
ವೈದ್ಯಕೀಯ ಜಗತ್ತಿಗೆ ಸವಾಲಾಗಿರುವ ಸೋಂಕೊಂದರ ಪೀಡಿತರಾಗಿದ್ದರೂ, ಅನಾರೋಗ್ಯ ಕಾಡುತ್ತಿದ್ದರೂ, ನೂರಾರು ಯುವತಿಯರ ಬಾಳಿಗೆ ಭರವಸೆಯ ಬದುಕು ಕಟ್ಟಿಕೊಡುತ್ತಿರುವ ಗಟ್ಟಿ ಮಹಿಳೆ ಇವರು. ನೊಂದು ಬೆಂದ ಮಹಿಳೆಯರ ಅಂಧಕಾರಕ್ಕೆ ಬೆಳಕು ಚೆಲ್ಲುತ್ತಿರುವ ನಿಜವಾದ ರತ್ನ ಸಫಲ ನಾಗರತ್ನ.
ತಾವೇ ಸ್ಥಾಪಿಸಿದ ಆಶ್ರಯ ಫೌಂಡೇಶನ್ ಮೂಲಕ ನೂರಾರು ಹೆಚ್ಐವಿ ಭಾದಿತರ ಪಾಲಿಗೆ ಇವರೇ ತಾಯಿ, ತಂದೆ, ಅಕ್ಕ, ತಂಗಿ, ಬಂಧು, ಬಳಗ. ಹೆಚ್ಐವಿ ಪೀಡಿತರು ಹಾಗೂ ಅವರ ಮಕ್ಕಳಿಗೆ ಅನ್ನದಾತೆಯಾಗಿ, ಆಶ್ರಯದಾತೆಯಾಗಿ, ಮಾರ್ಗದರ್ಶಿಯಾಗಿ, ಅವರೆಲ್ಲರಿಗೂ ಆತ್ಮಸ್ಥೈರ್ಯ ತುಂಬುತ್ತಾ ಬದುಕಿಗೆ ದಾರಿದೀಪವಾಗಿದ್ದಾರೆ ನಾಗರತ್ನ.
ಹೆಚ್ಐವಿಯಿಂದ ತಂದೆ – ತಾಯಿ ಕಳೆದುಕೊಂಡವರು ಹಾಗೂ ಪೋಷಕರಿಂದ ಹೆಚ್ಐವಿಗೆ ತುತ್ತಾದವರಿಗೆ ಬದುಕುವ ಭರವಸೆ ತುಂಬುತ್ತಾರೆ. ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯ ಮುಖ್ಯ ಎಂಬುದನ್ನು ಮನದಟ್ಟು ಮಾಡಿಕೊಡುತ್ತಿದ್ದಾರೆ. ಸ್ವಾವಲಂಬಿಯಾಗುವಂತೆ ಪ್ರೇರೆಪಿಸುತ್ತಾರೆ. ಇಂಥ ಅದೆಷ್ಟೋ ಹೆಣ್ಣು ಮಕ್ಕಳ ಕಣ್ಣೀರು ಒರೆಸಿದ ಕರುಣಾಮಾಯಿಯಾಗಿದ್ದಾರೆ.
ಡಾ. ಅಂಜಲಿ ನಿಂಬಾಳ್ಕರ್:
ಖಾನಾಪುರ ಶಾಸಕಿ ಆಗುವುದಕ್ಕಿಂತ ಮೊದಲು ಡಾ.ಅಂಜಲಿ ನಿಂಬಾಳ್ಕರ್ ವೈದ್ಯ ವೃತ್ತಿಯಲ್ಲಿದ್ದವರು. ಜನಸೇವೆಯ ಗುರಿಯೊಂದಿಗೆ ರಾಜಕೀಯ ಕಣಕ್ಕೆ ಧುಮುಕಿದ ಇವರನ್ನು ಮತದಾರರು ಕೈಬಿಡಲಿಲ್ಲ. ಶಾಸಕಿಯಾಗಿ ರಾಜಕೀಯದ ಸವಾಲಿನ ಹಾದಿಯನ್ನು ಸಮರ್ಥವಾಗಿ ನಿಭಾಯಿಸಿ, ಜನಮನ್ನಣೆ ಗಳಿಸಿದ್ದಾರೆ. ರಾಜಕೀಯಕ್ಕೆ ಬರಬೇಕು ಅಂತಾ ತುಡಿತವಿರುವ ಪ್ರತಿ ಮಹಿಳೆಗೂ ಸ್ಫೂರ್ತಿಯಾಗಿ ನಿಲ್ಲಬಲ್ಲ ಹೆಣ್ಣುಮಗಳು ಇವರು. ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂದರ್ಭದಲ್ಲಿ ಸದನದಲ್ಲಿ ಕಣ್ಣಲ್ಲಿ ನೀರು ತುಂಬಿಕೊಂಡೇ ಮಾತಾನಾಡಿದ ಅಂಜಲಿ, ಅತ್ಯಾಚಾರದ ವಿರುದ್ಧ ಕಠಿಣ ಕಾನೂನಿಗಾಗಿ ಧ್ವನಿಯೆತ್ತಿದ್ದರು.
