Tag: Internet Services

  • ಅಗ್ನಿಪಥ್ ಯೋಜನೆ ವಾಪಸ್ ಇಲ್ಲ – ಗಲಭೆಕೋರರಿಗೆ ಸೇವೆ ಸೇರಲು ಅವಕಾಶವಿಲ್ಲ: ಲೆ.ಜ ಅನಿಲ್‌ಪುರಿ ವಾರ್ನಿಂಗ್

    ಅಗ್ನಿಪಥ್ ಯೋಜನೆ ವಾಪಸ್ ಇಲ್ಲ – ಗಲಭೆಕೋರರಿಗೆ ಸೇವೆ ಸೇರಲು ಅವಕಾಶವಿಲ್ಲ: ಲೆ.ಜ ಅನಿಲ್‌ಪುರಿ ವಾರ್ನಿಂಗ್

    ನವದೆಹಲಿ: ದೇಶ ಸೇವೆಯ ವೇಳೆ ತಮ್ಮ ಜೀವ ಬಲಿದಾನ ಮಾಡಿದರೆ ಅಗ್ನಿವೀರರಿಗೆ 1 ಕೋಟಿ ರೂ. ಪರಿಹಾರ ಸಿಗಲಿದೆ. ಅಲ್ಲದೆ ಭವಿಷ್ಯದಲ್ಲಿ ಇದರ ಸಂಖ್ಯೆಯೂ 1.25 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ರಕ್ಷಣಾ ಸಚಿವಾಲಯದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ತಿಳಿಸಿದ್ದಾರೆ.

    ARMY

    ಅಗ್ನಿಪಥ್ ಯೋಜನೆ ವಿರುದ್ಧ ಸೇನಾ ಆಕಾಂಕ್ಷಿಗಳು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮಧ್ಯೆ, ಯೋಜನೆ ಕುರಿತು ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ಪ್ರಯತ್ನಿಸಿದೆ. ಕೆಲವು ವಿನಾಯಿತಿ ಮತ್ತು ಸವಲತ್ತುಗಳನ್ನು ಘೋಷಿಸಿದ್ದ ಗೃಹ ಸಚಿವಾಲಯ, ಪ್ರತಿಭಟನಾಕಾರರ ಆಕ್ರೋಶವನ್ನು ತಣ್ಣಗಾಗಿಸಲು ಪ್ರಯತ್ನಿಸಿದೆ. ಆದರೆ ಪ್ರತಿಭಟನೆಯ ಕಿಚ್ಚು ಕಡಿಮೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿರುವ ವಿವಿಧ ಸೌಲಭ್ಯ ಹಾಗೂ ಮೀಸಲಾತಿ ಬಗೆಗೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನ್ನಪ್ಪ, ಜುಲೈ 24 ರಂದು ಪರೀಕ್ಷೆ ನಡೆಯಲಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಅಗ್ನಿವೀರರ ಮೊದಲ ಬ್ಯಾಚ್ ನೇಮಕವಾಗಲಿದೆ. ಇದರಲ್ಲಿ 25,000 ಯುವಕರನ್ನು ಅಯ್ಕೆ ಮಾಡಲಾಗುವುದು. 2023ರ ಫೆಬ್ರವರಿಯಲ್ಲಿ 2ನೇ ಬ್ಯಾಚ್ ನೇಮಕವಾಗಲಿದ್ದು ಇದರಲ್ಲಿ 40,000 ಜನರನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಅಗ್ನಿವೀರರಿಗೆ ಘೋಷಣೆ ಮಾಡುತ್ತಿರುವ ಮೀಸಲಾತಿಗಳನ್ನು ಈ ಮೊದಲೇ ಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ

    ಇಂದು ಅತಿಹೆಚ್ಚು ಸೈನಿಕರು 30ರ ವಯೋಮಾನದಲ್ಲಿದ್ದಾರೆ. ಆದರೆ ಸೇನೆಯ ಮೂರೂ ವಿಭಾಗಗಳಿಂದ ಪ್ರತಿ ವರ್ಷವೂ ಸುಮಾರು 17,600 ಮಂದಿ ಅವಧಿಗೆ ಮುನ್ನವೇ ನಿವೃತ್ತಿ ಪಡೆಯುತ್ತಿದ್ದಾರೆ. ನಿವೃತ್ತಿ ಬಳಿಕ ಏನು ಮಾಡುತ್ತೀರಿ? ಎಂದು ಯಾರೂ ಕೂಡ ಅವರನ್ನು ಕೇಳಲು ಹೋಗಿಲ್ಲ. ಅಗ್ನಿವೀರರು ಕೂಡ ಹಾಲಿ ಸೇವೆಯಲ್ಲಿರುವ ಸಾಮಾನ್ಯ ಸೈನಿಕರಂತೆಯೇ ಸಿಯಾಚಿನ್ ಹಾಗೂ ಇತರೆ ಕೆಲವು ಪ್ರದೇಶಗಳಲ್ಲಿ ಅದೇ ಭತ್ಯೆ ಪಡೆಯಲಿದ್ದಾರೆ. ಸೇವಾ ಪರಿಸ್ಥಿತಿಗಳಲ್ಲಿ ಅವರ ನಡುವೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ನೇಮಕಾತಿ ಪ್ರಮಾಣದಲ್ಲಿ ಹೆಚ್ಚಳ: 4-5 ವರ್ಷಗಳಲ್ಲಿ ತಮ್ಮ ಸೈನಿಕರ ನೇಮಕಾತಿ 50 – 60,000 ಆಗಲಿದೆ. ಕ್ರಮೇಣ 90,000 ದಿಂದ 1 ಲಕ್ಷಕ್ಕೆ ಏರಿಕೆಯಾಗಲಿದೆ. ಯೋಜನೆಯನ್ನು ವಿಶ್ಲೇಷಣೆಗೆ ಒಳಪಡಿಸಲು ಸಣ್ಣ ಪ್ರಮಾಣದಲ್ಲಿ ಆರಂಭ ಮಾಡುತ್ತಿದೆ ಎಂದು ವಿವರಿಸಿದ್ದಾರೆ.

    Live Tv

  • ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    ಪಾಟ್ನಾ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಫಥ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಹಿಂಸಾ ರೂಪ ಪ್ರತಿಭಟನೆಯಿಂದಾಗಿ ನಾಲ್ಕೇ ದಿನಗಳಲ್ಲಿ 200 ಕೋಟಿ ರೂ. ಮೌಲ್ಯದ ಆಸ್ತಿ ನಷ್ಟವಾಗಿದೆ.

    50 ರೈಲು ಬೋಗಿಗಳಿಗೆ ಬೆಂಕಿ ಹಚ್ಚಲಾಗಿದೆ. 5 ರೈಲ್ವೆ ಇಂಜಿನ್‌ಗಳು ಸಂಪೂರ್ಣ ಕರಕಲಾಗಿವೆ. ಇನ್ನೂ ಅನೇಕ ತಾಂತ್ರಿಕ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. 200 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಅದರಲ್ಲಿ 4 ಎಕ್ಸ್‌ಪ್ರೆಸ್‌‌ ರೈಲುಗಳು ಸೇರಿದಂತೆ ಪೂರ್ವ ಉತ್ತರ ರೈಲ್ವೆಯ 30 ರೈಲು ಸಂಚಾರ ರದ್ದಾಗಿದೆ ಎಂದು ದಾನಾಪುರ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಪ್ರಭಾತ್‌ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?

    12 ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸ್ಥಗಿತ: ಪ್ರತಿಭಟನಾ ಕಿಚ್ಚು ಹೆಚ್ಚಿದಂತೆ ಪ್ರತಿಭಟನಾಕಾರರ ನಡುವೆ ಸಂವಹನ ತಡೆಯಲು ಪೊಲೀಸ್ ಇಲಾಖೆ ಹಾಗೂ ಸರ್ಕಾರ ನಿರ್ಧರಿಸಿದ್ದು, 12 ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ. 170 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, 46 ಮಂದಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ

    ಏನಿದು ಅಗ್ನಿಪಥ್ ಯೋಜನೆ?: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆಯನ್ನು ಕೇಂದ್ರ ಪ್ರಾರಂಭಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು.

    ಇದೀಗ ಪ್ರತಿಭಟನೆಯನ್ನು ತಗ್ಗಿಸಲು ಶೇ.10 ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಅಗ್ನಿವೀರ್ ಮೊದಲ ಬ್ಯಾಚ್ ನೇಮಕಾತಿಗೆ 5 ವರ್ಷ ವಯೋಮಿಯಿ ಸಡಿಲಿಕೆ ನೀಡಲಾಗಿದೆ.

    Live Tv