ಇಡೀ ದೇಶಕ್ಕೆ ದೇಶವೇ ಕೊರೊನಾದ ಕಾರ್ಮೋಡದಲ್ಲಿ ಇರುವಾಗ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಅಂಜಲಿ ತಮ್ಮ ಕ್ಷೇತ್ರದಲ್ಲಿ ಓಡಾಡಿದ್ರು. ಸ್ವಂತ ಖರ್ಚಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಕೊಟ್ರು. ಅಷ್ಟೇ ಅಲ್ಲ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುವಾಗ ಸ್ವತಃ ತಾವೇ ಮುಂದೆ ನಿಂತು ಗರ್ಭಿಣಿ ಮಹಿಳೆಯರಿಗೆ ಧೈರ್ಯ ತುಂಬಿ ಲಸಿಕೆ ಹಾಕುತ್ತಿದರು. ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನೀಡಲು ಸರ್ಕಾರ ಹಿಂದೇಟು ಹಾಕಿದಾಗ ಸಂಘರ್ಷದ ಪಾದಯಾತ್ರೆ ಮಾಡಿದರು.
ಡಾ. ಸ್ವಾತಿ ಪ್ರದೀಪ್:
ಜೀವನದಲ್ಲಿ ಮಹತ್ತರ ಸಾಧನೆಗೈಯ್ಯಬೇಕಂದರೆ ಹಳ್ಳಿ ಬಿಟ್ಟು ಸಿಟಿ ಕಡೆ ಮುಖ ಮಾಡ ಬೇಕು ಎನ್ನುವ ಧ್ಯೇಯದಲ್ಲಿ ಬದುಕುತ್ತಿರುವವರು ಹಲವರು. ಆದರೆ ಗ್ರಾಮೀಣ ಪ್ರದೇಶದಲ್ಲೇ ಇದ್ದು, ಗ್ರಾಮೋದ್ಯಮದಲ್ಲೇ ಉದ್ಧಾರವಾಗಿ, ಹಳ್ಳಿಮಂದಿಯ ಮೊಗದಲ್ಲಿ ನಗು ಹಾಗೂ ಲಾಭದ ಸೊಬಗು ಕಂಡವರು ಅಪರೂಪದ ಸಾಧಕಿ ಡಾ.ಸ್ವಾತಿ ಪ್ರದೀಪ್.
ಪತಿಯ ನೆರವಿನೊಂದಿಗೆ ಹೊಸದುರ್ಗದಲ್ಲಿ ಶುರುಮಾಡಿದ ಸದ್ಗುರು ಆಯುರ್ವೇದ ಉತ್ಪನ್ನಗಳು ಮತ್ತು ವಾಸವಿ ಹೆಲ್ತ್ ಕೇರ್ ಪ್ರಾಡಕ್ಟುಗಳು ಇಂದು ಬಹಳ ಹೆಸರುವಾಸಿ. ವೈದ್ಯೆಯಾಗಿ ಕೈತುಂಬಾ ಕಾಸು ಕಾಣುತ್ತಾ ಬದುಕುವ ಮಾದರಿಗೆ ಬೆನ್ನುತೋರಿ, ನೂರಾರು ಮಂದಿ ಗ್ರಾಮೀಣ ಮಹಿಳೆಯರಿಗೆ ಬೆನ್ನೆಲುಬಾಗಬೇಕೆನ್ನೋ ಅವ್ರ ನಿರ್ಧಾರ ಇವತ್ತು ಸತ್ಫಲ ಕೊಡುತ್ತಿದೆ.
ವೈದ್ಯೆಯಾಗಿ, ಉದ್ಯಮಿಯಾಗಿ ನೂರಾರು ಮನೆಬೆಳಗಿದ ಈ ಛಲವಂತೆಗೆ ಹೊಸದುರ್ಗ ನಗರದ ಪುರಸಭಾ ಸದಸ್ಯ ಸ್ಥಾನ ಸಲೀಸಾಗಿ ದಕ್ಕಿತು. ಅಧಿಕಾರ ಸಿಕ್ಕಿತೆಂದು ಸುಮ್ಮನೆ ಕೂರುವ ಜಾಯಮಾನ ಇವರದ್ದಲ್ಲ. ಈಗಾಗಲೇ ನಾಲ್ಕೈದು ಕಡೆ ಸ್ವಂತ ಖರ್ಚಿನಲ್ಲೇ ಶುದ್ಧ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದಾರೆ. ಅಲ್ಲದೇ ಕೆಲ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ ಡಾ.ಸ್ವಾತಿ ಪ್ರದೀಪ್.
ಏಷ್ಯಾ ಖಂಡದಲ್ಲಿಯೇ ಪ್ರಪ್ರಥಮವಾಗಿ ವಿದ್ಯುತ್ ಇಲ್ಲದಿದ್ದರೂ ಯುಪಿಎಸ್ ಮೂಲಕ ರಾತ್ರಿಯೆಲ್ಲ ಬೆಳಗುವ ಬೀದಿ ದೀಪಗಳನ್ನು ಅಳವಡಿಸಿದ ಸಾಧನೆಯ ಗರಿ ಡಾ.ಸ್ವಾತಿಯವರ ಮುಡಿಗೇರಿದೆ. ಒಟ್ಟಿನಲ್ಲಿ ಸ್ಟೆಥಾಸ್ಕೋಪ್ ಹಿಡಿದು ರೋಗಿಯ ಎದೆಬಡಿತ ಕೇಳಿ ಮದ್ದು ಕೊಡಬೇಕಿದ್ದ ಕೈಗಳು, ಇಂದು ಅದೆಷ್ಟೋ ಮನೆಯ ದೀಪ ಬೆಳಗಲು ಕಾರಣವಾಗಿವೆ.
ಮಂಗಳ ಮರಕಲೆ:
ಅಂಗವೈಕಲ್ಯ ಶಾಪವಲ್ಲ. ಸಾಧನೆಗೆ ಅಂಗವೈಕಲ್ಯ ಅಡ್ಡಿಯಲ್ಲ ಎಂಬ ಮಾತಿಗೆ ಸಾಧಕಿ ಮಂಗಲಾ ಮರಕಲೆ ಅತ್ಯುತ್ತಮ ಸಾಕ್ಷಿ. ಬೀದರ್ ತಾಲೂಕು ಅಲಿಯಂಬರ್ ಗ್ರಾಮದ ಮಂಗಲಾ ಮರಕಲೆ ಎಂಬ ವಿಶೇಷಚೇತನ ಮಹಿಳೆಯ ಯೋಶೋಗಾಥೆ ಇದು. ತನ್ನಂತೆ ಯಾವ ಮಹಿಳೆಯೂ ಸಮಾಜದಲ್ಲಿ ಸಂಕಷ್ಟ ಅನುಭವಿಸಬಾರದು. ನೊಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬ ಧ್ಯೇಯೋದ್ದೇಶದೊಂದಿಗೆ ಇವರು ಹಗಲಿರುಳು ಶ್ರಮಿಸುತ್ತಿದ್ದಾರೆ.
ವಿಶೇಷಚೇತನ ಮಹಿಳೆಯರು, ವಿಧವೆಯರು, ಶೋಷಿತ ಮಹಿಳೆಯರು ಹಾಗೂ ಬಡ ವಿದ್ಯಾರ್ಥಿನಿಯರಿಗೆ ಟೈಲರಿಂಗ್, ಕಂಪ್ಯೂಟರ್, ಬ್ಯೂಟಿ ಪಾರ್ಲರ್ ಬಗ್ಗೆ ಉಚಿತ ತರಬೇತಿ ನೀಡುತ್ತಿದ್ದಾರೆ. ಈವರೆಗೆ ಅಂದಾಜು 5 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ತರಬೇತಿ ನೀಡಿದ್ದಾರೆ. ಯಾವುದೇ ಫಲಾಪೇಕ್ಷೆ ಬಯಸದೇ 10 ವರ್ಷಗಳಿಂದ ಈ ಕಾಯಕದಲ್ಲಿ ತೊಡಗಿದ್ದಾರೆ.
ನೊಂದ ಮಹಿಳೆಯರಿಗಾಗಿಯೇ ಇವರು ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಮಹಿಳೆಯರಲ್ಲಿ ಆರ್ಥಿಕ ಬಲ ತುಂಬಿ, ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ.
ಆಶಾ:
ಸಾಧನೆಗೆ ವಯಸ್ಸು ಅಥವಾ ಗಂಡು ಹೆಣ್ಣೆಂಬ ಬೇಧ ಇಲ್ಲವೇ ಇಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಸಾಹಸಿ ಉದ್ಯಮಿ. ಇಂದು ಕರ್ನಾಟಕದೊಳಗಷ್ಟೇ ಅಲ್ಲದೇ, ಹೊರರಾಜ್ಯಗಳ ಮನೆಗಳಲ್ಲೂ ಸ್ವಚ್ಛತೆ ಮತ್ತು ತಾಜಾತನದ ಪರಿಮಳ ಬೀರುವಂತೆ ಮಾಡಿ ಯಶಸ್ವಿ ಮಹಿಳಾ ಉದ್ಯಮಿ ಎನಿಸಿಕೊಂಡಿದ್ದಾರೆ. ಆಶಾ ಎನ್.ಆರ್. ವಿಜ್ಞಾನ ಪದವೀಧರೆಯಾದ ಅವರು, 1994ರಲ್ಲಿ ದೊಡ್ಡ ಸಾಹಸಕ್ಕೆ ಕೈ ಹಾಕೇಬಿಟ್ರು. ಆಗ ಶುರುವಾಗಿದ್ದೇ. ಆಶಾ ಕೆಮಿಕಲ್ಸ್ ಫಾರ್ ಮ್ಯಾನು ಫ್ಯಾಕ್ಚರಿಂಗ್ ಆಫ್ ಹೌಸ್ ಹೋಲ್ಡ್ ಕ್ಲೀನಿಂಗ್ ಪ್ರಾಡಕ್ಟ್ಸ್ ಸಂಸ್ಥೆ.
ರಾಜ್ಯದಲ್ಲಿ ಮನೆ ಸ್ವಚ್ಛತಾ ಉತ್ಪನ್ನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ತಮ್ಮ ಸಂಸ್ಥೆಯಿಂದ ಸದ್ಯ 16 ಉತ್ಪನ್ನಗಳನ್ನು ಉತ್ಪಾದಿಸುತ್ತಿದ್ದು, 60 ಮಂದಿ ಸಿಬ್ಬಂದಿಯಿದ್ದಾರೆ. ದಕ್ಷಿಣ ಭಾರತಾದ್ಯಂತ ಸರಿಸುಮಾರು 200 ಮಂದಿ ಹಂಚಿಕೆದಾರರ ನೆರವಿಂದ ಸಂಸ್ಥೆಯ ಉತ್ಪನ್ನಗಳು ಮನೆ ಮಾತಾಗಿವೆ. ಇಷ್ಟೆಲ್ಲಾ ಸಾಧನಗೈದಿರೋ ಆಶಾ ಅವರು ತಮ್ಮ ಯಶೋಗಾಥೆಯಿಂದ ಪ್ರೇರಿತರಾದ ಮಹಿಳೆಯರಿಗೆ ಪ್ರೋತ್ಸಾಹಿಸಲು ತರಬೇತಿ ಮತ್ತು ಸಮಾಲೋಚನೆ ನಡೆಸುತ್ತಾರೆ.
ಸಾಲದ್ದಕ್ಕೆ ಕಾಲೇಜು ಮಟ್ಟದಲ್ಲೇ ವಿದ್ಯಾರ್ಥಿನಿಯರಲ್ಲಿ ಉದ್ಯಮಗಳಲ್ಲಿ ಮಹಿಳೆಯರು ಮುನ್ನುಗ್ಗಬೇಕೆಂಬ ಪ್ರೇರಣೆ ಹುಟ್ಟಿಸಲು ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮಗಳಲ್ಲೂ ಸಕ್ರಿಯರಾಗಿ ಭಾಗವಹಿಸುತ್ತಾರೆ. ತಮ್ಮ ಅನುಭವದ ಬುತ್ತಿ ಬಿಚ್ಚಿ, ಮುಂದಿನ ಪೀಳಿಗೆಗೂ ಉದ್ಯಮ ಜಗತ್ತಿನ ಅವಲೋಕನ ಮಾಡಿಸುತ್ತಾರೆ.
ಗಂಗಾ ಲಕ್ಷ್ಮಮ್ಮ:
ಗೌರಿಬಿದನೂರು ತಾಲೂಕು ಕಲ್ಲೂಡಿ ಗ್ರಾಮದ ಗಂಗಲಕ್ಷ್ಮಮ್ಮ ಹೆಚ್ಚು ಓದಿದವರಲ್ಲ. ಹಾಗಂತ ಯಾವುದರಲ್ಲೂ ಹಿಂದೆ ಬಿದ್ದಿಲ್ಲ. ರಾಜಕೀಯದಲ್ಲೂ ಸೈ ಎನಿಸಿಕೊಂಡ ಇವರು, 1989ರಲ್ಲೇ ಮಂಡಲ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯೂ ಆದರು. ಗ್ರಾಮೀಣ ಮಹಿಳೆಯರು ಹಣಕಾಸು ವಿಚಾರದಲ್ಲಿ ಸಬಲರಾಗಬೇಕು ಎನ್ನುವುದು ಇವರ ಕನಸಾಗಿತ್ತು. ಅಂದು ಕಂಡ ಸ್ವಾವಲಂಬಿ ಕನಸನ್ನು ಇಂದು ನನಸು ಮಾಡಿದ್ದಾರೆ ಗಂಗಲಕ್ಷ್ಮಮ್ಮ. ಕೆಲ ವರ್ಷಗಳ ಹಿಂದೆ ವಿಶ್ವ ಯೋಜನೆಯಡಿ ತರಬೇತಿ ಪಡೆದ ಗಂಗಲಕ್ಷ್ಮಮ್ಮ. ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ಹಾಗೂ ಮಸಾಲೆ ಪದಾರ್ಥ ಸಿದ್ಧಪಡಿಸಿ ಮಾರಾಟದಲ್ಲಿ ತೊಡಗಿಸಿಕೊಂಡರು. ಈ ಜೀವನೋಪಾಯ ಕಾಯಕವನ್ನು ಗ್ರಾಮದ ಮಹಿಳೆಯರಿಗೂ ಕಲಿಸಿಕೊಟ್ಟರು.
ಇದರ ಫಲವಾಗಿ ಇಂದು ಕಲ್ಲೂಡಿ ಗ್ರಾಮದ 400ಕ್ಕೂ ಹೆಚ್ಚು ಕುಟುಂಬದ ಮಹಿಳೆಯರು ಇದೆ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಇವರೆಲ್ಲರಿಗೂ ಬೆನ್ನೆಲುಬಾಗಿ ಗಂಗಲಕ್ಷ್ಮಮ್ಮ ನಿಂತಿದ್ದಾರೆ. ಇವರು ತಯಾರಿಸುವ ಹಪ್ಪಳವು ಕಲ್ಲೂಡಿ ಹಪ್ಪಳ ಎಂದೇ ಖ್ಯಾತಿ ಪಡೆದಿದೆ. ಅಲ್ಲದೇ, ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ಸಂಘವನ್ನೂ ಪ್ರಾರಂಭಿಸಿದ್ದಾರೆ. ಈ ಸಂಘದಲ್ಲಿ ಕೋಟ್ಯಂತರ ರೂಪಾಯಿಯಷ್ಟು ವ್ಯವಹಾರ ನಡೆಯುತ್ತಿದೆ. ಸೇವಾ ಸಾಧಕಿ ಗಂಗಲಕ್ಷ್ಮಮ್ಮ ಈವರೆಗೆ ಅನೇಕ ಗೌರವ ಸನ್ಮಾನಗಳಿಗೆ ಭಾಜನರಾಗಿದ್ದಾರೆ.
ದಿನ ಬೆಳಗಾದರೆ ನಿಮ್ಮ ಮತ್ತು ಮನೆಯ ಹಿರಿಯರ ಆರೋಗ್ಯದ ಗುಟ್ಟಾಗಿ ಮನೆಮಾತಾಗಿರುವ ಅಮೃತ್ ನೋನಿ ಬಗ್ಗೆ ಕೇಳದವರಿಲ್ಲ. ಅಮೃತ್ ನೋನಿಯನ್ನು ಆರ್ಡರ್ ಮಾಡಿದಾಕ್ಷಣ ತ್ವರಿತವಾಗಿ ನಿಮ್ಮ ಮನೆ ತಲುಪಿಸೋ ಪವಾಡಗಿತ್ತಿಯೇ ಈ ಮಂಗಳಾಂಬಿಕೆಯವರು. ತಮ್ಮ ಚಾಣಾಕ್ಷ ವ್ಯವಹಾರಿಕೆಯಿಂದ ಅಮೃತ್ ನೋನಿ ಉತ್ಪನ್ನಗಳ ಮಾರ್ಕೆಟಿಂಗ್ ಮತ್ತು ಡಿಸ್ಟ್ರಿಬ್ಯೂಷನ್ ಅನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ.
2017ರಲ್ಲಿ ರಾಮನಗರದಲ್ಲಿ ಓಂ ಶ್ರೀ ಎಂಟರ್ ಪ್ರೈಸಸ್ ಸಂಸ್ಥೆಯನ್ನು ಸ್ಥಾಪಿಸಿ, ಆ ಮೂಲಕ ಅಮೃತ್ ನೋನಿಯ ವಿತರಣೆ ಶುರುಮಾಡಿದರು. ಇವತ್ತು ಹಳ್ಳಿ ಹಳ್ಳಿಗಳಲ್ಲೂ ಅಮೃತ್ ನೋನಿ ಸಿಗುತ್ತೆ. ಈ ಮ್ಯಾಜಿಕಲ್ ವಿತರಣೆಯ ಹಿಂದೆ ಮಂಗಳಾಂಬಿಕೆ ಅಂಡ್ ಟೀಮಿನ ಅಪರಿಮಿತ ಶ್ರಮವಿದೆ.
ಪುಟ್ಟ ಸಂಸ್ಥೆಯೊಂದು ಇಂದು ನೂರೈವತ್ತು ಮಂದಿಗೆ ಉದ್ಯೋಗ ಕೊಟ್ಟಿದೆ. ಅವರಲ್ಲಿ ಹೆಂಗಳೆಯರೇ 105 ಮಂದಿ. ದಿನೇ ದಿನೇ ವ್ಯವಹಾರ ವಿಸ್ತರಿಸುತ್ತಿರುವಂತೇ ಮಂಗಳಾಂಬಿಕೆಯವರ ಹೃದಯವಂತಿಕೆಯೂ ವಿಶಾಲವಾಗುತ್ತಿದೆ. ತಮ್ಮ ಗಳಿಕೆಯಲ್ಲಿ ಶ್ರೀಗುರು ಯತೀಂದ್ರ ಚಾರಿಟಬಲ್ ಟ್ರಸ್ಟನ್ನು ಸ್ಥಾಪಿಸಿದ್ದು ಅಸ್ವಸ್ಥ ಮಕ್ಕಳ ಶಸ್ತ್ರಚಿಕಿತ್ಸೆ, ಬಡಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿದ್ದಾರೆ. ಹೊಂಗಿರಣ ಚಾರಿಟಬಲ್ ಟ್ರಸ್ಟಿನ ಮೂಲಕ ಬಡಮಕ್ಕಳಿಗೆ ಊಟಕ್ಕೆ ನೆರವು, ಪ್ರೇರಣ ರಿಸೋರ್ಟ್ ಟ್ರಸ್ಟಿಗೆ ಅಗತ್ಯ ಔಷಧಗಳ ಪೂರೈಕೆಗೂ ಹೆಗಲಾಗಿದ್ದಾರೆ. ತನ್ನ ಯಶಸ್ಸಿನ ಜೊತೆಗೆ ನೂರಾರು ಮಹಿಳೆಯರಿಗೂ ದುಡಿಮೆಗೊಂದು ಮೂಲ ಕಂಡುಕೊಟ್ಟ ಸಂತೃಪ್ತಿ ಮಂಗಳಾಂಬಿಕೆ ಅವರದ್ದು.
ರಾಮಕ್ಕ:
ಇವರು ಒಂದಕ್ಷರವೂ ಕಲಿತಿಲ್ಲ, ಆದರೆ ಅಂಧಕಾರದಲ್ಲಿದ್ದ ನೂರಾರು ಮಕ್ಕಳ ಭವಿಷ್ಯಕ್ಕೆ ಬೆಳಕಾಗಿದ್ದಾರೆ. ಇವರಿಗೆ ಓದು ಬರಹ ಗೊತ್ತಿಲ್ಲ ನಿಜ. ಆದರೆ ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ನೆರವಾಗುತ್ತಿದ್ದಾರೆ. ತುಮಕೂರು ಭಾಗದಲ್ಲಿ ಇವರ ಹೆಸರು ಮನೆಮಾತು. ಇವರೇ ಅಪರೂಪದ ಸಾಧಕಿ ರಾಮಕ್ಕ.
ರಾಮಕ್ಕ ತುಮಕೂರು ನಗರದ ಹಂದಿಜೋಗರ ಕಾಲೋನಿಯ ನಿವಾಸಿ. ಇಂದು ರಾಮಕ್ಕ ಸಮಾಜ ಸೇವೆಯಿಂದ ದೀನ ದಲಿತರ ಆಶಾಕಿರಣವಾಗಿ ಹೊರಹೊಮ್ಮಿದ್ದಾರೆ. ಅದರಲ್ಲೂ ಶಾಲೆಯ ಮುಖವನ್ನೇ ಕಾಣದ ಅಲೆಮಾರಿ ಸಮುದಾಯದ ಮಕ್ಕಳಿಗಾಗಿ ಟೆಂಟ್ ಶಾಲೆ ತೆರೆದು ಅವರ ವಿದ್ಯಾರ್ಜನೆಗೆ ನೆರವಾಗಿದ್ದಾರೆ. ಇವರ ಸಹಾಯದಿಂದ ಶಿಕ್ಷಣ ಪಡೆದ ನೂರಾರು ಮಕ್ಕಳು ಉನ್ನತ ವ್ಯಾಸಂಗ ಮಾಡಿ ಅನೇಕ ಕ್ಷೇತ್ರಗಳಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.
ಅಲೆಮಾರಿ ಸಮುದಾಯದ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿದ ಹಿರಿಮೆ ರಾಮಕ್ಕ ಅವರಿಗೆ ಸಲ್ಲಲೇಬೇಕು. ಇನ್ನು ಅಲೆಮಾರಿ ಸಮುದಾಯದವರಲ್ಲಿ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ರೇಷನ್ ಕಾರ್ಡ್, ಮಾಸಾಶನ, ಹೆಲ್ತ್ ಕಾರ್ಡ್ ಮುಂತಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಅಲ್ಲದೇ ಖುದ್ದು ಫಲಾನುಭವಿಗಳ ಜೊತೆ ಹೋಗಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಸಿಕೊಡುತ್ತಾರೆ.
ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಮಹಿಳೆಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ಮಹಿಳೆಯರು ತಮ್ಮ ಬುದ್ಧಿವಂತಿಕೆಯಿಂದ ಸಮಾಜವನ್ನು ಪರಿವರ್ತಿಸುವಲ್ಲಿ ಸಮರ್ಥರಾಗಿದ್ದಾರೆ ಎಂದಿದ್ದಾರೆ.
ಈ ವಿಶೇಷ ದಿನದಂದು ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್ನಲ್ಲಿ, ಮಹಿಳೆಯರು ತಮ್ಮ ಬುದ್ಧಿವಂತಿಕೆ, ಸಮರ್ಪಣೆ ಮತ್ತು ಶಕ್ತಿಯಿಂದ ಸಮಾಜವನ್ನು ಪರಿವರ್ತಿಸುವ ಸಾಮಥ್ರ್ಯ ಹೊಂದಿದ್ದಾರೆ. ಮಹಿಳೆಯರು ತಮಗೆ ಸಿಗಬೇಕಾಗಿರುವ ಬಾಕಿಯನ್ನು ಪಡೆಯಬೇಕು. ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ
Women are capable of transforming a society by their wisdom, dedication and strength.
ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಸರಣಿ ಟ್ವೀಟ್ ಮಾಡುವ ಮೂಲಕ ಮಹಿಳೆಯರಿಗೆ ಶುಭಾ ಕೋರಲಾಗಿದೆ. ಮಹಿಳಾ ಶಕ್ತಿ ಮತ್ತು ಯಶಸ್ಸಿನ ಫೋಟೋಗಳನ್ನು ಹಂಚಿಕೊಂಡಿದೆ. ರಾಷ್ಟ್ರದ್ಯಂತ ಮತ್ತು ವಿಶ್ವದ್ಯಂತ ಸಹೋದರಿಯರೇ, ನಿಮ್ಮ ಆಲೋಚನೆಗಳು, ನಿಮ್ಮ ಶಕ್ತಿ, ನಿಮ್ಮ ಧೈರ್ಯ, ನಿಮ್ಮ ಶಾಂತಿಯತ್ವ ಮತ್ತು ನಿಮ್ಮ ದಯೆಗೆ ನಾವು ನಮ್ರತೆಯಿಂದ ತಲೆಬಾಗುತ್ತೇವೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಭರವಸೆ ಮತ್ತು ಸಂತೋಷದ ಧ್ವಜಧಾರಿಗಳಾಗಿರುತ್ತಾರೆ. ಈ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ
During the various #MannKiBaat episodes, we have showcased different aspects of women empowerment and highlighted the life journeys of inspiring women who have brought grassroot level changes.
Here is a video that highlights how ‘Mann Ki Baat’ has celebrated our Nari Shakti…. pic.twitter.com/wIo6kHC234
ಮನ್ ಕಿ ಬಾತ್ ಕಾರ್ಯಕ್ರಮದ ವಿವಿಧ ಸಂಚಿಕೆಗಳಲ್ಲಿ ನಾವು ಮಹಿಳಾ ಸಬಲೀಕರಣದ ವಿವಿಧ ಅಂಶಗಳನ್ನು ತೋರಿಸಿದ್ದೇವೆ. ತಳಮಟ್ಟದಿಂದ ಮಹಿಳೆಯರನ್ನು ಪ್ರೇರೇಪಿಸುವ ಜೀವನ ಪಯಣವನ್ನು ಪ್ರದರ್ಶಿಸಿದ್ದೇವೆ. ಮನ್ ಕಿ ಬಾತ್ ಕಾರ್ಯಕ್ರಮ ನಾರಿ ಶಕ್ತಿಯ ಸಂಭ್ರಮವನ್ನು ಆಚರಿಸಿರುವ ವೀಡಿಯೋ ಇಲ್ಲಿದೆ ಎಂದು ಮೋದಿ ಟ್ವಿಟ್ಟರ್ನಲ್ಲಿ ಬರೆದಿದ್ದಾರೆ.
On Women’s Day, I salute our Nari Shakti and their accomplishments in diverse fields. The Government of India will keep focusing on women empowerment through its various schemes with an emphasis on dignity as well as opportunity.
ಮಹಿಳಾ ದಿನದಂದು ನಮ್ಮ ನಾರಿ ಶಕ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹಿಳೆಯರಿಗೆ ನಾನು ವಂದಿಸುತ್ತೇನೆ. ಆರ್ಥಿಕ ಸೇರ್ಪಡೆಯಿಂದ ಸಾಮಾಜಿಕ ಭದ್ರತೆ, ಗುಣಮಟ್ಟದ ಆರೋಗ್ಯ ಸೇವೆಯಿಂದ ವಸತಿ, ಶಿಕ್ಷಣದಿಂದ ಉದ್ಯಮಶೀಲತೆಗೆ ನಾರಿ ಶಕ್ತಿ ಭಾರತವನ್ನು ಮುಂಚೂಣಿಯಲ್ಲಿಡಲು ಹಲವು ಪ್ರಯತ್ನಗಳನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
– ಬಿಎಂಟಿಸಿ ಬಸ್ಗಳಲ್ಲಿ ಎಲ್ಲಿ ಬೇಕೋ ಅಲ್ಲೇ ಸಿಗುತ್ತೆ ಸ್ಟಾಪ್
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಮಹಿಳೆಯರಿಗೆಂದು ಗಿಫ್ಟ್ ನೀಡಿದೆ.
ಬೆಂಗಳೂರಿನ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ಇಂದು ಮಹಿಳೆಯರಿಗೆ ಊಟ ಉಚಿತ. ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆ ಊಟ ಉಚಿತವಾಗಿ ಸಿಗಲಿದೆ.
ಇದೇ ಹೊತ್ತಲ್ಲಿ ಇವತ್ತಿಂದ ಬಿಎಂಟಿಸಿ ಬಸ್ಗಳಲ್ಲಿ ಓಡಾಡೋ ಮಹಿಳೆಯರು ರಾತ್ರಿ 9 ಗಂಟೆಯ ಬಳಿಕ ತಮಗೆ ಎಲ್ಲಿ ಬೇಕೋ ಅಲ್ಲಿ ಸ್ಟಾಪ್ ತೆಗೋಬಹುದು. ಸೇಫ್ ಡ್ರಾಪ್ ಯೋಜನೆಯಡಿ ಒಂದು ತಿಂಗಳ ಕಾಲ ಬೆಂಗಳೂರಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ.